logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಭಾರತ ನಲ್ಲಿ ವೈರಲ್*

4 hrs ago
user_Md Aleemulla Shariff
Md Aleemulla Shariff
Citizen Reporter Mysuru, Karnataka•
4 hrs ago

*ಭಾರತ ನಲ್ಲಿ ವೈರಲ್*

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • ಹಲಗೂರಿನಲ್ಲಿ ಡಿ ಎಸ್ ಪಿ ಗ್ಲೋಬಲ್ ಶಾಲಾ ವಾರ್ಷಿಕೋತ್ಸವಕ್ಕೆ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಚಾಲನೆ ಮಳವಳ್ಳಿ ವಿದ್ಯಾರ್ಥಿಗಳಿಗೆ ವಿನಯ ಸಂಸ್ಕೃತಿ ಅಮೂಲ್ಯವಾದದ್ದು, ಡಾ.ಉಮೇಶ್ ಮಠಪತಿ. ಮಳವಳ್ಳಿ ವಿದ್ಯಾರ್ಥಿಗಳಿಗೆ ವಿದ್ಯೆ ತಿಳಿದಿರುತ್ತದೆ ಆದರೆ ವಿನಯ ನಮ್ಮ ಸಂಸ್ಕೃತಿಗಳನ್ನು ನಾವುಗಳು ತಿಳಿಸಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ ಎಂದು ಖ್ಯಾತ ವೈದ್ಯಾಧಿಕಾರಿ ಉಮೇಶ್ ಮಠಪತಿ ತಿಳಿಸಿದರು. ಹಲಗೂರಿನ ಡಿ.ಎಸ್.ಪಿ. ಗ್ಲೋಬಲ್ ಸ್ಕೂಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಮನುಷ್ಯನಿಗೆ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಎರಡು ಅತಿ ಮುಖ್ಯ, ಯೋಗ ಮತ್ತು ವ್ಯಾಯಾಮ ದಿಂದ ಶಾರೀರಿಕ ಆರೋಗ್ಯವನ್ನು ಉತ್ತಮ ಮಾಡಿಕೊಳ್ಳಬಹುದು. ಆದರೆ ಈಗನಾವು ಎಲ್ಲವನ್ನು ಒತ್ತಡದಲ್ಲೇ ಸ್ವೀಕರಿಸುತ್ತೇವೆ ಆದ್ದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ ಈಗಿನ ಮಕ್ಕಳು ಮನೆಯಹೊರಗಡೆ ಆಟಗಳನ್ನು ಆಡುವುದಿಲ್ಲ ಮೊಬೈಲ್ಗಳಲ್ಲಿ ಮುಳುಗಿರುತ್ತವೆ ಇದರಿಂದ ನಮಗೆಅವರಲ್ಲಿ ವ್ಯತಿರಿಕ್ತ ಪ್ರತಿಕ್ರಿಯೆಗಳು ಸಿಗುತ್ತಿವೆ .