logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

on 15 December
user_Mambulsab i makandar
Mambulsab i makandar
Karwar, Uttara Kannada•
on 15 December
8fd25f91-b763-4101-9833-71febd8813fb
7fa1ddb2-359e-426b-83cb-1e686fb9c54f

More news from ಕರ್ನಾಟಕ and nearby areas
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    13 hrs ago
  • ಸೊರಬ ತಾಲ್ಲೂಕು ಶಾಂತಪುರ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ರಂಬಾಪುರಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರ ಸೋಮೇಶ್ವರ ಶಿವಾಚಾರ್ಯ ಮಹಾ ಭಗವದ್ಪಾದಂಗಳವರ ಇಷ್ಟಲಿಂಗ ಪೂಜಾ ನಿಮಿತ್ಯ ಶ್ರೀ ಜಗದ್ಗುರು ಪಂಚಾಚಾರ್ಯರ ಧ್ವಜಾರೋಹಣ ಕಾರ್ಯಕ್ರಮವು ನೆರವೇರಿತು ಧ್ವಜಾರೋಹಣವನ್ನು ಷ ಬ್ರ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರ ಮಠ ನೆರೆವೇರಿಸಿದರು ಸಂಗೊಳ್ಳಿ ಶ್ರೀಗಳು. ಹಾರನಹಳ್ಳಿ ಶ್ರೀಗಳು. ಕುರುವತ್ತಿ ಶ್ರೀಗಳು. ಉಪಸ್ಥಿತರಿದ್ದರು ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಭಾಗಿಯಾಗಿದ್ದರು ದಿನಾಂಕ 17-03-2026ನೇ ಮಂಗಳವಾರ ಬೆಳಿಗ್ಗೆ 9 ಕ್ಕೆ ಜಗದ್ಗುರುಗಳವರ ಸಾಮೂಹಿಕ ಇಷ್ಟ ಲಿಂಗಪೂಜಾ ಕಾರ್ಯಕ್ರಮವು ನೆರವೇರುವುದು ಸದ್ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಗದ್ಗುರುಗಳವರ ಕೃಪ ಆಶೀರ್ವಾದ ಪಡೆದುಕೊಳ್ಳಬಹುದು
    1
    ಸೊರಬ ತಾಲ್ಲೂಕು ಶಾಂತಪುರ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ   ಹಾಗೂ ರಂಬಾಪುರಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರ ಸೋಮೇಶ್ವರ ಶಿವಾಚಾರ್ಯ ಮಹಾ ಭಗವದ್ಪಾದಂಗಳವರ ಇಷ್ಟಲಿಂಗ ಪೂಜಾ ನಿಮಿತ್ಯ ಶ್ರೀ ಜಗದ್ಗುರು ಪಂಚಾಚಾರ್ಯರ ಧ್ವಜಾರೋಹಣ ಕಾರ್ಯಕ್ರಮವು ನೆರವೇರಿತು ಧ್ವಜಾರೋಹಣವನ್ನು ಷ ಬ್ರ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರ ಮಠ ನೆರೆವೇರಿಸಿದರು ಸಂಗೊಳ್ಳಿ ಶ್ರೀಗಳು. ಹಾರನಹಳ್ಳಿ ಶ್ರೀಗಳು. ಕುರುವತ್ತಿ ಶ್ರೀಗಳು. ಉಪಸ್ಥಿತರಿದ್ದರು ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಭಾಗಿಯಾಗಿದ್ದರು ದಿನಾಂಕ 17-03-2026ನೇ ಮಂಗಳವಾರ ಬೆಳಿಗ್ಗೆ 9 ಕ್ಕೆ ಜಗದ್ಗುರುಗಳವರ ಸಾಮೂಹಿಕ ಇಷ್ಟ ಲಿಂಗಪೂಜಾ ಕಾರ್ಯಕ್ರಮವು ನೆರವೇರುವುದು ಸದ್ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಗದ್ಗುರುಗಳವರ ಕೃಪ ಆಶೀರ್ವಾದ ಪಡೆದುಕೊಳ್ಳಬಹುದು
    user_ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿ
    ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿ
    ಸೊರಬ, ಶಿವಮೊಗ್ಗ, ಕರ್ನಾಟಕ•
    19 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    20 hrs ago
  • Post by Dr CP Patel 8302083835 आयुष हॉस्पिटल
    1
    Post by Dr CP Patel 8302083835 आयुष हॉस्पिटल
    user_Dr CP Patel 8302083835 आयुष हॉस्पिटल
    Dr CP Patel 8302083835 आयुष हॉस्पिटल
    Doctor Shivamogga, Karnataka•
    4 hrs ago
