Shuru
Apke Nagar Ki App…
ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.
Bhimasenrao Kulkarni Kushtagi
ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.
More news from ಕರ್ನಾಟಕ and nearby areas
- ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.2
- ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ. ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.1
- ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.3
- 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.4
- ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.1
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ. ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.2