logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಕಥೆಗಳು ಕಣ್ಮರೆ ಯಾಗುತ್ತಿದೆ: ಡಾ.ವಿಜಯಾ ದೇವಿ ಶಿವಮೊಗ್ಗ: ಈ ಹೊತ್ತಿಗೆ ಮಕ್ಕಳಿಂದ ಹಿಡಿದು ಎಲ್ಲರಲ್ಲೂ ನೈತಿಕತೆ ಪ್ರಜ್ಞೆ ಮೂಡಲು ಕಥೆಗಳು ಸಹಾಯಕವಾಗಿದೆ. ಆಧುನಿಕತೆಯಲ್ಲಿ ಕಣ್ಮರೆಯಾಗುತ್ತಿರುವುದು ದುರಂತಕ್ಕೆ ಕಾರಣವಾಗುತ್ತಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲ ಯದ ಎಮಿರೇಟ್ಸ್ ಪ್ರಾಧ್ಯಾಪಕರಾದ ಡಾ. ವಿಜಯ ದೇವಿ ಹೇಳಿದರು. ಅವರು ಇಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಭದ್ರಾವತಿ ಆಕಾಶವಾಣಿ ಕೇಂದ್ರದ ಕೇಳುಗರ ಬಳಗ, ರೇಣುಕಪ್ಪಗೌಡ ಪ್ರತಿಷ್ಠಾನ, ಜಿಲ್ಲಾ ಸರ್ವೋದಯ ಮಂಡಲ, ಕಾಲೇಜಿನ ಕನ್ನಡ ವಿಭಾಗ, ಸಾಂಸ್ಕೃತಿಕ ವೇದಿಕೆ ಸಹಯೋಗ ದಲ್ಲಿ ಆರ್ ಜೆ ಗಣೇಶ್ ಕೆಂಚನಾಲ್ ಅವರ ಬಾನುಲಿಯಿಂದ 'ಕಥೆ ನಿಮ್ಮ ಜೊತೆ' ಪುಸ್ತಕವನ್ನು, ಆಕಾಶವಾಣಿ ಕೇಳುಗ ರೊಂದಿಗೆ ಬಿಡುಗಡೆ ಮಾಡಿ ಮಾತನಾಡಿದರು. ಜಗತಿನಲ್ಲಿ ಜೀವಂತಿಕೆ ನಡೆಯುತ್ತಿರುವುದು ಸೃಜನಶೀಲತೆಯ ಕಾರಣದಿಂದ. ಸಾಹಿತ್ಯದ ಮೂಲ ದ್ರವ್ಯ ಗ್ರಾಮೀಣ ಬದುಕಿನಲ್ಲಿದೆ. ಅಂತಹ ಗ್ರಾಮೀಣ ಬದುಕಿನ ಸತ್ವವು ಈ ಕತೆ ಪುಸ್ತಕದಲ್ಲಿದೆ. ನೈತಿಕ ಮೌಲ್ಯಗಳ ಅಂತಸತ್ವವವನ್ನು ಕತೆಗಳ ಮೂಲಕ ಬಿತ್ತರಿಸುವುದು ಅಗತ್ಯವಾಗಿದೆ. ಬರಹ ಕೇವಲ ಸಂತಸವನ್ನು ನೀಡುವುದಲ್ಲ. ಬದಲಿಗೆ ವೈಯಕ್ತಿಕ ಜವಾಬ್ದಾರಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಕಲಿಸುತ್ತದೆ. ವೃತ್ತಿಯ ಮೂಲಕ ಸಮಾಜದ ಆರೋಗ್ಯವನ್ನು ಬಯಸುವ ಆಶಯ ಬಹಳ ಮುಖ್ಯ. ಕೃತಿಯೊಂದು ಸಮಾಜದ ಮಾನವೀಯ ಮೌಲ್ಯಗಳನ್ನು ಬೆಳೆಸಿದರೆ ಅದಕ್ಕಿಂತಲೂ ಬೇರೆ ಯಾವುದೂ ಇಲ್ಲ. ಓಡುವ ಜಗತ್ತಿನಲ್ಲಿ ಬುದ್ದಿವಂತಿಕೆ ಮತ್ತು ಮಾನವೀಯತೆಗಳು ಮುಖ್ಯವಾಗುತ್ತವೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ಮನೋವೈದ್ಯ ಕೆ.