*ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ರೈಲು ಹೋರಾಟ ಸಮಿತಿ ಮನವಿ.! ರೈಲ್ವೆ ಅಧಿಕಾರಿಗಳ ನಡೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೇಸರ* *ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ರೈಲು ಹೋರಾಟ ಸಮಿತಿ ಮನವಿ.! ರೈಲ್ವೆ ಅಧಿಕಾರಿಗಳ ನಡೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೇಸರ* *ಬಾಗಲಕೋಟೆ* : ಹುಬ್ಬಳ್ಳಿ ನಗರದಲ್ಲಿರುವ ಚಾಲುಕ್ಯ ರೈಲ್ವೆ ಇನಸ್ಟಿಟ್ಯೂಟ್ ಸಭಾಭವನದಲ್ಲಿ ಮಂಗಳವಾರ ಸೌತ್ ವೆಸ್ಟರ್ನ್ ರೈಲ್ವೆಸ್ ನ 25ನೇ ವಲಯ ರೈಲ್ವೆ ಬಳಕೆದಾರರ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು . ಈ ಸಭೆಯಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿಯವರು ಪಾಲ್ಗೊಂಡು ಉತ್ತರ ಕರ್ನಾಟಕದ ವಿವಿಧ ರೈಲ್ವೆ ಬೇಡಿಕೆ ಹಾಗೂ ನೂತನ ರೈಲ್ವೆ ಮಾರ್ಗಗಳ ಕುರಿತು ಮಾನ್ಯ ಮಹಾ ವ್ಯವಸ್ಥಾಪಕರಾದ ಪಿ ಅನಂತ ಅವರಿಗೆ ಮನವಿ ಸಲ್ಲಿಸಿದರು. ಬಹು ದಿನಗಳ ಬೇಡಿಕೆಯಾದ ಲೋಕಾಪೂರದಿಂದ ರಾಮದುರ್ಗ ಸವದತ್ತಿ ಮಾರ್ಗವಾಗಿ ಧಾರವಾಡಕ್ಕೆ ನೂತನ ರೈಲ್ವೆ ಮಾರ್ಗ ಅನುಷ್ಠಾನಗೊಳಿಸಬೇಕು, ಬಸವ ಎಕ್ಸಪ್ರೆಸ್ ರೈಲನ್ನು ಲೋಕಾಪೂರವರೆಗೆ ವಿಸ್ತರಿಸಬೇಕು , ವಿಜಯಪುರ- ಬಾಗಲಕೋಟೆ ಮಾರ್ಗದಲ್ಲಿ ತಿರುಪತಿಗೆ ನೂತನ ರೈಲು ಪ್ರಾರಂಭಿಸಬೇಕು, ವಿಜಯಪುರದಿಂದ ಬಾಗಲಕೋಟೆ ಗದಗ ಹೊಸಪೇಠ ಬಳ್ಳಾರಿ ಮಾರ್ಗವಾಗಿ ಗುಂಠಕಲ್ಲವರೆಗೆ ನೂತನ ಪ್ಯಾಸೆಂಜರ್ ರೈಲು ಪ್ರಾರಂಭಿಸಬೇಕು, ಹುಬ್ಬಳ್ಳಿ - ಹ.ನಿಜಾಮುದ್ದೀನ್ ಎಕ್ಸಪ್ರೆಸ್, ಮೈಸೂರು-ಸಾಯಿನಗರ (ಶಿರಡಿ) , ಯಶ್ವಂತಪುರ - ಬಿಕಾನೇರ ಈ ರೈಲುಗಳನ್ನು ದಿನನಿತ್ಯ ಸಂಚರಿಸುವಂತೆ ಮಾಡಬೇಕು, ರಾಯಚೂರು - ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಹೈದರಾಬಾದ್-ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಮುಂಬೈ - ಬೆಂಗಳೂರು ಸೂಪರ್ ಫಾಸ್ಟ್ ರೈಲನ್ನು ವಿಜಯಪುರ-ಬಾಗಲಕೋಟೆ ಮಾರ್ಗದಲ್ಲಿ ಸಂಚರಿಸುವಂತೆ ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಬಾಗಲಕೋಟೆ-ಕುಡಚಿ ಕಾಮಗಾರಿಯು ಲೋಕಾಪೂರವರೆಗೆ ಮುಕ್ತಾಯವಾಗಿದ್ದು ಭದ್ರತಾ ಸಮೀಕ್ಷೆಯು ಸಹ ಆಗಿದೆ. ಆದರೆ ಇಲ್ಲಿ ರೈಲುಗಳ ಸಂಚಾರವಿಲ್ಲದೆ ನಿಲ್ದಾಣಗಳು ಹಾಳಾಗುತ್ತಿರುವುದರಿಂದ ಬಾಗಲಕೋಟೆ-ಲೋಕಾಪೂರ ವರೆಗೆ ಪ್ಯಾಸೆಂಜರ್ ರೈಲನ್ನು ಪ್ರಾರಂಭಿಸಬೇಕೆಂದು ಕುತ್ಬುದ್ದಿನ್ ಕಾಜಿಯವರು ರೈಲ್ವೆ ಅಧಿಕಾರಿಗಳಿಗೆ ಒತ್ತಾಯಿಸಿದಾಗ ಅಧಿಕಾರಿಗಳು ಅಲ್ಲಿನ ಜನರು ರೈಲು ಹತ್ತಲ್ಲವೆಂದು ಹಾರಿಕೆ ಉತ್ತರ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದಾಗ ಮಾನ್ಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರು ರೈಲ್ವೆ ಅಧಿಕಾರಿಗಳ ನಡೆಗೆ ಗರಂ ಆಗಿ ನೀವು ಆ ಭಾಗದಲ್ಲಿ ಇನ್ನೂ ರೈಲು ಪ್ರಾರಂಭಿಸಿಯೇ ಇಲ್ಲ. ಮತ್ತೆ ಜನರು ರೈಲು ಹತ್ತಲ್ಲವೆಂದು ಹೇಗೆ ಹೇಳುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿ, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಬಾಬಾಜಾನ್ ಮುಧೋಳ್, ಮಹೇಂದ್ರ ಸಿಂಗವಿ , ಸುಭಾಸ ಶಿರ್ಬುರ, ರಾಜಶೇಖರ ಮೇಣಶಿನಕಾಯಿ, ಮೈನುದ್ದಿನ್ ಖಾಜಿ, ಎಂ ಕೆ ಯಾದವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
*ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ರೈಲು ಹೋರಾಟ ಸಮಿತಿ ಮನವಿ.! ರೈಲ್ವೆ ಅಧಿಕಾರಿಗಳ ನಡೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೇಸರ* *ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ರೈಲು ಹೋರಾಟ ಸಮಿತಿ ಮನವಿ.! ರೈಲ್ವೆ ಅಧಿಕಾರಿಗಳ ನಡೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೇಸರ* *ಬಾಗಲಕೋಟೆ* : ಹುಬ್ಬಳ್ಳಿ ನಗರದಲ್ಲಿರುವ ಚಾಲುಕ್ಯ ರೈಲ್ವೆ ಇನಸ್ಟಿಟ್ಯೂಟ್ ಸಭಾಭವನದಲ್ಲಿ ಮಂಗಳವಾರ ಸೌತ್ ವೆಸ್ಟರ್ನ್ ರೈಲ್ವೆಸ್ ನ 25ನೇ ವಲಯ ರೈಲ್ವೆ ಬಳಕೆದಾರರ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು . ಈ ಸಭೆಯಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿಯವರು ಪಾಲ್ಗೊಂಡು ಉತ್ತರ ಕರ್ನಾಟಕದ ವಿವಿಧ ರೈಲ್ವೆ ಬೇಡಿಕೆ ಹಾಗೂ ನೂತನ ರೈಲ್ವೆ ಮಾರ್ಗಗಳ ಕುರಿತು ಮಾನ್ಯ ಮಹಾ ವ್ಯವಸ್ಥಾಪಕರಾದ ಪಿ ಅನಂತ ಅವರಿಗೆ ಮನವಿ ಸಲ್ಲಿಸಿದರು. ಬಹು ದಿನಗಳ ಬೇಡಿಕೆಯಾದ ಲೋಕಾಪೂರದಿಂದ ರಾಮದುರ್ಗ ಸವದತ್ತಿ ಮಾರ್ಗವಾಗಿ ಧಾರವಾಡಕ್ಕೆ ನೂತನ ರೈಲ್ವೆ ಮಾರ್ಗ ಅನುಷ್ಠಾನಗೊಳಿಸಬೇಕು, ಬಸವ ಎಕ್ಸಪ್ರೆಸ್ ರೈಲನ್ನು ಲೋಕಾಪೂರವರೆಗೆ ವಿಸ್ತರಿಸಬೇಕು , ವಿಜಯಪುರ- ಬಾಗಲಕೋಟೆ ಮಾರ್ಗದಲ್ಲಿ ತಿರುಪತಿಗೆ ನೂತನ ರೈಲು ಪ್ರಾರಂಭಿಸಬೇಕು, ವಿಜಯಪುರದಿಂದ ಬಾಗಲಕೋಟೆ ಗದಗ ಹೊಸಪೇಠ ಬಳ್ಳಾರಿ ಮಾರ್ಗವಾಗಿ ಗುಂಠಕಲ್ಲವರೆಗೆ ನೂತನ ಪ್ಯಾಸೆಂಜರ್ ರೈಲು ಪ್ರಾರಂಭಿಸಬೇಕು, ಹುಬ್ಬಳ್ಳಿ - ಹ.ನಿಜಾಮುದ್ದೀನ್ ಎಕ್ಸಪ್ರೆಸ್, ಮೈಸೂರು-ಸಾಯಿನಗರ
