ಸಾಧನೆ ಮಾಡುವ ಛಲ ಇದ್ದರೆ ಯಾವುದು ಅಸಾಧ್ಯವಲ್ಲ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಅಧ್ಯಯನ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಸೊರಬ: ಇತ್ತೀಚೆಗೆ ನಡೆದ ಕೇಂದ್ರ ಯುಪಿಎಸ್ ಸಿ ಪರೀಕ್ಷೆಯಲ್ಲಿ ಸೊರಬ ತಾಲೂಕಿನ ಹೊಳೆಕೊಪ್ಪದ ನಾರಾಯಣಪ್ಪ ಮತ್ತು ಸುಧಾ ಇವರ ಮಗ ಅಶ್ವತ್ ಅವರು 86 ನೇ ರ್ಯಾಂಕ್ ಪಡೆದು ಉತ್ತೀರ್ಣ ರಾಗಿ ಭಾರತೀಯ ಅರಣ್ಯ ಸೇವೆಗೆ ಆಯ್ಕೆಯಾಗಿದ್ದು ರೋಟರಿ ಕ್ಲಬ್ ವತಿಯಿಂದ ಅವರನ್ನು ಮತ್ತು ಅವರ ಪೋಷಕರನ್ನು ಅಭಿನಂದಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ ಸಾಧನೆ ಮಾಡುವ ಛಲ ಇದ್ದರೆ ಯಾವುದು ಅಸಾಧ್ಯವಲ್ಲ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಅಧ್ಯಯನ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಅಶ್ವತ್ ಅವರ ಸಾಧನೆ ನಮ್ಮ ತಾಲೂಕಿಗೆ ಮಾತ್ರ ಸೀಮಿತವಾಗಿಲ್ಲ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಸಾಧನೆಯಾಗಿದೆ ಇದು ಇತರರಿಗೆ ಪ್ರೇರಣೆಯಾಗಿದೆ ಎಂದರು. ರೋಟರಿ ಕ್ಲಬ್ ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ರೋಟರಿ ಮಾಜಿ ಅಧ್ಯಕ್ಷರಾದ ನಾಗರಾಜ್ ಗುತ್ತಿ,ಡಾ| ನಾಗರಾಜ್, ಕೃಷ್ಣಪ್ಪ ಓಟೂರು ಸೇರಿದಂತೆ ಮೊದಲಾದವರಿದ್ದರು.
ಸಾಧನೆ ಮಾಡುವ ಛಲ ಇದ್ದರೆ ಯಾವುದು ಅಸಾಧ್ಯವಲ್ಲ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಅಧ್ಯಯನ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಸೊರಬ: ಇತ್ತೀಚೆಗೆ ನಡೆದ ಕೇಂದ್ರ ಯುಪಿಎಸ್ ಸಿ ಪರೀಕ್ಷೆಯಲ್ಲಿ ಸೊರಬ ತಾಲೂಕಿನ ಹೊಳೆಕೊಪ್ಪದ ನಾರಾಯಣಪ್ಪ ಮತ್ತು ಸುಧಾ ಇವರ ಮಗ ಅಶ್ವತ್ ಅವರು 86 ನೇ ರ್ಯಾಂಕ್ ಪಡೆದು ಉತ್ತೀರ್ಣ ರಾಗಿ ಭಾರತೀಯ ಅರಣ್ಯ ಸೇವೆಗೆ ಆಯ್ಕೆಯಾಗಿದ್ದು ರೋಟರಿ ಕ್ಲಬ್ ವತಿಯಿಂದ ಅವರನ್ನು ಮತ್ತು ಅವರ ಪೋಷಕರನ್ನು ಅಭಿನಂದಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ ಸಾಧನೆ ಮಾಡುವ ಛಲ ಇದ್ದರೆ ಯಾವುದು ಅಸಾಧ್ಯವಲ್ಲ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಅಧ್ಯಯನ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಅಶ್ವತ್ ಅವರ ಸಾಧನೆ ನಮ್ಮ ತಾಲೂಕಿಗೆ ಮಾತ್ರ ಸೀಮಿತವಾಗಿಲ್ಲ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಸಾಧನೆಯಾಗಿದೆ ಇದು ಇತರರಿಗೆ ಪ್ರೇರಣೆಯಾಗಿದೆ ಎಂದರು. ರೋಟರಿ ಕ್ಲಬ್ ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ರೋಟರಿ ಮಾಜಿ ಅಧ್ಯಕ್ಷರಾದ ನಾಗರಾಜ್ ಗುತ್ತಿ,ಡಾ| ನಾಗರಾಜ್, ಕೃಷ್ಣಪ್ಪ ಓಟೂರು ಸೇರಿದಂತೆ ಮೊದಲಾದವರಿದ್ದರು.
