ಡಾಕ್ಟರ್ ಕೆ ಸುಧಾಕರ್ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕ್ರೀಡಾ ಸಚಿವರಾದ ಶ್ರೀ Mansukh Mandaviya ಅವರನ್ನು ಭೇಟಿಯಾಗಿ, ನಂತರ ಮಾತನಾಡಿದ ಅವರು ಖೇಲೋ ಇಂಡಿಯಾ ಯೋಜನೆಯಡಿ ₹37.70 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ಈ ಅನುದಾನದ ಮೂಲಕ ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ. ಪ್ರಸ್ತಾವಿತ ಕ್ರೀಡಾ ಸೌಲಭ್ಯಗಳು: 🏊 ಒಲಿಂಪಿಕ್ ಮಾದರಿಯ, ಎಲ್ಲಾ ಹವಾಮಾನಕ್ಕೂ ಸೂಕ್ತವಾದ ಈಜುಕೊಳ 🏃 400 ಮೀಟರ್ ಸಿಂಥೆಟಿಕ್ ಅಥ್ಲೆಟಿಕ್ಸ್ ಟ್ರ್ಯಾಕ್ ⚽ ನೈಸರ್ಗಿಕ ಹುಲ್ಲಿನ ಫುಟ್ಬಾಲ್ ಮೈದಾನ 🏑 ಸಿಂಥೆಟಿಕ್ ಹಾಕಿ ಮೈದಾನ 🏐 ವಾಲಿಬಾಲ್ ಮತ್ತು ಬಾಸ್ಕೆಟ್ಬಾಲ್ ಕೋರ್ಟ್ಗಳು 🏟️ ಬಹುಉದ್ದೇಶಿತ ಒಳಾಂಗಣ ಕ್ರೀಡಾ ಸಭಾಂಗಣ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಪಾರ ಕ್ರೀಡಾ ಪ್ರತಿಭೆಯಿದೆ. ಯುವಜನರಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹವೂ, ಸಾಧಿಸುವ ಛಲವೂ ಇದೆ. ಸೂಕ್ತ ತರಬೇತಿ ಹಾಗೂ ವಿಶ್ವಮಟ್ಟದ ಮೂಲಸೌಕರ್ಯ ದೊರೆತರೆ, ನಮ್ಮ ಗ್ರಾಮೀಣ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲೂ ಭಾರತದ ಕೀರ್ತಿ ಹೆಚ್ಚಿಸಬಲ್ಲರು. ಪ್ರಧಾನಮಂತ್ರಿ ಶ್ರೀ Narendra Modi ಜಿ ಅವರ ಖೇಲೋ ಇಂಡಿಯಾ ಮೂಲಕ ದೇಶದ ಮೂಲೆಮೂಲೆಗೂ ಕ್ರೀಡೆಯನ್ನು ಕೊಂಡೊಯ್ಯುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ದೊಡ್ಡ ವೇದಿಕೆ ಕಲ್ಪಿಸುವ ದೂರದೃಷ್ಟಿಗೆ ಅನುಗುಣವಾಗಿ, ಈ ಪ್ರಸ್ತಾವನೆಯ ಮೂಲಕ ವಿಶ್ವಮಟ್ಟದ ಕ್ರೀಡಾ ಸೌಲಭ್ಯಗಳನ್ನು ನಮ್ಮ ಪ್ರತಿಭೆಗಳ ಮನೆಬಾಗಿಲಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಇದು ಕೇವಲ ಕ್ರೀಡಾಂಗಣ ನಿರ್ಮಿಸುವ ಯೋಜನೆಯಲ್ಲ. ಚಿಕ್ಕಬಳ್ಳಾಪುರದ ಮುಂದಿನ ಪೀಳಿಗೆಯ ಪ್ರತಿಭೆ, ಶಿಸ್ತು, ಆತ್ಮವಿಶ್ವಾಸ ಮತ್ತು ಕನಸುಗಳಲ್ಲಿ ಮಾಡುತ್ತಿರುವ ಹೂಡಿಕೆ. ಪ್ರಸ್ತಾವನೆಯನ್ನು ಶೀಘ್ರವಾಗಿ ಪರಿಗಣಿಸಿ ಅಗತ್ಯ ಸಹಕಾರ ನೀಡುವಂತೆ ಮಾನ್ಯ ಸಚಿವರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದರು
ಡಾಕ್ಟರ್ ಕೆ ಸುಧಾಕರ್ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕ್ರೀಡಾ ಸಚಿವರಾದ ಶ್ರೀ Mansukh Mandaviya ಅವರನ್ನು ಭೇಟಿಯಾಗಿ, ನಂತರ ಮಾತನಾಡಿದ ಅವರು ಖೇಲೋ ಇಂಡಿಯಾ ಯೋಜನೆಯಡಿ ₹37.70 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ಈ ಅನುದಾನದ ಮೂಲಕ ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ. ಪ್ರಸ್ತಾವಿತ ಕ್ರೀಡಾ ಸೌಲಭ್ಯಗಳು: 🏊 ಒಲಿಂಪಿಕ್ ಮಾದರಿಯ, ಎಲ್ಲಾ ಹವಾಮಾನಕ್ಕೂ ಸೂಕ್ತವಾದ ಈಜುಕೊಳ 🏃 400 ಮೀಟರ್ ಸಿಂಥೆಟಿಕ್ ಅಥ್ಲೆಟಿಕ್ಸ್ ಟ್ರ್ಯಾಕ್ ⚽ ನೈಸರ್ಗಿಕ ಹುಲ್ಲಿನ ಫುಟ್ಬಾಲ್ ಮೈದಾನ 🏑 ಸಿಂಥೆಟಿಕ್ ಹಾಕಿ ಮೈದಾನ 🏐 ವಾಲಿಬಾಲ್ ಮತ್ತು ಬಾಸ್ಕೆಟ್ಬಾಲ್ ಕೋರ್ಟ್ಗಳು 🏟️ ಬಹುಉದ್ದೇಶಿತ ಒಳಾಂಗಣ ಕ್ರೀಡಾ ಸಭಾಂಗಣ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಪಾರ ಕ್ರೀಡಾ ಪ್ರತಿಭೆಯಿದೆ. ಯುವಜನರಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹವೂ, ಸಾಧಿಸುವ ಛಲವೂ
ಇದೆ. ಸೂಕ್ತ ತರಬೇತಿ ಹಾಗೂ ವಿಶ್ವಮಟ್ಟದ ಮೂಲಸೌಕರ್ಯ ದೊರೆತರೆ, ನಮ್ಮ ಗ್ರಾಮೀಣ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲೂ ಭಾರತದ ಕೀರ್ತಿ ಹೆಚ್ಚಿಸಬಲ್ಲರು. ಪ್ರಧಾನಮಂತ್ರಿ ಶ್ರೀ Narendra Modi ಜಿ ಅವರ ಖೇಲೋ ಇಂಡಿಯಾ ಮೂಲಕ ದೇಶದ ಮೂಲೆಮೂಲೆಗೂ ಕ್ರೀಡೆಯನ್ನು ಕೊಂಡೊಯ್ಯುವ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ದೊಡ್ಡ ವೇದಿಕೆ ಕಲ್ಪಿಸುವ ದೂರದೃಷ್ಟಿಗೆ ಅನುಗುಣವಾಗಿ, ಈ ಪ್ರಸ್ತಾವನೆಯ ಮೂಲಕ ವಿಶ್ವಮಟ್ಟದ ಕ್ರೀಡಾ ಸೌಲಭ್ಯಗಳನ್ನು ನಮ್ಮ ಪ್ರತಿಭೆಗಳ ಮನೆಬಾಗಿಲಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಇದು ಕೇವಲ ಕ್ರೀಡಾಂಗಣ ನಿರ್ಮಿಸುವ ಯೋಜನೆಯಲ್ಲ. ಚಿಕ್ಕಬಳ್ಳಾಪುರದ ಮುಂದಿನ ಪೀಳಿಗೆಯ ಪ್ರತಿಭೆ, ಶಿಸ್ತು, ಆತ್ಮವಿಶ್ವಾಸ ಮತ್ತು ಕನಸುಗಳಲ್ಲಿ ಮಾಡುತ್ತಿರುವ ಹೂಡಿಕೆ. ಪ್ರಸ್ತಾವನೆಯನ್ನು ಶೀಘ್ರವಾಗಿ ಪರಿಗಣಿಸಿ ಅಗತ್ಯ ಸಹಕಾರ ನೀಡುವಂತೆ ಮಾನ್ಯ ಸಚಿವರಲ್ಲಿ ಮನವಿ ಮಾಡಿದ್ದೇನೆ ಎಂದು ತಿಳಿಸಿದರು
- ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು1
- ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ. ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರೂ ಆದ ಜೆಕೆ ಕೃಷ್ಣಾರೆಡ್ಡಿ ಯವರು ತಿಳಿಸಿದ್ದಾರೆ. ಚಿಂತಾಮಣಿ ನಗರ ಹೊರವಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಭೆ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಯವರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಅವರು ಮಾತನಾಡಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು ಈ ಹಿನ್ನೆಲೆಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು 2028 ಕ್ಕೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಸಂಕಲ್ಪವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಸೆಪ್ಟೆಂಬರ್ 18 ರಂದು ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಆಗಮಿಸಲಿದ್ದು ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.4
