logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಕ್ರಮ ಸಂಬಂಧಕ್ಕೆ ಅಡ್ಡಿ... ಪತಿ ಫಿನಿಶ್...ಪತ್ನಿ ಪ್ರಿಯಕರ ಅಂದರ್... ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಂದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ನಡೆದಿದೆ. ಘಟನೆ ನಡೆದ 24 ಗಂಟೆಯಲ್ಲಿ ಪತ್ನಿ ಹಾಗೂ ಪ್ರಿಯಕರ ಪೊಲೀಸರ ಅತಿಥಿಯಾಗಿದ್ದಾರೆ. ಕುರ್ಣೇಗಾಲದ ಜವರಪ್ಪ ಕೊಲೆಯಾದ ಮೃತ ದುರ್ದೈವಿ. ಮೈಸೂರು ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಶವ ಪತ್ತೆಯಾಗಿತ್ತು. ಅನುಮಾನಸ್ಪ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಗ್ರಾಮದ ಬಡ್ಡಯ್ಯ ಪುತ್ರ ಜವರಪ್ಪ ಕೊಲೆಯಾಗಿದ್ದ ವ್ಯಕ್ತಿ. ರಸ್ತೆ ಬದಿಯಲ್ಲಿ ಮೃತ ದೇಹ ಪತ್ತೆಯಾಗಿತ್ತು. ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದರಿಂದ ತನಿಖೆ ನಡೆಸುವಂತೆ ಸಹೋದರ ದೂರು ದಾಖಲಿಸಿದ್ದರು. ದೂರು ದಾಖಲಾದ 24 ಗಂಟೆಯೊಳಗೆ ರಹಸ್ಯ ಭೇಧಿಸಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಅಂತಾ ಕೊಲೆ ಪ್ಲಾನ್ ಮಾಡಿದ್ದರು. ಅಮೃತಾ ಕುಮ್ಮಕ್ಕಿನಿಂದ ಪ್ರಿಯಕರ ಜವರಪ್ಪನನ್ನು ಕೊಲೆ ಮಾಡಿರುವುದಾಗಿ ಪೊಲೀಸರ ತನಿಖೆಯಲ್ಲಿ ಘಟನೆ ಬೆಳಕಿಗೆ. ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. 12 ದಿನಗಳ ಹಿಂದೆ ಮಕ್ಕಳೊಂದಿಗೆ ಅಮೃತ ಹಬ್ಬಕ್ಕೆಂದು ತವರಿಗೆ ಹೋಗಿದ್ದಳು. ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಜವರಪ್ಪ ಹೋಗಿದ್ದರು.ಈ ವಿಚಾರ ಸಹೋದರನಿಗೆ ಹೇಳಿದ್ದರು.ಆದರೆ ಮನೆಗೆ ವಾಪಸ್ ಬಂದಿಲ್ಲ. ಮಾರನೇ ದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು.ಯಾರೋ ಕೊಲೆ ಮಾಡಿದ್ದಾರೆಂದು ದೂರು ದಾಖಲು ಮಾಡಿದ್ದ ಜವರಪ್ಪ ಸಹೋದರ ರವಿ.ತನಿಖೆಗಾಗಿ ಮೂರು ಪೊಲೀಸ್ ತಂಡ ರಚನೆ ಮಾಡಲಾಗಿತ್ತು.ಪತ್ನಿಯ ಸಂಚಿಗೆ ಪತಿ ಕೊಲೆಯಾಗಿದ್ದಾನೆ.

19 hrs ago
user_Mysore update
Mysore update
ನಂಜನಗೂಡು, ಮೈಸೂರು, ಕರ್ನಾಟಕ•
19 hrs ago
8bfeef17-985b-47fb-bd72-157ee98b6b34

ಅಕ್ರಮ ಸಂಬಂಧಕ್ಕೆ ಅಡ್ಡಿ... ಪತಿ ಫಿನಿಶ್...ಪತ್ನಿ ಪ್ರಿಯಕರ ಅಂದರ್... ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಂದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ನಡೆದಿದೆ. ಘಟನೆ ನಡೆದ 24 ಗಂಟೆಯಲ್ಲಿ ಪತ್ನಿ ಹಾಗೂ ಪ್ರಿಯಕರ ಪೊಲೀಸರ ಅತಿಥಿಯಾಗಿದ್ದಾರೆ. ಕುರ್ಣೇಗಾಲದ ಜವರಪ್ಪ ಕೊಲೆಯಾದ ಮೃತ ದುರ್ದೈವಿ. ಮೈಸೂರು ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಶವ ಪತ್ತೆಯಾಗಿತ್ತು. ಅನುಮಾನಸ್ಪ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಗ್ರಾಮದ

860d3ea9-81c3-42e8-b436-b90727a448e1

ಬಡ್ಡಯ್ಯ ಪುತ್ರ ಜವರಪ್ಪ ಕೊಲೆಯಾಗಿದ್ದ ವ್ಯಕ್ತಿ. ರಸ್ತೆ ಬದಿಯಲ್ಲಿ ಮೃತ ದೇಹ ಪತ್ತೆಯಾಗಿತ್ತು. ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದರಿಂದ ತನಿಖೆ ನಡೆಸುವಂತೆ ಸಹೋದರ ದೂರು ದಾಖಲಿಸಿದ್ದರು. ದೂರು ದಾಖಲಾದ 24 ಗಂಟೆಯೊಳಗೆ ರಹಸ್ಯ ಭೇಧಿಸಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಅಂತಾ ಕೊಲೆ ಪ್ಲಾನ್ ಮಾಡಿದ್ದರು. ಅಮೃತಾ ಕುಮ್ಮಕ್ಕಿನಿಂದ ಪ್ರಿಯಕರ ಜವರಪ್ಪನನ್ನು ಕೊಲೆ ಮಾಡಿರುವುದಾಗಿ ಪೊಲೀಸರ ತನಿಖೆಯಲ್ಲಿ ಘಟನೆ ಬೆಳಕಿಗೆ. ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ

82d79fa9-38eb-4a20-ae70-5877db71c649

ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. 12 ದಿನಗಳ ಹಿಂದೆ ಮಕ್ಕಳೊಂದಿಗೆ ಅಮೃತ ಹಬ್ಬಕ್ಕೆಂದು ತವರಿಗೆ ಹೋಗಿದ್ದಳು. ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಜವರಪ್ಪ ಹೋಗಿದ್ದರು.ಈ ವಿಚಾರ ಸಹೋದರನಿಗೆ ಹೇಳಿದ್ದರು.ಆದರೆ ಮನೆಗೆ ವಾಪಸ್ ಬಂದಿಲ್ಲ. ಮಾರನೇ ದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು.ಯಾರೋ ಕೊಲೆ ಮಾಡಿದ್ದಾರೆಂದು ದೂರು ದಾಖಲು ಮಾಡಿದ್ದ ಜವರಪ್ಪ ಸಹೋದರ ರವಿ.ತನಿಖೆಗಾಗಿ ಮೂರು ಪೊಲೀಸ್ ತಂಡ ರಚನೆ ಮಾಡಲಾಗಿತ್ತು.ಪತ್ನಿಯ ಸಂಚಿಗೆ ಪತಿ ಕೊಲೆಯಾಗಿದ್ದಾನೆ.

More news from ಕರ್ನಾಟಕ and nearby areas
  • ನಂಜನಗೂಡು: ಬೈಕ್ ನಲ್ಲಿ ಚಲಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಮೂವರಿಗೆ ಗಂಭೀರ ಗಾಯಗೊಂಡು, ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ. ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರಿ ಸಿಂಚನ (16) ಮೃತ ದುರ್ದೈವಿ. ಮಹದೇವಸ್ವಾಮಿ ತನ್ನ ಪತ್ನಿ, ಮಗಳು ಮತ್ತು ಮಗನ ಜೊತೆ ಬೈಕ್ ನಲ್ಲಿ ಬೇಲದಕುಪ್ಪೆ ಮಹದೇಶ್ವರ ಸ್ವಾಮಿಯ ದೇವಾಲಯಕ್ಕೆ ತೆರಳಿ ವಾಪಸ್ ಮಡುವಿನಹಳ್ಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಹೆಡಿಯಾಲ ಮತ್ತು ಬೇಗೂರು ಮುಖ್ಯರಸ್ತೆಯ ಗಣೇಶಪುರ ಗ್ರಾಮದ ಬಳಿ ಚಲಿಸುತ್ತಿದ್ದ ಸಂದರ್ಭದಲ್ಲಿ ಬೈಕ್ ನ ಟೈಯರ್ ಬ್ಲಾಸ್ಟ್ ಆಗಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಾಲ್ವರು ಬಿದ್ದಿದ್ದಾರೆ. ಈ ವೇಳೆ ನಾಲ್ವರಿಗೂ ಗಂಭೀರ ಗಾಯಗಳಾಗಿತ್ತು, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗ ಮಧ್ಯೆ ಸಿಂಚನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಿಂಚನ ಎಂಬ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಳು. ಅಪಘಾತ ಆಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ನಂಜನಗೂಡು: ಬೈಕ್ ನಲ್ಲಿ ಚಲಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಮೂವರಿಗೆ ಗಂಭೀರ ಗಾಯಗೊಂಡು, ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ.
ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರಿ ಸಿಂಚನ (16) ಮೃತ ದುರ್ದೈವಿ. ಮಹದೇವಸ್ವಾಮಿ ತನ್ನ ಪತ್ನಿ, ಮಗಳು ಮತ್ತು ಮಗನ ಜೊತೆ ಬೈಕ್ ನಲ್ಲಿ ಬೇಲದಕುಪ್ಪೆ ಮಹದೇಶ್ವರ ಸ್ವಾಮಿಯ ದೇವಾಲಯಕ್ಕೆ ತೆರಳಿ ವಾಪಸ್ ಮಡುವಿನಹಳ್ಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಹೆಡಿಯಾಲ ಮತ್ತು ಬೇಗೂರು ಮುಖ್ಯರಸ್ತೆಯ ಗಣೇಶಪುರ ಗ್ರಾಮದ ಬಳಿ ಚಲಿಸುತ್ತಿದ್ದ ಸಂದರ್ಭದಲ್ಲಿ ಬೈಕ್ ನ ಟೈಯರ್ ಬ್ಲಾಸ್ಟ್ ಆಗಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಾಲ್ವರು ಬಿದ್ದಿದ್ದಾರೆ. ಈ ವೇಳೆ ನಾಲ್ವರಿಗೂ ಗಂಭೀರ ಗಾಯಗಳಾಗಿತ್ತು, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗ ಮಧ್ಯೆ ಸಿಂಚನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಿಂಚನ ಎಂಬ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಳು. ಅಪಘಾತ ಆಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    19 hrs ago
  • Post by Ramuc
    2
    Post by Ramuc
    user_Ramuc
    Ramuc
    ಮೈಸೂರು, ಮೈಸೂರು, ಕರ್ನಾಟಕ•
    1 day ago
