logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೋಲಾರ ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಇದೇ ತಿಂಗಳ 17ರ ಬುಧವಾರದಂದು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ. ಚಂದ್ರಶೇಖರ್ (ಡಿ.ಲಿಟ್.) ಅವರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ದಲಿತ ಕ್ರಿಯಾ ಸಮಿತಿಯ ಬಂಗಾರಪೇಟೆ ತಾಲ್ಲೂಕಿನ ಸಂಚಾಲಕ ಮುತ್ತೇನಹಳ್ಳಿ ಮುನಿಕೃಷ್ಣಪ್ಪ ಅವರು ಈ ಮಾಹಿತಿ ನೀಡಿದ್ದು, ಚಂದ್ರಶೇಖರ್ ಅವರ ಅಭಿಮಾನಿಗಳು ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಲೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುನಿಕೃಷ್ಣಪ್ಪ, ದಲಿತ ಕ್ರಿಯಾ ಸಮಿತಿಯ ಹಿರಿಯ ಮುಖಂಡರು ಹಾಗೂ ಸಮಿತಿ ಹುಟ್ಟಿಗೆ ಕಾರಣರಾದ ಡಾ. ಎಂ. ಚಂದ್ರಶೇಖರ್ ಅವರಿಗೆ ಕರ್ನಾಟಕ ಸರ್ಕಾರ 2002ರಲ್ಲಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಈ ಗೌರವಕ್ಕೆ 25 ವರ್ಷಗಳು ತುಂಬಿದ ಸವಿ ನೆನಪಿಗಾಗಿ ಬೆಳ್ಳಿಮಹೋತ್ಸವ ಆಚರಿಸುವ ಮೂಲಕ ಚಂದ್ರಶೇಖರ್ ಅವರನ್ನು ಅಭಿನಂದಿಸಲಾಗುತ್ತಿದೆ ಎಂದು ತಿಳಿಸಿದರು. ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಗೇಟ್ ಬಳಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಸಾವಿರಾರು ಬಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಅನ್ನ ದಾಸೋಹ ನಡೆಸುತ್ತಿರುವ ಚಂದ್ರಶೇಖರ್ ಅವರು ಸುಮಾರು 80ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುವ ಸರಳಜೀವಿ. ಈ ಬೆಳ್ಳಿಮಹೋತ್ಸವ ಅಭಿನಂದನಾ ಸಮಾರಂಭಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ ಎಂದು ಅವರು ಮನವಿ ಮಾಡಿದರು. ದಲಿತ ಕ್ರಿಯಾ ಸಮಿತಿ ರಾಜ್ಯ ಮುಖಂಡ ಮಾಲೂರು ನಾರಾಯಣ ಮೂರ್ತಿ ಮಾತನಾಡಿ, ದೀನ ದಲಿತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ದಲಿತ ರತ್ನ ಪುರಸ್ಕೃತರಾದ ಡಿ.ಎಂ. ತಿಮ್ಮಪ್ಪರಾಯಪ್ಪ, ಡಾ. ಎಂ. ಚಂದ್ರಶೇಖರ್ ಹಾಗೂ ಇನ್ನಿತರ ಹಲವಾರು ಮುಖಂಡರು ಸೇರಿ ದಲಿತ ಕ್ರಿಯಾ ಸಮಿತಿ ಹುಟ್ಟಿಗೆ ಕಾರಣರಾಗಿದ್ದಾರೆ ಎಂದು ಸ್ಮರಿಸಿದರು. ಚಂದ್ರಶೇಖರ್ ಅವರ ಸಾಧನೆ ಅಪಾರವಾಗಿದ್ದು, ದಲಿತರ ಸಂಘಟನೆ ಮತ್ತು ಹೋರಾಟಕ್ಕೆ ಅವರ ಕೊಡುಗೆ ಮಹತ್ವದ್ದು ಎಂದು ಬಣ್ಣಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಕೆ.ಜಿ.ಎಫ್‌ನ ಕೆಂಚಪ್ಪ, ಮಾಲೂರಿನ ಸಂಚಾಲಕ ಬಾಳಿಗಹಳ್ಳಿ ಮುರುಗೇಶ್, ಮಹಿಳಾ ಸಂಚಾಲಕಿ ತುಳಸಿ, ಮಾಲೂರು ತಾಲ್ಲೂಕಿನ ಮುಖಂಡ ಕೆ. ನಾರಾಯಣ ಸ್ವಾಮಿ ಉಪಸ್ಥಿತರಿದ್ದರು. ಡಾ. ಎಂ. ಚಂದ್ರಶೇಖರ್ ಅವರ ಬೆಳ್ಳಿಮಹೋತ್ಸವ ಅಭಿನಂದನಾ ಸಮಾರಂಭ ಇದೇ 17ರಂದು ಟಿ. ಚನ್ನಯ್ಯ ರಂಗಮಂದಿರದಲ್ಲಿ ನಡೆಯಲಿದೆ.

