logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುಮಕೂರು ಜಿಲ್ಲೆಯ ಹುಳಿಯಾರಿನ ಬಾಲಾಜಿ ಥಿಯೇಟರ್ ಹಿಂಭಾಗದ ಇಂದಿರಾ ನಗರದ 4 ನೇ ವಾರ್ಡಿನಲ್ಲಿ ತೀವ್ರ ಚರ್ಚೆಗೆ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ರಸ್ತೆ ಒತ್ತುವರಿ ಸಮಸ್ಯೆ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿದಿದೆ. ಇಲ್ಲಿನ ಅಲ್ಪಸಂಖ್ಯಾತರ ಇಲಾಖೆಯಿಂದ ಅಜಗರ್ ಅವರ ಮನೆಯಿಂದ ಅಲೀಂಜಾನ್ ರವರ ಮನೆಯವರೆಗೆ ಹೊಸದಾಗಿ ರಸ್ತೆ ನಿರ್ಮಾಣ ಕಾಮಗಾರಿ ಮಂಜೂರಾಗಿತ್ತು. ಆದರೆ, ಸ್ಥಳೀಯ ನಿವಾಸಿಯೊಬ್ಬರು ತಮಗೆ ಸೇರಿದ ಸೈಟ್ ನಂ. 127 ರ ನಿಗದಿತ ಅಳತೆಗಿಂತ ಹೆಚ್ಚಾಗಿ ರಸ್ತೆಯ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ಮತ್ತು ಮೆಟ್ಟಿಲು ನಿರ್ಮಿಸಿದ್ದರಿಂದ ಕಳೆದ 5-6 ತಿಂಗಳುಗಳಿಂದ ರಸ್ತೆ ಕಾಮಗಾರಿ ಮಾಡಲು ಸಾಧ್ಯವಾಗಿರಲಿಲ್ಲ. ಇದೇ ಕಾರಣಕ್ಕೆ ಈ ಹಿಂದೆ ಸುಮಾರು 3 ರಿಂದ 4 ಬಾರಿ ರಸ್ತೆ ಕಾಮಗಾರಿ ಸ್ಥಳಾಂತರಗೊಂಡು ಸಾರ್ವಜನಿಕರು, ವೃದ್ಧರು ಹಾಗೂ ರೋಗಿಗಳು ಓಡಾಡಲು ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಒತ್ತುವರಿ ತೆರವುಗೊಳಿಸಲು ಇತರ ಇಬ್ಬರು ನಿವಾಸಿಗಳು ಒಪ್ಪಿದ್ದರೂ, ಪ್ರಮುಖವಾಗಿ ಒತ್ತುವರಿ ಮಾಡಿಕೊಂಡಿದ್ದ ಒಬ್ಬರು ಮಾತ್ರ ಎಲ್ಲರ ಮನೆಯನ್ನು ನಕ್ಷೆಯಂತೆ ಅಳತೆ ಮಾಡಿಸುವಂತೆ ಹಠ ಹಿಡಿದಿದ್ದರು. ಇದರಿಂದ ಆಕ್ರೋಶಗೊಂಡ ವಾರ್ಡಿನ ಸಾರ್ವಜನಿಕರು ರಸ್ತೆಯಲ್ಲೇ ಜಮಾಯಿಸಿ ತೀವ್ರ ಪ್ರತಿಭಟನೆ ನಡೆಸಿ, ರಸ್ತೆ ಸಂಪರ್ಕ ಕಲ್ಪಿಸಿಕೊಡುವಂತೆ ಪಟ್ಟು ಹಿಡಿದರು. ಪ್ರತಿಭಟನೆಯ ತೀವ್ರತೆಯನ್ನು ಅರಿತ ಹುಳಿಯಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಇಂಜಿನಿಯರ್ ಮಂಜುನಾಥ್, ಮಾಜಿ ಕೌನ್ಸಿಲರ್ ರಾಘವೇಂದ್ರ ಹಾಗೂ ಹಾಲಿ ಕೌನ್ಸಿಲರ್ ಹೇಮಂತ್ ಕುಮಾರ್ ತಕ್ಷಣವೇ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿದರು. ಅಧಿಕಾರಿಗಳು ನಕ್ಷೆಯ ಪ್ರಕಾರ ಮನೆ ಹಾಗೂ ರಸ್ತೆಯ ಜಾಗವನ್ನು ಅಳತೆ ಮಾಡಿಸಿ, ಒತ್ತುವರಿಯಾಗಿರುವ ಭಾಗವನ್ನು ಮಾರ್ಕ್ ಮಾಡಿಸಿ ತಕ್ಷಣವೇ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು ಮತ್ತು ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಅಧಿಕಾರಿಗಳ ಎಚ್ಚರಿಕೆ ಹಾಗೂ ವಾದ-ವಿವಾದಗಳ ನಂತರ ಒತ್ತುವರಿ ಮಾಡಿಕೊಂಡಿದ್ದ ನಿವಾಸಿಯು ಪರಿಸ್ಥಿತಿ ಅರಿತು, ತಾವೇ ಸ್ವತಃ ಒತ್ತುವರಿ ತೆರವುಗೊಳಿಸಲು 5 ದಿನಗಳ ಕಾಲಾವಕಾಶ ಕೋರಿದರು. ಅದಕ್ಕೆ ಅಧಿಕಾರಿಗಳು ಸಮ್ಮತಿಸಿ ಗಡುವು ನೀಡಿದ್ದು, ಇದರೊಂದಿಗೆ ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಾದ ಸಾಧಿಕ್ ಸಾಬ್, ಮಂಜುನಾಥ್, ಜಾನಕಮ್ಮ, ಕೆಂಚಪ್ಪ, ವಿಶಾಲಾಕ್ಷಮ್ಮ, ದಾದಾಪೀರ್, ಅಲಮ್ಮಿ, ಜಾಫರ್ ಸಾಬ್, ಕಲೀಂ ಷರೀಷ್, ನೂರ್ ಜಾನ್, ಸಿದ್ದಿಕ್, ನಬಿ ಸೇರಿದಂತೆ ವಾರ್ಡಿನ ಹಲವು ನಿವಾಸಿಗಳು ಉಪಸ್ಥಿತರಿದ್ದರು.

4 hrs ago
user_Huliyarkiran
Huliyarkiran
ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
4 hrs ago
36fbf59f-8ccf-4e9d-8b5b-e026fedadf82

ತುಮಕೂರು ಜಿಲ್ಲೆಯ ಹುಳಿಯಾರಿನ ಬಾಲಾಜಿ ಥಿಯೇಟರ್ ಹಿಂಭಾಗದ ಇಂದಿರಾ ನಗರದ 4 ನೇ ವಾರ್ಡಿನಲ್ಲಿ ತೀವ್ರ ಚರ್ಚೆಗೆ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ರಸ್ತೆ ಒತ್ತುವರಿ ಸಮಸ್ಯೆ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿದಿದೆ. ಇಲ್ಲಿನ ಅಲ್ಪಸಂಖ್ಯಾತರ ಇಲಾಖೆಯಿಂದ ಅಜಗರ್ ಅವರ ಮನೆಯಿಂದ ಅಲೀಂಜಾನ್ ರವರ ಮನೆಯವರೆಗೆ ಹೊಸದಾಗಿ ರಸ್ತೆ ನಿರ್ಮಾಣ ಕಾಮಗಾರಿ ಮಂಜೂರಾಗಿತ್ತು. ಆದರೆ, ಸ್ಥಳೀಯ ನಿವಾಸಿಯೊಬ್ಬರು ತಮಗೆ ಸೇರಿದ ಸೈಟ್ ನಂ. 