ಹನೂರು ತಾಲ್ಲೂಕಿನ 'ಆಂದೋಲನ' ಪತ್ರಿಕೆಯ ವರದಿಗಾರ ಮಹಾದೇಶ್ ಅವರು ಕೊಳ್ಳೇಗಾಲದ ಪ್ರತಿಷ್ಠಿತ ಮಾನಸ ಕಾಲೇಜಿನ ಕಾರ್ಯದರ್ಶಿ ಡಾ. ದತ್ತೇಶ್ ಕುಮಾರ್ ಅವರು ತಮ್ಮ ತಂದೆ ದಿ. ಶ್ರೀ ಆರ್. ಸಿದ್ದೇಗೌಡರವರ ಸ್ಮರಣಾರ್ಥ ನೀಡುವ ಪ್ರತಿಷ್ಠಿತ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ 14 ವರ್ಷಗಳ ಸುದೀರ್ಘ ಸೇವೆ ಹಾಗೂ ಸಾಮಾಜಿಕ ಕಾಳಜಿಯನ್ನು ಪರಿಗಣಿಸಿ ಚಾಮರಾಜನಗರ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಮಹಾದೇಶ್ ಅವರು ಕಳೆದ 14 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಹನೂರು ವಿಧಾನಸಭಾ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ಸರ್ಕಾರ ಮತ್ತು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ದೊರಕಿಸಿಕೊಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಈ ಹಿಂದೆ ವಿಶ್ವವಾಣಿ, ಸುದ್ದಿಬುದ್ಧಿ ಹಾಗೂ ಕಾಯಕಯೋಗಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಇವರು, ಪ್ರಸ್ತುತ ಆಂದೋಲನ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹನೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಘಟಿಸಿದ್ದು ಹಾಗೂ ಪತ್ರಿಕಾ ದಿನಾಚರಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರನ್ನು ಆಹ್ವಾನಿಸಿ ಕ್ಷೇತ್ರದ ಮಹಿಳೆಯರ ಸಮಸ್ಯೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟ ಇವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ಇವರ ಸಾಧನೆಗೆ ಹನೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜ್ ನಾಯ್ಡು, ಪ್ರಧಾನ ಕಾರ್ಯದರ್ಶಿ ಪ್ರಭುಸ್ವಾಮಿ ಮತ್ತು ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಹನೂರು ತಾಲ್ಲೂಕಿನ 'ಆಂದೋಲನ' ಪತ್ರಿಕೆಯ ವರದಿಗಾರ ಮಹಾದೇಶ್ ಅವರು ಕೊಳ್ಳೇಗಾಲದ ಪ್ರತಿಷ್ಠಿತ ಮಾನಸ ಕಾಲೇಜಿನ ಕಾರ್ಯದರ್ಶಿ ಡಾ. ದತ್ತೇಶ್ ಕುಮಾರ್ ಅವರು ತಮ್ಮ ತಂದೆ ದಿ. ಶ್ರೀ ಆರ್. ಸಿದ್ದೇಗೌಡರವರ ಸ್ಮರಣಾರ್ಥ ನೀಡುವ ಪ್ರತಿಷ್ಠಿತ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ 14 ವರ್ಷಗಳ ಸುದೀರ್ಘ ಸೇವೆ ಹಾಗೂ ಸಾಮಾಜಿಕ ಕಾಳಜಿಯನ್ನು ಪರಿಗಣಿಸಿ ಚಾಮರಾಜನಗರ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಮಹಾದೇಶ್ ಅವರು ಕಳೆದ 14 