Shuru
Apke Nagar Ki App…
ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಗ್ರಾಮದಲ್ಲಿ ವಿವಾದ ಉಂಟಾಗಿದೆ. ಒಂದೇ ಕೋಮಿನವರನ್ನು ಮುಖ್ಯ ಸ್ಥಾನಗಳಿಗೆ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವುದನ್ನು ಕೆಲವು ಹಾಲು ಉತ್ಪಾದಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಅವಿರೋಧವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಹಾಲು ಉತ್ಪಾದಕರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಡೈರಿಗೆ ನಿಯಮಿತವಾಗಿ ಹಾಲು ಪೂರೈಸುವ ರೈತರಿಗೆ ಮೊದಲ ಆದ್ಯತೆ ನೀಡದೇ ಸಂಘವನ್ನು ರಚಿಸಿರುವುದು ಸರಿಯಲ್ಲ ಎಂದು ಹಾಲು ಉತ್ಪಾದಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಆಯ್ಕೆಯನ್ನು ರದ್ದುಪಡಿಸಿ, ಡೈರಿಗೆ ಹಾಲು ಹಾಕುವ ನಿಜವಾದ ಹಾಲು ಉತ್ಪಾದಕರಿಗೆ ಮೊದಲ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಲು ಉತ್ಪಾದಕರು ಒತ್ತಾಯಿಸಿದ್ದಾರೆ.
ಗೋಪನಹಳ್ಳಿಶಿವಣ್ಣ
ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಗ್ರಾಮದಲ್ಲಿ ವಿವಾದ ಉಂಟಾಗಿದೆ. ಒಂದೇ ಕೋಮಿನವರನ್ನು ಮುಖ್ಯ ಸ್ಥಾನಗಳಿಗೆ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವುದನ್ನು ಕೆಲವು ಹಾಲು ಉತ್ಪಾದಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಅವಿರೋಧವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಹಾಲು ಉತ್ಪಾದಕರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಡೈರಿಗೆ ನಿಯಮಿತವಾಗಿ ಹಾಲು ಪೂರೈಸುವ ರೈತರಿಗೆ ಮೊದಲ ಆದ್ಯತೆ ನೀಡದೇ ಸಂಘವನ್ನು ರಚಿಸಿರುವುದು ಸರಿಯಲ್ಲ ಎಂದು ಹಾಲು ಉತ್ಪಾದಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಆಯ್ಕೆಯನ್ನು ರದ್ದುಪಡಿಸಿ, ಡೈರಿಗೆ ಹಾಲು ಹಾಕುವ ನಿಜವಾದ ಹಾಲು ಉತ್ಪಾದಕರಿಗೆ ಮೊದಲ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಲು ಉತ್ಪಾದಕರು ಒತ್ತಾಯಿಸಿದ್ದಾರೆ.
More news from ಕರ್ನಾಟಕ and nearby areas
- ಚಳ್ಳಕೆರೆ, ಮಾ.10 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ಕೈಗೊಂಡಿದ್ದ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು. ತಾಲ್ಲೂಕಿನ ಗರಣಿ ಕ್ರಾಸ್ ಬಳಿ ಮಂಗಳವಾರ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ ನಡೆಸಿದ ರೈತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಕೂದಲೆಳೆ ಅಂತರದಲ್ಲಿಯೇ ರೈತಸಂಘದ ಕಾರ್ಯಕರ್ತರು ಮಾ.2ರಂದು ಉಪವಾಸ ಆರಂಭಿಸಿ ಐದು ದಿನಗಳ ಕಾಲ ಮುಂದುವರಿಸಿದ್ದರೂ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಮನವೊಲಿಸುವ ಸಣ್ಣ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು. ಪ್ರತಿದಿನ ವಿವಿಧ ಸಂಘಟನೆಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಬೇಕೆಂದು ಆಗ್ರಹಿಸಿದರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ಪರಿಣಾಮ ರೈತನಾಯಕ ಉಪವಾಸ ಸತ್ಯಾಗ್ರಹದಿಂದ ಕುಸಿದುಬಿದ್ದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತçಚಿಕಿತ್ಸೆಗೆ 15 ಲಕ್ಷ ರೂ. ವೆಚ್ಚವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ತಿಪ್ಪೇಸ್ವಾಮಿ ಅವರ ಆರೋಗ್ಯ ವಿಚಾರಿಸುವ ಮಾನವೀಯತೆಯನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾಡಿಲ್ಲದಿರುವುದು ಹೋರಾಟಗಾರರಿಗೆ ಅಪಮಾನ ಮಾಡುವ ನಡೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಹೋರಾಟಗಾರರ ಕೂಗಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ, ಐದು ದಿನಗಳಿಂದ ಉಪವಾಸ ನಿರತರಾಗಿದ್ದ ತಿಪ್ಪೇಸ್ವಾಮಿ ಅವರನ್ನು ಅತ್ಯಂತ ಅಪಮಾನಕರವಾಗಿ ಜಿಲ್ಲಾಧಿಕಾರಿ ನಡೆಸಿಕೊಂಡಿದ್ದಾರೆ. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದ ಪರಿಣಾಮ ಉಪವಾಸ ಮುಂದುವರಿಸಿದ್ದೇ ಅನಾರೋಗ್ಯಕ್ಕೆ ಒಳಗಾಗಲು ಮುಖ್ಯ ಕಾರಣ ಎಂದರು. ರೈತನಾಯಕ ಅನಾರೋಗ್ಯಕ್ಕೆ ಒಳಗಾಗಲಿ ಎಂಬ ಉದ್ದೇಶದಿಂದಲೇ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿಲ್ಲವೆಂಬ ಸಂಶಯ ಮೂಡುತ್ತದೆ. ಇದೊಂದು ಸರ್ಕಾರಿ ವ್ಯವಸ್ಥೆ ಪರೋಕ್ಷವಾಗಿ ಕೊಲೆ ಯತ್ನ ನಡೆಸಿದೆ ಎಂದು ದೂರಿದರು. ಆಸ್ಪತ್ರೆಗೆ ಸೇರಿ ಐದು ದಿನಗಳಾಗಿದ್ದರೂ ಇಲ್ಲಿಯವರೆಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಅಧಿಕಾರಿಗಳು ಮಾಡಿಲ್ಲ. ಅಧಿಕಾರಿಗಳ ನಡೆ ಉದ್ಧಟನದಿಂದ ಕೂಡಿದೆ. ಇಂತಹ ಡಿಸಿಯನ್ನು ಯಾವುದೇ ಕಾರಣಕ್ಕೂ ಚಿತ್ರದುರ್ಗದಲ್ಲಿ ಇರಲು ಬಿಡಬಾರದು ಎಂದರು. ಟಿ.ವೆAಕಟೇಶ್ ಜಿಲ್ಲೆಗೆ ಆಗಮಿಸಿ ಎರಡೂವರೆ ವರ್ಷ ಆಗಿದ್ದರೂ ಇಲ್ಲಿಯವರೆಗೂ ಯಾವ ಕಾರಣಕ್ಕೆ ಅವರನ್ನೇ ಮುಂದುವರಿಸಲಾಗುತ್ತಿದೆ ಎಂದು ಪ್ರಶ್ನೀಸಿದ ಬಸವರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಟಿಎಂ ರೀತಿ ಬೆಂಬಲವಾಗಿ ನಿಂತಿದ್ದಾರೆ. ಈ ಕಾರಣಕ್ಕೆ ವೆಂಕಟೇಶ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಕೊನೇ ಪಕ್ಷ ಹೋರಾಟಗಾರರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲಿ. ಜಿಲ್ಲೆಯ ಜನರ ಹಿತಕ್ಕಾಗಿ ಯಾವುದೇ ವ್ಯಕ್ತಿ ಚಳವಳಿ ಕೈಗೊಂಡರೇ ಅವರ ಮನವಿ ಆಲಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಉಪವಾಸ ಕುಳಿತ ತಕ್ಷಣವೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ನಿರ್ಲಕ್ಷö್ಯ ತೋರಿದ್ದರ ಪರಿಣಾಮ ರೈತನಾಯಕ ಕೆ.ಟಿ.ತಿಪ್ಪೇಸ್ವಾಮಿ ಕುಸಿದುಬಿದ್ದು ಆಸ್ಪತ್ರೆ ಸೇರುವಂತಾಗಿದೆ. ಈಗಲಾದರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮಾನವೀಯತೆ ಪ್ರದರ್ಶಿಸಲಿ ಎಂದು ತಿಳಿಸಿದರು. ತಾಲ್ಲೂಕಾಧ್ಯಕ್ಷ ಮಲ್ಲಸಮುದ್ರ ಗಂಗಾಧರ್, ಮುಖಂಡರಾದ ಸೂರಮ್ಮನಹಳ್ಳಿ ರಾಜಣ್ಣ, ಪ್ರಶಾಂತ್ರೆಡ್ಡಿ, ಮಿಠ್ಯಾನಾಯ್ಕ, ಓಬನಾಯ್ಕ್, ಚಂದ್ರಶೇಖರ ನಾಯಕ, ಹೀರೇಹಳ್ಳಿ ತಿಪ್ಪೇಸ್ವಾಮಿ, ಎದ್ದಲು ತಿಪ್ಪೇಸ್ವಾಮಿ, ಪಾಪಯ್ಯ, ಬಸವರಾಜ್, ರಾಜಣ್ಣ ಇತರರಿದ್ದರು. .1
- ರೈತ ಮುಖಂಡ ಕೆ ಟಿ ತಿಪ್ಪೇಸ್ವಾಮಿ ಅಸ್ವಸ್ಥರಾಗಲು ಜಿಲ್ಲಾಡಳಿತ ಹೊಣೆ ಎಂದು ಆರೋಪಿಸಿ ಹೆದ್ದರಿ ತಡೆದು ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಭದ್ರೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ನಿರತ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಮುಗಿಸುವಂತೆ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು1
- ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು1
- ಹಳೆ ಮೀಸಲಾತಿಯಂತೆಯೇ 56 ಸಾವಿರ ಉದ್ಯೋಗಳ ನೇಮಕಾತಿ ಮಾಡಿ ಬಾಗೇಪಲ್ಲಿ:- ಒಳಮೀಸಲಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳು, ಸಮಸ್ಯೆಗಳು ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆಯಾಗುವ ತನಕ ಒಳಮೀಸಲಾತಿ ಕೈ ಬಿಟ್ಟು ಹಳೆ ಮೀಸಲಾತಿ ಜಾರಿಗೆ ತಂದು ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ನಲ್ಲಿ 56 ಸಾವಿರ ಉದ್ಯೋಗಗಳನ್ನು ನೇಮಕಾತಿ ಮತ್ತು ಶಿಕ್ಷಣಕ್ಕೆ ತೊಂದರೆ ಆಗದಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಲಂಬಾಣಿ (ಗೋರ್ ಬಂಜಾರ್)ಅಭಿವೃದ್ಧಿ ಸಂಘ ರಾಜ್ಯ ಸರ್ಕಾರಕ್ಕೆ ಲಂಬಾಣಿ ಜಿಲ್ಲಾದ್ಯಕ್ಷ ಶ್ರೀರಾಮ ನಾಯಕ್ ಒತ್ತಾಯಿಸಿದರು. ಅವರು ಬಾಗೇಪಲ್ಲಿ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಜಾರಿ ಮಾಡಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ ವಿಂಗಡಿಸಲಾಗಿದೆ. ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸಿ ರೋಸ್ಟರ್ ಬಿಂದುವನಲ್ಲಿ 9ನೇ ಸ್ಥಾನಕ್ಕೆ ಇಳಿಸಲಾಗಿದೆ. ಇದರಿಂದ ಬಲಗೈ ಸಂಬಂಧಿತ ಜಾತಿಗಳಿಗೆ ಅನ್ಯಾಯವಾಗಿದೆ. ಸರ್ಕಾರಿ ನೇಮಕಾತಿಯಲ್ಲಿ ಉದ್ಯೋಗಗಳನ್ನು ನೇಮಕ ಮಾಡಿದಾಗ ಬಲಗೈ ಸಂಬಂಧಿತ ಜಾತಿಗಳಿಗೆ ಯಾವುದೇ ಉದ್ಯೋಗ ದೊರಕುವುದಿಲ್ಲ. ಉನ್ನತ ಶಿಕ್ಷಣ ಪ್ರವೇಶಾತಿ, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಬಡ್ತಿಯಲ್ಲಿಯೂ ಅವಕಾಶ ಸಿಗುವುದಿಲ್ಲ. ಹಾಗಾಗೀ ಸರ್ಕಾರ ಇಂತಹ ಅವೈಜ್ಞಾನಿಕ ಪರಿಶಿಷ್ಟ ಜಾತಿಗಳ ಕಾಯ್ದೆಯನ್ನು