ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ..... ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಗ್ರಾಮಸ್ಥರ-ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ.. ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ ದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ... ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..
ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ..... ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಗ್ರಾಮಸ್ಥರ-ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ.. ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ ದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ... ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..
- User10015Sidlaghatta, Chikkaballapura👏2 hrs ago
- ಭದ್ರಾವತಿ: ನಗರದ ಹೊಸ ಸೇತುವೆ ರಸ್ತೆ ಯ ಓಲಾ ಸರ್ವಿಸ್ ಸೆಂಟರ್ ಬಂದ್ ಆಗಿರುವುದರಿಂದ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕಳೆದ ಮೂರು ದಿನದಿಂದ ಸಂಸ್ಥೆ ಬಾಗಿಲು ಹಾಕಿದ್ದು ವ್ಯವಸ್ಥಾಪಕರನ್ನ ಸ್ಥಳಕ್ಕೆ ಕರೆಸುವಂತೆ ಗ್ರಾಹಕರು ಆಗ್ರಹಿಸಿದ್ದಾರೆ. ಸರ್ವಿಸ್ ಸೆಂಟರ್ ನಲ್ಲಿ ವಾಹನದ ಬಿಡಿ ಭಾಗಗಳು ದೊರೆಯುತ್ತಿಲ್ಲ. ದುರಸ್ಥಿಗೆ ಬಿಟ್ಟ ವಾಹನಗಳಿಂದ ಹೊಂದಾಣಿಕೆ ಇಲ್ಲದ ಬಿಡಿ ಭಾಗಗಳನ್ನು ತೆಗೆದು ತಾತ್ಕಾಲಿಕವಾಗಿ ವಾಹನಕ್ಕೆ ತೆಗೆದುಹಾಕುತ್ತಾರೆ ಎಂಬ ಆರೋಪವನ್ನ ಸ್ಥಳೀಯರು ಹೊರಹಾಕು ತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಹಕರು ಸಂಸ್ಥೆಯ ಬಳಿ ಹೋದಾಗ ಬಾಗಿಲು ಹಾಕಿದ್ದನು ಕಂಡು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ವ್ಯವಸ್ಥಾಪಕ ಬಾಗಿಲು ಹಾಕಿಕೊಂಡು ಹೋದವರು ವಾಪಾಸಾಗಿಲ್ಲ ವೆಂದು ಸ್ಥಳೀಯ ಸಾರ್ವಜನಿಕರು ಹೇಳುತ್ತಿದ್ದಾರೆ.1
- ವಾಣಿಜ್ಯ ಅಂಗಡಿ ಮಳಿಗೆಗಳು ಉದ್ಘಾಟನೆ ಮಾಡಿದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ:-ತಾಲ್ಲೂಕು ಮಿಟ್ಟೇಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣ ಬಳಿ 20:00 ಲಕ್ಷ ರೂ.ವೆಚ್ಚದಲ್ಲಿ ಮಿಟ್ಟೇಮರಿ ಗ್ರಾಮ ಪಂಚಾಯತಿ ವರ್ಗ-1ರ ಯೋಜನೆಯಡಿ ಅನುದಾನದಲ್ಲಿ ನಿರ್ಮಾಣವಾಗಿರುವ ವಾಣಿಜ್ಯ ಅಂಗಡಿ ಮಳಿಗೆಗಳನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ನಾನು ನಿರಂತರವಾಗಿ ಶ್ರಮಿಸುತ್ತಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಹಂತ ಹಂತವಾಗಿ ನೆರವೇರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು. ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಲು ಸಹಕರಿಸಿದ ಗ್ರಾಮ ಪಂಚಾಯತಿ ಅದ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಅಭಿನಂದನೆಗಳು ತಿಳಿಸುತ್ತೇನೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿಗೆ ಏಳು ವರ್ಷ, 240 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸುವ ಮೂಲಕ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ ಆದ್ದರಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಕೋಮುವಾದ ವಿರೋಧಿ ನಿಲುವುಗಳನ್ನು ಸದಾ ಪ್ರತಿಪಾದಿಸಿರುವ ಸಿದ್ದರಾಮಯ್ಯ ಅವರು, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇತ್ತೀಚಿನ ಅವಧಿಯಲ್ಲಿ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಮಾಜಿ ಸಿಎಂ ದಿವಂಗತ ದೇವರಾಜ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅತೀಕ್ ಭಾಷಾ,ಇಓ ರಮೇಶ್ ಕುಮಾರ್, ಗ್ರಾಮ ಪಂಚಾಯತಿ ಅದ್ಯಕ್ಷೆ ಸೀತಮ್ಮ ಅಂಜನಪ್ಪ,ಉಪಾಧ್ಯಕ್ಷೆ ಗೌತಮಿ ವಿಜಯಗೋಪಾಲ ರೆಡ್ಡಿ, ಮಾಜಿ ಅಧ್ಯಕ್ಷ ನರಸಿಂಹಯ್ಯ,ಸದಸ್ಯರಾದ ನರಸರೆಡ್ಡಿ,ಮಮತಾ ಎನ್ ಮಂಜುನಾಥ್, ಅಶ್ವಥಮ್ಮ ಕಾಮರೆಡ್ಡಿ,ನಾರಾಯಣ ಸ್ವಾಮಿ, ವೆಂಕಟೇಶ್, ಅಂಜನಮ್ಮ ನಾಗರಾಜು, ಮಂಜುಳಾ ಶ್ರೀನಿವಾಸ್, ವೆಂಕಟರವಣಪ್ಪ,ಅಂಜನಪ್ಪ,ರಾಮಲಕ್ಷ್ಮಮ್ಮ,ಪಿ.ಡಿ.ಓ ಡಿ.ಎಂ.ವೆಂಕಟೇಶಪ್ಪ, ಗುತ್ತಿಗೆದಾರ ನಾಗರಾಜು ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಯುವಕರು, ಹಿರಿಯರು, ಗ್ರಾಮಸ್ಥರು, ಸಾರ್ವಜನಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.1
- ದೇವನಹಳ್ಳಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ. ಚಾಲಕನ ಸೀಟ್ ಬೆಂಡ್ ಮಾಡಿ ಮಲಗಿರುವ ಸ್ಥಿತಿಯಲ್ಲಿ ಶವಪತ್ತೆ. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಘಟನೆ. ಬೆಳಗ್ಗೆಯಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿ. ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೇಲೆಳದ ಕಾರಣ ಎಬ್ಬಿಸಲು ಮುಂದಾಗಿದ್ದ ಸ್ಥಳೀಯರು. ಡೋರ್ ಹೊಡೆದರು ಎಚ್ಚರವಾಗದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸ್ಥಳೀಯರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ. ಮೆಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪಿರುವ ಶಂಕೆ. ವ್ಯಕ್ತಿಯ ಜೇಬಿನಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ತಾಳಹಳ್ಳಿ ದಾಖಲೆಗಳು ಪತ್ತೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಘಟನೆ.1