ಆದುದರಿಂದ ವಿದ್ಯಾರ್ಥಿಗಳ ಪೋಷಕರು ನಿಮ್ಮ ಮಕ್ಕಳನ್ನು ಜಾಗೃತಿಯಾಗಿ ನೋಡಿಕೊಳ್ಳಬೇಕು ವಿದ್ಯಾರ್ಥಿಗಳಿಗೆ ವಿದ್ಯೆ ಗೊತ್ತಿರುತ್ತದೆ ಆದರೆ ವಿನಯ ಹಾಗೂ ನಮ್ಮ ಒಳ್ಳೆಯ ಸಂಸ್ಕಾರಗಳು ತಿಳಿದಿರುವುದಿಲ್ಲ ಅದನ್ನು ಕಲಿಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಬೇಕಾಗಿದೆ ಎಂದರು. ಸಬ್ ಇನ್ಸ್ಪೆಕ್ಟರ್ ಲೋಕೇಶ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮುಖಾಂತರ ಚಾಲನೆ ನೀಡಿ ಮಾತನಾಡುತ್ತಾ, ನಿಮ್ಮ ಮಕ್ಕಳು ಶಾಲೆಯಲ್ಲಿ ಎಷ್ಟು ಅಂಕ ಪಡೆದಿರುತ್ತಾರೆ ಅದನ್ನು ನೋಡಿ ನೀವು ಪ್ರೋತ್ಸಾಹಿಸಿ, ಶೇಕಡ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆಯಲೇಬೇಕು ಎಂಬ ಒತ್ತಡವನ್ನು ನಿಮ್ಮ ಮಕ್ಕಳ ಮೇಲೆ ಹೇರಬೇಡಿ. ನಮ್ಮ ದೇಶದಲ್ಲಿರುವ ಡಾಕ್ಟರ್ ಗಳು ಇಂಜಿನಿಯರ್ ಎಲ್ಲರೂ ನೂರಕ್ಕೆ ನೂರರಷ್ಟು ಅಂಕ ಪಡೆದವರು ಅಲ್ಲ .ಆಯಾಯ ವೃತ್ತಿಗೆ ಎಷ್ಟು ಅರ್ಹತೆ ಬೇಕು ಅಷ್ಟು ಅಂಕಗಳನ್ನು ಪಡೆಯಲು ಸಹಕರಿಸಿ. ಕೆಲವರು ಶಾಲೆಯ ಪರೀಕ್ಷೆಗಳಲ್ಲಿ ನೂರಕ್ಕೆ ನೂರು ಅಂಕ ಪಡೆದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಫೇಲಾಗುವ ಸಾಧ್ಯತೆ ಇದೆ. ಈಗಿನ ಕಾಲದಲ್ಲಿ 21- 22ನೇ ವಯಸ್ಸಿಗೆ ಐಎಎಸ್ ,ಐಪಿಎಸ್ ಪರೀಕ್ಷೆ ಪಾಸ್ ಮಾಡುವ ಸಾಧ್ಯತೆ ಇದೆ ಇದಕ್ಕೆ ಅವರ ಕುಟುಂಬದ ಸಹಕಾರ ಬೆಂಬಲ ಇರಬೇಕು ಎಂದರು. ಶಾಲೆಯ ಸಹ ಸಂಸ್ಥಾಪಕ, ಎಂ. ಬೇಬಿ ವಿಕ್ಟೋರಿಯಾ ಮಾತನಾಡುತ್ತಾ, ನಿಮ್ಮ ಮಕ್ಕಳಿಗೆ ಡಿಜಿಟಲ್ ಜ್ಞಾನವನ್ನು ನೀಡಬೇಕು, ಅಂದರೆ ಮೊಬೈಲ್ಗಳಲ್ಲಿ ಬರಿ ಆಟ ಆಡಿಸುವುದಲ್ಲ ರೈಲ್ವೆ ಟಿಕೆಟ್ ಬುಕ್ ಮಾಡುವುದು ಆಧಾರ ಕಾರ್ಡ್, ಪಾನ್ ಕಾರ್ಡ್, ಬಿಪಿಎಲ್ ಕಾರ್ಡುಗಳನ್ನು ಬ್ಯಾಂಕುಗಳಿಗೆ ಲಿಂಕ್ ಮಾಡುವುದು, ಮತ್ತು ಡಿಜಿಟಲ್ ಸ್ಕ್ಯಾಮ್ ಗಳ ಬಗ್ಗೆ ತಿಳುವಳಿಕೆ ಹಾಗೂ ನಿಮ್ಮ ಮಕ್ಕಳನ್ನು ಶಾರೀರಿಕವಾಗಿ ಹೆಚ್ಚು ಕ್ರಿಯಾಶೀಲರಾಗುವಂತೆ ಮನೆಯ ಹೊರಗಡೆ ಬೆಳಿಗ್ಗೆ ಸಂಜೆ ಬಿಸಿಲಿನಲ್ಲಿಆಟ ಆಡಿಸುವುದು ಮತ್ತು ಯಾವ ವಿಷಯದಲ್ಲಿ ಹೆಚ್ಚು ಆಸಕ್ತಿ ಇದೆ ಎಂಬುದನ್ನು ಗಮನಿಸಿ ಅದಕ್ಕೆ ಉತ್ತೇಜನ ನೀಡುವುದು ಇದನ್ನು ನಮ್ಮ ಶಾಲೆಯಲ್ಲಿ ಅಳವಡಿಸಿಕೊಂಡು ನಡೆಸಿಕೊಂಡು ಬರುತ್ತಿದ್ದೇವೆ, ಎಂದರು. ಕಾರ್ಯಕ್ರಮದಲ್ಲಿ ಹಲಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲ್ನಾಜ್ ಭಾನು, ನಿವೃತ್ತಿ ಶಿಕ್ಷಕ ಮರಿದಾಸಪ್ಪ , ಶಾಲೆಯ ಮುಖ್ಯಸ್ಥರಾದ ಡಾ. ಪ್ರಭು ದಾಸ್,ಎಂ. ಬೇಬಿ ವಿಕ್ಟೋರಿಯಾ. ಸಹ ಕಾರ್ಯದರ್ಶಿ, ಜೇಮ್ಸ್ ವಿನೀತ್, ಶಾಲೆಯ ಅಧ್ಯಕ್ಷ ಶೀಬಾ ಸುಮ್ಮಿ ಮೋಲ್. ಪ್ರಿನ್ಸಿಪಾಲ್ ಮಂಗಳಮ್ಮ, ಉಪ ಪ್ರಿನ್ಸಿಪಾಲ್ ರೇಖಾ, ಮೇಲ್ವಿಚಾರಕಿ ರಮ್ಯ, ಸಹ ಶಿಕ್ಷಕಿಯರಾದ ಸಮಪದ, ಪ್ರಮೀಳಾ ಮತ್ತು ಸಹಾಯಕರು ಸೇರಿದಂತೆ ಇತರರು ಇದ್ದರು.
    1
    ಹಲಗೂರಿನಲ್ಲಿ ಡಿ ಎಸ್ ಪಿ ಗ್ಲೋಬಲ್ ಶಾಲಾ ವಾರ್ಷಿಕೋತ್ಸವಕ್ಕೆ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಚಾಲನೆ
ಮಳವಳ್ಳಿ ವಿದ್ಯಾರ್ಥಿಗಳಿಗೆ ವಿನಯ ಸಂಸ್ಕೃತಿ  ಅಮೂಲ್ಯವಾದದ್ದು, ಡಾ.ಉಮೇಶ್ ಮಠಪತಿ.
ಮಳವಳ್ಳಿ ವಿದ್ಯಾರ್ಥಿಗಳಿಗೆ ವಿದ್ಯೆ ತಿಳಿದಿರುತ್ತದೆ ಆದರೆ ವಿನಯ ನಮ್ಮ ಸಂಸ್ಕೃತಿಗಳನ್ನು ನಾವುಗಳು ತಿಳಿಸಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ  ಎಂದು  ಖ್ಯಾತ
ವೈದ್ಯಾಧಿಕಾರಿ  ಉಮೇಶ್ ಮಠಪತಿ ತಿಳಿಸಿದರು.