  • ಶಿವಮೊಗ್ಗ: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಹಾಗೂ ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮ ವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡ ಲಾಯಿತು. ಒಳ ಮೀಸಲಾತಿ ಜಾರಿಗೊಳಿ ಸದೇ ಸರ್ಕಾರ ಮುಂದುವರಿದರೆ ರಾಜ್ಯಾ ದ್ಯಂತ ಉಗ್ರ ಹೋರಾಟ ನಡೆಸಲಾಗು ವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆ ಬಳಿಕ ಪ್ರತಿಭಟನಾಕಾ ರರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಘಟನೆ ಗಳ ಮುಖಂಡರು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಯನ್ನು ಜಾರಿಗೆ ತರುವುದು ಸರ್ಕಾರದ ಚುನಾವಣಾ ಪ್ರಣಾಳಿಕೆ ಯಲ್ಲಿ ನೀಡಿದ ಪ್ರಮುಖ ಭರವಸೆ ಯಾಗಿತ್ತು. ಆದರೆ ಸರ್ಕಾರ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾದಿಗ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ತಲತಲಾಂತರಗಳಿಂದ ಅನ್ಯಾಯ ಮತ್ತು ಶೋಷಣೆಗೆ ಒಳಗಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣ ವಾಗಿ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಕಳೆದ 35 ವರ್ಷಗಳಿಂದ ಹೋರಾಟದ ಮೂಲಕ ಮುಂದಿಟ್ಟು ಕೊಂಡು ಬಂದಿದೆ. ಈ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಕೂಡ ಮಾನ್ಯತೆ ನೀಡಿದ್ದು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ಐತಿಹಾಸಿಕ ತೀರ್ಪನ್ನು 2024ರ ಆಗಸ್ಟ್ 1 ರಂದು ನೀಡಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರವೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರದೆ ಮೀನಾಮೇಷ ಎಣಿಸುತ್ತಿ ರುವುದು ಸಾಮಾಜಿಕ ನ್ಯಾಯದ ಪರವಾಗಿ ಹೋರಾಡುತ್ತಿರುವ ಸಮುದಾಯಗಳಿಗೆ ದೊಡ್ಡ ನಿರಾಶೆ ಯನ್ನುಂಟು ಮಾಡಿದೆ ಎಂದು ಮುಖಂಡರು ದೂರಿದರು. ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಸ್ಪಷ್ಟ ಶಿಫಾರಸುಗಳು ನೀಡಲಾಗಿದೆ. ಶೇ.17ರಷ್ಟು ಮೀಸಲಾತಿ ಸಂಬಂಧಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಇರುವುದನ್ನು ಉಲ್ಲೇಖಿಸಿದರೂ, ಈಗಿರುವ ಶೇ.15ರಷ್ಟು ಮೀಸಲಾತಿ ಯಲ್ಲಿಯೇ ಒಳ ಮೀಸಲಾತಿ ಜಾರಿಗೆ ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ರಾಜ್ಯದ ಅಡ್ವಕೇಟ್ ಜನರಲ್ ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಇಂತಹ ಪರಿಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಗೊಳಿಸದೇ ಸುಮಾರು 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮುಂದಾಗಿ ರುವುದು ಪರಿಶಿಷ್ಟ ಜಾತಿಗಳಲ್ಲಿನ ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಮರಣ ಶಾಸನದಂತಾಗಿದೆ ಎಂದು ಅವರು ಆರೋಪಿಸಿದರು. ಒಳ ಮೀಸಲಾತಿ ಇಲ್ಲದ ಮೀಸಲಾತಿ ವ್ಯರ್ಥವಾಗುತ್ತದೆ ಮತ್ತು ಅದು ಘೋರ ಸಾಮಾಜಿಕ ಅನ್ಯಾಯ ವಾಗುತ್ತದೆ ಎಂದು ಪ್ರತಿಭಟನಾ ಕಾರರು ಹೇಳಿದರು. ಈ ಹಿನ್ನೆಲೆಯಲ್ಲಿ ಮಾ: 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳ ಬೇಕು. ಯಾವುದೇ ಉಪಸಮಿತಿ ಅಥವಾ ಹೊಸ ಸಮಿತಿ ರಚಿಸುವ ಅವಶ್ಯಕತೆ ಇಲ್ಲ, ಏಕೆಂದರೆ ಜಸ್ಟೀಸ್ ನಾಗಮೋಹನ್ ದಾಸ್ ವರದಿಯಲ್ಲಿ ಎಲ್ಲ ವಿಷಯಗಳು ಸ್ಪಷ್ಟವಾಗಿ ಉಲ್ಲೇಖಗೊಂಡಿವೆ ಎಂದು ಮುಖಂಡರು ಒತ್ತಾಯಿಸಿದರು. ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡು, ಒಳ ಮೀಸಲಾತಿಯ ಅನ್ವಯವೇ 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವಾದರೆ ಮಾದಿಗ ಮಹಾಸಭಾ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟಗಳು ರಾಜ್ಯಾದ್ಯಂತ ತೀವ್ರ ಉಗ್ರ ಹೋರಾಟ ನಡೆಸಲು ತಯಾರಾಗಿವೆ ಎಂದು ಅವರು ಎಚ್ಚರಿಸಿದರು. ಪ್ರತಿಭಟನೆ ಸಂದರ್ಭದಲ್ಲಿ ಕೆಲ ಹೋರಾಟ ಗಾರರು ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಪ್ರಯತ್ನಿಸಿದರು.ಆದರೆ ಪೊಲೀಸರು ತಕ್ಷಣವೇ ಅವರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಿ ಸಿದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ ನಂತರ ಪರಿಸ್ಥಿತಿ ಶಾಂತಗೊಂಡಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್. ಶಿವಾಜಿ, ಉಪಾಧ್ಯಕ್ಷ ರಮೇಶ್ ಇ,ಪ್ರಧಾನ ಕಾರ್ಯದರ್ಶಿ ತೇಜಸ್ ಆರ್, ಖಜಾಂಚಿ ಎಂ. ಶಿವಲಿಂಗಪ್ಪ, ಜಿಲ್ಲಾ ಮುಖಂಡ ತಿಮ್ಲಾಪುರ ಲೋಕೇಶಪ್ಪ, ಮಾಜಿ ನಗರಸಭಾ ಸದಸ್ಯ ಆರ್. ಶಿವಣ್ಣ, ಡಿಎಸ್ ಎಸ್ ಸಂಚಾಲಕ ಚಿನ್ನಯ್ಯ, ಸಮಾಜದ ಪ್ರಮುಖರಾದ ಮಂಜುನಾಥ ಎಸ್, ಸೂಲಯ್ಯ, ಅಣ್ಣಪ್ಪ ಪಿ, ಟಿ.