- ಶಿಡ್ಲಘಟ್ಟದ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವತಿಯಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ! ಬೈಕ್ ರ್ಯಾಲಿ ಮೂಲಕ ರಸ್ತೆ ಸುರಕ್ಷತಾ ಜಾಗೃತಿ..!1
- ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜನವರಿ 11ಕ್ಕೆ ಮಂಗಳೂರಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಸಿಎ ಜಗನ್ನಾಥ್ ಕಾಮತ್ ಹೇಳಿದ್ದಾರೆ. ಅವರು ಗುರುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಹೊಟೇಲ್ ಹಾಲ್ ನಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಈ ಕುರಿತು ಮಾಹಿತಿ ನೀಡಿದರು. ಮಂಗಳೋತ್ಸವದ ಪೂರ್ವಭಾವಿಯಾಗಿ ಜನವರಿ ಐದಕ್ಕೆ ಕರ್ನಾಟಕ, ಕೇರಳದಿಂದ ಹೊರೆಕಾಣಿಕಾ ಸೇವಾ ಸಮರ್ಪಣೆ ನಡೆದಿದೆ. ದೇಶದ ವಿವಿಧೆಡೆಗಳಿಂದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಮಂಗಳೂರಿಗೆ ಆಗಮಿಸುತ್ತಿದೆ ಎಂದ ಅವರು, ಬರುವ ಭಾನುವಾರ ಶ್ರೀ ಕಾಶಿಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಅಂದ್ರು. ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ನಡೆಯಲಿದೆ. ಇದೇ ವೇಳೆ ವಿವಿಧ ಊರ ಭಜನಾ ಮಂಡಳಿಗಳು ದೇವರ, ಸ್ವಾಮೀಜಿಯವರ ಭಜನೆಯನ್ನು ಹಾಡುತ್ತಾ ಪಾದಯಾತ್ರೆಯಲ್ಲಿ ಭಾಗವಹಿಸಲಿದೆ ಅಂದ್ರು. ಸುದ್ದಿಗೋಷ್ಟಿಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ, ಆಲ್ ಟೆಂಪಲ್ ಅಸೋಸಿಯೇಶನ್ ಅಧ್ಯಕ್ಷ ಅತುಲ್ ಕುಡ್ವ, ಪ್ರಮುಖರಾದ ಕೋಟೇಶ್ವರ ದಿನೇಶ್ ಕಾಮತ್, ವಾಸುದೇವ್ ಕಾಮತ್, ರಘುವೀರ್ ಭಂಡಾರಕಾರ್, ಟಿ. ಗಣಪತಿ ಪೈ ಹಾಗೂ ಮುಖಂಡರು ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ4
- समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.1
- ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮಾಚರಣೆ.. ಚಳ್ಳಕೆರೆ ಮುಖ್ಯಮಂತ್ರಿಯಾಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಬ್ರೇಕ್ ಮಾಡಿದ್ದಾರೆ.. ಬರೋಬ್ಬರಿ 2,792 ದಿನಗಳ ಕಾಲ ಸಿಎಂ ಆಗಿ ಆಳ್ವಿಕೆ ನಡೆಸಿ ಸಿದ್ದರಾಮಯ್ಯ, ಸುದೀರ್ಘ ಅವಧಿಗೆ ಸಿಎಂ ಆಗಿದ್ದ ದೇವರಾಜ ಅರಸು ದಾಖಲೆ ಮುರಿದಿದ್ದಾರೆ. ಈ ದಿನವನ್ನು ಸಿದ್ದರಾಮಯ್ಯ ಅಭಿಮಾನಿಗಳು ನಾಡಿನ ಉದ್ದಗಲಕ್ಕೂ ಸಂಭ್ರಮಾಚರಣೆ ಮಾಡಿದ್ದಾರೆ. ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಇವರ ವತಿಯಿಂದ ನಗರದ ಶಾಸಕರ ಭವನದಲ್ಲಿ ಕಾಂಗ್ರೆಸ್ನ ಮುಖಂಡರು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿ ನಂತರ ವಾಲ್ಮೀಕಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.. ಸಂಭ್ರಮಾಚರಣೆಯಲ್ಲಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ವೀರಭದ್ರಯ್ಯ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ ಟಿ ಶಶಿಧರ್, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಗದ್ದಿಗೆ ತಿಪ್ಪೆಸ್ವಾಮಿ, ಹಿರಿಯ ಮುಖಂಡರಾದ ಪ್ರಭುದೇವ್, ಕೆಪಿಸಿಸಿ ಕುಶಲಕರ್ಮಿ ವಿಭಾಗದ ರಾಜ್ಯಾಧ್ಯಕ್ಷ ಆರ್ ಪ್ರಸನ್ ಕುಮಾರ್,ಸೈಯದ್, ಪರಿಶಿಷ್ಟ ವರ್ಗಗಳ ಸಮಿತಿ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಸಿಟಿ ಶ್ರೀನಿವಾಸ್. ಮುಖಂಡರಾದ ಕಂದಿಕೆರೆ ಸುರೇಶ್ ಬಾಬು. ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ಬಾಯಿ, ಮುಖಂಡರಾದ ಕೃಷ್ಣಮೂರ್ತಿ ಚಳ್ಳಕೆರಪ್ಪ ಬಸವರಾಜ್ ಅನ್ವರ್ ಮಾಸ್ಟರ್, ಮಹಿಳಾ ಮುಖಂಡರಾದ ಬಿ.ಎಂ. ಭಾಗ್ಯಮ್ಮ ಭಾಗ್ಯಲಕ್ಷ್ಮಿ, ಕವಿತಾ, ಮಂಜುಳಾ, ಜಬಿನ, ಇಂದ್ರಮ್ಮ,ರಾಜೇಶ್ವರಿ,ಉಪಾ ಸೇರಿದಂತೆ ಕಾಂಗ್ರೆಸ್ನ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು..1
- ಸಿಎಂ ಸಿದ್ದರಾಮಯ್ಯ ಅವರು ಸುದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿ ಅವರ ದಾರಿಯಲ್ಲೇ ಮುನ್ನಡೆಯುತ್ತಿರುವುದು ಸಂತಸದ ವಿಚಾರ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು ಗುರುವಾರ ಮಂಗಳೂರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶೋಷಿತ ವರ್ಗದ ಧ್ವನಿಯಾಗಿ ಬಸವಣ್ಣನವರ ಸೈದ್ಧಾಂತಿಕ ನಿಲುವನ್ನು ಜೀವನದಲ್ಲಿ ಆಳವಡಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.ಅನ್ನಭಾಗ್ಯ, ವಿದ್ಯಾಸಿರಿ, ಗುತ್ತಿಗೆಯಲ್ಲಿ ಮೀಸಲಾತಿ ಇವೆಲ್ಲಿ ಕ್ರಾಂತಿಕಾರಿ ಹೆಜ್ಜೆಗಳಾಗಿವೆ. ನಿಗಮಗಳ, ಗ್ರಾಮ ಪಂಚಾಯತ್ ಸಾಲಮನ್ನಾ, ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನ, ಎತ್ತಿನಹೊಳೆ ಯೋಜನೆ, ಪಶ್ಚಿಮ ವಾಹಿನಿ ಯೋಜನೆ, ಮಿನಿ ವಿಧಾನ ಸೌಧಗಳು, ಪ್ರಜಾಸೌಧ, ಅಂಬೇಡ್ಕರ್ ಭವನ ನಿರ್ಮಾಣ ಸಿದ್ದರಾಮಯ್ಯನವರ ಸಾಧನೆಯಾಗಿದೆ ಎಂದು ರೈ ಹಿಂದಿನ ಅವಧಿಯ ಸರಕಾರದ ಸಾಧನೆಗಳ ಪಟ್ಟಿಯನ್ನು ತೆರದಿಟ್ಟರು. ಸಿದ್ದರಾಮಯ್ಯರ ಹಿಂದಿನ ಅವಧಿಯ ಸಾಧನೆ ‘ದಿ ಬೆಸ್ಟ್’ ಆಗಿತ್ತು. ಈಗಿನ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ ಎಂದು ರಮಾನಾಥ ರೈ ಹೇಳಿದರು. ವರದಿ: ಶಂಶೀರ್ ಬುಡೋಳಿ1
- *ಭಾರತ ನಲ್ಲಿ ವೈರಲ್*1