(ಶಿರಡಿ) , ಯಶ್ವಂತಪುರ - ಬಿಕಾನೇರ ಈ ರೈಲುಗಳನ್ನು ದಿನನಿತ್ಯ ಸಂಚರಿಸುವಂತೆ ಮಾಡಬೇಕು, ರಾಯಚೂರು - ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಹೈದರಾಬಾದ್-ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಮುಂಬೈ - ಬೆಂಗಳೂರು ಸೂಪರ್ ಫಾಸ್ಟ್ ರೈಲನ್ನು ವಿಜಯಪುರ-ಬಾಗಲಕೋಟೆ ಮಾರ್ಗದಲ್ಲಿ ಸಂಚರಿಸುವಂತೆ ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಬಾಗಲಕೋಟೆ-ಕುಡಚಿ ಕಾಮಗಾರಿಯು ಲೋಕಾಪೂರವರೆಗೆ ಮುಕ್ತಾಯವಾಗಿದ್ದು ಭದ್ರತಾ ಸಮೀಕ್ಷೆಯು ಸಹ ಆಗಿದೆ. ಆದರೆ ಇಲ್ಲಿ ರೈಲುಗಳ ಸಂಚಾರವಿಲ್ಲದೆ ನಿಲ್ದಾಣಗಳು ಹಾಳಾಗುತ್ತಿರುವುದರಿಂದ ಬಾಗಲಕೋಟೆ-ಲೋಕಾಪೂರ ವರೆಗೆ ಪ್ಯಾಸೆಂಜರ್ ರೈಲನ್ನು ಪ್ರಾರಂಭಿಸಬೇಕೆಂದು ಕುತ್ಬುದ್ದಿನ್ ಕಾಜಿಯವರು ರೈಲ್ವೆ ಅಧಿಕಾರಿಗಳಿಗೆ ಒತ್ತಾಯಿಸಿದಾಗ ಅಧಿಕಾರಿಗಳು ಅಲ್ಲಿನ ಜನರು ರೈಲು ಹತ್ತಲ್ಲವೆಂದು ಹಾರಿಕೆ ಉತ್ತರ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದಾಗ ಮಾನ್ಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರು ರೈಲ್ವೆ ಅಧಿಕಾರಿಗಳ ನಡೆಗೆ ಗರಂ ಆಗಿ ನೀವು ಆ ಭಾಗದಲ್ಲಿ ಇನ್ನೂ ರೈಲು ಪ್ರಾರಂಭಿಸಿಯೇ ಇಲ್ಲ. ಮತ್ತೆ ಜನರು ರೈಲು ಹತ್ತಲ್ಲವೆಂದು ಹೇಗೆ ಹೇಳುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿ, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಬಾಬಾಜಾನ್ ಮುಧೋಳ್, ಮಹೇಂದ್ರ ಸಿಂಗವಿ , ಸುಭಾಸ ಶಿರ್ಬುರ, ರಾಜಶೇಖರ ಮೇಣಶಿನಕಾಯಿ, ಮೈನುದ್ದಿನ್ ಖಾಜಿ, ಎಂ ಕೆ ಯಾದವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
- ಶಿಗ್ಗಾವಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಮಟ್ಟದ ಆತ್ಮರಕ್ಷಣಾ ಕಲೆಯನ್ನು ಕಲಿಯುವುದು ಇಂದಿನ ಕಾಲದ ಅವಶ್ಯಕತೆಯಾಗಿದೆ ಕರಾಟೆ ತರಬೇತಿಯು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಎಂದು ಕಾಂಗ್ರೆಸ್ ಮುಖಂಡ ಮುನ್ನಾ ಪಠಾಣ ಹೇಳಿದರು. ಪಟ್ಟಣದ ಡಾ| ಅಂಬೇಡ್ಕರ ಭವನದಲ್ಲಿ ಲಯನ್ ಮಾರ್ಷಲ್ ಆರ್ಟ್ಸ್ನ ಶಾಟೋಕಾನ್ ಕರಾಟೆ ಡೋ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬ್ಲ್ಯಾಕ್ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರಾಟೆ ಕೇವಲ ಹೊಡೆದಾಟದ ಕಲೆಯಲ್ಲ, ಅದೊಂದು ಶಿಸ್ತಿನ ಜೀವನ ಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಸ್ಥಿರತೆ ಬಹಳ ಮುಖ್ಯವಾಗಿರುವುದರಿಂದ ಪಾಲಕರು ಮಕ್ಕಳಿಗೆ ಇಂತಹ ಕಲೆಗಳನ್ನು ಕಲಿಸಲು ಮುಂದಾಗಬೇಕು ಎಂದು ಹೇಳಿದರು. ಗ್ಯಾರಂಟಿ ಸಮೀತಿಯ ಅಧ್ಯಕ್ಷ ಎಸ್.