ಹೆಚ್. ಹಾಲೇಶಪ್ಪ, ಅಣ್ಣಪ್ಪ ಎ.ಕೆ, ಹೆಚ್.ಎನ್. ಪ್ರಭು, ಮಂಜಪ್ಪ ಬೀರನಕೆರೆ, ನಗರಾಧ್ಯಕ್ಷ ಅಣ್ಣಪ್ಪ ಕೆ, ಶಿಕಾರಿಪುರ ಅಧ್ಯಕ್ಷ ಮುಗಳಗೆರೆ ಬಸವರಾಜ್, ಗ್ರಾಮಾಂತರ ಅಧ್ಯಕ್ಷ ನೀಲಪ್ಪ, ರಘು, ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ನಾಗರಾಜ್, ಭದ್ರಾವತಿ ತಾಲೂಕು ಅಧ್ಯಕ್ಷ ಮೈಲಾರಪ್ಪ, ಸೊರಬ ತಾಲೂಕು ಅಧ್ಯಕ್ಷ ಗಿಡ್ಡಪ್ಪ, ಯುವ ಘಟಕ ಜಿಲ್ಲಾಧ್ಯಕ್ಷ ನಿಖಿಲ್ ಮೂರ್ತಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಕೆಂಪಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಶಿವಮೊಗ್ಗ: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಹಾಗೂ  ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮ ವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡ ಲಾಯಿತು. ಒಳ ಮೀಸಲಾತಿ ಜಾರಿಗೊಳಿ ಸದೇ ಸರ್ಕಾರ ಮುಂದುವರಿದರೆ ರಾಜ್ಯಾ ದ್ಯಂತ ಉಗ್ರ ಹೋರಾಟ ನಡೆಸಲಾಗು ವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆ ಬಳಿಕ ಪ್ರತಿಭಟನಾಕಾ ರರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಘಟನೆ ಗಳ ಮುಖಂಡರು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಯನ್ನು ಜಾರಿಗೆ ತರುವುದು ಸರ್ಕಾರದ ಚುನಾವಣಾ ಪ್ರಣಾಳಿಕೆ ಯಲ್ಲಿ ನೀಡಿದ ಪ್ರಮುಖ ಭರವಸೆ ಯಾಗಿತ್ತು. ಆದರೆ ಸರ್ಕಾರ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾದಿಗ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ತಲತಲಾಂತರಗಳಿಂದ ಅನ್ಯಾಯ ಮತ್ತು ಶೋಷಣೆಗೆ ಒಳಗಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣ ವಾಗಿ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಕಳೆದ 35 ವರ್ಷಗಳಿಂದ ಹೋರಾಟದ ಮೂಲಕ ಮುಂದಿಟ್ಟು ಕೊಂಡು ಬಂದಿದೆ. ಈ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಕೂಡ ಮಾನ್ಯತೆ ನೀಡಿದ್ದು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ಐತಿಹಾಸಿಕ ತೀರ್ಪನ್ನು 2024ರ ಆಗಸ್ಟ್ 1 ರಂದು ನೀಡಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರವೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರದೆ ಮೀನಾಮೇಷ ಎಣಿಸುತ್ತಿ ರುವುದು ಸಾಮಾಜಿಕ ನ್ಯಾಯದ ಪರವಾಗಿ ಹೋರಾಡುತ್ತಿರುವ ಸಮುದಾಯಗಳಿಗೆ ದೊಡ್ಡ ನಿರಾಶೆ ಯನ್ನುಂಟು ಮಾಡಿದೆ ಎಂದು ಮುಖಂಡರು ದೂರಿದರು.
ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಸ್ಪಷ್ಟ ಶಿಫಾರಸುಗಳು ನೀಡಲಾಗಿದೆ. ಶೇ.17ರಷ್ಟು ಮೀಸಲಾತಿ ಸಂಬಂಧಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಇರುವುದನ್ನು ಉಲ್ಲೇಖಿಸಿದರೂ, ಈಗಿರುವ ಶೇ.15ರಷ್ಟು ಮೀಸಲಾತಿ ಯಲ್ಲಿಯೇ ಒಳ ಮೀಸಲಾತಿ ಜಾರಿಗೆ ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ರಾಜ್ಯದ ಅಡ್ವಕೇಟ್ ಜನರಲ್ ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಇಂತಹ ಪರಿಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಗೊಳಿಸದೇ ಸುಮಾರು 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮುಂದಾಗಿ ರುವುದು ಪರಿಶಿಷ್ಟ ಜಾತಿಗಳಲ್ಲಿನ ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಮರಣ ಶಾಸನದಂತಾಗಿದೆ ಎಂದು ಅವರು ಆರೋಪಿಸಿದರು. ಒಳ ಮೀಸಲಾತಿ ಇಲ್ಲದ ಮೀಸಲಾತಿ ವ್ಯರ್ಥವಾಗುತ್ತದೆ ಮತ್ತು ಅದು ಘೋರ ಸಾಮಾಜಿಕ ಅನ್ಯಾಯ ವಾಗುತ್ತದೆ ಎಂದು ಪ್ರತಿಭಟನಾ ಕಾರರು ಹೇಳಿದರು.