ಹಲಗೂರಿನ ಡಿ.ಎಸ್.ಪಿ. ಗ್ಲೋಬಲ್ ಸ್ಕೂಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ,
ಮನುಷ್ಯನಿಗೆ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಎರಡು ಅತಿ ಮುಖ್ಯ, ಯೋಗ ಮತ್ತು ವ್ಯಾಯಾಮ ದಿಂದ ಶಾರೀರಿಕ ಆರೋಗ್ಯವನ್ನು ಉತ್ತಮ ಮಾಡಿಕೊಳ್ಳಬಹುದು. ಆದರೆ ಈಗನಾವು ಎಲ್ಲವನ್ನು ಒತ್ತಡದಲ್ಲೇ ಸ್ವೀಕರಿಸುತ್ತೇವೆ ಆದ್ದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ
ಈಗಿನ ಮಕ್ಕಳು ಮನೆಯಹೊರಗಡೆ ಆಟಗಳನ್ನು ಆಡುವುದಿಲ್ಲ ಮೊಬೈಲ್ಗಳಲ್ಲಿ ಮುಳುಗಿರುತ್ತವೆ ಇದರಿಂದ ನಮಗೆಅವರಲ್ಲಿ ವ್ಯತಿರಿಕ್ತ ಪ್ರತಿಕ್ರಿಯೆಗಳು ಸಿಗುತ್ತಿವೆ .ಆದುದರಿಂದ ವಿದ್ಯಾರ್ಥಿಗಳ ಪೋಷಕರು ನಿಮ್ಮ ಮಕ್ಕಳನ್ನು ಜಾಗೃತಿಯಾಗಿ ನೋಡಿಕೊಳ್ಳಬೇಕು  ವಿದ್ಯಾರ್ಥಿಗಳಿಗೆ ವಿದ್ಯೆ ಗೊತ್ತಿರುತ್ತದೆ ಆದರೆ ವಿನಯ ಹಾಗೂ ನಮ್ಮ ಒಳ್ಳೆಯ ಸಂಸ್ಕಾರಗಳು ತಿಳಿದಿರುವುದಿಲ್ಲ ಅದನ್ನು ಕಲಿಸುವ ನಿಟ್ಟಿನಲ್ಲಿ ನಾವುಗಳು
ಮುಂದಾಗಬೇಕಾಗಿದೆ ಎಂದರು.
ಸಬ್ ಇನ್ಸ್ಪೆಕ್ಟರ್ ಲೋಕೇಶ್  ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮುಖಾಂತರ ಚಾಲನೆ ನೀಡಿ ಮಾತನಾಡುತ್ತಾ,    ನಿಮ್ಮ ಮಕ್ಕಳು ಶಾಲೆಯಲ್ಲಿ ಎಷ್ಟು ಅಂಕ ಪಡೆದಿರುತ್ತಾರೆ ಅದನ್ನು ನೋಡಿ ನೀವು ಪ್ರೋತ್ಸಾಹಿಸಿ,
ಶೇಕಡ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆಯಲೇಬೇಕು ಎಂಬ ಒತ್ತಡವನ್ನು ನಿಮ್ಮ ಮಕ್ಕಳ ಮೇಲೆ ಹೇರಬೇಡಿ. ನಮ್ಮ ದೇಶದಲ್ಲಿರುವ ಡಾಕ್ಟರ್ ಗಳು ಇಂಜಿನಿಯರ್ ಎಲ್ಲರೂ ನೂರಕ್ಕೆ ನೂರರಷ್ಟು ಅಂಕ ಪಡೆದವರು ಅಲ್ಲ .ಆಯಾಯ ವೃತ್ತಿಗೆ ಎಷ್ಟು ಅರ್ಹತೆ ಬೇಕು ಅಷ್ಟು ಅಂಕಗಳನ್ನು ಪಡೆಯಲು ಸಹಕರಿಸಿ. ಕೆಲವರು ಶಾಲೆಯ ಪರೀಕ್ಷೆಗಳಲ್ಲಿ ನೂರಕ್ಕೆ ನೂರು ಅಂಕ ಪಡೆದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಫೇಲಾಗುವ ಸಾಧ್ಯತೆ ಇದೆ. ಈಗಿನ ಕಾಲದಲ್ಲಿ 21- 22ನೇ ವಯಸ್ಸಿಗೆ ಐಎಎಸ್ ,ಐಪಿಎಸ್ ಪರೀಕ್ಷೆ ಪಾಸ್ ಮಾಡುವ ಸಾಧ್ಯತೆ ಇದೆ ಇದಕ್ಕೆ ಅವರ ಕುಟುಂಬದ ಸಹಕಾರ ಬೆಂಬಲ ಇರಬೇಕು
ಎಂದರು.
