Shuru
Apke Nagar Ki App…
ಭೀಮಾ ನದಿಯಲ್ಲಿ ಸ್ನಾನಕ್ಕೆ ಇಳಿದು ದುರಂತ ಇಬ್ಬರು ವಿದ್ಯಾರ್ಥಿಗಳ ಸಾವಿಗೆ ಗ್ರಾಮದಲ್ಲಿ ಶೋಕ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಕರುಣಾಜನಕ ಘಟನೆ ಸಂಭವಿಸಿದೆ. ಯಲ್ಲಮ್ಮನ ದೇವಸ್ಥಾನಕ್ಕೆ ಹರಕೆ ತೀರಿಸಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ದೇವರ ದರ್ಶನಕ್ಕೂ ಮುನ್ನ ಭೀಮಾ ನದಿಯಲ್ಲಿ ಸ್ನಾನಕ್ಕೆ ಇಳಿದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಪುಂಡಲಿಕ್ ಮುಲಿಮನಿ (17) ಮತ್ತು ಮಹೇಶ್ (16) ಎಂದು ಗುರುತಿಸಲಾಗಿದೆ. ನದಿಯಲ್ಲಿ ಒಳಹರಿವು ಹೆಚ್ಚಿದ್ದ ಕಾರಣ ಇಬ್ಬರೂ ಈಜಲು ಸಾಧ್ಯವಾಗದೆ ದುರಂತಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದು, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದಾದ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ.
Veega News Kannada
ಭೀಮಾ ನದಿಯಲ್ಲಿ ಸ್ನಾನಕ್ಕೆ ಇಳಿದು ದುರಂತ ಇಬ್ಬರು ವಿದ್ಯಾರ್ಥಿಗಳ ಸಾವಿಗೆ ಗ್ರಾಮದಲ್ಲಿ ಶೋಕ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಕರುಣಾಜನಕ ಘಟನೆ ಸಂಭವಿಸಿದೆ. ಯಲ್ಲಮ್ಮನ ದೇವಸ್ಥಾನಕ್ಕೆ ಹರಕೆ ತೀರಿಸಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ದೇವರ ದರ್ಶನಕ್ಕೂ ಮುನ್ನ ಭೀಮಾ ನದಿಯಲ್ಲಿ ಸ್ನಾನಕ್ಕೆ ಇಳಿದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಪುಂಡಲಿಕ್ ಮುಲಿಮನಿ (17) ಮತ್ತು ಮಹೇಶ್ (16) ಎಂದು ಗುರುತಿಸಲಾಗಿದೆ. ನದಿಯಲ್ಲಿ ಒಳಹರಿವು ಹೆಚ್ಚಿದ್ದ ಕಾರಣ ಇಬ್ಬರೂ ಈಜಲು ಸಾಧ್ಯವಾಗದೆ ದುರಂತಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದು, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದಾದ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ.
