ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಮಾಧ್ಯಮದವರಪಾತ್ರಅಪಾರ-ಕೆ.ಎಸ್.ವಿಜಯಾನಂದ ಮಂಡ್ಯ: ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಮಾಧ್ಯಮದವರ ಪಾತ್ರ ಅಪಾರ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಹೇಳಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಮಣಿಪಾಲ್ ಆಸ್ಪತ್ರೆ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಸದಸ್ಯರಿಗೆ ಶನಿವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜವನ್ನು ತಪ್ಪುಗಳನ್ನು ಎತ್ತಿ ಹಿಡಿಯುವ ಪತ್ರಕರ್ತರು ತಮ್ಮ ಆರೋಗ್ಯವನ್ನು ಕಡೆಗಣಿಸ ಬಾರದು. ಇಂದು ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯಬಾರದು. ತಮ್ಮ ಕೆಲಸದ ನಡುವೆ ಆಗಾಗ್ಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಜತೆಗೆ ತಮ್ಮ ಕುಟುಂಬದ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಹೇಳಿದರು. ಮಾಂಡವ್ಯ ಎಕ್ಸ್ಲೆಕ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸ್ ಮಾತನಾಡಿ, ಮಾಧ್ಯಮದವರ ಕಷ್ಟ ಸುಖಗಳನ್ನು ನಾನೂ ಸಹ ಖುದ್ದಿ ತಿಳಿದಿದ್ದೇನೆ. ಸ್ವತಃ ಅನುಭವಿಸಿದ್ದೇನೆ. ಸದಾ ಒಂದಲ್ಲ ಒಂದು ಕೆಲಸದಲ್ಲಿ ತೊಡಗುವ ಪತ್ರಕರ್ತರು ಆರೋಗ್ಯ ವನ್ನೂ ಕಾಪಾಡಿಕೊಳ್ಳಬೇಕು. ಸದಸ್ಯರಿಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿ ರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತೀಕೆರೆ ಜಯರಾಂ, ಜಿಲ್ಲಾಧ್ಯಕ್ಷ ಕೆ.ಎಸ್.ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷರಾದ ಕೆ.ಸಿ.ಮಂಜುನಾಥ, ರವಿ ಸಾವಂದಿಪುರ, ಪ್ರಧಾನ ಕಾರ್ಯದರ್ಶಿ ಕಾಡುಕೊತ್ತನಹಳ್ಳಿ ಶಶಿಧರ್, ಮಣಿಪಾಲ್ ಆಸ್ಪತ್ರೆಯ ಸುಮಂತ್ ಇತರರಿದ್ದರು. ಇದೇ ವೇಳೆ ಹೃದಯಾಘಾತ, ಸ್ಟ್ರೋಕ್ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಯಾದಾಗ ತುರ್ತು ಚಿಕಿತ್ಸೆ ನೀಡುವ ಬಗ್ಗೆ ಮಣಿಪಾಲ್ ಆಸ್ಪತ್ರೆಯ ಮಿಥುನ್ ಪ್ರಾತ್ಯಕ್ಷಿತೆಯೊಂದಿಗೆ ತರಬೇತಿ ನೀಡಿದರು. ಇದೇ ವೇಳೆ ಸಂಘದ ಸದಸ್ಯರಿಗೆ ಬಿಪಿ, ಶುಗರ್ ಸೇರಿದಂತೆ ಆರೋಗ್ಯ ತಪಾಸಣೆ ಮಾಡಲಾಯಿತು. ಜತೆಗೆ ಡಿಜಿಟಲ್ ನೇಬರ್ಹುಡ್ ಪ್ರಿವಿಲೇಜ್ ಕಾರ್ಡ್ಗೆ ನೋಂದಣಿ ಮಾಡಿಕೊಳ್ಳಲಾಯಿತು.
ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಮಾಧ್ಯಮದವರಪಾತ್ರಅಪಾರ-ಕೆ.ಎಸ್.ವಿಜಯಾನಂದ ಮಂಡ್ಯ: ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಮಾಧ್ಯಮದವರ ಪಾತ್ರ ಅಪಾರ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಹೇಳಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಮಣಿಪಾಲ್ ಆಸ್ಪತ್ರೆ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಸದಸ್ಯರಿಗೆ ಶನಿವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜವನ್ನು ತಪ್ಪುಗಳನ್ನು ಎತ್ತಿ ಹಿಡಿಯುವ ಪತ್ರಕರ್ತರು ತಮ್ಮ ಆರೋಗ್ಯವನ್ನು ಕಡೆಗಣಿಸ ಬಾರದು. ಇಂದು ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯಬಾರದು. ತಮ್ಮ ಕೆಲಸದ ನಡುವೆ ಆಗಾಗ್ಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಜತೆಗೆ ತಮ್ಮ ಕುಟುಂಬದ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಹೇಳಿದರು. ಮಾಂಡವ್ಯ ಎಕ್ಸ್ಲೆಕ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸ್ ಮಾತನಾಡಿ, ಮಾಧ್ಯಮದವರ ಕಷ್ಟ ಸುಖಗಳನ್ನು ನಾನೂ ಸಹ ಖುದ್ದಿ ತಿಳಿದಿದ್ದೇನೆ. ಸ್ವತಃ ಅನುಭವಿಸಿದ್ದೇನೆ. ಸದಾ ಒಂದಲ್ಲ ಒಂದು ಕೆಲಸದಲ್ಲಿ ತೊಡಗುವ ಪತ್ರಕರ್ತರು ಆರೋಗ್ಯ ವನ್ನೂ ಕಾಪಾಡಿಕೊಳ್ಳಬೇಕು. ಸದಸ್ಯರಿಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿ ರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತೀಕೆರೆ ಜಯರಾಂ, ಜಿಲ್ಲಾಧ್ಯಕ್ಷ ಕೆ.ಎಸ್.ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷರಾದ ಕೆ.ಸಿ.ಮಂಜುನಾಥ, ರವಿ ಸಾವಂದಿಪುರ, ಪ್ರಧಾನ ಕಾರ್ಯದರ್ಶಿ ಕಾಡುಕೊತ್ತನಹಳ್ಳಿ ಶಶಿಧರ್, ಮಣಿಪಾಲ್ ಆಸ್ಪತ್ರೆಯ ಸುಮಂತ್ ಇತರರಿದ್ದರು. ಇದೇ ವೇಳೆ ಹೃದಯಾಘಾತ, ಸ್ಟ್ರೋಕ್ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಯಾದಾಗ ತುರ್ತು ಚಿಕಿತ್ಸೆ ನೀಡುವ ಬಗ್ಗೆ ಮಣಿಪಾಲ್ ಆಸ್ಪತ್ರೆಯ ಮಿಥುನ್ ಪ್ರಾತ್ಯಕ್ಷಿತೆಯೊಂದಿಗೆ ತರಬೇತಿ ನೀಡಿದರು. ಇದೇ ವೇಳೆ ಸಂಘದ ಸದಸ್ಯರಿಗೆ ಬಿಪಿ, ಶುಗರ್ ಸೇರಿದಂತೆ ಆರೋಗ್ಯ ತಪಾಸಣೆ ಮಾಡಲಾಯಿತು. ಜತೆಗೆ ಡಿಜಿಟಲ್ ನೇಬರ್ಹುಡ್ ಪ್ರಿವಿಲೇಜ್ ಕಾರ್ಡ್ಗೆ ನೋಂದಣಿ ಮಾಡಿಕೊಳ್ಳಲಾಯಿತು.
- ಮಂಡ್ಯದ ಚಿರುಮರಿಗೆ ಫಿದಾ ಆದ ನಟಿ ಅಭಿಮಾನಿ ಗಳಿಗೆ ಸೆಲ್ಫಿ ನೀಡುವಾಗಲು ಚಿರುಮುರಿ ಬಿಡದೆ ತಿಂದ ರಾಗಿಣಿ ಮಂಡ್ಯ- ತಮ್ಮ ಚಲನಚಿತ್ರದ ಪ್ರಮೋಷನ್ ಗಾಗಿ ಮಂಡ್ಯ ಸಂಜೆ ಥಿಯೇಟರ್ ಗೆ ಭೇಟಿ ನೀಡಿದ್ದ ನಟಿ ರಾಗಿಣಿ ಅತ್ಯಂತ ಪ್ರಿಯ ಮಂಡ್ಯದ ಚುರುಮುರಿ ಸವಿದ ಅಪರೂಪದ ಘಟನೆ ಮಂಡ್ಯ ಸಂಜೆಯ ಸರ್ಕಲ್ ನಲ್ಲಿ ಜರುಗಿತು. ಮಂಡ್ಯ ಸಂಜೆ ಥಿಯೇಟರ್ ನಲ್ಲಿ ನಡೆಯುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಚಲನಚಿತ್ರ ದಲ್ಲಿ ನಾಯಕಿ ನಟಿಯಾಗಿ ನಟಿಸಿರುವ ರಾಗಿಣಿ ಯವರು ಮಂಡ್ಯಕ್ಕೆ ಬಂದಾಗ ಅಲ್ಲೇ ಥಿಯೇಟರ್ನಲ್ಲಿ ಮಾರಾಟ ಮಾಡುತ್ತಿದ್ದ ಚುರುಮುರಿಯನ್ನು ಪ್ರೀತಿಯಿಂದ ಸವಿದರು. ಅಭಿಮಾನಿಗಳು ಸೆಲ್ಫಿಗಾಗಿ ಹೋಗಿದ್ದರು ಕೈಯಲ್ಲಿ ಇದ್ದ ಚುರುಮುರಿಯನ್ನು ಬಿಡದೆ ಸೆಲ್ಫಿ ನೀಡಿದರು1
- ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ,ಪ್ರತಿಭಟನೆ ಮದ್ದೂರು-ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹಾಗೂ ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ, ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ ನೇತೃತ್ವದಲ್ಲಿ ಕೆಸ್ತೂರು ವೃತ್ತ ಘಟಕದ ವತಿಯಿಂದ ಶನಿವಾರ ರಸ್ತೆತಡೆ ಪ್ರತಿಭಟನೆ ನಡೆಸಲಾಯಿತು. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ರೈತರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಪರಿಣಾಮ ಸುಮಾರು ಎರಡು ಕಿಲೋಮೀಟರ್ವರೆಗೆ ವಾಹನಗಳ ಸಂಚಾರ ದಟ್ಟಣೆ ಉಂಟಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ, ಕೆಆರ್ಎಸ್ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬು ಹಾಗೂ ವಿವಿಧ ತೋಟಗಾರಿಕೆ ಬೆಳೆಗಳು ನೀರಿನ ಕೊರತೆಯಿಂದ ಒಣಗುತ್ತಿವೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.1
- ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.1
- ತಮಿಳುನಾಡಿ ಗೆ ನೀರು ಬಿಡದಂತೆ ಸರ್ಕಾರ ತೀರ್ಮಾನ ಗೊಳ್ಳುವಂತೆ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ ಮಳವಳ್ಳಿ: ತಮಿಳುನಾಡಿಗೆ ಕಾವೇರಿ ನೀರು ನಿರ್ವಾಹಣ ಮಂಡಳಿ ಆದೇಶದಂತೆ ಕಾವೇರಿನೀರು ಬಿಡಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮೂಲಸಂಘಟನೆಯ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗೇಟ್ ಬಳಿ ರಸ್ತೆತಡೆ ಹಾಗೂ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವಿಪುರಬಸವರಾಜು ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, ಒಂದು ದಿನಕ್ಕೆ 3500 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಾಹಣಾ ಮಂಡಳಿ ಆದೇಶ ಮಾಡಿದ್ದು, ರಾಜ್ಯ ಸರ್ಕಾರ ಆ ಆದೇಶವನ್ನು ತಿರಸ್ಕಾರ ಮಾಡಬೇಕು. ನಾಳೆ ವಿಧಾನಸಭೆ ಯಲ್ಲಿ ಸರ್ವಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರ ಕರೆದಿದ್ದು, ಎಲ್ಲಾ ಶಾಸಕರು ತಮಿಳುನಾಡಿಗೆ ನೀರು ಬಿಡದಂತೆ ತೀರ್ಮಾನ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ಇನ್ನೂ ಇದೇ ವೇಳೆ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು ಮಾತನಾಡಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಕುಡಿಯಲು ನೀರಿಲ್ಲ , ತಮಿಳುನಾಡಿಗೆ ನೀರು ಬಿಡಬೇಕಂತೆ ಇದು ಸಾಧ್ಯವಿಲ್ಲ , ನೀರು ಬಿಟ್ಟರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ, ಸೋ.ಶಿ ಪ್ರಕಾಶ, ಪ್ರಭುಲಿಂಗು, ಶಿವನಂಜು, ಭೂಮಿಗೌಡ, ಚೌಡೇಗೌಡ, ಮಲ್ಲೇಶ್, ಗಿರೀಶ್, ಹನುಮಂತ, ಕೃಷ್ಣ, ಲಿಂಗಪಟ್ಟಣ ಬಸವರಾಜು, ಮಹೇಶ್ ಸೇರಿದಂತೆ ಹಲವರು ಇದ್ದರು.1
- All About,Anyone when if question them for Transparency they will Anytime Speak Contridectary Statements and blaming the Residents *ಭಾರತ ನಲ್ಲಿ ವೈರಲ್*1
- ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ1
- ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.1