127 ರ ನಿಗದಿತ ಅಳತೆಗಿಂತ ಹೆಚ್ಚಾಗಿ ರಸ್ತೆಯ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ಮತ್ತು ಮೆಟ್ಟಿಲು ನಿರ್ಮಿಸಿದ್ದರಿಂದ ಕಳೆದ 5-6 ತಿಂಗಳುಗಳಿಂದ ರಸ್ತೆ ಕಾಮಗಾರಿ ಮಾಡಲು ಸಾಧ್ಯವಾಗಿರಲಿಲ್ಲ. ಇದೇ ಕಾರಣಕ್ಕೆ ಈ ಹಿಂದೆ ಸುಮಾರು 3 ರಿಂದ 4 ಬಾರಿ ರಸ್ತೆ ಕಾಮಗಾರಿ ಸ್ಥಳಾಂತರಗೊಂಡು ಸಾರ್ವಜನಿಕರು, ವೃದ್ಧರು ಹಾಗೂ ರೋಗಿಗಳು ಓಡಾಡಲು ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಒತ್ತುವರಿ ತೆರವುಗೊಳಿಸಲು ಇತರ ಇಬ್ಬರು ನಿವಾಸಿಗಳು ಒಪ್ಪಿದ್ದರೂ, ಪ್ರಮುಖವಾಗಿ ಒತ್ತುವರಿ ಮಾಡಿಕೊಂಡಿದ್ದ ಒಬ್ಬರು ಮಾತ್ರ ಎಲ್ಲರ ಮನೆಯನ್ನು ನಕ್ಷೆಯಂತೆ ಅಳತೆ ಮಾಡಿಸುವಂತೆ ಹಠ ಹಿಡಿದಿದ್ದರು. ಇದರಿಂದ ಆಕ್ರೋಶಗೊಂಡ ವಾರ್ಡಿನ ಸಾರ್ವಜನಿಕರು ರಸ್ತೆಯಲ್ಲೇ ಜಮಾಯಿಸಿ ತೀವ್ರ ಪ್ರತಿಭಟನೆ ನಡೆಸಿ, ರಸ್ತೆ ಸಂಪರ್ಕ ಕಲ್ಪಿಸಿಕೊಡುವಂತೆ ಪಟ್ಟು ಹಿಡಿದರು. ಪ್ರತಿಭಟನೆಯ ತೀವ್ರತೆಯನ್ನು ಅರಿತ ಹುಳಿಯಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಇಂಜಿನಿಯರ್ ಮಂಜುನಾಥ್, ಮಾಜಿ ಕೌನ್ಸಿಲರ್ ರಾಘವೇಂದ್ರ ಹಾಗೂ ಹಾಲಿ ಕೌನ್ಸಿಲರ್ ಹೇಮಂತ್ ಕುಮಾರ್ ತಕ್ಷಣವೇ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿದರು. ಅಧಿಕಾರಿಗಳು ನಕ್ಷೆಯ ಪ್ರಕಾರ ಮನೆ ಹಾಗೂ ರಸ್ತೆಯ ಜಾಗವನ್ನು ಅಳತೆ ಮಾಡಿಸಿ, ಒತ್ತುವರಿಯಾಗಿರುವ ಭಾಗವನ್ನು ಮಾರ್ಕ್ ಮಾಡಿಸಿ ತಕ್ಷಣವೇ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು ಮತ್ತು ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಅಧಿಕಾರಿಗಳ ಎಚ್ಚರಿಕೆ ಹಾಗೂ ವಾದ-ವಿವಾದಗಳ ನಂತರ ಒತ್ತುವರಿ ಮಾಡಿಕೊಂಡಿದ್ದ ನಿವಾಸಿಯು ಪರಿಸ್ಥಿತಿ ಅರಿತು, ತಾವೇ ಸ್ವತಃ ಒತ್ತುವರಿ ತೆರವುಗೊಳಿಸಲು 5 ದಿನಗಳ ಕಾಲಾವಕಾಶ ಕೋರಿದರು. ಅದಕ್ಕೆ ಅಧಿಕಾರಿಗಳು ಸಮ್ಮತಿಸಿ ಗಡುವು ನೀಡಿದ್ದು, ಇದರೊಂದಿಗೆ ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಾದ ಸಾಧಿಕ್ ಸಾಬ್, ಮಂಜುನಾಥ್, ಜಾನಕಮ್ಮ, ಕೆಂಚಪ್ಪ, ವಿಶಾಲಾಕ್ಷಮ್ಮ, ದಾದಾಪೀರ್, ಅಲಮ್ಮಿ, ಜಾಫರ್ ಸಾಬ್, ಕಲೀಂ ಷರೀಷ್, ನೂರ್ ಜಾನ್, ಸಿದ್ದಿಕ್, ನಬಿ ಸೇರಿದಂತೆ ವಾರ್ಡಿನ ಹಲವು ನಿವಾಸಿಗಳು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಮುತ್ತುಗದಹಳ್ಳಿ ಸರ್ವೆ ನಂಬರ್ 31ರಲ್ಲಿರುವ ಬುಕ್ಕಾಪಟ್ಟಣ ಅರಣ್ಯ ವಲಯದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ಈ ತೆರವು ಪ್ರಕ್ರಿಯೆಯು ರೈತನೊಬ್ಬನಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ತಮ್ಮ ಬೆಳೆ ಕಟಾವಿಗೆ ಬರಲು ಕೇವಲ ಮೂರು ತಿಂಗಳು ಬಾಕಿ ಇರುವಾಗ ಅಧಿಕಾರಿಗಳು ತೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ತಾವು ಇಷ್ಟು ವರ್ಷಗಳ ಕಾಲ ಕಷ್ಟಪಟ್ಟು ಬೆಳೆಸಿದ ಫಸಲನ್ನು ಕಟಾವು ಮಾಡಲು ಅವಕಾಶ ನೀಡುವಂತೆ ರೈತರು ಅಧಿಕಾರಿಗಳ ಮುಂದೆ ಕೈಮುಗಿದು ಕಾಡಿ ಬೇಡಿಕೊಂಡರೂ, ಅಧಿಕಾರಿಗಳು ತಮ್ಮ ಪಟ್ಟು ಬಿಡದೆ ಜಮೀನನ್ನು ತೆರವುಗೊಳಿಸಿದ್ದಾರೆ. ಅಧಿಕಾರಿಗಳು ಮಾಡಿದ ತಪ್ಪಿಗೆ ರೈತ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    1
    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಮುತ್ತುಗದಹಳ್ಳಿ ಸರ್ವೆ ನಂಬರ್ 31ರಲ್ಲಿರುವ ಬುಕ್ಕಾಪಟ್ಟಣ ಅರಣ್ಯ ವಲಯದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ಈ ತೆರವು ಪ್ರಕ್ರಿಯೆಯು ರೈತನೊಬ್ಬನಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ.

ತಮ್ಮ ಬೆಳೆ ಕಟಾವಿಗೆ ಬರಲು ಕೇವಲ ಮೂರು ತಿಂಗಳು ಬಾಕಿ ಇರುವಾಗ ಅಧಿಕಾರಿಗಳು ತೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ತಾವು ಇಷ್ಟು ವರ್ಷಗಳ ಕಾಲ ಕಷ್ಟಪಟ್ಟು ಬೆಳೆಸಿದ ಫಸಲನ್ನು ಕಟಾವು ಮಾಡಲು ಅವಕಾಶ ನೀಡುವಂತೆ ರೈತರು ಅಧಿಕಾರಿಗಳ ಮುಂದೆ ಕೈಮುಗಿದು ಕಾಡಿ ಬೇಡಿಕೊಂಡರೂ, ಅಧಿಕಾರಿಗಳು ತಮ್ಮ ಪಟ್ಟು ಬಿಡದೆ ಜಮೀನನ್ನು ತೆರವುಗೊಳಿಸಿದ್ದಾರೆ. ಅಧಿಕಾರಿಗಳು ಮಾಡಿದ ತಪ್ಪಿಗೆ ರೈತ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    21 hrs ago
  • ತುರುವೇಕೆರೆ ಪಟ್ಟಣದ ತಾಲೂಕು ಕಚೇರಿಯ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ಹಲವು ದಿನಗಳಿಂದ ಅನಿಶ್ಚಿತವಾಗಿ ಬಾಗಿಲು ಮುಚ್ಚುತ್ತಿದ್ದು, ಇದರಿಂದ ಬಡ ಕೂಲಿ ಕಾರ್ಮಿಕರು, ಆಶಕ್ತರು, ವಯೋವೃದ್ಧರು ಮತ್ತು ಬೀದಿ ವ್ಯಾಪಾರಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗದಿಂದ ಹಸಿವು ನೀಗಿಸಿಕೊಳ್ಳಲು ಬರುವವರಿಗೆ ಗೇಟಿಗೆ ಬೀಗ ಹಾಕಿರುವುದು ನಿತ್ಯದ ಗೋಳಾಗಿದೆ. ಯಾವುದೇ ನಾಮಫಲಕವಿಲ್ಲದ ಈ ಕ್ಯಾಂಟೀನ್ ಮುಂದೆ ಬರುವ ಜನರು, ಗೇಟ್ ಬಂದ್ ಆಗಿರುವುದನ್ನು ಕಂಡು ಹತಾಶರಾಗಿ ಹಿಂತಿರುಗುತ್ತಿದ್ದಾರೆ. ಕ್ಯಾಂಟೀನ್ ಸಿಬ್ಬಂದಿಯನ್ನು ವಿಚಾರಿಸಿದಾಗ ಅವರು ಉಡಾಫೆಯ ಉತ್ತರ ನೀಡುತ್ತಿದ್ದು, ನಾನಾ ನೆಪಗಳನ್ನು ಒಡ್ಡಿ ಆಹಾರ ತಯಾರಿಸದೇ ಸಾರ್ವಜನಿಕರನ್ನು ಕಣ್ಣುಮುಚ್ಚಾಲೆ ಆಟವಾಡಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಸಿದು ಬರುವ ಜನರು ಬಾಗಿಲು ತೆಗೆಯುವಂತೆ ಅಂಗಲಾಚಿದರೂ ಅಧಿಕಾರಿಗಳಿಗೆ ಆ ಆರ್ತನಾದ ಕೇಳಿಸುತ್ತಿಲ್ಲ. ನಿರ್ವಹಣೆಗಾರರ ನಿರ್ಲಕ್ಷ್ಯ ಮತ್ತು ಮನಸೋ ಇಚ್ಛೆಯ ವರ್ತನೆಯಿಂದಾಗಿ ಸರ್ಕಾರ ಹಾಗೂ ವ್ಯವಸ್ಥಾಪಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಮತ್ತೆ ಎಂದಿಗೂ ಕಾರ್ಯನಿರ್ವಹಿಸುತ್ತದೆ ಮತ್ತು ಈ ಸಮಸ್ಯೆಗಳಿಗೆ ಯಾವಾಗ ಶಾಶ್ವತ ಪರಿಹಾರ ಸಿಗುತ್ತದೆ ಎಂಬುದೇ ಈಗ ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
    2
    ತುರುವೇಕೆರೆ ಪಟ್ಟಣದ ತಾಲೂಕು ಕಚೇರಿಯ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ಹಲವು ದಿನಗಳಿಂದ ಅನಿಶ್ಚಿತವಾಗಿ ಬಾಗಿಲು ಮುಚ್ಚುತ್ತಿದ್ದು, ಇದರಿಂದ ಬಡ ಕೂಲಿ ಕಾರ್ಮಿಕರು, ಆಶಕ್ತರು, ವಯೋವೃದ್ಧರು ಮತ್ತು ಬೀದಿ ವ್ಯಾಪಾರಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗದಿಂದ ಹಸಿವು ನೀಗಿಸಿಕೊಳ್ಳಲು ಬರುವವರಿಗೆ ಗೇಟಿಗೆ ಬೀಗ ಹಾಕಿರುವುದು ನಿತ್ಯದ ಗೋಳಾಗಿದೆ. ಯಾವುದೇ ನಾಮಫಲಕವಿಲ್ಲದ ಈ ಕ್ಯಾಂಟೀನ್ ಮುಂದೆ ಬರುವ ಜನರು, ಗೇಟ್ ಬಂದ್ ಆಗಿರುವುದನ್ನು ಕಂಡು ಹತಾಶರಾಗಿ ಹಿಂತಿರುಗುತ್ತಿದ್ದಾರೆ.

