logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಗಳೂರು ಕರ್ನಾಟಕದ ಮಿನಿ ಬಾಂಬೆ

1 hr ago
user_Onlinetv24x7
Onlinetv24x7
ಹಾಸನ, ಹಾಸನ, ಕರ್ನಾಟಕ•
1 hr ago

ಮಂಗಳೂರು ಕರ್ನಾಟಕದ ಮಿನಿ ಬಾಂಬೆ

More news from ಕರ್ನಾಟಕ and nearby areas
  • ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    1
    ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು.
ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು.
ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ.
ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    1
    ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    11 hrs ago
  • ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    1
    ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ
    1
    ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆಗೆ ತಟ್ಟಿದ ಕೇತಗ್ರಸ್ಥ ರಕ್ತ ಚಂದ್ರಗ್ರಹಣ.. ಚಿತ್ರದುರ್ಗ : ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೆಚ್ ಡಿ ಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವದ ಸಮಯವನ್ನು ಬದಲಾಯಿಸಲಾಗಿತ್ತು. ಸಮಯ ಬದಲಾದರೂ, ರಥೋತ್ಸವದ ವೇಳೆ ಗರುಡ ಪಕ್ಷಿ ಕಾಣಿಸಿಕೊಂಡಿದ್ದು, ಇದನ್ನು ಪವಾಡವೆಂದು ಭಾವಿಸಿದ ಸಾವಿರಾರು ಭಕ್ತರು ಸಂತಸ ವ್ಯಕ್ತಪಡಿಸಿದರು... ಇಂದು ಕೇತುಗ್ರಸ್ಥ ರಕ್ತ ಚಂದ್ರಗ್ರಹಣ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೇರಿದೇವಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು. ಸಮಯ ಬದಲಾಗಿದ್ದರಿಂದ ಪ್ರತಿ ವರ್ಷ ಕಾಣುವ ಗರುಡ ಕಾಣಿಸುತ್ತಾ ಅನ್ನೋ ಆತಂಕ ಭಕ್ತರಲ್ಲಿ ಎದುರಾಗಿತ್ತು. ಸಮಯ ಬದಲಾದ್ರೂ ಗರುಡ ಕಾಣಿಸಿಕೊಂಡಿದ್ದಕ್ಕೆ ಭಕ್ತರು ಸಂತಸಗೊಂಡಿದ್ದಾರೆ.. ಸಾಮಾನ್ಯವಾಗಿ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಮಧ್ಯಾಹ್ನ 3 ಗಂಟೆಗೆ ನಡೆಯುತ್ತಿತ್ತು. ಆದ್ರೆ ಇಂದು ಚಂದ್ರಗ್ರಹಣ ಮಧ್ಯಾಹ್ನ 3:20ಕ್ಕೆ ಆರಂಭವಾಗಿ ಸಂಜೆ 6:48ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯವನ್ನು ಸೂತಕ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡಲ್ಲ. ಆದ್ದರಿಂದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು...ಮಧ್ಯಾಹ್ನ 3 ಗಂಟೆ ಬದಲಾಗಿ 12 ಗಂಟೆಗೆಯೇ ರಥೋತ್ಸವ ಆರಂಭವಾಗಿತ್ತು. ವರ್ಷಕ್ಕೊಮ್ಮೆ ಹೋಳಿ ಹುಣ್ಣಿಮೆಯಂದು ನಡೆಯುವ ರಥೋತ್ಸವ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು. ಆದ್ರೆ ಗರುಡ ಕಾಣಿಸುತ್ತಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು. ರಥೋತ್ಸವ ನಡೆಯುವ ಸರಿಯಾದ ಸಂದರ್ಭಕ್ಕೆ ಗರುಡ ಕಾಣಿಸಿಕೊಂಡಿದೆ. ನೆರೆದಿದ್ದ ಭಕ್ತರು ಗರುಡ ದರ್ಶನವನ್ನು ಪವಾಡ ಎಂದು ಉಲ್ಲೇಖಿಸುತ್ತಾರೆ. ರಥೋತ್ಸವಕ್ಕೆ ಹೆಚ್ ಡಿ ಪುರದ ಸುತ್ತಲಿನ ಗ್ರಾಮದ ಜನರು, ಅಕ್ಕ-ಪಕ್ಕದ ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಚಂದ್ರಗ್ರಹಣ ಆರಂಭಕ್ಕೂ ಮುನ್ನವೇ ಅದ್ಧೂರಿಯಾಗಿ ರಥೋತ್ಸವ ನಡೆದಿದೆ..
