logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ* ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್   ಬರೆದಿರುವ  ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು. ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು. ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು. ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು. ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು

8 hrs ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
Grain Trader ಕೋಲಾರ, ಕೋಲಾರ, ಕರ್ನಾಟಕ•
8 hrs ago

*ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ* ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್   ಬರೆದಿರುವ  ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು. ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು

ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು. ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು

ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು. ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು. ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು

More news from ಕರ್ನಾಟಕ and nearby areas
  • ಕೆಜಿಎಫ್ ನಗರ ಸಭೆ ಆವರಣದಲ್ಲಿ ಶಿಥಿಲಗೊಂಡಿದ್ದ ಡಾ. ಅಂಬೇಡ್ಕರ್ ರವರ ಪುತ್ಥಳಿ ತೆರುವು ಕೆಜಿಎಫ್: ಇಲ್ಲಿನ ನಗರಸಭೆ ಆವರಣದಲ್ಲಿದ್ದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಶಿಥಿಲಗೊಂಡಿದ್ದ ಪ್ರತಿಮೆಯನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ. ಕಳೆದ ಹಲವಾರು ವರ್ಷಗಳಿಂದ ನಗರಸಭೆ ಆವರಣದಲ್ಲಿ ಸ್ಥಾಪಿಸಲಾಗಿದ್ದ ಅಂಬೇಡ್ಕರ್ ಅವರ ಪುತ್ಥಳಿಯು ಕಾಲಕ್ರಮೇಣ ಶಿಥಿಲಾವಸ್ಥೆಗೆ ತಲುಪಿತ್ತು. ಇದರಿಂದ ಮಹಾನ್ ನಾಯಕನ ಪ್ರತಿಮೆಗೆ ಸೂಕ್ತ ಗೌರವ ಸಿಗುತ್ತಿಲ್ಲ ಎಂಬ ಸಾರ್ವಜನಿಕ ಹಾಗೂ ದಲಿತಪರ ಸಂಘಟನೆಗಳ ಆಕ್ರೋಶಕ್ಕೆ ಸ್ಪಂದಿಸಿದ ಆಡಳಿತ ಮಂಡಳಿಯು ಈ ಕ್ರಮ ಕೈಗೊಂಡಿದೆ. ಸುರಕ್ಷಿತ ತೆರವು: ಸ್ಥಳೀಯ ಮುಖಂಡರು ಹಾಗೂ ಸಂಘಟನೆಗಳ ಗಮನಕ್ಕೆ ತಂದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಪ್ರತಿಮೆಯನ್ನು ಗೌರವಪೂರ್ವಕವಾಗಿ ತೆರವುಗೊಳಿಸಲಾಗಿದೆ. ಶೀಘ್ರದಲ್ಲೇ ನೂತನ ಪ್ರತಿಮೆ ಸ್ಥಾಪನೆ: ಶಿಥಿಲಗೊಂಡಿದ್ದ ಪ್ರತಿಮೆಯ ಜಾಗದಲ್ಲಿ ಶೀಘ್ರದಲ್ಲೇ ಹೊಸ ಪ್ರತಿಮೆ ಸ್ಥಾಪನೆಗೆ ಚಾಲನೆ ನೀಡಲಾಗುವುದು ಎಂದು ನಗರಸಭೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ನಗರಸಭೆಯ ಪ್ರಮುಖ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ದಲಿತ ಹಕ್ಕುಗಳ ಹೋರಾಟಗಾರರು ಹಾಜರಿದ್ದರು.
    1
    ಕೆಜಿಎಫ್ ನಗರ ಸಭೆ ಆವರಣದಲ್ಲಿ ಶಿಥಿಲಗೊಂಡಿದ್ದ ಡಾ. ಅಂಬೇಡ್ಕರ್ ರವರ ಪುತ್ಥಳಿ ತೆರುವು
ಕೆಜಿಎಫ್: ಇಲ್ಲಿನ ನಗರಸಭೆ ಆವರಣದಲ್ಲಿದ್ದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಶಿಥಿಲಗೊಂಡಿದ್ದ ಪ್ರತಿಮೆಯನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ.
ಕಳೆದ ಹಲವಾರು ವರ್ಷಗಳಿಂದ ನಗರಸಭೆ ಆವರಣದಲ್ಲಿ ಸ್ಥಾಪಿಸಲಾಗಿದ್ದ ಅಂಬೇಡ್ಕರ್ ಅವರ ಪುತ್ಥಳಿಯು ಕಾಲಕ್ರಮೇಣ ಶಿಥಿಲಾವಸ್ಥೆಗೆ ತಲುಪಿತ್ತು. ಇದರಿಂದ ಮಹಾನ್ ನಾಯಕನ ಪ್ರತಿಮೆಗೆ ಸೂಕ್ತ ಗೌರವ ಸಿಗುತ್ತಿಲ್ಲ ಎಂಬ ಸಾರ್ವಜನಿಕ ಹಾಗೂ ದಲಿತಪರ ಸಂಘಟನೆಗಳ ಆಕ್ರೋಶಕ್ಕೆ ಸ್ಪಂದಿಸಿದ ಆಡಳಿತ ಮಂಡಳಿಯು ಈ ಕ್ರಮ ಕೈಗೊಂಡಿದೆ.