ಈ ಹಿನ್ನೆಲೆಯಲ್ಲಿ ಮಾ: 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳ ಬೇಕು. ಯಾವುದೇ ಉಪಸಮಿತಿ ಅಥವಾ ಹೊಸ ಸಮಿತಿ ರಚಿಸುವ ಅವಶ್ಯಕತೆ ಇಲ್ಲ, ಏಕೆಂದರೆ ಜಸ್ಟೀಸ್ ನಾಗಮೋಹನ್ ದಾಸ್ ವರದಿಯಲ್ಲಿ ಎಲ್ಲ ವಿಷಯಗಳು ಸ್ಪಷ್ಟವಾಗಿ ಉಲ್ಲೇಖಗೊಂಡಿವೆ ಎಂದು ಮುಖಂಡರು ಒತ್ತಾಯಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡು, ಒಳ ಮೀಸಲಾತಿಯ ಅನ್ವಯವೇ 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವಾದರೆ ಮಾದಿಗ ಮಹಾಸಭಾ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟಗಳು ರಾಜ್ಯಾದ್ಯಂತ ತೀವ್ರ ಉಗ್ರ ಹೋರಾಟ ನಡೆಸಲು ತಯಾರಾಗಿವೆ ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಕೆಲ ಹೋರಾಟ ಗಾರರು ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಪ್ರಯತ್ನಿಸಿದರು.ಆದರೆ ಪೊಲೀಸರು ತಕ್ಷಣವೇ ಅವರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಿ ಸಿದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ ನಂತರ ಪರಿಸ್ಥಿತಿ ಶಾಂತಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್. ಶಿವಾಜಿ, ಉಪಾಧ್ಯಕ್ಷ ರಮೇಶ್ ಇ,ಪ್ರಧಾನ ಕಾರ್ಯದರ್ಶಿ ತೇಜಸ್ ಆರ್, ಖಜಾಂಚಿ ಎಂ. ಶಿವಲಿಂಗಪ್ಪ, ಜಿಲ್ಲಾ ಮುಖಂಡ ತಿಮ್ಲಾಪುರ ಲೋಕೇಶಪ್ಪ, ಮಾಜಿ ನಗರಸಭಾ ಸದಸ್ಯ ಆರ್. ಶಿವಣ್ಣ, ಡಿಎಸ್ ಎಸ್ ಸಂಚಾಲಕ ಚಿನ್ನಯ್ಯ, ಸಮಾಜದ ಪ್ರಮುಖರಾದ ಮಂಜುನಾಥ ಎಸ್, ಸೂಲಯ್ಯ, ಅಣ್ಣಪ್ಪ ಪಿ, ಟಿ.ಹೆಚ್. ಹಾಲೇಶಪ್ಪ, ಅಣ್ಣಪ್ಪ ಎ.ಕೆ, ಹೆಚ್.ಎನ್. ಪ್ರಭು, ಮಂಜಪ್ಪ ಬೀರನಕೆರೆ, ನಗರಾಧ್ಯಕ್ಷ ಅಣ್ಣಪ್ಪ ಕೆ, ಶಿಕಾರಿಪುರ ಅಧ್ಯಕ್ಷ ಮುಗಳಗೆರೆ ಬಸವರಾಜ್, ಗ್ರಾಮಾಂತರ ಅಧ್ಯಕ್ಷ ನೀಲಪ್ಪ, ರಘು, ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ನಾಗರಾಜ್, ಭದ್ರಾವತಿ ತಾಲೂಕು ಅಧ್ಯಕ್ಷ ಮೈಲಾರಪ್ಪ, ಸೊರಬ ತಾಲೂಕು ಅಧ್ಯಕ್ಷ ಗಿಡ್ಡಪ್ಪ, ಯುವ ಘಟಕ ಜಿಲ್ಲಾಧ್ಯಕ್ಷ ನಿಖಿಲ್ ಮೂರ್ತಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಕೆಂಪಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    19 hrs ago
  • ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಡಾ. ಸಿ ಸೋಮಶೇಖರ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದು ನಬಿಸಾಬ ಕುಷ್ಟಗಿ ಹೇಳಿದರು, ಅವರು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಹಿನ್ನೆಲೆ ಡಾ. ಸಿ ಸೋಮಶೇಖರ್ ಐಎಎಸ್, ಮಾಜಿ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಬಾಲ್ಯದಿಂದಲೂ ಅಪ್ಪಟ ಕನ್ನಡ ಅಭಿಮಾನಿಯಾಗಿರುವ ಸಿ ಸೋಮಶೇಖರ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಬಗ್ಗೆ ಅಪಾರವಾದ ಪ್ರೀತಿ ಮತ್ತು ಆಸಕ್ತಿ ಹೊಂದಿದ್ದಾರೆ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿಯೇ ಪಡೆದು ಆನಂತರ ವಾಣಿಜ್ಯ ಸ್ನಾತಕೋತ್ತರ ಪದವಿಗಳಿಸಿ ಬೆಂಗಳೂರಿನ ಕೆ.ಎಲ್‌.ಇ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಕರ್ನಾಟಕ ಆಡಳಿತ ಪ್ರಥಮ ದರ್ಜೆ ಸೇವೆಯನ್ನು ಸೇರುವ ಅವಕಾಶ ದೊರಕಿತು,ಅಖಿಲ ಭಾರತ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿಯೇ ಉತ್ತರಿಸಿ ಕೇಂದ್ರ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾಗಿ ಕನ್ನಡ ನಾಡು, ನುಡಿಯ ಮೇಲಿನ ಅಭಿಮಾನದಿಂದ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸಬೇಕೆಂಬ ಹಂಬಲದಿಂದ ಕರ್ನಾಟಕ ಅಡಳಿತ ಸೇವೆಯನ್ನೇ ಆಯ್ಕೆ ಮಾಡಿಕೊಂಡರು ,ಭಾರತ ಆಡಳಿತ ಸೇವೆಗೆ (ಐ.