logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಗಳೂರು: ಅಂತರರಾಜ್ಯ ಯುವ ವಿನಿಮಯ ಕಾರ್ಯಕ್ರಮ ಸಮಾರೋಪ ರಾಷ್ಟ್ರ್ರೀಯ ಏಕೀಕರಣ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ 5 ದಿನಗಳ ಅಂತರರಾಜ್ಯ ಯುವ ವಿನಿಮಯ ಕಾರ್ಯಕ್ರಮದ  ಸಮಾರೋಪ ಮಂಗಳೂರಿನ ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಕೇಂದ್ರ ಯುವ ವ್ಯವಹಾರಗಳ ಸಚಿವಾಲಯದ 'ಮೇರಾ ಯುವ ಭಾರತ್' (ಮೈ ಭಾರತ್) ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಘಟಕ ಮತ್ತು ಮಾಂಡ್ ಶೋಭನ್ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತೆಲಂಗಾಣದ 5 ಜಿಲ್ಲೆಗಳಿಂದ ಬಂದಿದ್ದ 35 ಯುವ ನಾಯಕರು ಮತ್ತು ಇಬ್ಬರು ಮಾರ್ಗದರ್ಶಕರು ಸೇರಿದಂತೆ ಒಟ್ಟು 37 ಸದಸ್ಯರ ನಿಯೋಗವು ಈ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕರ್ನಾಟಕದ ಕರಾವಳಿಯ ಶ್ರೀಮಂತ ಪರಂಪರೆಯನ್ನು ಮನಸಾರೆ ಆಸ್ವಾದಿಸಿತು. ತುಳುನಾಡಿನ ಪರಂಪರೆಯ ದರ್ಶನ: ತೆಲಂಗಾಣದ ಯುವಜನರು ನವ ಮಂಗಳೂರು ಬಂದರು ಪ್ರಾಧಿಕಾರ, ಐತಿಹಾಸಿಕ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಕಟೀಲು ಕ್ಷೇತ್ರ ಮತ್ತು ರಾಣಿ ಅಬ್ಬಕ್ಕ ಮ್ಯೂಸಿಯಂ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು. ಪಣಂಬೂರು ಬೀಚ್‍ನ ಸೌಂದರ್ಯವನ್ನು ಸವಿಯುವುದರ ಜೊತೆಗೆ, ತುಳುನಾಡಿನ ಸಾಂಸ್ಕøತಿಕ ಜೀವನಾಡಿಯಾದ ಯಕ್ಷಗಾನ, ಭೂತಕೋಲ ಮತ್ತು ಕಂಬಳದಂತಹ ಕಲೆಗಳ ನೇರ ಪ್ರದರ್ಶನವನ್ನು ವೀಕ್ಷಿಸಿದರು. ಅಲ್ಲದೆ, ಸ್ಥಳೀಯ ಯುವಕ ಸಂಘಗಳು ಮತ್ತು ಮಹಿಳಾ ಮಂಡಲಗಳೊಂದಿಗೆ ಸಂವಾದ ನಡೆಸಿ ಉಭಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಅವರು ಮಾತನಾಡಿ, "ದೇಶ ಕಟ್ಟುವ ಕೆಲಸದಲ್ಲಿ ಇಂತಹ ಯುವ ವಿನಿಮಯ ಕಾರ್ಯಕ್ರಮಗಳು ಬೆನ್ನೆಲುಬಾಗಿ ನಿಲ್ಲುತ್ತವೆ. ಇದು ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುತ್ತದೆ" ಎಂದರು.     ಸಮಾರೋಪದ ಸಂಜೆ ಸಾಂಸ್ಕøತಿಕ ಅನಾವರಣಗೊಂಡಿತು. ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು  ಪ್ರದರ್ಶಿಸಿದ ನೃತ್ಯಗಳು, ಕಲಾಂಗಣದ ಕಲಾವಿದರಿಂದ ಕೊಂಕಣಿ ಗೀತೆಗಳು ಮತ್ತು ತೆಲಂಗಾಣದ ಪ್ರತಿನಿಧಿಗಳಿಂದ ಸಾಂಪ್ರದಾಯಿಕ ಕಲಾ ಪ್ರದರ್ಶನಗಳು ಪ್ರೇಕ್ಷಕರ ಮನ ಗೆದ್ದವು. ತೆಲಂಗಾಣದ ಎಲ್ಲಾ 37 ಪ್ರತಿನಿಧಿಗಳಿಗೆ ನೆನಪಿನ ಕಾಣಿಕೆಯಾಗಿ ಪ್ರಮಾಣಪತ್ರ, ಸ್ಮರಣಿಕೆ ಮತ್ತು ಫೋಟೋ ಫ್ರೇಮ್‍ಗಳನ್ನು ವಿತರಿಸಲಾಯಿತು. ಶಿಕ್ಷಣ, ಸಂಸ್ಕೃತಿ ಮತ್ತು ಸ್ನೇಹದ ಸಮ್ಮಿಲನದಂತಿದ್ದ ಈ ಕಾರ್ಯಕ್ರಮವು ಯುವಜನರಲ್ಲಿ ಹೊಸ ಹುರುಪು ತುಂಬುವಲ್ಲಿ ಯಶಸ್ವಿಯಾಯಿತು. ಮೈ ಭಾರತ್ ದಕ್ಷಿಣ ಕನ್ನಡದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿವಿಯ ಎನ್‍ಎಸ್‍ಎಸ್ ಸಂಯೋಜಕ ಡಾ. ಶೇಷಪ್ಪ ಅಮೀನ್, ಮಾಂಡ್ ಶೋಭನ್ ಅಧ್ಯಕ್ಷ ಲೂವಿ ಪಿಂಟೊ, ಜಗದೀಶ್ ಕೆ., ಮತ್ತು ಶ್ರೀಕಾಂತ್ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ

9 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
9 hrs ago
4d96d4c5-06b7-4bb2-a04f-8b654bf5585f

ಮಂಗಳೂರು: ಅಂತರರಾಜ್ಯ ಯುವ ವಿನಿಮಯ ಕಾರ್ಯಕ್ರಮ ಸಮಾರೋಪ ರಾಷ್ಟ್ರ್ರೀಯ ಏಕೀಕರಣ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ 5 ದಿನಗಳ ಅಂತರರಾಜ್ಯ ಯುವ ವಿನಿಮಯ ಕಾರ್ಯಕ್ರಮದ  ಸಮಾರೋಪ ಮಂಗಳೂರಿನ ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಕೇಂದ್ರ ಯುವ ವ್ಯವಹಾರಗಳ ಸಚಿವಾಲಯದ 'ಮೇರಾ ಯುವ ಭಾರತ್' (ಮೈ ಭಾರತ್) ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಘಟಕ ಮತ್ತು ಮಾಂಡ್ ಶೋಭನ್ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತೆಲಂಗಾಣದ 5 ಜಿಲ್ಲೆಗಳಿಂದ ಬಂದಿದ್ದ 35 ಯುವ ನಾಯಕರು ಮತ್ತು ಇಬ್ಬರು ಮಾರ್ಗದರ್ಶಕರು ಸೇರಿದಂತೆ ಒಟ್ಟು 37 ಸದಸ್ಯರ ನಿಯೋಗವು ಈ ವಿನಿಮಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕರ್ನಾಟಕದ ಕರಾವಳಿಯ ಶ್ರೀಮಂತ ಪರಂಪರೆಯನ್ನು ಮನಸಾರೆ ಆಸ್ವಾದಿಸಿತು. ತುಳುನಾಡಿನ ಪರಂಪರೆಯ ದರ್ಶನ: ತೆಲಂಗಾಣದ ಯುವಜನರು ನವ ಮಂಗಳೂರು ಬಂದರು ಪ್ರಾಧಿಕಾರ, ಐತಿಹಾಸಿಕ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಕಟೀಲು ಕ್ಷೇತ್ರ ಮತ್ತು ರಾಣಿ ಅಬ್ಬಕ್ಕ ಮ್ಯೂಸಿಯಂ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು. ಪಣಂಬೂರು