ಕರ್ನಾಟಕದ ಭಾಗಗಳಿಗೆ ಹೆಚ್ಚುವರಿ ರೈಲು ಸೇವೆಗಳನ್ನು ಕಲ್ಪಿಸುವ ಮಂಗಳೂರಲ್ಲಿ ಡಿವೈಎಫ್ ಐ ಆಗ್ರಹ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಆಡಳಿತ ವ್ಯಾಪ್ತಿಗೆ ಒಳಪಡಿಸಿದರಷ್ಟೇ ಸಾಲದು. ಮಂಗಳೂರನ್ನು ಕೇಂದ್ರೀಕರಿಸಿ ರಾಜ್ಯದ ವಿವಿಧ ಭಾಗಗಳಿಗೆ, ವಿಶೇಷವಾಗಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ಭಾಗಗಳಿಗೆ ಹೆಚ್ಚುವರಿ ರೈಲು ಸೇವೆಗಳನ್ನು ಕಲ್ಪಿಸುವ ಕ್ರಮಗಳು ಒಳಗೊಳ್ಳಲು ಸಾಧ್ಯವಾಗಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಕೇಂದ್ರದ ರೈಲ್ವೇ ಇಲಾಖೆಯನ್ನು ಆಗ್ರಹಿಸಿದೆ.ಕರ್ನಾಟಕದ ವಿವಿಧ ಮೂಲೆಗಳಿಂದ ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಲಕ್ಷಾಂತರ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ದುಡಿಮೆಯನ್ನು ಅರಸಿ ಆಗಮಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ, ಕೈಗಾರಿಕೆ, ಹೋಟೆಲ್, ಗೃಹ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಈ ಕಾರ್ಮಿಕರಿಗೆ ರೈಲು ಪ್ರಯಾಣವೇ ಕಡಿಮೆ ವೆಚ್ಚದ ಹಾಗೂ ಸುಲಭ ಸಾರಿಗೆ ವ್ಯವಸ್ಥೆಯಾಗಿದೆ. ಆದರೆ ಸಮರ್ಪಕ ರೈಲು ಸಂಪರ್ಕದ ಕೊರತೆಯಿಂದಾಗಿ ಅನಿವಾರ್ಯವಾಗಿ ಹೆಚ್ಚಿನ ದರದ ಬಸ್ ಪ್ರಯಾಣವನ್ನು ಅವಲಂಬಿಸುವಂತಾಗಿದೆ.
ಕರ್ನಾಟಕದ ಭಾಗಗಳಿಗೆ ಹೆಚ್ಚುವರಿ ರೈಲು ಸೇವೆಗಳನ್ನು ಕಲ್ಪಿಸುವ ಮಂಗಳೂರಲ್ಲಿ ಡಿವೈಎಫ್ ಐ ಆಗ್ರಹ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಆಡಳಿತ ವ್ಯಾಪ್ತಿಗೆ ಒಳಪಡಿಸಿದರಷ್ಟೇ ಸಾಲದು. ಮಂಗಳೂರನ್ನು ಕೇಂದ್ರೀಕರಿಸಿ ರಾಜ್ಯದ ವಿವಿಧ ಭಾಗಗಳಿಗೆ, ವಿಶೇಷವಾಗಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ಭಾಗಗಳಿಗೆ ಹೆಚ್ಚುವರಿ ರೈಲು ಸೇವೆಗಳನ್ನು ಕಲ್ಪಿಸುವ ಕ್ರಮಗಳು ಒಳಗೊಳ್ಳಲು ಸಾಧ್ಯವಾಗಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಕೇಂದ್ರದ ರೈಲ್ವೇ ಇಲಾಖೆಯನ್ನು ಆಗ್ರಹಿಸಿದೆ.ಕರ್ನಾಟಕದ ವಿವಿಧ ಮೂಲೆಗಳಿಂದ ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಲಕ್ಷಾಂತರ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ದುಡಿಮೆಯನ್ನು ಅರಸಿ ಆಗಮಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ, ಕೈಗಾರಿಕೆ, ಹೋಟೆಲ್, ಗೃಹ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಈ ಕಾರ್ಮಿಕರಿಗೆ ರೈಲು ಪ್ರಯಾಣವೇ ಕಡಿಮೆ ವೆಚ್ಚದ ಹಾಗೂ ಸುಲಭ ಸಾರಿಗೆ ವ್ಯವಸ್ಥೆಯಾಗಿದೆ. ಆದರೆ ಸಮರ್ಪಕ ರೈಲು ಸಂಪರ್ಕದ ಕೊರತೆಯಿಂದಾಗಿ ಅನಿವಾರ್ಯವಾಗಿ ಹೆಚ್ಚಿನ ದರದ ಬಸ್ ಪ್ರಯಾಣವನ್ನು ಅವಲಂಬಿಸುವಂತಾಗಿದೆ.