ತಿರಸ್ಕರಿಸಬೇಕು' ಎಂದು ಆಗ್ರಹಿಸಿದರು. ಈಗ ಜಾರಿ ಮಾಡಿರುವ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯದ 101 ಜಾತಿಗಳಿಗೆ ಭಾರಿ ಅನ್ಯಾಯವಾಗಿದ್ದು, ನೇಮಕಾತಿ ಬಿಂದು ಪದ್ದತಿಯಲ್ಲಿ ಭಾರಿ ನ್ಯಾಯವಾಗಿದೆ. ಎ, ಬಿ, ಸಿ ಪ್ರವರ್ಗಗಳಿಗೆ ನಿಗಧಿ ಪಡಿಸುವ ಉದ್ಯೋಗದಲ್ಲಿ ಅನ್ಯಾಯವಾಗುತ್ತದೆ. ವಿವಿಧ ಇಲಾಖೆಯ ಹಾಗೂ ವಿಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಹುದ್ದೆಗಳು ನೇಮಕಾತಿ ನಡೆದಾಗ ಪರಿಶಿಷ್ಟ ಜಾತಿಯಲ್ಲಿಯೇ ಪ್ರವರ್ಗ ಎ ಗೆ ಹೆಚ್ಚು ಹುದ್ದೆಗಳು ಹೋಗುವ ಜೊತೆಗೆ ಇತರೇ ಬಿ ಮತ್ತು ಸಿ ವರ್ಗಗಳಿಗೆ ಅನ್ಯಾಯವಾಗುತ್ತಿದೆ. ಇದರಿಂದ ಸಾಮಾಜಿಕ ನ್ಯಾಯದ ಬದಲಾಗಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಅಂಬೇಡ್ಕರ್ ಅವರ ಆಶಯದಂತೆ ಸಮಾನ ಅವಕಾಶಗಳು ದೊರೆಯುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಶಂಕರ್ ನಾಯಕ್ ಮಾತನಾಡಿ ಶಿಕ್ಷಣ, ಹಾಸ್ಟೆಲ್ ಹಾಗೂ ಉದ್ಯೋಗ ನೇಮಕಾತಿ ರೋಸ್ಟರ್ ಹಂಚಿಕೆ ಮಾಡಿ ಈ ಹಿಂದೆ ಸರ್ಕಾರ ಹೊರಡಿಸಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯಬೇಕು, ರಾಜ್ಯ ಸರ್ಕಾರ ಹೊಸದಾಗಿ ನೀಡುತ್ತಿರುವ ಜಾತಿ ಪ್ರಮಾಣಪತ್ರವನ್ನು ತುರ್ತಾಗಿ ನಿಲ್ಲಿಸಿ ಹಳೆ ಜಾತಿ ಪ್ರಮಾಣಪತ್ರವನ್ನು ಮುಂದುವರಿಸಬೇಕು. ಒಳ ಮೀಸಲಾತಿಗೆ ಅನ್ವಯಿಸುವ ರೋಸ್ಟರ್ ಬಿಂದುವನ್ನು ಪರಿಷ್ಕರಿಸಿ ಆಗಿರುವ ನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣ್ ನಾಯಕ್(ಬಾಂಬೆ), ಉಪಾಧ್ಯಕ್ಷ ಶಿವಶಂಕರ್, ಖಜಾಂಚಿ ಸುರೇಶ್ ನಾಯಕ್,ಮಂಜುನಾಥ್ ನಾಯಕ್,ಬಾಲು ನಾಯಕ್,ನಾಗೇ ನಾಯಕ್,ಶ್ರೀನಿವಾಸ್ ನಾಯಕ್,ರಮೇಶ್ ನಾಯಕ್, ಆರ್.ನಾರಾಯಣ್ ನಾಯಕ್, ರಾಮಾಂಜಿ ನಾಯಕ್, ನರಸಿಂಹ ನಾಯಕ್, ಬಾಬು ನಾಯಕ್ ಹಾಗೂ ಲಂಬಾಣಿ ಸಮುದಾಯದವರು ಹಾಜರಿದ್ದರು.1
- KOLAR KI.AWAAZ KOUSAR NEWS1
- Post by Sunil Sunil1
- ಚಳ್ಳಕೆರೆ ಪಾವಗಡರಸ್ತೆಯ ರೈಲ್ವೇ ಮೇಲು ಸೇತುವೆ ವಿಳಂಬ ವಾಹನಗಳ ಸಂಚಾರಕ್ಕೆ ಕಿರಿಕಿರಿ ಮೇಲ್ಸೇತುವೆ ಕಾಮಗಾರಿ ಆರಂಭ ಯಾವಗ1
- KOLAR KI.AWAAZ KOUSAR NEWS1
- ದೇವನಹಳ್ಳಿ ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಿಸಿ. ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ. ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು. ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್. ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ. ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು. ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ. ................1