    1
    ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆಗೆ ತಟ್ಟಿದ  ಕೇತಗ್ರಸ್ಥ ರಕ್ತ ಚಂದ್ರಗ್ರಹಣ..
ಚಿತ್ರದುರ್ಗ : ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೆಚ್ ಡಿ ಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವದ ಸಮಯವನ್ನು ಬದಲಾಯಿಸಲಾಗಿತ್ತು. 
ಸಮಯ ಬದಲಾದರೂ, ರಥೋತ್ಸವದ ವೇಳೆ ಗರುಡ ಪಕ್ಷಿ ಕಾಣಿಸಿಕೊಂಡಿದ್ದು, ಇದನ್ನು ಪವಾಡವೆಂದು ಭಾವಿಸಿದ ಸಾವಿರಾರು ಭಕ್ತರು ಸಂತಸ ವ್ಯಕ್ತಪಡಿಸಿದರು...
ಇಂದು ಕೇತುಗ್ರಸ್ಥ ರಕ್ತ ಚಂದ್ರಗ್ರಹಣ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೇರಿದೇವಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು. ಸಮಯ ಬದಲಾಗಿದ್ದರಿಂದ ಪ್ರತಿ ವರ್ಷ ಕಾಣುವ ಗರುಡ ಕಾಣಿಸುತ್ತಾ ಅನ್ನೋ ಆತಂಕ ಭಕ್ತರಲ್ಲಿ ಎದುರಾಗಿತ್ತು. ಸಮಯ ಬದಲಾದ್ರೂ ಗರುಡ ಕಾಣಿಸಿಕೊಂಡಿದ್ದಕ್ಕೆ ಭಕ್ತರು ಸಂತಸಗೊಂಡಿದ್ದಾರೆ..
ಸಾಮಾನ್ಯವಾಗಿ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಮಧ್ಯಾಹ್ನ 3 ಗಂಟೆಗೆ ನಡೆಯುತ್ತಿತ್ತು. ಆದ್ರೆ ಇಂದು ಚಂದ್ರಗ್ರಹಣ ಮಧ್ಯಾಹ್ನ 3:20ಕ್ಕೆ ಆರಂಭವಾಗಿ ಸಂಜೆ 6:48ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯವನ್ನು ಸೂತಕ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡಲ್ಲ. ಆದ್ದರಿಂದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಸಮಯ ಬದಲಾವಣೆ ಮಾಡಲಾಗಿತ್ತು...ಮಧ್ಯಾಹ್ನ 3 ಗಂಟೆ ಬದಲಾಗಿ 12 ಗಂಟೆಗೆಯೇ ರಥೋತ್ಸವ ಆರಂಭವಾಗಿತ್ತು. ವರ್ಷಕ್ಕೊಮ್ಮೆ ಹೋಳಿ ಹುಣ್ಣಿಮೆಯಂದು ನಡೆಯುವ ರಥೋತ್ಸವ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು. ಆದ್ರೆ ಗರುಡ ಕಾಣಿಸುತ್ತಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು.
ರಥೋತ್ಸವ ನಡೆಯುವ ಸರಿಯಾದ ಸಂದರ್ಭಕ್ಕೆ ಗರುಡ ಕಾಣಿಸಿಕೊಂಡಿದೆ. ನೆರೆದಿದ್ದ ಭಕ್ತರು ಗರುಡ ದರ್ಶನವನ್ನು ಪವಾಡ ಎಂದು ಉಲ್ಲೇಖಿಸುತ್ತಾರೆ. ರಥೋತ್ಸವಕ್ಕೆ ಹೆಚ್ ಡಿ ಪುರದ ಸುತ್ತಲಿನ ಗ್ರಾಮದ ಜನರು, ಅಕ್ಕ-ಪಕ್ಕದ ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಚಂದ್ರಗ್ರಹಣ ಆರಂಭಕ್ಕೂ ಮುನ್ನವೇ ಅದ್ಧೂರಿಯಾಗಿ ರಥೋತ್ಸವ ನಡೆದಿದೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ. ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    1
    ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ.
ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    15 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    7 hrs ago
  • ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ‌ಶ್ರೀ ಯೋಗಿ ನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾದ ಶ್ರೀ ಯೋಗಿ ನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    1
    ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ‌ಶ್ರೀ ಯೋಗಿ ನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾದ ಶ್ರೀ ಯೋಗಿ ನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.