logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Arkalgud : ಟ್ರ್ಯಾಕ್ಟರ್ ಚಾಲಕ ಹಠಾತ್ ಮೂರ್ಛೆ ; ತಪ್ಪಿದ ಅನಾಹುತ ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ. ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ. ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ. ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು: ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು. ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ. ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ. ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು. #ArkalgudNews #tractorlife #news5kannada #NewsUpdate

2 hrs ago
user_News5Kannada
News5Kannada
Local News Reporter Arkalgud, Hassan•
2 hrs ago

Arkalgud : ಟ್ರ್ಯಾಕ್ಟರ್ ಚಾಲಕ ಹಠಾತ್ ಮೂರ್ಛೆ ; ತಪ್ಪಿದ ಅನಾಹುತ ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ. ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ. ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ. ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು: ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು. ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ. ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ. ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು. #ArkalgudNews #tractorlife #news5kannada #NewsUpdate

More news from Hassan and nearby areas
  • ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ. ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ. ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ. ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು: ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು. ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ. ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ. ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು. #ArkalgudNews #tractorlife #news5kannada #NewsUpdate
    1
    ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ.
ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ.
ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ.
ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ.
ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು:
ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು.
ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ.
ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ.
ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು.
#ArkalgudNews #tractorlife #news5kannada #NewsUpdate
    user_News5Kannada
    News5Kannada
    Local News Reporter Arkalgud, Hassan•
    2 hrs ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Arsikere, Hassan•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • 135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE
    1
    135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE
    user_MUNAWAR PASHA
    MUNAWAR PASHA
    ಪತ್ರಕರ್ತ Mysuru, Karnataka•
    16 hrs ago
  • ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.
    1
    ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ.
ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16  ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    7 hrs ago
  • ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಪುನೀತ್‌ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
    1
    ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
ಪುನೀತ್‌ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    1 hr ago
  • ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಕೊಳ್ಳೇಗಾಲ ಇಒ ಮತ್ತು ಗ್ರಾ.ಪಂ ಕಾರ್ಯದರ್ಶಿ ವಿರುದ್ಧ ಆಕ್ರೋಶ ಕೊಳ್ಳೇಗಾಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೊಬ್ಬರು, ಗ್ರಾಮದ ಯುವಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿ ವರದಿಯಾಗಿದೆ. ಘಟನೆಯ ವಿವರ: ಕುಂತೂರು ಗ್ರಾಮದ ದಲಿತ ಯುವಕರು ತಮ್ಮ ಗ್ರಾಮದ ಕೆಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಗುರು ಶಾಂತಪ್ಪ ಹಾಗೂ ಕುಂತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವಪ್ರಸಾದ್ ಅವರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಮಸ್ಯೆಗಳನ್ನು ಆಲಿಸುವ ಬದಲು, ಅಧಿಕಾರಿ ಗುರು ಶಾಂತಪ್ಪ ಅವರು ಯುವಕರನ್ನು ಉದ್ದೇಶಿಸಿ "ಬೇವರ್ಸಿಗಳು" ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೀಳುಮಟ್ಟದ ನಡವಳಿಕೆ ತೋರಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರ ಆಕ್ರೋಶ: "ಸರ್ಕಾರಿ ನೌಕರರ ನಡತೆ ನಿಯಮಗಳ ಪ್ರಕಾರ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆದರೆ, ದಲಿತ ಯುವಕರನ್ನು ಈ ರೀತಿ ನಿಂದಿಸಿರುವುದು ನಮಗೆ ತೀವ್ರ ಮನನೋಯಿಸಿದೆ. ಒಬ್ಬ ಜವಾಬ್ದಾರಿಯುತ ಅಧಿಕಾರಿಗೆ ಇದು ಶೋಭೆ ತರುವುದಿಲ್ಲ," ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನವಿ: ಈ ಘಟನೆಯು ಸರ್ಕಾರಿ ಅಧಿಕಾರಿಗಳ ಮೈಗಳ್ಳತನ ಮತ್ತು ಸಾರ್ವಜನಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದ್ದು, ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ಯುವಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    3
    ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಕೊಳ್ಳೇಗಾಲ ಇಒ ಮತ್ತು ಗ್ರಾ.ಪಂ ಕಾರ್ಯದರ್ಶಿ ವಿರುದ್ಧ ಆಕ್ರೋಶ
ಕೊಳ್ಳೇಗಾಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೊಬ್ಬರು, ಗ್ರಾಮದ ಯುವಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿ ವರದಿಯಾಗಿದೆ.
ಘಟನೆಯ ವಿವರ:
ಕುಂತೂರು ಗ್ರಾಮದ ದಲಿತ ಯುವಕರು ತಮ್ಮ ಗ್ರಾಮದ ಕೆಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಗುರು ಶಾಂತಪ್ಪ ಹಾಗೂ ಕುಂತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವಪ್ರಸಾದ್ ಅವರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಮಸ್ಯೆಗಳನ್ನು ಆಲಿಸುವ ಬದಲು, ಅಧಿಕಾರಿ ಗುರು ಶಾಂತಪ್ಪ ಅವರು ಯುವಕರನ್ನು ಉದ್ದೇಶಿಸಿ "ಬೇವರ್ಸಿಗಳು" ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೀಳುಮಟ್ಟದ ನಡವಳಿಕೆ ತೋರಿದ್ದಾರೆ ಎನ್ನಲಾಗಿದೆ.
ಸಾರ್ವಜನಿಕರ ಆಕ್ರೋಶ:
"ಸರ್ಕಾರಿ ನೌಕರರ ನಡತೆ ನಿಯಮಗಳ ಪ್ರಕಾರ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆದರೆ, ದಲಿತ ಯುವಕರನ್ನು ಈ ರೀತಿ ನಿಂದಿಸಿರುವುದು ನಮಗೆ ತೀವ್ರ ಮನನೋಯಿಸಿದೆ. ಒಬ್ಬ ಜವಾಬ್ದಾರಿಯುತ ಅಧಿಕಾರಿಗೆ ಇದು ಶೋಭೆ ತರುವುದಿಲ್ಲ," ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನವಿ:
ಈ ಘಟನೆಯು ಸರ್ಕಾರಿ ಅಧಿಕಾರಿಗಳ ಮೈಗಳ್ಳತನ ಮತ್ತು ಸಾರ್ವಜನಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದ್ದು, ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ಯುವಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ. ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
    1
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.