logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಾವೇರಿ ಜಿಲ್ಲೆ ಹಾನಗಲ್ಲ

13 hrs ago
user_Mayur TV   Hangal    YouTube c
Mayur TV Hangal YouTube c
Psychologist ಹಾನಗಲ್, ಹಾವೇರಿ, ಕರ್ನಾಟಕ•
13 hrs ago

ಹಾವೇರಿ ಜಿಲ್ಲೆ ಹಾನಗಲ್ಲ

More news from ಕರ್ನಾಟಕ and nearby areas
  • ಕೊಪ್ಪಳ: ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಅಂದಾಜು 2.80 ಲಕ್ಷ ಹುದ್ದೆಗಳ ಭರ್ತಿಗೆ ಆಗ್ರಹಿಸಿ Karnataka Rashtra Samithi Party (KRS) ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳು ಎದುರಿಸುತ್ತಿರುವ ಸಂಕಷ್ಟವನ್ನು ಮನಗಂಡು ಈ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ KRS ಪಕ್ಷ ಘೋಷಿಸಿದೆ. ಈ ವೇಳೆ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಲಾಯಿತು. ಜೊತೆಗೆ ಪ್ರತಿ ವರ್ಷ ಸರ್ಕಾರಿ ನೇಮಕಾತಿಗೆ ಸ್ಪಷ್ಟವಾದ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಿ, ಯಾವ ಇಲಾಖೆಗಳಲ್ಲಿ ಯಾವ ಸಮಯದಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಮನವಿ ಮಾಡಲಾಗಿದೆ. ಇದಲ್ಲದೆ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆ, ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಸೇರಿದಂತೆ ಎಲ್ಲಾ ಹಂತಗಳನ್ನು ನಿಗದಿತ ವೇಳಾಪಟ್ಟಿಯೊಳಗೆ ಪೂರ್ಣಗೊಳಿಸಿ, ಗರಿಷ್ಠ ಆರು ತಿಂಗಳೊಳಗೆ ನೇಮಕಾತಿ ಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಲಾಯಿತು. ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿ ಮತ್ತು ಕಾನೂನುಬದ್ಧವಾಗಿ ನಡೆಯಬೇಕು. ನೇಮಕಾತಿ ಹಗರಣಗಳಿಂದ ಹತಾಶರಾಗಿರುವ ಅಭ್ಯರ್ಥಿಗಳಿಗೆ ಸರ್ಕಾರ ವಿಶ್ವಾಸ ತುಂಬುವ ಕ್ರಮ ಕೈಗೊಳ್ಳಬೇಕು ಎಂದು KRS ಪಕ್ಷದ ಮುಖಂಡರು ಹೇಳಿದರು. ಇದರ ಜೊತೆಗೆ ಪ್ರಸ್ತುತ 700 ರಿಂದ 800 ರೂಪಾಯಿವರೆಗೆ ಇರುವ ಅರ್ಜಿ ಶುಲ್ಕವನ್ನು ಕೇವಲ 100 ರೂಪಾಯಿಗೆ ಇಳಿಸಬೇಕು, ಇದರಿಂದ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಲಾಗಿದೆ. ಅದೇ ವೇಳೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಕೂಡ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿರುದ್ಯೋಗಿ ಯುವಕರ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸಬೇಕು ಎಂದು KRS ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿದೆ.
    1
    ಕೊಪ್ಪಳ: ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಅಂದಾಜು 2.80 ಲಕ್ಷ ಹುದ್ದೆಗಳ ಭರ್ತಿಗೆ ಆಗ್ರಹಿಸಿ Karnataka Rashtra Samithi Party (KRS) ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳು ಎದುರಿಸುತ್ತಿರುವ ಸಂಕಷ್ಟವನ್ನು ಮನಗಂಡು ಈ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ KRS ಪಕ್ಷ ಘೋಷಿಸಿದೆ.
ಈ ವೇಳೆ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಲಾಯಿತು. ಜೊತೆಗೆ ಪ್ರತಿ ವರ್ಷ ಸರ್ಕಾರಿ ನೇಮಕಾತಿಗೆ ಸ್ಪಷ್ಟವಾದ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಿ, ಯಾವ ಇಲಾಖೆಗಳಲ್ಲಿ ಯಾವ ಸಮಯದಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಮನವಿ ಮಾಡಲಾಗಿದೆ.
