logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗೆದ್ದು ಬೀಗಿದ ಗಂಗಾವತಿ ಟೀಂ ಶಾಸಕ ಕಾಶಪ್ಪನವರ ಬಹುಮಾನ ವಿತರಣೆ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದ ಹಜರತ್ ಸೈಯದ್ ಷಾ ಮುರ್ತುಜಾ ಖಾದ್ರಿ ದರ್ಗಾ ಉರುಸು ಅಂಗವಾಗಿ ಅಲಂಪೂರಪೇಟ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಏರ್ಪಡಿಸಲಾಗಿದ್ದ ಹಾರ್ಡ ಟೆನಿಷ್ ಓಪನ್ ಕ್ರಿಕೆಟ್ ಟೂರ್ನಾಮೆಂಟ್‌ದಲ್ಲಿ ಪ್ರಥಮ ಬಹುಮಾನ ೧ ಲಕ್ಷ ೨೫ ಸಾವಿರ ರೂ ವನ್ನು ಗಂಗಾವತಿಯ ತೈಮುರ ಟೀಂ ಮುಡಿಗೇರಿಸಿಕೊಂಡಿದೆ. ದ್ವಿತೀಯ ಬಹುಮಾನವನ್ನು ಇಳಕಲ್ಲದ ಎಂ.ಎA.ಸಿಸಿ ತಂಡ ೬೫ ಸಾವಿರ ರೂ ಪಡೆದುಕೊಂಡಿದೆ. ಬಹುಮಾನವನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ವಿತರಿಸಿದರು. ಈ ಸಮಯದಲ್ಲಿ ಅಲಂಪೂರಪೇಟ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಅಸೋಸಿಯೇಶನ್ ಅಧ್ಯಕ್ಷ ನಬೀರಸೂಲ ಆನೆಗುಂದಿ, ರಫೀಕ ಸೈಯದ್, ಗ್ರಾನೈಟ್ ಉದ್ದಿಮೆದಾರ ಪ್ರವೀಣ ಹೂಲಗೇರಿ, ವೆಂಕಟೇಶ ಬಂಡಿ, ರಾಜು ಬನ್ನಿಗೊಳ, ನೀಲಕಂಠ ಶಾಸ್ತಿçÃ, ಅಸ್ಲಂ ಬೇಪಾರಿ ಹಾಗೂ ಕಮೀಟಿಯ ಪದಾಧಿಕಾರಿಗಳು ಸದಸ್ಯರು ಇದ್ದರು. ಕ್ರೀಕೆಟ್ ಟೂರ್ನಾಮೆಂಟ್ ಕಾಮೆಂಟ್ರಿಯನ್ನು ಬಾಬುಲಾಲ ಖಾಜಿ, ಅಬ್ದುಲ ರಹೇಮಾನ ಕರಡಿ ಯಶಸ್ವಿಯಾಗಿ ನಡೆಸಿಕೊಟ್ಟರು.

