Shuru
Apke Nagar Ki App…
ಡಾ.ಶರಣ ಪ್ರಕಾಶ್ ಪಾಟೀಲ್ ಗೆ ಡಿಸಿಎಂ ಸ್ಥಾನ ನೀಡಲು ಮಹೇಶ ಪಾಟೀಲ ಆಗ್ರಹ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಮಹೇಶ ಪಾಟೀಲ್ ತರನಳ್ಳಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಡಾ.ಶರಣ ಪ್ರಕಾಶ ಪಾಟೀಲ್ ಅವರು ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಪ್ರಭಾವಿ ನಾಯಕ. ನಾಲ್ಕು ಬಾರಿ ಶಾಸಕರಾಗಿ ಮೂರು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಜನ ಮನ್ನಣೆಗೆ ಪಾತ್ರರಾಗಿದ್ದಾರೆ. ಎಲ್ಲಾ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಾಯಕರಾಗಿದ್ದಾರೆ. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮನೋಭಾವ ಹೊಂದಿದ್ದಾರೆ. ಇವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಮುಂಬರುವ 2028 ರ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸ್ಥಾನ ಕಾಂಗ್ರೆಸ್ ಪಕ್ಷ ಗೆಲ್ಲುವ ಅವಕಾಶ ಇದೆ ಎಂದಿದ್ದಾರೆ.
Suddi - Junction
ಡಾ.ಶರಣ ಪ್ರಕಾಶ್ ಪಾಟೀಲ್ ಗೆ ಡಿಸಿಎಂ ಸ್ಥಾನ ನೀಡಲು ಮಹೇಶ ಪಾಟೀಲ ಆಗ್ರಹ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಮಹೇಶ ಪಾಟೀಲ್ ತರನಳ್ಳಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಡಾ.ಶರಣ ಪ್ರಕಾಶ ಪಾಟೀಲ್ ಅವರು ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಪ್ರಭಾವಿ ನಾಯಕ. ನಾಲ್ಕು ಬಾರಿ ಶಾಸಕರಾಗಿ ಮೂರು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಜನ ಮನ್ನಣೆಗೆ ಪಾತ್ರರಾಗಿದ್ದಾರೆ. ಎಲ್ಲಾ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಾಯಕರಾಗಿದ್ದಾರೆ. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮನೋಭಾವ ಹೊಂದಿದ್ದಾರೆ. ಇವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಮುಂಬರುವ 2028 ರ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸ್ಥಾನ ಕಾಂಗ್ರೆಸ್ ಪಕ್ಷ ಗೆಲ್ಲುವ ಅವಕಾಶ ಇದೆ ಎಂದಿದ್ದಾರೆ.
More news from ಕರ್ನಾಟಕ and nearby areas
- ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ1
- ಗುರುಮಠಕಲ್ ಪಟ್ಟಣದ ಎಸ್ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ4