ಎ.ಎಸ್) ಪದೋನ್ನತಿ ಪಡೆದು ರಾಜ್ಯದ ಅನೇಕ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು,ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವಿಶೇಷವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ , ನಿವೃತ್ತಿ ನಂತರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿರುತ್ತಾರೆ, ಅವರ ಆಡಳಿತ ಅವಧಿಯಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿದ ಎಲ್ಲಾ ಹಂತಗಳಲ್ಲಿಯೂ ಕನ್ನಡ ಭಾಷೆಯೇ ಸಾರ್ವಭೌಮ ಭಾಷೆಯಾಗಿ ಇರುವಂತೆ ಅಭಿಮಾನ ಪೂರಕವಾಗಿ ಪ್ರಯತ್ನಿಸಿದ್ದಾರೆ,ಸಂಸ್ಕೃತಿ- ಪ್ರಗತಿ ಆಡಳಿತ ನಾಣ್ಯದ ಎರಡು ಮುಖಗಳೆಂದೇ ಭಾವಿಸಿರುವ ಅವರು ಆಡಳಿತಕ್ಕೆ ಮಾನವೀಯ ಸ್ಪರ್ಶವನ್ನು ನೀಡಲು ಶ್ರಮಿಸಿರುತ್ತಾರೆ, ಮೂಲತಃ ಸಾಹಿತ್ಯ ಪ್ರೇಮಿಯಾದ ಅವರು ಹಲವಾರು ಮೌಲಿಕ ಕನ್ನಡದ ಕೃತಿಗಳನ್ನು ರಚಿಸಿರುತ್ತಾರೆ,“ವಚನಗಳಲ್ಲಿ ಸಾಮಾಜಿಕ ಚಿಂತನೆ” ಎಂಬ ಮಹಾ ಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಡಿ.ಲಿಟ್ಪ ಡೆದುಕೊಂಡಿದ್ದಾರೆ,ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಆರಾಧಕನಾಗಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅವರ ಆತ್ಮೀಯ ಕನ್ನಡ ಅಭಿಮಾನಿಗಳ ಒತ್ತಾಸೆಯಿಂದ ಅವರು ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿ ಸ್ಪರ್ಧಿಸಲು ಬಯಸಿದ್ದಾರೆ,ನಾಡಿನ, ಹೊರನಾಡಿನ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ತಮ್ಮ ಆಶೀರ್ವಾದ ಮತ್ತು ಸಹಕಾರದ ಮೂಲಕ ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಸಿ ಸೋಮಶೇಖರ್ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವರಿಗೆ ಒಂದು ಅಪೂರ್ವ ಅವಕಾಶವನ್ನು ನೀಡಬೇಕೆಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಮೋಹನಲಾಲ್ ಜೈನ್ ಮತ್ತು ಇತರರು ಪಾಲ್ಗೊಂಡಿದ್ದರು.
    1
    ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ
ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಡಾ. ಸಿ ಸೋಮಶೇಖರ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದು ನಬಿಸಾಬ ಕುಷ್ಟಗಿ ಹೇಳಿದರು,
ಅವರು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಹಿನ್ನೆಲೆ ಡಾ. ಸಿ ಸೋಮಶೇಖರ್ ಐಎಎಸ್, ಮಾಜಿ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು,
ಬಾಲ್ಯದಿಂದಲೂ ಅಪ್ಪಟ ಕನ್ನಡ ಅಭಿಮಾನಿಯಾಗಿರುವ ಸಿ ಸೋಮಶೇಖರ್ ಅವರು ಕನ್ನಡ ಸಾಹಿತ್ಯ,
ಸಂಸ್ಕೃತಿ, ಕಲೆಗಳ ಬಗ್ಗೆ ಅಪಾರವಾದ ಪ್ರೀತಿ ಮತ್ತು ಆಸಕ್ತಿ ಹೊಂದಿದ್ದಾರೆ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಕನ್ನಡ
ಮಾಧ್ಯಮದಲ್ಲಿಯೇ ಪಡೆದು ಆನಂತರ ವಾಣಿಜ್ಯ ಸ್ನಾತಕೋತ್ತರ ಪದವಿಗಳಿಸಿ ಬೆಂಗಳೂರಿನ ಕೆ.ಎಲ್‌.ಇ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಕರ್ನಾಟಕ ಆಡಳಿತ ಪ್ರಥಮ ದರ್ಜೆ ಸೇವೆಯನ್ನು ಸೇರುವ ಅವಕಾಶ ದೊರಕಿತು,ಅಖಿಲ ಭಾರತ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿಯೇ ಉತ್ತರಿಸಿ ಕೇಂದ್ರ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾಗಿ ಕನ್ನಡ ನಾಡು, ನುಡಿಯ