1 day ago
user_Aaryan Ganiger
Aaryan Ganiger
Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
1 day ago

ಗೆದ್ದು ಬೀಗಿದ ಗಂಗಾವತಿ ಟೀಂ ಶಾಸಕ ಕಾಶಪ್ಪನವರ ಬಹುಮಾನ ವಿತರಣೆ ಬಾಗಲಕೋಟ ಜಿಲ್ಲೆಯ ಇಳಕಲ್ ನಗರದ ಹಜರತ್ ಸೈಯದ್ ಷಾ ಮುರ್ತುಜಾ ಖಾದ್ರಿ ದರ್ಗಾ ಉರುಸು ಅಂಗವಾಗಿ ಅಲಂಪೂರಪೇಟ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಏರ್ಪಡಿಸಲಾಗಿದ್ದ ಹಾರ್ಡ ಟೆನಿಷ್ ಓಪನ್ ಕ್ರಿಕೆಟ್ ಟೂರ್ನಾಮೆಂಟ್‌ದಲ್ಲಿ ಪ್ರಥಮ ಬಹುಮಾನ ೧ ಲಕ್ಷ ೨೫ ಸಾವಿರ ರೂ ವನ್ನು ಗಂಗಾವತಿಯ ತೈಮುರ ಟೀಂ ಮುಡಿಗೇರಿಸಿಕೊಂಡಿದೆ. ದ್ವಿತೀಯ ಬಹುಮಾನವನ್ನು ಇಳಕಲ್ಲದ ಎಂ.ಎA.ಸಿಸಿ ತಂಡ ೬೫ ಸಾವಿರ ರೂ ಪಡೆದುಕೊಂಡಿದೆ. ಬಹುಮಾನವನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ವಿತರಿಸಿದರು. ಈ ಸಮಯದಲ್ಲಿ ಅಲಂಪೂರಪೇಟ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಅಸೋಸಿಯೇಶನ್ ಅಧ್ಯಕ್ಷ ನಬೀರಸೂಲ ಆನೆಗುಂದಿ, ರಫೀಕ ಸೈಯದ್, ಗ್ರಾನೈಟ್ ಉದ್ದಿಮೆದಾರ ಪ್ರವೀಣ ಹೂಲಗೇರಿ, ವೆಂಕಟೇಶ ಬಂಡಿ, ರಾಜು ಬನ್ನಿಗೊಳ, ನೀಲಕಂಠ ಶಾಸ್ತಿçÃ, ಅಸ್ಲಂ ಬೇಪಾರಿ ಹಾಗೂ ಕಮೀಟಿಯ ಪದಾಧಿಕಾರಿಗಳು ಸದಸ್ಯರು ಇದ್ದರು. ಕ್ರೀಕೆಟ್ ಟೂರ್ನಾಮೆಂಟ್ ಕಾಮೆಂಟ್ರಿಯನ್ನು ಬಾಬುಲಾಲ ಖಾಜಿ, ಅಬ್ದುಲ ರಹೇಮಾನ ಕರಡಿ ಯಶಸ್ವಿಯಾಗಿ ನಡೆಸಿಕೊಟ್ಟರು.

More news from ಕರ್ನಾಟಕ and nearby areas
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಶ್ರೀ ನಿವಾಸ ಚಿತ್ರಮಂದಿರ ಹತ್ತಿರ ಇರುವ ಬೈಕ್ ಗ್ಯಾರೇಜ್ ಗೆ ಬೆಂಕಿ ತಗುಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾದ ಘಟನೆ ಫೆ.೧೬ ರಾತ್ರಿ ೧೦ ಗಂಟೆಯ ಸಂದರ್ಭ ನಡೆದಿದೆ. ಬೆಂಕಿ ತಗುಲಿದ ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಬೆಂಕಿ ಅವಘಡದಲ್ಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾಗಿದೆ ಎಂದು ಗ್ಯಾರೇಜ್ ಮಾಲೀಕ ಕೃಷ್ಣ ವದ್ದಿ ತಿಳಿಸಿದ್ದಾರೆ. ಗ್ಯಾರೇಜ್ ಗೆ ಬೆಂಕಿ ತಗುಲಿದ ಕಾರಣ ತಿಳಿದುಬಂದಿಲ್ಲ.
    1
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಶ್ರೀ ನಿವಾಸ ಚಿತ್ರಮಂದಿರ ಹತ್ತಿರ ಇರುವ ಬೈಕ್ ಗ್ಯಾರೇಜ್ ಗೆ ಬೆಂಕಿ ತಗುಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾದ ಘಟನೆ ಫೆ.೧೬ ರಾತ್ರಿ ೧೦ ಗಂಟೆಯ ಸಂದರ್ಭ ನಡೆದಿದೆ.