ಬೀಚ್‍ನ ಸೌಂದರ್ಯವನ್ನು ಸವಿಯುವುದರ ಜೊತೆಗೆ, ತುಳುನಾಡಿನ ಸಾಂಸ್ಕøತಿಕ ಜೀವನಾಡಿಯಾದ ಯಕ್ಷಗಾನ, ಭೂತಕೋಲ ಮತ್ತು ಕಂಬಳದಂತಹ ಕಲೆಗಳ ನೇರ ಪ್ರದರ್ಶನವನ್ನು ವೀಕ್ಷಿಸಿದರು. ಅಲ್ಲದೆ, ಸ್ಥಳೀಯ ಯುವಕ ಸಂಘಗಳು ಮತ್ತು ಮಹಿಳಾ ಮಂಡಲಗಳೊಂದಿಗೆ ಸಂವಾದ ನಡೆಸಿ ಉಭಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಅವರು ಮಾತನಾಡಿ, "ದೇಶ ಕಟ್ಟುವ ಕೆಲಸದಲ್ಲಿ ಇಂತಹ ಯುವ ವಿನಿಮಯ ಕಾರ್ಯಕ್ರಮಗಳು ಬೆನ್ನೆಲುಬಾಗಿ ನಿಲ್ಲುತ್ತವೆ. ಇದು ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುತ್ತದೆ" ಎಂದರು.     ಸಮಾರೋಪದ ಸಂಜೆ ಸಾಂಸ್ಕøತಿಕ ಅನಾವರಣಗೊಂಡಿತು. ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು  ಪ್ರದರ್ಶಿಸಿದ ನೃತ್ಯಗಳು, ಕಲಾಂಗಣದ ಕಲಾವಿದರಿಂದ ಕೊಂಕಣಿ ಗೀತೆಗಳು ಮತ್ತು ತೆಲಂಗಾಣದ ಪ್ರತಿನಿಧಿಗಳಿಂದ ಸಾಂಪ್ರದಾಯಿಕ ಕಲಾ ಪ್ರದರ್ಶನಗಳು ಪ್ರೇಕ್ಷಕರ ಮನ ಗೆದ್ದವು. ತೆಲಂಗಾಣದ ಎಲ್ಲಾ 37 ಪ್ರತಿನಿಧಿಗಳಿಗೆ ನೆನಪಿನ ಕಾಣಿಕೆಯಾಗಿ ಪ್ರಮಾಣಪತ್ರ, ಸ್ಮರಣಿಕೆ ಮತ್ತು ಫೋಟೋ ಫ್ರೇಮ್‍ಗಳನ್ನು ವಿತರಿಸಲಾಯಿತು. ಶಿಕ್ಷಣ, ಸಂಸ್ಕೃತಿ ಮತ್ತು ಸ್ನೇಹದ ಸಮ್ಮಿಲನದಂತಿದ್ದ ಈ ಕಾರ್ಯಕ್ರಮವು ಯುವಜನರಲ್ಲಿ ಹೊಸ ಹುರುಪು ತುಂಬುವಲ್ಲಿ ಯಶಸ್ವಿಯಾಯಿತು. ಮೈ ಭಾರತ್ ದಕ್ಷಿಣ ಕನ್ನಡದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿವಿಯ ಎನ್‍ಎಸ್‍ಎಸ್ ಸಂಯೋಜಕ ಡಾ. ಶೇಷಪ್ಪ ಅಮೀನ್, ಮಾಂಡ್ ಶೋಭನ್ ಅಧ್ಯಕ್ಷ ಲೂವಿ ಪಿಂಟೊ, ಜಗದೀಶ್ ಕೆ., ಮತ್ತು ಶ್ರೀಕಾಂತ್ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ

More news from ಕರ್ನಾಟಕ and nearby areas
  • ತೀರ್ಥಹಳ್ಳಿ: ಪಟ್ಟಣಕ್ಕೆ ಹತ್ತಿರವಿರುವ ಕುರುವಳ್ಳಿಯ ಪುತ್ತಿಗೆ ಮಠದ ಪಕ್ಕದಲ್ಲಿರುವ ಗೌರಿಶಂಕರ ದೇವಸ್ಥಾನದಲ್ಲಿ ನಿನ್ನೆ ಶಿವರಾತ್ರಿಯ ಪ್ರಯುಕ್ತ ಶಿವನಿಗೆ ಮಹಾಪೂಜೆ ಸಲ್ಲಿಸಲಾಯಿತು.
    1
    ತೀರ್ಥಹಳ್ಳಿ: ಪಟ್ಟಣಕ್ಕೆ ಹತ್ತಿರವಿರುವ ಕುರುವಳ್ಳಿಯ ಪುತ್ತಿಗೆ ಮಠದ ಪಕ್ಕದಲ್ಲಿರುವ ಗೌರಿಶಂಕರ ದೇವಸ್ಥಾನದಲ್ಲಿ ನಿನ್ನೆ ಶಿವರಾತ್ರಿಯ ಪ್ರಯುಕ್ತ ಶಿವನಿಗೆ ಮಹಾಪೂಜೆ ಸಲ್ಲಿಸಲಾಯಿತು.