ಎಸ್ ಪವಿತ್ರ ಮಾತನಾಡಿ ಜನಪದರ ಕತೆಗಳು ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಪೂರಕ ವಾದುದು. ಕೇಳುವುದರ ಮೂಲಕ ಹೊಸದೊಂದು ಸನ್ನಿವೇಶ ತಂದು ಹೇಳ ಬಹುದು ಆದರೆ ಬರಹ ಸವಾಲಿನದು. ಅದನ್ನು ಗಣೇಶ ಕೆಂಚನಾಲ ಕೇಳುಗರ ಮೂಲಕ ಸಾಧ್ಯವಾಗಿಸಿದ್ದಾರೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಗಣೇಶ ಕೆಂಚನಾಲ ಕಥೆ ಕಟ್ಟುವ ಕಾರ್ಯಕ್ರಮ ಆಕಾಶವಾಣಿ ಕೇಂದ್ರದಿಂದ 2023 ರಿಂದ ಆರಂಭವಾಗಿದ್ದು ಈ ವರೆಗೆ ಸುಮಾರು ನೂರು ಕತೆಗಳು ಬಿತ್ತರಗೊಂಡಿವೆ. ಎಲ್ಲವೂ ಪುಸ್ತಕ ರೂಪದಲ್ಲಿ ತರಲಾಗುವುದು. ಕಥೆಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುತ್ತವೆ ಎಂದರು. ಯುವಜನತೆ ಒಳ್ಳೆಯದನ್ನು ಕೇಳುವ, ನೋಡುವ, ಓದುವ ಕೆಲಸದಲ್ಲಿ ನಿರತರಾಗಬೇಕು ಎಂದರು. ಪ್ರಾಂಶುಪಾಲ ಶಶಿಧರ ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಬಸವರಾಜ ನೆಲ್ಲಿಸರ, ಕೇಳುಗ ಬಳಗದ ಸಂಚಾಲಕ ಜಿ.ವಿಜಯ ಕುಮಾರ, ಆರ್ ಮನೋಹರ, ಕನ್ನಡ ವಿಭಾಗದ ಮುಖ್ಯಸ್ಥ ರವಿ ಎನ್. ಪ್ರಾಧ್ಯಾಪಕರಾದ ಕೆ.ಪಿ.ಪವಿತ್ರ, ಡಾ.ಚಿಕ್ಕ ಹೆಗಡೆ, ಮಂಜುಳ, ಶ್ವೇತ ಉಪಸ್ಥಿತಿ ಇದ್ದರು. ಡಾ.ಮಂಜುನಾಥ ಪ್ರಾರ್ಥಿಸಿ,ನಂದಿನಿ ನಿರೂಪಿಸಿದರೆ,ಡಾ.ಅಣ್ಣಪ್ಪ ಎನ್. ಮಳೀಮಠ್ ವಂದಿಸಿದರು. ಆಕಾಶವಾಣಿ ಆರ್ ಜೆ ಬಳಗ ಸೇರಿದಂತೆ ಆಕಾಶವಾಣಿ ಕೇಳುಗರು, ಸಾಹಿತ್ಯಾಸಕ್ತರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು.