ಶಾಲೆಯ ಸಹ ಸಂಸ್ಥಾಪಕ, ಎಂ. ಬೇಬಿ ವಿಕ್ಟೋರಿಯಾ ಮಾತನಾಡುತ್ತಾ,   ನಿಮ್ಮ ಮಕ್ಕಳಿಗೆ ಡಿಜಿಟಲ್ ಜ್ಞಾನವನ್ನು ನೀಡಬೇಕು, ಅಂದರೆ ಮೊಬೈಲ್ಗಳಲ್ಲಿ ಬರಿ ಆಟ ಆಡಿಸುವುದಲ್ಲ ರೈಲ್ವೆ ಟಿಕೆಟ್ ಬುಕ್ ಮಾಡುವುದು ಆಧಾರ ಕಾರ್ಡ್, ಪಾನ್ ಕಾರ್ಡ್, ಬಿಪಿಎಲ್ ಕಾರ್ಡುಗಳನ್ನು ಬ್ಯಾಂಕುಗಳಿಗೆ ಲಿಂಕ್ ಮಾಡುವುದು, ಮತ್ತು ಡಿಜಿಟಲ್ ಸ್ಕ್ಯಾಮ್ ಗಳ ಬಗ್ಗೆ ತಿಳುವಳಿಕೆ ಹಾಗೂ ನಿಮ್ಮ ಮಕ್ಕಳನ್ನು ಶಾರೀರಿಕವಾಗಿ ಹೆಚ್ಚು ಕ್ರಿಯಾಶೀಲರಾಗುವಂತೆ ಮನೆಯ ಹೊರಗಡೆ ಬೆಳಿಗ್ಗೆ ಸಂಜೆ ಬಿಸಿಲಿನಲ್ಲಿಆಟ ಆಡಿಸುವುದು ಮತ್ತು ಯಾವ ವಿಷಯದಲ್ಲಿ ಹೆಚ್ಚು ಆಸಕ್ತಿ ಇದೆ ಎಂಬುದನ್ನು ಗಮನಿಸಿ ಅದಕ್ಕೆ ಉತ್ತೇಜನ ನೀಡುವುದು ಇದನ್ನು ನಮ್ಮ ಶಾಲೆಯಲ್ಲಿ ಅಳವಡಿಸಿಕೊಂಡು ನಡೆಸಿಕೊಂಡು ಬರುತ್ತಿದ್ದೇವೆ,   ಎಂದರು.
ಕಾರ್ಯಕ್ರಮದಲ್ಲಿ ಹಲಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲ್ನಾಜ್ ಭಾನು, ನಿವೃತ್ತಿ ಶಿಕ್ಷಕ ಮರಿದಾಸಪ್ಪ , ಶಾಲೆಯ
ಮುಖ್ಯಸ್ಥರಾದ ಡಾ. ಪ್ರಭು ದಾಸ್,ಎಂ. ಬೇಬಿ ವಿಕ್ಟೋರಿಯಾ. 
ಸಹ ಕಾರ್ಯದರ್ಶಿ, ಜೇಮ್ಸ್ ವಿನೀತ್,
ಶಾಲೆಯ ಅಧ್ಯಕ್ಷ ಶೀಬಾ ಸುಮ್ಮಿ ಮೋಲ್.
ಪ್ರಿನ್ಸಿಪಾಲ್ ಮಂಗಳಮ್ಮ, ಉಪ ಪ್ರಿನ್ಸಿಪಾಲ್ ರೇಖಾ, 
ಮೇಲ್ವಿಚಾರಕಿ ರಮ್ಯ,
ಸಹ ಶಿಕ್ಷಕಿಯರಾದ ಸಮಪದ, ಪ್ರಮೀಳಾ ಮತ್ತು ಸಹಾಯಕರು ಸೇರಿದಂತೆ ಇತರರು ಇದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    2 hrs ago
  • ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ಕೋಣನಕೆರೆಯ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸುಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಂತಹ ಪ್ರಸಂಗ ಜರುಗಿದೆ ಕೊಣನಕೆರೆ ಗ್ರಾಮದ ಹತ್ತಿರ ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಯಲ್ಲಿ ಸಂಚರಿಸುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ನಂ ಕೆಎ10 ಎಫ್ 0509 ಬಸ್ ಹಾಗೂ ಕೆಎ 09 ಜೆಎಸ್ 3871 ದ್ವಿ ಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ರಾಮೇಗೌಡನ ಹಳ್ಳಿ ಗ್ರಾಮದ ಶಿವಪ್ಪ ಬಿನ್ ರಾಜು (35) ಸತ್ತಿ ಬಿನ್ ಮಾದೇವ (36)ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿರುತ್ತದೆ. ಕೂಡಲೆ ಸ್ಥಳಕ್ಕೆ ರಾಮಪುರ ಠಾಣೆ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿರುತ್ತಾರೆ.