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.1
- ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ!!! *ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ* *ಕೊರಟಗೆರೆ, ಸೆ.16:* ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಕರಕಲ್ಲಘಟ್ಟ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ರಾಮಕ್ಕ (BLO) ಅವರು ಕರ್ತವ್ಯದ ವೇಳೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯ ತೊಂದರೆಗೆ ಒಳಗಾಗಿರುವ ಘಟನೆ ನಡೆದಿದೆ. ಹೊಳವನಹಳ್ಳಿ 1ನೇ ಬ್ಲಾಕ್ ವ್ಯಾಪ್ತಿಯಲ್ಲಿ ಬಿ.ಎಲ್.ಓ ಆಗಿ ಕೆಲಸ ನಿರ್ವಹಿಸುತ್ತಿದ್ದ ರಾಮಕ್ಕ ಅವರು ನಿನ್ನೆ ದಿನಾಂಕ 15-09-2026 ರಂದು ಕೈಬಿಟ್ಟ ಮತದಾರರಿಗೆ ನೋಟಿಸ್ ನೀಡುವ ಕಾರ್ಯದಲ್ಲಿದ್ದರು. ಈ ವೇಳೆ ತಾಲ್ಲೂಕು ನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು ಅವರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ರಾಮಕ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹೊಳವನಹಳ್ಳಿಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇ.ಸಿ.ಜಿ ಪರೀಕ್ಷೆಯಲ್ಲಿ ಹೃದಯದ ತೊಂದರೆ ಇರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಅವರು ಇನ್ನೂ ಕೊರಟಗೆರೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಗೆ ತಾಲ್ಲೂಕು ಅಧಿಕಾರಿಗಳೇ ನೇರ ಹೊಣೆ ಎಂದು ಅಂಗನವಾಡಿ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ರಾಮಕ್ಕ ಅವರಿಗೆ ಏನಾದರೂ ಅನಾಹುತವಾದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದೆ. ಹಾಗೂ ಇನ್ನು ಮುಂದೆ ಯಾವುದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ರೀತಿ ಮಾನಸಿಕ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.4
- ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಗಳು: ಆತಂಕದಲ್ಲಿ ರೈತರು MADHUGIRI ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡ ಮಾಲೂರು ಭೂದೇನಹಳ್ಳಿ ವ್ಯಾಪ್ತಿಯಲ್ಲಿ ನಿತ್ಯ ಚಿರತೆಗಳು ಕಂಡುಬರುತ್ತಿದ್ದು ರೈತರು ಆತಂಕಕೊಳಗಾಗಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಬೋನು ಅಳವಡಿಸಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.1
- ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್1
- ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.2
- ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ1