Shuru
Apke Nagar Ki App…
ಮೂವರು ಆಂತಾರಾಜ್ಯ ಮನೆ ಕಳ್ಳರ ಬಂಧನ... ಹೊಸದುರ್ಗ ಪೊಲೀಸ್ ಪ್ರಕಟಣೆ
ಶ್ರೀಧರ್ ಚಿತ್ರಹಳ್ಳಿ
ಮೂವರು ಆಂತಾರಾಜ್ಯ ಮನೆ ಕಳ್ಳರ ಬಂಧನ... ಹೊಸದುರ್ಗ ಪೊಲೀಸ್ ಪ್ರಕಟಣೆ
More news from ಕರ್ನಾಟಕ and nearby areas
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಕ್ಷೇತ್ರದ ಕ್ರೈಸ್ತಭಾಂಧವರಿಂದ ಇಂದು ನಗರದ ಡಾ:ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರನ್ ಫಾರ್ ಜೀಸಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷರು ರೈಟ್ ರೆವೆರೆಂಡ್ ಡಾ: ಜೋಸೆಫ್ ಅರಮಚ್ಚಾದತ್ ರವರು ವಿದ್ಯುಕ್ತ ವಾಗಿ ಚಾಲನೆ ನೀಡಿ ಮಾತನಾಡಿ, ಯೇಸು ಕ್ರಿಸ್ತನ ಮಾನವ ಕುಲಕ್ಕೆ ಮಾಡಿದ ತ್ಯಾಗದ ಬಲಿದಾನವನ್ನು ಸ್ಮರಿಸಿದರು. ರನ್ ಫಾರ್ ಜೀಸಸ್ ಮೆರವಣಿಗೆ ಯಲ್ಲಿ ಯೇಸುಕ್ರಿಸ್ತನ ತ್ಯಾಗ, ಬಲಿದಾನ ಜೀವನ ಚರಿತ್ರೆಯನ್ನು ನಾಟಕದ ಮೂಲಕ ಪ್ರದರ್ಶಿಸ ಲಾಯಿತು. ಕಾರ್ಯಕ್ರಮಕ್ಕೂ ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಮೆರವಣಿಗೆ ಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ನೇತೃತ್ವದಲ್ಲಿ ನಡೆಯಿತು. ನಗರಸಭಾ ಸದಸ್ಯ ಜಾರ್ಜ್, ವಿಲ್ಸನ್ ಬಾಬು, ಸೂಡ ಸದಸ್ಯ ಫ್ರಾನ್ಸಿಸ್, ಆಶ್ರಯ ಸಮಿತಿ ಸದಸ್ಯ ವೆಂಕಟೇಶ್ ಇಮಾನು ವೇಲ್, ಎಂ.ಜಿ ರಾಮಚಂದ್ರ, ಮೋಸಸ್ ರೋಷಯ್ಯ, ಪಾಸ್ಟರ್ ಗಳಾದ ರೇಮಂಡ್, ಅಂತೋಣಿ ಪ್ರಕಾಶ್ ಸೇರಿದಂತೆ ಸಾವಿರಾರು ಕ್ರೈಸ್ತ ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ಹಾಲಪ್ಪ ಸರ್ಕಲ್, ಮಾಧವ ಚಾರ್ ಸರ್ಕಲ್, ರಂಗಪ್ಪ ಸರ್ಕಲ್, ಮೂಲಕ ಕನಕ ಮಂಟಪ ಮೈದಾನದಲ್ಲಿ ಮುಕ್ತಾಯ ಗೊಂಡಿತು. ಮಧ್ಯಪ್ರಾಕ್ಷದ ಯುದ್ಧಗಳು ನಿಲ್ಲುವಂತೆ ಎಲ್ಲಾ ವೃತಗಳಲ್ಲಿ ಸಮಾಧಾನಕ್ಕಾಗಿ ಪಾಸ್ಟರ್ ಗಳಿಂದ ಪ್ರಾರ್ಥಿಸಲಾಯಿತು.1
- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ1