3 hrs ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
ಕೋಲಾರ, ಕೋಲಾರ, ಕರ್ನಾಟಕ•
3 hrs ago

ಕೋಲಾರ ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಇದೇ ತಿಂಗಳ 17ರ ಬುಧವಾರದಂದು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ. ಚಂದ್ರಶೇಖರ್ (ಡಿ.ಲಿಟ್.) ಅವರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ದಲಿತ ಕ್ರಿಯಾ ಸಮಿತಿಯ ಬಂಗಾರಪೇಟೆ ತಾಲ್ಲೂಕಿನ ಸಂಚಾಲಕ ಮುತ್ತೇನಹಳ್ಳಿ ಮುನಿಕೃಷ್ಣಪ್ಪ ಅವರು ಈ ಮಾಹಿತಿ ನೀಡಿದ್ದು, ಚಂದ್ರಶೇಖರ್ ಅವರ ಅಭಿಮಾನಿಗಳು ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಲೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುನಿಕೃಷ್ಣಪ್ಪ, ದಲಿತ ಕ್ರಿಯಾ ಸಮಿತಿಯ ಹಿರಿಯ ಮುಖಂಡರು ಹಾಗೂ ಸಮಿತಿ ಹುಟ್ಟಿಗೆ ಕಾರಣರಾದ ಡಾ. ಎಂ. ಚಂದ್ರಶೇಖರ್ ಅವರಿಗೆ ಕರ್ನಾಟಕ ಸರ್ಕಾರ 2002ರಲ್ಲಿ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಈ ಗೌರವಕ್ಕೆ 25 ವರ್ಷಗಳು ತುಂಬಿದ ಸವಿ ನೆನಪಿಗಾಗಿ ಬೆಳ್ಳಿಮಹೋತ್ಸವ ಆಚರಿಸುವ ಮೂಲಕ ಚಂದ್ರಶೇಖರ್ ಅವರನ್ನು ಅಭಿನಂದಿಸಲಾಗುತ್ತಿದೆ ಎಂದು ತಿಳಿಸಿದರು. ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಗೇಟ್ ಬಳಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಸಾವಿರಾರು ಬಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಅನ್ನ ದಾಸೋಹ ನಡೆಸುತ್ತಿರುವ ಚಂದ್ರಶೇಖರ್ ಅವರು ಸುಮಾರು 80ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುವ ಸರಳಜೀವಿ. ಈ ಬೆಳ್ಳಿಮಹೋತ್ಸವ ಅಭಿನಂದನಾ ಸಮಾರಂಭಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ ಎಂದು ಅವರು ಮನವಿ ಮಾಡಿದರು. ದಲಿತ ಕ್ರಿಯಾ ಸಮಿತಿ ರಾಜ್ಯ ಮುಖಂಡ ಮಾಲೂರು ನಾರಾಯಣ ಮೂರ್ತಿ ಮಾತನಾಡಿ, ದೀನ ದಲಿತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ದಲಿತ ರತ್ನ ಪುರಸ್ಕೃತರಾದ ಡಿ.ಎಂ. ತಿಮ್ಮಪ್ಪರಾಯಪ್ಪ, ಡಾ. ಎಂ. ಚಂದ್ರಶೇಖರ್ ಹಾಗೂ ಇನ್ನಿತರ ಹಲವಾರು ಮುಖಂಡರು ಸೇರಿ ದಲಿತ ಕ್ರಿಯಾ ಸಮಿತಿ ಹುಟ್ಟಿಗೆ ಕಾರಣರಾಗಿದ್ದಾರೆ ಎಂದು ಸ್ಮರಿಸಿದರು. ಚಂದ್ರಶೇಖರ್ ಅವರ ಸಾಧನೆ ಅಪಾರವಾಗಿದ್ದು, ದಲಿತರ ಸಂಘಟನೆ ಮತ್ತು ಹೋರಾಟಕ್ಕೆ ಅವರ ಕೊಡುಗೆ ಮಹತ್ವದ್ದು ಎಂದು ಬಣ್ಣಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಕೆ.ಜಿ.ಎಫ್‌ನ ಕೆಂಚಪ್ಪ, ಮಾಲೂರಿನ ಸಂಚಾಲಕ ಬಾಳಿಗಹಳ್ಳಿ ಮುರುಗೇಶ್, ಮಹಿಳಾ ಸಂಚಾಲಕಿ ತುಳಸಿ, ಮಾಲೂರು ತಾಲ್ಲೂಕಿನ ಮುಖಂಡ ಕೆ. ನಾರಾಯಣ ಸ್ವಾಮಿ ಉಪಸ್ಥಿತರಿದ್ದರು. ಡಾ. ಎಂ. ಚಂದ್ರಶೇಖರ್ ಅವರ ಬೆಳ್ಳಿಮಹೋತ್ಸವ ಅಭಿನಂದನಾ ಸಮಾರಂಭ ಇದೇ 17ರಂದು ಟಿ. ಚನ್ನಯ್ಯ ರಂಗಮಂದಿರದಲ್ಲಿ ನಡೆಯಲಿದೆ.

More news from ಕರ್ನಾಟಕ and nearby areas
  • ಶಿಡ್ಲಘಟ್ಟ ನಗರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಣ್ಣ ಅವರು ಹೇಳಿಕೆ ನೀಡಿದ್ದಾರೆ.
    1
    ಶಿಡ್ಲಘಟ್ಟ ನಗರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಣ್ಣ ಅವರು ಹೇಳಿಕೆ ನೀಡಿದ್ದಾರೆ.
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಬಳಿಯ ಬುಳ್ಳಹಳ್ಳಿ ಗೇಟ್ ಬೆಟ್ಟದ ತಪ್ಪಲಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆಯಲ್ಲಿ, ಪೊಲೀಸರು ಆರೋಪಿಗಳಿಂದ 600 ಗ್ರಾಂ ಗಾಂಜಾ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಎಸ್‌ಐ ಸುನಿಲ್ ಕುಮಾರ್ ನೇತೃತ್ವದ ತಂಡ ನಿರ್ದಿಷ್ಟ ಮಾಹಿತಿ ಮೇರೆಗೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆವತಿ ಗ್ರಾಮದ ಬಾಲರಾಜು ಮತ್ತು ಬಾಲಾಜಿ ಎಂಬುವವರೇ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಪೊಲೀಸರು ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು, ಮುಂದಿನ ಕ್ರಮಕ್ಕಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
    3
    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಬಳಿಯ ಬುಳ್ಳಹಳ್ಳಿ ಗೇಟ್ ಬೆಟ್ಟದ ತಪ್ಪಲಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆಯಲ್ಲಿ, ಪೊಲೀಸರು ಆರೋಪಿಗಳಿಂದ 600 ಗ್ರಾಂ ಗಾಂಜಾ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಿಎಸ್‌ಐ ಸುನಿಲ್ ಕುಮಾರ್ ನೇತೃತ್ವದ ತಂಡ ನಿರ್ದಿಷ್ಟ ಮಾಹಿತಿ ಮೇರೆಗೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆವತಿ ಗ್ರಾಮದ ಬಾಲರಾಜು ಮತ್ತು ಬಾಲಾಜಿ ಎಂಬುವವರೇ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಪೊಲೀಸರು ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು, ಮುಂದಿನ ಕ್ರಮಕ್ಕಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    15 hrs ago
  • ಮುಖ್ಯಮಂತ್ರಿಗಳು ಸ್ಪಷ್ಟವಾಗಿ ನಿರ್ದೇಶನ ನೀಡಿದ ಹೊರತಾಗಿಯೂ, ವಿಧಾನಸೌಧದ ಸಿಬ್ಬಂದಿ ವರ್ಗದ ನಿರ್ಲಕ್ಷ್ಯವು ಯಾವ ಮಟ್ಟದಲ್ಲಿದೆ ಎಂಬುದನ್ನು ಇಲ್ಲಿ ಎತ್ತಿ ತೋರಿಸಲಾಗಿದೆ. ಮುಖ್ಯಮಂತ್ರಿಗಳ ಸೂಚನೆಗಳನ್ನು ಪಾಲಿಸದೆ, ಸಿಬ್ಬಂದಿ ನಿರ್ಲಕ್ಷ್ಯ ಮುಂದುವರಿಸುತ್ತಿರುವುದು ಸ್ಪಷ್ಟವಾಗಿದೆ.
    1
    ಮುಖ್ಯಮಂತ್ರಿಗಳು ಸ್ಪಷ್ಟವಾಗಿ ನಿರ್ದೇಶನ ನೀಡಿದ ಹೊರತಾಗಿಯೂ, ವಿಧಾನಸೌಧದ ಸಿಬ್ಬಂದಿ ವರ್ಗದ ನಿರ್ಲಕ್ಷ್ಯವು ಯಾವ ಮಟ್ಟದಲ್ಲಿದೆ ಎಂಬುದನ್ನು ಇಲ್ಲಿ ಎತ್ತಿ ತೋರಿಸಲಾಗಿದೆ. ಮುಖ್ಯಮಂತ್ರಿಗಳ ಸೂಚನೆಗಳನ್ನು ಪಾಲಿಸದೆ, ಸಿಬ್ಬಂದಿ ನಿರ್ಲಕ್ಷ್ಯ ಮುಂದುವರಿಸುತ್ತಿರುವುದು ಸ್ಪಷ್ಟವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿದ್ದ 32 ವರ್ಷದ ಮಂಜುಳಾ ಅವರನ್ನು ನಿನ್ನೆ ರಾತ್ರಿ ಆಕೆಯ ಪತಿ ಪ್ರದೀಪ್ ಪುಷ್ಪಾಂಜಲಿ ಥಿಯೇಟರ್ ಬಳಿಯ ನಿವಾಸದಲ್ಲಿ ಭೀಕರವಾಗಿ ಇರಿದು ಕೊಲೆ ಮಾಡಿದ್ದಾನೆ. ಪ್ರದೀಪ್ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದು, ಈ ಕೃತ್ಯ ಎಸಗಿದ್ದಾನೆ. ಪತ್ನಿಯ ಕೊಲೆಗೂ ಮುನ್ನ ಪ್ರದೀಪ್, ತಾನು ಸಾಯುವುದಾಗಿ ಮತ್ತು ಪತ್ನಿಯನ್ನೂ ಕೊಲ್ಲುವುದಾಗಿ ವಿಡಿಯೋ ಮಾಡಿ ಇಟ್ಟುಕೊಂಡಿದ್ದನು. ಆ ವಿಡಿಯೋದಲ್ಲಿ, ಬೆಟ್ಟಿಂಗ್‌ನಿಂದಾಗಿ ಹೆಂಡತಿ ಮತ್ತು ಮಕ್ಕಳು ಬೀದಿಗೆ ಬಂದಿರುವುದಾಗಿ ಹೇಳಿಕೊಂಡಿದ್ದ. ಅಲ್ಲದೆ, ಪ್ರದೀಪ್ ತನ್ನ ಅತ್ತೆ ಮತ್ತು ನಾದಿನಿಯಿಂದಲೇ ಪತ್ನಿ ಹಾಳಾದಳು ಎಂದು ಆರೋಪಿಸಿದ್ದಾನೆ. ಈ ಭೀಕರ ಕೃತ್ಯಕ್ಕೆ ಸಂಬಂಧಿಸಿ ಮಹಾದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆಗೈದು ತಲೆಮರೆಸಿಕೊಂಡಿರುವ ಆರೋಪಿ ಪ್ರದೀಪ್‌ಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
    1
    ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿದ್ದ 32 ವರ್ಷದ ಮಂಜುಳಾ ಅವರನ್ನು ನಿನ್ನೆ ರಾತ್ರಿ ಆಕೆಯ ಪತಿ ಪ್ರದೀಪ್ ಪುಷ್ಪಾಂಜಲಿ ಥಿಯೇಟರ್ ಬಳಿಯ ನಿವಾಸದಲ್ಲಿ ಭೀಕರವಾಗಿ ಇರಿದು ಕೊಲೆ ಮಾಡಿದ್ದಾನೆ. ಪ್ರದೀಪ್ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದು, ಈ ಕೃತ್ಯ ಎಸಗಿದ್ದಾನೆ. 

ಪತ್ನಿಯ ಕೊಲೆಗೂ ಮುನ್ನ ಪ್ರದೀಪ್, ತಾನು ಸಾಯುವುದಾಗಿ ಮತ್ತು ಪತ್ನಿಯನ್ನೂ ಕೊಲ್ಲುವುದಾಗಿ ವಿಡಿಯೋ ಮಾಡಿ ಇಟ್ಟುಕೊಂಡಿದ್ದನು. ಆ ವಿಡಿಯೋದಲ್ಲಿ, ಬೆಟ್ಟಿಂಗ್‌ನಿಂದಾಗಿ ಹೆಂಡತಿ ಮತ್ತು ಮಕ್ಕಳು ಬೀದಿಗೆ ಬಂದಿರುವುದಾಗಿ ಹೇಳಿಕೊಂಡಿದ್ದ. ಅಲ್ಲದೆ, ಪ್ರದೀಪ್ ತನ್ನ ಅತ್ತೆ ಮತ್ತು ನಾದಿನಿಯಿಂದಲೇ ಪತ್ನಿ ಹಾಳಾದಳು ಎಂದು ಆರೋಪಿಸಿದ್ದಾನೆ. 

ಈ ಭೀಕರ ಕೃತ್ಯಕ್ಕೆ ಸಂಬಂಧಿಸಿ ಮಹಾದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆಗೈದು ತಲೆಮರೆಸಿಕೊಂಡಿರುವ ಆರೋಪಿ ಪ್ರದೀಪ್‌ಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    11 hrs ago
  • ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ–ಹನೂರು ಮುಖ್ಯರಸ್ತೆಯ ಕೌದಳ್ಳಿ–ವಡೆಕಹಳ್ಳಿ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಂದು ಬೈಕ್, ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಒಂದು ಖಾಸಗಿ ಬಸ್ ಪರಸ್ಪರ ಡಿಕ್ಕಿ ಹೊಡೆದಿವೆ. ಮುಂಭಾಗದಿಂದ ಬಂದ ಖಾಸಗಿ ಬಸ್ ಅನ್ನು ತಪ್ಪಿಸುವ ಪ್ರಯತ್ನದಲ್ಲಿ ಬೈಕ್ ಸವಾರ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ವಾಹನಗಳ ನಡುವೆ ಈ ಡಿಕ್ಕಿ ಸಂಭವಿಸಿತು. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಮಹದೇವಪುರ ಗ್ರಾಮದ ಬೈಕ್ ಸವಾರ ಮನು ಅವರ ಕಾಲಿಗೆ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
    2
    ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ–ಹನೂರು ಮುಖ್ಯರಸ್ತೆಯ ಕೌದಳ್ಳಿ–ವಡೆಕಹಳ್ಳಿ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಂದು ಬೈಕ್, ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಒಂದು ಖಾಸಗಿ ಬಸ್ ಪರಸ್ಪರ ಡಿಕ್ಕಿ ಹೊಡೆದಿವೆ. ಮುಂಭಾಗದಿಂದ ಬಂದ ಖಾಸಗಿ ಬಸ್ ಅನ್ನು ತಪ್ಪಿಸುವ ಪ್ರಯತ್ನದಲ್ಲಿ ಬೈಕ್ ಸವಾರ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ವಾಹನಗಳ ನಡುವೆ ಈ ಡಿಕ್ಕಿ ಸಂಭವಿಸಿತು. ಅಪಘಾತದಲ್ಲಿ ಮೈಸೂರು ಜಿಲ್ಲೆಯ ಮಹದೇವಪುರ ಗ್ರಾಮದ ಬೈಕ್ ಸವಾರ ಮನು ಅವರ ಕಾಲಿಗೆ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
  • ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿದೆ.
    1
    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿದೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • ನಿನ್ನೆಯ ನಿರಂತರ ಮಳೆಯಿಂದಾಗಿ ನೆಲಮಂಗಲದಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಮಳೆಯ ರಭಸಕ್ಕೆ ಹೊಸದಾಗಿ ನಿರ್ಮಿಸಿದ ರಸ್ತೆಗಳು ನದಿಗಳಂತೆ ಮಾರ್ಪಟ್ಟಿದ್ದು, ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರ್ದಿಷ್ಟವಾಗಿ, ನೆಲಮಂಗಲದ ಸೊಂಡೆಕುಪ್ಪ ರಸ್ತೆಯು ಎರಡ್ಮೂರು ಅಡಿಗಳಷ್ಟು ಜಲಾವೃತಗೊಂಡಿದೆ. ಇದರಿಂದ ಹಳ್ಳದಂತಾದ ಈ ರಸ್ತೆಗಳಲ್ಲಿ ವಾಹನಗಳು ಕೆಟ್ಟು ನಿಂತು ಸವಾರರು ಪರದಾಡುವಂತಾಗಿದೆ. ಮತ್ತೊಂದೆಡೆ, ಮಠದ ರಸ್ತೆಯಲ್ಲಿಯೂ ಮಳೆ ನೀರು ಅಂಗಡಿಗಳಿಗೆ ನುಗ್ಗಿದ್ದರಿಂದ ವ್ಯಾಪಾರಸ್ಥರು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ನೂತನ ರಸ್ತೆ ಕಾಮಗಾರಿಯ ವೈಫಲ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    3
    ನಿನ್ನೆಯ ನಿರಂತರ ಮಳೆಯಿಂದಾಗಿ ನೆಲಮಂಗಲದಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಮಳೆಯ ರಭಸಕ್ಕೆ ಹೊಸದಾಗಿ ನಿರ್ಮಿಸಿದ ರಸ್ತೆಗಳು ನದಿಗಳಂತೆ ಮಾರ್ಪಟ್ಟಿದ್ದು, ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ನಿರ್ದಿಷ್ಟವಾಗಿ, ನೆಲಮಂಗಲದ ಸೊಂಡೆಕುಪ್ಪ ರಸ್ತೆಯು ಎರಡ್ಮೂರು ಅಡಿಗಳಷ್ಟು ಜಲಾವೃತಗೊಂಡಿದೆ. ಇದರಿಂದ ಹಳ್ಳದಂತಾದ ಈ ರಸ್ತೆಗಳಲ್ಲಿ ವಾಹನಗಳು ಕೆಟ್ಟು ನಿಂತು ಸವಾರರು ಪರದಾಡುವಂತಾಗಿದೆ. ಮತ್ತೊಂದೆಡೆ, ಮಠದ ರಸ್ತೆಯಲ್ಲಿಯೂ ಮಳೆ ನೀರು ಅಂಗಡಿಗಳಿಗೆ ನುಗ್ಗಿದ್ದರಿಂದ ವ್ಯಾಪಾರಸ್ಥರು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ನೂತನ ರಸ್ತೆ ಕಾಮಗಾರಿಯ ವೈಫಲ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    16 hrs ago
  • ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಜಮೀರ್ ಅಹ್ಮದ್ ಖಾನ್ ಅವರನ್ನು ಮುಸ್ಲಿಂ ಸಮುದಾಯದ ಪ್ರಬಲ ನಾಯಕ ಎಂದು ಬಿಂಬಿಸಿದ ಅವರ ಬೆಂಬಲಿಗರು, ಸರ್ಕಾರದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 'ಜಮೀರ್ ಅವರು ಬಡವರ ಪಾಲಿನ ಆಶಾಕಿರಣ, ಅವರಿಗೆ ಡಿಸಿಎಂ ಸೀಟು ನೀಡಲೇಬೇಕು' ಎಂದು ಘೋಷಣೆ ಕೂಗುತ್ತಾ ಸಾವಿರಾರು ಮಹಿಳೆಯರು ರಸ್ತೆಗಿಳಿದಿದ್ದರು. ಪಾದರಾಯನಪುರ, ಹೊಸಗುಡ್ಡದಹಳ್ಳಿ ಹಾಗೂ ಚಾಮರಾಜಪೇಟೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಗೆ ಬೆಂಬಲ ಸೂಚಿಸಿ ಸ್ಥಳೀಯ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಕೆಎಸ್‌ಆರ್‌ಪಿ ಮತ್ತು ಸಿಆರ್ ತುಕಡಿಗಳನ್ನು ನಿಯೋಜಿಸಲಾಯಿತು. ಬ್ಯಾಟರಾಯನಪುರ ಉಪ ವಿಭಾಗದ ಎಸಿಪಿ ಉದಯಭಾಸ್ಕರ್ ಅವರು ಪ್ರತಿಭಟನಾಕಾರರಿಗೆ 'ಸಾರ್ವಜನಿಕ ರಸ್ತೆಯಲ್ಲಿ ಗುಂಪು ಸೇರುವಂತಿಲ್ಲ, ಪ್ರತಿಭಟನೆಗೆ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲಿಸಲಾಗುವುದು' ಎಂದು ಖಡಕ್ ಎಚ್ಚರಿಕೆ ನೀಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ಹೊಸಹಳ್ಳಿ ಫ್ಲೈ ಓವರ್ ಮತ್ತು ಮುಖ್ಯರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಪ್ರತಿಭಟನಾ ಸ್ಥಳಕ್ಕೆ ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಆಗಮಿಸುತ್ತಿದ್ದಂತೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಯಿತು. 'ನಾನು ಜೆಡಿಎಸ್‌ನಲ್ಲಿದ್ದರೂ ಜಮೀರ್ ಅವರಿಗೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತೇನೆ. ನಮ್ಮ ಪ್ರಾಣ ಹೋದರೂ ನಮ್ಮ ನಾಯಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ' ಎಂದು ಪಾಷಾ ಗುಡುಗಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಇಮ್ರಾನ್ ಪಾಷಾ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು 'ವಿಧಾನಸೌಧ ಚಲೋ'ಗೆ ಸಿದ್ಧರಾದರು. ಪೊಲೀಸರು ಅವರನ್ನು ತಡೆಯಲು ಯತ್ನಿಸಿದಾಗ ತಳ್ಳಾಟ-ನೂಕಾಟ ನಡೆಯಿತು. ಅಂತಿಮವಾಗಿ ಪೊಲೀಸರು ಇಮ್ರಾನ್ ಪಾಷಾ ಅವರನ್ನು ಬಲವಂತವಾಗಿ ಜೀಪ್‌ಗೆ ಹತ್ತಿಸಿ ವಶಕ್ಕೆ ಪಡೆದರು.