ಇದಲ್ಲದೆ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆ, ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಸೇರಿದಂತೆ ಎಲ್ಲಾ ಹಂತಗಳನ್ನು ನಿಗದಿತ ವೇಳಾಪಟ್ಟಿಯೊಳಗೆ ಪೂರ್ಣಗೊಳಿಸಿ, ಗರಿಷ್ಠ ಆರು ತಿಂಗಳೊಳಗೆ ನೇಮಕಾತಿ ಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಲಾಯಿತು.
ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿ ಮತ್ತು ಕಾನೂನುಬದ್ಧವಾಗಿ ನಡೆಯಬೇಕು. ನೇಮಕಾತಿ ಹಗರಣಗಳಿಂದ ಹತಾಶರಾಗಿರುವ ಅಭ್ಯರ್ಥಿಗಳಿಗೆ ಸರ್ಕಾರ ವಿಶ್ವಾಸ ತುಂಬುವ ಕ್ರಮ ಕೈಗೊಳ್ಳಬೇಕು ಎಂದು KRS ಪಕ್ಷದ ಮುಖಂಡರು ಹೇಳಿದರು.
ಇದರ ಜೊತೆಗೆ ಪ್ರಸ್ತುತ 700 ರಿಂದ 800 ರೂಪಾಯಿವರೆಗೆ ಇರುವ ಅರ್ಜಿ ಶುಲ್ಕವನ್ನು ಕೇವಲ 100 ರೂಪಾಯಿಗೆ ಇಳಿಸಬೇಕು, ಇದರಿಂದ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಲಾಗಿದೆ.
ಅದೇ ವೇಳೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಕೂಡ ಸರ್ಕಾರಕ್ಕೆ ಆಗ್ರಹಿಸಲಾಗಿದೆ.
ಈ ಕುರಿತು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿರುದ್ಯೋಗಿ ಯುವಕರ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸಬೇಕು ಎಂದು KRS ಪಕ್ಷದ  ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿದೆ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    13 hrs ago
  • ಗುಳೇದಗುಡ್ಡ: ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.
    1
    ಗುಳೇದಗುಡ್ಡ:  ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    14 hrs ago
  • ಮಹಿಳೆಯರ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ನಿಜವಾಗಿ ಮಹಿಳೆಯರಿಗೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
    1
    ಮಹಿಳೆಯರ ಸಬಲೀಕರಣದ ಬಗ್ಗೆ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ನಿಜವಾಗಿ ಮಹಿಳೆಯರಿಗೆ ತಲುಪುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • Post by ಗೋಪನಹಳ್ಳಿಶಿವಣ್ಣ
    1
    Post by ಗೋಪನಹಳ್ಳಿಶಿವಣ್ಣ
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • Post by Raju Bukitagar
    1
    Post by Raju  Bukitagar
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    15 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    12 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 day ago
