logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗದಗ ಜಿಲ್ಲೆಯ ರೋಣ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಗದಗ ಜಿಲ್ಲೆಯ ರೋಣ ಪಟ್ಟಣದ ತಹಸೀಲ್ದಾರರ ಕಾರ್ಯಾಲಯದಲ್ಲಿ ರವಿವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು, ಹೇಮರೆಡ್ಡಿ ಮಲ್ಲಮ್ಮರವರ ಭಾವಚಿತ್ರಕ್ಕೆ ಉಪ ತಹಸಿಲ್ದಾರ್ ಗಣೇಶ್ ಕೊಪ್ಪದ ಹಾಗೂ ಆಹಾರ ನಿರೀಕ್ಷಕಿ ಸುವರ್ಣ ಜಮ್ಮನಕಟ್ಟಿ ಪೂಜೆ ಸಲ್ಲಿಸಿದರು, ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳಾದ ಶರೀಫ್ ನದಾಫ್ ಹಾಗೂ ಇತರರು ಪಾಲ್ಗೊಂಡಿದ್ದರು.

3 hrs ago
user_ಚಂದ್ರು ನೆಲ್ಲೂರ
ಚಂದ್ರು ನೆಲ್ಲೂರ
Local News Reporter ರೋಣ, ಗದಗ, ಕರ್ನಾಟಕ•
3 hrs ago
dce400ea-584a-4031-8fdc-1020dcc7c73f
fde38ef6-f1b6-422e-95ee-001a14f9ee9e

ಗದಗ ಜಿಲ್ಲೆಯ ರೋಣ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಗದಗ ಜಿಲ್ಲೆಯ ರೋಣ ಪಟ್ಟಣದ ತಹಸೀಲ್ದಾರರ ಕಾರ್ಯಾಲಯದಲ್ಲಿ ರವಿವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು, ಹೇಮರೆಡ್ಡಿ ಮಲ್ಲಮ್ಮರವರ ಭಾವಚಿತ್ರಕ್ಕೆ ಉಪ ತಹಸಿಲ್ದಾರ್ ಗಣೇಶ್ ಕೊಪ್ಪದ ಹಾಗೂ ಆಹಾರ ನಿರೀಕ್ಷಕಿ ಸುವರ್ಣ ಜಮ್ಮನಕಟ್ಟಿ ಪೂಜೆ ಸಲ್ಲಿಸಿದರು, ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳಾದ ಶರೀಫ್ ನದಾಫ್ ಹಾಗೂ ಇತರರು ಪಾಲ್ಗೊಂಡಿದ್ದರು.

More news from ಕರ್ನಾಟಕ and nearby areas
  • ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗುರುವಂದನೆ ಸಲ್ಲಿಸಿ ಗೌರವಿಸಿದರು. ಈ ಸ್ನೇಹ ಸಮ್ಮೇಳನದಲ್ಲಿ ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಅವರು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು. ವರ್ಷಗಳ ಬಳಿಕ ಶಿಕ್ಷಕರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾಗಿದೆ.
    1
    ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗುರುವಂದನೆ ಸಲ್ಲಿಸಿ ಗೌರವಿಸಿದರು. ಈ ಸ್ನೇಹ ಸಮ್ಮೇಳನದಲ್ಲಿ ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಅವರು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು. ವರ್ಷಗಳ ಬಳಿಕ ಶಿಕ್ಷಕರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾಗಿದೆ.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    9 hrs ago
  • ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ. ಕುಷ್ಟಗಿ:- ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕುಷ್ಟಗಿ ಪಟ್ಟಣದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ, ದ್ವೀತಿಯ ಮತ್ತು ಅತಿ ಹೆಚ್ಚು ಅಂಕಪಡೆದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೆಂಕಪ್ಪ ವಾಲಿಕಾರ ತಿಳಿಸಿದರು. ಇಲ್ಲಿನ ಹಳೆ ಪ್ರವಾಸಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು 2025- 2026ನೇ ಸಾಲಿನ ಈ ವರ್ಷದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಮುದೇನೂರು ಗ್ರಾಮದಲ್ಲಿ ಹಮ್ಮಿಕೊಳ್ಳಬೇಕಾಗಿತ್ತು. ಕಾರಣಾಂತರಗಳಿಂದ ಮುದೇನೂರು ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಆಗುವುದಿಲ್ಲ ಆದರೆ ಮುಂದಿನ ತಿಂಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳಿಂದ ಮತ್ತು ಎಲ್ಲಾ ಸದಸ್ಯರಿಂದ ಒಪ್ಪಿಗೆ ಪಡೆಯಲಾಗಿದೆ. ಮುಂದಿನ ದಿನಮಾನದಲ್ಲಿ ಯಾವ ಕಡೆ ಸಮ್ಮೇಳನ ನೆಡೆಸಿದರೆ ಸೂಕ್ತ ಆಗುತ್ತದೆ ಎಂಬ ತೀರ್ಮಾನ ತೆಗೆದುಕೊಂಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವದು ಎಂದರು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್.ಎಸ್‌ಎಲ್.ಸಿ. ಮತ್ತು ಯುಪಿಸಿ ಮಕ್ಕಳಿಗೆ ವಿಶೇಷ ಸನ್ಮಾನ ಸಮಾರಂಭ ಏರ್ಪಡಿಸಿಲಾಗುತ್ತಿದೆ ಆದ್ದರಿಂದ ತಾಲೂಕಿನ ಪ್ರಥಮ, ದ್ವೀತಿಯ ಸ್ಥಾನದಲ್ಲಿ ಹಾಗೂ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನಿಸಲಾಗುವದು ಈ ಒಂದು ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಸಲಹೆ ಸಹಕಾರ ಬಹಳ ಅಗತ್ಯವಾಗಿದ್ದು ಈ ಒಂದು ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪಾಟೀಲ ಮಾತನಾಡಿ ಯಾವುದೇ ಕಾರ್ಯಕ್ರಮ ಮಾಡಬೇಕಾದರೆ ಮೊದಲು ಸೂಕ್ತ ತೀರ್ಮಾನ ತೆಗೆದುಕೊಂಡು ಸಭೆ ಸಮಾರಂಭ ಏರ್ಪಡಿಸಬೇಕಾಗುತ್ತದೆ ಈ ವರ್ಷದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಷ್ಟಗಿ ತಾಲೂಕಿನಲ್ಲಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಆದರೆ ಪ್ರತಿಯೊಬ್ಬರ ಸಲಹೆ ಸಹಕಾರ ಅಗತ್ಯವಾಗಿದೆ ಸೂಕ್ತ ನಿರ್ಧಾರದೊಂದಿಗೆ ಜಿಲ್ಲಾ ಸಮ್ಮೇಳನ ನಡೆಸಲಾಗುವದು ಎಂಬ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶರಣಪ್ಪ ವಡಗೇರಿ, ನಿಕಟ ಪೂರ್ವ ‌ಕನ್ನಡ ಸಾಹಿತ್ಯ ಪರಿಷತ್ತಿನ ‌ಅಧ್ಯಕ್ಷ ಹನಮೇಶ ಗುಮಗೇರಾ, ರವೀಂದ್ರ ಬಾಕಳೆ, ಉಮೇಶ ಹಿರೇಮಠ, ಸಾಹಿತಿಗಳಾದ ಅಮರೇಗೌಡ ಪಾಟೀಲ ಜಾಲಿಹಾಳ, ದೇವರಾಜ ವಿಶ್ವ ಕರ್ಮ, ದೊಡ್ಡಪ್ಪ ಕೈಲವಾಡಗಿ, ಹ.ಯ.ಈಟಿಯವರ್, ಆರ್.ಕೆ.ಸುಬೇದಾರ, ವಿದ್ಯಾ ಕಂಪಾಪೂರಮಠ, ಎಸ್.ಜೆ.ಕಡೆಮನಿ, ಶ್ರೀನಿವಾಸ ಕಟ್ಲಿ, ನಿಂಗಪ್ಪ ಸಜ್ಜನ್, ಚನ್ನಪ್ಪ ಬಾವಿಮನಿ, ಸಂತೋಷ ತೋಟದ್, ಹನಮೇಶ ‌ಶಾಖಾಪೂರ, ಕ.ಕಾ.ಪ.ಸ.ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ‌ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತ ಲಲಿತಮ್ಮ ಹಿರೇಮಠ ಇವರಿಗೆ ಸನ್ಮಾನಿಸಿ ಗೌರವಿಸಿದರು.
    2
    ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ.

ಕುಷ್ಟಗಿ:- ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕುಷ್ಟಗಿ ಪಟ್ಟಣದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ, ದ್ವೀತಿಯ ಮತ್ತು ಅತಿ ಹೆಚ್ಚು ಅಂಕಪಡೆದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೆಂಕಪ್ಪ ವಾಲಿಕಾರ ತಿಳಿಸಿದರು.
ಇಲ್ಲಿನ ಹಳೆ ಪ್ರವಾಸಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು 2025- 2026ನೇ ಸಾಲಿನ  ಈ ವರ್ಷದ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಮುದೇನೂರು ಗ್ರಾಮದಲ್ಲಿ ಹಮ್ಮಿಕೊಳ್ಳಬೇಕಾಗಿತ್ತು. ಕಾರಣಾಂತರಗಳಿಂದ ಮುದೇನೂರು ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಆಗುವುದಿಲ್ಲ ಆದರೆ ಮುಂದಿನ ತಿಂಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ  ಪದಾಧಿಕಾರಿಗಳಿಂದ ಮತ್ತು ಎಲ್ಲಾ ಸದಸ್ಯರಿಂದ ಒಪ್ಪಿಗೆ ಪಡೆಯಲಾಗಿದೆ. ಮುಂದಿನ ದಿನಮಾನದಲ್ಲಿ ಯಾವ ಕಡೆ ಸಮ್ಮೇಳನ ನೆಡೆಸಿದರೆ ಸೂಕ್ತ ಆಗುತ್ತದೆ ಎಂಬ ತೀರ್ಮಾನ ತೆಗೆದುಕೊಂಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವದು ಎಂದರು.
ಅದರಂತೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಸ್.ಎಸ್‌ಎಲ್.ಸಿ. ಮತ್ತು ಯುಪಿಸಿ ಮಕ್ಕಳಿಗೆ ವಿಶೇಷ  ಸನ್ಮಾನ ಸಮಾರಂಭ ಏರ್ಪಡಿಸಿಲಾಗುತ್ತಿದೆ ಆದ್ದರಿಂದ ತಾಲೂಕಿನ ಪ್ರಥಮ, ದ್ವೀತಿಯ ಸ್ಥಾನದಲ್ಲಿ ಹಾಗೂ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನಿಸಲಾಗುವದು ಈ ಒಂದು ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಸಲಹೆ ಸಹಕಾರ ಬಹಳ ಅಗತ್ಯವಾಗಿದ್ದು ಈ ಒಂದು ಸಮಾರಂಭವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪಾಟೀಲ ಮಾತನಾಡಿ ಯಾವುದೇ ಕಾರ್ಯಕ್ರಮ ಮಾಡಬೇಕಾದರೆ ಮೊದಲು ಸೂಕ್ತ ತೀರ್ಮಾನ ತೆಗೆದುಕೊಂಡು ಸಭೆ ಸಮಾರಂಭ ಏರ್ಪಡಿಸಬೇಕಾಗುತ್ತದೆ ಈ ವರ್ಷದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಷ್ಟಗಿ ತಾಲೂಕಿನಲ್ಲಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಆದರೆ ಪ್ರತಿಯೊಬ್ಬರ ಸಲಹೆ ಸಹಕಾರ ಅಗತ್ಯವಾಗಿದೆ ಸೂಕ್ತ ನಿರ್ಧಾರದೊಂದಿಗೆ ಜಿಲ್ಲಾ ಸಮ್ಮೇಳನ ನಡೆಸಲಾಗುವದು ಎಂಬ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶರಣಪ್ಪ ವಡಗೇರಿ, ನಿಕಟ ಪೂರ್ವ ‌ಕನ್ನಡ ಸಾಹಿತ್ಯ ಪರಿಷತ್ತಿನ ‌ಅಧ್ಯಕ್ಷ ಹನಮೇಶ ಗುಮಗೇರಾ, ರವೀಂದ್ರ ಬಾಕಳೆ, ಉಮೇಶ ಹಿರೇಮಠ, ಸಾಹಿತಿಗಳಾದ ಅಮರೇಗೌಡ ಪಾಟೀಲ ಜಾಲಿಹಾಳ, ದೇವರಾಜ ವಿಶ್ವ ಕರ್ಮ, ದೊಡ್ಡಪ್ಪ ಕೈಲವಾಡಗಿ, ಹ.ಯ.ಈಟಿಯವರ್, ಆರ್.ಕೆ.ಸುಬೇದಾರ, ವಿದ್ಯಾ ಕಂಪಾಪೂರಮಠ, ಎಸ್.ಜೆ.ಕಡೆಮನಿ, ಶ್ರೀನಿವಾಸ ಕಟ್ಲಿ, ನಿಂಗಪ್ಪ ಸಜ್ಜನ್, ಚನ್ನಪ್ಪ ಬಾವಿಮನಿ, ಸಂತೋಷ ತೋಟದ್, ಹನಮೇಶ ‌ಶಾಖಾಪೂರ, ಕ.ಕಾ.ಪ.ಸ.ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ‌ರಾಜ್ಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತ ಲಲಿತಮ್ಮ ಹಿರೇಮಠ ಇವರಿಗೆ ಸನ್ಮಾನಿಸಿ ಗೌರವಿಸಿದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
  • ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದ ಶ್ರೀಗಳು ಇಳಕಲ್: ಮಹಾಂತ ಜೋಳಿಗೆಯ ಶಿವಶಿಲ್ಪಿ ಡಾ.ಮಹಾಂತ ಶ್ರೀಗಳ ೮ನೇ ಪುಣ್ಯಸ್ಮರಣೆ ನಿಮಿತ್ತ ತಾಲೂಕಿನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದರು. ಶರಣ ಸಿದ್ಧಾಂತ ವಿದ್ಯಾಪೀಠದಡಿ ಭಾನುವಾರ ಗ್ರಾಮದಲ್ಲಿ ಮಹಾಂತ ಜೋಳಿಗೆಯೊಂದಿಗೆ ಶ್ರೀಗಳು ಸಂಚಾರ ನಡೆಸಿದರು. ಮನೆ, ಮನೆಗೆ ತೆರಳಿ ಭಕ್ತರಿಗೆ ದುಶ್ಚಟಗಳನ್ನು ತ್ಯಜಿಸಲು ಸಲಹೆ ನೀಡಿದರು. ಅಲ್ಲದೇ ಕೆಲ ಯುವಕರು ಸ್ವ ಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಹೇಳಿ ಮಹಾಂತ ಜೋಳಿಗೆ ಮೇಲೆ ಪ್ರಮಾಣ ಮಾಡಿದರು. "ಚಿಕ್ಕ ಕೊಡಗಲಿ ಗ್ರಾಮ ಭಕ್ತಿಯ ಬೀಡು. ಯುವಕರು ಸೇರಿದಂತೆ ಎಲ್ಲರೂ ದುಶ್ಚಟಗಳನ್ನು ತ್ಯಜಿಸಿ ಅರೋಗ್ಯಯುತ ಬದುಕು ಸಾಗಿಸಬೇಕು,'' ಎಂದು ಗುರುಮಹಾಂತ ಶ್ರೀಗಳು ಸಲಹೆ ನೀಡಿದರು. ಈ ವೇಳೆ ಗ್ರಾಮದ ಅಯರು ಮತ್ತು ಭಕ್ತರು ಇದ್ದರು.
    1
    ಹೆಗಲಿಗೆ ಮಹಾಂತ ಜೋಳಿಗೆ 
ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದ ಶ್ರೀಗಳು 

ಇಳಕಲ್: ಮಹಾಂತ ಜೋಳಿಗೆಯ ಶಿವಶಿಲ್ಪಿ ಡಾ.ಮಹಾಂತ ಶ್ರೀಗಳ ೮ನೇ ಪುಣ್ಯಸ್ಮರಣೆ ನಿಮಿತ್ತ ತಾಲೂಕಿನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಹೆಗಲಿಗೆ ಮಹಾಂತ ಜೋಳಿಗೆ ಹಾಕಿಕೊಂಡು ಭಕ್ತರ ದುಶ್ಚಟ ಬೇಡಿದರು.
ಶರಣ ಸಿದ್ಧಾಂತ ವಿದ್ಯಾಪೀಠದಡಿ ಭಾನುವಾರ ಗ್ರಾಮದಲ್ಲಿ ಮಹಾಂತ ಜೋಳಿಗೆಯೊಂದಿಗೆ ಶ್ರೀಗಳು ಸಂಚಾರ ನಡೆಸಿದರು.
ಮನೆ, ಮನೆಗೆ ತೆರಳಿ ಭಕ್ತರಿಗೆ ದುಶ್ಚಟಗಳನ್ನು ತ್ಯಜಿಸಲು ಸಲಹೆ ನೀಡಿದರು. ಅಲ್ಲದೇ ಕೆಲ ಯುವಕರು ಸ್ವ ಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಹೇಳಿ ಮಹಾಂತ ಜೋಳಿಗೆ ಮೇಲೆ ಪ್ರಮಾಣ ಮಾಡಿದರು. "ಚಿಕ್ಕ ಕೊಡಗಲಿ ಗ್ರಾಮ ಭಕ್ತಿಯ ಬೀಡು. ಯುವಕರು ಸೇರಿದಂತೆ ಎಲ್ಲರೂ ದುಶ್ಚಟಗಳನ್ನು ತ್ಯಜಿಸಿ ಅರೋಗ್ಯಯುತ ಬದುಕು ಸಾಗಿಸಬೇಕು,'' ಎಂದು ಗುರುಮಹಾಂತ ಶ್ರೀಗಳು ಸಲಹೆ ನೀಡಿದರು. ಈ ವೇಳೆ ಗ್ರಾಮದ ಅಯರು ಮತ್ತು ಭಕ್ತರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • ರೈಲ್ವೆ ಕಾಮಗಾರಿಯ ಕಂದಕದಲ್ಲಿ ಮುಳುಗಿ 17 ವರ್ಷದ ಬಾಲಕ ಸಾವು: ಗ್ರಾಮಸ್ಥರಲ್ಲಿ ಆತಂಕ ಕುಷ್ಟಗಿ: ತಾಲೂಕಿನ ವಿವಿಧೆಡೆ ರೈಲ್ವೆ ಇಲಾಖೆಯ ಕಾಮಗಾರಿಗಾಗಿ ಮಣ್ಣು (ಮರಂ) ತೆಗೆಯಲು ನಿರ್ಮಿಸಲಾಗಿರುವ ಆಳವಾದ ಕಂದಕಗಳು ಇದೀಗ ಸಾವಿನ ಬಲೆಗಳಾಗಿ ಪರಿಣಮಿಸುತ್ತಿರುವ ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ. ವಣಗೇರಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದ್ದ ನೀರು ತುಂಬಿದ ಕಂದಕದಲ್ಲಿ ಈಜಲು ತೆರಳಿದ್ದ ಕೆ.ಬೋದೂರು ಗ್ರಾಮದ 17 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ವಣಗೇರಿ ಗ್ರಾಮದ ಸರ್ವೇ ನಂ. 24/1/3ರ ಜಮೀನಿನಲ್ಲಿ ರೈಲ್ವೆ ಕಾಮಗಾರಿಗಾಗಿ ಸುಮಾರು 6 ಎಕರೆ ಪ್ರದೇಶದಲ್ಲಿ ಮಣ್ಣು ತೆಗೆಯಲಾಗಿತ್ತು. ಇದರಿಂದ ಸುಮಾರು 45ರಿಂದ 50 ಅಡಿ ಆಳದ ಬೃಹತ್ ಕಂದಕ ನಿರ್ಮಾಣವಾಗಿದ್ದು, ಮಳೆ ಹಾಗೂ ಬಸಿ ನೀರು ತುಂಬಿ ಸಂಪೂರ್ಣ ಜಲಾವೃತಗೊಂಡಿತ್ತು. ಕೆ.ಬೋದೂರು ಗ್ರಾಮದ ಹನುಮಂತಪ್ಪ ತಂದೆ ಬಸವರಾಜ ಗೊರೆಬಾಳ (17) ಹಾಗೂ ಇನ್ನೊಬ್ಬ ಬಾಲಕ ಈಜಲು ಕಂದಕದ ಬಳಿ ತೆರಳಿದ್ದ ವೇಳೆ, ಆಳದ ಅರಿವಿಲ್ಲದೆ ನೀರಿನ ಸೆಳೆತಕ್ಕೆ ಸಿಲುಕಿ ಹನುಮಂತಪ್ಪ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ ಅಶೋಕ ಶಿಗ್ಗಾಂವಿ, ಅಗ್ನಿಶಾಮಕ ಠಾಣಾಧಿಕಾರಿ ಮಾಳಿಂಗರಾಯ ಹಾಗೂ ಸಿಬ್ಬಂದಿ, ಕುಷ್ಟಗಿ ಪಿಎಸ್‌ಐ ಹನಮಂತಪ್ಪ ತಳವಾರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಆರಂಭಿಸಿತು. ನಿನ್ನೆ ಆರಂಭವಾದ ನಿರಂತರ ಕಾರ್ಯಾಚರಣೆಯ ಬಳಿಕ ಇಂದು ಬೆಳಿಗ್ಗೆ ಸುಮಾರು 9.30ಕ್ಕೆ ಬಾಲಕನ ಮೃತದೇಹ ಪತ್ತೆಯಾಯಿತು. ವಣಗೇರಿ ಮಾತ್ರವಲ್ಲದೆ ತಾಲೂಕಿನ ಟೆಂಗುಂಟಿ, ಕೆ.