ಎಪ್ ಮಣಕಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭಾನ್ವಿತ ಕರಾಟೆ ಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿರುವ ಶಾಟೋಕಾನ್ ಕರಾಟೆ ಡೋ ಸಂಸ್ಥೆಯಯ ಕಾರ್ಯ ಸ್ಲಾಘನೀಯವಾಗಿದೆ. ಇಂದು ಬ್ಲ್ಯಾಕ್ ಬೆಲ್ಟ್ ಪಡೆದ ಸಾಧಕರು ಇಷ್ಟಕ್ಕೆ ತೃಪ್ತರಾಗದೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ನಾಡಿಗೆ ಕೀರ್ತಿ ತರಬೇಕು. ಪೋಷಕರು ತಮ್ಮ ಮಕ್ಕಳ ಕ್ರೀಡಾಸಕ್ತಿಗೆ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ತರಬೇತಿ ಮುಗಿಸಿದ ಕರಾಟೆ ಪಟುಗಳಿಗೆ ಅಧಿಕೃತವಾಗಿ 'ಬ್ಲ್ಯಾಕ್ ಬೆಲ್ಟ್' ಹಾಗೂ ಸಾಧನಾ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗುಡ್ಡಪ್ಪ ಜಲದಿ, ಗೌಸಖಾನ ಮುನಸಿ, ಮಂಜು ತಿಮ್ಮಾಪುರ, ಅಣ್ಣಪ್ಪ ಲಮಾಣಿ, ಮುನ್ನಾ ಲಕ್ಷಮೇಶ್ವರ, ಶಂಕರಗೌಡ ಪಾಟೀಲ, ಮಂಜುನಾಥ ಹಿರೂರ, ಬಾಬರ ಬಾವೋಜಿ, ಶಂಬು ನೆರ್ತಿ, ಈರಣ್ಣ ಬಳಿಗಾರ, ಕರಾಟೆ ತರಬೇತುದಾರರಾದ ಹನುಮಂತ ಗದಗ, ಬಸವರಾಜ ಕುಲಕರ್ಣಿ, ಶ್ರೇಯಸ್ ಕಲಾಲ, ಚಂದ್ರು ಕಲ್ಲಕಟ್ಟಿ ಮೊಹನ ಗದಗ, ಅರುಣ ಪ್ರಭಾಳಕರ, ಜಯಂಗೀರ ಬೇಗ್ ಮಿರ್ಜಾ ಸೇರಿದಂತೆ ಇತರರಿದ್ದರು.4
- ಆಕಾಶದಲ್ಲಿ ಪತನ1
- विधायक श्रीमान अभय पाटिल जी के होली मिलन कार्य रंग पंचमी शानदार मनाया गया #shurunews1
- ಬೆಳಗಾವಿ ಬ್ರೇಕಿಂಗ್ ಬೆಳಗಾವಿ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆ ಬೆಳಗಾವಿ ಡಿಸಿಪಿ ನಾರಾಯಣ್ ಭರಮನಿ ಹೇಳಿಕೆ ಡಿಸ್ಟ್ರಿಕ್ಟ್ ಕೋರ್ಟ್ ಗೆ ಬಾಂಬ್ ಕರೆ ಬಂದಿರೋದು ನಿಜ ಇಮೇಲ್ ಮೂಲಕ ಬಾಂಬ್ ಕರೆ ಬಂದಿದೆ ನಮ್ಮ ಸಿಬ್ಬಂದಿಗಳು ಈಗಾಗಲೇ ಭೇಟಿ, ನೀಡಿ ಪರಿಶೀಲನೆ ಮಾಡ್ತಿದ್ದಾರೆ ಯಾರು ಮಾಡಿದ್ದಾರೆ ಅನೋದರ ಬಗ್ಗೆ ಪರಿಶೀಲನೆ ಮಾಡುತ್ತೇವೆ3
- ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.1
- ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.1
- ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ. ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.1
- Post by ALTAF,❤️🙏1
- ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ1