Shuru
Apke Nagar Ki App…
ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಯುವಕರು ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಯುವಕರು ಗುಳೇದಗುಡ್ಡ: ಹೋಳಿ ಹಬ್ಬದ ಅಂಗವಾಗಿ ಬುಧವಾರ ಗುಳೇದಗುಡ್ಡ ಪಟ್ಟಣದಲ್ಲಿ ಯುವಕರು, ಮಹಿಳೆಯರು, ಮಕ್ಕಳ ಸೇರಿದಂತೆ ಒಬ್ಬರಿಗೊಬ್ಬರು ಪರಸ್ಪರ ಬಣ್ಣ ಎರಚುವ ಮೂಲಕ ಸಂಭ್ರಮದಿಂದ ಬಣ್ಣದೋಕುಳಿ ಆಚರಿಸಿ,ಬಣ್ಣದಲ್ಲಿ ಮಿಂದೆದ್ದು ಕುಣಿದು ಕುಪ್ಪಳಿಸಿದರು.
More news from ಕರ್ನಾಟಕ and nearby areas
- ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಭರ್ಜರಿ ಕಲರ್ಫುಲ್ ಹೋಳಿ ಸಂಭ್ರಮ ಜೋರಾಗಿ ನಡೆಯಿತು. ಎಸ್.ಆರ್.ಎ ಮೈದಾನದಲ್ಲಿ ಆಯೋಜಿಸಿದ್ದ ರಂಗಿನ ಹೋಳಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ಬಣ್ಣದಾಟದಲ್ಲಿ ಮಿಂದೇಳಿದರು. ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಡಿಜೆ ಆಪರೇಟರ್ಗಳಾದ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಡಿಜೆ ಸದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಹೋಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು. ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ನೇತೃತ್ವದಲ್ಲಿ ಈ ಹೋಳಿ ಉತ್ಸವವನ್ನು ಆಯೋಜಿಸಲಾಗಿದ್ದು, ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.1
- Post by Sharanugouda Patil1
- Post by @april14news1
- ವಿಜಯಪುರ: ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ವಿಜಯಪುರ ನಗರದಲ್ಲಿ ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕರಿಗೆ ಧೈರ್ಯ ತುಂಬುವ ಉದ್ದೇಶದಿಂದಾಗಿ, ಮಂಗಳವಾರ ರಾತ್ರಿ ಪೊಲೀಸ್ ಅಧಿಕಾರಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.1
- #onlinetv24x71
- ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ನಿಮ್ಮ ಪ್ರದೇಶದ ಎಲ್ಲಾ ವೈರಲ್ ವೀಡಿಯೋಗಳಿಗಾಗಿ ಶುರು ಆಪ್ (Shuru App) ಡೌನ್ಲೋಡ್ ಮಾಡಿ1
- ಹೊಸ ಮುರನಾಳ: ಹೊಳಿ ಹುಣ್ಣಿಮೆಯ ಪ್ರಯುಕ್ತ ಗ್ರಾಮದಲ್ಲಿ ಸಂಪ್ರದಾಯಬದ್ಧವಾಗಿ ಕಾಮದೇವನಿಗೆ ಪೂಜೆ ಸಲ್ಲಿಸಿ ಬಳಿಕ ಕಾಮದಹನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಸಂಜೆ ವೇಳೆ ಗ್ರಾಮಸ್ಥರು ಸೇರಿಕೊಂಡು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಕಟ್ಟಿದ ಚಿತೆಯಲ್ಲಿ ಕಾಮದೇವನ ಪ್ರತಿಕೃತಿಗೆ ಅಗ್ನಿ ಹಚ್ಚಿ ‘ಕಾಮದಹನ’ ಆಚರಿಸಿದರು. ಈ ಸಂದರ್ಭದಲ್ಲಿ ಮಹಿಳೆಯರು, ಯುವಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಗ್ರಾಮದ ಹಿರಿಯರು ಹಬ್ಬದ ಮಹತ್ವವನ್ನು ವಿವರಿಸಿ, ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಸತ್ಪ್ರವೃತ್ತಿಗಳನ್ನು ಅಳವಡಿಸಿಕೊಳ್ಳುವ ಸಂದೇಶ ನೀಡಿದರು. ಹಬ್ಬದ ಅಂಗವಾಗಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸೌಹಾರ್ದತೆಯ ವಾತಾವರಣ ನಿರ್ಮಾಣವಾಯಿತು. ಹೋಳಿ ಹುಣ್ಣಿಮೆ ಹಬ್ಬವು ದುಷ್ಟದ ಮೇಲೆ ಶಿಷ್ಟದ ಜಯವನ್ನು ಸಾರುವ ಪವಿತ್ರ ದಿನವೆಂದು ಗ್ರಾಮಸ್ಥರು ತಿಳಿಸಿದರು.1
- Post by @april14news1
- ವಿಜಯಪುರ: ಚಂದ್ರ ಗ್ರಹಣ ವಿಶೇಷ ಪೂಜೆ ಸಲ್ಲಿಕೆ ಸುರೇಶ್ ಜತ್ತಿ ವಿಜಯಪುರದಲ್ಲಿ ಮಂಗಳವಾರದಂದು ಸುರೇಶ್ ಜತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಪುರೋಹಿತರಿಂದ ವಿಧಿ ವಿಧಾನಗಳ ಮಾಹಿತಿ ಪಡೆದು, ನಂತರ ಮನೆಯಲ್ಲಿ ಆಚರಣೆ ಮಾಡಿದ್ದಾರೆ. ಗರ್ಭಿಣಿ ಮಹಿಳೆಯರು ಪಾಲಿಸಬೇಕಾದ ನಿಯಮಗಳು, ಪೂಜೆ ಹಾಗೂ ಆಹಾರ ಸೇವನೆಯ ಕುರಿತು ಮಾಹಿತಿ ಪಡೆದು ಪಾಲನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.1