ಹೊಸೂರು, ಕಂದಕೂರು ಹಾಗೂ ಜಿ.ಗಂಗನಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ರೈಲ್ವೆ ಯೋಜನೆಗಾಗಿ ಮಣ್ಣು ಮತ್ತು ಮರಳು ತೆಗೆಯಲಾಗಿದ್ದು, ಆಳವಾದ ಕಂದಕಗಳು ನಿರ್ಮಾಣಗೊಂಡಿವೆ. ಕೆಲವೆಡೆ ನೀರು ತುಂಬಿಕೊಂಡಿದ್ದು, ಇನ್ನೂ ಕೆಲವು ಸ್ಥಳಗಳಲ್ಲಿ ಅಪಾಯಕಾರಿಯಾಗಿ ತೆರೆದ ಸ್ಥಿತಿಯಲ್ಲಿವೆ. ಇದರಿಂದ ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯ ಎದುರಾಗುವ ಭೀತಿ ಹೆಚ್ಚಾಗಿದೆ. ಸುರಕ್ಷತಾ ಕ್ರಮಗಳಿಲ್ಲದೆ ಕಂದಕಗಳನ್ನು ಬಿಟ್ಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನ ಮಾಲೀಕರು ಹಾಗೂ ರೈಲ್ವೆ ಕಾಮಗಾರಿ ನಿರ್ವಹಣೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಹಾಗೂ ರೈಲ್ವೆ ಇಲಾಖೆ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದಲ್ಲದೆ, ಅಪಾಯಕಾರಿ ಕಂದಕಗಳ ಸುತ್ತ ತಂತಿ ಬೇಲಿ ಅಳವಡಿಸುವುದು, ಎಚ್ಚರಿಕೆ ಫಲಕಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    4
    ರೈಲ್ವೆ ಕಾಮಗಾರಿಯ ಕಂದಕದಲ್ಲಿ ಮುಳುಗಿ 17 ವರ್ಷದ ಬಾಲಕ ಸಾವು: ಗ್ರಾಮಸ್ಥರಲ್ಲಿ ಆತಂಕ
ಕುಷ್ಟಗಿ: ತಾಲೂಕಿನ ವಿವಿಧೆಡೆ ರೈಲ್ವೆ ಇಲಾಖೆಯ ಕಾಮಗಾರಿಗಾಗಿ ಮಣ್ಣು (ಮರಂ) ತೆಗೆಯಲು ನಿರ್ಮಿಸಲಾಗಿರುವ ಆಳವಾದ ಕಂದಕಗಳು ಇದೀಗ ಸಾವಿನ ಬಲೆಗಳಾಗಿ ಪರಿಣಮಿಸುತ್ತಿರುವ ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ. ವಣಗೇರಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದ್ದ ನೀರು ತುಂಬಿದ ಕಂದಕದಲ್ಲಿ ಈಜಲು ತೆರಳಿದ್ದ ಕೆ.ಬೋದೂರು ಗ್ರಾಮದ 17 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ.
ವಣಗೇರಿ ಗ್ರಾಮದ ಸರ್ವೇ ನಂ. 24/1/3ರ ಜಮೀನಿನಲ್ಲಿ ರೈಲ್ವೆ ಕಾಮಗಾರಿಗಾಗಿ ಸುಮಾರು 6 ಎಕರೆ ಪ್ರದೇಶದಲ್ಲಿ ಮಣ್ಣು ತೆಗೆಯಲಾಗಿತ್ತು. ಇದರಿಂದ ಸುಮಾರು 45ರಿಂದ 50 ಅಡಿ ಆಳದ ಬೃಹತ್ ಕಂದಕ ನಿರ್ಮಾಣವಾಗಿದ್ದು, ಮಳೆ ಹಾಗೂ ಬಸಿ ನೀರು ತುಂಬಿ ಸಂಪೂರ್ಣ ಜಲಾವೃತಗೊಂಡಿತ್ತು.