More news from ಕರ್ನಾಟಕ and nearby areas
- ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಎರಡು ವರ್ಷಗಳ ಹಿಂದಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಸಂತ್ರಸ್ತೆ ಯುವತಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಗೆ ಸಹಿ ಮಾಡಲು ಹೋದಾಗ ಕೆಲ ಸಂಘಟನೆಗಳು ತಡೆದಿದ್ದವು ಎಂದು ಹೇಳುತ್ತಿರುವುದು ದಾಖಲಾಗಿದೆ. ಈ ಹಳೆಯ ದೃಶ್ಯ ಈಗಿನ ಪ್ರಕರಣಕ್ಕೆ ಮತ್ತಷ್ಟು ಮಹತ್ವ ನೀಡಿದ್ದು, ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಯುವತಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆ ಪೊಲೀಸರು ಹಳೆಯ ಮತ್ತು ಹೊಸ ಮಾಹಿತಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸುತ್ತಿದ್ದಾರೆ.1
- ನೆಲಮಂಗಲ SSLC ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಯುವತಿ ಆತ್ಮಹತ್ಯೆ ಪರೀಕ್ಷೆಯಲ್ಲಿ ಫೇಲಾಗುವ ಭಯದಲ್ಲಿ ಯುವತಿ ಆತ್ಮಹತ್ಯೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಘಟನೆ ಅನು(16) ಆತ್ಮಹತ್ಯೆ ಮಾಡಿಕೊಂಡ ಯುವತಿ ಗೋವಿಂದರಾಜು-ಪುಷ್ಪಲತಾ ದಂಪತಿಗಳ ಪುತ್ರಿ ಅನು ಮನೆಯ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಪರೀಕ್ಷೆ ವಿಷಯದಲ್ಲಿ ಮನನೊಂದಿದ್ದ ಯುವತಿ ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.2
- ಕೋಲಾರ: ತಾಲೂಕಿನ ಸುಗಟೂರು ಹೋಬಳಿಯ ಬೈಪನಹಳ್ಳಿ ಗ್ರಾಮದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 119ನೇ ಜನ್ಮದಿನದ ಜಯಂತೋತ್ಸವವನ್ನು ಗ್ರಾಮಸ್ಥರು ಅತ್ಯಂತ ಸಡಗರ-ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಿದರು. ಕಾರ್ಯಕ್ರಮದ ಮುಖ್ಯಾಂಶಗಳು: ಗ್ರಾಮದಲ್ಲಿ ಬೆಳಿಗ್ಗೆಯಿಂದಲೇ ಸಂಭ್ರಮದ ವಾತಾವರಣ ಮನೆಮಾಡಿತ್ತು. ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಗ್ರಾಮಸ್ಥರು, ನಂತರ ಕೋಲಾರ ನಗರಕ್ಕೆ ಪಲ್ಲಕ್ಕಿ ಉತ್ಸವವನ್ನು ಕಳುಹಿಸಿಕೊಡುವ ಮೂಲಕ ವಿಶೇಷವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಆದರ್ಶಗಳನ್ನು ಪಾಲಿಸೋಣ: ಕಾರ್ಯಕ್ರಮದಲ್ಲಿ ಮುಖಂಡರಾದ ಪಿಳ್ಳಪ್ಪ ಮಾತನಾಡಿ, "ದೇಶದ ಅಭಿವೃದ್ಧಿಗೆ ಮತ್ತು ಬಡವರ ಹಸಿವು ನೀಗಿಸಲು ಶ್ರಮಿಸಿದ ಬಾಬು ಜಗಜೀವನ್ ರಾಮ್ ಅವರ ಜೀವನ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಬೇಕು. ಅವರ ಸಾಧನೆ, ಸರಳತೆ ಮತ್ತು ಬಡವರ ಪರವಾದ ಕಾಳಜಿಯನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ನಡೆ-ನುಡಿಗಳು ಸಮಾಜಕ್ಕೆ ದಾರಿದೀಪ," ಎಂದು ತಿಳಿಸಿದರು. ಭಾಗವಹಿಸಿದ ಗಣ್ಯರು: ಈ ಸಂಭ್ರಮಾಚರಣೆಯಲ್ಲಿ ಪ್ರಮುಖರಾದ: ಎಸ್. ಪಾಪಣ್ಣ (ಮಾಜಿ ಸದಸ್ಯರು) ನಾರಾಯಣಪ್ಪ, ವೆಂಕಟೇಶಪ್ಪ ನಾಗೇಶ್, ನಾರಾಯಣಸ್ವಾಮಿ ಮಂಜುನಾಥ್, ಕೃಷ್ಣಪ್ಪ ಕದಿರಪ್ಪ, ದಿವಾಕರ ನರಸಿಂಹ, ಕಾರ್ತಿಕ್, ಕಿರಣ್, ನವೀನ್ ಸೇರಿದಂತೆ ಗ್ರಾಮದ ನೂರಾರು ಮುಖಂಡರು ಹಾಗೂ ಯುವಕರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.1