    user_ರಶ್ಮಿ ಶ್ರೀಕಾಂತ್ ನಾಯಕ್
    ರಶ್ಮಿ ಶ್ರೀಕಾಂತ್ ನಾಯಕ್
    Local News Reporter ತೀರ್ಥಹಳ್ಳಿ, ಶಿವಮೊಗ್ಗ, ಕರ್ನಾಟಕ•
    9 hrs ago
  • ಕಡೂರು : ಬಹುತೇಕ ಮಾರ್ಚ್ ತಿಂಗಳಲ್ಲಿ ಕಡೂರಿನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿಶ್ರೀನಿವಾಸ್ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಸಮ್ಮೇಳನದ ಪೂರ್ವಭಾವಿ ಸಿದ್ದತೆಯ ಮೊದಲ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಒತ್ತುಕೊಡಲಾಗಿದೆ. ಈಗಾಗಲೇ ಸಮ್ಮೇಳನಾಧ್ಯಕ್ಷರ ಆಯ್ಕೆಯ ಕುರಿತು ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ನಿರ್ಣಯದೊಂದಿಗೆ ಆಯ್ಕೆಗೊಳಿಸಲಾಗುತ್ತದೆ. ಸಮ್ಮೇಳನದ ಮಹಾಪೋಷಕರಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಚಿಕ್ಕಮಗಳೂರು, ಹಾಸನ ಕ್ಷೇತ್ರದ ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರುಗಳನ್ನು ಮತ್ತು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯ ಪೋಷಕರನ್ನಾಗಿ ಆಯ್ಕೆಗೊಳಿಸಲಾಗಿದೆ. ಕ್ಷೇತ್ರದ ಮಾಜಿ ಶಾಸಕರು ಒಳಗೊಂಡAತೆ ವಿವಿಧ ಉಪಸಮಿತಿಗಳಲ್ಲಿ ಪದಾಧಿಕಾರಿಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರ ನೇತೃತ್ವ ಹಾಗೂ ಸ್ವಾಗತಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಸಿದ್ದತೆ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದರು. ಈ ಬಾರಿಯ ಸಮ್ಮೇಳನದಲ್ಲಿ ಅಂತರಾಷ್ಟಿçÃಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನುಮುಷ್ತಾಕ್ ಅವರನ್ನು ಆಹ್ವಾನಿಸಲಾಗುತ್ತದೆ. ಶೋಷಿತ ಸಮುದಾಯದ ಜಿಲ್ಲೆಯ ಸೂಕ್ತ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಆಶಯವ್ಯಕ್ತಗೊಂಡಿದ್ದು, ಫೆ.22ರಂದು ಎನ್.ಆರ್.ಪುರದಲ್ಲಿ ನಡೆಯುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಿ ಆಯ್ಕೆಗೊಳಿಸಲಾಗುತ್ತದೆ ಎಂದರು. ಸ್ವಾಗತ ಸಮಿತಿಯ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಚಟ್ನಳ್ಳಿ ಹಾಗೂ ಬೀರೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಮ್ಮೇಳನವು ಈ ಬಾರಿ ವಿಶೇಷವಾಗಿ ಕಡೂರಿಗೆ 21ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಕೆಲಸಕ್ಕೆ ಎಲ್ಲರ ವಿಶ್ವಾಸವನ್ನು ಪಡೆದು ಸಮ್ಮೇಳನದ ಯಶಸ್ವಿಗೆ ಒತ್ತುಕೊಡಲಾಗುತ್ತದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಶೋಷಿತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕೆಂಬುದು ಸಮಿತಿಯ ಒಕ್ಕೂರಲ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸುವ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸಿ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಚಿಕ್ಕನಲ್ಲೂರು ಪರಮೇಶ್, ರವಿದಳವಾಯಿ, ಯರದಕೆರೆ ರಾಜಪ್ಪ, ಸಿಂಗಟಗೆರೆ ಸಿದ್ದಪ್ಪ, ಸೀತಾಲಕ್ಷಿö್ಮÃ, ಟಿ.ಆರ್. ರೇಣುಕಯ್ಯ, ಗೋವಿಂದಸ್ವಾಮಿ, ಕೆ.ಜಿ. ವಸಂತಕುಮಾರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜು, ಗೆದ್ಲೇಹಳ್ಳಿ ಜಗದೀಶ್, ಎನ್.ಎಚ್. ನಂಜುAಡಸ್ವಾಮಿ, ಷಣ್ಮುಖಪ್ಪ, ನಾಗರಾಜ್, ಆರ್.ಜಿ. ಕೃಷ್ಣಸ್ವಾಮಿ, ಹಿರೇನಲ್ಲೂರು ಶ್ರೀನಿವಾಸ್, ಶಿವಲಿಂಗಸ್ವಾಮಿ ಮತ್ತಿತರಿದ್ದರು.