- ಆಗಸ್ಟ್ 29 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್: ಬಿಜೈನಲ್ಲಿ ಮೆಸ್ಕಾಂ ಇಲಾಖೆಯ ಪ್ರಕಟಣೆ ದಿನಾಂಕ 29.08.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ 110/33/11 ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಮರೋಳಿ ಫೀಡರ್ನಲ್ಲಿ ವ್ಯವಸ್ಥೆ ಸುಧಾರಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮರೋಳಿ, ಜಯನಗರ, ವಸಂತನಗರ, ಏಂಜಲೋರ್ ಚರ್ಚ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.1
- ವೈರಲ್ ಆಗುತ್ತಿದೆ ಪುಟ್ಟ ಮಗುವಿನ ನಂದಿ ವೇಷ | ಇತ್ತೀಚೆಗೆ ಮೂಡುಬಿದಿರೆಯಲ್ಲಿ ನಡೆದಿದ್ದ ಯಕ್ಷಗಾನ1
- ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬೋಟ್ನಲ್ಲಿದ್ದ 30 ಮಂದಿ ಮೀನುಗಾರರ ರಕ್ಷಣೆ ಉಡುಪಿ:ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಕಾಣಿಸಿಕೊಂಡ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.ವಿಷಯ ತಿಳಿಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಾಚರಣೆ ನಡೆಸಿತು. ಕರಾವಳಿ ಮೀಸಲು ಪಡೆಯ ಇನ್ಸ್ಪೆಕ್ಟರ್ ರಮೇಶ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಗಂಗೊಳ್ಳಿ ಕರಾವಳಿ ಕಾವಲು ಪಡೆ 30 ಮೀನುಗಾರರನ್ನು ರಕ್ಷಿಸಿದೆ.1
- ಕೊಡಗಿನಲ್ಲಿ ಮೋಡ ಬಿತ್ತನೆ ಅವಶ್ಯಕತೆ ಇಲ್ಲ, ಶಾಸಕ ಮಂತರ್ ಗೌಡ ಸ್ಪಷ್ಟನೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹಾಗಾಗಿ ಮೋಡ ಬಿತ್ತನೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ.1
- ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.1
- ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.1
- ಕೊಡಗೀಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಶ್ರೀ ಕೃಷ್ಣ (ಅಜ್ಜಪ್ಪ) ಅವಿರೋಧ ಅಧ್ಯಕ್ಷರಾಗಿ ಆಯ್ಕೆ ಉಪಾಧ್ಯಕ್ಷೆಯಾಗಿ ಮಂಜಮ್ಮ ಆಯ್ಕೆ; ಬೆಂಬಲಿಗರಿಂದ ಪಟಾಕಿ, ಸಿಹಿ ಹಂಚಿಕೆ. ತುರುವೇಕೆರೆ, ಆ.27: ತಾಲೂಕಿನ ಕೊಡಗೀಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಕೃಷ್ಣ (ಅಜ್ಜಪ್ಪ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ ಗುಡ್ಡೇನಹಳ್ಳಿಯ ನಂಜುಂಡಪ್ಪನವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀ ಕೃಷ್ಣ (ಅಜ್ಜಪ್ಪ) ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಅದೇ ರೀತಿ, ಹಿಂದಿನ ಉಪಾಧ್ಯಕ್ಷೆ ಎಂ.