Shuru
Apke Nagar Ki App…
ಹಿರೇಕೆರೂರಿನಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಪೊಲೀಸ್ ಇಲಾಖೆಯು ವಿಶೇಷ ಅಭಿಯಾನವೊಂದನ್ನು ಹಮ್ಮಿಕೊಂಡಿದೆ. "ನಿಮ್ಮ ಸಮಸ್ಯೆ – ನಮ್ಮ ಜವಾಬ್ದಾರಿ" ಎಂಬ ಈ ವಿಶೇಷ ಉಪಕ್ರಮದ ಅಡಿಯಲ್ಲಿ ಹಿರೇಕೆರೂರು ಪೊಲೀಸರು ಬೀಟ್ ಸಂಚರಣೆ ನಡೆಸಲಿದ್ದು, ಜನರ ಮನೆ ಬಾಗಿಲಿಗೇ ಬಂದು ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
Jk ಕನ್ನಡ news
ಹಿರೇಕೆರೂರಿನಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಪೊಲೀಸ್ ಇಲಾಖೆಯು ವಿಶೇಷ ಅಭಿಯಾನವೊಂದನ್ನು ಹಮ್ಮಿಕೊಂಡಿದೆ. "ನಿಮ್ಮ ಸಮಸ್ಯೆ – ನಮ್ಮ ಜವಾಬ್ದಾರಿ" ಎಂಬ ಈ ವಿಶೇಷ ಉಪಕ್ರಮದ ಅಡಿಯಲ್ಲಿ ಹಿರೇಕೆರೂರು ಪೊಲೀಸರು ಬೀಟ್ ಸಂಚರಣೆ ನಡೆಸಲಿದ್ದು, ಜನರ ಮನೆ ಬಾಗಿಲಿಗೇ ಬಂದು ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.
More news from ಕರ್ನಾಟಕ and nearby areas
- ಹಿರೇಕೆರೂರಿನಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಪೊಲೀಸ್ ಇಲಾಖೆಯು ವಿಶೇಷ ಅಭಿಯಾನವೊಂದನ್ನು ಹಮ್ಮಿಕೊಂಡಿದೆ. "ನಿಮ್ಮ ಸಮಸ್ಯೆ – ನಮ್ಮ ಜವಾಬ್ದಾರಿ" ಎಂಬ ಈ ವಿಶೇಷ ಉಪಕ್ರಮದ ಅಡಿಯಲ್ಲಿ ಹಿರೇಕೆರೂರು ಪೊಲೀಸರು ಬೀಟ್ ಸಂಚರಣೆ ನಡೆಸಲಿದ್ದು, ಜನರ ಮನೆ ಬಾಗಿಲಿಗೇ ಬಂದು ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.1
- ಬೀದರ್ ಜಿಲ್ಲೆಯ ಬಸವಕಲ್ಯಾಣದ ಗ್ರಾಮೀಣ ಭಾಗದಲ್ಲಿ ಡಿವೈಎಸ್ಪಿ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡವು ಸಂಚಾರ ನಡೆಸಿದ್ದು, ಸ್ಥಳೀಯ ಜನರೊಂದಿಗೆ ಸಂವಾದ ನಡೆಸಿದೆ.1
- ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಬಿಎಂಟಿಸಿ ಬಸ್ಗಳಲ್ಲಿ ಮಾರುವೇಷದಲ್ಲಿ ಪ್ರಯಾಣಿಸುವ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಸಚಿವರು ಸುಮಾರು 2 ಗಂಟೆಗಳ ಕಾಲ ಹಲವು ಬಸ್ಗಳಲ್ಲಿ ಓಡಾಡಿ, ಸಾಮಾನ್ಯ ಪ್ರಯಾಣಿಕರು ದಿನನಿತ್ಯ ಎದುರಿಸುತ್ತಿರುವ ತೊಂದರೆಗಳ ಖುದ್ದು ಅನುಭವವನ್ನು ಪಡೆದುಕೊಂಡಿದ್ದಾರೆ ಹಾಗೂ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಈ ರಹಸ್ಯ ಕಾರ್ಯಾಚರಣೆಯ ವೇಳೆ, ಒಂದು ಬಸ್ನಲ್ಲಿ ಚೇಂಜ್ ಇಲ್ಲದ ಕಾರಣಕ್ಕಾಗಿ ಕಂಡೆಕ್ಟರ್ ಸ್ವತಃ ಸಚಿವರಿಗೇ ಬಸ್ನಿಂದ ಇಳಿಯುವಂತೆ ಸೂಚಿಸಿದ್ದಾರೆ. ಮತ್ತೊಂದೆಡೆ, ಪ್ರಯಾಣಿಕರಿಗೆ ನಿಗದಿತ ಜಾಗದಲ್ಲಿ ಸ್ಟಾಪ್ ನೀಡದ ಇನ್ನೊಬ್ಬ ಕಂಡೆಕ್ಟರ್ನನ್ನು ಸ್ಥಳದಲ್ಲೇ ಸಸ್ಪೆಂಡ್ ಮಾಡಲು ಸಚಿವರು ಆದೇಶಿಸಿದ್ದಾರೆ.1