ಸುರಕ್ಷಿತ ತೆರವು: ಸ್ಥಳೀಯ ಮುಖಂಡರು ಹಾಗೂ ಸಂಘಟನೆಗಳ ಗಮನಕ್ಕೆ ತಂದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಪ್ರತಿಮೆಯನ್ನು ಗೌರವಪೂರ್ವಕವಾಗಿ ತೆರವುಗೊಳಿಸಲಾಗಿದೆ.
ಶೀಘ್ರದಲ್ಲೇ ನೂತನ ಪ್ರತಿಮೆ ಸ್ಥಾಪನೆ: ಶಿಥಿಲಗೊಂಡಿದ್ದ ಪ್ರತಿಮೆಯ ಜಾಗದಲ್ಲಿ ಶೀಘ್ರದಲ್ಲೇ ಹೊಸ ಪ್ರತಿಮೆ ಸ್ಥಾಪನೆಗೆ ಚಾಲನೆ ನೀಡಲಾಗುವುದು ಎಂದು ನಗರಸಭೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆಯ ಪ್ರಮುಖ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ದಲಿತ ಹಕ್ಕುಗಳ ಹೋರಾಟಗಾರರು ಹಾಜರಿದ್ದರು.
    user_Prashanth  Vibes
    Prashanth Vibes
    Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
    15 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ 
ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    9 hrs ago
  • ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ
    1
    ಸ್ನೇಹಿತರೇ ನಾನು ನಿಮ್ಮೊಂದಿಗೆ
ಮಾತಾಡಲು ಇಚ್ಚಿಸುವೆ -
ಪ್ರಧಾನಿ ನರೇಂದ್ರ ಮೋದಿ 
ಸ್ನೇಹಿತರೇ ನಾನು ನಿಮ್ಮೊಂದಿಗೆ
ಮಾತಾಡಲು ಇಚ್ಚಿಸುವೆ -
ಪ್ರಧಾನಿ ನರೇಂದ್ರ ಮೋದಿ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ
    1
    ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ 
ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ
ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಉಡುಪಿ ಶಾಸಕ ಯಶ್ ಪಾಲ್ ವಿರುದ್ದ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ. ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಡಿಪಿಎ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ. ದೊಡ್ಡಬಳ್ಳಾಪುರ ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಉಡುಪಿ ಶಾಸಕ ಯಶ್ ಪಾಲ್ ವಿರುದ್ದ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ. ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಡಿಪಿಎ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ. ಕಾನೂನು ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ. ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ದೂರು ನೀಡಿದ ಕಾಂಗ್ರೆಸ್ ಮುಖಂಡರು. ರಾಹುಲ್ ಗಾಂಧಿ‌ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ. ಇಲ್ಲದೇ ಹೋದಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ
    3
    ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಉಡುಪಿ  ಶಾಸಕ ಯಶ್ ಪಾಲ್ ವಿರುದ್ದ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.
ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ.
ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಡಿಪಿಎ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ.
ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ.
ದೊಡ್ಡಬಳ್ಳಾಪುರ
ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಉಡುಪಿ  ಶಾಸಕ ಯಶ್ ಪಾಲ್ ವಿರುದ್ದ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.
ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ.
ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಡಿಪಿಎ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ.
ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ.
ಕಾನೂನು ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ.
ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ದೂರು ನೀಡಿದ ಕಾಂಗ್ರೆಸ್ ಮುಖಂಡರು.
ರಾಹುಲ್ ಗಾಂಧಿ‌ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.
ಇಲ್ಲದೇ ಹೋದಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    14 hrs ago
  • ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು! ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
    1
    ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ!
ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ!
ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • *ಆರೋಗ್ಯ ಇಲಾಖೆಯಲ್ಲಿ ಸೇವಾ ಮನೋಭಾವನೆಯಿಂದ ವಿಶಿಷ್ಟ ಛಾಪು ಮೂಡಿಸಿದ ಜಯಚಂದ್ರಾರೆಡ್ಡಿ-ಡಿ ಎಚ್ ಓ ಡಾ. ಚೇತನ್* ಚಿಕ್ಕಬಳ್ಳಾಪುರ : ಭಾಗ್ಯನಗರ ತಾಲೂಕಿನ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಯಾಗಿ ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ ಎಂದು ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್ ತಿಳಿಸಿದ್ದಾರೆ. ಪಟ್ಟಣದ ಕೊಡಿಕೊಂಡ ರಸ್ತೆಯ ಜಾಮೀಯಾ ಷಾದಿ ಮಹಲ್‌ ಆವರಣದಲ್ಲಿ ಕೇಂದ್ರದ ಫಾರ್ಮಸಿ ಅಧಿಕಾರಿಯಾಗಿದ್ದ ಸಿ.ಹೆಚ್. ಜಯಚಂದ್ರಾರೆಡ್ಡಿ ವಯೋನಿವೃತ್ತಿ ಅಂಗವಾಗಿ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮನಡೆಯಿತು,ಬೀಳ್ಕೊಡುಗೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್,ಸರ್ಕಾರಿ ಸೇವೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಫಾರ್ಮಸಿ ಅಧಿಕಾರಿಗಳಾದ ಸಿ.ಹೆಚ್. ಜಯಚಂದ್ರಾರೆಡ್ಡಿ ಅವರ ವಯೋನಿವೃತ್ತಿ ಸುಖಮಯವಾಗಿ ಇರಬೇಕು ಹಾಗೂ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆಯ ಅಧಿಕಾರಿಯಾಗಿದ್ದಾರೆ ಎಂದು ಹೇಳಿದರು. ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ. ಅವರ ಸೇವಾ ಮನೋಭಾವವು ಕಿರಿಯ ಸಿಬ್ಬಂದಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಂಗವಾಗಿ ಜಯಚಂದ್ರಾರೆಡ್ಡಿ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಹೋದ್ಯೋಗಿಗಳು ಅವರೊಂದಿಗೆ ಕಳೆದ ಸೇವಾ ದಿನಗಳ ಅನುಭವಗಳನ್ನು ಹಂಚಿಕೊಂಡು, ನಿವೃತ್ತ ಜೀವನ ಸುಖ, ಶಾಂತಿ, ಉತ್ತಮ ಆರೋಗ್ಯ ಹಾಗೂ ಸಂತೋಷದಿಂದ ಕೂಡಿರಲಿ ಎಂದು ಹಾರೈಸಿದರು. ಸಮಾರಂಭವು ಆತ್ಮೀಯ ವಾತಾವರಣದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸತ್ಯನಾರಾಯಣರೆಡ್ಡಿ,ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ವಿನಯ್,ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಟಿ ಡಿ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಎ.ಶ್ರೀನಿವಾಸ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎ. ನಂಜುಂಡಪ್ಪ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತ ರೆಡ್ಡಿ,ವೈದ್ಯರಾದ ಡಾ.ಜಗ್ನಾಥ್,ಡಾ! ಸುಜಿತ್,ಮುಖಂಡರಾದ ಪ್ರಭಾಕರ್ ರೆಡ್ಡಿ, ಸೇರಿದಂತೆ ಅನೇಕ ಗಣ್ಯರು ಶುಭಹಾರೈಯಿಸಿದರು..
    4
    *ಆರೋಗ್ಯ ಇಲಾಖೆಯಲ್ಲಿ  ಸೇವಾ ಮನೋಭಾವನೆಯಿಂದ ವಿಶಿಷ್ಟ ಛಾಪು ಮೂಡಿಸಿದ ಜಯಚಂದ್ರಾರೆಡ್ಡಿ-ಡಿ ಎಚ್ ಓ ಡಾ. ಚೇತನ್*




