ಕರಡು ಮತದಾರರ ಪಟ್ಟಿ ಪ್ರಕಟ: ಅ.೨೨ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ: ಡಿಸಿ ರಾಹುಲ್ ತುಕಾರಾಮ ಪಾಂಡ್ವೆ ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳು ಹಾಗೂ ೧,೧೬೨ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ವೀಕ್ಷಣೆಗೆ ಪ್ರಕಟಿಸಲಾಗಿದೆ. ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪಟ್ಟಿಯನ್ನು ಪರಿಶೀಲಿಸಿ, ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರು ಕೈಬಿಡುವಿಕೆ ಸೇರಿದಂತೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು ಎಂದು ತಿಳಿಸಿದರು. ಅ.೨೨ರವರೆಗೆ ಆಕ್ಷೇಪಣೆ: ಕರಡು ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರು ಹಾಗೂ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಹೊಸ ಮತದಾರರ ನೋಂದಣಿ: ಕರಡು ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ಹಾಗೂ ೨೦೨೬ರ ಅ.೧ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಯುವಕ-ಯುವತಿಯರು ನಮೂನೆ-೬ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಬಿಎಲ್ಒ ಮೂಲಕ ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಸಲ್ಲಿಸಲು ಅವಕಾಶವಿದೆ. ಮತದಾರರ ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ನಮೂನೆ-೮ ಸಲ್ಲಿಸಬೇಕು ಎಂದರು. ಜಿಲ್ಲೆಯಲ್ಲಿ ೧೦,೫೩,೨೩೬ ಮತದಾರರು: ವಿಶೇಷ ಪರಿಷ್ಕರಣೆಯ ಬಳಿಕ ಪ್ರಕಟಿಸಿರುವ ಕರಡು ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ೧೦,೫೩,೨೩೬ ಮತದಾರರು ಇದ್ದಾರೆ. ಈ ಪೈಕಿ ಸುಮಾರು ೮.೬೪ ಲಕ್ಷ ಮತದಾರರ ದಾಖಲೆಗಳ ಡಿಜಿಟೈಸೇಶನ್ ಪೂರ್ಣಗೊಂಡಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ೧೨,೨೬೪ ನೋ-ಮ್ಯಾಪಿಂಗ್ ಹಾಗೂ ೪೨,೭೯೮ ಅನಾಮಲಿ ಮತದಾರರು ಗುರುತಿಸಲ್ಪಟ್ಟಿದ್ದು, ಸುಮಾರು ೫೫ ಸಾವಿರಕ್ಕೂ ಅಧಿಕ ಮತದಾರರಿಗೆ ನೋಟಿಸ್ ನೀಡಿ ಅಗತ್ಯ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪರಿಶೀಲನೆ ಹಾಗೂ ತೀರ್ಮಾನದ ನಂತರವೂ ಅಹವಾಲು ಸಲ್ಲಿಸಲು ಮೇಲ್ಮನವಿ ಅವಕಾಶವಿದ್ದು, ಪ್ರಥಮ ಮೇಲ್ಮನವಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಹಾಗೂ ದ್ವಿತೀಯ ಮೇಲ್ಮನವಿಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ತಿಳಿಸಿದರು. ೧,೧೬೨ ಮತಗಟ್ಟೆಗಳು: ಮನೆ-ಮನೆ ಸಮೀಕ್ಷೆಯ ಬಳಿಕ ಜಿಲ್ಲೆಯಲ್ಲಿ ೨೮ ಹೊಸ ಮತಗಟ್ಟೆಗಳನ್ನು ರಚಿಸಲಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ ೧,೧೬೨ಕ್ಕೆ ಏರಿಕೆಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್ಒಗಳು ನಿರಂತರವಾಗಿ ಶ್ರಮಿಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದರು. ಎಸ್ಐಆರ್ಗೆ ಸಂಬAಧಿಸಿದಂತೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ವೇಳೆ ಗೈರುಹಾಜರಿರುವವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತಪಟ್ಟವರು, ಈಗಾಗಲೇ ನೋಂದಾಯಿಸಿಕೊAಡಿರುವ (ಡುಪ್ಲಿಕೇಟ್) ಹಾಗೂ ಇತರೆ ವರ್ಗಗಳಿಗೆ ಸೇರಿದ ಒಟ್ಟು ೧,೮೯,೨೩೩ Uಇಈ ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕರಡು ಮತದಾರರ ಪಟ್ಟಿಯನ್ನು ಪ್ರತಿಯೊಬ್ಬರೂ ಪರಿಶೀಲಿಸಿ, ಯಾವುದೇ ತಪ್ಪು ಅಥವಾ ಆಕ್ಷೇಪಣೆ ಕಂಡುಬಂದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಸಮಸ್ಯೆಗಳ ಕುರಿತು ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳ ಬಿಎಲ್ಎಗಳು ಸೂಕ್ತ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್ ಹಾಗೂ ಸಹಾಯಕ ಆಯುಕ್ತ ಶ್ರೀಧರ್ ಗೋಟೂರ್ ಉಪಸ್ಥಿತರಿದ್ದರು.
