logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಭಾರತ ನಲ್ಲಿ ವೈರಲ್*

2 days ago
user_Md Aleemulla Shariff
Md Aleemulla Shariff
Citizen Reporter ಮೈಸೂರು, ಮೈಸೂರು, ಕರ್ನಾಟಕ•
2 days ago

*ಭಾರತ ನಲ್ಲಿ ವೈರಲ್*

  • user_Sowmya Kumar
    Sowmya Kumar
    ಮೈಸೂರು, ಮೈಸೂರು, ಕರ್ನಾಟಕ
    😡
    1 day ago
More news from ಕರ್ನಾಟಕ and nearby areas
  • ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.
    1
    ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ.
ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16  ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    20 hrs ago
  • ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
    1
    ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
    user_ಜಗದೀಶ್ ಪತ್ರಕರ್ತರು
    ಜಗದೀಶ್ ಪತ್ರಕರ್ತರು
    ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
    1 hr ago
  • ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು. ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ. ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.
    4
    ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ.
ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.
ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    4 hrs ago
  • ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಕೊಳ್ಳೇಗಾಲ ಇಒ ಮತ್ತು ಗ್ರಾ.ಪಂ ಕಾರ್ಯದರ್ಶಿ ವಿರುದ್ಧ ಆಕ್ರೋಶ ಕೊಳ್ಳೇಗಾಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೊಬ್ಬರು, ಗ್ರಾಮದ ಯುವಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿ ವರದಿಯಾಗಿದೆ. ಘಟನೆಯ ವಿವರ: ಕುಂತೂರು ಗ್ರಾಮದ ದಲಿತ ಯುವಕರು ತಮ್ಮ ಗ್ರಾಮದ ಕೆಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಗುರು ಶಾಂತಪ್ಪ ಹಾಗೂ ಕುಂತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವಪ್ರಸಾದ್ ಅವರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಮಸ್ಯೆಗಳನ್ನು ಆಲಿಸುವ ಬದಲು, ಅಧಿಕಾರಿ ಗುರು ಶಾಂತಪ್ಪ ಅವರು ಯುವಕರನ್ನು ಉದ್ದೇಶಿಸಿ "ಬೇವರ್ಸಿಗಳು" ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೀಳುಮಟ್ಟದ ನಡವಳಿಕೆ ತೋರಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರ ಆಕ್ರೋಶ: "ಸರ್ಕಾರಿ ನೌಕರರ ನಡತೆ ನಿಯಮಗಳ ಪ್ರಕಾರ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆದರೆ, ದಲಿತ ಯುವಕರನ್ನು ಈ ರೀತಿ ನಿಂದಿಸಿರುವುದು ನಮಗೆ ತೀವ್ರ ಮನನೋಯಿಸಿದೆ. ಒಬ್ಬ ಜವಾಬ್ದಾರಿಯುತ ಅಧಿಕಾರಿಗೆ ಇದು ಶೋಭೆ ತರುವುದಿಲ್ಲ," ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನವಿ: ಈ ಘಟನೆಯು ಸರ್ಕಾರಿ ಅಧಿಕಾರಿಗಳ ಮೈಗಳ್ಳತನ ಮತ್ತು ಸಾರ್ವಜನಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದ್ದು, ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ಯುವಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    3
    ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಕೊಳ್ಳೇಗಾಲ ಇಒ ಮತ್ತು ಗ್ರಾ.ಪಂ ಕಾರ್ಯದರ್ಶಿ ವಿರುದ್ಧ ಆಕ್ರೋಶ
ಕೊಳ್ಳೇಗಾಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೊಬ್ಬರು, ಗ್ರಾಮದ ಯುವಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿ ವರದಿಯಾಗಿದೆ.
ಘಟನೆಯ ವಿವರ:
ಕುಂತೂರು ಗ್ರಾಮದ ದಲಿತ ಯುವಕರು ತಮ್ಮ ಗ್ರಾಮದ ಕೆಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಗುರು ಶಾಂತಪ್ಪ ಹಾಗೂ ಕುಂತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವಪ್ರಸಾದ್ ಅವರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಮಸ್ಯೆಗಳನ್ನು ಆಲಿಸುವ ಬದಲು, ಅಧಿಕಾರಿ ಗುರು ಶಾಂತಪ್ಪ ಅವರು ಯುವಕರನ್ನು ಉದ್ದೇಶಿಸಿ "ಬೇವರ್ಸಿಗಳು" ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೀಳುಮಟ್ಟದ ನಡವಳಿಕೆ ತೋರಿದ್ದಾರೆ ಎನ್ನಲಾಗಿದೆ.
ಸಾರ್ವಜನಿಕರ ಆಕ್ರೋಶ:
"ಸರ್ಕಾರಿ ನೌಕರರ ನಡತೆ ನಿಯಮಗಳ ಪ್ರಕಾರ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆದರೆ, ದಲಿತ ಯುವಕರನ್ನು ಈ ರೀತಿ ನಿಂದಿಸಿರುವುದು ನಮಗೆ ತೀವ್ರ ಮನನೋಯಿಸಿದೆ. ಒಬ್ಬ ಜವಾಬ್ದಾರಿಯುತ ಅಧಿಕಾರಿಗೆ ಇದು ಶೋಭೆ ತರುವುದಿಲ್ಲ," ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನವಿ:
ಈ ಘಟನೆಯು ಸರ್ಕಾರಿ ಅಧಿಕಾರಿಗಳ ಮೈಗಳ್ಳತನ ಮತ್ತು ಸಾರ್ವಜನಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದ್ದು, ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ಯುವಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • ಬಿಆರ್‌ಟಿ ವನ್ಯಧಾಮ ವ್ಯಾಪ್ತಿಯ ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಇತ್ತೀಚೆಗಷ್ಟೇ ಬಿಆರ್‌ಟಿ ವ್ಯಾಪ್ತಿಯ ಹಲವು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಗುರುವಾರ ಮಧ್ಯಾಹ್ನ ಲೊಕ್ಕನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಬ್ಬಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ಬೆಂಕಿ ಉಂಟಾಗಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಪ್ರದೇಶದಲ್ಲಿ ನಿರಂತರವಾಗಿ ಬೆಂಕಿ ಘಟನೆಗಳು ಸಂಭವಿಸುತ್ತಿರುವುದರಿಂದ ಅರಣ್ಯ ಸಂಪತ್ತಿಗೆ ಹಾನಿಯಾಗುತ್ತಿರುವ ಬಗ್ಗೆ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