ಬಿ. ಜಯಲಕ್ಷ್ಮಮ್ಮನವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜಮ್ಮನವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎನ್. ಮಹೇಶ್ವರ್ ಅವರು ಘೋಷಣೆ ಮಾಡಿದರು. ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಶ್ರೀ ಕೃಷ್ಣ (ಅಜ್ಜಪ್ಪ) ಅವರು, ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ, ಸಹಕಾರ ಸಂಘದ ಯಶಸ್ಸಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಮಂಜಮ್ಮ, ಯದುಕುಮಾರ್, ಪಾಂಡುರಂಗಯ್ಯ, ಚಿಕ್ಕಹನುಮಯ್ಯ, ವೆಂಕಟೇಶ್, ಯೋಗಾನಂದ, ರುದ್ರೇಶ್, ಮೋಹನ್, ಮುನಿರಾಜು, ದೇವರಾಜು, ಯಜಮಾನ್ ಮಹೇಶ್, ಪುಟ್ಟಸ್ವಾಮಿ ಗೌಡ, ಟಿ.ಡಿ.ಸಿ.ಸಿ.ಬಿ ಮೇಲ್ವಿಚಾರಕ ಭರತ್ ಹಾಗೂ ಸಿಬ್ಬಂದಿಗಳಾದ ರಘು, ಸವಿತಾ, ಮಹದೇವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಮಂಗಳೂರು ರೈಲ್ವೇ ಪ್ರದೇಶವನ್ನು ಮೈಸೂರು ವಲಯಕ್ಕೆ ಸೇರ್ಪಡೆಗೆ ಬಿಜೆಪಿ ಸ್ವಾಗತ ಮಂಗಳೂರು ರೈಲ್ವೇ ಪ್ರದೇಶವನ್ನು ಮೈಸೂರು ವಲಯಕ್ಕೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಂಭ್ರಮ ಆಚರಣೆಯ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರ ಲಭ್ಯತೆ ಆಧರಿಸಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಸಚಿವ ವಿ. ಸೋಮಣ್ಣ, ಸಂಸದ ಬ್ರಿಜೇಶ್ ಚೌಟ ಹಾಗೂ ದ. ಕ.ದ ಹಿಂದಿನ ಸಂಸದರು ಈ ಬಗ್ಗೆ ಬಹಳಷ್ಟು ಶ್ರಮಪಟ್ಟಿದ್ದಾರೆ. ಕೇಂದ್ರ ಸರಕಾರದ ನಿರ್ಧಾರವು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿದೆ. ಕೇರಳದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರೂ ಈ ನಿರ್ಧಾರದಿಂದ ಕೇರಳಕ್ಕೆ ತೊಂದರೆಯಾಗುವುದಿಲ್ಲ ಮತ್ತು ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಸ್ಥಳೀಯ ಕಾಂಗ್ರೆಸ್ ನಾಯಕರು ಬೆಂಬಲಿಸಿಲ್ಲ ಎಂದರು. ರೈಲುಗಳು ಮಂಗಳೂರು ಸೆಂಟ್ರಲ್ ಬದಲಿಗೆ ಪಡೀಲ್ ಮಾರ್ಗವಾಗಿ ಸಂಚರಿ ಸಿದರೆ ಸುಮಾರು ಒಂದೂ ವರೆ ಗಂಟೆ ಸಮಯ ಉಳಿತಾಯ ಆಗಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಉಡುಪಿ ಹಾಗೂ ದ.ಕ.ದ ಸಂಸದರ ಮಟ್ಟದಲ್ಲಿರುವ ಸಣ್ಣಪುಟ್ಟ ಅಭಿಪ್ರಾಯ ಭಿನ್ನತೆಗಳನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದರು.1