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಹನೂರು ವಿಧಾನಸಭಾ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ಸರ್ಕಾರ ಮತ್ತು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ದೊರಕಿಸಿಕೊಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಈ ಹಿಂದೆ ವಿಶ್ವವಾಣಿ, ಸುದ್ದಿಬುದ್ಧಿ ಹಾಗೂ ಕಾಯಕಯೋಗಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಇವರು, ಪ್ರಸ್ತುತ ಆಂದೋಲನ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹನೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಘಟಿಸಿದ್ದು ಹಾಗೂ ಪತ್ರಿಕಾ ದಿನಾಚರಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರನ್ನು ಆಹ್ವಾನಿಸಿ ಕ್ಷೇತ್ರದ ಮಹಿಳೆಯರ ಸಮಸ್ಯೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟ ಇವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ಇವರ ಸಾಧನೆಗೆ ಹನೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜ್ ನಾಯ್ಡು, ಪ್ರಧಾನ ಕಾರ್ಯದರ್ಶಿ ಪ್ರಭುಸ್ವಾಮಿ ಮತ್ತು ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
- ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯದ ಅರಣ್ಯ ಪ್ರದೇಶವು ಪ್ರಕೃತಿ ಪ್ರಿಯರಿಗೆ ಹಾಗೂ ಪ್ರವಾಸಿಗರಿಗೆ ಅದ್ಭುತ ದೃಶ್ಯವೈಭವವನ್ನು ಉಣಬಡಿಸುತ್ತಿದೆ. ಇಲ್ಲಿನ ಸಫಾರಿಯಲ್ಲಿ ವನ್ಯಜೀವಿಗಳ ಸ್ವಚ್ಛಂದ ವಿಹಾರವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಪ್ರವಾಸಿಗರಲ್ಲಿ ಸಂಭ್ರಮ ಮನೆಮಾಡಿದೆ. ಇತ್ತೀಚೆಗೆ ಸಫಾರಿಯ ವೇಳೆ ದಟ್ಟ ಅರಣ್ಯದ ನಡುವೆ ಹಿಂಡು ಹಿಂಡಾಗಿ ಜಿಂಕೆಗಳು ಕಂಗೊಳಿಸುತ್ತಿರುವ ಮನಮೋಹಕ ದೃಶ್ಯಗಳು ಕಂಡುಬಂದಿವೆ. ಜಿಂಕೆಗಳ ಜೊತೆಗೆ ಆನೆಗಳು ಮತ್ತು ಕಾಡೆಮ್ಮೆಗಳು ಕೂಡ ತಮ್ಮ ಸಹಜ ಆವಾಸಸ್ಥಾನದಲ್ಲಿ ಸಂಚರಿಸುತ್ತಿರುವುದು ಪ್ರವಾಸಿಗರಿಗೆ ರೋಚಕ ಅನುಭವ ನೀಡಿದೆ. ದಟ್ಟ ಹಸಿರಿನ ನಡುವೆ ಮುಕ್ತವಾಗಿ ಸಂಚರಿಸುತ್ತಿರುವ ವನ್ಯಜೀವಿಗಳ ಸುಂದರ ದೃಶ್ಯಗಳನ್ನು ಪ್ರವಾಸಿಗರು ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿದಿದ್ದಾರೆ. ಪಿ.ಜಿ.ಪಾಳ್ಯದ ಈ ಸಫಾರಿ ಪ್ರದೇಶವು ಜಿಲ್ಲೆಯ ಪ್ರಮುಖ ಪ್ರವಾಸೀ ಆಕರ್ಷಣೆಯಾಗಿ ಹೊರಹೊಮ್ಮುತ್ತಿದ್ದು, ವನ್ಯಜೀವಿ ಪ್ರಿಯರಿಗೆ ಕಾಡಿನ ಸೌಂದರ್ಯವನ್ನು ಸವಿಯಲು ಉತ್ತಮ ಅವಕಾಶ ಕಲ್ಪಿಸಿದೆ.1
- ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದ ಸಮೀಪವಿರುವ ಮೂಡಲ ಹೊಸಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾಗಿರುವ ಸಂಪಿಗೆ ಬೀರೇಶ್ವರಸ್ವಾಮಿ ಹಾಗೂ ಕಾಳಮ್ಮನವರ ದೇವಸ್ಥಾನ ಉದ್ಘಾಟನೆಗೊಂಡಿದೆ. ಈ ಸಂದರ್ಭದಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಬೀರೇಶ್ವರಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಉದ್ಘಾಟನೆಯ ಅಂಗವಾಗಿ ಶನಿವಾರ ಹಾಗೂ ಭಾನುವಾರ ವಿವಿಧ ಹೋಮ ಹವನಗಳು ನಡೆದವು. ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸುತ್ತಮುತ್ತಲಿನ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ದೇವಸ್ಥಾನಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು.1
- ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದ ಶ್ರೀ ಕನ್ವೆನ್ಷನ್ ಹಾಲ್ ಬಳಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು, ಅದರ ಸೀಟ್ ಮೇಲೆ ಇಟ್ಟಿದ್ದ ಚಿನ್ನಾಭರಣಗಳಿದ್ದ ಬ್ಯಾಗ್ ಕಳವು ಮಾಡಿಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕನಕಪುರ ನಿವಾಸಿ ಸಿದ್ದೇಗೌಡ ಎಂಬುವರು ಒಡವೆ ಕಳೆದುಕೊಂಡವರಾಗಿದ್ದು, ಶನಿವಾರ ಸಂಜೆ 9:30 ರ ಸುಮಾರಿಗೆ ಈ ಘಟನೆ ಜರುಗಿದೆ. ಬಸವಪುರದ ಸಂಬಂಧಿಕರೊಬ್ಬರ ಮದುವೆ ಆರತಕ್ಷತೆ ಕಾರ್ಯಕ್ರಮಕ್ಕಾಗಿ ಸಿದ್ದೇಗೌಡ ಅವರು ಕುಟುಂಬ ಸಮೇತ ಬಂದಿದ್ದರು. ಕಾರನ್ನು ಹೊರಾವರಣದಲ್ಲಿ ನಿಲ್ಲಿಸಿ ಅವರು ಆರತಕ್ಷತೆಗೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಕಾರಿನ ಗ್ಲಾಸ್ ಒಡೆದು ಹಾಕಿದ್ದಾರೆ. ಈ ವೇಳೆ ಕಾರಿನ ಮುಂಭಾಗದ ಸೀಟಿನ ಮೇಲೆ ಇಟ್ಟಿದ್ದ ಸುಮಾರು 76 ಗ್ರಾಂ ತೂಕದ ಕತ್ತಿನ ಸರ, ಜುಮುಕಿ, ಓಲೆ ಸೇರಿದಂತೆ ಇನ್ನಿತರ ಒಡವೆಗಳಿದ್ದ ಬ್ಯಾಗ್ ಅನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಳುವಾಗಿರುವ ಒಡವೆಗಳ ಮೌಲ್ಯ ಸುಮಾರು ₹13 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಸಿದ್ದೇಗೌಡ ಅವರು ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.1