ಕೆ.ಬೋದೂರು ಗ್ರಾಮದ ಹನುಮಂತಪ್ಪ ತಂದೆ ಬಸವರಾಜ ಗೊರೆಬಾಳ (17) ಹಾಗೂ ಇನ್ನೊಬ್ಬ ಬಾಲಕ ಈಜಲು ಕಂದಕದ ಬಳಿ ತೆರಳಿದ್ದ ವೇಳೆ, ಆಳದ ಅರಿವಿಲ್ಲದೆ ನೀರಿನ ಸೆಳೆತಕ್ಕೆ ಸಿಲುಕಿ ಹನುಮಂತಪ್ಪ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಹಶೀಲ್ದಾರ ಅಶೋಕ ಶಿಗ್ಗಾಂವಿ, ಅಗ್ನಿಶಾಮಕ ಠಾಣಾಧಿಕಾರಿ ಮಾಳಿಂಗರಾಯ ಹಾಗೂ ಸಿಬ್ಬಂದಿ, ಕುಷ್ಟಗಿ ಪಿಎಸ್‌ಐ ಹನಮಂತಪ್ಪ ತಳವಾರ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಆರಂಭಿಸಿತು. ನಿನ್ನೆ ಆರಂಭವಾದ ನಿರಂತರ ಕಾರ್ಯಾಚರಣೆಯ ಬಳಿಕ ಇಂದು ಬೆಳಿಗ್ಗೆ ಸುಮಾರು 9.30ಕ್ಕೆ ಬಾಲಕನ ಮೃತದೇಹ ಪತ್ತೆಯಾಯಿತು.
ವಣಗೇರಿ ಮಾತ್ರವಲ್ಲದೆ ತಾಲೂಕಿನ ಟೆಂಗುಂಟಿ, ಕೆ.ಹೊಸೂರು, ಕಂದಕೂರು ಹಾಗೂ ಜಿ.ಗಂಗನಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ರೈಲ್ವೆ ಯೋಜನೆಗಾಗಿ ಮಣ್ಣು ಮತ್ತು ಮರಳು ತೆಗೆಯಲಾಗಿದ್ದು, ಆಳವಾದ ಕಂದಕಗಳು ನಿರ್ಮಾಣಗೊಂಡಿವೆ. ಕೆಲವೆಡೆ ನೀರು ತುಂಬಿಕೊಂಡಿದ್ದು, ಇನ್ನೂ ಕೆಲವು ಸ್ಥಳಗಳಲ್ಲಿ ಅಪಾಯಕಾರಿಯಾಗಿ ತೆರೆದ ಸ್ಥಿತಿಯಲ್ಲಿವೆ. ಇದರಿಂದ ಗ್ರಾಮಸ್ಥರು ಹಾಗೂ ಜಾನುವಾರುಗಳಿಗೆ ಪ್ರಾಣಾಪಾಯ ಎದುರಾಗುವ ಭೀತಿ ಹೆಚ್ಚಾಗಿದೆ.
ಸುರಕ್ಷತಾ ಕ್ರಮಗಳಿಲ್ಲದೆ ಕಂದಕಗಳನ್ನು ಬಿಟ್ಟಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನ ಮಾಲೀಕರು ಹಾಗೂ ರೈಲ್ವೆ ಕಾಮಗಾರಿ ನಿರ್ವಹಣೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಹಾಗೂ ರೈಲ್ವೆ ಇಲಾಖೆ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೆ, ಅಪಾಯಕಾರಿ ಕಂದಕಗಳ ಸುತ್ತ ತಂತಿ ಬೇಲಿ ಅಳವಡಿಸುವುದು, ಎಚ್ಚರಿಕೆ ಫಲಕಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    user_Maruti Gumagera
    Maruti Gumagera
    Farmer ಕುಷ್ಟಗಿ, ಕೊಪ್ಪಳ, ಕರ್ನಾಟಕ•
    3 hrs ago
  • ಕುಷ್ಟಗಿ ತಹಸೀಲ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, 14ನೇ ಶತಮಾನದ ಈ ಭಕ್ತೆಯು ತಮ್ಮ ತ್ಯಾಗ, ಭಕ್ತಿ ಹಾಗೂ ಧಾರ್ಮಿಕ ನಿಷ್ಠೆಯಿಂದ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಸ್ಮರಿಸಿದರು. ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದರು.
