ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ. ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ. ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
- ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ. ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.2
- ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ. ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.1
- ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.3
- 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad1
- ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.1
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು2
- ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಮಸ್ಕಿ: ಪಟ್ಟಣದ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು, ಗೌರಿ ಗಣೇಶ ಹಬ್ಬವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಭಾವನೆ ಮೂಡಿಸುವ ಪ್ರಮುಖ ಹಬ್ಬವಾಗಿದೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು. ಬಸವೇಶ್ವರನಗರದ ಗಣೇಶೋತ್ಸವ ಸಮಿತಿ ವತಿಯಿಂದ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.1