ಕ್ಯಾಂಟೀನ್ ಸಿಬ್ಬಂದಿಯನ್ನು ವಿಚಾರಿಸಿದಾಗ ಅವರು ಉಡಾಫೆಯ ಉತ್ತರ ನೀಡುತ್ತಿದ್ದು, ನಾನಾ ನೆಪಗಳನ್ನು ಒಡ್ಡಿ ಆಹಾರ ತಯಾರಿಸದೇ ಸಾರ್ವಜನಿಕರನ್ನು ಕಣ್ಣುಮುಚ್ಚಾಲೆ ಆಟವಾಡಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಸಿದು ಬರುವ ಜನರು ಬಾಗಿಲು ತೆಗೆಯುವಂತೆ ಅಂಗಲಾಚಿದರೂ ಅಧಿಕಾರಿಗಳಿಗೆ ಆ ಆರ್ತನಾದ ಕೇಳಿಸುತ್ತಿಲ್ಲ. ನಿರ್ವಹಣೆಗಾರರ ನಿರ್ಲಕ್ಷ್ಯ ಮತ್ತು ಮನಸೋ ಇಚ್ಛೆಯ ವರ್ತನೆಯಿಂದಾಗಿ ಸರ್ಕಾರ ಹಾಗೂ ವ್ಯವಸ್ಥಾಪಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಮತ್ತೆ ಎಂದಿಗೂ ಕಾರ್ಯನಿರ್ವಹಿಸುತ್ತದೆ ಮತ್ತು ಈ ಸಮಸ್ಯೆಗಳಿಗೆ ಯಾವಾಗ ಶಾಶ್ವತ ಪರಿಹಾರ ಸಿಗುತ್ತದೆ ಎಂಬುದೇ ಈಗ ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    7 hrs ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ.

ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    47 min ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿದರು. ಡಿ. ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ 24 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ, ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಂಕೇತಿಕವಾಗಿ ಒಬ್ಬ ಫಲಾನುಭವಿಗೆ 3 ಲಕ್ಷ ರೂಪಾಯಿ ಸಬ್ಸಿಡಿಯುಳ್ಳ 13 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ ಅವರು, ಬದುಕಿನ ಭದ್ರತೆಗಾಗಿ ಸಾರ್ವಜನಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಓದಿದ ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ತಿಳಿಸಿದ ಅವರು, ಪ್ರತಿಯೊಬ್ಬರೂ ತಮ್ಮದೇ ಆದ ಕೌಶಲ್ಯದಿಂದ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ಜಾಣ್ಮೆಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿದರು. ಡಿ. ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ 24 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ, ಕರ್ನಾಟಕ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಂಕೇತಿಕವಾಗಿ ಒಬ್ಬ ಫಲಾನುಭವಿಗೆ 3 ಲಕ್ಷ ರೂಪಾಯಿ ಸಬ್ಸಿಡಿಯುಳ್ಳ 13 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ ಅವರು, ಬದುಕಿನ ಭದ್ರತೆಗಾಗಿ ಸಾರ್ವಜನಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಓದಿದ ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ತಿಳಿಸಿದ ಅವರು, ಪ್ರತಿಯೊಬ್ಬರೂ ತಮ್ಮದೇ ಆದ ಕೌಶಲ್ಯದಿಂದ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ಜಾಣ್ಮೆಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲದಲ್ಲಿರುವ ಶ್ರೀ ಬಸವ ಹರಳಯ್ಯ ಗುರುಪೀಠದ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ, ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮತ್ತು ಅವರ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ಹೆಚ್. ಆಂಜನೇಯ ಅವರು, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಉಪ ವಿಭಾಗಾಧಿಕಾರಿ, ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. ಜಾಗದ ವಿವಾದದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ರಾತ್ರಿಯ ವೇಳೆ ಐಮಂಗಲದ ಮಠಕ್ಕೆ ನುಗ್ಗಿ ಸ್ವಾಮೀಜಿ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾಗಲೂ ಸಹ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.
