Shuru
Apke Nagar Ki App…
ಅಬ್ಬಿಕೊಲ್ಲಿ ಸಮೀಪ ಪ್ರವಾಸಿ ಟಿಟಿ ವಾಹನ ಮೇಲೆ ಮಗುಚಿದ ಲಾರಿ, ಹಲವರಿಗೆ ಗಾಯ ಅಬ್ಬಿಕೊಲ್ಲಿ ಜಲಪಾತದ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು. ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ಗುಜರಾತಿಯ ಅಹಮದಾಬಾದ್ ನಿವಾಸಿಗಳು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಅಬ್ಬಿಕೊಲ್ಲಿ ಜಲಪಾತ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮಗುಚಿ ಅಪಘಾತ ಸಂಭವಿಸಿದೆ.
Kodagu Updates
ಅಬ್ಬಿಕೊಲ್ಲಿ ಸಮೀಪ ಪ್ರವಾಸಿ ಟಿಟಿ ವಾಹನ ಮೇಲೆ ಮಗುಚಿದ ಲಾರಿ, ಹಲವರಿಗೆ ಗಾಯ ಅಬ್ಬಿಕೊಲ್ಲಿ ಜಲಪಾತದ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು. ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ಗುಜರಾತಿಯ ಅಹಮದಾಬಾದ್ ನಿವಾಸಿಗಳು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಅಬ್ಬಿಕೊಲ್ಲಿ ಜಲಪಾತ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮಗುಚಿ ಅಪಘಾತ ಸಂಭವಿಸಿದೆ.
More news from ಕರ್ನಾಟಕ and nearby areas
- ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು. ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.1
- All About,Doesn't we Rights to Questions any public Representatives/political parties organizations members *ಭಾರತ ನಲ್ಲಿ ವೈರಲ್*1
- ಮೈಕ್ರೋ ಗ್ರೀನ್ ಬೆಳೆದು ತಿಂಗಳಿಗೆ ₹50 ಸಾವಿರ ಸಂಪಾದನೆ; ವಿನಯ್ರ ವಿನೂತನ ಕೃಷಿ ಮಾದರಿ ಮೈಸೂರು: ಕೃಷಿಯಲ್ಲಿ ಹೊಸ ಪ್ರಯೋಗದ ಮೂಲಕ ಯುವಕರು ಸ್ವಯಂ ಉದ್ಯೋಗದತ್ತ ಹೆಜ್ಜೆ ಇಡುತ್ತಿದ್ದಾರೆ. ಈ ಸಾಲಿನಲ್ಲಿ ನಂಜನಗೂಡು ನಗರದ ಎಂಬಿಎ ಪದವೀಧರ ವಿನಯ್ ಅವರು ಮೈಸೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೈಕ್ರೋ ಗ್ರೀನ್ ಕೃಷಿಯನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಪೌಷ್ಟಿಕಾಂಶಭರಿತ ಬೆಳೆಗಳನ್ನು ಉತ್ಪಾದಿಸಿ, ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ಸುಮಾರು ₹50 ಸಾವಿರ ಆದಾಯ ಗಳಿಸುತ್ತಿದ್ದಾರೆ. ವಿನಯ್ ಅವರು ಸುಮಾರು ₹8 ಲಕ್ಷ ವೆಚ್ಚದಲ್ಲಿ ಮೈಕ್ರೋ ಗ್ರೀನ್ ಬೆಳೆಯಲು ಶೆಡ್ ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಎಂಟು ಬಗೆಯ ಧಾನ್ಯಗಳಾದ , ಜೋಳ, ರಾಗಿ, ಸಜ್ಜೆ, ಮೆಂತ್ಯೆ, ಸಾಸಿವೆ, ಮೂಲಂಗಿ ಹಾಗೂ ಬಿಟ್ರೋಟ್ ಮುಂತಾದ ಬೀಜಗಳಿಂದ ಮೈಕ್ರೋ ಗ್ರೀನ್ಗಳನ್ನು ಬೆಳೆಸುತ್ತಿದ್ದಾರೆ. ಬೀಜ ಬಿತ್ತಿದ ನಂತರ ಕೇವಲ 10ರಿಂದ 15 ದಿನಗಳಲ್ಲಿ ಪೈರು ಸಿದ್ಧವಾಗುವುದು ಈ ಕೃಷಿಯ ವಿಶೇಷತೆ. ಸಾಮಾನ್ಯ ಕೃಷಿಗೆ ಹೋಲಿಸಿದರೆ ಕಡಿಮೆ ಜಾಗ, ಕಡಿಮೆ ನೀರು ಹಾಗೂ ಕಡಿಮೆ ಅವಧಿಯಲ್ಲಿ ಉತ್ಪಾದನೆ ಪಡೆಯಬಹುದಾಗಿರುವುದರಿಂದ ಮೈಕ್ರೋ ಗ್ರೀನ್ ಕೃಷಿ ಯುವಕರನ್ನು ಆಕರ್ಷಿಸುತ್ತಿದೆ. ವಿನಯ್ ಅವರು ಬೆಳೆದ ಮೈಕ್ರೋ ಗ್ರೀನ್ಗಳನ್ನು ಮೈಸೂರು ಹಾಗೂ ನಂಜನಗೂಡು ಭಾಗದ ಜಿಮ್ಗಳು, ಮನೆಗಳು ಹಾಗೂ ಆರೋಗ್ಯ ಕಾಳಜಿ ಹೊಂದಿರುವ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ. ಮೈಕ್ರೋ ಗ್ರೀನ್ಗಳಲ್ಲಿ ಎಲೆಗಳು ಸಂಪೂರ್ಣವಾಗಿ ಬೆಳೆಯುವ ಮುನ್ನವೇ ಕೊಯ್ಲು ಮಾಡುವುದರಿಂದ ವಿವಿಧ ವಿಟಮಿನ್ಗಳು, ಖನಿಜಾಂಶಗಳು, ಆ್ಯಂಟಿಆಕ್ಸಿಡೆಂಟ್ಗಳು ಹಾಗೂ ಆಹಾರದ ನಾರಿನಾಂಶ ದೊರೆಯುತ್ತವೆ. ನಿಯಮಿತ ಆಹಾರದ ಭಾಗವಾಗಿ ಬಳಸುವುದರಿಂದ ಪೌಷ್ಟಿಕಾಂಶ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಬಹುದು. ಸಲಾಡ್, ಸ್ಯಾಂಡ್ವಿಚ್, ಸೂಪ್ ಹಾಗೂ ವಿವಿಧ ಆಹಾರ ಪದಾರ್ಥಗಳೊಂದಿಗೆ ಇವುಗಳನ್ನು ಸೇವಿಸಬಹುದು. ಕೃಷಿ ಎಂದರೆ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಲ್ಲ ಎಂಬುದನ್ನು ವಿನಯ್ ಅವರ ಪ್ರಯತ್ನ ತೋರಿಸಿಕೊಟ್ಟಿದೆ. ಎಂಬಿಎ ಪದವಿ ಪಡೆದ ಬಳಿಕ ಉದ್ಯೋಗದ ಬದಲು ಕೃಷಿಯಲ್ಲೇ ಹೊಸ ಅವಕಾಶ ಕಂಡುಕೊಂಡಿರುವ ಅವರು, ಕಡಿಮೆ ಅವಧಿಯ ಬೆಳೆಗಳ ಮೂಲಕ ಉತ್ತಮ ಆದಾಯ ಗಳಿಸಬಹುದು ಎಂಬುದಕ್ಕೆ ಮಾದರಿಯಾಗಿದ್ದಾರೆ. ಮೈಕ್ರೋ ಗ್ರೀನ್ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆಯನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. +91 96111 89599 ಖರೀದಿ ಮಾಡಲು ಬಯಸುವವರು ಸಂಪರ್ಕ ಮಾಡಬಹುದು1
- ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ನಲ್ಲಿ ಅವ್ಯವಹಾರದ ಆರೋಪ ಹಾಲಿ ಅಧ್ಯಕ್ಷರಿಂದ ತನಿಖೆಗೆ ಒತ್ತಾಯ..! ಮಂಗಳೂರು:ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ 15 ವರ್ಷಗಳ ಕಾಲ ನೋಂದಣಿ ನವೀಕರಣವಿಲ್ಲದೆ ಕಾರ್ಯನಿರ್ವಹಿಸಿದ್ದು, ಅಲ್ಯುಮ್ನಿಯೇ ಅಲ್ಲದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದಲೂ ಕಡ್ಡಾಯವಾಗಿ ಸಂಗ್ರಹಿಸಲಾದ ಶುಲ್ಕದ ಹಣದ ಬಳಕೆಯಲ್ಲಿ ಗಂಭೀರ ಅಕ್ರಮಗಳು ನಡೆದಿದೆ. ಈ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳ ನಿಯೋಗ ರಚಿಸಿ ತನಿಖೆ ನಡೆಸಬೇಕು ಎಂದು ಮಂಗಳಾ ಅಲ್ಯುಮ್ನಿ ಚುನಾಯಿತ ಅಧ್ಯಕ್ಷರಾದ ರಾಮಕೃಷ್ಣ ರಾವ್ ಒತ್ತಾಯಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ನ ವಿಶೇಷ ಸಭೆಯನ್ನು ಸೆಪ್ಟೆಂಬರ್ 19, 2026ರಂದು ನಡೆಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಈ ನಡುವೆ ಸಂಘದ ನೋಂದಣಿ 2010ರ ಬಳಿಕ ನವೀಕರಣಗೊಂಡಿಲ್ಲ ಎಂಬ ಆರೋಪ ಸೇರಿದಂತೆ ಹಲವು ಗಂಭೀರ ಆರ್ಥಿಕ ಮತ್ತು ಆಡಳಿತಾತ್ಮಕ ಅಕ್ರಮಗಳು ಬೆಳಕಿಗೆ ಬಂದಿವೆ. ವಿದ್ಯಾರ್ಥಿಗಳಿಂದ ಕಡ್ಡಾಯ ಶುಲ್ಕ ಸಂಗ್ರಹ, ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಕಡ್ಡಾಯ ಶುಲ್ಕ ಪುಸ್ತಕದಲ್ಲೇ ಅಲ್ಯುಮ್ನಿ ಅಸೋಸಿಯೇಷನ್ ಶುಲ್ಕವನ್ನು ಸೇರಿಸಿ, ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸುವ ಮುನ್ನವೇ ಹಣ ಪಾವತಿಸುವಂತೆ ಮಾಡಲಾಗಿತ್ತು ಅನ್ನುವ ಆರೋಪವೂ ಇದೆ. ಅಲ್ಯುಮ್ನಿಯಾಗುವ ಮುನ್ನವೇ ವಿದ್ಯಾರ್ಥಿಗಳಿಂದ ಸಂಘದ ಸದಸ್ಯತ್ವ ಶುಲ್ಕ ಸಂಗ್ರಹಿಸಿರುವುದು ಪ್ರಶ್ನೆಗೆ ಕಾರಣವಾಗಿದೆ. ಸಂಘದ ಬೈಲಾ ಪ್ರಕಾರ ಸದಸ್ಯತ್ವ ಶುಲ್ಕ ಗರಿಷ್ಠ ರೂ.200 ಇರಬೇಕೆಂದು ಹೇಳಲಾಗಿದ್ದರೂ, ವಿದ್ಯಾರ್ಥಿಗಳಿಂದ ತಲಾ ರೂ.350 ಸಂಗ್ರಹಿಸಲಾಗಿದೆ . ಈ ಹೆಚ್ಚುವರಿ ಮೊತ್ತದ ಸಂಗ್ರಹ ಮತ್ತು ವರ್ಗಾವಣೆಗೆ ವಿಶ್ವವಿದ್ಯಾಲಯದ ಹಣಕಾಸು ವಿಭಾಗದ ಅಧಿಕಾರಿಗಳ ಜವಾಬ್ದಾರಿಯನ್ನೂ ಪರಿಶೀಲಿಸಬೇಕಿದೆ. ಸತತವಾಗಿ ಕಾರ್ಯನಿರ್ವಹಿಸಿದ ವಿಶ್ವವಿದ್ಯಾಲಯದ ಮುಖ್ಯ ಹಣಕಾಸು ಅಧಿಕಾರಿಗಳ ಅನುಮತಿ ಮತ್ತು ಮೇಲ್ವಿಚಾರಣೆಯಿಲ್ಲದೆ ವಿದ್ಯಾರ್ಥಿಗಳಿಂದ ಈ ರೀತಿಯ ಹಣ ಸಂಗ್ರಹಿಸಲು ಸಾಧ್ಯವಿಲ್ಲ. ನೋಂದಣಿ ನವೀಕರಣವಿಲ್ಲದ ಸಂಘದ ಖಾತೆಗೆ ವಿದ್ಯಾರ್ಥಿಗಳ ಹಣ ವರ್ಗಾವಣೆಯಾಗಿದ್ದರೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸಬೇಕಿದೆ. ನೋಂದಣಿ ನವೀಕರಣವಿಲ್ಲದೆ ಸಂಘದ ಬ್ಯಾಂಕ್ ಖಾತೆಗಳು 16 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರೆ, ಸಂಬಂಧಪಟ್ಟ ಬ್ಯಾಂಕ್ಗಳು ಕಡ್ಡಾಯ ಕೆವೈಸಿ ಹಾಗೂ ಸಂಸ್ಥೆಯ ನೋಂದಣಿ ದಾಖಲೆಗಳ ಪರಿಶೀಲನೆಯನ್ನು ಹೇಗೆ ನಡೆಸಿದೆ. ಈ ಕುರಿತು ತನಿಖೆ ನಡೆಯಬೇಕಿದೆ ಅನ್ನುವ ಆಗ್ರಹವನ್ನು ಮಾಡಿದ್ದಾರೆ. 2006ರಲ್ಲಿ ಸ್ಥಾಪನೆಯಾದ ಸಂಘದ ನೋಂದಣಿ 2010ರ ಬಳಿಕ ನವೀಕರಣಗೊಂಡಿಲ್ಲ. ಬಳಿಕವೂ ಸಂಘವು ನಿರಂತರವಾಗಿ ಕಾರ್ಯನಿರ್ವಹಿಸಿದೆ . ವಾರ್ಷಿಕ ಸಾಮಾನ್ಯ ಸಭೆಗಳಲ್ಲಿ ಸಂಘದ ಕಾನೂನುಬದ್ಧ ಸ್ಥಿತಿಯನ್ನು ಸದಸ್ಯರಿಗೆ ತಿಳಿಸಲಾಗಿಲ್ಲ. ಸಂಘದಲ್ಲಿ ಕಡ್ಡಾಯವಾಗಿ ಇರಬೇಕಾದ ಸದಸ್ಯರ ನೋಂದಣಿ, ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಒಟ್ಟು ಹಣ, ಬ್ಯಾಂಕ್ ಖಾತೆಗಳ ಮೂಲಕ ನಡೆದ ವಹಿವಾಟು ಹಾಗೂ ಹಣವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ ಎಂಬುದಕ್ಕೆ ಸಂಬಂಧಿಸಿದ ಸಮಗ್ರ ದಾಖಲೆಗಳು ಲಭ್ಯವಿಲ್ಲ. ಈ ಆರೋಪಗಳು ಬೆಳಕಿಗೆ ಬಂದಿರುವ ಸಂದರ್ಭದಲ್ಲಿ ಸೆಪ್ಟೆಂಬರ್ 19ರಂದು ವಿಶೇಷ ಸಭೆ ಕರೆಯಲಾಗಿರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸಾಮಾನ್ಯ ಸದಸ್ಯರು ಸಂಘದ ಪದಾಧಿಕಾರಿ ಸ್ಥಾನಗಳಿಗೆ ಸ್ಪರ್ಧಿಸುವುದನ್ನು ನಿರ್ಬಂಧಿಸುವ ರೀತಿಯಲ್ಲಿ ಬೈಲಾ ತಿದ್ದುಪಡಿ ತರಲು ಪ್ರಯತ್ನಿಸಲಾಗುತ್ತಿದೆ . ಇದರಿಂದ ಹಾಲಿ ಆಡಳಿತ ಮಂಡಳಿಗೆ ಮುಂದುವರಿಯಲು ಅನುಕೂಲವಾಗಲಿದೆ ಮತ್ತು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಅನ್ನುವ ಆರೋಪ ಮಾಡಿರುವ ಅವರು ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ನ ಸುಮಾರು 20 ವರ್ಷಗಳ ಇತಿಹಾಸದಲ್ಲಿ ಇದುವರೆಗೆ ಕೇವಲ ಮೂವರು ಮಾತ್ರ ಅಧ್ಯಕ್ಷರಾಗಿ ಮುಂದುವರಿದಿರುವುದು ಸಂಘದ ಆಡಳಿತ ವ್ಯವಸ್ಥೆ ಎಷ್ಟರ ಮಟ್ಟಿಗೆ ಕೆಲವರ ಹಿಡಿತದಲ್ಲಿತ್ತು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿತ್ತೇ? ಸಾಮಾನ್ಯ ಸದಸ್ಯರಿಗೆ ನಾಯಕತ್ವದ ಅವಕಾಶ ನೀಡಲಾಗಿತ್ತೇ? ಎಂಬ ಪ್ರಶ್ನೆಗಳೂ ಇದೆ. ಈ ಎಲ್ಲ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಿ ಸಂಘಗಳ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ತಕ್ಷಣ ಮಧ್ಯಪ್ರವೇಶಿಸಿ ಸೆ.19ರ ವಿಶೇಷ ಸಭೆಗೆ ತಡೆ ನೀಡಬೇಕು. ವಿಶ್ವವಿದ್ಯಾಲಯದ ಹಣಕಾಸು ವಿಭಾಗ, ಸಂಘದ ಆಡಳಿತ ಮಂಡಳಿ ಮತ್ತು ಸಂಬಂಧಪಟ್ಟ ಬ್ಯಾಂಕ್ಗಳ ಪಾತ್ರದ ಕುರಿತು ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸಬೇಕು. ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಬ್ಯಾಂಕ್ ಖಾತೆಗಳ ವಹಿವಾಟುಗಳನ್ನು ಸ್ಥಗಿತಗೊಳಿಸಿ, ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ಹಣದ ಸಂಪೂರ್ಣ ಲೆಕ್ಕಪತ್ರವನ್ನು ಪರಿಶೀಲಿಸಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅನ್ನುವ ಆಗ್ರಹವವನ್ನು ಮಾಡಿದ್ದಾರೆ.1
- ಕುಂಜತ್ಬೈಲ್ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಂಗಳೂರು: ಸುರತ್ಕಲ್ ಹೋಬಳಿಯ ಕುಂಜತ್ತಬೈಲ್ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಆ.21ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್ ಹಾಗೂ ಸದಸ್ಯ ಅಕ್ಷಯ್ ಗೇರುಕಟ್ಟೆ ಉಪಸ್ಥಿತರಿದ್ದರು.1
- ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ ಮಂಡ್ಯ- ಶ್ರೀರಂಗಪಟ್ಟಣದ ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು..1
- ಮಡಿಕೇರಿ ನಗರದ ಮಂಗಳಾದೇವಿ ನಗರ ಮತ್ತು ಕ್ರಸ್ಟಲ್ ಕೋರ್ಟ್ ಹಿಂಬಾಗ ರಸ್ತೆಯಲ್ಲೆ ಹರಿಯುತ್ತಿರುವ ನೀರು ಜಿಲ್ಲೆಯಲ್ಲಿ ಮಾಘ ಮಳೆ ಚುರುಕುಗೊಂಡಿದ್ದು ಎಲ್ಲೆಡೆ ನೀರು ತುಂಬಿ ಹರಿಯುತ್ತಿದೆ. ಮಡಿಕೇರಿ ನಗರದ ಮಂಗಳಾದೇವಿ ನಗರ, ಕ್ರಿಸ್ಟಲ್ ಕೋರ್ಟ್ ಹಿಂಬಾಗದ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ ಮಳೆ ನೀರು ರಸ್ತೆಯ ಮೇಲೆಯೇ ಉಕ್ಕಿ ಹರಿಯುತ್ತಿದೆ. ಇದರಿಂದ ಸಂಚಾರಕ್ಕೆ ತೊಡಕುಂಟಾಗಿದೆ.1
- ಅಬ್ಬಿಕೊಲ್ಲಿ ಸಮೀಪ ಪ್ರವಾಸಿ ಟಿಟಿ ವಾಹನ ಮೇಲೆ ಮಗುಚಿದ ಲಾರಿ, ಹಲವರಿಗೆ ಗಾಯ ಅಬ್ಬಿಕೊಲ್ಲಿ ಜಲಪಾತದ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು. ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ಗುಜರಾತಿಯ ಅಹಮದಾಬಾದ್ ನಿವಾಸಿಗಳು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಅಬ್ಬಿಕೊಲ್ಲಿ ಜಲಪಾತ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮಗುಚಿ ಅಪಘಾತ ಸಂಭವಿಸಿದೆ.1