    4
    ಕಡೂರು : ಬಹುತೇಕ ಮಾರ್ಚ್ ತಿಂಗಳಲ್ಲಿ ಕಡೂರಿನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಕನ್ನಡ ಭವನದಲ್ಲಿ  ಸಮ್ಮೇಳನದ ಪೂರ್ವಭಾವಿ ಸಿದ್ದತೆಯ ಮೊದಲ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಒತ್ತುಕೊಡಲಾಗಿದೆ. ಈಗಾಗಲೇ ಸಮ್ಮೇಳನಾಧ್ಯಕ್ಷರ ಆಯ್ಕೆಯ ಕುರಿತು ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ನಿರ್ಣಯದೊಂದಿಗೆ ಆಯ್ಕೆಗೊಳಿಸಲಾಗುತ್ತದೆ. ಸಮ್ಮೇಳನದ ಮಹಾಪೋಷಕರಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಚಿಕ್ಕಮಗಳೂರು, ಹಾಸನ ಕ್ಷೇತ್ರದ ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರುಗಳನ್ನು ಮತ್ತು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯ ಪೋಷಕರನ್ನಾಗಿ ಆಯ್ಕೆಗೊಳಿಸಲಾಗಿದೆ. ಕ್ಷೇತ್ರದ ಮಾಜಿ ಶಾಸಕರು ಒಳಗೊಂಡAತೆ ವಿವಿಧ ಉಪಸಮಿತಿಗಳಲ್ಲಿ ಪದಾಧಿಕಾರಿಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರ ನೇತೃತ್ವ ಹಾಗೂ ಸ್ವಾಗತಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಸಿದ್ದತೆ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದರು. 
ಈ ಬಾರಿಯ ಸಮ್ಮೇಳನದಲ್ಲಿ ಅಂತರಾಷ್ಟಿçÃಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನುಮುಷ್ತಾಕ್ ಅವರನ್ನು ಆಹ್ವಾನಿಸಲಾಗುತ್ತದೆ. ಶೋಷಿತ ಸಮುದಾಯದ ಜಿಲ್ಲೆಯ ಸೂಕ್ತ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಆಶಯವ್ಯಕ್ತಗೊಂಡಿದ್ದು, ಫೆ.22ರಂದು ಎನ್.ಆರ್.ಪುರದಲ್ಲಿ ನಡೆಯುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಿ ಆಯ್ಕೆಗೊಳಿಸಲಾಗುತ್ತದೆ ಎಂದರು.
ಸ್ವಾಗತ ಸಮಿತಿಯ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಚಟ್ನಳ್ಳಿ ಹಾಗೂ ಬೀರೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಮ್ಮೇಳನವು ಈ ಬಾರಿ ವಿಶೇಷವಾಗಿ ಕಡೂರಿಗೆ 21ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಕೆಲಸಕ್ಕೆ ಎಲ್ಲರ ವಿಶ್ವಾಸವನ್ನು ಪಡೆದು ಸಮ್ಮೇಳನದ ಯಶಸ್ವಿಗೆ ಒತ್ತುಕೊಡಲಾಗುತ್ತದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಶೋಷಿತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕೆಂಬುದು ಸಮಿತಿಯ ಒಕ್ಕೂರಲ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸುವ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸಿ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಚಿಕ್ಕನಲ್ಲೂರು ಪರಮೇಶ್, ರವಿದಳವಾಯಿ, ಯರದಕೆರೆ ರಾಜಪ್ಪ, ಸಿಂಗಟಗೆರೆ ಸಿದ್ದಪ್ಪ, ಸೀತಾಲಕ್ಷಿö್ಮÃ, ಟಿ.ಆರ್. ರೇಣುಕಯ್ಯ, ಗೋವಿಂದಸ್ವಾಮಿ, ಕೆ.ಜಿ. ವಸಂತಕುಮಾರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜು, ಗೆದ್ಲೇಹಳ್ಳಿ ಜಗದೀಶ್, ಎನ್.ಎಚ್. ನಂಜುAಡಸ್ವಾಮಿ, ಷಣ್ಮುಖಪ್ಪ, ನಾಗರಾಜ್, ಆರ್.ಜಿ. ಕೃಷ್ಣಸ್ವಾಮಿ, ಹಿರೇನಲ್ಲೂರು ಶ್ರೀನಿವಾಸ್, ಶಿವಲಿಂಗಸ್ವಾಮಿ ಮತ್ತಿತರಿದ್ದರು.