ಮೇಲಿನ ಅಭಿಮಾನದಿಂದ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸಬೇಕೆಂಬ ಹಂಬಲದಿಂದ ಕರ್ನಾಟಕ ಅಡಳಿತ ಸೇವೆಯನ್ನೇ ಆಯ್ಕೆ ಮಾಡಿಕೊಂಡರು ,ಭಾರತ ಆಡಳಿತ ಸೇವೆಗೆ (ಐ.ಎ.ಎಸ್) ಪದೋನ್ನತಿ ಪಡೆದು ರಾಜ್ಯದ ಅನೇಕ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು,ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವಿಶೇಷವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ , ನಿವೃತ್ತಿ ನಂತರ ಕರ್ನಾಟಕ ಗಡಿ ಪ್ರದೇಶ
ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿರುತ್ತಾರೆ, ಅವರ ಆಡಳಿತ ಅವಧಿಯಲ್ಲಿ
ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿದ ಎಲ್ಲಾ ಹಂತಗಳಲ್ಲಿಯೂ ಕನ್ನಡ ಭಾಷೆಯೇ ಸಾರ್ವಭೌಮ ಭಾಷೆಯಾಗಿ ಇರುವಂತೆ ಅಭಿಮಾನ ಪೂರಕವಾಗಿ ಪ್ರಯತ್ನಿಸಿದ್ದಾರೆ,ಸಂಸ್ಕೃತಿ-
ಪ್ರಗತಿ ಆಡಳಿತ ನಾಣ್ಯದ ಎರಡು ಮುಖಗಳೆಂದೇ ಭಾವಿಸಿರುವ ಅವರು ಆಡಳಿತಕ್ಕೆ ಮಾನವೀಯ ಸ್ಪರ್ಶವನ್ನು ನೀಡಲು ಶ್ರಮಿಸಿರುತ್ತಾರೆ, ಮೂಲತಃ ಸಾಹಿತ್ಯ ಪ್ರೇಮಿಯಾದ ಅವರು ಹಲವಾರು ಮೌಲಿಕ ಕನ್ನಡದ ಕೃತಿಗಳನ್ನು
ರಚಿಸಿರುತ್ತಾರೆ,“ವಚನಗಳಲ್ಲಿ ಸಾಮಾಜಿಕ ಚಿಂತನೆ” ಎಂಬ ಮಹಾ ಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಡಿ.ಲಿಟ್ಪ ಡೆದುಕೊಂಡಿದ್ದಾರೆ,ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಆರಾಧಕನಾಗಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅವರ ಆತ್ಮೀಯ ಕನ್ನಡ ಅಭಿಮಾನಿಗಳ ಒತ್ತಾಸೆಯಿಂದ ಅವರು ಮುಂಬರುವ ಕನ್ನಡ ಸಾಹಿತ್ಯ
ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿ ಸ್ಪರ್ಧಿಸಲು ಬಯಸಿದ್ದಾರೆ,ನಾಡಿನ, ಹೊರನಾಡಿನ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ತಮ್ಮ ಆಶೀರ್ವಾದ ಮತ್ತು ಸಹಕಾರದ ಮೂಲಕ ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಸಿ ಸೋಮಶೇಖರ್ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವರಿಗೆ ಒಂದು ಅಪೂರ್ವ ಅವಕಾಶವನ್ನು ನೀಡಬೇಕೆಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಮೋಹನಲಾಲ್ ಜೈನ್ ಮತ್ತು ಇತರರು ಪಾಲ್ಗೊಂಡಿದ್ದರು.
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    19 hrs ago
  • ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕೆಲ ಬೇಕರಿಗಳು ಮತ್ತು ಸ್ವೀಟ್ ಮಾರ್ಟ್ ಅಂಗಡಿಗಳು ಸಾರ್ವಜನಿಕರ ಆರೋಗ್ಯದ ಜೊತೆ ನೇರವಾಗಿ ಚೆಲ್ಲಾಟವಾಡುತ್ತಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಹಣ ಮಾಡುವ ಆಸೆಯಲ್ಲಿ ಕೆಲ ವ್ಯಾಪಾರಿಗಳು ಸ್ವಚ್ಚತೆ, ಶುಚಿತ್ವ ಎಲ್ಲವನ್ನೂ ಕಡೆಗಣಿಸಿ ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ ಕೆಮಿಕಲ್ ಕಲರ್ ಬಳಸಿ ತಯಾರಿಸಿದ ಕೇಕ್ ಮತ್ತು ಸ್ವೀಟ್ಸ್ ಜನರ ಆರೋಗ್ಯಕ್ಕೆ ದೊಡ್ಡ ಅಪಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಾದಾಮಿ ನಗರದ ಟಾಂಗ್ ಸ್ಟ್ಯಾಂಡ್ ಹತ್ತಿರ ಇರುವ ಬೆಂಗಳೂರು ಬೇಕರಿಯ ದಿಲ್ ಖುಷ್ ಅಂಗಡಿಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆಹಾರ ಸುರಕ್ಷತಾ ಅಧಿಕಾರಿ ಪಾರುಕಿ, ಆರೋಗ್ಯ ಅಧಿಕಾರಿ ಎಂ.