    1
    ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ಕೋಣನಕೆರೆಯ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸುಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಂತಹ ಪ್ರಸಂಗ ಜರುಗಿದೆ
ಕೊಣನಕೆರೆ ಗ್ರಾಮದ ಹತ್ತಿರ ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಯಲ್ಲಿ ಸಂಚರಿಸುತ್ತಿದ್ದ  ಕೆ ಎಸ್ ಆರ್ ಟಿಸಿ ಬಸ್ ನಂ ಕೆಎ10 ಎಫ್ 0509  ಬಸ್ ಹಾಗೂ ಕೆಎ 09 ಜೆಎಸ್  3871 ದ್ವಿ ಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ  ರಾಮೇಗೌಡನ ಹಳ್ಳಿ  ಗ್ರಾಮದ
ಶಿವಪ್ಪ   ಬಿನ್ ರಾಜು (35)
ಸತ್ತಿ  ಬಿನ್ ಮಾದೇವ (36)ಇಬ್ಬರೂ 
ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿರುತ್ತದೆ. 
ಕೂಡಲೆ ಸ್ಥಳಕ್ಕೆ ರಾಮಪುರ ಠಾಣೆ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿರುತ್ತಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist Hanur, Chamarajanagara•
    5 hrs ago
  • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಅಂತರರಾಜ್ಯ ಕಳ್ಳಿಯನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು!
    1
    ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!
ಅಂತರರಾಜ್ಯ ಕಳ್ಳಿಯನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು!
    user_NAYAN NEWS
    NAYAN NEWS
    Sidlaghatta, Chikkaballapura•
    9 hrs ago
  • ಶಿಡ್ಲಘಟ್ಟ ತಾಲೂಕಿನ ನೆಹರೂ ಕ್ರೀಡಾಂಗಣದಲ್ಲಿ ಜನವರಿ 13 ಸಂಜೆ 5 ಕ್ಕೆ ಕಲ್ಟ್ ಸಿನಿಮಾ ಪ್ರೊಫೆಷನಲ್ ಈವೆಂಟ್
    1
    ಶಿಡ್ಲಘಟ್ಟ ತಾಲೂಕಿನ ನೆಹರೂ ಕ್ರೀಡಾಂಗಣದಲ್ಲಿ ಜನವರಿ 13 ಸಂಜೆ 5 ಕ್ಕೆ ಕಲ್ಟ್ ಸಿನಿಮಾ ಪ್ರೊಫೆಷನಲ್ ಈವೆಂಟ್
    user_Venu Gopal
    Venu Gopal
    Journalist Sidlaghatta, Chikkaballapura•
    16 hrs ago
  • 'ನೀ ಬಾಂಗ್ಲಾದೇಶದವನಾ' ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರಿಗೆ ಹಲ್ಲೆ: ಜೈ ಶ್ರೀರಾಮ್ ಹೇಳುವಂತೆ ಒತ್ತಾಯ ಕಡಲನಗರಿ ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಭಾರತೀಯನನ್ನೇ ಬಾಂಗ್ಲಾದೇಶದವನು ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ತಂಡವೊಂದು ಹಲ್ಲೆ ಮಾಡಿದೆ. ಅಂದಹಾಗೇ ಈ ಘಟನೆ ಮಂಗಳೂರಿನ ಕಾವೂರು ಠಾಣೆ ವ್ಯಾಪ್ತಿಯ ಕೂಳೂರು ಚರ್ಚ್ ಬಳಿ ನಡೆದಿದ್ದು ಘಟನೆ ಸಂಬಂಧಿಸಿ ನಾಲ್ವರು ಯುವಕರ ಮೇಲೆ ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್ ದಾಸ್ ಎಂಬುವವರನ್ನು ಬಂಧಿಸಲಾಗಿದೆ. ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಎಂಬಾತ ಕಳೆದ 10-15 ವರ್ಷಗಳಿಂದ ಮಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದು ತನ್ನ ಇನ್ನೊಬ್ಬ ಗೆಳೆಯನ ಜೊತೆಗೆ ಕುಳೂರಿನಲ್ಲಿ ನೆಲೆಸಿದ್ದ. ಈತನಿಗೆ ಸ್ಥಳೀಯರಾದ ನಾಲ್ವರು ಆರೋಪಿಗಳು ಕಳೆದ 5-6 ತಿಂಗಳಿನಿಂದ “ನೀನು ಬಾಂಗ್ಲಾದೇಶದ ಪ್ರಜೆ" ಎಂದು ಹೇಳಿ ಹಲ್ಲೆ ನಡೆಸುತ್ತಿದ್ದರು. ಅಲ್ಲದೆ ಜೈ ಶ್ರೀರಾಮ್ ಕೂಗುವಂತೆ ಈ ನಾಲ್ವರು ಒತ್ತಾಯಿಸಿದರು ಎಂದು ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಾನೆ. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ನಿನ್ನೆ ಭಾನುವಾರ ಸಂಜೆ ಮತ್ತೆ ದಿಲ್‌ಜಾನ್ ಅನ್ಸಾರಿ ಮೇಲೆ ಹಲ್ಲೆ ನಡೆಸಿದ್ದು ತಲೆಗೆ ಪೆಟ್ಟು ಬಿದ್ದು ರಕ್ತ ಬಂದಿದೆ. ಈ ವೇಳೆ, ಸ್ಥಳೀಯ ಹಿಂದೂ ಮಹಿಳೆಯರು ರಕ್ಷಿಸಿ ಹೊಡೆಯದಂತೆ ತಡೆದಿದ್ದಾರೆ. ಇನ್ನು ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ . 03/2026 600: 126(2), 352, 351(3), 353, 109, 118(1) 3(5) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ರವರ ಮಾರ್ಗದರ್ಶನದಂತೆ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಎಂ. ಬೈಂದೂರು ರವರು, ಪೊಲೀಸ್ ಉಪ-ನಿರೀಕ್ಷಕರಾದ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ಚಂದ್ರಹಾಸ್ ಸನೀಲ್ ಹೆಚ್.ಸಿ ಬಾಲಕೃಷ್ಣ ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ, ರಿಯಾಜ್, ನಾಗರಾಜ್, ಹನುಮಂತ ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿದೆ.
    4
    'ನೀ ಬಾಂಗ್ಲಾದೇಶದವನಾ' ಎಂದು ಹೇಳಿ
ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರಿಗೆ ಹಲ್ಲೆ: ಜೈ ಶ್ರೀರಾಮ್ ಹೇಳುವಂತೆ ಒತ್ತಾಯ
ಕಡಲನಗರಿ ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಭಾರತೀಯನನ್ನೇ ಬಾಂಗ್ಲಾದೇಶದವನು ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ತಂಡವೊಂದು ಹಲ್ಲೆ ಮಾಡಿದೆ. ಅಂದಹಾಗೇ ಈ ಘಟನೆ ಮಂಗಳೂರಿನ ಕಾವೂರು ಠಾಣೆ ವ್ಯಾಪ್ತಿಯ ಕೂಳೂರು ಚರ್ಚ್ ಬಳಿ ನಡೆದಿದ್ದು ಘಟನೆ ಸಂಬಂಧಿಸಿ ನಾಲ್ವರು ಯುವಕರ ಮೇಲೆ ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್ ದಾಸ್ ಎಂಬುವವರನ್ನು ಬಂಧಿಸಲಾಗಿದೆ.
ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಎಂಬಾತ ಕಳೆದ 10-15 ವರ್ಷಗಳಿಂದ ಮಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದು ತನ್ನ ಇನ್ನೊಬ್ಬ ಗೆಳೆಯನ ಜೊತೆಗೆ ಕುಳೂರಿನಲ್ಲಿ ನೆಲೆಸಿದ್ದ. ಈತನಿಗೆ ಸ್ಥಳೀಯರಾದ ನಾಲ್ವರು ಆರೋಪಿಗಳು ಕಳೆದ 5-6 ತಿಂಗಳಿನಿಂದ “ನೀನು ಬಾಂಗ್ಲಾದೇಶದ ಪ್ರಜೆ" ಎಂದು ಹೇಳಿ ಹಲ್ಲೆ ನಡೆಸುತ್ತಿದ್ದರು. ಅಲ್ಲದೆ ಜೈ ಶ್ರೀರಾಮ್ ಕೂಗುವಂತೆ ಈ ನಾಲ್ವರು  ಒತ್ತಾಯಿಸಿದರು ಎಂದು  ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಾನೆ.
ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ನಿನ್ನೆ ಭಾನುವಾರ ಸಂಜೆ ಮತ್ತೆ ದಿಲ್‌ಜಾನ್ ಅನ್ಸಾರಿ ಮೇಲೆ ಹಲ್ಲೆ ನಡೆಸಿದ್ದು ತಲೆಗೆ ಪೆಟ್ಟು ಬಿದ್ದು ರಕ್ತ ಬಂದಿದೆ. ಈ ವೇಳೆ, ಸ್ಥಳೀಯ ಹಿಂದೂ ಮಹಿಳೆಯರು ರಕ್ಷಿಸಿ ಹೊಡೆಯದಂತೆ ತಡೆದಿದ್ದಾರೆ. ಇನ್ನು ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ . 03/2026 600: 126(2), 352, 351(3), 353, 109, 118(1) 3(5) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ರವರ ಮಾರ್ಗದರ್ಶನದಂತೆ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ  ರಾಘವೇಂದ್ರ ಎಂ. ಬೈಂದೂರು ರವರು, ಪೊಲೀಸ್ ಉಪ-ನಿರೀಕ್ಷಕರಾದ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ಚಂದ್ರಹಾಸ್ ಸನೀಲ್ ಹೆಚ್.ಸಿ ಬಾಲಕೃಷ್ಣ ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ, ರಿಯಾಜ್, ನಾಗರಾಜ್, ಹನುಮಂತ ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿದೆ.
    user_Shamsheer Budoli
    Shamsheer Budoli
    Journalist Mangaluru, Dakshina Kannada•
    4 hrs ago
  • ಸೊರಬ: ತಾಲೂಕಿನ ಆನವಟ್ಟಿ ತಿಮ್ಮಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಯ್ಯಪ್ಪ ಸ್ವಾಮಿಯ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಮತ್ತು ಎಂಎಲ್ಸಿ ಭಾರತೀಯ ಶೆಟ್ಟಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪ ಭಕ್ತಾದಿಗಳು ಇಬ್ಬರನ್ನು ಸನ್ಮಾನಿಸಿದರು. ದೇವಸ್ಥಾನಕ್ಕೆ ತಮ್ಮ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಉಡುಗಣಿ, ಪ್ರಕಾಶ್ ತಲಕಾಲಕೊಪ್ಪ, ಕೃಷ್ಣಮೂರ್ತಿ, ಶಿವಪ್ರಸಾದ್ ಮತ್ತಿತರರು ಇದ್ದರು.
    4
    ಸೊರಬ: ತಾಲೂಕಿನ ಆನವಟ್ಟಿ ತಿಮ್ಮಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಯ್ಯಪ್ಪ ಸ್ವಾಮಿಯ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಮತ್ತು ಎಂಎಲ್ಸಿ ಭಾರತೀಯ ಶೆಟ್ಟಿ ಭೇಟಿ ನೀಡಿ  ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪ ಭಕ್ತಾದಿಗಳು ಇಬ್ಬರನ್ನು ಸನ್ಮಾನಿಸಿದರು. ದೇವಸ್ಥಾನಕ್ಕೆ ತಮ್ಮ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಉಡುಗಣಿ, ಪ್ರಕಾಶ್ ತಲಕಾಲಕೊಪ್ಪ, ಕೃಷ್ಣಮೂರ್ತಿ, ಶಿವಪ್ರಸಾದ್ ಮತ್ತಿತರರು ಇದ್ದರು.
    user_SANDEEP U. L
    SANDEEP U. L
    Courier service ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.