    1
    ಕುಷ್ಟಗಿ ತಹಸೀಲ್ ಕಚೇರಿಯಲ್ಲಿ ತಾಲೂಕಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, 14ನೇ ಶತಮಾನದ ಈ ಭಕ್ತೆಯು ತಮ್ಮ ತ್ಯಾಗ, ಭಕ್ತಿ ಹಾಗೂ ಧಾರ್ಮಿಕ ನಿಷ್ಠೆಯಿಂದ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಸ್ಮರಿಸಿದರು. ಅವರು ಮಹಿಳೆಯರಲ್ಲಿ ಧೈರ್ಯ, ಸಹನೆ, ನಿಸ್ವಾರ್ಥ ಸೇವೆ ಹಾಗೂ ಭಕ್ತಿಯ ಸಂದೇಶವನ್ನು ಸಾರಿದರು.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    19 hrs ago
  • ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.
    2
    ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.
    user_ನಾಗೇಶ್ ಎಸ್
    ನಾಗೇಶ್ ಎಸ್
    ಹಾಸನ, ಹಾಸನ, ಕರ್ನಾಟಕ•
    20 hrs ago
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.
    1
    ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    11 hrs ago
  • ಹುನಗುಂದ ಸಮೀಪದ ಟೋಲ್ ಬಳಿ ಧಗ ಧಗ ಹೊತ್ತಿ ಉರಿದ ಭತ್ತ ಹೊತ್ತ ಲಾರಿ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಮಧ್ಯದ ಟೋಲ್ ನಾಕಾ ಬಳಿ ಭತ್ತ ಹೊತ್ತ ಬರುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಮೇ ೧೦ ರಾತ್ರಿ ಸಮಯದಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ಲಾರಿ ಭತ್ತವನ್ನು ಹೊತ್ತುಕೊಂಡ ಹುನಗುಂದ ಮಾರ್ಗವಾಗಿ ತೆರಳಬೇಕಾಗಿದ್ದ ಲಾರಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಲಾರಿ ಬಾಲಕಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಾತ್ರಿ ಹತ್ತಿದ ಬೆಂಕಿ ಮುಂಜಾನೆಯವರೆಗೂ ಉರಿಯುತ್ತಿದ್ದರೂ,ಅಗ್ನಿಶಾಮಕ ದಳದ ಸಿಬ್ಬಂದಿಯಾಗಲಿ ಅಥವಾ ಟೋಲ್ ನಾಕಾ ಸಿಬ್ಬಂದಿಯಾಗಲಿ ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿಲ್ಲ ಎಂದು ತಿಳಿದು ಬಂದಿದೆ. ಈ ಘಟನೆ ಕುರಿತು ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಹುನಗುಂದ ಸಮೀಪದ ಟೋಲ್ ಬಳಿ ಧಗ ಧಗ ಹೊತ್ತಿ ಉರಿದ ಭತ್ತ ಹೊತ್ತ ಲಾರಿ 
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಮಧ್ಯದ ಟೋಲ್ ನಾಕಾ ಬಳಿ ಭತ್ತ ಹೊತ್ತ ಬರುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಮೇ ೧೦ ರಾತ್ರಿ ಸಮಯದಲ್ಲಿ ನಡೆದಿದೆ.
ತಮಿಳುನಾಡು ರಾಜ್ಯದ ಲಾರಿ ಭತ್ತವನ್ನು ಹೊತ್ತುಕೊಂಡ ಹುನಗುಂದ ಮಾರ್ಗವಾಗಿ ತೆರಳಬೇಕಾಗಿದ್ದ ಲಾರಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಲಾರಿ ಬಾಲಕಪ್ರಾಣಾಪಾಯದಿಂದ ಪಾರಾಗಿದ್ದಾನೆ. 
ರಾತ್ರಿ ಹತ್ತಿದ ಬೆಂಕಿ ಮುಂಜಾನೆಯವರೆಗೂ ಉರಿಯುತ್ತಿದ್ದರೂ,ಅಗ್ನಿಶಾಮಕ ದಳದ ಸಿಬ್ಬಂದಿಯಾಗಲಿ ಅಥವಾ ಟೋಲ್ ನಾಕಾ ಸಿಬ್ಬಂದಿಯಾಗಲಿ ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿಲ್ಲ ಎಂದು ತಿಳಿದು ಬಂದಿದೆ. 
ಈ ಘಟನೆ ಕುರಿತು ಹುನಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.