  • ಗುಳೇದಗುಡ್ಡ: ನಮ್ಮ ಮುಂದಿನ ಪೀಳಿಗೆಗೆ ಮತಾಂತರ, ಭಯೋತ್ಪಾದನೆ, ಆಂತರಿಕ ಕಚ್ಛಾಟಗಳಿಂದ ಮುಕ್ತಗೊಳಿಸಿ ಸಶಕ್ತ ಸದೃಢ ಭಾರತವನ್ನು ಕಟ್ಟಲು ಹಿಂದೂ ಸಮ್ಮೇಳನದ ಉದ್ದೇಶವಾಗಿದ್ದು, ಈ ಹಿನ್ನಲೆಯಲ್ಲಿ ಪಟ್ಟಣದ ಹಿಂದೂ ಸಮ್ಮೇಳನ ಸಂಚಾಲನ ಸಮಿತಿ ವತಿಯಿಂದ ಮಾ.15ರಂದು ಬೃಹತ್ ಶೋಭಾಯಾತ್ರೆ ಹಾಗೂ ಹಿಂದೂ ಸಮ್ಮೇಳನ ಪಟ್ಟಣದ ಭಂಡಾರಿ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಮ್ಮೇಳನದ ಸಂಚಲನಾ ಸಮಿತಿ ಅಧ್ಯಕ್ಷ ಅಶೋಕ ಹೆಗಡಿ ಹೇಳಿದರು. ಅವರು ಗುರುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ದೇಶಾದ್ಯಂತ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದ್ದು, ಪಟ್ಟಣದ ಎಲ್ಲ ಸಮಾಜಭಾಂದವರು ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಿ, ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಹಿಂದೂ ಮುಖಂಡ ವಿಠ್ಠಲ ಪತ್ತಾರ ಮಾತನಾಡಿ, ಹಿಂದೂ ಸಮ್ಮೇಳನದ ಅಂಗವಾಗಿ ಮಾ. 15ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಾದಾಮಿ ನಾಕಾ ಹತ್ತಿರದ ಶ್ರೀ ಅಕ್ಕಲಕೋಟಿ ಚಿಕ್ಕರೇವಣಸಿದ್ಧೇಶ್ವರ ಮಠದಿಂದ ಬೃಹತ್ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ. ಬೃಹತ್ ಶೋಭಾಯಾತ್ರೆಯಲ್ಲಿ ಶೋಭಾಯಾತ್ರೆಯಲ್ಲಿ ಕುಂಭಹೊತ್ತ ಮಹಿಳೆಯರು, ಗೊಂಬೆಗಳು, ಕರಡಿಮಜಲು, ಡೊಳ್ಳು ಕುಣಿತ, ಹಲಗಿ ಮಜಲು ಸೇರಿದಂತೆ ವಿವಿಧ ವಾಧ್ಯಮೇಳಗಳು ಭಾಗವಹಿಸಲಿವೆ. ಸಂಜೆ 6 ಗಂಟೆಗೆ ಭಂಡಾರಿ ಕಾಲೇಜನ ಆವರಣದಲ್ಲಿ ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಪಟ್ಟಣದ ವಿವಿಧ ಮಠಾಧೀಶರು ಸಾನಿಧ್ಯ ವಹಿಸುವರು. ಆರ್‌ಎಸ್‌ಎಸ್‌ನ ಬಳ್ಳಾರಿ ಪ್ರಾಂತ ಕಾರ್ಯಕಾರಣಿ ಸದಸ್ಯ ಗೋಪಿ ಜಿ. ಅವರು ಮುಖ್ಯ ವಕ್ತಾರರಾಗಿ ಪಾಲ್ಗೊಳ್ಳಲಿದ್ದಾರೆ. ಪಟ್ಟಣದ ಎಲ್ಲಾ ಸಮಾಜ, ಸಂಘಸಂಸ್ಥೆಗಳಿಗೆ ಭೇಟಿ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಲಾಗಿದ್ದು, ಸಮಾರು ಹತ್ತುಸಾವಿರ ಜನರು ಹಿಂದೂ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಪತ್ತಕುಮಾರ್ ರಾಠಿ, ಅಮಾತೆಪ್ಪ ಕೊಪ್ಪಳ, ಪಿ.ಎನ್. ಪವಾರ, ಸಂಜು ಕಾರಕೂನ, ಪ್ರಭು ತಟ್ಟಿಮಠ, ಭುವನೇಶ ಪೂಜಾರ, ವಿಠ್ಠಲ ಶಿರೂರು, ಶಿವಾನಂದ ಬಾದವಾಡಗಿ, ಆದಪ್ಪ ಕಲಬುರ್ಗಿ, ಮಹೇಶ ಸೂಳೇಭಾವಿ, ಈರಣ್ಣ ಬಂಡಿ, ಶಿವಾನಂದ ಬಡಿಗೇರ ಮತ್ತಿತರರು.
    1
    ಗುಳೇದಗುಡ್ಡ: ನಮ್ಮ ಮುಂದಿನ ಪೀಳಿಗೆಗೆ ಮತಾಂತರ, ಭಯೋತ್ಪಾದನೆ, ಆಂತರಿಕ ಕಚ್ಛಾಟಗಳಿಂದ ಮುಕ್ತಗೊಳಿಸಿ ಸಶಕ್ತ ಸದೃಢ ಭಾರತವನ್ನು ಕಟ್ಟಲು ಹಿಂದೂ ಸಮ್ಮೇಳನದ ಉದ್ದೇಶವಾಗಿದ್ದು, ಈ ಹಿನ್ನಲೆಯಲ್ಲಿ ಪಟ್ಟಣದ ಹಿಂದೂ ಸಮ್ಮೇಳನ ಸಂಚಾಲನ ಸಮಿತಿ ವತಿಯಿಂದ ಮಾ.15ರಂದು ಬೃಹತ್ ಶೋಭಾಯಾತ್ರೆ ಹಾಗೂ ಹಿಂದೂ ಸಮ್ಮೇಳನ ಪಟ್ಟಣದ ಭಂಡಾರಿ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಮ್ಮೇಳನದ ಸಂಚಲನಾ ಸಮಿತಿ ಅಧ್ಯಕ್ಷ ಅಶೋಕ ಹೆಗಡಿ ಹೇಳಿದರು.