    1
    ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐಮಂಗಲದಲ್ಲಿರುವ ಶ್ರೀ ಬಸವ ಹರಳಯ್ಯ ಗುರುಪೀಠದ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ, ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮತ್ತು ಅವರ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ಹೆಚ್. ಆಂಜನೇಯ ಅವರು, ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಉಪ ವಿಭಾಗಾಧಿಕಾರಿ, ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಜಾಗದ ವಿವಾದದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ರಾತ್ರಿಯ ವೇಳೆ ಐಮಂಗಲದ ಮಠಕ್ಕೆ ನುಗ್ಗಿ ಸ್ವಾಮೀಜಿ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೇ ಅಲ್ಲದೆ, ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾಗಲೂ ಸಹ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.
    user_Kumara Swamy
    Kumara Swamy
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.
    1
    ಮಂಡ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಷಣ್ಮುಖೇ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಾಗಣ್ಣಗೌಡ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗಿದೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    5 hrs ago
  • ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕಿಯೊಬ್ಬಳು ತಾಯಿಯಾದ ಅತ್ಯಂತ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಈ ಆಘಾತಕಾರಿ ಪ್ರಕರಣವು ಇಡೀ ಹುಬ್ಬಳ್ಳಿಯನ್ನು ತಲ್ಲಣಗೊಳಿಸುವಂತೆ ಮಾಡಿದ್ದು, ಜನರನ್ನು ಬೆಚ್ಚಿಬೀಳಿಸಿದೆ.
    1
    ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕಿಯೊಬ್ಬಳು ತಾಯಿಯಾದ ಅತ್ಯಂತ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಈ ಆಘಾತಕಾರಿ ಪ್ರಕರಣವು ಇಡೀ ಹುಬ್ಬಳ್ಳಿಯನ್ನು ತಲ್ಲಣಗೊಳಿಸುವಂತೆ ಮಾಡಿದ್ದು, ಜನರನ್ನು ಬೆಚ್ಚಿಬೀಳಿಸಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 min ago
  • ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವುದಕ್ಕಿಂತ ಅಲ್ಲಿ ನೀಡಲಾಗುವ ಶಿಕ್ಷಣದ ಗುಣಮಟ್ಟ ಮತ್ತು ಸಂಸ್ಥೆಯ ಬೆಳವಣಿಗೆಯು ಅತ್ಯಂತ ಮುಖ್ಯ ಎಂದು ನಿವೃತ್ತ ಪ್ರಾಚಾರ್ಯ ಕೃಷ್ಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಹುಳಿಯಾರಿನ ಕನಕದಾಸ ವಿದ್ಯಾ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಈ ವಿಷಯವನ್ನು ತಿಳಿಸಿದರು. ಸಂಸ್ಥೆಯ ಆರಂಭಿಕ ದಿನಗಳನ್ನು ನೆನಪಿಸಿಕೊಂಡ ಕೃಷ್ಣಯ್ಯ ಅವರು, ಕೇವಲ 14 ರಿಂದ 16 ವಿದ್ಯಾರ್ಥಿಗಳಿಂದ ಪ್ರಾರಂಭವಾದ ಈ ಸಂಸ್ಥೆ ಇಂದು 225ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮಟ್ಟಕ್ಕೆ ಬೆಳೆದಿರುವುದು ಸಂತಸದ ವಿಷಯವಾಗಿದೆ ಎಂದರು. ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನವರೆಗೆ ಸಂಸ್ಥೆ ವಿಸ್ತರಣೆಯಾಗಲು ಎಲ್ಲರ ಸಹಕಾರ ಕಾರಣ ಎಂದು ಅವರು ಸ್ಮರಿಸಿದರು. ಇಂದಿನ ದಿನಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ವಿದ್ಯಾರ್ಥಿಗಳು ತಮ್ಮ ಹಳೆಯ ವಿದ್ಯಾಸಂಸ್ಥೆಯನ್ನು ನೆನಪಿಸಿಕೊಂಡು ಪ್ರತಿಭಾ ಪುರಸ್ಕಾರದಂತಹ ಸತ್ಕಾರ್ಯಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಅವರು ಕೊಂಡಾಡಿದರು. ಭವಿಷ್ಯದಲ್ಲಿ ಸಂಸ್ಥೆಯ ಮತ್ತಷ್ಟು ಅಭಿವೃದ್ಧಿಗಾಗಿ ಎಲ್ಲರೂ ಒಗ್ಗೂಡಿ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು.
    1
    ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವುದಕ್ಕಿಂತ ಅಲ್ಲಿ ನೀಡಲಾಗುವ ಶಿಕ್ಷಣದ ಗುಣಮಟ್ಟ ಮತ್ತು ಸಂಸ್ಥೆಯ ಬೆಳವಣಿಗೆಯು ಅತ್ಯಂತ ಮುಖ್ಯ ಎಂದು ನಿವೃತ್ತ ಪ್ರಾಚಾರ್ಯ ಕೃಷ್ಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಹುಳಿಯಾರಿನ ಕನಕದಾಸ ವಿದ್ಯಾ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಈ ವಿಷಯವನ್ನು ತಿಳಿಸಿದರು.

ಸಂಸ್ಥೆಯ ಆರಂಭಿಕ ದಿನಗಳನ್ನು ನೆನಪಿಸಿಕೊಂಡ ಕೃಷ್ಣಯ್ಯ ಅವರು, ಕೇವಲ 14 ರಿಂದ 16 ವಿದ್ಯಾರ್ಥಿಗಳಿಂದ ಪ್ರಾರಂಭವಾದ ಈ ಸಂಸ್ಥೆ ಇಂದು 225ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮಟ್ಟಕ್ಕೆ ಬೆಳೆದಿರುವುದು ಸಂತಸದ ವಿಷಯವಾಗಿದೆ ಎಂದರು. ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನವರೆಗೆ ಸಂಸ್ಥೆ ವಿಸ್ತರಣೆಯಾಗಲು ಎಲ್ಲರ ಸಹಕಾರ ಕಾರಣ ಎಂದು ಅವರು ಸ್ಮರಿಸಿದರು. ಇಂದಿನ ದಿನಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿಗಳು ತಮ್ಮ ಹಳೆಯ ವಿದ್ಯಾಸಂಸ್ಥೆಯನ್ನು ನೆನಪಿಸಿಕೊಂಡು ಪ್ರತಿಭಾ ಪುರಸ್ಕಾರದಂತಹ ಸತ್ಕಾರ್ಯಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಅವರು ಕೊಂಡಾಡಿದರು. ಭವಿಷ್ಯದಲ್ಲಿ ಸಂಸ್ಥೆಯ ಮತ್ತಷ್ಟು ಅಭಿವೃದ್ಧಿಗಾಗಿ ಎಲ್ಲರೂ ಒಗ್ಗೂಡಿ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.