ಬೆಂಕಿ ತಗುಲಿದ ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಈ ಬೆಂಕಿ ಅವಘಡದಲ್ಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾಗಿದೆ ಎಂದು ಗ್ಯಾರೇಜ್ ಮಾಲೀಕ ಕೃಷ್ಣ ವದ್ದಿ ತಿಳಿಸಿದ್ದಾರೆ. ಗ್ಯಾರೇಜ್ ಗೆ ಬೆಂಕಿ ತಗುಲಿದ ಕಾರಣ ತಿಳಿದುಬಂದಿಲ್ಲ.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
  • ಧಾರ್ಮಿಕ ಶ್ರದ್ಧಾಕೇಂದ್ರ ಸುಕ್ಷೇತ್ರ ಮದ್ವೀರಶೈವ ಶಿವಯೋಗ ಮಂದಿರದ 116 ನೇ ಕಾರಣಿಕ ಯುಗಪುರುಷ ಹಾನಗಲ್ ಕುಮಾರ ಶ್ರೀಗಳ 65 ಅಡಿ ಎತ್ತರದ ಮಾಹಾರಥೋತ್ಸವ ಸೋಮವಾರ ಸಂಜೆ 6 ಗಂಟೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ಜರುಗಿತು. ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ (೬೫ಅಡಿ) ಮಾಹಾರಥೋತ್ಸವಕ್ಕೆ ಸಾಂಪ್ರದಾಯಕವಾಗಿ ಪೂಜೆ ಪುನಸ್ಕಾರ ನೆರೆವೇರಿಸಿದ ಸಂಸ್ಥೆಯ ಅಧ್ಯಕ್ಷ, ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ಶಿರಬಡಗಿ ಗ್ರಾಮದ ಭಕ್ತಾಧಿಗಳು ತಂದ ಹಗ್ಗದಿಂದ ಭಕ್ತಗಣ ರಥ ಎಳೆಯಲಾಯಿತು. ಮಾಹಾರಥೋತ್ಸವಕ್ಕೆ ಭಕ್ತರು ಹೂವು ಸಮರ್ಪಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು. ಅಪಾರ ಭಕ್ತ ಸಮೂಹ ಶಿವನ ಹಾಗೂ ಶಿವಯೋಗಿಗಳ ಸ್ಮರಣೆ ಮೂಲಕ ರಥ ಎಳೆದರು. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳ ನೇತೃತ್ವದಲ್ಲಿ ಪೂಜೆ ಕೈಂಕರ್ಯಗಳು ಜರುಗಿದವು. ಮಾಹಾರಥೋತ್ಸವದಲ್ಲಿ ನಾಡಿನ ಮಹಾಸ್ವಾಮಿಗಳಾದ ಹೊಳೆಹುಚ್ಚೇಶ್ವರ ಶ್ರೀ, ಫಕೀರ ದಿಂಗಾಲೇಶ್ವರ ಸ್ವಾಮಿಜಿ ನೂರಾರು ಮಠಾಧೀಶರು, ಮಹಾಸ್ವಾಮಿಗಳು, ವಟುಸಾಧಕರು ಹಾಜರಿದ್ದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ.,ಪಟ್ಟಣಶೆಟ್ಟಿ ಧರ್ಮದರ್ಶಿ ಎಂ.ಬಿ.ಹಂಗರಗಿ, ಶರಣಪ್ಪಗೌಡ ಪಾಟೀಲ, ಕುಮಾರಗೌಡ ಜನಾಲಿ,ಮಹಾಂತೇಶ ಮಮದಾಪೂರ, ಶಾಂತಗೌಡ ಪಾಟೀಲ, ಬಸವರಾಜ ಪಾಟೀಲ, ಸಿದ್ದನಗೌಡ ಪಾಟೀಲ, ಆರ್.ಬಿ.ಪಾಟೀಲ, ಮುಕ್ಕಣಗೌಡ ಜನಾಲಿ, ನಾಗರಾಜ ಕಾಚೆಟ್ಟಿ, ಡಾ.ಆರ್.ಸಿ.ಭಂಡಾರಿ, ಪಂಪಣ್ಣ ಕಾಚೆಟ್ಟಿ, ಸಿಪಿಐ. ಕರೆಪ್ಪ ಬನ್ನೆ, ಪಿ.ಎಸ್.ಐ ಹನಮಂತ ನರಳೆ, ಜಿಲ್ಲೆಯ ವಿವಿಧ ಭಾಗಗಳ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ತಾಲೂಕಿನ ಮಂಗಳೂರು ಗ್ರಾಮದ ಭಜನಾ ಮಂಡಳಿಯವರು ನಂದಿಕೋಲು ಮೆರವಣಿಗೆಯೊಂದಿಗೆ ಮಹಾರಥೋತ್ಸವದಲ್ಲಿ ಗಮನಾರ್ಹವಾಗಿತ್ತು.
