Shuru
Apke Nagar Ki App…
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತೋಶ್ರೀ ರುದ್ರಮ್ಮ ರೇವಣಸಿದ್ದಯ್ಯ ಕಲ್ಮಠ ಅವರ 80ನೇ ವರ್ಷದ ಅಮೃತ ಮಹೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
H M ಹರಕುಣಿ
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತೋಶ್ರೀ ರುದ್ರಮ್ಮ ರೇವಣಸಿದ್ದಯ್ಯ ಕಲ್ಮಠ ಅವರ 80ನೇ ವರ್ಷದ ಅಮೃತ ಮಹೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
More news from ಕರ್ನಾಟಕ and nearby areas
- ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತೋಶ್ರೀ ರುದ್ರಮ್ಮ ರೇವಣಸಿದ್ದಯ್ಯ ಕಲ್ಮಠ ಅವರ 80ನೇ ವರ್ಷದ ಅಮೃತ ಮಹೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.1
- ಬಿಎಂಟಿಸಿ ಕಂಡಕ್ಟರ್ ಒಬ್ಬರು ಸಚಿವರಿಗೇ ಶಾಕ್ ನೀಡಿದ ಘಟನೆಯ ವಿಡಿಯೋ ಒಂದು ಹೊರಬಿದ್ದಿದೆ. ಬಸ್ಸಿನಲ್ಲಿ ಚಿಲ್ಲರೆ ಇಲ್ಲದಿದ್ದಕ್ಕೆ ಕಂಡಕ್ಟರ್ ಅವರು ನೇರವಾಗಿ, "ಚಿಲ್ಲರೆ ಇಲ್ವಾ? ಬಸ್ಸಿನಿಂದ ಕೆಳಗೆ ಇಳಿ" ಎಂದು ಹೇಳಿ ಸಚಿವರಿಗೆ ಆಘಾತ ನೀಡಿದ್ದಾರೆ. ಈ ಇಡೀ ಘಟನೆಯ ವಿಡಿಯೋ ಈಗ ಲಭ್ಯವಿದೆ.1
- ಗಾನ ಕೋಗಿಲೆ ಎಂದೇ ಕರೆಯಲ್ಪಡುವ ಹಿರಿಯ ಗಾಯಕಿ ಜಾನಕಿ ರವರು ಎಂದಿಗೂ ಮರಳಿ ಬಾರದ ಲೋಕಕ್ಕೆ ತಮ್ಮ ಅಂತಿಮ ಪಯಣ ಬೆಳೆಸಿದ್ದಾರೆ.1
- ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರವಾಗಿದೆ. ಆದರೆ ಕುಕನೂರು ಪಟ್ಟಣದಲ್ಲಿರುವ ಅವರದೇ ಹೆಸರಿನ ಗಾಂಧಿನಗರಕ್ಕೆ ಇಂದಿಗೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ 12ನೇ ವಾರ್ಡ್ನ ಗಾಂಧಿನಗರದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು, ಕಸಕಡ್ಡಿಗಳೆಲ್ಲ ಮನೆಗಳ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದರಿಂದಾಗಿ ನಿವಾಸಿಗಳು ಮೂಗು ಮುಚ್ಚಿಕೊಂಡು ವಾಸಿಸುವಂತಾಗಿದ್ದು, ವಿವಿಧ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ. ಚರಂಡಿ ಮಾರ್ಗಗಳಲ್ಲಿ ಅನಧಿಕೃತವಾಗಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ಈ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಚರಂಡಿ ನೀರು ಸುಗಮವಾಗಿ ಹರಿದು ಹೋಗಲು ದಾರಿ ಕಲ್ಪಿಸಿಕೊಡುವಂತೆ 12ನೇ ವಾರ್ಡಿನ ನಿವಾಸಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಅಧಿಕಾರಿಗಳು ಗಾಂಧಿನಗರಕ್ಕೆ ಸ್ವಾತಂತ್ರ್ಯ ಸಿಗದ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ವತಿಯಿಂದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಸಾಕಷ್ಟು ಹಣ ಬಿಡುಗಡೆಯಾಗುತ್ತಿದ್ದರೂ, ತಾಲೂಕು ಕೇಂದ್ರವಾದ ಪಟ್ಟಣದಲ್ಲಿಯೇ ಇಂತಹ ದುಸ್ಥಿತಿ ಇದೆ ಎಂದರೆ ಇನ್ನು ಹಳ್ಳಿಗಳ ಪಾಡೇನು ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಸ್ವಚ್ಛತೆಯ ಕೊರತೆಯ ಜೊತೆಗೆ ಗಾಂಧಿನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದ್ದು, ಸರಿಯಾದ ಸಮಯಕ್ಕೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಮತ ಬ್ಯಾಂಕ್ಗಾಗಿ ಚುನಾವಣೆ ಸಮಯದಲ್ಲಿ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು, ತಮ್ಮ ಮತಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸ್ವಲ್ಪಮಟ್ಟಿಗಾದರೂ ತಿಳಿದುಕೊಂಡಿರಬೇಕು ಎಂದು ವಾರ್ಡಿನ ನಿವಾಸಿಯೊಬ್ಬರು ಆಕ್ರೋಶ ಹೊರಹಾಕಿದ್ದಾರೆ. ಈ ವರದಿಯನ್ನಾದರೂ ವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಗಾಂಧಿನಗರಕ್ಕೆ ಸ್ವಚ್ಛತೆಯ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. (ವರದಿ: ಚನ್ನಯ್ಯ ಹಿರೇಮಠ, ಕುಕನೂರು)4
- ಶಿವಮೊಗ್ಗ ನಗರದ ಕೆಲವು ವಾರ್ಡ್ಗಳಲ್ಲಿ ಕಳೆದ ಕೆಲವು ದಿನಗಳಿಂದ ತಾಂತ್ರಿಕ ಅಡಚಣೆಯಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಶಾಸಕ ಚನ್ನಬಸಪ್ಪ ಅವರು ನ್ಯೂ ಮಂಡ್ಲಿಯಲ್ಲಿರುವ ವಾಟರ್ ಪಂಪ್ ಹೌಸ್ಗೆ ಖುದ್ದಾಗಿ ಭೇಟಿ ನೀಡಿ ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಮಾಧ್ಯಮ ಮಿತ್ರರೊಂದಿಗೆ ಜಂಟಿಯಾಗಿ ಈ ಪರಿಶೀಲನೆ ನಡೆಸಿದ ಶಾಸಕರು, ನಗರದ ನಾಗರಿಕರ ದೈನಂದಿನ ಅಗತ್ಯಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಪ್ರಮುಖ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಜಲಮಂಡಳಿ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಎಂಜಿನಿಯರ್ಗಳ ತಂಡ ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯದಲ್ಲಿ ನಿರತವಾಗಿದೆ. ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಬೇಗ ನಿವಾರಿಸಿ, ಸಾರ್ವಜನಿಕರಿಗೆ ಎಂದಿನಂತೆ ಸುಗಮವಾಗಿ ಕುಡಿಯುವ ನೀರು ಸರಬರಾಜು ಮಾಡಲು ಶಾಸಕರು ಕಟ್ಟುನಿಟ್ಟಿನ ಜವಾಬ್ದಾರಿಯುತ ಸೂಚನೆಗಳನ್ನು ನೀಡಿದ್ದಾರೆ. ಸಾರ್ವಜನಿಕರಿಗೆ ಆಗಿರುವ ತಾತ್ಕಾಲಿಕ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಅವರು, ಇಲಾಖೆಯು ಹಗಲಿರುಳು ಶ್ರಮಿಸುತ್ತಿದ್ದು ಅತ್ಯಂತ ಶೀಘ್ರದಲ್ಲಿಯೇ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.1
- ಮಧ್ಯಪ್ರದೇಶದ ಬಿಜೆಪಿ ಆಡಳಿತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇಲ್ಲಿ ಆಸ್ಪತ್ರೆಯೊಂದು ಕೇವಲ ಕಾಗದದ ಮೇಲೆ ಮಾತ್ರವೇ ಅಸ್ತಿತ್ವದಲ್ಲಿದ್ದು, ಇದೀಗ ಬಿಎಡ್ ಕಾಲೇಜೊಂದನ್ನು ಕೂಡ ಕಳೆದ 10 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ ನಡೆಸಲಾಗುತ್ತಿದೆ. ಇಂತಹ ಭ್ರಷ್ಟಾಚಾರಿ ಬಿಜೆಪಿಯನ್ನು ಜನರು ಇನ್ಯಾವ ರೀತಿ ನಂಬಿ ವೋಟು ಕೊಟ್ಟು ಮೋಸ ಹೋಗುತ್ತಿದ್ದಾರೆ ಎಂದು ತೀವ್ರವಾಗಿ ಪ್ರಶ್ನಿಸಲಾಗಿದ್ದು, ಜನರ ನಂಬಿಕೆಗೆ ದ್ರೋಹ ಬಗೆಯುತ್ತಿರುವ ಬಿಜೆಪಿ ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ.1
- ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ 21 ವರ್ಷದ ಸಚಿನ್ ಎಂಬ ಯುವಕ, ಮಾಂಸಾಹಾರ ಸೇವಿಸುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಏಪ್ರಿಲ್ 17, 2026ರಂದು ರಾತ್ರಿ ಈ ಪಾರ್ಟಿ ನಡೆದಿದ್ದು, ಊಟದ ನಂತರ ಸಚಿನ್ ನಿರ್ಮಾಣ ಹಂತದ ಮನೆಯೊಂದರ ಬಳಿ ತೆರಳಿದ್ದನು. ಮರುದಿನ ಮುಂಜಾನೆ ಆತ ಅಲ್ಲಿ ಶವವಾಗಿ ಪತ್ತೆಯಾಗಿದ್ದನು. ಮರಣೋತ್ತರ ಪರೀಕ್ಷೆಯ ನಂತರ, ಆತನ ಗಂಟಲಿನಲ್ಲಿ ಆಹಾರದ ಮೂಳೆ ಸಿಲುಕಿಕೊಂಡಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಘಟನೆ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ಸೇವಿಸುವಾಗ ನಿಧಾನವಾಗಿ, ಚೆನ್ನಾಗಿ ಅಗಿದು ತಿನ್ನಬೇಕು ಮತ್ತು ಮೂಳೆ ಇರುವ ಆಹಾರವನ್ನು ತಿನ್ನುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಎಚ್ಚರಿಸಲಾಗಿದೆ.1