  • ಪಟ್ಟಣ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬಸವಣ್ಣ ರವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿದ ಶಾಸಕರು ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವುಗಳು ನಂತರ ಮರೆಯುತ್ತೇವೆ. ಸ್ವಾರ್ಥ ಮತ್ತು ನಾನು ಮೇಲು ಎಂಬ ನಾನತ್ವಗಳನ್ನು ಮೈಗೂಡಿಸಿಕೊಂಡರೆ. ಬಸವಣ್ಣ ರವರ ಸಮಾಜ ಸುಧಾರಣೆ ಆಗುವ ನಿಟ್ಟಿನಲ್ಲಿ ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ನೀವು ನಡೆಯಿರಿ ಅದನ್ನು ನೋಡಿ ನಮ್ಮ ಮುಂದಿನ ಪೀಳಿಗೆ ಕಲಿಯುತ್ತದೆ. ಇಂದು ನಾವು ನಮ್ಮ ಮಕ್ಕಳ ಮುಂದೆ ಎನು ಮಾಡುತ್ತೇವೆ ಅದನ್ನಗ ಅವರು ಸಹ ಅನುಸರಿಸುತ್ತಾರೆ. ಆಗಾಗಿ ಮಹನೀಯರ ಜಯಂತಿಗಳು ಒಂದು ದಿನಕ್ಕೆ ಸೀಮಿತವಾಗದೆ ಅವರ ಆದರ್ಶ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಆಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ. ಎಂದರು ಮುಂದಿನ ದಿನಗಳಲ್ಲಿ ಸಮುದಾಯದ ವತಿಯಿಂದ ಪಟ್ಟಣದಲ್ಲಿ ಆಚರಣೆ ಮಾಡುವ ಬಸವೇಶ್ವರರ ಜಯಂತಿಗೆ ನನ್ನ ಸಂಪೂರ್ಣ ಸಹಕಾರವಿದೆ. ಅದೇ ರೀತಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡಿ. ನಿಮ್ಮ ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್,ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳಾದ ರೇಖಾ,ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್,ತಾಲೂಕು ಉಪಾಧ್ಯಕ್ಷರಾದ ಪ್ರತಿಮ ಮಹದೇವ್,ಚಾಮುಲ್ ನಿರ್ದೇಶಕರಾದ ಉದ್ದನೂರು ಪ್ರಸಾದ್,ಮಾಜಿ ಚಾಮುಲ್ ಅಧ್ಯಕ್ಷರಾದ ಗುರುಮಲ್ಲಪ್ಪ,ಜಿಲ್ಲಾ ನಿರ್ದೇಶಕರಾದ ಬಸವರಾಜು,ಸಮುದಾಯದ ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ,ಟಿ ಸದಾಶಿವ ಮೂರ್ತಿ,ಡಿ. ಕೆ ರಾಜು,ಉದ್ದನೂರು ಗಿರೀಶ್, ಜಿಕೆ ಹೊಸೂರು ಪ್ರಮೋದ್, ವಿನೋದ್,ಉಮೇಶ್,ಹಾಗೂ ಇನ್ನಿತರರು ಇದ್ದರು..
    4
    ಪಟ್ಟಣ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬಸವಣ್ಣ ರವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿದ ಶಾಸಕರು  ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವುಗಳು ನಂತರ ಮರೆಯುತ್ತೇವೆ. ಸ್ವಾರ್ಥ ಮತ್ತು ನಾನು ಮೇಲು ಎಂಬ ನಾನತ್ವಗಳನ್ನು ಮೈಗೂಡಿಸಿಕೊಂಡರೆ.    
ಬಸವಣ್ಣ ರವರ ಸಮಾಜ ಸುಧಾರಣೆ ಆಗುವ ನಿಟ್ಟಿನಲ್ಲಿ ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ನೀವು ನಡೆಯಿರಿ ಅದನ್ನು ನೋಡಿ ನಮ್ಮ ಮುಂದಿನ ಪೀಳಿಗೆ ಕಲಿಯುತ್ತದೆ. ಇಂದು ನಾವು ನಮ್ಮ ಮಕ್ಕಳ ಮುಂದೆ ಎನು ಮಾಡುತ್ತೇವೆ ಅದನ್ನಗ ಅವರು ಸಹ ಅನುಸರಿಸುತ್ತಾರೆ. ಆಗಾಗಿ ಮಹನೀಯರ ಜಯಂತಿಗಳು ಒಂದು ದಿನಕ್ಕೆ ಸೀಮಿತವಾಗದೆ ಅವರ ಆದರ್ಶ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಆಳವಡಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ. ಎಂದರು
ಮುಂದಿನ ದಿನಗಳಲ್ಲಿ ಸಮುದಾಯದ ವತಿಯಿಂದ ಪಟ್ಟಣದಲ್ಲಿ ಆಚರಣೆ ಮಾಡುವ ಬಸವೇಶ್ವರರ ಜಯಂತಿಗೆ ನನ್ನ ಸಂಪೂರ್ಣ ಸಹಕಾರವಿದೆ. ಅದೇ ರೀತಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡಿ. ನಿಮ್ಮ ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್,ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳಾದ ರೇಖಾ,ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್,ತಾಲೂಕು ಉಪಾಧ್ಯಕ್ಷರಾದ ಪ್ರತಿಮ ಮಹದೇವ್,ಚಾಮುಲ್ ನಿರ್ದೇಶಕರಾದ ಉದ್ದನೂರು ಪ್ರಸಾದ್,ಮಾಜಿ ಚಾಮುಲ್ ಅಧ್ಯಕ್ಷರಾದ ಗುರುಮಲ್ಲಪ್ಪ,ಜಿಲ್ಲಾ ನಿರ್ದೇಶಕರಾದ ಬಸವರಾಜು,ಸಮುದಾಯದ ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ,ಟಿ ಸದಾಶಿವ ಮೂರ್ತಿ,ಡಿ. ಕೆ ರಾಜು,ಉದ್ದನೂರು ಗಿರೀಶ್, ಜಿಕೆ ಹೊಸೂರು ಪ್ರಮೋದ್, ವಿನೋದ್,ಉಮೇಶ್,ಹಾಗೂ ಇನ್ನಿತರರು ಇದ್ದರು..