    1
    ಬಿಆರ್‌ಟಿ ವನ್ಯಧಾಮ ವ್ಯಾಪ್ತಿಯ ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಇತ್ತೀಚೆಗಷ್ಟೇ ಬಿಆರ್‌ಟಿ ವ್ಯಾಪ್ತಿಯ ಹಲವು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಗುರುವಾರ ಮಧ್ಯಾಹ್ನ ಲೊಕ್ಕನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಬ್ಬಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ಬೆಂಕಿ ಉಂಟಾಗಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಪ್ರದೇಶದಲ್ಲಿ ನಿರಂತರವಾಗಿ ಬೆಂಕಿ ಘಟನೆಗಳು ಸಂಭವಿಸುತ್ತಿರುವುದರಿಂದ ಅರಣ್ಯ ಸಂಪತ್ತಿಗೆ ಹಾನಿಯಾಗುತ್ತಿರುವ ಬಗ್ಗೆ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ. ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ. ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ. ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು: ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು. ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ. ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ. ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು. #ArkalgudNews #tractorlife #news5kannada #NewsUpdate
    1
    ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ.
ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ.
ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ.
ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ.
ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು:
ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು.
ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ.
ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ.
ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು.
#ArkalgudNews #tractorlife #news5kannada #NewsUpdate
    user_News5Kannada
    News5Kannada
    Local News Reporter Arkalgud, Hassan•
    15 hrs ago
  • ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಸಮೀಪ ನಿನ್ನೆ ರಾತ್ರಿ ಕುಡಿತದ ವೇಳೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ದುರ್ಘಟನೆ ನಡೆದಿದೆ. ತಮಿಳುನಾಡು ಗಡಿಭಾಗದ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಮನೋಜ್ ಮತ್ತು ಅದೇ ಗ್ರಾಮದ ಮೋಹನ್ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ವಾಗ್ವಾದಕ್ಕೆ ತಿರುಗಿದೆ. ಗಲಾಟೆಯ ಸಂದರ್ಭದಲ್ಲಿ ನಶೆಯಲ್ಲಿದ್ದ ಮನೋಜ್, ಮೋಹನ್ ತಲೆಯ ಮೇಲೆ ಕಲ್ಲು ಹಾಕಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತ ಮೋಹನ್ (25) ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದನು. ಆತ ತಮಿಳುನಾಡಿನ ಹೊಸೂರು ತಾಲ್ಲೂಕಿನ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.
    1
    ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಸಮೀಪ ನಿನ್ನೆ ರಾತ್ರಿ ಕುಡಿತದ ವೇಳೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ದುರ್ಘಟನೆ ನಡೆದಿದೆ. ತಮಿಳುನಾಡು ಗಡಿಭಾಗದ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಮನೋಜ್ ಮತ್ತು ಅದೇ ಗ್ರಾಮದ ಮೋಹನ್ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ವಾಗ್ವಾದಕ್ಕೆ ತಿರುಗಿದೆ.
ಗಲಾಟೆಯ ಸಂದರ್ಭದಲ್ಲಿ ನಶೆಯಲ್ಲಿದ್ದ ಮನೋಜ್, ಮೋಹನ್ ತಲೆಯ ಮೇಲೆ ಕಲ್ಲು ಹಾಕಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತ ಮೋಹನ್ (25) ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದನು. ಆತ ತಮಿಳುನಾಡಿನ ಹೊಸೂರು ತಾಲ್ಲೂಕಿನ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.
    user_Chakravarthy
    Chakravarthy
    Local News Reporter ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    11 min ago
  • ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ* *ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ‌ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ* ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
    1
    ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ*
*ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ‌ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ*
ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು
ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು 
ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ 
ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು
ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ
ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.