Shuru
Apke Nagar Ki App…
Kallappa Chalawadi
More news from ಕರ್ನಾಟಕ and nearby areas
- Post by Kallappa Chalawadi2
- Post by Iranna Tarnal1
- ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರದ ಅಡಳಿತ ಜನರು ನೋಡಲೆಬೇಕಾದಂಥ ಇಂಥಾ ಸರಕಾರ ಬೇಕಾ.1
- Post by @april14news1
- ವಿಜಯಪುರ: ಕೆ ಎಸ್ ಆರ್ ಟಿ ಸಿ ಬಸ್ ಟಿಪ್ಪರ್ ಡಿಕ್ಕಿ ಪ್ರಯಾಣಿಕರಿಗೆ ಗಾಯ ವಿಜಯಪುರ ನಗರದ ಹೊರಭಾಗದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕೆಎಸ್ಆರ್ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕೆಎಸ್ಆರ್ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.1
- ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು. ಬೆಳಗ್ಗೆ ನಡೆದ ಭೀಕರ ಅಪಘಾತ ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಒಂದೇ ಕುಟುಂಬದ 6 ಮಂದಿ ಸಜೀವ ದಹನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ. ಇಬ್ಬರಿಗೆ ಗಂಭೀರ ಗಾಯ ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಭೀಕರ ದೃಶ್ಯ - ಕಾರು ಭಸ್ಮ ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು. ತನಿಖೆ ಆರಂಭ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. 1
- ನಾಗೇಶ್ ಎಸ್ ರಾಜ್ಯಾಧ್ಯಕ್ಷರು ದಿಗ್ವಿಜಯ ಭಾರತ ಪಕ್ಷ 8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್ ತುರುನಾಳಿ ಗ್ರಾಮ ತಾಸಿಲ್ದಾರ್ ಮಲ್ಲಪ್ಪನವರು1
- Post by Sharanugouda Patil1