ಬಿ. ಪಾಟೀಲ್ ಹಾಗೂ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರವೀಣ್ ಕಂಬಳಿ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಯಿತು. ಪರಿಶೀಲನೆ ವೇಳೆ ಕೇಕ್ ಮತ್ತು ಸ್ವೀಟ್ಸ್ ತಯಾರಿಕೆಗೆ ಬಳಸುವ ಕೆಮಿಕಲ್ ಡಬ್ಬಿಗಳು, ಅಪಾಯಕಾರಿ ಕಲರ್ ಬಾಟಲಿಗಳು ಹಾಗೂ ಹಣ್ಣಿನ ಜ್ಯೂಸ್ ತಯಾರಿಸಲು ಇಡಲಾಗಿದ್ದ ಕೊಳೆತ ಹಣ್ಣುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಅನು ಸ್ವೀಟ್ಸ್ ಅಂಗಡಿಯಲ್ಲಿ ಮೈಸೂರು ಪಾಕ್ ಮೇಲೆ ಕಾಲಿಟ್ಟು ಕುಳಿತಿರುವ ದೃಶ್ಯ ಕಂಡುಬಂದಿದ್ದು, ಈ ದೃಶ್ಯ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಅಚ್ಚರಿಯ ಸಂಗತಿ ಏನೆಂದರೆ ಈ ಅಂಗಡಿಯೂ ಕೂಡ ಬೆಂಗಳೂರು ಬೇಕರಿಯವರದ್ದೇ ಎಂಬ ಮಾಹಿತಿ ಹೊರಬಿದ್ದಿದೆ. ರಾಮದೇವ್ ಸ್ವೀಟ್ ಮಾರ್ಟ್ ಸೇರಿದಂತೆ ಹಲವಾರು ಅಂಗಡಿಗಳಲ್ಲಿ ಕೋಲ್ಡ್ ಡ್ರಿಂಕ್ಸ್ ಮೇಲೆ ಮುದ್ರಿತ ಬೆಲೆಯಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಪ್ರವಾಸಿಗರು ಹಾಗೂ ಸ್ಥಳೀಯ ಸಾರ್ವಜನಿಕರು ಈ ಬಗ್ಗೆ ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಆಹಾರ ತಯಾರಿಕಾ ಕೊಠಡಿಗೆ ಪ್ರವೇಶಿಸಿದಾಗ ಕಂಡ ದೃಶ್ಯಗಳು ನಿಜಕ್ಕೂ ಬೆಚ್ಚಿಬೀಳಿಸುವಂತಿವೆ. ಅಲ್ಲಿ ಕೊಳೆತ ಕೇಕ್‌ಗಳು ಮೂಲೆ ಸೇರಿರುವ ಡಬ್ಬಿಗಳು ಕಸಪೊರಕೆ ತುಂಬಿದ ಸ್ಥಳ ಹೊಲಸು ತುಂಬಿದ ಕೇಕ್ ರಟ್ಟುಗಳು ಅನೈರ್ಮಲ್ಯದಿಂದ ಕೂಡಿದ ಅಡುಗೆ ಎಣ್ಣೆ ಹೀಗೆ ಸ್ವಚ್ಚತೆ ಕಾಣದ ಪರಿಸ್ಥಿತಿಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ. ಆಹಾರ ತಯಾರಿಸುವ ಸಿಬ್ಬಂದಿ ಟೋಪಿ, ಹ್ಯಾಂಡ್ ಗ್ಲೋವ್ಸ್, ಜಾಕೆಟ್ ಧರಿಸದೇ ಆಹಾರ ತಯಾರಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ರೀತಿಯ ತಯಾರಿಕೆ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಒಮ್ಮೆ ಈ ತಯಾರಿಕಾ ಕೊಠಡಿಯನ್ನು ನೋಡಿದರೆ ಜೀವನದಲ್ಲಿ ಬೇಕರಿ ತಿನಿಸು ತಿನ್ನಬಾರದು ಎಂಬ ಭಾವನೆ ಹುಟ್ಟುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾದಾಮಿ ನಗರದಲ್ಲಿ ಇಷ್ಟೊಂದು ಬೇಕರಿ ಹಾಗೂ ಸ್ವೀಟ್ ಮಾರ್ಟ್ ಅಂಗಡಿಗಳು ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರೂ ಆಹಾರ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಕಣ್ಮುಚ್ಚಿ ಕುಳಿತಿದೆಯೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಇಂತಹ ಅಂಗಡಿಗಳ ಮೇಲೆ ಕಠಿಣ ಕ್ರಮ ಕೈಗೊಂಡು ಅಂತಹ ಅಂಗಡಿಗಳನ್ನು ಸೀಜ್ ಮಾಡಿ ಪರವಾನಿಗೆ ರದ್ದುಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಕಳಪೆ ಮಟ್ಟದ ಆಹಾರ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಆಹಾರ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ವರದಿ : ರುದ್ರೇಶ್ ಪಿ ಹುಣಸಿಗಿಡದ
    1
    ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕೆಲ ಬೇಕರಿಗಳು ಮತ್ತು ಸ್ವೀಟ್ ಮಾರ್ಟ್ ಅಂಗಡಿಗಳು ಸಾರ್ವಜನಿಕರ ಆರೋಗ್ಯದ ಜೊತೆ ನೇರವಾಗಿ ಚೆಲ್ಲಾಟವಾಡುತ್ತಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.
ಹಣ ಮಾಡುವ ಆಸೆಯಲ್ಲಿ ಕೆಲ ವ್ಯಾಪಾರಿಗಳು ಸ್ವಚ್ಚತೆ, ಶುಚಿತ್ವ ಎಲ್ಲವನ್ನೂ ಕಡೆಗಣಿಸಿ ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.
ಅಷ್ಟೇ ಅಲ್ಲದೆ ಕೆಮಿಕಲ್ ಕಲರ್ ಬಳಸಿ ತಯಾರಿಸಿದ ಕೇಕ್ ಮತ್ತು ಸ್ವೀಟ್ಸ್ ಜನರ ಆರೋಗ್ಯಕ್ಕೆ ದೊಡ್ಡ ಅಪಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬಾದಾಮಿ ನಗರದ ಟಾಂಗ್ ಸ್ಟ್ಯಾಂಡ್ ಹತ್ತಿರ ಇರುವ ಬೆಂಗಳೂರು ಬೇಕರಿಯ ದಿಲ್ ಖುಷ್ ಅಂಗಡಿಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.