- ಉಕ್ಕಿನ ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ....... ಭದ್ರಾವತಿ ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭದ್ರಾವತಿ: ನಗರದ ವಿವಿಧೆಡೆ ಗೌರಿ-ಗಣೇಶ ಹಬ್ಬ ಆಚರಣೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ ಪ್ರತಿಷ್ಠಿತ ವಿನಾಯಕ ಸೇವಾ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಭದ್ರಾವತಿ ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಹೊಸಮನೆ ಭಾಗದಲ್ಲಿ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೫೪ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ನಗರದ ಪ್ರಮುಖ ವೃತ್ತಗಳಲ್ಲಿ ಆಕರ್ಷಕವಾದ ಬೃಹತ್ ಸ್ವಾಗತ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿದ್ಯುತ್ ದೀಪಗಳ ಆಲಂಕಾರ ಕೈಗೊಳ್ಳಲಾಗಿದೆ. ಭೋವಿ ಕಾಲೋನಿ ಶ್ರೀ ವಿನಾಯಕ ಸೇವಾ ಸಮಿತಿಯಿಂದ ೪೨ನೇ ವರ್ಷದ ಸಂಭ್ರಮಾಚರಣೆ ನಡೆಯುತ್ತಿದ್ದು, ಆಕರ್ಷಕ ವೇದಿಕೆಯಲ್ಲಿ ಬೃಹತ್ ವಿನಾಯಕ ಮೂರ್ತಿ ರಾರಾಜಿಸುತ್ತಿದೆ. ಭಕ್ತರ ಕಣ್ಮನ ಸೆಳೆಯುತ್ತಿದ್ದು, ಸೆ.೨೪ರಂದು ವಿಸರ್ಜನೆ ನಡೆಯಲಿದೆ.3
- ಸಂಗಮೇಶ್ವರ ಪೇಟೆಯಿಂದ ಬಾಳೆಹೊನ್ನೂರುವರೆಗೂ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಲು ನಿರ್ಧಾರ. ಚಿಕ್ಕಮಗಳೂರು : ಮಲೆನಾಡಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿ ಜಾರಿಯನ್ನ ವಿರೋಧಿಸಿ ಮಲೆನಾಡಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದೇ 19 ರಂದು ಸಿಎಂ ಡಿ.ಕೆ ಶಿವಕುಮಾರ್ ಬಾಳೆಹೊನ್ನೂರು ಪಟ್ಟಣದಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿರುವ ರೈತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹಾಗೂ ಜಾಗರ ಹೋಬಳಿಯ ಎಲ್ಲ ನಾಗರೀಕರು ಹಾಗೂ ರೈತರು ಸಂಗಮೇಶ್ವರ ಪೇಟೆಯಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಸಿಎಂಗೆ ಮನವಿ ಸಲ್ಲಿಸಲು ಸಿರ್ಧರಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಸರ್ವ ಪಕ್ಷ ಹಾಗೂ ಎಲ್ಲ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ.1
- ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.1
- ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಎನ್ಪಿಎಸ್ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು (OPS) ಶೀಘ್ರದಲ್ಲೇ ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ತಿಳಿಸಿದ್ದಾರೆ. ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಂವಾದ ನಡೆಸಿ ತದ ನಂತರ ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, "ಹಿಂದೆ ಎನ್ಪಿಎಸ್ ಜಾರಿಗೆ ತಂದವರೇ ಇಂದು ವಾಪಸ್ಗೆ ಒತ್ತಾಯಿಸುತ್ತಿರುವುದು ಮೊಸಳೆ ಕಣ್ಣೀರು. ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಸಮಾನತೆಯಿಂದ ಕಾಣುವ ಅಭಿವೃದ್ಧಿಪರ ಪಕ್ಷವಾಗಿದೆ. ನಾನು ಕೇವಲ ಚುನಾವಣೆಗೆ ಸೀಮಿತವಾಗದೆ, ಈ ಭಾಗದ ಪದವೀಧರರ ಸಂಘಟನೆ, ಉದ್ಯೋಗ, ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇನೆ" ಎಂದರು. ರಾಜ್ಯ ಸರ್ಕಾರವು ಯುವಕರಿಗೆ ಉದ್ಯೋಗ ಕಲ್ಪಿಸಲು 75,000 ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದ್ದು, ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ. ಪೊಲೀಸ್, ಅರಣ್ಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದರು. "ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 1,20,000 ಹಾಗೂ ಹೊಳಲ್ಕೆರೆಯಲ್ಲಿ 4,300 ಮತದಾರರಿದ್ದಾರೆ. ಈ ಹಿಂದೆ ಗೆದ್ದ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂಬ ಆಕ್ರೋಶ ಮತದಾರರಲ್ಲಿದೆ. ನಾನು ಗೆದ್ದು ಬಂದರೆ ಪ್ರತಿ ತಿಂಗಳು ಕ್ಷೇತ್ರಕ್ಕೆ ಭೇಟಿ ನೀಡಿ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಧವಿಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ, ಜಯಪ್ಪ ತಾಲೂಕು ಮುಖಂಡರಾದ ನಾಗರಾಜಯ್ಯ, ರವಿಕುಮಾರ್, ಶಿವಕುಮಾರ್, ಚಂದ್ರಪ್ಪ, ಚಿತ್ತಪ್ಪ, ನಿವೃತ್ತ ನೌಕರರ ಸಂಘದ ಹೇಮಂತ್ ಗೌಡ, ವೆಂಕಟೇಶ್, ನೌಕರ ಸಂಘದ ಕಾರ್ಯದರ್ಶಿ ಶ್ರೀಧರ್, ಮೃತ್ಯುಂಜಯಪ್ಪ, ಮದ್ದೇರು ಶಿವಕುಮಾರ್, ಮಲ್ಲೇಶಪ್ಪ, ಉಪ್ಪರಿಗೇನಹಳ್ಳಿ ಹೇಮಂತ್ ಸೇರಿದಂತೆ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು.1
- *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.1
- ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ ಹಲವು ಸರ್ವ ಧರ್ಮ ಸಮಾನತೆ ಸಾರುವ. ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.1
- ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋದಿ ಹುಟ್ಟುದಿನವನ್ನ ಜಿಲ್ಲಾ ಕಾಂಗ್ರೆಸ್ ವತಿಯಿಂದ ತರಕಾರಿ ಮಾರುವ ಮೂಲಕ ಉಲಕ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಲಾಯಿತು. ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋದಿ ಹುಟ್ಟುದಿನವನ್ನ ಜಿಲ್ಲಾ ಕಾಂಗ್ರೆಸ್ ವತಿಯಿಂದ ತರಕಾರಿ ಮಾರುವ ಮೂಲಕ ಉಲಕ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಲಾಯಿತು. ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷರಾದ ಕಾರೇಹಳ್ಳಿ ಉಲ್ಲಾಸ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಆಚರಿಸಿದ್ದು ವಿಶೇಷವಾಗಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ನಡೆಸಿದರು. ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.1
- ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಚಿತ್ರದುರ್ಗಮೋದಿ ಹುಟ್ಟುದಿನವನ್ನು ನಿರುದ್ಯೋಗಿ ದಿನ ವನ್ನಾಗಿ ಆಚರಣೆ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.1
- ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.1