ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರಿಗೆ ಸದ್ಗುರು ಶ್ರೀ ಮಧುಸೂದನ ಸಾಯಿ ನಮನ ಗ್ರಾಮೀಣ ಯುವಕರಿಗೆ ಜಾಗತಿಕ ಅವಕಾಶ ಕಲ್ಪಿಸುವುದೇ ವಿಶ್ವೇಶ್ವರಯ್ಯ ಕನಸು: ಸದ್ಗುರು ಶ್ರೀ ಮಧುಸೂದನ ಸಾಯಿ ಚಿಕ್ಕಬಳ್ಳಾಪುರ : ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ 165ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳವಾರ (ಸೆ 15) 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್'ನ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೇಶಕ್ಕೆ ವಿಶ್ವೇಶ್ವರಯ್ಯನವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು. ಗ್ರಾಮೀಣ ಪ್ರದೇಶವಾದ ಮುದ್ದೇನಹಳ್ಳಿಯಿಂದಲೇ ತಮ್ಮ ಅಚಲ ಸಂಕಲ್ಪ ಮತ್ತು ಪರಿಶ್ರಮದ ಮೂಲಕ ದೇಶ ಹೆಮ್ಮೆಪಡುವ ಎಂಜಿನಿಯರ್ ಆಗಿ, ಭಾರತದ ಭವಿಷ್ಯ ಬರೆಯಬಲ್ಲ ಶಿಲ್ಪಿಯಾಗಿ ವಿಶ್ವೇಶ್ವರಯ್ಯ ರೂಪುಗೊಂಡರು. ಅವರ ಬದುಕು ಮತ್ತು ಸಾಧನೆಗಳು ಇಂದಿನ ಯುವಜನತೆಗೆ ಆದರ್ಶವಾಗಿವೆ ಎಂದು ಹೇಳಿದರು. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಮುದ್ದೇನಹಳ್ಳಿಯಲ್ಲಿ 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್' ವತಿಯಿಂದ ರೂರಲ್ಶೋರ್ಸ್ ಸಹಯೋಗದೊಂದಿಗೆ ಈ ವರ್ಷದ ಜುಲೈನಲ್ಲಿ 'ಎಐ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್' ಆರಂಭಿಸಿರುವುದನ್ನು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು. ///ಗ್ರಾಮೀಣ ಯುವಕರಿಗೆ ಎಐ ಕೌಶಲ್ಯ ತರಬೇತಿ/// ಸರ್ ಎಂ.ವಿಶ್ವೇಶ್ವರಯ್ಯ ರೂರಲ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಸ್ಕಿಲ್ ಆ್ಯಂಡ್ ಎಕ್ಸ್ಪೀರಿಯನ್ಸ್ (RAISE) ಸೆಂಟರ್ನಲ್ಲಿ ಗ್ರಾಮೀಣ ಯುವಕರಿಗೆ ಜನರೇಟಿವ್ ಎಐ ಕುರಿತು ತರಬೇತಿ ನೀಡಲಾಗುತ್ತಿದೆ. ಪ್ರಾಯೋಗಿಕ ಯೋಜನೆಗಳಲ್ಲಿ ಕೆಲಸ ಮಾಡುವ ಅವಕಾಶ, ಉದ್ಯಮಗಳೊಂದಿಗೆ ಸಂಪರ್ಕ, ಆಧುನಿಕ ತಂತ್ರಜ್ಞಾನದ ಕುರಿತು ಅರಿವು ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಜಾಗತಿಕ ಮಟ್ಟದ ಡಿಜಿಟಲ್ ಉದ್ಯೋಗಗಳಿಗೆ ಗ್ರಾಮೀಣ ಯುವಕರನ್ನು ಸಜ್ಜುಗೊಳಿಸುವುದು ಕೇಂದ್ರದ ಪ್ರಮುಖ ಉದ್ದೇಶವಾಗಿದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ವಿವರಿಸಿದರು. ಗ್ರಾಮೀಣ ಪ್ರತಿಭೆಯನ್ನು ಜಾಗತಿಕ ಡಿಜಿಟಲ್ ಆರ್ಥಿಕತೆಯೊಂದಿಗೆ ಜೋಡಿಸುವುದು ಹಾಗೂ ಗ್ರಾಮಗಳಲ್ಲಿಯೇ ತಂತ್ರಜ್ಞಾನ ಆಧಾರಿತ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು RAISE ಕೇಂದ್ರದ ಮುಖ್ಯ ಗುರಿಯಾಗಿದೆ. ಗ್ರಾಮೀಣ ಯುವಕರಿಗೂ ನಗರ ಪ್ರದೇಶದ ಯುವಕರಿಗೆ ಸಮಾನವಾದ ಅವಕಾಶಗಳು ದೊರೆಯಬೇಕು ಎಂಬ ವಿಶ್ವೇಶ್ವರಯ್ಯ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಸಣ್ಣ ಪ್ರಯತ್ನ ಇದಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳದಲ್ಲಿ ಅವರ ಮೊಮ್ಮಗ ಸತೀಶ್ ಮೋಕ್ಷಗೊಂಡಂ ಅವರು ಸದ್ಗುರು ಶ್ರೀ ಮಧುಸೂದನ ಸಾಯಿ ಅವರನ್ನು ಆತ್ಮೀಯವಾಗಿ ಆಹ್ವಾನಿಸಿ ಗೌರವಿಸಿದರು. ಪ್ರಶಾಂತಿ ಬಾಲ ಮಂದಿರ ಟ್ರಸ್ಟ್ ಅಧ್ಯಕ್ಷ ಡಾ ಬಿ.ಎನ್. ನರಸಿಂಹಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಚಿತ್ರ ಶೀರ್ಷಿಕೆಗಳು 1) ಚಿಕ್ಕಬಳ್ಳಾಪುರ ತಾಲ್ಲೂಕು ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿಗೆ ಗೌರವ ನಮನ ಸಲ್ಲಿಸಲು ಆಗಮಿಸಿದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರನ್ನು ವಿಶ್ವೇಶ್ವರಯ್ಯನವರ ಮೊಮ್ಮಗ ಸತೀಶ್ ಮೋಕ್ಷಗೊಂಡಂ ಆತ್ಮೀಯವಾಗಿ ಸ್ವಾಗತಿಸಿದರು. 2) ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ವಿಶ್ವೇಶ್ವರಯ್ಯನವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಪ್ರಶಾಂತಿ ಬಾಲ ಮಂದಿರ ಟ್ರಸ್ಟ್ ಅಧ್ಯಕ್ಷ ಡಾ ಬಿ.ಎನ್.ನರಸಿಂಹಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರಿಗೆ ಸದ್ಗುರು ಶ್ರೀ ಮಧುಸೂದನ ಸಾಯಿ ನಮನ ಗ್ರಾಮೀಣ ಯುವಕರಿಗೆ ಜಾಗತಿಕ ಅವಕಾಶ ಕಲ್ಪಿಸುವುದೇ ವಿಶ್ವೇಶ್ವರಯ್ಯ ಕನಸು: ಸದ್ಗುರು ಶ್ರೀ ಮಧುಸೂದನ ಸಾಯಿ ಚಿಕ್ಕಬಳ್ಳಾಪುರ : ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ 165ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳವಾರ (ಸೆ 15) 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್'ನ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೇಶಕ್ಕೆ ವಿಶ್ವೇಶ್ವರಯ್ಯನವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು. ಗ್ರಾಮೀಣ ಪ್ರದೇಶವಾದ ಮುದ್ದೇನಹಳ್ಳಿಯಿಂದಲೇ ತಮ್ಮ ಅಚಲ ಸಂಕಲ್ಪ ಮತ್ತು ಪರಿಶ್ರಮದ ಮೂಲಕ ದೇಶ ಹೆಮ್ಮೆಪಡುವ ಎಂಜಿನಿಯರ್ ಆಗಿ, ಭಾರತದ ಭವಿಷ್ಯ ಬರೆಯಬಲ್ಲ ಶಿಲ್ಪಿಯಾಗಿ ವಿಶ್ವೇಶ್ವರಯ್ಯ ರೂಪುಗೊಂಡರು. ಅವರ ಬದುಕು ಮತ್ತು ಸಾಧನೆಗಳು ಇಂದಿನ ಯುವಜನತೆಗೆ ಆದರ್ಶವಾಗಿವೆ ಎಂದು ಹೇಳಿದರು. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಮುದ್ದೇನಹಳ್ಳಿಯಲ್ಲಿ 'ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್' ವತಿಯಿಂದ ರೂರಲ್ಶೋರ್ಸ್ ಸಹಯೋಗದೊಂದಿಗೆ ಈ ವರ್ಷದ ಜುಲೈನಲ್ಲಿ 'ಎಐ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್' ಆರಂಭಿಸಿರುವುದನ್ನು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು. ///ಗ್ರಾಮೀಣ ಯುವಕರಿಗೆ ಎಐ ಕೌಶಲ್ಯ ತರಬೇತಿ/// ಸರ್ ಎಂ.ವಿಶ್ವೇಶ್ವರಯ್ಯ ರೂರಲ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಸ್ಕಿಲ್ ಆ್ಯಂಡ್ ಎಕ್ಸ್ಪೀರಿಯನ್ಸ್ (RAISE) ಸೆಂಟರ್ನಲ್ಲಿ ಗ್ರಾಮೀಣ ಯುವಕರಿಗೆ ಜನರೇಟಿವ್ ಎಐ ಕುರಿತು ತರಬೇತಿ ನೀಡಲಾಗುತ್ತಿದೆ. ಪ್ರಾಯೋಗಿಕ ಯೋಜನೆಗಳಲ್ಲಿ ಕೆಲಸ ಮಾಡುವ ಅವಕಾಶ, ಉದ್ಯಮಗಳೊಂದಿಗೆ ಸಂಪರ್ಕ,
ಆಧುನಿಕ ತಂತ್ರಜ್ಞಾನದ ಕುರಿತು ಅರಿವು ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಜಾಗತಿಕ ಮಟ್ಟದ ಡಿಜಿಟಲ್ ಉದ್ಯೋಗಗಳಿಗೆ ಗ್ರಾಮೀಣ ಯುವಕರನ್ನು ಸಜ್ಜುಗೊಳಿಸುವುದು ಕೇಂದ್ರದ ಪ್ರಮುಖ ಉದ್ದೇಶವಾಗಿದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ವಿವರಿಸಿದರು. ಗ್ರಾಮೀಣ ಪ್ರತಿಭೆಯನ್ನು ಜಾಗತಿಕ ಡಿಜಿಟಲ್ ಆರ್ಥಿಕತೆಯೊಂದಿಗೆ ಜೋಡಿಸುವುದು ಹಾಗೂ ಗ್ರಾಮಗಳಲ್ಲಿಯೇ ತಂತ್ರಜ್ಞಾನ ಆಧಾರಿತ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು RAISE ಕೇಂದ್ರದ ಮುಖ್ಯ ಗುರಿಯಾಗಿದೆ. ಗ್ರಾಮೀಣ ಯುವಕರಿಗೂ ನಗರ ಪ್ರದೇಶದ ಯುವಕರಿಗೆ ಸಮಾನವಾದ ಅವಕಾಶಗಳು ದೊರೆಯಬೇಕು ಎಂಬ ವಿಶ್ವೇಶ್ವರಯ್ಯ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಸಣ್ಣ ಪ್ರಯತ್ನ ಇದಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳದಲ್ಲಿ ಅವರ ಮೊಮ್ಮಗ ಸತೀಶ್ ಮೋಕ್ಷಗೊಂಡಂ ಅವರು ಸದ್ಗುರು ಶ್ರೀ ಮಧುಸೂದನ ಸಾಯಿ ಅವರನ್ನು ಆತ್ಮೀಯವಾಗಿ ಆಹ್ವಾನಿಸಿ ಗೌರವಿಸಿದರು. ಪ್ರಶಾಂತಿ ಬಾಲ ಮಂದಿರ ಟ್ರಸ್ಟ್ ಅಧ್ಯಕ್ಷ ಡಾ ಬಿ.ಎನ್. ನರಸಿಂಹಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಚಿತ್ರ ಶೀರ್ಷಿಕೆಗಳು 1) ಚಿಕ್ಕಬಳ್ಳಾಪುರ ತಾಲ್ಲೂಕು ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿಗೆ ಗೌರವ ನಮನ ಸಲ್ಲಿಸಲು ಆಗಮಿಸಿದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರನ್ನು ವಿಶ್ವೇಶ್ವರಯ್ಯನವರ ಮೊಮ್ಮಗ ಸತೀಶ್ ಮೋಕ್ಷಗೊಂಡಂ ಆತ್ಮೀಯವಾಗಿ ಸ್ವಾಗತಿಸಿದರು. 2) ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ವಿಶ್ವೇಶ್ವರಯ್ಯನವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಪ್ರಶಾಂತಿ ಬಾಲ ಮಂದಿರ ಟ್ರಸ್ಟ್ ಅಧ್ಯಕ್ಷ ಡಾ ಬಿ.ಎನ್.ನರಸಿಂಹಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್ ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್1
- ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು. ನಾಳೆಯಿಂದ (ಗುರುವಾರ) 3 ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, "ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ" ಎಂದರು.1
- ಕೋಲಾರ: ನಗರದ 15ನೇ ವಾರ್ಡಿನ ಹಾರೋಹಳ್ಳಿ ಗ್ರಾಮದಲ್ಲಿ ಗರುಡ ಮಿತ್ರ ಬಳಗದ ಯುವಕರ ವತಿಯಿಂದ ಸೆಪ್ಟೆಂಬರ್ 14, ಸೋಮವಾರದಂದು ಅದ್ದೂರಿಯಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು1
- ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ!!! *ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ* *ಕೊರಟಗೆರೆ, ಸೆ.16:* ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಕರಕಲ್ಲಘಟ್ಟ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ರಾಮಕ್ಕ (BLO) ಅವರು ಕರ್ತವ್ಯದ ವೇಳೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯ ತೊಂದರೆಗೆ ಒಳಗಾಗಿರುವ ಘಟನೆ ನಡೆದಿದೆ. ಹೊಳವನಹಳ್ಳಿ 1ನೇ ಬ್ಲಾಕ್ ವ್ಯಾಪ್ತಿಯಲ್ಲಿ ಬಿ.ಎಲ್.ಓ ಆಗಿ ಕೆಲಸ ನಿರ್ವಹಿಸುತ್ತಿದ್ದ ರಾಮಕ್ಕ ಅವರು ನಿನ್ನೆ ದಿನಾಂಕ 15-09-2026 ರಂದು ಕೈಬಿಟ್ಟ ಮತದಾರರಿಗೆ ನೋಟಿಸ್ ನೀಡುವ ಕಾರ್ಯದಲ್ಲಿದ್ದರು. ಈ ವೇಳೆ ತಾಲ್ಲೂಕು ನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು ಅವರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ರಾಮಕ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹೊಳವನಹಳ್ಳಿಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇ.ಸಿ.