Shuru
Apke Nagar Ki App…
ಬಣಜಿಗ ಸಮಾಜದ ಶಕ್ತಿ ಪ್ರದರ್ಶನ! ಸವಣೂರಿನಲ್ಲಿ ಪ್ರತಿಭೆಗೆ ಸನ್ಮಾನ, ಮಹಿಳಾ ಹಾಗೂ ಯುವ ಘಟಕಕ್ಕೆ ಭವ್ಯ ಚಾಲನೆ! ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ ಶ್ರೀ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು, ತಾಲೂಕಾ ಘಟಕ, ಸವಣೂರಿನ 4ನೇ ವರ್ಷದ ಸಮಾವೇಶ ಹಾಗೂ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ತಾಲೂಕಾ ಮಹಿಳಾ ಘಟಕ ಹಾಗೂ ಯುವ ಘಟಕದ ಉದ್ಘಾಟನೆಯ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದೆನು. ಈ ಸಂಧರ್ಭದಲ್ಲಿ ಡಾ|| ಎ. ಸಿ. ವಾಲಿ ಗುರೂಜಿ ಸುಕ್ಷೇತ್ರ, ಬಂಡಿವಾಡ ಶ್ರೀಗಳು ಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಜಗದೀಶ ಶೆಟ್ಟರ, ಸವಣೂರ ತಾಲೂಕ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ ಗದಿಗೆಪ್ಪ ಶೆಟ್ಟರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಸಂತೋಷ S H
ಬಣಜಿಗ ಸಮಾಜದ ಶಕ್ತಿ ಪ್ರದರ್ಶನ! ಸವಣೂರಿನಲ್ಲಿ ಪ್ರತಿಭೆಗೆ ಸನ್ಮಾನ, ಮಹಿಳಾ ಹಾಗೂ ಯುವ ಘಟಕಕ್ಕೆ ಭವ್ಯ ಚಾಲನೆ! ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ ಶ್ರೀ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು, ತಾಲೂಕಾ ಘಟಕ, ಸವಣೂರಿನ 4ನೇ ವರ್ಷದ ಸಮಾವೇಶ ಹಾಗೂ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ತಾಲೂಕಾ ಮಹಿಳಾ ಘಟಕ ಹಾಗೂ ಯುವ ಘಟಕದ ಉದ್ಘಾಟನೆಯ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದೆನು. ಈ ಸಂಧರ್ಭದಲ್ಲಿ ಡಾ|| ಎ. ಸಿ. ವಾಲಿ ಗುರೂಜಿ ಸುಕ್ಷೇತ್ರ, ಬಂಡಿವಾಡ ಶ್ರೀಗಳು ಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಜಗದೀಶ ಶೆಟ್ಟರ, ಸವಣೂರ ತಾಲೂಕ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ ಗದಿಗೆಪ್ಪ ಶೆಟ್ಟರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು1
- ಕಾಕಿ ತೊಟ್ಟ ತಕ್ಷಣ ಎಲ್ಲವನ್ನು ಅಳಬಹುದು ಎಂಬ ಮುಟ್ಟಾಳತನಕ್ಕೆ ಏನನ್ನಬೇಕು? ಹಿರಿಯ ನಾಗರಿಕ ಅನ್ನುವ ವಿವೇಚನೆ ಇಲ್ಲದೆ ಕೈ ಮಾಡಿದ ಇಲ್ಲೊಬ್ಬ ಭ್ರಷ್ಟ ನೋಡಿ!?1
- ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ1
- ಈದ್ ಮಿಲಾದ್ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ1
- ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.1
- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.1
- ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ. 🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ 🔹 ಜನರ ಪ್ರಮುಖ ಸಮಸ್ಯೆಗಳು 🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು 🔹 ಭವಿಷ್ಯದ ಯೋಜನೆಗಳು 🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು 🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು 🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು “ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!” 📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ 🎤 ನಿಮ್ಮ ನಾಯಕ – ನಿಮ್ಮ ಮುಂದೆ 📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ 🎙️ ನಿಮ್ಮ ಸಿಂಪಲ್ ಸಿದ್ದು ವಾಹಿನಿ “ನಿಮ್ಮ ನಾಯಕ – ನಿಮ್ಮ ಮುಂದೆ” ವಿಶೇಷ ಸಂದರ್ಶನ ಕಾರ್ಯಕ್ರಮ ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ. 🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ 🔹 ಜನರ ಪ್ರಮುಖ ಸಮಸ್ಯೆಗಳು 🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು 🔹 ಭವಿಷ್ಯದ ಯೋಜನೆಗಳು 🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು 🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು 🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು “ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!” 📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ 🎤 ನಿಮ್ಮ ನಾಯಕ – ನಿಮ್ಮ ಮುಂದೆ 📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ 9743340230 shuru news ನಿಮ್ಮ ಸಿಂಪಲ್ ಸಿದ್ದು 97433402301
- ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.1