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    39 min ago
  • ಮೈಸೂರು ಹನು ಫ್ಯಾಬ್ರಿಕೇಷನ್, ಇಲ್ಲಿ ರೈತರಿಗೆ ಸಹಾಯ ವಾಗುವ ಬೈಕ್ ಟ್ರಾಲಿ, ಎತ್ತಿನ ಗಾಡಿ, ಕಬ್ಬಿಣ ತಯಾರಿ ಆಗುವ ಹೂವಿನ ಅಲಂಕಾರ ಚಿತ್ರಗಳು ಇವುಗಳನ್ನು ಇಲ್ಲಿ ತಯಾರಿ ಮಾಡಿ ಕೊಡುತ್ತಾರೆ ಹೆಚ್ಚಿನ ಮಾಹಿತಿ ಸಂಪರ್ಕ ಮಾಡಿ :- +919164865318
    4
    ಮೈಸೂರು ಹನು ಫ್ಯಾಬ್ರಿಕೇಷನ್, ಇಲ್ಲಿ ರೈತರಿಗೆ ಸಹಾಯ ವಾಗುವ ಬೈಕ್ ಟ್ರಾಲಿ, ಎತ್ತಿನ ಗಾಡಿ, ಕಬ್ಬಿಣ ತಯಾರಿ ಆಗುವ ಹೂವಿನ ಅಲಂಕಾರ ಚಿತ್ರಗಳು ಇವುಗಳನ್ನು ಇಲ್ಲಿ ತಯಾರಿ ಮಾಡಿ ಕೊಡುತ್ತಾರೆ ಹೆಚ್ಚಿನ ಮಾಹಿತಿ ಸಂಪರ್ಕ ಮಾಡಿ :- +919164865318
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Chamarajanagar, Chamarajanagara•
    18 hrs ago
  • ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರಶಿವಯೋಗಿಗಳರವರ ಕರ್ತೃ ಗದ್ದುಗೆ ಆಮಾವಾಸ್ಯೆ ವಿಶೇಷ ಪೂಜೆ -ದರ್ಶನಕ್ಕ ಹರಿದು ಬಂದ ಜನಸಾಗರ • ಜಗದ್ಗುರು ಶ್ರೀವೀರಸಿಂಹಾಸನ ಮಹಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ಅರ್ಶೀವಾದ ಪಡೆದು ಪುನಿತರಾದ ಭಕ್ತರು ನಂಜನಗೂಡು :ಆಮಾವಾಸ್ಯೆ ಶುಕ್ರವಾರದ ಅಂಗವಾಗಿ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆ ದರ್ಶನಕ್ಕ ಅಪಾರ ಜನರು ಅಗಮಿಸಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಜಿಲ್ಲೆಯ ನಂಜನಗೂಡಿನ ತಾಲೂಕಿನ ಐತಿಹಾಸಿಕ ಪುಣ್ಯ ಕ್ಷೇತ್ರ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆಗಳಿಗೆ ಅಮಾವಾಸ್ಯೆಯ ವಿಶೇಷ ಪೂಜೆಗೆ ಅಪಾರ ಭಕ್ತ ಸಮೂಹವೇ ಅಗಮಿಸಿ ದರ್ಶನ ಪಡೆದು ನಂತರ ಪರಮ ಪೂಜ್ಯರ ಅರ್ಶೀವಾದ ಪಡೆದರು. ಶುಕ್ರವಾರ ನಡೆದ ವಿಶೇಷ ಪೂಜೆಯಲ್ಲಿ ಲಿಂಗೈಕ್ಯ ಪೂಜ್ಯರ ಕರ್ತೃ ಗದ್ದುಗೆಗಳಿಗೆ ಹಾಗೂ ಆದಿ ಜಗದ್ಗುರುಗಳ ಉತ್ಸವಮೂರ್ತಿಗೆ ಶ್ರೀ ನಂಜುAಡೇಶ್ವರ ದೇವರಿಗೆ ವಿಶೇಷ ಅಭಿಷೇಕ ಪೂಜೆಗಳು,ಹೂವಿನ ಅಲಂಕಾರದ ವಿಶೇಷ ದರ್ಶನ ಎಲ್ಲರ ಭಕ್ತರ ಮನಸೂರಗೊಂಡಿತು. ಮಹಾ ಮಂಗಳಾರತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಕತೃ ಗದ್ದುಗಳಿಗೆ ಉತ್ಸವ ಮೂರ್ತಿಗಳಿಗೆ ಶ್ರೀ ನಂಜುAಡೇಶ್ವರ ಸ್ವಾಮಿಗೆ ಮಹಾಮಂಗಳಾರತಿ ಸಲ್ಲಿಸಿದರು ನಂತರ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ ಎಲ್ಲಾ ಭಕ್ತರಿಗೂ ಆಶೀರ್ವದಿಸಿದರು . ಅದರಲ್ಲೂ ಈ ಬಾರಿ ಬಸವ ಜಯಂತಿ ನಡೆಯುತ್ತಿರುವುದರಿಂದ ರಾಜ್ಯದ ಹಲವೆಡೆಯಿಂದ ಪೂಜ್ಯರನ್ನು ಆಹ್ವಾನಿಸಲು ತಂಡೋಪ ತಂಡವಾಗಿ ಸಾವಿರಾರು ಜನರು ಆಗಮಿಸಿ, ಪೂಜ್ಯರ ದರ್ಶನ ಪಡೆಯಲು ಅವರ ಆಹ್ವಾನಿಸಲು ಜನ ಸಾಗರವೇ ನೆರೆದಿತ್ತು.ಈ ನಡುವೆ ನಾವುಗಳು ಕರ್ತೃ ಗದ್ದುಗೆ ದರ್ಶನ ಪಡೆದು ಪೂಜ್ಯರನ್ನು ದಿ ಯುನೈಟಡ್ ಅಕಾಡೆಮಿ ನೂತನ ಶಾಲೆಯ ಉದ್ಘಾಟನೆಗೆ ಅಹ್ವಾನಿಸಿದೆವು,ಪರಮಪೂಜ್ಯರು ನಮ್ಮ ಅಹ್ವಾನವನ್ನು ಸ್ವೀಕರಿಸಿ ಅಗಮಿಸುವ ಅರ್ಶೀವಾದ ನೀಡಿದರು.ಇದು ನಮ್ಮ ಪುಣ್ಯವಾಗಿದೆ,
    1
    ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರಶಿವಯೋಗಿಗಳರವರ ಕರ್ತೃ ಗದ್ದುಗೆ ಆಮಾವಾಸ್ಯೆ ವಿಶೇಷ ಪೂಜೆ -ದರ್ಶನಕ್ಕ ಹರಿದು ಬಂದ ಜನಸಾಗರ
•	ಜಗದ್ಗುರು ಶ್ರೀವೀರಸಿಂಹಾಸನ ಮಹಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ಅರ್ಶೀವಾದ ಪಡೆದು ಪುನಿತರಾದ ಭಕ್ತರು
ನಂಜನಗೂಡು :ಆಮಾವಾಸ್ಯೆ ಶುಕ್ರವಾರದ ಅಂಗವಾಗಿ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆ ದರ್ಶನಕ್ಕ ಅಪಾರ ಜನರು ಅಗಮಿಸಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡಿನ ತಾಲೂಕಿನ ಐತಿಹಾಸಿಕ ಪುಣ್ಯ ಕ್ಷೇತ್ರ ಸುತ್ತೂರು  ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆಗಳಿಗೆ ಅಮಾವಾಸ್ಯೆಯ ವಿಶೇಷ ಪೂಜೆಗೆ ಅಪಾರ ಭಕ್ತ ಸಮೂಹವೇ ಅಗಮಿಸಿ ದರ್ಶನ ಪಡೆದು ನಂತರ ಪರಮ ಪೂಜ್ಯರ ಅರ್ಶೀವಾದ ಪಡೆದರು.
ಶುಕ್ರವಾರ ನಡೆದ ವಿಶೇಷ ಪೂಜೆಯಲ್ಲಿ ಲಿಂಗೈಕ್ಯ ಪೂಜ್ಯರ ಕರ್ತೃ ಗದ್ದುಗೆಗಳಿಗೆ ಹಾಗೂ ಆದಿ ಜಗದ್ಗುರುಗಳ ಉತ್ಸವಮೂರ್ತಿಗೆ  ಶ್ರೀ ನಂಜುAಡೇಶ್ವರ ದೇವರಿಗೆ ವಿಶೇಷ ಅಭಿಷೇಕ ಪೂಜೆಗಳು,ಹೂವಿನ ಅಲಂಕಾರದ ವಿಶೇಷ ದರ್ಶನ ಎಲ್ಲರ ಭಕ್ತರ ಮನಸೂರಗೊಂಡಿತು.
ಮಹಾ ಮಂಗಳಾರತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಕತೃ ಗದ್ದುಗಳಿಗೆ ಉತ್ಸವ ಮೂರ್ತಿಗಳಿಗೆ ಶ್ರೀ ನಂಜುAಡೇಶ್ವರ ಸ್ವಾಮಿಗೆ  ಮಹಾಮಂಗಳಾರತಿ ಸಲ್ಲಿಸಿದರು ನಂತರ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ ಎಲ್ಲಾ ಭಕ್ತರಿಗೂ ಆಶೀರ್ವದಿಸಿದರು .