ಜಿ ಪರೀಕ್ಷೆಯಲ್ಲಿ ಹೃದಯದ ತೊಂದರೆ ಇರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಅವರು ಇನ್ನೂ ಕೊರಟಗೆರೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಗೆ ತಾಲ್ಲೂಕು ಅಧಿಕಾರಿಗಳೇ ನೇರ ಹೊಣೆ ಎಂದು ಅಂಗನವಾಡಿ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ರಾಮಕ್ಕ ಅವರಿಗೆ ಏನಾದರೂ ಅನಾಹುತವಾದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದೆ. ಹಾಗೂ ಇನ್ನು ಮುಂದೆ ಯಾವುದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ರೀತಿ ಮಾನಸಿಕ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.4
- ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐1
- WARD NUMBER 34.KOLAR1
- 45 ಎಕರೆ ಅರಣ್ಯ ಭೂಮಿ ಈಗ ಸಾರ್ವಜನಿಕರ ಉದ್ಯಾನವನ! ಅರಣ್ಯ ಭೂಮಿಯಲ್ಲಿ ನಿರ್ಮಾಣವಾದ ವೃಕ್ಷ ಉದ್ಯಾನವನಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಪಣತೂರಿನಲ್ಲಿ ನೂತನ ವೃಕ್ಷ ಉದ್ಯಾನವನ ಲೋಕಾರ್ಪಣೆ! 45 ಎಕರೆ ಅರಣ್ಯ ಭೂಮಿ ಈಗ ಸಾರ್ವಜನಿಕರ ಉದ್ಯಾನವನ! ಅರಣ್ಯ ಭೂಮಿಯಲ್ಲಿ ನಿರ್ಮಾಣವಾದ ವೃಕ್ಷ ಉದ್ಯಾನವನಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ವಾಕಿಂಗ್ ಟ್ರ್ಯಾಕ್, ಓಪನ್ ಜಿಮ್ ಸೇರಿದಂತೆ ಹಲವು ಸೌಲಭ್ಯಗಳ ವ್ಯವಸ್ಥೆ ಪರಿಸರ ಸಂರಕ್ಷಣೆಯ ಜೊತೆಗೆ ಸ್ವಚ್ಛತೆಗೆ ವಿಶೇಷ ಆದ್ಯತೆ ಸಿಎಸ್ಆರ್ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಉದ್ಯಾನವನ ಮಹದೇವಪುರ ಕ್ಷೇತ್ರದಲ್ಲಿ ಉದ್ಯಾನವನಗಳ ಕೊರತೆಗೆ ಸಿಕ್ಕ ಪರಿಹಾರ? ಪಣತೂರಿನ ಸಿಡಿಪಿ ರಸ್ತೆಯಲ್ಲಿದ್ದ ಅರಣ್ಯ ಭೂಮಿ ಇದೀಗ ಹಸಿರು ಉದ್ಯಾನವನ ಸಾರ್ವಜನಿಕರ ಬಳಕೆಗೆ ಮೀಸಲಾದ ನೂತನ ವೃಕ್ಷ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಮೋಹನ್, ಶಾಸಕಿ ಮಂಜುಳಾ ಲಿಂಬಾವಳಿ ಸಾಥ್1
- ವಿಚ್ಛೇದನ ಬಯಸುವ ಮಹಿಳೆಯರಿಗೆ ಆಶ್ರಯ ನೀಡುವ ಜಪಾನ್ ದೇವಾಲಯ 700 ವರ್ಷಗಳ ಇತಿಹಾಸದ ‘ಡಿವೋರ್ಸ್ ಟೆಂಪಲ್’ ಕಥೆ! ವಿಚ್ಛೇದನ ಬಯಸುವ ಮಹಿಳೆಯರಿಗೆ ಆಶ್ರಯ ನೀಡುವ ಜಪಾನ್ ದೇವಾಲಯ 700 ವರ್ಷಗಳ ಇತಿಹಾಸದ ‘ಡಿವೋರ್ಸ್ ಟೆಂಪಲ್’ ಕಥೆ!1
- ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ ಕೆ ಶಿವಕುಮಾರ್ #ವಿಧಾನಸೌಧ ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.1