- ಮಾಗಡಿ ; ವಿಶ್ವ ವಿಖ್ಯಾತ ಬೆಂಗಳೂರು ನಿರ್ಮಾತೃ ಧರ್ಮಪ್ರಭು ಕೆಂಪೇಗೌಡರಿಗೆ ನಿಲ್ಲಲು ಮಾಗಡಿಯಲ್ಲಿ ನೆಲೆ ಇಲ್ಲದಂತಾಗಿದೆ. ಧರ್ಮದ ಹಾದಿಯಲ್ಲಿ ನಡೆದ ಕೆಂಪೇಗೌಡರಿಗೆ ಮಾಗಡಿಯಲ್ಲಿ ನೆಲೆ ಇಲ್ಲ ಎಂದರೆ ನಾಡಿಗೆ ಅವಮಾನ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಟಿ.ಎನ್.ಶ್ರೀನಿವಾಸ್ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಎಚ್.ಎಂ.ಕೃಷ್ಣಮೂರ್ತಿಯೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಯಿತು. ಕೆಂಪೇಗೌಡರ ಪ್ರತಿಮೆಯನ್ನು ಗೌರವಯುತವಾಗಿ ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದ್ದರಿಂದ ನಾವೂ ಕೂಡ ಕೋರ್ಟ್ ಆದೇಶಕ್ಕೆ ತಲೆಭಾಗಿ ಗೌರವ ಕೊಡುತ್ತೇವೆ. ಆದರೆ ಪುರಸಭೆ ಅಧಿಕಾರಿಗಳು ರಾತ್ರೊರಾತ್ರಿ ಪ್ರತಿಮೆಯ ಬಳಿಯ ಮೆಟ್ಟಿಲ್ಲನ್ನು ತೆರವುಗೊಳಿಸುವ ಅನಿವಾರ್ಯತೆ ಏನಿತ್ತು. ಅದರಲ್ಲೂ ಅಮಾವಾಸ್ಯೆ ದಿನವೇ ಮೆಟ್ಟಿಲು ಕಿತ್ತು ಹಾಕಿದ್ದು ಒಂದೆಡೆಯಾದರೆ ಅಂದಿನಿಂದ ಕೆಂಪೇಗೌಡ ಪ್ರತಿಮೆ ಗೌರವಕ್ಕಾದರೂ ಹೂವಿನ ಹಾರ ಹಾಕದೆ ಅವಮಾನಿಸಲಾಗಿದೆ. ಜತೆಗೆ ದಿಕ್ಕುದೆಸೆ ಇಲ್ಲದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಪ್ರತಿಮೆ ಸ್ಥಳಾಂತರಕ್ಕೆ ಯೋಜನೆ ರೂಪಿಸಿ ಕಾಮಗಾರಿಯೂ ನಡೆದಿದೆ. ಈಗ ಇದೊಂದು ವಿವಾಧಾತ್ಮಕ ಸ್ಥಳಾವಾಗಿದೆ. ಕೆಂಪೇಗೌಡರು ಸತ್ಯದ ಹಾದಿಯಲ್ಲಿ ನಡೆದಿದ್ದರು. ಅವರನ್ನು ಅವಮಾನಿಸುವವರು ಎಂದಿಗೂ ಉದ್ಧಾರವಾಗುವುದಿಲ್ಲ. ಅದರ ಫಲ ಅವರೇ ಉಣ್ಣಬೇಕಿದೆ. ಕಾದು ನೋಡುತ್ತೇನೆ ಎಂದು ಹೆಸರೇಳದೆ ಶಾಸಕರ ವಿರುದ್ಧ ಹರಿಹಾಯ್ದರು. ಈಗಾಗಲೇ ಅಡಿಗೆ 45 ರೂ ನಂತೆ ನಂತೆ 60/70 ವಿಸ್ತೀರ್ಣದ ಸ್ಥಳವನ್ನು ಕಾಂಗ್ರೆಸ್ ಪಕ್ಷದ ಕಚೇರಿಗೆ ಪುರಸಭೆ ನೀಡಿದೆ. ನಮಗೂ ಕೆಂಪೇಗೌಡರ ಹೆಸರಿನಲ್ಲಿ 1 ಎಕರೆ ಜಮೀನು ಸರ್ಕಾರ ಮಂಜೂರು ಮಾಡಿಕೊಡಲಿ ಸರ್ಕಾರಕ್ಕೆ ಕಟ್ಟಬೇಕಾದ ಹಣವನ್ನು ಜಮಾ ಮಾಡುತ್ತೇನೆ. ಇಲ್ಲೊಂದು ಸುಂದರವಾದ ಪಾರ್ಕ್ ನಿರ್ಮಿಸಿ ಜನರ ಆರೋಗ್ಯಕ್ಕೆ ಮುಂದಾಗುವುದಾಗಿ ಮನವಿ ಮಾಡಿದ ಅವರು. ಈಗಿನ ಕೆಂಪೇಗೌಡರ ಪ್ರತಿಮೆಯ ಮೆಟ್ಟಿಲು ತೆರವುಗೊಳಿಸಿರುವುದರಿಂದ ಪ್ರತಿಮೆಗೆ ಹಾರ ಹಾಕಲಾಗದ ಪರಿಸ್ಥಿತಿ ತಂದೊಡ್ಡಿರುವ ಪುರಸಭೆ ಅಧಿಕಾರಿಗಳು