- *ಅರ್ಹ ಮತದಾರರು ಹೊರಗುಳಿಯದಂತೆ, ಅನರ್ಹರು ಸೇರ್ಪಡೆಯಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ- ಡಾ. ಕುಮಾರ ಮಂಡ್ಯ, ಜುಲೈ 31: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಗೆ ಸೇರ್ಪಡೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಯ ಶುದ್ಧತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಚುನಾವಣಾ ಆಯೋಗದ ಪ್ರಮುಖ ಆದ್ಯತೆಯಾಗಿದ್ದು, ಪ್ರತಿಯೊಂದು ಮಾಹಿತಿಯನ್ನು ನಿಖರವಾಗಿ ಪರಿಶೀಲಿಸಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಮನೆ ಮನೆಗೆ ಭೇಟಿ ನೀಡಿ ವಿತರಿಸಲಾದ ಗಣತಿ ನಮೂನೆಗಳನ್ನು ಹಿಂಪಡೆಯುವ ಕಾರ್ಯ ಪ್ರಗತಿಯಲ್ಲಿದ್ದು, ಆಗಸ್ಟ್ 8, 2026 ನಮೂನೆ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮತದಾರರು ಭರ್ತಿ ಮಾಡಿದ ನಮೂನೆಗಳನ್ನು ನಿಗದಿತ ಅವಧಿಯೊಳಗೆ ಹಿಂದಿರುಗಿಸುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್ಗಳನ್ನು ಅಳವಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಒಟ್ಟು 15,75,849 ಮತದಾರರ ಪೈಕಿ ಇದುವರೆಗೆ 13,94,203 (88.47%) ಮತದಾರರ ಗಣತಿ ನಮೂನೆಗಳನ್ನು ಗಣಕೀಕರಣ ಮಾಡಲಾಗಿದೆ. ಜೊತೆಗೆ 1,49,347 (9.48%) ಮತದಾರರನ್ನು ASDDO (Absent, Shifted, Death, Duplicate, Others) ವಿಭಾಗದಡಿ ಗುರುತಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು. ಗುರುತಿಸಲಾದವರ ಪೈಕಿ 41,589 ಮಂದಿ ಮೃತ ಮತದಾರರು, 17,240 ಮಂದಿ ಗೈರು ಮತದಾರರು, 76,720 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರು, 13,377 ಮಂದಿ ಪುನರಾವರ್ತಿತ ಮತದಾರರು ಹಾಗೂ 421 ಮಂದಿ ಗಣತಿ ನಮೂನೆಯನ್ನು ಹಿಂದಿರುಗಿಸಲು ನಿರಾಕರಿಸಿರುವ ಮತದಾರರಾಗಿದ್ದಾರೆ ಎಂದು ಸಭೆಯಲ್ಲಿ ವಿವರಿಸಿದರು. ಮನೆ ಮನೆ ಸಮೀಕ್ಷೆಯಲ್ಲಿ ಈಗಾಗಲೇ ವಿತರಿಸಲಾದ ನಮೂನೆಗಳ ಪೈಕಿ 32,299 (2.05%) ನಮೂನೆಗಳ ಸಂಗ್ರಹಣೆ ಹಾಗೂ ಗಣಕೀಕರಣ ಬಾಕಿಯಿದ್ದು, ಮುಂದಿನ ಮೂರುರಿಂದ ನಾಲ್ಕು ದಿನಗಳೊಳಗೆ ಈ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರತಿ ದಿನದ ಪ್ರಗತಿ ವಿವರವನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮಾಧ್ಯಮಗಳಿಗೆ ನಿಯಮಿತವಾಗಿ ನೀಡಲಾಗುತ್ತಿದ್ದು, ಸಂಪೂರ್ಣ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯೊಂದಿಗೆ ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಇದೇ ವೇಳೆ, ASDDO ವಿಭಾಗದಡಿ ಗುರುತಿಸಲಾದ ಮತದಾರರ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಿ ಮರುಪರಿಶೀಲನೆ ನಡೆಸುವಂತೆ ಮೇಲ್ವಿಚಾರಕರಿಗೆ ಸೂಚನೆ ನೀಡಲಾಗುತ್ತದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ತಪ್ಪದೇ ಉಳಿಯುವಂತೆ ಹಾಗೂ ಅನರ್ಹರ ಸೇರ್ಪಡೆಯಾಗದಂತೆ ನಿಖರ ಪರಿಶೀಲನೆಗೆ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಆಗಸ್ಟ್ 17, 2026ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಬಳಿಕ ಆಗಸ್ಟ್ 17ರಿಂದ ಸೆಪ್ಟೆಂಬರ್ 16, 2026ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು. ಈ ಅವಧಿಯನ್ನು ಸದುಪಯೋಗಪಡಿಸಿಕೊಂಡು ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ,ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ರಾದ ರವಿಶಂಕರ್ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.1