1 day ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
1 day ago
b25ed4da-57da-47ee-9dfa-ab816d554049

ಶಿವಮೊಗ್ಗ-ಕಥೆಗಳು ಕಣ್ಮರೆ ಯಾಗುತ್ತಿದೆ: ಡಾ.ವಿಜಯಾ ದೇವಿ ಶಿವಮೊಗ್ಗ: ಈ ಹೊತ್ತಿಗೆ ಮಕ್ಕಳಿಂದ ಹಿಡಿದು ಎಲ್ಲರಲ್ಲೂ ನೈತಿಕತೆ ಪ್ರಜ್ಞೆ ಮೂಡಲು ಕಥೆಗಳು ಸಹಾಯಕವಾಗಿದೆ. ಆಧುನಿಕತೆಯಲ್ಲಿ ಕಣ್ಮರೆಯಾಗುತ್ತಿರುವುದು ದುರಂತಕ್ಕೆ ಕಾರಣವಾಗುತ್ತಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲ ಯದ ಎಮಿರೇಟ್ಸ್ ಪ್ರಾಧ್ಯಾಪಕರಾದ ಡಾ. ವಿಜಯ ದೇವಿ ಹೇಳಿದರು. ಅವರು ಇಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಭದ್ರಾವತಿ ಆಕಾಶವಾಣಿ ಕೇಂದ್ರದ ಕೇಳುಗರ ಬಳಗ, ರೇಣುಕಪ್ಪಗೌಡ ಪ್ರತಿಷ್ಠಾನ, ಜಿಲ್ಲಾ ಸರ್ವೋದಯ ಮಂಡಲ, ಕಾಲೇಜಿನ ಕನ್ನಡ ವಿಭಾಗ, ಸಾಂಸ್ಕೃತಿಕ ವೇದಿಕೆ ಸಹಯೋಗ ದಲ್ಲಿ ಆರ್ ಜೆ ಗಣೇಶ್ ಕೆಂಚನಾಲ್ ಅವರ ಬಾನುಲಿಯಿಂದ 'ಕಥೆ ನಿಮ್ಮ ಜೊತೆ' ಪುಸ್ತಕವನ್ನು, ಆಕಾಶವಾಣಿ ಕೇಳುಗ ರೊಂದಿಗೆ ಬಿಡುಗಡೆ ಮಾಡಿ ಮಾತನಾಡಿದರು. ಜಗತಿನಲ್ಲಿ ಜೀವಂತಿಕೆ ನಡೆಯುತ್ತಿರುವುದು ಸೃಜನಶೀಲತೆಯ ಕಾರಣದಿಂದ. ಸಾಹಿತ್ಯದ ಮೂಲ ದ್ರವ್ಯ ಗ್ರಾಮೀಣ ಬದುಕಿನಲ್ಲಿದೆ. ಅಂತಹ ಗ್ರಾಮೀಣ ಬದುಕಿನ ಸತ್ವವು ಈ ಕತೆ ಪುಸ್ತಕದಲ್ಲಿದೆ. ನೈತಿಕ ಮೌಲ್ಯಗಳ ಅಂತಸತ್ವವವನ್ನು ಕತೆಗಳ ಮೂಲಕ ಬಿತ್ತರಿಸುವುದು ಅಗತ್ಯವಾಗಿದೆ. ಬರಹ ಕೇವಲ ಸಂತಸವನ್ನು ನೀಡುವುದಲ್ಲ. ಬದಲಿಗೆ ವೈಯಕ್ತಿಕ ಜವಾಬ್ದಾರಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಕಲಿಸುತ್ತದೆ. ವೃತ್ತಿಯ ಮೂಲಕ ಸಮಾಜದ ಆರೋಗ್ಯವನ್ನು ಬಯಸುವ ಆಶಯ ಬಹಳ ಮುಖ್ಯ. ಕೃತಿಯೊಂದು ಸಮಾಜದ ಮಾನವೀಯ ಮೌಲ್ಯಗಳನ್ನು ಬೆಳೆಸಿದರೆ ಅದಕ್ಕಿಂತಲೂ ಬೇರೆ ಯಾವುದೂ ಇಲ್ಲ. ಓಡುವ ಜಗತ್ತಿನಲ್ಲಿ ಬುದ್ದಿವಂತಿಕೆ ಮತ್ತು ಮಾನವೀಯತೆಗಳು ಮುಖ್ಯವಾಗುತ್ತವೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ಮನೋವೈದ್ಯ ಕೆ.