    user_Kadur News
    Kadur News
    ಪತ್ರಕರ್ತ Kadur, Chikkamagaluru•
    9 hrs ago
  • ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು. ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು. #templeopening #Kodakahalli #villegevibes❤️ #Arkalgud #temple #News5Kannada
    1
    ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ  ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು.
ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು.
ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
#templeopening #Kodakahalli #villegevibes❤️ #Arkalgud #temple #News5Kannada
    user_Ravi Dummi
    Ravi Dummi
    Local News Reporter ಅರಕಲಗೂಡು, ಹಾಸನ, ಕರ್ನಾಟಕ•
    13 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    11 hrs ago
  • ಆಶೀರ್ವಾದ್ ಟ್ರೇಡರ್ಸ್ ಗೋಡನ್ ಮೇಲೆ ಕೃಷಿ ಇಲಾಖೆಯ ಅಧಿಕಾರಿ ಅನಿಲ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ಸುಮಾರು 18 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಯೂರಿಯಾ ವಶ ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ...18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ... ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ...
    2
    ಆಶೀರ್ವಾದ್ ಟ್ರೇಡರ್ಸ್ ಗೋಡನ್ ಮೇಲೆ ಕೃಷಿ ಇಲಾಖೆಯ ಅಧಿಕಾರಿ ಅನಿಲ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ
ಸುಮಾರು 18 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಯೂರಿಯಾ ವಶ
ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ...18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ...
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ  ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ...
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Nanjangud, Mysuru•
    9 hrs ago
  • ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?
    1
    ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
ಎಂತಾ ಕಾಲವಯ್ಯ
?
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    11 hrs ago
  • ಸಮರ್ಥ ಶಿವಯೋಗಿ ಕಾಗಿನಲ್ಲಿ ಎಂಬ ಆರು ವರ್ಷದ ಬಾಲಕ ಗುತ್ತಲ ಪಟ್ಟಣದಿಂದ ಕುರವತ್ತಿ ಬಸವೇಶ್ವರ ರಥೋತ್ಸವಕ್ಕೆ ಬರಿಗಾಲಲ್ಲಿ ಪಾದಯಾತ್ರೆಯನ್ನು 2. ತಾಸು 30 ನಿಮಿಷ್ಯಕ್ಕೆ ಕುರವತ್ತಿ ತಲುಪಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
    4
    ಸಮರ್ಥ ಶಿವಯೋಗಿ ಕಾಗಿನಲ್ಲಿ  ಎಂಬ ಆರು ವರ್ಷದ ಬಾಲಕ ಗುತ್ತಲ ಪಟ್ಟಣದಿಂದ ಕುರವತ್ತಿ ಬಸವೇಶ್ವರ ರಥೋತ್ಸವಕ್ಕೆ ಬರಿಗಾಲಲ್ಲಿ ಪಾದಯಾತ್ರೆಯನ್ನು 2. ತಾಸು 30 ನಿಮಿಷ್ಯಕ್ಕೆ ಕುರವತ್ತಿ ತಲುಪಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
    user_GURUSHANTH HIREMATH
    GURUSHANTH HIREMATH
    ಪತ್ರಕರ್ತ ಹಾವೇರಿ, ಹಾವೇರಿ, ಕರ್ನಾಟಕ•
    21 hrs ago
  • ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿರುವುದಿಲ್ಲ ಎಂಬುದು ತಿಳಿದು ಬಂದಿದೆ.
    1
    ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿರುವುದಿಲ್ಲ ಎಂಬುದು ತಿಳಿದು ಬಂದಿದೆ.
    user_ರಶ್ಮಿ ಶ್ರೀಕಾಂತ್ ನಾಯಕ್
    ರಶ್ಮಿ ಶ್ರೀಕಾಂತ್ ನಾಯಕ್
    Local News Reporter ತೀರ್ಥಹಳ್ಳಿ, ಶಿವಮೊಗ್ಗ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.