    1
    ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಜಮೀರ್ ಅಹ್ಮದ್ ಖಾನ್ ಅವರನ್ನು ಮುಸ್ಲಿಂ ಸಮುದಾಯದ ಪ್ರಬಲ ನಾಯಕ ಎಂದು ಬಿಂಬಿಸಿದ ಅವರ ಬೆಂಬಲಿಗರು, ಸರ್ಕಾರದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 'ಜಮೀರ್ ಅವರು ಬಡವರ ಪಾಲಿನ ಆಶಾಕಿರಣ, ಅವರಿಗೆ ಡಿಸಿಎಂ ಸೀಟು ನೀಡಲೇಬೇಕು' ಎಂದು ಘೋಷಣೆ ಕೂಗುತ್ತಾ ಸಾವಿರಾರು ಮಹಿಳೆಯರು ರಸ್ತೆಗಿಳಿದಿದ್ದರು.

ಪಾದರಾಯನಪುರ, ಹೊಸಗುಡ್ಡದಹಳ್ಳಿ ಹಾಗೂ ಚಾಮರಾಜಪೇಟೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಗೆ ಬೆಂಬಲ ಸೂಚಿಸಿ ಸ್ಥಳೀಯ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಕೆಎಸ್‌ಆರ್‌ಪಿ ಮತ್ತು ಸಿಆರ್ ತುಕಡಿಗಳನ್ನು ನಿಯೋಜಿಸಲಾಯಿತು. ಬ್ಯಾಟರಾಯನಪುರ ಉಪ ವಿಭಾಗದ ಎಸಿಪಿ ಉದಯಭಾಸ್ಕರ್ ಅವರು ಪ್ರತಿಭಟನಾಕಾರರಿಗೆ 'ಸಾರ್ವಜನಿಕ ರಸ್ತೆಯಲ್ಲಿ ಗುಂಪು ಸೇರುವಂತಿಲ್ಲ, ಪ್ರತಿಭಟನೆಗೆ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲಿಸಲಾಗುವುದು' ಎಂದು ಖಡಕ್ ಎಚ್ಚರಿಕೆ ನೀಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ಹೊಸಹಳ್ಳಿ ಫ್ಲೈ ಓವರ್ ಮತ್ತು ಮುಖ್ಯರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ಪ್ರತಿಭಟನಾ ಸ್ಥಳಕ್ಕೆ ಮಾಜಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಆಗಮಿಸುತ್ತಿದ್ದಂತೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಯಿತು. 'ನಾನು ಜೆಡಿಎಸ್‌ನಲ್ಲಿದ್ದರೂ ಜಮೀರ್ ಅವರಿಗೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತೇನೆ. ನಮ್ಮ ಪ್ರಾಣ ಹೋದರೂ ನಮ್ಮ ನಾಯಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ' ಎಂದು ಪಾಷಾ ಗುಡುಗಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಇಮ್ರಾನ್ ಪಾಷಾ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು 'ವಿಧಾನಸೌಧ ಚಲೋ'ಗೆ ಸಿದ್ಧರಾದರು. ಪೊಲೀಸರು ಅವರನ್ನು ತಡೆಯಲು ಯತ್ನಿಸಿದಾಗ ತಳ್ಳಾಟ-ನೂಕಾಟ ನಡೆಯಿತು. ಅಂತಿಮವಾಗಿ ಪೊಲೀಸರು ಇಮ್ರಾನ್ ಪಾಷಾ ಅವರನ್ನು ಬಲವಂತವಾಗಿ ಜೀಪ್‌ಗೆ ಹತ್ತಿಸಿ ವಶಕ್ಕೆ ಪಡೆದರು.
    user_Vinod
    Vinod
    Teacher ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.