ಚಿಕ್ಕಬಳ್ಳಾಪುರ :  ಭಾಗ್ಯನಗರ ತಾಲೂಕಿನ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಯಾಗಿ ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ ಎಂದು ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್ ತಿಳಿಸಿದ್ದಾರೆ.

ಪಟ್ಟಣದ ಕೊಡಿಕೊಂಡ ರಸ್ತೆಯ ಜಾಮೀಯಾ ಷಾದಿ ಮಹಲ್‌ ಆವರಣದಲ್ಲಿ ಕೇಂದ್ರದ ಫಾರ್ಮಸಿ ಅಧಿಕಾರಿಯಾಗಿದ್ದ ಸಿ.ಹೆಚ್. ಜಯಚಂದ್ರಾರೆಡ್ಡಿ  ವಯೋನಿವೃತ್ತಿ ಅಂಗವಾಗಿ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮನಡೆಯಿತು,ಬೀಳ್ಕೊಡುಗೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ 
ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್,ಸರ್ಕಾರಿ ಸೇವೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಫಾರ್ಮಸಿ ಅಧಿಕಾರಿಗಳಾದ ಸಿ.ಹೆಚ್. ಜಯಚಂದ್ರಾರೆಡ್ಡಿ ಅವರ ವಯೋನಿವೃತ್ತಿ ಸುಖಮಯವಾಗಿ ಇರಬೇಕು ಹಾಗೂ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆಯ ಅಧಿಕಾರಿಯಾಗಿದ್ದಾರೆ ಎಂದು ಹೇಳಿದರು. ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ. ಅವರ ಸೇವಾ ಮನೋಭಾವವು ಕಿರಿಯ ಸಿಬ್ಬಂದಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಂಗವಾಗಿ ಜಯಚಂದ್ರಾರೆಡ್ಡಿ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಹೋದ್ಯೋಗಿಗಳು ಅವರೊಂದಿಗೆ ಕಳೆದ ಸೇವಾ ದಿನಗಳ ಅನುಭವಗಳನ್ನು ಹಂಚಿಕೊಂಡು, ನಿವೃತ್ತ ಜೀವನ ಸುಖ, ಶಾಂತಿ, ಉತ್ತಮ ಆರೋಗ್ಯ ಹಾಗೂ ಸಂತೋಷದಿಂದ ಕೂಡಿರಲಿ ಎಂದು ಹಾರೈಸಿದರು. ಸಮಾರಂಭವು ಆತ್ಮೀಯ ವಾತಾವರಣದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ  ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸತ್ಯನಾರಾಯಣರೆಡ್ಡಿ,ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ವಿನಯ್,ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಟಿ ಡಿ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಎ.ಶ್ರೀನಿವಾಸ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎ. ನಂಜುಂಡಪ್ಪ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತ ರೆಡ್ಡಿ,ವೈದ್ಯರಾದ ಡಾ.ಜಗ್ನಾಥ್,ಡಾ! ಸುಜಿತ್,ಮುಖಂಡರಾದ ಪ್ರಭಾಕರ್ ರೆಡ್ಡಿ, ಸೇರಿದಂತೆ ಅನೇಕ ಗಣ್ಯರು ಶುಭಹಾರೈಯಿಸಿದರು..
    user_Govindappa K
    Govindappa K
    Local News Reporter ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    8 hrs ago
  • ಮುಳಬಾಗಿಲು ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದ ವಿಷ ಸೇವಿಸಿ ಆತ್ಮಹತ್ಯೆ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪುಟ್ಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇನಹಳ್ಳಿ ಗ್ರಾಮದ 74 ವರ್ಷದ ವೆಂಕಟರಾಮಪ್ಪ ಮೂರು ದಿನದ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕೋಲಾರ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಮೂರು ದಿನ ಚಿಕಿತ್ಸೆ ನೀಡಲಾಗಿತ್ತು. ನಂಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಮುಳಬಾಗಿಲು ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದ ವಿಷ ಸೇವಿಸಿ ಆತ್ಮಹತ್ಯೆ

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪುಟ್ಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇನಹಳ್ಳಿ ಗ್ರಾಮದ 74 ವರ್ಷದ ವೆಂಕಟರಾಮಪ್ಪ ಮೂರು ದಿನದ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕೋಲಾರ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಮೂರು ದಿನ ಚಿಕಿತ್ಸೆ ನೀಡಲಾಗಿತ್ತು. ನಂಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.