ನಾಡಪ್ರಭು ಕೆಂಪೇಗೌಡ ಅವರಿಗೆ ಅಗೌರವ ತೋರಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು ನನ್ನ ಸ್ವಂತ ದುಡಿಮೆಯ ಹಣದಲ್ಲಿ ಸುಂದರವಾದ ಕಂಚಿನ ಕೆಂಪೇಗೌಡರ ಪ್ರತಿಮೆಯನ್ನು ಪುರಸಭಾ ಆವರಣದಲ್ಲಿ ಕಳೆದ 22 ವರ್ಷಗಳ ಹಿಂದೆ ಅನೇಕ ಮಠಮಾನ್ಯಗಳ ಶ್ರೀಗಳರು, ಸಚಿವರು, ಶಾಸಕರು, ಗಣ್ಯರು, ರೈತರು, ಅಭಿಮಾನಿಗಳ ನೇತೃತ್ವದಲ್ಲಿ ಪ್ರತಿಮೆಯನ್ನು ಪ್ರತಿμÁ್ಠಪಿಸಿ, ಆದ್ದೂರಿಯಾಗಿ ಕಾರ್ಯಕ್ರಮ ರೂಪಿಸುವ ಮೂಲಕ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗಿತ್ತು. ಅನ್ನಸಂತರ್ಪಣೆ ಸಹ ಅವಿರತವಾಗಿ ನಡೆದಿತ್ತು. ಈ ಮೂಲಕ ಕೆಂಪೇಗೌಡರ ಇತಿಹಾಸವನ್ನು ಮರುಕಳಿಸುವಂತ ಕೆಲಸವನ್ನು ಮಾಡಿ ತೋರಿಸಿದ್ದೆ. ಹೀಗಾಗಿ ಆವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ಆದರೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಸರ್ಕಾರ ಇದೆ ಎಂದು ದೆಹಲಿಯಿಂದ ಕಲ್ಕತ್ತಗೆ ಎಂಬಂತೆ ತೊಗಲಕ್ ದರ್ಬಾರ್ ನಡೆಸುತ್ತಿದ್ದಾರೆ. ಅವರ ತಾಳಕ್ಕೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ಹಿಂದೆ ಶಾಸಕರ ತಾಳಕ್ಕೆ ಕುಣಿದ ಕೆಲವು ಅಧಿಕಾರಿಗಳು ನೇಣಿನ ಕುಣಿಕೆಗೆ ತಲೆಯೊಡ್ಡಬೇಕಾಯಿತು. ಈಗ ಅವರ ಕುಟುಂಬಗಳು ಶೋಚನೀಯಸ್ಥಿತಿ ತಲುಪಿವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು. ಭಾರಿ ವಿವಾಧಕ್ಕೆ ಒಳಗಾದ ಧರ್ಮಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ; 2008 ರಲ್ಲಿ ಪುರಸಭೆ ಆಡಳಿತ ಮಂಡಲಿ ರೆಜ್ಯುಲೇಷನ್ ಮಾಡಿ ಪ್ರತಿಮೆ ಸ್ಥಾಪನೆಗೆ 50/50 ಸ್ಥಳ ಮಂಜೂರು ಮಾಡಿತ್ತು. ಈಗ ಕೆಂಪೇಗೌಡರ ಪ್ರತಿಮೆ ಸ್ಥಳವನ್ನು ಸೇರಿಸಿಕೊಂಡಂತೆ ಸುಮಾರು 2 ಎಕರೆ ಪ್ರದೇಶದಲ್ಲಿ100 ಬೆಡ್ಡಿನ ಹೈಟೆಕ್ ಆಸ್ಪತ್ರೆ ನಿರ್ಮಿಸಲು ಶಾಸಕರು ಮುಂದಾಗಿದ್ದಾರೆ. ಕೆಂಪೇಗೌಡರ ಪ್ರತಿಮೆಯನ್ನು ಉಳಿಸಿಕೊಂಡು ಆಸ್ಪತ್ರೆ ನಿರ್ಮಿಸಬಹುದಿತ್ತು. ಕೆಂಪೇಗೌಡರ ಕೋಟೆ ಕಂದಕ ಮುಚ್ಚದಂತೆ ನಾನು ಕೋರ್ಟ್ ಮೊರೆ ಹೋಗಿದ್ದರಿಂದ ನನ್ನ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿರುವ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಕ್ಷೇತ್ರದಲ್ಲಿ ಲೂಟಿಗೆ ಇಳಿದಿದ್ದಾರೆ. ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಅಧಿಕಾರಿಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಎಚ್.ಎಂ.ಕೃಷ್ಣಮೂರ್ತಿ ಆರೋಪಿಸಿದರು. ತಾಪಂ ಮಾಜಿ ಸದಸ್ಯ ಸಿ.ಜಯರಾಮ್ ಮಾತನಾಡಿ, ಧರ್ಮಪ್ರಭು ಕೆಂಪೆಗೌಡರು ಸರ್ವಧರ್ಮಪ್ರಿಯರು, ಎಲ್ಲ ವರ್ಗದ ಜನರಿಗೂ ಒಂದೊಂದು ಪೇಟೆಯನ್ನು ಕಟ್ಟಿಕೊಟ್ಟ ಮಹಾನೀಯರ ಪ್ರತಿಮೆಗೆ ದಕ್ಕೆಯಾಗುತ್ತಿದೆ. ಶಾಸಕರ ಸರ್ವಾಧಿಕಾರ ಇಲ್ಲಿ ನಡೆಯುತ್ತಿದೆ. ನಾವೂ ಅವರ ಪ್ರತಿಮೆಗೆ ಅವಮಾನಿಸಿದರೆ ಅವರ ಹೃದಯಕ್ಕೆ ಅವಮಾನಿಸಿದಂತೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಅವರೇ ಉಣ್ಣಬೇಕಿದೆ ಎಂದು ಕಿಡಿಕಾರಿದರು. ನಿಸರ್ಗ ಪರಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್,ಶಿವಲಿಂಗಯ್ಯ ಮಾತನಾಡಿ, ಗೌರವಯುತವಾಗಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದೆ. ಇಲ್ಲಿರುವ ಮರಗಿಡಗಳನ್ನು ತೆರವುಗೊಳಿಸಬಾರದು. ತೆರವುಗೊಳಿಸಬೇಕಾದರೆ ಕಾನೂನಾತ್ಮಕವಾಗಿ ತೆರವುಗೊಳಿಸಬೇಕೆಂದು ತಾಕೀತು ಮಾಡಿದೆ. ಆದರೆ ಈಗಾಗಲೆ ಪುರಸಭೆ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳವನ್ನು ಆರೋಗ್ಯ ಇಲಾಖೆಗೆ ವರ್ಗಾಯಿಸಿದೆ. ಆರೋಗ್ಯ ಇಲಾಖೆಗೆ ವರ್ಗಾಯಿಸಿದ ಮೇಲೆ ಪ್ರತಿಮೆಯ ಮೆಟ್ಟಿಲು ಕಿತ್ತು ಹಾಕಲು ಇವರಿಗೇನು ಹಕ್ಕಿದೆ. ಇದೊಂದು ರಾಹಕೀಯ ಶಡ್ಯಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಕ್ಸ್ ; ಸರ್ಕಾರದ ಮತ್ತು ಕೋರ್ಟ್ ಆದೇಶವನ್ನು ಪಾಲಿಸುವುದು ನಮ್ಮ ಕೆಲಸ. ನಾವು ಯಾರ ಒತ್ತಡಕ್ಕೂ ಮಣಿದಿಲ್ಲ, ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಗೆ ಜಮೀನು ವರ್ಗಾಯಿಸಲು ಅದೇಶ ನೀಡಿದ್ದರಿಂದ ವರ್ಗಾಯಿಸಿದ್ದೇವೆ. ಪ್ರತಿಮೆ ತೆರವುಗೊಳಿಸಲು ಕೋರ್ಟ್ ಆದೇಶವಿರುವುದರಿಂದ ಸಂಬಂಧಪಟ್ಟರು