    1
    ಧಾರ್ಮಿಕ ಶ್ರದ್ಧಾಕೇಂದ್ರ ಸುಕ್ಷೇತ್ರ ಮದ್ವೀರಶೈವ ಶಿವಯೋಗ ಮಂದಿರದ 116 ನೇ ಕಾರಣಿಕ ಯುಗಪುರುಷ ಹಾನಗಲ್ ಕುಮಾರ ಶ್ರೀಗಳ 65 ಅಡಿ ಎತ್ತರದ ಮಾಹಾರಥೋತ್ಸವ ಸೋಮವಾರ ಸಂಜೆ 6 ಗಂಟೆಗೆ  ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ಜರುಗಿತು.
ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ (೬೫ಅಡಿ) ಮಾಹಾರಥೋತ್ಸವಕ್ಕೆ ಸಾಂಪ್ರದಾಯಕವಾಗಿ ಪೂಜೆ ಪುನಸ್ಕಾರ ನೆರೆವೇರಿಸಿದ ಸಂಸ್ಥೆಯ ಅಧ್ಯಕ್ಷ, ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು.
ಶಿರಬಡಗಿ ಗ್ರಾಮದ ಭಕ್ತಾಧಿಗಳು ತಂದ ಹಗ್ಗದಿಂದ ಭಕ್ತಗಣ ರಥ ಎಳೆಯಲಾಯಿತು. ಮಾಹಾರಥೋತ್ಸವಕ್ಕೆ ಭಕ್ತರು ಹೂವು ಸಮರ್ಪಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು. ಅಪಾರ ಭಕ್ತ ಸಮೂಹ ಶಿವನ ಹಾಗೂ ಶಿವಯೋಗಿಗಳ ಸ್ಮರಣೆ  ಮೂಲಕ ರಥ ಎಳೆದರು. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳ ನೇತೃತ್ವದಲ್ಲಿ ಪೂಜೆ ಕೈಂಕರ್ಯಗಳು ಜರುಗಿದವು.
ಮಾಹಾರಥೋತ್ಸವದಲ್ಲಿ ನಾಡಿನ ಮಹಾಸ್ವಾಮಿಗಳಾದ ಹೊಳೆಹುಚ್ಚೇಶ್ವರ ಶ್ರೀ, ಫಕೀರ ದಿಂಗಾಲೇಶ್ವರ ಸ್ವಾಮಿಜಿ ನೂರಾರು ಮಠಾಧೀಶರು, ಮಹಾಸ್ವಾಮಿಗಳು, ವಟುಸಾಧಕರು ಹಾಜರಿದ್ದರು.  ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ.,ಪಟ್ಟಣಶೆಟ್ಟಿ ಧರ್ಮದರ್ಶಿ ಎಂ.ಬಿ.ಹಂಗರಗಿ, ಶರಣಪ್ಪಗೌಡ ಪಾಟೀಲ, ಕುಮಾರಗೌಡ ಜನಾಲಿ,ಮಹಾಂತೇಶ ಮಮದಾಪೂರ, ಶಾಂತಗೌಡ ಪಾಟೀಲ, ಬಸವರಾಜ ಪಾಟೀಲ,  ಸಿದ್ದನಗೌಡ ಪಾಟೀಲ, ಆರ್.ಬಿ.ಪಾಟೀಲ, ಮುಕ್ಕಣಗೌಡ ಜನಾಲಿ, ನಾಗರಾಜ ಕಾಚೆಟ್ಟಿ,  ಡಾ.ಆರ್.ಸಿ.ಭಂಡಾರಿ,  ಪಂಪಣ್ಣ ಕಾಚೆಟ್ಟಿ, ಸಿಪಿಐ. ಕರೆಪ್ಪ ಬನ್ನೆ, ಪಿ.ಎಸ್.ಐ ಹನಮಂತ ನರಳೆ, ಜಿಲ್ಲೆಯ ವಿವಿಧ ಭಾಗಗಳ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ತಾಲೂಕಿನ ಮಂಗಳೂರು ಗ್ರಾಮದ ಭಜನಾ ಮಂಡಳಿಯವರು ನಂದಿಕೋಲು ಮೆರವಣಿಗೆಯೊಂದಿಗೆ ಮಹಾರಥೋತ್ಸವದಲ್ಲಿ ಗಮನಾರ್ಹವಾಗಿತ್ತು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