ಅದರಲ್ಲೂ ಈ ಬಾರಿ ಬಸವ ಜಯಂತಿ ನಡೆಯುತ್ತಿರುವುದರಿಂದ ರಾಜ್ಯದ ಹಲವೆಡೆಯಿಂದ  ಪೂಜ್ಯರನ್ನು ಆಹ್ವಾನಿಸಲು ತಂಡೋಪ ತಂಡವಾಗಿ ಸಾವಿರಾರು ಜನರು ಆಗಮಿಸಿ, ಪೂಜ್ಯರ ದರ್ಶನ ಪಡೆಯಲು ಅವರ ಆಹ್ವಾನಿಸಲು ಜನ ಸಾಗರವೇ ನೆರೆದಿತ್ತು.ಈ ನಡುವೆ ನಾವುಗಳು  ಕರ್ತೃ ಗದ್ದುಗೆ ದರ್ಶನ ಪಡೆದು ಪೂಜ್ಯರನ್ನು ದಿ ಯುನೈಟಡ್ ಅಕಾಡೆಮಿ ನೂತನ ಶಾಲೆಯ ಉದ್ಘಾಟನೆಗೆ ಅಹ್ವಾನಿಸಿದೆವು,ಪರಮಪೂಜ್ಯರು ನಮ್ಮ ಅಹ್ವಾನವನ್ನು ಸ್ವೀಕರಿಸಿ ಅಗಮಿಸುವ ಅರ್ಶೀವಾದ ನೀಡಿದರು.ಇದು ನಮ್ಮ ಪುಣ್ಯವಾಗಿದೆ,
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    19 hrs ago
  • ಹನೂರು: "12ನೇ ಶತಮಾನದಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ಜಗತ್ತಿಗೆ ಸಮಾನತೆ, ಸಹೋದರತೆ ಮತ್ತು ಕಾಯಕ ನಿಷ್ಠೆಯ ಆದರ್ಶಗಳನ್ನು ಸಾರಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ತತ್ವಗಳನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಲು ಸಾಧ್ಯ," ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್ ಸ್ವಾರ್ಥ ಬಿಡಿ, ಕಾಯಕ ನಂಬಿ: ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವು ನಂತರ ಅದನ್ನು ಮರೆಯುತ್ತಿದ್ದೇವೆ. ಸ್ವಾರ್ಥ ಮತ್ತು 'ನಾನು' ಎಂಬ ಅಹಂಭಾವವನ್ನು ಬಿಟ್ಟು, 'ಕಾಯಕವೇ ಕೈಲಾಸ' ಎಂಬ ತತ್ವದಡಿ ನಡೆದರೆ ಸಮಾಜ ಸುಧಾರಣೆ ಸಾಧ್ಯ. ಮುಂದಿನ ಪೀಳಿಗೆಗೆ ಮಾದರಿಯಾಗಿ: ಇಂದು ನಾವು ಮಾಡುವ ಕೆಲಸಗಳನ್ನು ನಮ್ಮ ಮಕ್ಕಳು ಅನುಸರಿಸುತ್ತಾರೆ. ಹಾಗಾಗಿ ಪೋಷಕರು ಮತ್ತು ಹಿರಿಯರು ಮಹನೀಯರ ತತ್ವಗಳನ್ನು ಪಾಲಿಸುವ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು. ಪ್ರತಿಮೆ ನಿರ್ಮಾಣಕ್ಕೆ ಭರವಸೆ: ಪಟ್ಟಣದಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡುವಂತೆ ಕೋರಿದ ಶಾಸಕರು, ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. "ಮಹನೀಯರ ಜಯಂತಿಗಳು ಒಂದು ದಿನದ ಆಚರಣೆಯಾಗಬಾರದು. ಅವರ ಸಿದ್ದಾಂತಗಳು ನಮ್ಮ ಬದುಕಿನ ಭಾಗವಾದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ." — ಎಂ.ಆರ್. ಮಂಜುನಾಥ್, ಶಾಸಕರು. ಗಣ್ಯರ ಉಪಸ್ಥಿತಿ:ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರೇಖಾ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷೆ ಪ್ರತಿಮ ಮಹದೇವ್ ಉಪಸ್ಥಿತರಿದ್ದರು. ಅಲ್ಲದೆ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ನಿರ್ದೇಶಕ ಬಸವರಾಜು, ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ, ಟಿ. ಸದಾಶಿವ ಮೂರ್ತಿ, ಡಿ.ಕೆ ರಾಜು, ಉದ್ದನೂರು ಗಿರೀಶ್, ಪ್ರಮೋದ್, ವಿನೋದ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ವರದಿ ಉಸ್ಮಾನ್ ಖಾನ್
    3
    ಹನೂರು: "12ನೇ ಶತಮಾನದಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ಜಗತ್ತಿಗೆ ಸಮಾನತೆ, ಸಹೋದರತೆ ಮತ್ತು ಕಾಯಕ ನಿಷ್ಠೆಯ ಆದರ್ಶಗಳನ್ನು ಸಾರಿದ್ದಾರೆ. ಅಂತಹ ಮಹಾನ್ ದಾರ್ಶನಿಕರ ತತ್ವಗಳನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಲು ಸಾಧ್ಯ," ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು.
ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್
ಸ್ವಾರ್ಥ ಬಿಡಿ, ಕಾಯಕ ನಂಬಿ: ಬಸವಣ್ಣನವರ ಆದರ್ಶಗಳ ಬಗ್ಗೆ ಮಾತನಾಡುವ ನಾವು ನಂತರ ಅದನ್ನು ಮರೆಯುತ್ತಿದ್ದೇವೆ. ಸ್ವಾರ್ಥ ಮತ್ತು 'ನಾನು' ಎಂಬ ಅಹಂಭಾವವನ್ನು ಬಿಟ್ಟು, 'ಕಾಯಕವೇ ಕೈಲಾಸ' ಎಂಬ ತತ್ವದಡಿ ನಡೆದರೆ ಸಮಾಜ ಸುಧಾರಣೆ ಸಾಧ್ಯ.
ಮುಂದಿನ ಪೀಳಿಗೆಗೆ ಮಾದರಿಯಾಗಿ: ಇಂದು ನಾವು ಮಾಡುವ ಕೆಲಸಗಳನ್ನು ನಮ್ಮ ಮಕ್ಕಳು ಅನುಸರಿಸುತ್ತಾರೆ. ಹಾಗಾಗಿ ಪೋಷಕರು ಮತ್ತು ಹಿರಿಯರು ಮಹನೀಯರ ತತ್ವಗಳನ್ನು ಪಾಲಿಸುವ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು.