ಎಸ್ ಪವಿತ್ರ ಮಾತನಾಡಿ ಜನಪದರ ಕತೆಗಳು ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಪೂರಕ ವಾದುದು. ಕೇಳುವುದರ ಮೂಲಕ ಹೊಸದೊಂದು ಸನ್ನಿವೇಶ ತಂದು ಹೇಳ ಬಹುದು ಆದರೆ ಬರಹ ಸವಾಲಿನದು. ಅದನ್ನು ಗಣೇಶ ಕೆಂಚನಾಲ ಕೇಳುಗರ ಮೂಲಕ ಸಾಧ್ಯವಾಗಿಸಿದ್ದಾರೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಗಣೇಶ ಕೆಂಚನಾಲ ಕಥೆ ಕಟ್ಟುವ ಕಾರ್ಯಕ್ರಮ ಆಕಾಶವಾಣಿ ಕೇಂದ್ರದಿಂದ 2023 ರಿಂದ ಆರಂಭವಾಗಿದ್ದು ಈ ವರೆಗೆ ಸುಮಾರು ನೂರು ಕತೆಗಳು ಬಿತ್ತರಗೊಂಡಿವೆ. ಎಲ್ಲವೂ ಪುಸ್ತಕ ರೂಪದಲ್ಲಿ ತರಲಾಗುವುದು. ಕಥೆಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುತ್ತವೆ ಎಂದರು. ಯುವಜನತೆ ಒಳ್ಳೆಯದನ್ನು ಕೇಳುವ, ನೋಡುವ, ಓದುವ ಕೆಲಸದಲ್ಲಿ ನಿರತರಾಗಬೇಕು ಎಂದರು. ಪ್ರಾಂಶುಪಾಲ ಶಶಿಧರ ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಬಸವರಾಜ ನೆಲ್ಲಿಸರ, ಕೇಳುಗ ಬಳಗದ ಸಂಚಾಲಕ ಜಿ.ವಿಜಯ ಕುಮಾರ, ಆರ್ ಮನೋಹರ, ಕನ್ನಡ ವಿಭಾಗದ ಮುಖ್ಯಸ್ಥ ರವಿ ಎನ್. ಪ್ರಾಧ್ಯಾಪಕರಾದ ಕೆ.ಪಿ.ಪವಿತ್ರ, ಡಾ.ಚಿಕ್ಕ ಹೆಗಡೆ, ಮಂಜುಳ, ಶ್ವೇತ ಉಪಸ್ಥಿತಿ ಇದ್ದರು. ಡಾ.ಮಂಜುನಾಥ ಪ್ರಾರ್ಥಿಸಿ,ನಂದಿನಿ ನಿರೂಪಿಸಿದರೆ,ಡಾ.ಅಣ್ಣಪ್ಪ ಎನ್. ಮಳೀಮಠ್ ವಂದಿಸಿದರು. ಆಕಾಶವಾಣಿ ಆರ್ ಜೆ ಬಳಗ ಸೇರಿದಂತೆ ಆಕಾಶವಾಣಿ ಕೇಳುಗರು, ಸಾಹಿತ್ಯಾಸಕ್ತರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು.

More news from ಕರ್ನಾಟಕ and nearby areas
  • ಚಿತ್ರದುರ್ಗ, ಬಿಸಿಲ ಝಳ-ಜನರಿಗೆ ತಂಪು ನೀರಿನ ವ್ಯವಸ್ಥೆ ಚಿತ್ರದುರ್ಗ ಜಿಲ್ಲೆ‌,ಮೊಳಕಾಲ್ಮೂರಲ್ಲಿ ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದು, ಜನರ ತಾಪ ತಣ್ಣಗಾಗಿಸಲು ಹಾನಗಲ್‌ ಗೆಳೆಯರ ಬಳಗದಿಂದ ಶುದ್ಧ ಹಾಗೂ ತಂಪು ನಿರಿನ ಅರವಟ್ಟಿಗೆ ನಿರ್ಮಿಸಿ ವಿನೂತನ ಪ್ರಯತ್ನ ಮಾಡಿದ್ದಾರೆ. ಮೊಳಕಾಲ್ಮೂರು ತಾಲೂಕಿನ ಹಾನಗಲ್ ಕ್ರಾಸ್ ನಲ್ಲಿ ಜನರ ತೃಷೆ ಇಂಗಿಸಲು ಹಾನಗಲ್‌ ಗೆಳೆಯರ ಬಳಗದಿಂದ ಅರಟಿಕೆ ನಿರ್ಮಾಣ ಮಾಡಿದ್ದಾರೆ. ತೆಂಗಿನ ಗರಿಗಳಿಂದ ಚಪ್ಪರ ಹಾಕಿ, ಮಣ್ಣಿನ‌ ಮಡಿಕೆಗಳಲ್ಲಿ ತಂಪಾದ ಶುದ್ಧ ಕುಡಿಯುವ ನಿರನ್ನು ಇಟ್ಟಿದ್ದಾರೆ. ಮೊಳಕಾಲ್ಮೂರು ತಾಲೂಕು ಮೊದಲೇ ಹೆಚ್ವು ಬಿಸಿಲು ದಾಖಲಾಗೋದ್ರಿಂದ ಜನರ ಬಾಯಾರಿಕೆ ನೋಗಿಸಲು ಪ್ರತಿನಿತ್ಯ ಈ ಮಡಕೆಗಳಿಗೆ ಶುದ್ಧ ಕುಡಿಯುವ ನೀರನ್ನು ತುಂಬಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಇದರಿಂದ ತುಂಬಾ ಸಹಾಯವಾಗಿದೆ. ಹಾನಗಲ್ ಗೆಳೆಯರ ಬಳಗದ ಈ ಪ್ರಯತ್ನಕ್ಕೆ ಸಾರ್ವಜನಿಕರು ಭೇಷ್ ಎಂದಿದ್ದಾರೆ....