- Post by Venu Gopal1
- KOLAR KI.AWAAZ KOUSAR NEWS1
- ಬಣ್ಣಿಸಿದರು. . ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು1
- *ಚಿಂತಾಮಣಿ ಬ್ರೇಕಿಂಗ್* *ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ನೋಡಲೇಬೇಕಾದ ಸ್ಟೋರಿ* ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರಿಗೆ ಇಲ್ಲ ರಕ್ಷಣೆ . *ಕರ್ತವ್ಯ ನಿರತ ಮಹಿಳಾ ಪಿಎಸ್ಐ ನಾಗಮ್ಮ ಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನ* . ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಘಟನೆ . ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಎಸ್ಐ ನಾಗಮ್ಮ ಹಾಗೂ ಜೀಪ್ ತಾಲಕ ವೇಣುಗೋಪಾಲ್ ಮೇಲೆ ಹಲ್ಲೆಗೆ ಯತ್ನ . *ಹಲ್ಲೆಗೆ ಯತ್ನಿಸಿದ ವೀಡಿಯೋ ಕೃತಿ ನ್ಯೂಸ್ ಕನ್ನಡ ಗೆ ಲಭ್ಯ* ರಾತ್ರಿ 12.40 ಆದ್ರೂ ಹೋಟೆಲ್ ತೆರೆದಿದ್ದನ್ನ ಪ್ರಶ್ನಿಸಿದ್ದಕ್ಕೆ ಕ್ಯಾತೆ ತೆಗೆದ ಪುಂಡರು... ಕ್ಯಾತೆ ತೆಗೆದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಂತಲೂ ಲೆಕ್ಕಿಸದೆ ದಮ್ಕಿ ಹಾಕಿ ಹಲ್ಲೆಗೆ ಯತ್ನ . ಏಪ್ರಿಲ್ 3 ರಂದು ಬೆಳಗಿನ ಜಾವ 12.40 ರಲ್ಲಿ ನಡೆದ ಘಟನೆ *ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ಪಿಎಸ್ಐ ಮೇಲೆ ಹಲ್ಲೆಗೆ ಯತ್ನಿಸಿದ ದಮ್ಕಿ ವೀರರು..* ಘಟನೆಯಾಗಿ ಮೂರು ದಿನ ಕಳೆದರೂ ಆರೋಪಿಗಳ ಬಂಧನ ಆಗಿಲ್ಲ . ಮಹಿಳಾ ಪಿಎಸ್ಐ ಮೇಲೆ ಹಲ್ಲೆಯಾದ್ರೂ ಪ್ರಕರಣ ಮುಚ್ಚಿಹಾಕಲು ಯತ್ನ ಮಾಡಿದ್ರಾ ಹಿರಿಯ ಪೊಲೀಸ್ ಅಧಿಕಾರಿಗಳು . *ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಆದ್ರೂ ಕ್ರಮ ಆಗಿಲ್ಲ ಯಾಕೆ?*.. *ರಾಜಕೀಯ ಒತ್ತಡಕ್ಕೆ ಮಣಿದರಾ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು.* ಚಿಕ್ಕಬಳ್ಳಾಪುರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ನಡೆ ಬಗ್ಗೆ ಅನುಮಾನ . ಆರೋಪಿಗಳ ವಿರುದ್ಧ ಎಫ್ ಐ ಆರ್ ಹಾಕಿ ಸುಮ್ಮನಾದ ಪೊಲೀಸರು . ಆಲಂಬಗಿರಿಯ ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ವಿರುದ್ಧ ಎಫ್ ಐ ಆರ್ ದಾಖಲು . ಎಫ್ ಐಆರ್ ಮಾಡಿ ಗಪ್ ಚುಪ್ ಆದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು . ಅನುಮಾನ ಹುಟ್ಟಿಸುತ್ತಿದೆ ಪೊಲೀಸ್ ಅಧಿಕಾರಿಗಳ ನಡೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು4
- ನಿಂತಲ್ಲೇ ಡ್ಯಾನ್ಸ್ ಸ್ಟೆಪ್ ಹಾಕಿದ ರಕ್ಷತ್ ಬುಲೆಟ್1