- ಕಾಳಗಿ ತಾಲೂಕಿನವರೇ ಆದ, ಪೂರ್ಣಾವಧಿಗೆ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ತಿಪ್ಪಣಪ್ಪ ಕಮಕನೂರ ಅವರಿಗೆ ಜುಲೈ 19ರಂದು ಅವರ ತವರೂರಿನ ತಾಲೂಕು ಕೋಲಿ ಸಮಾಜದ ವತಿಯಿಂದ ಅದ್ದೂರಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ತಾಲೂಕಾಧ್ಯಕ್ಷ ಜಗನ್ನಾಥ ತೇಲಿ ಈ ಮಾಹಿತಿ ನೀಡಿದ್ದಾರೆ. ಜುಲೈ 19ರಂದು ಬೆಳಗ್ಗೆ 10 ಗಂಟೆಗೆ ಕಾಳಗಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ನೀಲಕಂಠ ಕಾಳೇಶ್ವರ ದೇವಸ್ಥಾನದವರೆಗೆ ಡೊಳ್ಳು ಮತ್ತು ಹಲಗೆ ವಾದ್ಯಗಳೊಂದಿಗೆ ತೆರೆದ ವಾಹನದಲ್ಲಿ ತಿಪ್ಪಣಪ್ಪ ಕಮಕನೂರ ಅವರ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಬಳಿಕ ನೀಲಕಂಠ ಕಾಳೇಶ್ವರ ಮಂಗಲ ಮಂಟಪದಲ್ಲಿ ಅಭಿನಂದನಾ ಸಮಾರಂಭ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ರಟಕಲ್ ಗೌರಿಗುಡ್ಡದ ಸಿದ್ಧಶಿವಯೋಗಿ ಶರಣರು, ಭರತನೂರ ಪೂಜ್ಯ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ರಟಕಲ್ ಪೂಜ್ಯ ರೇವಣಸಿದ್ಧ ಶಿವಾಚಾರ್ಯರು, ನೀಲಕಂಠ ಮಹಾಸ್ವಾಮಿಗಳು ಹಾಗೂ ಕಾಳಗಿಯ ನೀಲಕಂಠ ಮರಿದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ, ಮುಖಂಡ ರವಿರಾಜ ಕೊರವಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 85ರಷ್ಟು ಅಂಕ ಪಡೆದ ತಾಲೂಕಿನ ಕೋಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಜರುಗಲಿದ್ದು, ಅರ್ಹ ವಿದ್ಯಾರ್ಥಿಗಳು ದಾಖಲೆಗಳೊಂದಿಗೆ ಜುಲೈ 16ರ ಒಳಗೆ ಗುಂಡಪ್ಪ ಕರೆಮನೊರ (9741681146) ಅಥವಾ ರಾಘವೇಂದ್ರ ಹಲಚೇರಾ (9731155080) ಅವರನ್ನು ಸಂಪರ್ಕಿಸಲು ಕೋರಲಾಗಿದೆ. ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಕೋಲಿ ಸಮಾಜದ ಯುವ ಘಟಕ ತಾಲೂಕಾಧ್ಯಕ್ಷ ಪ್ರವೀಣ ನಾಮದಾರ, ಮುಖಂಡರಾದ ಭೀಮರಾವ ಮಾಲಿಪಾಟೀಲ, ಮಲ್ಲಪ್ಪ ದಿಗ್ಗಾಂವ, ಸಿದ್ದು ಕೇಶ್ವರ, ಮಾರುತಿ ನೈಕೋಡಿ, ಜಯರಾಜ ಮುದಿರಾಜ, ಶಿವಕುಮಾರ್ ಕಮಕನೂರ, ಮಲ್ಲಿಕಾರ್ಜುನ ಮರಗುತ್ತಿ, ಪ್ರಸಾದ ರಟಕಲ್, ರಾಹುಲ್ ಚಿತ್ತಾಪೂರ, ನೀಲಕಂಠಪ್ಪ ಮಾಸ್ತಾರ, ಮಹೇಶ ಗೋಟೂರ, ಶರಣು ಬಂಕಲಗಿ, ರಾಘವೇಂದ್ರ ಬೆಳಗುಂಪಿ, ಪವಾನ ನಾಮದಾರ, ದತ್ತು ಸಾವಳಗಿ, ಭಾಗೇಶ ಕೋಡ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ಕಲಬುರಗಿ ಜಿಲ್ಲೆಯ ಚಿತಾಪುರ ವ್ಯಾಪ್ತಿಯಲ್ಲಿ ರವಿವಾರದಂದೂ ಸಹ ಬಿಎಲ್ಒಗಳು (BLO) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಮ್ಮ ವ್ಯಾಪ್ತಿಯ ಬಿಎಲ್ಒಗಳು ಕೆಲಸ ಮಾಡುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ತಮ್ಮ ಬಿಎಲ್ಒಗಳನ್ನು ಭೇಟಿ ಮಾಡುವಂತೆ ತಿಳಿಸಲಾಗಿದೆ.1
- ಕಲಬುರಗಿ ಜಿಲ್ಲೆಯ ಸೇಡಂ ಇತಿಹಾಸದಲ್ಲೇ ಹೊಸ ಮೈಲಿಗಲ್ಲನ್ನು ಸ್ಥಾಪಿಸಲು ಪಿಎಸ್ಐ ಉಪೇಂದ್ರಕುಮಾರ ಅವರು ಮುಂದಾಗಿದ್ದು, ಪಟ್ಟಣದ ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯವು ಅತ್ಯಂತ ಜೋರಾಗಿ ನಡೆದಿದೆ. ಪಟ್ಟಣದ ಮುಖ್ಯ ರಸ್ತೆಗಳು ಸೇರಿದಂತೆ ರೆಹಮತನಗರ, ವೆಂಕಟೇಶ ನಗರ, ವಿದ್ಯಾನಗರ, ದೊಡ್ಡ ಅಗಸಿ ಹಾಗೂ ಸಣ್ಣ ಅಗಸಿ ಪ್ರದೇಶಗಳಲ್ಲಿ ಈ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಕಳ್ಳತನ, ಅಪಘಾತ, ದೌರ್ಜನ್ಯ ಹಾಗೂ ಸಂಚಾರದ ಮೇಲೆ ಹದ್ದಿನ ಕಣ್ಣಿಡಲು ಪೊಲೀಸರು ಸಜ್ಜಾಗುತ್ತಿದ್ದು, ಇದಕ್ಕಾಗಿ ಪಟ್ಟಣದಾದ್ಯಂತ ಒಟ್ಟು 80 ಕ್ಕೂ ಅಧಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸೇಡಂ ಇತಿಹಾಸದಲ್ಲೇ ಇದೊಂದು ಹೊಸ ಪ್ರಯೋಗವಾಗಿದ್ದು, ಪ್ರತಿಯೊಂದು ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.1
- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟು ಭೀಕರ ಬರಗಾಲದ ಛಾಯೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಸಕಾಲಕ್ಕೆ ಮಳೆ ಬಂದು ನಾಡು ಸುಭಿಕ್ಷವಾಗಲಿ ಎಂದು ಆಶಿಸಿ ಕತ್ತೆಗಳ ಮದುವೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಅದ್ದೂರಿಯಾಗಿ ನೆರವೇರಿಸಲಾಗಿದೆ. ಗ್ರಾಮೀಣ ಭಾಗದ ವಿಶಿಷ್ಟ ಜನಪದ ನಂಬಿಕೆಯಂತೆ, ಮಳೆ ದೇವರಾದ ವರುಣ ದೇವನನ್ನು ಒಲಿಸಿಕೊಳ್ಳಲು ಸಾರ್ವಜನಿಕರು ಹಾಗೂ ರೈತ ಬಾಂಧವರು ಒಗ್ಗೂಡಿ ಈ ವಿಶಿಷ್ಟ ಆಚರಣೆಯನ್ನು ಹಮ್ಮಿಕೊಂಡಿದ್ದರು. ಊರಿನ ಗೌಡರ ಮನೆಯಲ್ಲಿ ಶಾಸ್ತ್ರೋಕ್ತವಾಗಿ ಜರುಗಿದ ಈ ಕಲ್ಯಾಣ ಮಹೋತ್ಸವಕ್ಕೆ ಮಹಾದೇವ ಗೌಡರು ಹಾಗೂ ಪ್ರವೀಣ ಗೌಡರು ಪೂಜೆ ಸಲ್ಲಿಸಿದರು. ಮಲ್ಲಿಕಾರ್ಜುನ ಮಠಪತಿ, ಗಿರೀಶ ಜೋಶಿ ಹಾಗೂ ಅಪ್ಪಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಸಾಮಾನ್ಯ ಮದುವೆಯಂತೆಯೇ ಸಕಲ ಸಂಪ್ರದಾಯಗಳೊಂದಿಗೆ ಕತ್ತೆಗಳ ವಿವಾಹ ಕಾರ್ಯ ನೆರವೇರಿತು. ಕತ್ತೆಗಳಿಗೆ ಮಂಗಲ ಸ್ನಾನ ಮಾಡಿಸಿ, ಅರಿಶಿನ-ಕುಂಕುಮ ಹಚ್ಚಿ, ನೂತನ ವಸ್ತ್ರ ಹಾಗೂ ಹೂವಿನ ಹಾರಗಳಿಂದ ಶೃಂಗರಿಸಲಾಗಿತ್ತು. ಮಂಗಲ ವಾದ್ಯಗಳ ಭಿನ್ನ ಧ್ವನಿ ಹಾಗೂ ಮಂತ್ರಘೋಷಗಳ ನಡುವೆ ಕತ್ತೆಗಳ ಮದುವೆ ಶಾಸ್ತ್ರೋಕ್ತವಾಗಿ ಸಂಪನ್ನಗೊಂಡಿತು. ಮದುವೆಯ ನಂತರ ಶೃಂಗರಿತ ಕತ್ತೆಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅತ್ಯಂತ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಗ್ರಾಮಸ್ಥರು, ಮಹಿಳೆಯರು ಹಾಗೂ ಯುವಕರು ಸಂಭ್ರಮದಿಂದ ಪಾಲ್ಗೊಂಡಿದ್ದರು. 'ಹೊತ್ತ ಬಂದಾಗ ಕತ್ತೆ ಕಾಲು ಹಿಡಿಯಬೇಕು' ಎಂಬ ಗಾದೆ ಮಾತಿನಂತೆ, ಗ್ರಾಮದ ಅಗಸಿಯಲ್ಲಿ ಪ್ರವೀಣ ಗೌಡರು ಹಾಗೂ ಖಂಡೇರಾವ ಘೋರ್ಪಡೆ ಅವರು ಕತ್ತೆಗಳ ಕಾಲನ್ನು ಹಿಡಿದು ವರುಣ ದೇವನು ಪ್ರಸನ್ನನಾಗಿ ಸಕಾಲಕ್ಕೆ ಉತ್ತಮ ಮಳೆ ಕರುಣಿಸಲಿ ಎಂದು ಭಕ್ತಿಭಾವದಿಂದ ಪ್ರಾರ್ಥಿಸಿದರು. ಬರಗಾಲ ಎದುರಾದಾಗ ಕತ್ತೆಗಳ ಮದುವೆ ಮಾಡುವ ಮೂಲಕ ಪ್ರಕೃತಿ ಮಾತೆಯನ್ನು ಬೇಡಿಕೊಳ್ಳುವುದು ಹಿರಿಯರ ಕಾಲದಿಂದಲೂ ನಡೆದುಬಂದ ಸಂಪ್ರದಾಯವಾಗಿದ್ದು, ಇದರಿಂದ ಸದ್ಯದಲ್ಲೇ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ ಎಂದು ಗ್ರಾಮಸ್ಥರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಅಪೂರ್ವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಸಿದರಾಯ ತೋಡಕರ, ಅಸ್ಲಾಂ ಮುಲ್ಲಾ, ಅಶೋಕ ಪೂಜಾರಿ, ರಾಮಣ್ಣ ಮಗದುಮ್ಮ, ಆರ್ ಎಂ ಪಾಟೀಲ, ಚಿದಾನಂದ ಜಾಲಿಹಾಳ ಸೇರಿದಂತೆ ಹಲವು ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು ಎಂದು ವಿಶೇಷ ಪ್ರತಿನಿಧಿ ಮಹೇಶ್ ಶರ್ಮಾ ವರದಿ ಮಾಡಿದ್ದಾರೆ.1
- ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮದುವೆಯಾದ ಕೇವಲ ಮೂರೇ ವರ್ಷದಲ್ಲಿ ವಿಚ್ಛೇದನ ಬಯಸಿದ್ದ ದಂಪತಿಗಳನ್ನು ನ್ಯಾಯಾಧೀಶರು ಮತ್ತೆ ಒಂದಾಗಿಸಿದ್ದಾರೆ.1