    1
    ಚಿತ್ರದುರ್ಗ,
ಬಿಸಿಲ ಝಳ-ಜನರಿಗೆ ತಂಪು ನೀರಿನ ವ್ಯವಸ್ಥೆ
ಚಿತ್ರದುರ್ಗ ಜಿಲ್ಲೆ‌,ಮೊಳಕಾಲ್ಮೂರಲ್ಲಿ ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದು, ಜನರ ತಾಪ ತಣ್ಣಗಾಗಿಸಲು ಹಾನಗಲ್‌ ಗೆಳೆಯರ ಬಳಗದಿಂದ ಶುದ್ಧ ಹಾಗೂ ತಂಪು ನಿರಿನ ಅರವಟ್ಟಿಗೆ ನಿರ್ಮಿಸಿ ವಿನೂತನ ಪ್ರಯತ್ನ ಮಾಡಿದ್ದಾರೆ.
ಮೊಳಕಾಲ್ಮೂರು ತಾಲೂಕಿನ ಹಾನಗಲ್ ಕ್ರಾಸ್ ನಲ್ಲಿ ಜನರ ತೃಷೆ ಇಂಗಿಸಲು ಹಾನಗಲ್‌ ಗೆಳೆಯರ ಬಳಗದಿಂದ ಅರಟಿಕೆ ನಿರ್ಮಾಣ ಮಾಡಿದ್ದಾರೆ. ತೆಂಗಿನ ಗರಿಗಳಿಂದ ಚಪ್ಪರ ಹಾಕಿ, ಮಣ್ಣಿನ‌ ಮಡಿಕೆಗಳಲ್ಲಿ ತಂಪಾದ ಶುದ್ಧ ಕುಡಿಯುವ ನಿರನ್ನು ಇಟ್ಟಿದ್ದಾರೆ. ಮೊಳಕಾಲ್ಮೂರು ತಾಲೂಕು ಮೊದಲೇ ಹೆಚ್ವು ಬಿಸಿಲು ದಾಖಲಾಗೋದ್ರಿಂದ ಜನರ ಬಾಯಾರಿಕೆ ನೋಗಿಸಲು ಪ್ರತಿನಿತ್ಯ ಈ ಮಡಕೆಗಳಿಗೆ ಶುದ್ಧ ಕುಡಿಯುವ ನೀರನ್ನು ತುಂಬಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಇದರಿಂದ ತುಂಬಾ ಸಹಾಯವಾಗಿದೆ. ಹಾನಗಲ್ ಗೆಳೆಯರ ಬಳಗದ ಈ ಪ್ರಯತ್ನಕ್ಕೆ ಸಾರ್ವಜನಿಕರು ಭೇಷ್ ಎಂದಿದ್ದಾರೆ....
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಸೋಮವಾರ ಬೆಂಕಿ ಬಿದ್ದು ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಜನಧ್ವನಿ ನ್ಯೂಸ್ ಪ್ರಕಟಿಸಿದ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ. ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಬುಧವಾರ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರಿಗೆ ಒಂದು ಲೋಡ್ ಭತ್ತದ ಮೇವನ್ನು ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ರೈತರು ಹಾಗೂ ಜಾನುವಾರುಗಳ ಪಾಲನೆ-ಪೋಷಣೆ ಮಾಡುವಲ್ಲಿ ಎದುರಿಸುವ ಕಷ್ಟಗಳನ್ನು ನಾನು ಚೆನ್ನಾಗಿ ಅರಿತಿದ್ದೇನೆ. ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಬೆಂಕಿ ಬಿದ್ದು ಉಂಟಾದ ನಷ್ಟದ ಕುರಿತು ಜನಧ್ವನಿ ನ್ಯೂಸ್ ವರದಿ ನೋಡಿ ಮನಸ್ಸಿಗೆ ಬೇಸರವಾಯಿತು. ಆದ್ದರಿಂದ ರೈತನ ಜಾನುವಾರುಗಳಿಗೆ ನೆರವಾಗುವ ಉದ್ದೇಶದಿಂದ ಮೇವು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮೇವು ನೆರವು ನೀಡಿದ ಶ್ರೀ ಜಪಾನಂದ ಸ್ವಾಮೀಜಿಗಳಿಗೆ ರೈತ ನಾಗರಾಜ್ ಕೃತಜ್ಞತೆ ಸಲ್ಲಿಸಿದರು.