- ಮಂಡ್ಯದಲ್ಲಿ 35 ವರ್ಷಗಳ ಕಾಲ ಸಂಸಾರಕ್ಕಾಗಿ ದುಡಿದು ಮನೆ ಕಟ್ಟಿದ ವ್ಯಕ್ತಿಯೊಬ್ಬರು, ಈಗ ತಮ್ಮದೇ ಪತ್ನಿ ಮತ್ತು ಮಕ್ಕಳಿಂದ ತೀವ್ರ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ. ತಮಗೆ ಅನಾರೋಗ್ಯವಿದ್ದರೂ ಯಾವುದೇ ನೆರವು ನೀಡದೆ, ಕನಿಷ್ಠ ಊಟ ಮತ್ತು ನೀರನ್ನೂ ಕೊಡದೆ ಮನೆಯಿಂದ ಹೊರಹಾಕಲಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಪತಿಯು ಮಂಡ್ಯದಲ್ಲಿರುವ ರಾಷ್ಟ್ರೀಯ ಪುರುಷರ ಹಿತರಕ್ಷಣಾ ಸಮಿತಿಗೆ ದೂರು ನೀಡಿದ್ದಾರೆ. ಅಲ್ಲದೆ, ತಮ್ಮ ಪತ್ನಿಯ ವಿರುದ್ಧ ಅಕ್ರಮ ಸಂಬಂಧ ಹೊಂದಿರುವ ಗಂಭೀರ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಅವರು ಮಾಡಿದ್ದಾರೆ.1
- ಭಾರತದಲ್ಲಿ ವೈರಲ್ ಆಗುತ್ತಿರುವ ಚರ್ಚೆಯೊಂದರಲ್ಲಿ, ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯ ಬೋರ್ಡ್ ಸಭೆಗಳ ನಡಾವಳಿಗಳನ್ನು ನೇರ ರೆಕಾರ್ಡಿಂಗ್ ಮಾಡಲು ಏಕೆ ಸಾಧ್ಯವಿಲ್ಲ ಎಂಬ ಪ್ರಶ್ನೆಯನ್ನು ಎತ್ತಲಾಗಿದೆ. ಮಂಡಳಿಯ ಸಭೆಗಳ ನೇರ ರೆಕಾರ್ಡಿಂಗ್ ಪ್ರಕ್ರಿಯೆಯನ್ನು ಏಕೆ ಜಾರಿಗೆ ತರಬಾರದು ಎಂದು ಕೇಳಲಾಗುತ್ತಿದ್ದು, ಈ ವಿಷಯವು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ.1
- ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಸಾರ್ವಜನಿಕ ಅಂತಿಮ ದರ್ಶನ ಪಡೆದ ಶಾಸಕ ಜಿ.ಟಿ. ದೇವೇಗೌಡ ಅವರು ಭಾವಪೂರ್ಣ ನಮನ ಸಲ್ಲಿಸಿದರು. ಈ ವೇಳೆ ಜಿ.ಟಿ. ದೇವೇಗೌಡ ಅವರು ಎಸ್. ಜಾನಕಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಎಸ್. ಜಾನಕಿ ಅವರ ಅಗಲಿಕೆಯು ಸಂಗೀತ ಲೋಕಕ್ಕೆ ಅಪಾರ ನಷ್ಟ ಎಂದು ಶಾಸಕ ಜಿ.ಟಿ. ದೇವೇಗೌಡ ಅವರು ಸಂತಾಪ ಸೂಚಿಸಿದರು.1
- ಐಎನ್ಸಿಪಿ ರಾಷ್ಟ್ರೀಯ ಅಧ್ಯಕ್ಷರಾದ ಅಯೂಬ್ ಖಾನ್ ಅವರು ಕರ್ನಾಟಕದ ರಾಜ್ಯ ಚುನಾವಣಾ ಆಯುಕ್ತರನ್ನು ಭೇಟಿಯಾಗಿದ್ದಾರೆ.1
- ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಜುಲೈ 28 ರಂದು ನಡೆಯಲಿರುವ ಚಾಮರಾಜೇಶ್ವರ ಬ್ರಹ್ಮ ರಥೋತ್ಸವದ ಹಿನ್ನೆಲೆಯಲ್ಲಿ ರಥ ಕಟ್ಟುವ ಕಾರ್ಯಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು. ಶಾಸಕರು ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ, ಹಿಡುಗಾಯಿ ಹೊಡೆದು ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ ಅವರು, ಪ್ರತಿವರ್ಷದಂತೆ ಈ ಬಾರಿಯೂ ಆಷಾಢ ಮಾಸದಲ್ಲಿ ಚಾಮರಾಜೇಶ್ವರ ಬ್ರಹ್ಮ ರಥೋತ್ಸವ ನಡೆಯುತ್ತಿದೆ ಎಂದು ತಿಳಿಸಿದರು. ಇಲ್ಲಿನ ಜಾತ್ರೆ ಅತ್ಯಂತ ವಿಶೇಷವಾಗಿ ನಡೆಯಲಿದ್ದು, ಎಲ್ಲ ನವ ದಂಪತಿಗಳು ಬಂದು ಪೂಜೆ ಸಲ್ಲಿಸಿ ಹಣ್ಣು ಜಾವಣೆ ಎಸೆಯುತ್ತಾರೆ ಎಂದು ಅವರು ಮಾಹಿತಿ ನೀಡಿದರು.3