ಪ್ರತಿಮೆ ನಿರ್ಮಾಣಕ್ಕೆ ಭರವಸೆ: ಪಟ್ಟಣದಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಕಾಲಾವಕಾಶ ನೀಡುವಂತೆ ಕೋರಿದ ಶಾಸಕರು, ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
"ಮಹನೀಯರ ಜಯಂತಿಗಳು ಒಂದು ದಿನದ ಆಚರಣೆಯಾಗಬಾರದು. ಅವರ ಸಿದ್ದಾಂತಗಳು ನಮ್ಮ ಬದುಕಿನ ಭಾಗವಾದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ."
— ಎಂ.ಆರ್. ಮಂಜುನಾಥ್, ಶಾಸಕರು.
ಗಣ್ಯರ ಉಪಸ್ಥಿತಿ:ಈ ಸಂಧರ್ಭದಲ್ಲಿ 
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರೇಖಾ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷೆ ಪ್ರತಿಮ ಮಹದೇವ್ ಉಪಸ್ಥಿತರಿದ್ದರು.
ಅಲ್ಲದೆ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ನಿರ್ದೇಶಕ ಬಸವರಾಜು, ಮುಖಂಡರುಗಳಾದ ಮುರುಡೇಶ್ವರ ಸ್ವಾಮಿ, ಟಿ. ಸದಾಶಿವ ಮೂರ್ತಿ, ಡಿ.ಕೆ ರಾಜು, ಉದ್ದನೂರು ಗಿರೀಶ್, ಪ್ರಮೋದ್, ವಿನೋದ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ವರದಿ ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    1 hr ago
  • ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಹಿನ್ನೀರಿನಲ್ಲಿ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ನೀರು ಕುಡಿಯಲು ಬಂದಿದ್ದ ಆನೆಗಳು ಕೆಸರಿನಲ್ಲಿ ಸಿಲುಕಿದ್ದು, ಅವುಗಳಲ್ಲಿ ಒಂದು ಆನೆ ಕಷ್ಟಪಟ್ಟು ಹೊರಬಂದಿದೆ. ಮತ್ತೊಂದು ಆನೆ ಇನ್ನೂ ಕೆಸರಿನಲ್ಲಿ ಸಿಲುಕಿಕೊಂಡಿದ್ದರೆ, ಮೂರನೇ ಆನೆ ಆತಂಕದಿಂದ ಸುತ್ತಮುತ್ತ ಅಲೆದಾಡುತ್ತಿದೆ. ಈ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಹನೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಎಫ್ ಭಾಸ್ಕರ್ ಹಾಗೂ ಠಾಣಾಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಆನೆಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಲಾಗಿದೆ. ಈ ಪ್ರದೇಶವು ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಗೆ ಒಳಪಡುತ್ತದೆ.
    1
    ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಹಿನ್ನೀರಿನಲ್ಲಿ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. 
ನೀರು ಕುಡಿಯಲು ಬಂದಿದ್ದ ಆನೆಗಳು ಕೆಸರಿನಲ್ಲಿ ಸಿಲುಕಿದ್ದು, ಅವುಗಳಲ್ಲಿ ಒಂದು ಆನೆ ಕಷ್ಟಪಟ್ಟು ಹೊರಬಂದಿದೆ. ಮತ್ತೊಂದು ಆನೆ ಇನ್ನೂ ಕೆಸರಿನಲ್ಲಿ ಸಿಲುಕಿಕೊಂಡಿದ್ದರೆ, ಮೂರನೇ ಆನೆ ಆತಂಕದಿಂದ ಸುತ್ತಮುತ್ತ ಅಲೆದಾಡುತ್ತಿದೆ.
ಈ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಹನೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಎಫ್ ಭಾಸ್ಕರ್ ಹಾಗೂ ಠಾಣಾಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಆನೆಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಲಾಗಿದೆ.
ಈ ಪ್ರದೇಶವು ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಗೆ ಒಳಪಡುತ್ತದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • ಮಲೆಮಹದೇಶ್ವರ ವನ್ಯಜೀವಿ ಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ಕುಡಿಯಲೆಂದು 4 ಕಾಡಾನೆಗಳು ಬಂದಿದ್ದವು. ಆ ಪೈಕಿ ಮೂರು ಆನೆಗಳು ಕೆಸರಿ ನಲ್ಲಿ ಸಿಲುಕಿಕೊಂಡಿದ್ದವು. ಸಾವು ಬದುಕಿನ ಜತೆ ಹೋರಾಡುತ್ತಾ ಘೀಳಿ ಡುತ್ತಿದ್ದವು. ಅದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ಭಾನುವಾರಮಧ್ಯಾಹ್ನ ಗಮನಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಧಾಮಿಸಿದ ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಸಿಎಫ್ ಭಾಸ್ಕರ್, ಎಸಿಎಫ್ ವಿರಾಜ್ ಹೊಸೂರ್, ವಲಯ ಅರಣ್ಯಾಧಿಕಾರಿ ಜಿತೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ, ಆನೆಗಳ ರಕ್ಷಣೆಗೆ ಮುಂದಾದರು. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದರು. ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು. ನಿತ್ರಾಣದಿಂದ ಚೇತರಿಕೆ: ಆನೆಗಳು ಕೆಸರಿನಲ್ಲಿ ಸಿಲುಕಿದ್ದು ಯಾವಾಗ ಎಂಬ ಖಚಿತ ಮಾಹಿತಿ ಇಲ್ಲ. ಆದರೆ ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಆನೆಗಳು ನಿತ್ರಾಣಗೊಂಡಿದ್ದವು. ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡವು ಎನ್ನಲಾಗಿದೆ. ಸಾಕಾನೆ ಮಹೇಂದ್ರನ ಸಹಾಯ: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗಳಿಗೆ ಮೊದಲಿಗೆ ಕಲ್ಲಂಗಡಿ, ಕಬ್ಬು ಇನ್ನಿತರ ಆಹಾರ ಪದಾರ್ಥಗಳನ್ನು ಒದಗಿಸಲಾಯಿತು. ಬಳಿಕ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ ನುರಿತ ಬೊಟ್ ಮ್ಯಾನ್ ಗಳ ಸಹಾಯದಿಂದ ಅರಣ್ಯ, ಅಗ್ನಿಶಾಮಕ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ, ತೆಪ್ಪದಲ್ಲಿ ಆನೆಗಳ ಬಳಿ ತೆರಳಿದರು. ಒಂದು ಆನೆಗೆ ಬೆಲ್ಟ್ ಹಾಕಿ ಟ್ರ್ಯಾಕ್ಟ‌ರ್ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಇನ್ನೊಂದು ಆನೆ ಸ್ವಯಂ ಶಕ್ತಿಯಿಂದ ತಾನಾಗಿಯೇ ಕೆಸರಿನಿಂದ ಬಿಡಿಸಿಕೊಂಡು ಕಾಡಿನತ್ತ ಹೊರಟಿತು. ಶಕ್ತಿಹೀನವಾಗಿದ್ದ ಮತ್ತೊಂದು ಆನೆಯನ್ನು ಕೆಸರಿನಿಂದ ಮೇಲೆತ್ತಲು ಸಹಾಯಕ್ಕಾಗಿ ಮತ್ತಿಗೋಡು ಶಿಬಿರದಿಂದ ಸಾಕಾನೆ ಮಹೇಂದ್ರನನ್ನು ಕರೆಸಲಾಯಿತು. ರಾತ್ರಿವರೆಗೂ ಕಾರ್ಯಾಚರಣೆ ಮುಂದುವರಿದಿತ್ತು.
    4
    ಮಲೆಮಹದೇಶ್ವರ ವನ್ಯಜೀವಿ ಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ಕುಡಿಯಲೆಂದು 4 ಕಾಡಾನೆಗಳು ಬಂದಿದ್ದವು. ಆ ಪೈಕಿ ಮೂರು ಆನೆಗಳು ಕೆಸರಿ ನಲ್ಲಿ ಸಿಲುಕಿಕೊಂಡಿದ್ದವು. ಸಾವು ಬದುಕಿನ ಜತೆ ಹೋರಾಡುತ್ತಾ ಘೀಳಿ ಡುತ್ತಿದ್ದವು. 
ಅದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ಭಾನುವಾರಮಧ್ಯಾಹ್ನ ಗಮನಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಕೂಡಲೇ ಸ್ಥಳಕ್ಕೆ ಧಾಮಿಸಿದ ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಸಿಎಫ್ ಭಾಸ್ಕರ್, ಎಸಿಎಫ್ ವಿರಾಜ್ ಹೊಸೂರ್, ವಲಯ ಅರಣ್ಯಾಧಿಕಾರಿ ಜಿತೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ, ಆನೆಗಳ ರಕ್ಷಣೆಗೆ ಮುಂದಾದರು. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದರು. ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.
ನಿತ್ರಾಣದಿಂದ ಚೇತರಿಕೆ: ಆನೆಗಳು ಕೆಸರಿನಲ್ಲಿ ಸಿಲುಕಿದ್ದು ಯಾವಾಗ ಎಂಬ ಖಚಿತ ಮಾಹಿತಿ ಇಲ್ಲ. ಆದರೆ ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಆನೆಗಳು ನಿತ್ರಾಣಗೊಂಡಿದ್ದವು. ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡವು ಎನ್ನಲಾಗಿದೆ.
ಸಾಕಾನೆ ಮಹೇಂದ್ರನ ಸಹಾಯ: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗಳಿಗೆ ಮೊದಲಿಗೆ ಕಲ್ಲಂಗಡಿ, ಕಬ್ಬು ಇನ್ನಿತರ ಆಹಾರ ಪದಾರ್ಥಗಳನ್ನು ಒದಗಿಸಲಾಯಿತು. ಬಳಿಕ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ ನುರಿತ ಬೊಟ್ ಮ್ಯಾನ್ ಗಳ ಸಹಾಯದಿಂದ ಅರಣ್ಯ, ಅಗ್ನಿಶಾಮಕ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ, ತೆಪ್ಪದಲ್ಲಿ ಆನೆಗಳ ಬಳಿ ತೆರಳಿದರು. 
ಒಂದು ಆನೆಗೆ ಬೆಲ್ಟ್ ಹಾಕಿ ಟ್ರ್ಯಾಕ್ಟ‌ರ್ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಇನ್ನೊಂದು ಆನೆ ಸ್ವಯಂ ಶಕ್ತಿಯಿಂದ ತಾನಾಗಿಯೇ ಕೆಸರಿನಿಂದ ಬಿಡಿಸಿಕೊಂಡು ಕಾಡಿನತ್ತ ಹೊರಟಿತು. 
ಶಕ್ತಿಹೀನವಾಗಿದ್ದ ಮತ್ತೊಂದು ಆನೆಯನ್ನು ಕೆಸರಿನಿಂದ ಮೇಲೆತ್ತಲು ಸಹಾಯಕ್ಕಾಗಿ ಮತ್ತಿಗೋಡು ಶಿಬಿರದಿಂದ ಸಾಕಾನೆ ಮಹೇಂದ್ರನನ್ನು ಕರೆಸಲಾಯಿತು. ರಾತ್ರಿವರೆಗೂ ಕಾರ್ಯಾಚರಣೆ ಮುಂದುವರಿದಿತ್ತು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.