    1
    ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಸೋಮವಾರ ಬೆಂಕಿ ಬಿದ್ದು ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಜನಧ್ವನಿ ನ್ಯೂಸ್ ಪ್ರಕಟಿಸಿದ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ.
ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಬುಧವಾರ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರಿಗೆ ಒಂದು ಲೋಡ್ ಭತ್ತದ ಮೇವನ್ನು ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಈ ವೇಳೆ ಮಾತನಾಡಿದ ಅವರು, ರೈತರು ಹಾಗೂ ಜಾನುವಾರುಗಳ ಪಾಲನೆ-ಪೋಷಣೆ ಮಾಡುವಲ್ಲಿ ಎದುರಿಸುವ ಕಷ್ಟಗಳನ್ನು ನಾನು ಚೆನ್ನಾಗಿ ಅರಿತಿದ್ದೇನೆ. ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಬೆಂಕಿ ಬಿದ್ದು ಉಂಟಾದ ನಷ್ಟದ ಕುರಿತು ಜನಧ್ವನಿ ನ್ಯೂಸ್ ವರದಿ ನೋಡಿ ಮನಸ್ಸಿಗೆ ಬೇಸರವಾಯಿತು. ಆದ್ದರಿಂದ ರೈತನ ಜಾನುವಾರುಗಳಿಗೆ ನೆರವಾಗುವ ಉದ್ದೇಶದಿಂದ ಮೇವು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೇವು ನೆರವು ನೀಡಿದ ಶ್ರೀ ಜಪಾನಂದ ಸ್ವಾಮೀಜಿಗಳಿಗೆ ರೈತ ನಾಗರಾಜ್ ಕೃತಜ್ಞತೆ ಸಲ್ಲಿಸಿದರು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಎನ್ ನಾಯಕ್, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ರೈತ ಸಂಘ ಹಾಗೂ ಆಮ್ ಆದ್ಮಿ ಪಕ್ಷ ದಿನಾಂಕ 11-03-2026 ರಂದು ಬ್ಯಾಡಗಿ ಶಹರದಲ್ಲಿ, ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡು ಒಳ ಮೀಸಲಾತಿ ಹೋರಾಟಕ್ಕೆ ಆಮ್ ಆದ್ಮಿ ಪಕ್ಷದಿಂದ ಸಂಪೂರ್ಣ ಬೆಂಬಲ ನೀಡಲಾಯಿತು, ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಆನಂದ ಸ್ವಾಮಿ, ಚಂದ್ರಶೇಖರ್ ಗದಗ್ಕರ್, ನಾಗರಾಜ್ ಹಿರೇಮಠ, ಸಾಧಿ ಕಲ್ಲಾಪುರ್, ಸಂಕಪ್ಪ ಮುಂದಿನಮನೆ, ಗುಡ್ಡೆಶ್, ದಾದಾಪೀರ್ ಸುಡಂಬಿ ಉಪಸ್ಥಿತರಿದ್ದರು.
    1
    ಎನ್ ನಾಯಕ್, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ರೈತ ಸಂಘ ಹಾಗೂ ಆಮ್ ಆದ್ಮಿ ಪಕ್ಷ ದಿನಾಂಕ 11-03-2026 ರಂದು ಬ್ಯಾಡಗಿ ಶಹರದಲ್ಲಿ,  ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟದಲ್ಲಿ ಪಾಲ್ಗೊಂಡು ಒಳ ಮೀಸಲಾತಿ ಹೋರಾಟಕ್ಕೆ ಆಮ್ ಆದ್ಮಿ ಪಕ್ಷದಿಂದ ಸಂಪೂರ್ಣ ಬೆಂಬಲ ನೀಡಲಾಯಿತು, ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಆನಂದ ಸ್ವಾಮಿ, ಚಂದ್ರಶೇಖರ್ ಗದಗ್ಕರ್, ನಾಗರಾಜ್ ಹಿರೇಮಠ, ಸಾಧಿ ಕಲ್ಲಾಪುರ್, ಸಂಕಪ್ಪ ಮುಂದಿನಮನೆ, ಗುಡ್ಡೆಶ್, ದಾದಾಪೀರ್ ಸುಡಂಬಿ ಉಪಸ್ಥಿತರಿದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು. ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು ಘೋಷಿಸಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
    4
    ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು.
ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು ಘೋಷಿಸಿ
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು.
ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
  • ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ರಂಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿ ಫಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಖ್ಯಾತ ಸಾಹಿತಿ, ನಿವೃತ್ತ ಶಿಕ್ಷಕಿ ಬಿ.ಎಂ. ರೋಹಿಣಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬೆಥನಿ ಮುಖ್ಯಸ್ಥೆ ಸಿಸ್ಟರ್ ರೋಸ್ ಮೇರಿ, ಬಾವುಟಗುಡ್ಡ ಝೀನತ್ ಬಕ್ಷ್ ಜುಮಾ ಮಸ್ಜಿದ್‌ನ ಉಪಾಧ್ಯಕ್ಷ ಕೆ. ಅಶ್ರಫ್ ಮಾತನಾಡಿ ಸೌಹಾರ್ದತೆಯ ಅಗತ್ಯ ಮತ್ತು ಮಹತ್ವವನ್ನು ಸಾರಿದರು. ವೇದಿಕೆಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಪ್ರೀತಿಯನ್ನು ಹಂಚುವ ವೇದಿಕೆಯ ಉದ್ದೇಶಗಳನ್ನು ವಿವರಿಸಿದರು. ಸಾಮರಸ್ಯ ಮಂಗಳೂರು ಮುಖ್ಯಸ್ಥೆ ಮಂಜುಳಾ ನಾಯಕ್ ವೇದಿಕೆಯಲ್ಲಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಸರ್ವಧರ್ಮೀಯರು ಸೇರಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.
    1
    ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ರಂಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿ ಫಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಖ್ಯಾತ ಸಾಹಿತಿ, ನಿವೃತ್ತ ಶಿಕ್ಷಕಿ ಬಿ.ಎಂ. ರೋಹಿಣಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬೆಥನಿ ಮುಖ್ಯಸ್ಥೆ ಸಿಸ್ಟರ್ ರೋಸ್ ಮೇರಿ, ಬಾವುಟಗುಡ್ಡ ಝೀನತ್ ಬಕ್ಷ್ ಜುಮಾ ಮಸ್ಜಿದ್‌ನ ಉಪಾಧ್ಯಕ್ಷ ಕೆ. ಅಶ್ರಫ್ ಮಾತನಾಡಿ ಸೌಹಾರ್ದತೆಯ ಅಗತ್ಯ ಮತ್ತು ಮಹತ್ವವನ್ನು ಸಾರಿದರು.
ವೇದಿಕೆಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಪ್ರೀತಿಯನ್ನು ಹಂಚುವ ವೇದಿಕೆಯ ಉದ್ದೇಶಗಳನ್ನು ವಿವರಿಸಿದರು. ಸಾಮರಸ್ಯ ಮಂಗಳೂರು ಮುಖ್ಯಸ್ಥೆ ಮಂಜುಳಾ ನಾಯಕ್ ವೇದಿಕೆಯಲ್ಲಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಸರ್ವಧರ್ಮೀಯರು ಸೇರಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    29 min ago
  • Post by Sunil Sunil
    1
    Post by Sunil Sunil
    user_Sunil Sunil
    Sunil Sunil
    ಚನ್ನರಾಯಪಟ್ಟಣ, ಹಾಸನ, ಕರ್ನಾಟಕ•
    13 hrs ago
  • ಮೇಡಮ್ ಬರ್ತಾವ್ರೆ ತುಮಕೂರಿಗೆ
    1
    ಮೇಡಮ್ ಬರ್ತಾವ್ರೆ ತುಮಕೂರಿಗೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
  • "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೂಲಗಿತ್ತಿ ತಿಮ್ಮಕ್ಕಗೆ ಸನ್ಮಾನ". ಚಳ್ಳಕೆರೆ:-ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಪ್ರಯುಕ್ತ ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕಗೆ ಸನ್ಮಾನಿಸಿ ಗೌರವಧನ ನೀಡಿ ಗೌರವಿಸಲಾಯಿತು. "ಸಂಸ್ಕೃತಿ ಮತ್ತು ಸಂಪ್ರಾದಯಗಳ ಉಳುವಿನಲ್ಲಿ ಮಹಿಳೆಯ ಪಾತ್ರ"ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿರ್ದೇಶಕಿ ಶ್ರೀಮತಿ ಗೀತಾ ಪ್ರಕಾಶ್ ಅವರು ಭಾರತೀಯ ಸನಾತನ ಪರಂಪರೆಯ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಉಳಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.ಇದರ ಭಾಗವಾಗಿ ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು ಕಿವಿಮಾತು ಹೇಳಿದರು. ಮಹಿಳಾ ದಿನಾಚರಣೆಯ ಪ್ರಯುಕ್ತ ವೀರಶೈವ ಮಹಿಳೆಯರಿಂದ ಭಾರತದ ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ವೀರಶೈವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ,ಸುಮಾ, ಮಮತಾ,ವನಜಾ, ಸೌಮ್ಯಲತಾ, ಮಂಗಳಾ,ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ, ಪ್ರಮೀಳಾ, ತಳುಕಿನ ತೊಯಜಾಕ್ಷಿ, ಜಗದಂಬಾ, ಶಾಂತಮ್ಮ, ರತ್ನಮ್ಮ, ಪುಷ್ಪಲತಾ, ಅನಿತಾ,ಜಾನಕಿ, ಶೈಲಜಾ, ವಿಶಾಲಾಕ್ಷಿ, ಯಶೋಧಾ,ಶಾರದಾ, ತಿಪ್ಪಮ್ಮ,ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವೀರಶೈವ ಮಹಿಳಾ ಸಂಘದ ಸದಸ್ಯರು ಇದ್ದರು.
    1
    "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೂಲಗಿತ್ತಿ ತಿಮ್ಮಕ್ಕಗೆ ಸನ್ಮಾನ".                          ಚಳ್ಳಕೆರೆ:-ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಪ್ರಯುಕ್ತ ಕಾಲುವೆಹಳ್ಳಿಯ  ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕಗೆ  ಸನ್ಮಾನಿಸಿ ಗೌರವಧನ ನೀಡಿ ಗೌರವಿಸಲಾಯಿತು.                                                         "ಸಂಸ್ಕೃತಿ ಮತ್ತು ಸಂಪ್ರಾದಯಗಳ  ಉಳುವಿನಲ್ಲಿ ಮಹಿಳೆಯ ಪಾತ್ರ"ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿರ್ದೇಶಕಿ ಶ್ರೀಮತಿ ಗೀತಾ ಪ್ರಕಾಶ್ ಅವರು ಭಾರತೀಯ ಸನಾತನ ಪರಂಪರೆಯ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಉಳಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.ಇದರ ಭಾಗವಾಗಿ ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು ಕಿವಿಮಾತು ಹೇಳಿದರು.                   ಮಹಿಳಾ ದಿನಾಚರಣೆಯ ಪ್ರಯುಕ್ತ ವೀರಶೈವ ಮಹಿಳೆಯರಿಂದ ಭಾರತದ  ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ ನಡೆಯಿತು.                                    ಕಾರ್ಯಕ್ರಮದಲ್ಲಿ ವೀರಶೈವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ,ಸುಮಾ, ಮಮತಾ,ವನಜಾ, ಸೌಮ್ಯಲತಾ, ಮಂಗಳಾ,ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ, ಪ್ರಮೀಳಾ,                   ತಳುಕಿನ ತೊಯಜಾಕ್ಷಿ, ಜಗದಂಬಾ, ಶಾಂತಮ್ಮ, ರತ್ನಮ್ಮ, ಪುಷ್ಪಲತಾ, ಅನಿತಾ,ಜಾನಕಿ, ಶೈಲಜಾ, ವಿಶಾಲಾಕ್ಷಿ, ಯಶೋಧಾ,ಶಾರದಾ, ತಿಪ್ಪಮ್ಮ,ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವೀರಶೈವ ಮಹಿಳಾ ಸಂಘದ ಸದಸ್ಯರು ಇದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.