logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್‌ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

5 hrs ago
user_ರಾಜಶೇಖರ್ GT
ರಾಜಶೇಖರ್ GT
ಕೂಡ್ಲಿಗಿ, ವಿಜಯನಗರ, ಕರ್ನಾಟಕ•
5 hrs ago

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್‌ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

More news from Bengaluru and nearby areas
  • ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ. ರಾಜವಾಳ ಜಾಕ್‌ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.
    1
    ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ.

ರಾಜವಾಳ ಜಾಕ್‌ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.
    user_AsnNews24Kannada
    AsnNews24Kannada
    Local News Reporter Kudligi, Bengaluru•
    4 hrs ago
  • ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್‌ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
    1
    ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್‌ ಘಟಕಕ್ಕೂ ನೀರು ನುಗ್ಗಿದೆ.

ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    5 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ. ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ.

ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    21 hrs ago
  • ತೀರ್ಥಹಳ್ಳಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಪರಿಚಿತ ವ್ಯಕ್ತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದ ವಿದ್ಯಾರ್ಥಿನಿ ಈ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ. ಇಂತಹ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಜನರು ಅತ್ಯಂತ ಜಾಗರೂಕರಾಗಿರಬೇಕಾದ ಮತ್ತು ಎಚ್ಚರಿಕೆ ವಹಿಸಬೇಕಾದ ಅಗತ್ಯವನ್ನು ಎತ್ತಿ ತೋರಿಸುತ್ತವೆ.
    1
    ತೀರ್ಥಹಳ್ಳಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಪರಿಚಿತ ವ್ಯಕ್ತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದ ವಿದ್ಯಾರ್ಥಿನಿ ಈ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ. ಇಂತಹ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಜನರು ಅತ್ಯಂತ ಜಾಗರೂಕರಾಗಿರಬೇಕಾದ ಮತ್ತು ಎಚ್ಚರಿಕೆ ವಹಿಸಬೇಕಾದ ಅಗತ್ಯವನ್ನು ಎತ್ತಿ ತೋರಿಸುತ್ತವೆ.
    user_ತೀರ್ಥಹಳ್ಳಿ ಲೈವ್ (Thirthahalli
    ತೀರ್ಥಹಳ್ಳಿ ಲೈವ್ (Thirthahalli
    Teacher ಕೊಪ್ಪಳ, ಕೊಪ್ಪಳ, ಕರ್ನಾಟಕ•
    11 min ago
  • ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು. ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.
    2
    ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು.

ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.
    user_ಚನ್ನಯ್ಯ ಹಿರೇಮಠ ಕುಕನೂರು
    ಚನ್ನಯ್ಯ ಹಿರೇಮಠ ಕುಕನೂರು
    Koppal, Karnataka•
    16 hrs ago
  • ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಭದ್ರಾ ಮೇಲ್ದಂಡೆ ಯೋಜನೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂವಾದ ಕಾರ್ಯಕ್ರಮಕ್ಕೂ ಮುನ್ನ, ಕಲಾ ಸರಸ್ವತಿ ಗಾನಕೋಗಿಲೆ ಎಸ್ ಜಾನಕಿ ಅವರ ನಿಧನಕ್ಕೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ಅಧಿಕಾರಿಗಳು, ರೈತ, ಕನ್ನಡ ಹಾಗೂ ಕಾರ್ಮಿಕ ಸಂಘಟನೆಗಳು ಮೌನಾಚರಣೆ ನಡೆಸುವ ಮೂಲಕ ತಮ್ಮ ಗೌರವವನ್ನು ಸೂಚಿಸಿದರು.
    1
    ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಭದ್ರಾ ಮೇಲ್ದಂಡೆ ಯೋಜನೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂವಾದ ಕಾರ್ಯಕ್ರಮಕ್ಕೂ ಮುನ್ನ, ಕಲಾ ಸರಸ್ವತಿ ಗಾನಕೋಗಿಲೆ ಎಸ್ ಜಾನಕಿ ಅವರ ನಿಧನಕ್ಕೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ಅಧಿಕಾರಿಗಳು, ರೈತ, ಕನ್ನಡ ಹಾಗೂ ಕಾರ್ಮಿಕ ಸಂಘಟನೆಗಳು ಮೌನಾಚರಣೆ ನಡೆಸುವ ಮೂಲಕ ತಮ್ಮ ಗೌರವವನ್ನು ಸೂಚಿಸಿದರು.
    user_Kumara Swamy
    Kumara Swamy
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    1 hr ago
  • ಮಹಾರಾಷ್ಟ್ರದ ಥಾಣೆಯಲ್ಲಿ ಹಳೆಯ ಮನೆಯೊಂದರ ಭಾಗ ಕುಸಿದು ಬಿದ್ದ ಪರಿಣಾಮ 12 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ. ಥಾಣೆಯ ಬ್ರಹ್ಮಾಂಡ್‌ನ ಆಜಾದ್ ನಗರದಲ್ಲಿರುವ ಮದ್ರಾಸ್ ಚಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3:35 ಕ್ಕೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅಪಘಾತಕ್ಕೀಡಾದ ಈ ನೆಲ ಮಹಡಿ ಮತ್ತು ಮೊದಲ ಮಹಡಿಯ ಕಟ್ಟಡವು ಸುಮಾರು 25 ರಿಂದ 30 ವರ್ಷಗಳಷ್ಟು ಹಳೆಯದಾಗಿದೆ.
    1
    ಮಹಾರಾಷ್ಟ್ರದ ಥಾಣೆಯಲ್ಲಿ ಹಳೆಯ ಮನೆಯೊಂದರ ಭಾಗ ಕುಸಿದು ಬಿದ್ದ ಪರಿಣಾಮ 12 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದು, ಆತನ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ. ಥಾಣೆಯ ಬ್ರಹ್ಮಾಂಡ್‌ನ ಆಜಾದ್ ನಗರದಲ್ಲಿರುವ ಮದ್ರಾಸ್ ಚಾಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3:35 ಕ್ಕೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅಪಘಾತಕ್ಕೀಡಾದ ಈ ನೆಲ ಮಹಡಿ ಮತ್ತು ಮೊದಲ ಮಹಡಿಯ ಕಟ್ಟಡವು ಸುಮಾರು 25 ರಿಂದ 30 ವರ್ಷಗಳಷ್ಟು ಹಳೆಯದಾಗಿದೆ.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.