ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಕೆರೆ ಭರ್ತಿ: ರೈತರು, ಗ್ರಾಮಸ್ಥರಲ್ಲಿ ಹರ್ಷ ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಕೆರೆಯು ಭರ್ತಿಯಾಗಿ ತುಂಬಿ ತುಳುಕುತ್ತಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದರ ಪರಿಣಾಮ, ಬಂಡಳ್ಳಿ ಗ್ರಾಮದ ಕೆರೆಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು ಸಂಪೂರ್ಣವಾಗಿ ಭರ್ತಿಯಾಗಿದೆ. ಕೆರೆಯು ತುಂಬಿ ತುಳುಕುತ್ತಿರುವ ಮನಮೋಹಕ ದೃಶ್ಯವು ಸ್ಥಳೀಯರ ಹಾಗೂ ಪ್ರವಾಸಿಗರ ಮನ ಸೆಳೆಯುತ್ತಿದೆ. ಕೆರೆಯ ಹಿಂಭಾಗದಲ್ಲಿ ಮಂಜು ಕವಿದ ಸುಂದರ ಗುಡ್ಡಗಳು ಮತ್ತು ಹಸಿರಿನ ಸಿರಿಯ ಮಧ್ಯೆ ಈ ಜಲರಾಶಿಯು ಕಂಗೊಳಿಸುತ್ತಿರುವ ದೃಶ್ಯ ನೋಡುಗರ ಕಣ್ಣಿಗೆ ಹಬ್ಬ ಉಂಟುಮಾಡಿದೆ. ರೈತರಲ್ಲಿ ಮೂಡಿದ ಮಂದಹಾಸ: ಕೆರೆ ಭರ್ತಿಯಾಗಿರುವುದರಿಂದ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದ್ದು, ಕೊಳವೆಬಾವಿಗಳಲ್ಲಿ ನೀರು ಮರುಪೂರಣಗೊಳ್ಳಲಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ನೀಗುವುದರ ಜೊತೆಗೆ, ಮುಂದಿನ ಬೆಳೆಗಳಿಗೆ ಅನುಕೂಲವಾಗಲಿದೆ ಎಂದು ಕೃಷಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಕೆರೆ ಭರ್ತಿ: ರೈತರು, ಗ್ರಾಮಸ್ಥರಲ್ಲಿ ಹರ್ಷ ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಕೆರೆಯು ಭರ್ತಿಯಾಗಿ ತುಂಬಿ ತುಳುಕುತ್ತಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದರ ಪರಿಣಾಮ, ಬಂಡಳ್ಳಿ ಗ್ರಾಮದ ಕೆರೆಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು ಸಂಪೂರ್ಣವಾಗಿ ಭರ್ತಿಯಾಗಿದೆ. ಕೆರೆಯು ತುಂಬಿ ತುಳುಕುತ್ತಿರುವ ಮನಮೋಹಕ ದೃಶ್ಯವು ಸ್ಥಳೀಯರ ಹಾಗೂ ಪ್ರವಾಸಿಗರ ಮನ ಸೆಳೆಯುತ್ತಿದೆ. ಕೆರೆಯ ಹಿಂಭಾಗದಲ್ಲಿ ಮಂಜು ಕವಿದ ಸುಂದರ ಗುಡ್ಡಗಳು ಮತ್ತು ಹಸಿರಿನ ಸಿರಿಯ ಮಧ್ಯೆ ಈ ಜಲರಾಶಿಯು ಕಂಗೊಳಿಸುತ್ತಿರುವ ದೃಶ್ಯ ನೋಡುಗರ ಕಣ್ಣಿಗೆ ಹಬ್ಬ ಉಂಟುಮಾಡಿದೆ. ರೈತರಲ್ಲಿ ಮೂಡಿದ ಮಂದಹಾಸ: ಕೆರೆ ಭರ್ತಿಯಾಗಿರುವುದರಿಂದ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದ್ದು, ಕೊಳವೆಬಾವಿಗಳಲ್ಲಿ ನೀರು ಮರುಪೂರಣಗೊಳ್ಳಲಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ನೀಗುವುದರ ಜೊತೆಗೆ, ಮುಂದಿನ ಬೆಳೆಗಳಿಗೆ ಅನುಕೂಲವಾಗಲಿದೆ ಎಂದು ಕೃಷಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
- ನರೇಂದ್ರಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ, ಸೀರೆ, ಸಿಹಿ ವಿತರಣೆ ವರದಿ: ಹೊಮ್ಮನಂಜುಂಡನಾಯಕ ನರೇಂದ್ರಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ, ಸೀರೆ, ಸಿಹಿ ವಿತರಣೆ ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್, ಬಿಜೆಪಿ ಕಾರ್ಯಕರ್ತರ ವತಿಯಿಂದ ನಗರದಲ್ಲಿ ಪೌರಕಾರ್ಮಿಕ ಮಹಿಳೆಯನ್ನು ಸನ್ಮಾನಿಸಿ, ಸೀರೆ, ಸಿಹಿ ವಿತರಿಸಲಾಯಿತು. ಇದಕ್ಕೂ ಮೊದಲು ನಗರದ ಮುದುಕುಮಾರಮ್ಮ ದೇವಸ್ಥಾನದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್ ಅವರ ನೇತೃತ್ವದಲ್ಲಿ ಮೋದಿಯವರ ಹೆಸರಿನಲ್ಲಿ ಆರ್ಚನೆ ಮಾಡಿಸಿ... ವಿಶೇಷಪೂಜೆ ಸಲ್ಲಿಸಲಾಯಿತು. ಪೂಜಾ ಕಾರ್ಯ ನೆರವೇರಿಸಿದ ಆಗಮಿಕ ಪ್ರದೀಪ್ ಕುಮಾರ್ ದೀಕ್ಷಿತ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ಜನ್ಮದಿನದ ಅಂಗವಾಗಿ ಶಿವುವಿರಾಟ್ ಅವರು ಸಮಾಜಮುಖಿ ಚಿಂತನೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಣೆ ಮಾಡುತಿದ್ದಾರೆ. ಈ ಭೂಮಿಗೆ ಅನೇಕ ಮಹನೀಯರು ತಮ್ಮ ಕೊಡುಗೆ ನೀಡಿದ್ದಾರೆ. ಬಹಳ ವಿಶಿಷ್ಠ ವ್ಯಕ್ತಿತ್ವಯುಳ್ಳ ವ್ಯಕ್ತಿ ನರೇಂದ್ರಮೋದಿಯವರು, ಅವರು ದೇಶದ ಪ್ರಧಾನಿಗಳಾಗಿ ಅವರು ಆಯ್ಕೆಯಾದ ಮೇಲೆ ರಾಷ್ಟ್ರದ ಚಿಂತನೆಯಲ್ಲಿ ದೇಶ ಕಂಡಂತಹ ಅನೇಕ ಪ್ರಧಾನಿಗಳಲ್ಲಿ ನರೇಂದ್ರಮೋದಿಯವರು ಅಗ್ರಗಣ್ಯರು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ನರೇಂದ್ರಮೋದಿಯವರು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಇಂದು ದೇಶದಲ್ಲಿ ಕಾರ್ಯಕ್ರಮಗಳು ನಡೆಯುತ್ತಿದೆ. ನರೇಂದ್ರಮೋದಿಯವರು ಸೃಚ್ಚಭಾರತ್ ಮಿಷನ್ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣ ಮಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ನಳ ಸೌಲಭ್ಯ ಕಲ್ಪಿಸಿದರು. ಉಜ್ವಲ ಯೋಜನೆಯಡಿಯಲ್ಲಿ ಉಚಿತ ಅನಿಲ ಸಂಪರ್ಕ ಕಲ್ಪಿಸಿದರು. ಉತ್ತ ಮ ರಸ್ತೆಗಳ ನಿರ್ಮಾಣ, ದೊಡ್ಡದೊಡ್ಡ ಸೇತುವೆ ನಿರ್ಮಾಣ ಮಾಡಿದರು. ಗ್ರಾಮೀಣ ಭಾಗದ ಅಭಿವೃದ್ಧಿಗೆ ಒತ್ತು ನೀಡಿದ್ದರು. ಅಲ್ಲದೆ ದೇಶದ ಪ್ರಗತಿಗಾಗಿ ಒತ್ತು ನೀಡಿದ್ದಾರೆ. ಎಂದರು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ. ಎಂ.ರಾಮಚಂದ್ರ ಮಾತನಾಡಿ, ನರೇಂದ್ರಮೋದಿಯವರ ಆಡಳಿತದ ಅವಧಿಯಲ್ಲಿ ದೇಶ ಸುಭದ್ರವಾಗಿದೆ. ಯಾವುದೇ ಆರ್ಥಿಕ ಸಮಸ್ಯೆ. ಇಲ್ಲದೆ ಭಾರತವನ್ನು ಇಡೀ ವಿಶ್ವಕ್ಕೆ ಕೊಂಡೊಯ್ಯುವ ಕೆಲಸವನ್ನು ನರೇಂದ್ರಮೋದಿಯವರು ಮಾಡಿದ್ದಾರೆ ಎಂದರು. ಕಾರ್ಯಕ್ರಮದ ಆಯೋಜಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್ ಮಾತನಾಡಿ, ಪ್ರಧಾನಿಮಂತ್ರಿ ನರೇಂದ್ರಮೋದಿ ಅವರು ಪೌರಕಾರ್ಮಿಕರ ಪಾದಗಳನ್ನು ತೊಳೆದು, ಒರೆಸಿ ಗೌರವಿಸಿದರು. ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗ, ಬಿಜೆಪಿ ಕಾರ್ಯಕರ್ತರು ಸೇರಿ ನಗರದ ಮುದುಕುಮಾರಮ್ಮ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ಪೌರಕಾರ್ಮಿಕರ ಮಹಿಳೆಯರನ್ನು ಸನ್ಮಾನಿಸಿ, ಸೀರೆ ವಿತರಣೆ ಮಾಡುವ ಮೂಲಕ ಮೋದಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿ ಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜಯಸುಂದರ್, ಡಾ.ಎ.ಆರ್.ಬಾಬು, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಆರ್.ಸುಂದರ್, ನಾರಾಯಣಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದದ್ರಪ್ಪ, ಜಿಲ್ಲಾ ವಕ್ತಾರ ಮನೋಜ್ಪಟೇಲ್, ಮೂಡ್ಲು ಪುರ ನಂದೀಶ್, ಶ್ರೀನಿವಾಸಗೌಡ, ನಗರಸಭಾ ಮಾಜಿ ಸದಸ್ಯರಾದ ರಾಜೇಶ್, ಶಿವಣ್ಣ, ಜಿಲ್ಲಾ ಕಾರ್ಯದರ್ಶಿನಟರಾಜು, ಆನಂದ್ ಭಗೀರಥ, ರವಿ, ನಾಗೇಂದ್ರ, ಆಟೋ ಮಹೇಶ್, ಕೃಷ್ಣ, ಚಂದ್ರಶೇಖರ್, ಪ್ರದೀಪ್, ರಾಕೇಶ್, ಮಣಿಕಂಠ, ಮನು, ಅರುಣ್, ಪ್ರಸನ್ನ, ಭಾನು, ಟಗರುಶಿವ, ಕುಮಾರ್, ಕಿಲಗೆರೆಶಿವು, ರಾಮಸಮುದ್ರಶಿವು, ವೆಂಕಟೇಶ್, ಪುರುಷೋತ್ತಮ . ಫೃಥ್ವಿ, ಕಿರಣ ಇತರರು ಹಾಜರಿದ್ದರು.4
- ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ. ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು. ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ, ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.1
- ಕೌದಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾಗರಹಾವು ಪ್ರತ್ಯಕ್ಷ, ಆತಂಕದಲ್ಲಿ ಸಿಬ್ಬಂದಿಗಳು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಾಗರಹಾವು ಪ್ರತ್ಯಕ್ಷವಾಗಿ ಆಸ್ಪತ್ರೆ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ. ಆಸ್ಪತ್ರೆ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದರಿಂದ ಸಿಬ್ಬಂದಿ ಗಾಬರಿಗೊಂಡಿದ್ದರು. ಕೂಡಲೇ ಉರಗ ರಕ್ಷಕ ಸ್ನೇಕ್ ಮಧು ಅವರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಸುರಕ್ಷಿತವಾಗಿ ನಾಗರಹಾವನ್ನು ಸೆರೆಹಿಡಿದರು. ನಂತರ ಸೆರೆಹಿಡಿದ ನಾಗರಹಾವನ್ನು ಮಲೆ ಮಹದೇಶ್ವರ ವನ್ಯಧಾಮದ ಕಾಡಿಗೆ ಬಿಡಲಾಯಿತು. ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ ಮಧು ಅವರ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದರು1
- ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.1
- ಇತ್ತೀಚಿನ ಮಳೆಗೆ ಶಾಲೆಯ ಮೇಲ್ಚಾವಣಿ ಕುಸಿತ ಆತಂಕದಲ್ಲಿ ಶಾಲಾ ಮಕ್ಕಳು ಚಾಮರಾಜನಗರ:ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಸಣಾಪುರ ಇಲ್ಲಿನ ಶಾಲಾ ಕೊಠಡಿ ಹಳೆಯದಾಗಿದ್ದು ಇತ್ತೀಚಿಗೆ ಸುರಿಯುತ್ತಿರುವ ಬಾರಿಮಳೆಗೆ ಕೊಠಡಿಯ ಮೇಲ್ಚಾವಣಿ ಕುಸಿಯುತ್ತಿದ್ದು ಶಾಲಾ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ಶಾಲೆಯನ್ನು ಮುಂದುವರಿಸಬೇಕಾಗಿದೆ ಕಳೆದ ಬಾರಿಯು ಕೂಡ ಸಂಬಂಧಪಟ್ಟ ಇಲಾಖೆಗೆ ತಮ್ಮ ಸಮಸ್ಯೆಯನ್ನು ಹೇಳಿದರು ಕೂಡ ಇಲಾಖೆ ನಿರ್ಲಕ್ಷಯನ್ನು ತೂರುತ್ತಿದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು ಶಿಕ್ಷಕರ ಕೊರತೆಯನ್ನು ನಿವಾರಿಸಲು ಇಲಾಖೆಯು ಮೀನಾಮೇಶ ಎನಿಸುತ್ತಿದೆ. ಕಳೆದ ಬಾರಿಯಿಂದಲೂ ಕೂಡ ಶಿಕ್ಷಕರ ಕೊರತೆ ಇದ್ದ ಮಕ್ಕಳ ಸಂಖ್ಯಾ ಶೇಕಡಾ ವಾರು ಶಿಕ್ಷಕರನ್ನು ಆಯೋಜನೆ ಮಾಡುವುದರಲ್ಲಿ ಸಂಬಂಧ ಪಟ್ಟ ಅಧಿಕಾರಿಯು ನಿರ್ಲಕ್ಷವನ್ನು ತೂರುತಿದ್ದಾರೆ ಎಂದು sdmc ಕಮಿಟಿಯ ಸದಸ್ಯರಾದ ಶಿವಕುಮಾರ. ಎನ್ ರವರು ದೂರಿನಲ್ಲಿ ತಿಳಿಸಿರುತ್ತಾರೆ.3
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್ಗಳು, ಟ್ರಾನ್ಸ್ಫಾರ್ಮರ್ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ರಾಮಾಪುರ ಸರ್ಕಾರಿ ಶಾಲೆ ಅಸ್ತವ್ಯಸ್ತ: ಮೂಲಭೂತ ಸೌಕರ್ಯಗಳಿಲ್ಲದೆ ನರಕಯಾತನೆ ಅನುಭವಿಸುತ್ತಿರುವ ಮಕ್ಕಳು; ಶಾಲಾ ಮುಂಭಾಗ ಉಗ್ರ ಹೋರಾಟದ ಎಚ್ಚರಿಕೆ ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ತೀವ್ರ ಅಭಾವ ಉಂಟಾಗಿದ್ದು, ಶಾಲಾ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ದಿನನಿತ್ಯ ನರಕಸದೃಶ ವಾತಾವರಣದಲ್ಲಿ ಪರದಾಡುವಂತಾಗಿದೆ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಮುಖ ಸಮಸ್ಯೆಗಳು ಮತ್ತು ಮುಖ್ಯಾಂಶಗಳು ಜಲಾವೃತಗೊಂಡ ಶಾಲೆ: ನೆನ್ನೆ ತಡರಾತ್ರಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ ಶಾಲೆಯ ಆವರಣ ಹಾಗೂ ತರಗತಿ ಕೊಠಡಿಗಳ ಸುತ್ತಮುತ್ತ ಅಪಾರ ಪ್ರಮಾಣದ ನೀರು ನಿಂತುಕೊಂಡಿದ್ದು, ಇಡೀ ಶಾಲೆ ಜಲಾವೃತಗೊಂಡಿದೆ. ಮೈದಾನವೆಲ್ಲಾ ಕೆಸರು ಗದ್ದೆಯಂತಾಗಿದ್ದು ಮಕ್ಕಳಿಗೆ ಆಟವಾಡಲು ಜಾಗವಿಲ್ಲದಂತಾಗಿದೆ. ಕಳಪೆ ಬಿಸಿಯೂಟ: ಶಾಲೆಯಲ್ಲಿ ದಿನನಿತ್ಯ ಸಿದ್ಧಪಡಿಸುವ ಅಡುಗೆಯಲ್ಲಿ ಹುಳ-ಹುಪ್ಪಟೆಗಳು ಹಾಗೂ ಕಸ-ಕಡ್ಡಿಗಳು ಸಿಗುತ್ತಿದ್ದು, ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ಶೌಚಾಲಯದ ಸಮಸ್ಯೆ: ಬಾಲಕಿಯರು ಹಾಗೂ ಶಿಕ್ಷಕಿಯರಿಗೆ ಸೂಕ್ತ ಶೌಚಾಲಯ ವ್ಯವಸ್ಥೆ ಇಲ್ಲ. ಇದ್ದ ಶೌಚಾಲಯದಲ್ಲೂ ನೀರಿನ ಸೌಲಭ್ಯವಿಲ್ಲದೆ ಹಾಗೂ ನೈರ್ಮಲ್ಯದ ಕೊರತೆಯಿಂದ ದುರ್ನಾತ ಬೀರುತ್ತಿದೆ. ಅಪಾಯಕಾರಿ ಕೊಠಡಿಗಳು: ತರಗತಿ ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲಾದರೂ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ. ಪೋಷಕರ ಆಕ್ರೋಶ ಹಾಗೂ ಎಚ್ಚರಿಕೆ "ನಮ್ಮ ಮಕ್ಕಳನ್ನು ನಂಬಿಕೆಯಿಂದ ಸರ್ಕಾರಿ ಶಾಲೆಗೆ ಕಳುಹಿಸುತ್ತೇವೆ. ಆದರೆ ಇಲ್ಲಿ ಕುಡಿಯುವ ನೀರು, ನೈರ್ಮಲ್ಯ ಹಾಗೂ ಕನಿಷ್ಠ ಸೌಲಭ್ಯಗಳೂ ಇಲ್ಲದಿರುವುದು ಬೇಸರದ ಸಂಗತಿ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ" ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ತಕ್ಷಣವೇ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಶಾಲೆಗೆ ಬೀಗ ಜಡಿದು ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.4
- ಸರ್ಕಾರಿ ಗೋಮಾಳ ರಕ್ಷಣೆಗೆ ಒತ್ತಾಯಿಸಿ ಹೆಗ್ಗೋಠಾರ ಗ್ರಾಮದಿಂದ ರೈತರಿಂದ ಬೃಹತ್ ಪಾದಯಾತ್ರೆ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಹಾಗೂ ಮುತ್ತಿಗೆ ಗ್ರಾಮದಲ್ಲಿ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದ್ದು ಗಣಿ ಧೂಳು ಹಾಗೂ ಅಧಿಕ ಬರ ಇರುವ ಟಿಪ್ಪರ್ ಗಳು ಓಡಾಟದಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಧೂಳಿನಿಂದ ಹಾಳಾಗುತ್ತಿದೆ ಆದ್ದರಿಂದ ಗೋಮಾಳವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ಗುರುವಾರ ಪಾದಯಾತ್ರೆ ನಡೆಸಿದರು. ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ರೈತ ಮುಖಂಡ ಹೊನ್ನೂರು ಬಸವಣ್ಣ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಹೆಗ್ಗೋಠಾರ ಗ್ರಾಮದಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದ ವರೆಗೆ ಸುಮಾರು ಹತ್ತು ಕಿಲೋಮೀಟರ್ ಪಾದಯಾತ್ರೆ ನಡೆಸಿ ಜಿಲ್ಲಾಡಳಿತ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.1
- ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ವರದಿ: ಹೊಮ್ಮನಂಜುಂಡನಾಯಕ ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ದೇಶದ ಅಭಿವೃದ್ಧಿಗೆ ನರೇಂದ್ರಮೋದಿ ಕೊಡುಗೆ ಅಪಾರ :ಸಿ.ಎಸ್.ನಿರಂಜನ್ಕುಮಾರ್ ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ನಗರಮಂಡಲ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋ ದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ ಅವರಿಗೆ ದಿ ರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಿ, ಅವರಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟು, ಅವರ ನವಭಾರತ ನಿರ್ಮಾಣ ಕನಸು ನನಸು ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು ಎಂದರು. ನರೇಂದ್ರಮೋದಿ ಅವರ ನೇತೃತ್ವ ಸರ್ಕಾರದ ಪ್ರಮುಖ ಸಾಧನೆಗಳು ಮತ್ತು ಜನಪರ ಯೋಜನೆಗಳು ದೇಶದ ಆರ್ಥಿಕ, ಸಾಮಾಜಿಕ, ಮೂಲಸೌಕರ್ಯಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ವಿಶ್ವಮಟ್ಟದಲ್ಲಿ ಗಮನ ಸೆಳೆದಿದ್ದು, ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು. ಪ್ರಧಾನಿ ಅವರು ನರೇಂದ್ರಮೋದಿ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸುತ್ತಿದ್ದು, ಅವರ ಕಾರ್ಯಸಾಧನೆಯನ್ನು ಇಡೀ ವಿಶ್ವವೇ ಮೆಚ್ಚುವಂತದ್ದು, ದೇಶದ ಅಭಿವೃದ್ಧಿಗೆ ಎಲ್ಲ ಆಯಾಮಗಳಲ್ಲೂ ದೊಡ್ಡ ಕೊಡುಗೆ ನೀಡಿರುವುದು ಜಗತ್ ಜಾಹೀರಾತು ಆಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರಗೆ ಒಂದು ತಿಂಗಳಕಾಲ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಎಸ್ಟಿ ಮೋರ್ಚಾದ ರಾಜ್ಯ ಉಪಾಧಕ್ಷ ಜಯಸುಂದರ್, ಮುಖಂಡ ಡಾ. ಎ.ಆರ್.ಬಾಬು, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ನಾರಾಯಣಪ್ರಸಾದ್, ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಸುಂದರ್ರಾಜ್, ನಗರಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಭಾಸ್ಕರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋ ತ್ತಮ, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಮುಖಂಡರಾದ ನಟರಾಜು, ಮೂಡ್ಲುಪುರ ನಂದೀಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆನಂದ್ಭಗೀರಥ, ನಗರ ಮಂಡಲ ಕಾರ್ಯದರ್ಶಿ ಬಂಗಾರನಾಯಕ, ನಗರಸಭಾ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಎಂ.ಎಸ್.ಚಂದ್ರಶೇಖರ್, ಸುಂದರಪ್ಪ, ಮಹೇಶ್ಪಟೇಲ್, ಕೃಷ್ಣ ಇತರರು ಹಾಜರಿದ್ದರು4