- ಪುಷ್ಯ ಮಳೆಯ ಸಿಂಚನಕ್ಕೆ ಚಿಂಚೋಳಿ ತಾಲ್ಲೂಕು ತಂಪು – ರೈತರ ಮುಖದಲ್ಲಿ ಮಂದಹಾಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಪುಷ್ಯ ಮಳೆಯ ಸಿಂಚನ ಮುಂದುವರಿದಿದ್ದು, ರೈತ ಸಮುದಾಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಸುರಿಯುತ್ತಿರುವ ಮಳೆ ಜನಜೀವನಕ್ಕೆ ತಂಪು ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉತ್ತಮ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಕೃಷಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ತೊಗರಿ, ಕಡಲೆ, ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಈ ಮಳೆ ಅನುಕೂಲಕರವಾಗಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣದ ನಡುವೆ ಸುರಿಯುತ್ತಿರುವ ಮಳೆಯು ಭೂಗರ್ಭ ಜಲಮಟ್ಟ ಹೆಚ್ಚಳಕ್ಕೂ ನೆರವಾಗುವ ಸಾಧ್ಯತೆ ಇದೆ. ಮಳೆಯ ಕಾರಣದಿಂದ ಕೆಲ ಪ್ರದೇಶಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ಹರಿದರೂ ಯಾವುದೇ ದೊಡ್ಡ ಪ್ರಮಾಣದ ಹಾನಿ ವರದಿಯಾಗಿಲ್ಲ. ಮತ್ತೊಂದೆಡೆ, ಬಿಸಿಲಿನ ತಾಪಮಾನದಿಂದ ಬಳಲುತ್ತಿದ್ದ ಜನರಿಗೆ ಪುಷ್ಯ ಮಳೆಯ ತಂಪು ನೆಮ್ಮದಿ ತಂದಿದೆ. ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿಯೂ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಸೂಕ್ತವಾಗಿ ನಿರ್ವಹಿಸುವಂತೆ ಸಲಹೆ ನೀಡಲಾಗಿದೆ. ಒಟ್ಟಾರೆ, ಚಿಂಚೋಳಿ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಪುಷ್ಯ ಮಳೆಯು ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬಿದ್ದು, ಉತ್ತಮ ಬೆಳೆ ನಿರೀಕ್ಷೆಯಲ್ಲಿ ರೈತರು ಕಾದು ಕುಳಿತಿದ್ದಾರೆ.2
- ಕಲ್ಯಾಣ ವಾರ್ತೆ - "ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಮುದ್ನಾಳ ಮನವಿ" 'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ' ಕಲ್ಯಾಣ ವಾರ್ತೆ -ಯಾದಗಿರಿ ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು ಭೇಟಿ ನೀಡಿದರು. ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.1
- ಯಾದಗಿರಿ || ನಾರಾಯಣಪುರ ಜಲಾಶಯದಿಂದ 24 ಗೆಟ್ ಓಪನ್ ಕೃಷ್ಣಾ ನದಿಗೆ ನೀರು1
- ಡಿಜಿಪಿ ಅಲೋಕ್ ಕುಮಾರ್ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಭೇಟಿ- ಭದ್ರತಾ ಕುರಿತು ತಪಾಸಣೆ ಇತ್ತೀಚಿಗೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಜೈಲಿನಿಂದ ಪರಾರಿಯಾಗಿರುವ ಪ್ರಕರಣದ ಕುರಿತು ಈಗಾಗಲೇ ಇಬ್ಬರು ಕೈದಿಗಳನ್ನು ಬಂಧಿಸಿರುವ ಕಲಬುರ್ಗಿ ಬೀದರ್ ಪೊಲೀಸರು ಇನ್ನೊಬ್ಬ ಕೈದಿ ಪರಾರಿಯಾಗಿ 15 ದಿನ ಕಳೆದರು ಪತ್ತೆಯಾಗಿಲ್ಲ. ಇಂದು ಮುಂಜಾನೆ ಡಿಸಿಪಿ ಅಲೋಕ್ ಕುಮಾರ್ ಬೇಟಿ ನೀಡಿದ್ದು, ಕೇಂದ್ರ ಕಾರಾಗೃಹದ ಒಳಗಡೆ ತೆರಳುವ ಮುನ್ನ ಗೌರವ ವಂದನೆ ಸ್ವೀಕರಿಸಿದರು.ಜೈಲಿನ ಒಳಗೆ ಅಧಿಕಾರಿಗಳ ಸಭೆ ನಡೆಸಲಿರುವ ಡಿಸಿಪಿ ಅಲೋಕ್ ಕುಮಾರ್ ಅವರು ಸಭೆಯ ಬಳಿಕ ಜೈಲಿನ ಆಡಳಿತ ಮತ್ತು ಭದ್ರತೆ ಕುರಿತು ತಪಾಸಣೆ ಮಾಡಲಿದ್ದಾರೆ1
- ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳ ತುಲಾಭಾರ ನಡೆಯಿತು. ಗುರುಪೂರ್ಣಿಮೆ ಸಂಭ್ರಮ: ಅಬ್ಬೆತುಮಕೂರು ವಿಶ್ವಾರಾಧ್ಯರ ಮಠದಲ್ಲಿ ಶ್ರೀಗಳಿಗೆ ತುಲಾಭಾರ ಗುರುವಿನ ಕರುಣೆಯಿಂದಲೇ ಜೀವನ ಸಾರ್ಥಕ: ಡಾ. ಗಂಗಾಧರ ಮಹಾಸ್ವಾಮೀಜಿ ಗುರುಮಠಕಲ್: ಗುರುಪೂರ್ಣಿಮೆ ಅಂಗವಾಗಿ ಜಿಲ್ಲೆಯಾದ್ಯಂತ ಮಠ–ಮಂದಿರಗಳಲ್ಲಿ ಗುರುವಂದನೆ, ಪಾದಪೂಜೆ, ರುದ್ರಾಭಿಷೇಕ ಹಾಗೂ ತುಲಾಭಾರ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆದವು. ಯಾದಗಿರಿ ಸಮೀಪದ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದಲ್ಲಿ ಪೀಠಾಧಿಪತಿ ಡಾ. ಗಂಗಾಧರ ವಿಶ್ವಾರಾಧ್ಯ ಮಹಾಸ್ವಾಮೀಜಿ ಅವರಿಗೆ ಭಕ್ತರು ಭವ್ಯ ತುಲಾಭಾರ ನೆರವೇರಿಸಿ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಹಾಸ್ವಾಮೀಜಿ, "ಹರ ಮುನಿದರೂ ಗುರು ಕಾಯುವನು ಎಂಬ ಮಾತಿನಂತೆ ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಕೃಪೆ ಅತ್ಯಂತ ಮಹತ್ವದ್ದಾಗಿದೆ. ತಾಯಿ–ತಂದೆ ಜನ್ಮ ನೀಡಿದರೆ, ಸಂಸ್ಕಾರ, ಜ್ಞಾನ ಹಾಗೂ ಬದುಕಿನ ದಾರಿ ತೋರಿಸುವವರು ಗುರುಗಳು. ಆದ್ದರಿಂದ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುಸ್ಮರಣೆ ಮತ್ತು ಗುರುಕೃಪೆ ಪಡೆಯುವುದನ್ನು ಮರೆಯಬಾರದು ಎಂದು ಹೇಳಿದರು. ಗುರು ಎಂದರೆ ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಶಕ್ತಿ. ಗುರುಪೂರ್ಣಿಮೆ ದಿನ ಗುರುಗಳ ದರ್ಶನ, ಸೇವೆ ಮತ್ತು ಪೂಜೆ ಸಲ್ಲಿಸುವುದರಿಂದ ಸುಖ, ಶಾಂತಿ ಹಾಗೂ ನೆಮ್ಮದಿ ಲಭಿಸುತ್ತದೆ ಎಂದು ಅವರು ತಿಳಿಸಿದರು. ಬೆಳಗ್ಗೆಯಿಂದಲೇ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಪೂಜೆ ಸಲ್ಲಿಸಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದರು. ಪ್ರಕಾಶ ಸೇಡಂ ಅವರು ಶ್ರೀಗಳಿಗೆ ಹೂವಿನ ಅಭಿಷೇಕ ನೆರವೇರಿಸಿದರು. ಮಠದ ಕಿರಿಯ ಪೀಠಾಧಿಪತಿ ಶಿವಶೇಖರ ವಿಶ್ವಾರಾಧ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ಗುರುಮಠಕಲ್ನ ಯುವ ಮುಖಂಡ ರಾಜ ರಮೇಶಗೌಡ, ಅನಂತಪ್ಪ ಬೋಯಿನ್ ಯದ್ಲಾಪುರ್, ಡಾ. ಸುಭಾಷಚಂದ್ರ ಕೌಲಗಿ, ವಿಶ್ವನಾಥ ಸಿರವಾರ, ಯುವ ಉದ್ಯಮಿ ಶಿವರೆಡ್ಡಿ ಪಾಲಪ್, ಮಲ್ಲಿಕಾರ್ಜುನ ರೆಡ್ಡಿ ಇಜಾರ, ಗುರುಸ್ವಾಮಿ, ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಸವರಾಜ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.3
- ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ : ಶಾಸಕ ಡಾ ಸಿದ್ದು ಪಾಟೀಲ್ ಮುಂದಿನ ವರ್ಷ ಪತ್ರಿಕಾ ದಿನಾಚರಣೆ ಪತ್ರಿಕಾ ಭವನದಲ್ಲಿ ಆಚರಣೆ ಮಾಡುವ ಸಂಕಲ್ಪ : ಶಾಸಕ ಡಾ ಸಿದ್ದು ಪಾಟೀಲ್1