  • ಬಾಗಲಕೋಟೆ ತಹಶೀಲ್ದಾರ ಕಚೇರಿ ಆವರಣದಲ್ಲಿ ಸಾರ್ವಜನಿಕರ ಸೌಲಭ್ಯಕ್ಕಾಗಿ 2022ನೇ ಸಾಲಿನಲ್ಲಿ ಸುಮಾರು 8.40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ, ಗ್ರಂಥಾಲಯ ಹಾಗೂ ವಾಚನಾಲಯ ಕಟ್ಟಡ ಉದ್ಘಾಟನೆ ಆಗದೇ ಬೀಗ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸದೇ ಇರುವುದರಿಂದ ಸ್ಥಳೀಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷರು ಕಟ್ಟಡವನ್ನು ಪರಿಶೀಲಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಸಾರ್ವಜನಿಕರ ತೆರಿಗೆಯ ಹಣದಲ್ಲಿ ನಿರ್ಮಾಣವಾದ ಈ ಕಟ್ಟಡವನ್ನು ತಕ್ಷಣವೇ ಸಾರ್ವಜನಿಕರಿಗೆ ತೆರೆಯಬೇಕು. ಇಲ್ಲಿ ಗ್ರಂಥಾಲಯ ಎಂದು ಫಲಕದಲ್ಲಿ ಉಲ್ಲೇಖಿಸಿದ್ದರೆ, ಗ್ರಂಥಾಲಯದ ವ್ಯವಸ್ಥೆ ಎಲ್ಲಿದೆ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಾರ್ವಜನಿಕರ ಮೂಲಭೂತ ಹಕ್ಕುಗಳಾದ ನೀರು, ಶೌಚಾಲಯ ಮುಂತಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ” ಎಂದು ಅವರು ಆಗ್ರಹಿಸಿದರು. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಇದೀಗ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.
    1
    ಬಾಗಲಕೋಟೆ ತಹಶೀಲ್ದಾರ ಕಚೇರಿ ಆವರಣದಲ್ಲಿ ಸಾರ್ವಜನಿಕರ ಸೌಲಭ್ಯಕ್ಕಾಗಿ 2022ನೇ ಸಾಲಿನಲ್ಲಿ ಸುಮಾರು 8.40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ, ಗ್ರಂಥಾಲಯ ಹಾಗೂ ವಾಚನಾಲಯ ಕಟ್ಟಡ ಉದ್ಘಾಟನೆ ಆಗದೇ ಬೀಗ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ.
ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸದೇ ಇರುವುದರಿಂದ ಸ್ಥಳೀಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷರು ಕಟ್ಟಡವನ್ನು ಪರಿಶೀಲಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
“ಸಾರ್ವಜನಿಕರ ತೆರಿಗೆಯ ಹಣದಲ್ಲಿ ನಿರ್ಮಾಣವಾದ ಈ ಕಟ್ಟಡವನ್ನು ತಕ್ಷಣವೇ ಸಾರ್ವಜನಿಕರಿಗೆ ತೆರೆಯಬೇಕು. ಇಲ್ಲಿ ಗ್ರಂಥಾಲಯ ಎಂದು ಫಲಕದಲ್ಲಿ ಉಲ್ಲೇಖಿಸಿದ್ದರೆ, ಗ್ರಂಥಾಲಯದ ವ್ಯವಸ್ಥೆ ಎಲ್ಲಿದೆ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಾರ್ವಜನಿಕರ ಮೂಲಭೂತ ಹಕ್ಕುಗಳಾದ ನೀರು, ಶೌಚಾಲಯ ಮುಂತಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ” ಎಂದು ಅವರು ಆಗ್ರಹಿಸಿದರು.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಇದೀಗ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ #ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್
    1
    ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ
#ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್
    user_YUVA JAGRUTI NEWS
    YUVA JAGRUTI NEWS
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    28 min ago
  • ಪೊಲೀಸರ ಜೊತೆ ಉದ್ಧಟತನ; ದರ್ಶನ್ ಅಭಿಮಾನಿಗೆ ಕಪಾಳಮೋಕ್ಷ, ಬೆಂಗಳೂರು: ನಟ ದರ್ಶನ್ ನಿವಾಸದ ಬಳಿ ಕರ್ತವ್ಯ ನಿರತ ಪೊಲೀಸರ ಸೂಚನೆಗಳನ್ನು ಮೀರಿ, ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದ ಅಭಿಮಾನಿಯೊಬ್ಬನಿಗೆ ಪೊಲೀಸರು ಸ್ಥಳದಲ್ಲೇ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ. ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ಮನೆಯ ಮುಂದೆ ನೆರೆದಿದ್ದ ಅಭಿಮಾನಿಗಳ ಗುಂಪಿನಲ್ಲಿ ಈ ವ್ಯಕ್ತಿ ಸೇರಿದ್ದ ಎನ್ನಲಾಗಿದೆ. 'ಇಂದೇ ದರ್ಶನ್ ಅವರನ್ನು ಭೇಟಿ ಮಾಡಬೇಕು' ಎಂದು ಹಠ ಹಿಡಿದು ಗಲಾಟೆ ಆರಂಭಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಆತನಿಗೆ ಸಮಾಧಾನಪಡಿಸಲು ಮತ್ತು ಅಲ್ಲಿಂದ ತೆರಳಲು ಸೂಚಿಸಿದರು.ಆದರೆ, ಮದ್ಯದ ಅಮಲಿನಲ್ಲಿದ್ದ ಎನ್ನಲಾದ ಆತ ಪೊಲೀಸರ ಮಾತಿಗೆ ಬೆಲೆ ಕೊಡದೆ ಉದ್ಧಟತನ ಪ್ರದರ್ಶಿಸಿದ್ದಾನೆ. ಪರಿಸ್ಥಿತಿ ಮಿತಿಮೀರುತ್ತಿದ್ದಂತೆ, ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಅಶಿಸ್ತಿನ ವರ್ತನೆಗೆ ಕಡಿವಾಣ ಹಾಕಲು ಪೊಲೀಸರು ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸದ್ಯ ಈ ಘಟನೆ ಸ್ಥಳೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
    1
    ಪೊಲೀಸರ ಜೊತೆ ಉದ್ಧಟತನ; ದರ್ಶನ್ ಅಭಿಮಾನಿಗೆ ಕಪಾಳಮೋಕ್ಷ, ಬೆಂಗಳೂರು:
ನಟ ದರ್ಶನ್ ನಿವಾಸದ ಬಳಿ ಕರ್ತವ್ಯ ನಿರತ ಪೊಲೀಸರ ಸೂಚನೆಗಳನ್ನು ಮೀರಿ, ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದ ಅಭಿಮಾನಿಯೊಬ್ಬನಿಗೆ ಪೊಲೀಸರು ಸ್ಥಳದಲ್ಲೇ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ.
ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ಮನೆಯ ಮುಂದೆ ನೆರೆದಿದ್ದ ಅಭಿಮಾನಿಗಳ ಗುಂಪಿನಲ್ಲಿ ಈ ವ್ಯಕ್ತಿ ಸೇರಿದ್ದ ಎನ್ನಲಾಗಿದೆ.
'ಇಂದೇ ದರ್ಶನ್ ಅವರನ್ನು ಭೇಟಿ ಮಾಡಬೇಕು' ಎಂದು ಹಠ ಹಿಡಿದು ಗಲಾಟೆ ಆರಂಭಿಸಿದ್ದಾನೆ.
ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಆತನಿಗೆ ಸಮಾಧಾನಪಡಿಸಲು ಮತ್ತು ಅಲ್ಲಿಂದ ತೆರಳಲು ಸೂಚಿಸಿದರು.ಆದರೆ, ಮದ್ಯದ ಅಮಲಿನಲ್ಲಿದ್ದ ಎನ್ನಲಾದ ಆತ ಪೊಲೀಸರ ಮಾತಿಗೆ ಬೆಲೆ ಕೊಡದೆ ಉದ್ಧಟತನ ಪ್ರದರ್ಶಿಸಿದ್ದಾನೆ. ಪರಿಸ್ಥಿತಿ ಮಿತಿಮೀರುತ್ತಿದ್ದಂತೆ, ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಅಶಿಸ್ತಿನ ವರ್ತನೆಗೆ ಕಡಿವಾಣ ಹಾಕಲು ಪೊಲೀಸರು ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸದ್ಯ ಈ ಘಟನೆ ಸ್ಥಳೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    1 hr ago
  • ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    3
    ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.
ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ರಾಮದುರ್ಗ, ಬೆಳಗಾವಿ, ಕರ್ನಾಟಕ•
    2 hrs ago
  • ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️ ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌 ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.
    1
    ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️
ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌
ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.
    user_ASN News24Kannada
    ASN News24Kannada
    Newsagent Hosapete, Vijayanagar•
    3 hrs ago
  • ಬಾಗಲಕೋಟೆ: ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ವಸೂಲಾತಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಮುಧೋಳ ಭಾಗದ ರೈತರು ಸೋಮವಾರ ಬಾಗಲಕೋಟೆ ಜಿಲ್ಲೆಯ ಸಂಸದ ಪಿ.ಸಿ. ಗದ್ದಿಗೌಡರ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ಬಾಗಲಕೋಟೆ ಡಿಸಿ ಭವನದಲ್ಲಿರುವ ಸಂಸದ ಕಚೇರಿಗೆ ಬಂದ ರೈತರು, ಬ್ಯಾಂಕ್‌ಗಳಿಂದ ಲಿಲಾವ್ ನೋಟಿಸ್‌ಗಳನ್ನು ನೀಡಲಾಗುತ್ತಿದ್ದು, ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು. ಇದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಕಿರುಕುಳ ನೀಡದಂತೆ ಸೂಚನೆ ನೀಡಬೇಕು ಹಾಗೂ ಸಾಲ ಮರುಪಾವತಿಗೆ ಒನ್ ಟೈಮ್ ಸೆಟಲ್‌ಮೆಂಟ್ ವ್ಯವಸ್ಥೆ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದರು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಈ ವೇಳೆ ಸಂಸದ ಪಿ.ಸಿ. ಗದ್ದಿಗೌಡರ ಅವರು ರೈತರು ಮತ್ತು ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಿಇಒ ಶಶಿಧರ ಕುರೇರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
    3
    ಬಾಗಲಕೋಟೆ: ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ವಸೂಲಾತಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಮುಧೋಳ ಭಾಗದ ರೈತರು ಸೋಮವಾರ ಬಾಗಲಕೋಟೆ ಜಿಲ್ಲೆಯ ಸಂಸದ ಪಿ.ಸಿ. ಗದ್ದಿಗೌಡರ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.
ಬಾಗಲಕೋಟೆ ಡಿಸಿ ಭವನದಲ್ಲಿರುವ ಸಂಸದ ಕಚೇರಿಗೆ ಬಂದ ರೈತರು, ಬ್ಯಾಂಕ್‌ಗಳಿಂದ ಲಿಲಾವ್ ನೋಟಿಸ್‌ಗಳನ್ನು ನೀಡಲಾಗುತ್ತಿದ್ದು, ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು. ಇದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಕಿರುಕುಳ ನೀಡದಂತೆ ಸೂಚನೆ ನೀಡಬೇಕು ಹಾಗೂ ಸಾಲ ಮರುಪಾವತಿಗೆ ಒನ್ ಟೈಮ್ ಸೆಟಲ್‌ಮೆಂಟ್ ವ್ಯವಸ್ಥೆ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದರು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ಸಂಸದ ಪಿ.ಸಿ. ಗದ್ದಿಗೌಡರ ಅವರು ರೈತರು ಮತ್ತು ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಿಇಒ ಶಶಿಧರ ಕುರೇರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.