ಅವರು ಗುರುವಾರ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ದೇಶಾದ್ಯಂತ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದ್ದು, ಪಟ್ಟಣದ ಎಲ್ಲ ಸಮಾಜಭಾಂದವರು ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಿ, ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಹಿಂದೂ ಮುಖಂಡ ವಿಠ್ಠಲ ಪತ್ತಾರ ಮಾತನಾಡಿ, ಹಿಂದೂ ಸಮ್ಮೇಳನದ ಅಂಗವಾಗಿ ಮಾ. 15ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಾದಾಮಿ ನಾಕಾ ಹತ್ತಿರದ ಶ್ರೀ ಅಕ್ಕಲಕೋಟಿ ಚಿಕ್ಕರೇವಣಸಿದ್ಧೇಶ್ವರ   ಮಠದಿಂದ ಬೃಹತ್ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ. ಬೃಹತ್ ಶೋಭಾಯಾತ್ರೆಯಲ್ಲಿ ಶೋಭಾಯಾತ್ರೆಯಲ್ಲಿ ಕುಂಭಹೊತ್ತ ಮಹಿಳೆಯರು, ಗೊಂಬೆಗಳು, ಕರಡಿಮಜಲು, ಡೊಳ್ಳು ಕುಣಿತ, ಹಲಗಿ ಮಜಲು ಸೇರಿದಂತೆ ವಿವಿಧ ವಾಧ್ಯಮೇಳಗಳು ಭಾಗವಹಿಸಲಿವೆ.
ಸಂಜೆ 6 ಗಂಟೆಗೆ  ಭಂಡಾರಿ ಕಾಲೇಜನ ಆವರಣದಲ್ಲಿ ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಪಟ್ಟಣದ ವಿವಿಧ ಮಠಾಧೀಶರು ಸಾನಿಧ್ಯ ವಹಿಸುವರು. ಆರ್‌ಎಸ್‌ಎಸ್‌ನ ಬಳ್ಳಾರಿ ಪ್ರಾಂತ ಕಾರ್ಯಕಾರಣಿ ಸದಸ್ಯ ಗೋಪಿ ಜಿ. ಅವರು ಮುಖ್ಯ ವಕ್ತಾರರಾಗಿ ಪಾಲ್ಗೊಳ್ಳಲಿದ್ದಾರೆ. ಪಟ್ಟಣದ ಎಲ್ಲಾ ಸಮಾಜ, ಸಂಘಸಂಸ್ಥೆಗಳಿಗೆ ಭೇಟಿ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಲಾಗಿದ್ದು, ಸಮಾರು ಹತ್ತುಸಾವಿರ ಜನರು ಹಿಂದೂ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಪತ್ತಕುಮಾರ್ ರಾಠಿ, ಅಮಾತೆಪ್ಪ ಕೊಪ್ಪಳ, ಪಿ.ಎನ್. ಪವಾರ, ಸಂಜು ಕಾರಕೂನ, ಪ್ರಭು ತಟ್ಟಿಮಠ, ಭುವನೇಶ ಪೂಜಾರ, ವಿಠ್ಠಲ ಶಿರೂರು, ಶಿವಾನಂದ ಬಾದವಾಡಗಿ, ಆದಪ್ಪ ಕಲಬುರ್ಗಿ, ಮಹೇಶ ಸೂಳೇಭಾವಿ, ಈರಣ್ಣ ಬಂಡಿ, ಶಿವಾನಂದ ಬಡಿಗೇರ ಮತ್ತಿತರರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    15 hrs ago
  • ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ‌‌ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
    1
    ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ‌‌ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.