ಸ್ಥಳಾಂತರಿಸಲಿದ್ದಾರೆ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನೀವೇನಿದ್ದರೂ ಕೇಳುವುದಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು. ನಮ್ಮದೇನು ಅಭ್ಯಂತರವಿಲ್ಲ. ನಾವು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೆವೆ. ಟಿ.ಎನ್.ಶ್ರೀನಿವಾಸ್ ಮುಖ್ಯಾಧಿಕಾರಿ ಪುರಸಭೆ ಮಾಗಡಿ. ಜೆಡಿಎಸ್ ಮುಖಂಡ ತಮ್ಮಣ್ಣಗೌಡ, ಮಾಡಬಾಳ್ ಕೆಂಪೇಗೌಡ, ಸಾಗರ್, ಎನ್ಇಎಸ್ ಆನಂದ್, ದೊಡ್ಡಿ ಗೋಪಿ, ನಾಗರಾಜು, ಶಿವಶಂಕರ್, ಮೂರ್ತಿ, ಮೋಹನ್, ರಾಜೇಶ್, ಶಿವಣ್ಣ, ಕುಮಾರ್, ಆರ್ಐ ರವಿ, ಎಂಜಿನಿಯರ್ ಪ್ರಶಾಂತ್ ಶೆಟ್ಟಿ ಇತರರು ಇದ್ದರು.1
- ಬಾಬು ಜಗಜೀವನರಾಂ ಜಯಂತಿ: ಸಮಾನತೆಗೆ ಶ್ರಮಿಸಿದ್ದ ರಾಜಕೀಯ ಮುತ್ಸದ್ದಿ :-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ:-ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರು ಸತತ ಮೂವತ್ತು ವರ್ಷಗಳು ಸಂಪುಟ ದರ್ಜೆ ಸಚಿವರಾಗಿ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಶಿಕ್ಷಣದಿಂದ ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು. ಅವರು ಪಟ್ಟಣದ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ,ಜಿಲ್ಲಾ ಪಂಚಾಯತಿ, ಪುರಸಭೆ, ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಂ ಚಿತ್ರಪಟಕ್ಕೆ ಪುಷ್ಪ ನಮನ ಹಾಗೂ ದೀಪಾ ಬೆಳಗಿಸಿ ಮಾತನಾಡಿದರು. ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ಅವರು ಜನರ ಒಳಿತಾಗಿ ಕ್ರಾಂತಿಕಾರಿ ನಿಲುವು ಮತ್ತು ಅಭಿವೃದ್ಧಿಗಾಗಿ ಒಲವು ಎರಡನ್ನೂ ಮೈಗೂಡಿಸಿಕೊಂಡಿದ್ದ ಅಪ್ರತಿಮ ನಾಯಕ ಎಂದು ಅವರು ತಿಳಿಸಿದರು. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಿದ್ದಾಗ ಮಾತ್ರ ಒಳ್ಳೆಯ ಉದ್ಯೋಗ ಅಧಿಕಾರ ಪಡೆಯಲು ಸಾಧ್ಯವಿದೆ. ಎಲ್ಲಾ ಸಮಾಜದವರು ಒಗ್ಗೂಡಿ ಇಂತಹ ಮಹಾನ್ ವ್ಯಕ್ತಿಗಳ ಜೀವನ ಕುರಿತು ಅರಿತುಕೊಳ್ಳಬೇಕು. ಅವರ ಸಾಧನೆ ಇಂದಿನ ಜನಾಂಗಕ್ಕೆ ಪ್ರೇರಣೆ ಆಗಬೇಕು’ ಎಂದರು. ತಹಸೀಲ್ದಾರ್ ಮನೀಷಾ ಮಹೇಶ ಪತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನ ರಾಮ್ ಒಬ್ಬರು. ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು’ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ ಬಿಇಓ ಎನ್ ವೆಂಕಟೇಶಪ್ಪ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೆ.ರಾಮಚಂದ್ರ, ಕೈಗಾರಿಕಾ ವಿಸ್ತರ್ಣಾಧಿಕಾರಿಗಳಾದ ಮೆಹಬೂಬ್ ಬಾಷಾ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಜಿ.ಸಿ. ಮಂಜುಳಾ ಆರ್.ಹನುಮಂತ ರೆಡ್ಡಿ, ತೋಟಗಾರಿಕೆ ಇಲಾಖೆ ಲಲಿತ, ಕೃಷಿ ಸಹಾಯಕ ನಿರ್ದೇಶಕ ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್,ಮಾಜಿ ತಾಲ್ಲೂಕು ಪಂಚಾಯತಿ ಮಾಜಿ ಅದ್ಯಕ್ಷ ಕೆ.ಆರ್.ನರೇಂದ್ರ ಬಾಬು,ಎಪಿಎಂಸಿ ನಾಮ ನಿರ್ಧೇಶಕ ನಾರಾಯಣ ಸ್ವಾಮಿ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.2
- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.1
- Post by Venu Gopal1
- ಹುಬ್ಬಳ್ಳಿಯಲ್ಲಿ ಈ ಪ್ರಕರಣ ದೊಡ್ಡ ಚರ್ಚೆಗೆ ಕಾರಣ ಆಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಯುವತಿಯೊಬ್ಬಳು ಗಂಭೀರ ದೂರು ದಾಖಲಿಸಿದ್ದಾಳೆ. ಕಾಲೇಜಿನಲ್ಲಿ ಸ್ನೇಹ ಬೆಳೆಸಿ, ಪ್ರೀತಿಯ ನಾಟಕವಾಡಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಮುಫೀಜ್ ಮಿಯಾನವರ ವಿರುದ್ಧ ಬ್ಲ್ಯಾಕ್ಮೇಲ್ ಹಾಗೂ ಅತ್ಯಾಚಾರದ ಆರೋಪ ಕೇಳಿಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.1
- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 5 ರಂದು ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್ 5 ರಂದು ಬೆಂಗಳೂರಿನಿಂದ ಹೊರಟು ಸಂಜೆ 4 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ನಂತರ ಕಾಸರಗೋಡು ಜಿಲ್ಲೆಗೆ ತೆರಳಲಿದ್ದಾರೆ. ರಾತ್ರಿ 8:40- ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.1