ಈ ವೇಳೆ ಆಹಾರ ಸುರಕ್ಷತಾ ಅಧಿಕಾರಿ ಪಾರುಕಿ, ಆರೋಗ್ಯ ಅಧಿಕಾರಿ ಎಂ.ಬಿ. ಪಾಟೀಲ್ ಹಾಗೂ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರವೀಣ್ ಕಂಬಳಿ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಯಿತು.
ಪರಿಶೀಲನೆ ವೇಳೆ ಕೇಕ್ ಮತ್ತು ಸ್ವೀಟ್ಸ್ ತಯಾರಿಕೆಗೆ ಬಳಸುವ ಕೆಮಿಕಲ್ ಡಬ್ಬಿಗಳು, ಅಪಾಯಕಾರಿ ಕಲರ್ ಬಾಟಲಿಗಳು ಹಾಗೂ ಹಣ್ಣಿನ ಜ್ಯೂಸ್ ತಯಾರಿಸಲು ಇಡಲಾಗಿದ್ದ ಕೊಳೆತ ಹಣ್ಣುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದಾರೆ.
ಇದೇ ವೇಳೆ ಅನು ಸ್ವೀಟ್ಸ್ ಅಂಗಡಿಯಲ್ಲಿ ಮೈಸೂರು ಪಾಕ್ ಮೇಲೆ ಕಾಲಿಟ್ಟು ಕುಳಿತಿರುವ ದೃಶ್ಯ ಕಂಡುಬಂದಿದ್ದು, ಈ ದೃಶ್ಯ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.
ಅಚ್ಚರಿಯ ಸಂಗತಿ ಏನೆಂದರೆ ಈ ಅಂಗಡಿಯೂ ಕೂಡ ಬೆಂಗಳೂರು ಬೇಕರಿಯವರದ್ದೇ ಎಂಬ ಮಾಹಿತಿ ಹೊರಬಿದ್ದಿದೆ.
ರಾಮದೇವ್ ಸ್ವೀಟ್ ಮಾರ್ಟ್ ಸೇರಿದಂತೆ ಹಲವಾರು ಅಂಗಡಿಗಳಲ್ಲಿ
ಕೋಲ್ಡ್ ಡ್ರಿಂಕ್ಸ್ ಮೇಲೆ ಮುದ್ರಿತ ಬೆಲೆಯಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಪ್ರವಾಸಿಗರು ಹಾಗೂ ಸ್ಥಳೀಯ ಸಾರ್ವಜನಿಕರು ಈ ಬಗ್ಗೆ ದೂರು ನೀಡಿದ್ದಾರೆ.
ಅಧಿಕಾರಿಗಳ ಜೊತೆ ಆಹಾರ ತಯಾರಿಕಾ ಕೊಠಡಿಗೆ ಪ್ರವೇಶಿಸಿದಾಗ ಕಂಡ ದೃಶ್ಯಗಳು ನಿಜಕ್ಕೂ ಬೆಚ್ಚಿಬೀಳಿಸುವಂತಿವೆ.
ಅಲ್ಲಿ
ಕೊಳೆತ ಕೇಕ್‌ಗಳು
ಮೂಲೆ ಸೇರಿರುವ ಡಬ್ಬಿಗಳು
ಕಸಪೊರಕೆ ತುಂಬಿದ ಸ್ಥಳ
ಹೊಲಸು ತುಂಬಿದ ಕೇಕ್ ರಟ್ಟುಗಳು
ಅನೈರ್ಮಲ್ಯದಿಂದ ಕೂಡಿದ ಅಡುಗೆ ಎಣ್ಣೆ
ಹೀಗೆ ಸ್ವಚ್ಚತೆ ಕಾಣದ ಪರಿಸ್ಥಿತಿಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ.
ಆಹಾರ ತಯಾರಿಸುವ ಸಿಬ್ಬಂದಿ
ಟೋಪಿ, ಹ್ಯಾಂಡ್ ಗ್ಲೋವ್ಸ್, ಜಾಕೆಟ್ ಧರಿಸದೇ
ಆಹಾರ ತಯಾರಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಆಹಾರ ಸುರಕ್ಷತಾ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ರೀತಿಯ ತಯಾರಿಕೆ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ.
ಒಮ್ಮೆ ಈ ತಯಾರಿಕಾ ಕೊಠಡಿಯನ್ನು ನೋಡಿದರೆ
ಜೀವನದಲ್ಲಿ ಬೇಕರಿ ತಿನಿಸು ತಿನ್ನಬಾರದು ಎಂಬ ಭಾವನೆ ಹುಟ್ಟುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾದಾಮಿ ನಗರದಲ್ಲಿ ಇಷ್ಟೊಂದು ಬೇಕರಿ ಹಾಗೂ ಸ್ವೀಟ್ ಮಾರ್ಟ್ ಅಂಗಡಿಗಳು ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರೂ
ಆಹಾರ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಕಣ್ಮುಚ್ಚಿ ಕುಳಿತಿದೆಯೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.
ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಇಂತಹ ಅಂಗಡಿಗಳ ಮೇಲೆ ಕಠಿಣ ಕ್ರಮ ಕೈಗೊಂಡು
ಅಂತಹ ಅಂಗಡಿಗಳನ್ನು ಸೀಜ್ ಮಾಡಿ ಪರವಾನಿಗೆ ರದ್ದುಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಕಳಪೆ ಮಟ್ಟದ ಆಹಾರ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಅಂಗಡಿಗಳ ವಿರುದ್ಧ
ಆಹಾರ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ವರದಿ : ರುದ್ರೇಶ್ ಪಿ ಹುಣಸಿಗಿಡದ
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.