ಕರಡು ಮತದಾರರ ಪಟ್ಟಿ ಪ್ರಕಟ: ಅ.೨೨ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ: ಡಿಸಿ ರಾಹುಲ್ ತುಕಾರಾಮ ಪಾಂಡ್ವೆ ಯಾದಗಿರಿ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳು ಹಾಗೂ ೧,೧೬೨ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ವೀಕ್ಷಣೆಗೆ ಪ್ರಕಟಿಸಲಾಗಿದೆ. ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪಟ್ಟಿಯನ್ನು ಪರಿಶೀಲಿಸಿ, ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರು ಕೈಬಿಡುವಿಕೆ ಸೇರಿದಂತೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು ಎಂದು ತಿಳಿಸಿದರು. ಅ.೨೨ರವರೆಗೆ ಆಕ್ಷೇಪಣೆ: ಕರಡು ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರು ಹಾಗೂ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಹೊಸ ಮತದಾರರ ನೋಂದಣಿ: ಕರಡು ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ಹಾಗೂ ೨೦೨೬ರ ಅ.೧ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಯುವಕ-ಯುವತಿಯರು ನಮೂನೆ-೬ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಬಿಎಲ್ಒ ಮೂಲಕ ಅಥವಾ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಸಲ್ಲಿಸಲು ಅವಕಾಶವಿದೆ. ಮತದಾರರ ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ನಮೂನೆ-೮ ಸಲ್ಲಿಸಬೇಕು ಎಂದರು. ಜಿಲ್ಲೆಯಲ್ಲಿ ೧೦,೫೩,೨೩೬ ಮತದಾರರು: ವಿಶೇಷ ಪರಿಷ್ಕರಣೆಯ ಬಳಿಕ ಪ್ರಕಟಿಸಿರುವ ಕರಡು ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ೧೦,೫೩,೨೩೬ ಮತದಾರರು ಇದ್ದಾರೆ. ಈ ಪೈಕಿ ಸುಮಾರು ೮.೬೪ ಲಕ್ಷ ಮತದಾರರ ದಾಖಲೆಗಳ ಡಿಜಿಟೈಸೇಶನ್ ಪೂರ್ಣಗೊಂಡಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ೧೨,೨೬೪ ನೋ-ಮ್ಯಾಪಿಂಗ್ ಹಾಗೂ ೪೨,೭೯೮ ಅನಾಮಲಿ ಮತದಾರರು ಗುರುತಿಸಲ್ಪಟ್ಟಿದ್ದು, ಸುಮಾರು ೫೫ ಸಾವಿರಕ್ಕೂ ಅಧಿಕ ಮತದಾರರಿಗೆ ನೋಟಿಸ್ ನೀಡಿ ಅಗತ್ಯ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪರಿಶೀಲನೆ ಹಾಗೂ ತೀರ್ಮಾನದ ನಂತರವೂ ಅಹವಾಲು ಸಲ್ಲಿಸಲು ಮೇಲ್ಮನವಿ ಅವಕಾಶವಿದ್ದು, ಪ್ರಥಮ ಮೇಲ್ಮನವಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಹಾಗೂ ದ್ವಿತೀಯ ಮೇಲ್ಮನವಿಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ತಿಳಿಸಿದರು. ೧,೧೬೨ ಮತಗಟ್ಟೆಗಳು: ಮನೆ-ಮನೆ ಸಮೀಕ್ಷೆಯ ಬಳಿಕ ಜಿಲ್ಲೆಯಲ್ಲಿ ೨೮ ಹೊಸ ಮತಗಟ್ಟೆಗಳನ್ನು ರಚಿಸಲಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ ೧,೧೬೨ಕ್ಕೆ ಏರಿಕೆಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್ಒಗಳು ನಿರಂತರವಾಗಿ ಶ್ರಮಿಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದರು. ಎಸ್ಐಆರ್ಗೆ ಸಂಬAಧಿಸಿದಂತೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ವೇಳೆ ಗೈರುಹಾಜರಿರುವವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತಪಟ್ಟವರು, ಈಗಾಗಲೇ ನೋಂದಾಯಿಸಿಕೊAಡಿರುವ (ಡುಪ್ಲಿಕೇಟ್) ಹಾಗೂ ಇತರೆ ವರ್ಗಗಳಿಗೆ ಸೇರಿದ ಒಟ್ಟು ೧,೮೯,೨೩೩ Uಇಈ ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕರಡು ಮತದಾರರ ಪಟ್ಟಿಯನ್ನು ಪ್ರತಿಯೊಬ್ಬರೂ ಪರಿಶೀಲಿಸಿ, ಯಾವುದೇ ತಪ್ಪು ಅಥವಾ ಆಕ್ಷೇಪಣೆ ಕಂಡುಬಂದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಸಮಸ್ಯೆಗಳ ಕುರಿತು ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳ ಬಿಎಲ್ಎಗಳು ಸೂಕ್ತ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್ ಹಾಗೂ ಸಹಾಯಕ ಆಯುಕ್ತ ಶ್ರೀಧರ್ ಗೋಟೂರ್ ಉಪಸ್ಥಿತರಿದ್ದರು.
- ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ1
- *ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ* ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು. ಮಾನ್ಯರೇ, ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ. ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,4
- ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು1
- ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ1
- ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ರಾಯಚೂರಿನಲ್ಲಿ ಮಕ್ಕಳ ವೈಭವದ ಪಾದಯಾತ್ರೆ ರಾಯಚೂರು: ಆಗಸ್ಟ್ 26 ಈದ್-ಎ-ಮಿಲಾದ್-ಉನ್-ನಬಿ ಅವರ ಪವಿತ್ರ ಸಂದರ್ಭದಲ್ಲಿ, ರಾಯಚೂರಿನ ಎಲ್ಬಿಎಸ್ ನಗರದ ಮಸೀದಿ-ಎ-ನೂರ್ ಕಮಿಟಿ ವತಿಯಿಂದ ಚಿಕ್ಕ ಮಕ್ಕಳ ವೈಭವದ ಹಾಗೂ ಶಿಸ್ತುಬದ್ಧ ಪಾದಯಾತ್ರೆ ಮೆರವಣಿಗೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಮೆರವಣಿಗೆಯಲ್ಲಿ ಮಕ್ಕಳು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಗೌರವದಿಂದ ನಾತ್-ಎ-ಪಾಕ್ ಹಾಗೂ ಸಲಾಮ್ಗಳನ್ನು ಪಠಿಸುವ ಮೂಲಕ ಪ್ರವಾದಿ ಹಜರತ್ ಮುಹಮ್ಮದ್ ಮುಸ್ತಫಾ ಅವರ ಮೇಲಿನ ತಮ್ಮ ಪ್ರೀತಿ ಮತ್ತು ಗೌರವದ ಪವಿತ್ರ ಸಂದೇಶವನ್ನು ಸಾರಿದರು. ಮೆರವಣಿಗೆಯು ಶಾಂತಿಯುತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯಲು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಉತ್ತಮ ಸಹಕಾರ ನೀಡಿದರು. ಪೊಲೀಸ್ ಇಲಾಖೆಯ ಈ ಅಮೂಲ್ಯ ಸಹಕಾರಕ್ಕಾಗಿ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಗುತ್ತದೆ. ಈ ಶುಭ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಪೋಷಕರು, ಯುವಕರು, ಮಕ್ಕಳು ಹಾಗೂ ಎಲ್ಬಿಎಸ್ ನಗರದ ನಿವಾಸಿಗಳಿಗೆ ಮಸೀದಿ-ಎ-ನೂರ್ ಕಮಿಟಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಶುಭಾಶಯಗಳನ್ನು ಸಲ್ಲಿಸಲಾಗುತ್ತದೆ. ಮಸೀದಿ-ಎ-ನೂರ್ ಕಮಿಟಿ ಎಲ್ಬಿಎಸ್ ನಗರ, ರಾಯಚೂರು2
- ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.1
- ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.1
- ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ1