logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜನಾರ್ದನ ರೆಡ್ಡಿ ಮನೆಗೆ ಬೆಂಕಿ ಇಟ್ಟಿದ್ದನ್ನ ಖಂಡಿಸಿದ ಡಿ ಸುಧಾಕರ್ ಸಚಿವ ಡಿ ಸುಧಾಕರ್ ಅವರು ಮಾತನಾಡಿದ್ದು ಕಾಂಗ್ರೆಸ್ ನ ಶಾಸಕರು ಹಾಗೂ ಬೆಂಬಲಿಗರು ಜನಾರ್ದನ ರೆಡ್ಡಿ ಮನೆಗೆ ಬೆಂಕಿ ಇಟ್ಟಿದ್ದಾರೆ ಎಂಬ ವಿಚಾರಕ್ಕೆ ಸಂಬಂದಬವಪೊಲೀಸರು ಪ್ರಖರಣ ಧಾಖಲಿಸಿಕೊಂಡಿದ್ದು ತನಿಖೆ ಕೈಗೆತ್ತಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

on 24 January
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
on 24 January

ಜನಾರ್ದನ ರೆಡ್ಡಿ ಮನೆಗೆ ಬೆಂಕಿ ಇಟ್ಟಿದ್ದನ್ನ ಖಂಡಿಸಿದ ಡಿ ಸುಧಾಕರ್ ಸಚಿವ ಡಿ ಸುಧಾಕರ್ ಅವರು ಮಾತನಾಡಿದ್ದು ಕಾಂಗ್ರೆಸ್ ನ ಶಾಸಕರು ಹಾಗೂ ಬೆಂಬಲಿಗರು ಜನಾರ್ದನ ರೆಡ್ಡಿ ಮನೆಗೆ ಬೆಂಕಿ ಇಟ್ಟಿದ್ದಾರೆ ಎಂಬ ವಿಚಾರಕ್ಕೆ ಸಂಬಂದಬವಪೊಲೀಸರು ಪ್ರಖರಣ ಧಾಖಲಿಸಿಕೊಂಡಿದ್ದು ತನಿಖೆ ಕೈಗೆತ್ತಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

More news from ಕರ್ನಾಟಕ and nearby areas
  • ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು.. ಚಿತ್ರದುರ್ಗ :ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪರಶುರಾಮಪುರದ ಶಿಲ್ಪ ಎನ್ನುವ ಮಹಿಳೆಯೋರ್ವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ.. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ..
    1
    ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು..
ಚಿತ್ರದುರ್ಗ :ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪರಶುರಾಮಪುರದ ಶಿಲ್ಪ ಎನ್ನುವ  ಮಹಿಳೆಯೋರ್ವರು  ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ..
ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ..
ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಚಿತ್ರದುರ್ಗದ ಜಿಲ್ಲಾ‌ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ
    1
    ಚಿತ್ರದುರ್ಗದ ಜಿಲ್ಲಾ‌ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ಚಳ್ಳಕೆರೆ: ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಸರ್ಕಾರಿ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ಚಳ್ಳಕೆರೆ ತಾಲೂಕಿನ ಚೌಳೂರು ಕಾವಲಿನ ಸರ್ವೆ ನಂ. 1ರಲ್ಲಿ ಸಾರ್ವಜನಿಕರಿಗಾಗಿ ಸುಮಾರು ಎರಡು ಎಕರೆ ಸ್ಮಶಾನ ಭೂಮಿ ಮೀಸಲಾಗಿದ್ದು, ಅದನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದರು. ಸರ್ಕಾರಿ ಭೂಮಿ, ವಿಶೇಷವಾಗಿ ಸ್ಮಶಾನ ಹಾಗೂ ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಯಾರೂ ಅಕ್ರಮವಾಗಿ ಒತ್ತುವರಿ ಮಾಡಬಾರದು. ಇಂತಹ ಒತ್ತುವರಿ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಎಚ್ಚರಿಕೆ ನೀಡಿದ್ದಾರೆ.
    1
    ಚಳ್ಳಕೆರೆ: ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಸರ್ಕಾರಿ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ.
ಚಳ್ಳಕೆರೆ ತಾಲೂಕಿನ ಚೌಳೂರು ಕಾವಲಿನ ಸರ್ವೆ ನಂ. 1ರಲ್ಲಿ ಸಾರ್ವಜನಿಕರಿಗಾಗಿ ಸುಮಾರು ಎರಡು ಎಕರೆ ಸ್ಮಶಾನ ಭೂಮಿ ಮೀಸಲಾಗಿದ್ದು, ಅದನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು.
ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದರು.
ಸರ್ಕಾರಿ ಭೂಮಿ, ವಿಶೇಷವಾಗಿ ಸ್ಮಶಾನ ಹಾಗೂ ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಯಾರೂ ಅಕ್ರಮವಾಗಿ ಒತ್ತುವರಿ ಮಾಡಬಾರದು. ಇಂತಹ ಒತ್ತುವರಿ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಎಚ್ಚರಿಕೆ ನೀಡಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    1 hr ago
  • ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ
    1
    ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ
    user_Voice news Kannada
    Voice news Kannada
    ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    1 hr ago
  • ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.
    1
    ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.
    user_ASN News24Kannada
    ASN News24Kannada
    Newsagent Ballari, Karnataka•
    18 hrs ago
  • ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು ಹೇಳಿದ್ದಾರೆ.
    4
    ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ 
ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ  ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು    ಹೇಳಿದ್ದಾರೆ.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    5 hrs ago
  • ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    1
    ಕರ್ನಾಟಕ ರಾಜ್ಯದಾದ್ಯಂತ  ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    user_ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    Graphic designer ತುಮಕೂರು, ತುಮಕೂರು, ಕರ್ನಾಟಕ•
    18 hrs ago
  • ಚಳ್ಳಕೆರೆ, ಮಾ.10 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ಕೈಗೊಂಡಿದ್ದ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು. ತಾಲ್ಲೂಕಿನ ಗರಣಿ ಕ್ರಾಸ್ ಬಳಿ ಮಂಗಳವಾರ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ ನಡೆಸಿದ ರೈತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಕೂದಲೆಳೆ ಅಂತರದಲ್ಲಿಯೇ ರೈತಸಂಘದ ಕಾರ್ಯಕರ್ತರು ಮಾ.2ರಂದು ಉಪವಾಸ ಆರಂಭಿಸಿ ಐದು ದಿನಗಳ ಕಾಲ ಮುಂದುವರಿಸಿದ್ದರೂ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಮನವೊಲಿಸುವ ಸಣ್ಣ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು. ಪ್ರತಿದಿನ ವಿವಿಧ ಸಂಘಟನೆಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಬೇಕೆಂದು ಆಗ್ರಹಿಸಿದರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ಪರಿಣಾಮ ರೈತನಾಯಕ ಉಪವಾಸ ಸತ್ಯಾಗ್ರಹದಿಂದ ಕುಸಿದುಬಿದ್ದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತçಚಿಕಿತ್ಸೆಗೆ 15 ಲಕ್ಷ ರೂ. ವೆಚ್ಚವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ತಿಪ್ಪೇಸ್ವಾಮಿ ಅವರ ಆರೋಗ್ಯ ವಿಚಾರಿಸುವ ಮಾನವೀಯತೆಯನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾಡಿಲ್ಲದಿರುವುದು ಹೋರಾಟಗಾರರಿಗೆ ಅಪಮಾನ ಮಾಡುವ ನಡೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಹೋರಾಟಗಾರರ ಕೂಗಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ, ಐದು ದಿನಗಳಿಂದ ಉಪವಾಸ ನಿರತರಾಗಿದ್ದ ತಿಪ್ಪೇಸ್ವಾಮಿ ಅವರನ್ನು ಅತ್ಯಂತ ಅಪಮಾನಕರವಾಗಿ ಜಿಲ್ಲಾಧಿಕಾರಿ ನಡೆಸಿಕೊಂಡಿದ್ದಾರೆ. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದ ಪರಿಣಾಮ ಉಪವಾಸ ಮುಂದುವರಿಸಿದ್ದೇ ಅನಾರೋಗ್ಯಕ್ಕೆ ಒಳಗಾಗಲು ಮುಖ್ಯ ಕಾರಣ ಎಂದರು. ರೈತನಾಯಕ ಅನಾರೋಗ್ಯಕ್ಕೆ ಒಳಗಾಗಲಿ ಎಂಬ ಉದ್ದೇಶದಿಂದಲೇ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿಲ್ಲವೆಂಬ ಸಂಶಯ ಮೂಡುತ್ತದೆ. ಇದೊಂದು ಸರ್ಕಾರಿ ವ್ಯವಸ್ಥೆ ಪರೋಕ್ಷವಾಗಿ ಕೊಲೆ ಯತ್ನ ನಡೆಸಿದೆ ಎಂದು ದೂರಿದರು. ಆಸ್ಪತ್ರೆಗೆ ಸೇರಿ ಐದು ದಿನಗಳಾಗಿದ್ದರೂ ಇಲ್ಲಿಯವರೆಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಅಧಿಕಾರಿಗಳು ಮಾಡಿಲ್ಲ. ಅಧಿಕಾರಿಗಳ ನಡೆ ಉದ್ಧಟನದಿಂದ ಕೂಡಿದೆ. ಇಂತಹ ಡಿಸಿಯನ್ನು ಯಾವುದೇ ಕಾರಣಕ್ಕೂ ಚಿತ್ರದುರ್ಗದಲ್ಲಿ ಇರಲು ಬಿಡಬಾರದು ಎಂದರು. ಟಿ.ವೆAಕಟೇಶ್ ಜಿಲ್ಲೆಗೆ ಆಗಮಿಸಿ ಎರಡೂವರೆ ವರ್ಷ ಆಗಿದ್ದರೂ ಇಲ್ಲಿಯವರೆಗೂ ಯಾವ ಕಾರಣಕ್ಕೆ ಅವರನ್ನೇ ಮುಂದುವರಿಸಲಾಗುತ್ತಿದೆ ಎಂದು ಪ್ರಶ್ನೀಸಿದ ಬಸವರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಟಿಎಂ ರೀತಿ ಬೆಂಬಲವಾಗಿ ನಿಂತಿದ್ದಾರೆ. ಈ ಕಾರಣಕ್ಕೆ ವೆಂಕಟೇಶ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಕೊನೇ ಪಕ್ಷ ಹೋರಾಟಗಾರರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲಿ. ಜಿಲ್ಲೆಯ ಜನರ ಹಿತಕ್ಕಾಗಿ ಯಾವುದೇ ವ್ಯಕ್ತಿ ಚಳವಳಿ ಕೈಗೊಂಡರೇ ಅವರ ಮನವಿ ಆಲಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಉಪವಾಸ ಕುಳಿತ ತಕ್ಷಣವೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ನಿರ್ಲಕ್ಷö್ಯ ತೋರಿದ್ದರ ಪರಿಣಾಮ ರೈತನಾಯಕ ಕೆ.ಟಿ.ತಿಪ್ಪೇಸ್ವಾಮಿ ಕುಸಿದುಬಿದ್ದು ಆಸ್ಪತ್ರೆ ಸೇರುವಂತಾಗಿದೆ. ಈಗಲಾದರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮಾನವೀಯತೆ ಪ್ರದರ್ಶಿಸಲಿ ಎಂದು ತಿಳಿಸಿದರು. ತಾಲ್ಲೂಕಾಧ್ಯಕ್ಷ ಮಲ್ಲಸಮುದ್ರ ಗಂಗಾಧರ್, ಮುಖಂಡರಾದ ಸೂರಮ್ಮನಹಳ್ಳಿ ರಾಜಣ್ಣ, ಪ್ರಶಾಂತ್‌ರೆಡ್ಡಿ, ಮಿಠ್ಯಾನಾಯ್ಕ, ಓಬನಾಯ್ಕ್, ಚಂದ್ರಶೇಖರ ನಾಯಕ, ಹೀರೇಹಳ್ಳಿ ತಿಪ್ಪೇಸ್ವಾಮಿ, ಎದ್ದಲು ತಿಪ್ಪೇಸ್ವಾಮಿ, ಪಾಪಯ್ಯ, ಬಸವರಾಜ್, ರಾಜಣ್ಣ ಇತರರಿದ್ದರು. .
    1
    ಚಳ್ಳಕೆರೆ, ಮಾ.10 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ಕೈಗೊಂಡಿದ್ದ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು.
ತಾಲ್ಲೂಕಿನ ಗರಣಿ ಕ್ರಾಸ್ ಬಳಿ ಮಂಗಳವಾರ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ ನಡೆಸಿದ ರೈತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿ ಕೂದಲೆಳೆ ಅಂತರದಲ್ಲಿಯೇ ರೈತಸಂಘದ ಕಾರ್ಯಕರ್ತರು ಮಾ.2ರಂದು ಉಪವಾಸ ಆರಂಭಿಸಿ ಐದು ದಿನಗಳ ಕಾಲ ಮುಂದುವರಿಸಿದ್ದರೂ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಮನವೊಲಿಸುವ ಸಣ್ಣ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು.
ಪ್ರತಿದಿನ ವಿವಿಧ ಸಂಘಟನೆಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಬೇಕೆಂದು ಆಗ್ರಹಿಸಿದರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ಪರಿಣಾಮ ರೈತನಾಯಕ ಉಪವಾಸ ಸತ್ಯಾಗ್ರಹದಿಂದ ಕುಸಿದುಬಿದ್ದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತçಚಿಕಿತ್ಸೆಗೆ 15 ಲಕ್ಷ ರೂ. ವೆಚ್ಚವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ತಿಪ್ಪೇಸ್ವಾಮಿ ಅವರ ಆರೋಗ್ಯ ವಿಚಾರಿಸುವ ಮಾನವೀಯತೆಯನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾಡಿಲ್ಲದಿರುವುದು ಹೋರಾಟಗಾರರಿಗೆ ಅಪಮಾನ ಮಾಡುವ ನಡೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಹೋರಾಟಗಾರರ ಕೂಗಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ, ಐದು ದಿನಗಳಿಂದ ಉಪವಾಸ ನಿರತರಾಗಿದ್ದ ತಿಪ್ಪೇಸ್ವಾಮಿ ಅವರನ್ನು ಅತ್ಯಂತ ಅಪಮಾನಕರವಾಗಿ ಜಿಲ್ಲಾಧಿಕಾರಿ ನಡೆಸಿಕೊಂಡಿದ್ದಾರೆ. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದ ಪರಿಣಾಮ ಉಪವಾಸ ಮುಂದುವರಿಸಿದ್ದೇ ಅನಾರೋಗ್ಯಕ್ಕೆ ಒಳಗಾಗಲು ಮುಖ್ಯ ಕಾರಣ ಎಂದರು.
ರೈತನಾಯಕ ಅನಾರೋಗ್ಯಕ್ಕೆ ಒಳಗಾಗಲಿ ಎಂಬ ಉದ್ದೇಶದಿಂದಲೇ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿಲ್ಲವೆಂಬ ಸಂಶಯ ಮೂಡುತ್ತದೆ. ಇದೊಂದು ಸರ್ಕಾರಿ ವ್ಯವಸ್ಥೆ ಪರೋಕ್ಷವಾಗಿ ಕೊಲೆ ಯತ್ನ ನಡೆಸಿದೆ ಎಂದು ದೂರಿದರು.
ಆಸ್ಪತ್ರೆಗೆ ಸೇರಿ ಐದು ದಿನಗಳಾಗಿದ್ದರೂ ಇಲ್ಲಿಯವರೆಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಅಧಿಕಾರಿಗಳು ಮಾಡಿಲ್ಲ. ಅಧಿಕಾರಿಗಳ ನಡೆ ಉದ್ಧಟನದಿಂದ ಕೂಡಿದೆ. ಇಂತಹ ಡಿಸಿಯನ್ನು ಯಾವುದೇ ಕಾರಣಕ್ಕೂ ಚಿತ್ರದುರ್ಗದಲ್ಲಿ ಇರಲು ಬಿಡಬಾರದು ಎಂದರು.
ಟಿ.ವೆAಕಟೇಶ್ ಜಿಲ್ಲೆಗೆ ಆಗಮಿಸಿ ಎರಡೂವರೆ ವರ್ಷ ಆಗಿದ್ದರೂ ಇಲ್ಲಿಯವರೆಗೂ ಯಾವ ಕಾರಣಕ್ಕೆ ಅವರನ್ನೇ ಮುಂದುವರಿಸಲಾಗುತ್ತಿದೆ ಎಂದು ಪ್ರಶ್ನೀಸಿದ ಬಸವರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಟಿಎಂ ರೀತಿ ಬೆಂಬಲವಾಗಿ ನಿಂತಿದ್ದಾರೆ. ಈ ಕಾರಣಕ್ಕೆ ವೆಂಕಟೇಶ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಕೊನೇ ಪಕ್ಷ ಹೋರಾಟಗಾರರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲಿ. ಜಿಲ್ಲೆಯ ಜನರ ಹಿತಕ್ಕಾಗಿ ಯಾವುದೇ ವ್ಯಕ್ತಿ ಚಳವಳಿ ಕೈಗೊಂಡರೇ ಅವರ ಮನವಿ ಆಲಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಉಪವಾಸ ಕುಳಿತ ತಕ್ಷಣವೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ನಿರ್ಲಕ್ಷö್ಯ ತೋರಿದ್ದರ ಪರಿಣಾಮ ರೈತನಾಯಕ ಕೆ.ಟಿ.ತಿಪ್ಪೇಸ್ವಾಮಿ ಕುಸಿದುಬಿದ್ದು ಆಸ್ಪತ್ರೆ ಸೇರುವಂತಾಗಿದೆ. ಈಗಲಾದರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮಾನವೀಯತೆ ಪ್ರದರ್ಶಿಸಲಿ ಎಂದು ತಿಳಿಸಿದರು.
ತಾಲ್ಲೂಕಾಧ್ಯಕ್ಷ ಮಲ್ಲಸಮುದ್ರ ಗಂಗಾಧರ್, ಮುಖಂಡರಾದ ಸೂರಮ್ಮನಹಳ್ಳಿ ರಾಜಣ್ಣ, ಪ್ರಶಾಂತ್‌ರೆಡ್ಡಿ, ಮಿಠ್ಯಾನಾಯ್ಕ, ಓಬನಾಯ್ಕ್, ಚಂದ್ರಶೇಖರ ನಾಯಕ, ಹೀರೇಹಳ್ಳಿ ತಿಪ್ಪೇಸ್ವಾಮಿ, ಎದ್ದಲು ತಿಪ್ಪೇಸ್ವಾಮಿ, ಪಾಪಯ್ಯ, ಬಸವರಾಜ್, ರಾಜಣ್ಣ ಇತರರಿದ್ದರು.
.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.