Shuru
Apke Nagar Ki App…
ಸಂತಾಪ ಮೈಸೂರಿನ ಗಾಂಧಿನಗರದ ನಿವಾಸಿಯಾದ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದ ಎಂ. ಸತೀಶ್ ರವರು (ವಯಸ್ಸು: 79 ವರ್ಷ) ವಯೋಸಹಜ ಆನಾರೋಗ್ಯದಿಂದ ನಿಧನರಾಗಿದ್ದಾರೆ. ಇವರು ಪತ್ನಿ ಸುಂದರಮ್ಮ, ಪುತ್ರರಾದ ಬಿಜೆಪಿ ಮುಖಂಡರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಎಸ್. ಶರತ್ , ಸೊಸೆ ಮಾಜಿ ಮಹಾನಗರಪಾಲಿಕೆ ಸದಸ್ಯರಾದ ಡಾ.ಅಶ್ವಿನಿ ಶರತ್ ಮತ್ತು ಇಬ್ಬರೂ ಪುತ್ರರು, ಮೂವರು ಪುತ್ರಿಯರನ್ನೂ ಅಗಲಿದ್ದಾರೆ.. ಇವರ ಪ್ರಾಥೀವ ಶರೀರವನ್ನೂ ಸುಭಾಷ್ ನಗರದ ಮೂರನೇ ಮಖ್ಯ ರಸ್ತೆಯಲ್ಲಿ ಇರುವ ಮನೆ ನಂಬರ್ : 170 / B ಇಡಲಾಗಿದ್ದು, ಅಂತ್ಯ ಕ್ರಿಯೆಯನ್ನು ದಿನಾಂಕ : 18.02.2026 ರಂದು ಮಧ್ಯಾಹ್ನ 1 ಘಂಟೆಗೆ ಉದಯಗಿರಿಯಲ್ಲಿರುವ ಗಾಂಧಿನಗರದ ಆದಿ ಕರ್ನಾಟಕ ರುದ್ರಭೂಮಿಯಲ್ಲಿ ಮಾಡಲಾಗುವುದೆಂದು ಕುಟುಂಬದವರು ತಿಳಿಸಿದ್ದಾರೆ.
ಹೊಂಗಿರಣ ನ್ಯೂಸ್
ಸಂತಾಪ ಮೈಸೂರಿನ ಗಾಂಧಿನಗರದ ನಿವಾಸಿಯಾದ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದ ಎಂ. ಸತೀಶ್ ರವರು (ವಯಸ್ಸು: 79 ವರ್ಷ) ವಯೋಸಹಜ ಆನಾರೋಗ್ಯದಿಂದ ನಿಧನರಾಗಿದ್ದಾರೆ. ಇವರು ಪತ್ನಿ ಸುಂದರಮ್ಮ, ಪುತ್ರರಾದ ಬಿಜೆಪಿ ಮುಖಂಡರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಎಸ್. ಶರತ್ , ಸೊಸೆ ಮಾಜಿ ಮಹಾನಗರಪಾಲಿಕೆ ಸದಸ್ಯರಾದ ಡಾ.ಅಶ್ವಿನಿ ಶರತ್ ಮತ್ತು ಇಬ್ಬರೂ ಪುತ್ರರು, ಮೂವರು ಪುತ್ರಿಯರನ್ನೂ ಅಗಲಿದ್ದಾರೆ.. ಇವರ ಪ್ರಾಥೀವ ಶರೀರವನ್ನೂ ಸುಭಾಷ್ ನಗರದ ಮೂರನೇ ಮಖ್ಯ ರಸ್ತೆಯಲ್ಲಿ ಇರುವ ಮನೆ ನಂಬರ್ : 170 / B ಇಡಲಾಗಿದ್ದು, ಅಂತ್ಯ ಕ್ರಿಯೆಯನ್ನು ದಿನಾಂಕ : 18.02.2026 ರಂದು ಮಧ್ಯಾಹ್ನ 1 ಘಂಟೆಗೆ ಉದಯಗಿರಿಯಲ್ಲಿರುವ ಗಾಂಧಿನಗರದ ಆದಿ ಕರ್ನಾಟಕ ರುದ್ರಭೂಮಿಯಲ್ಲಿ ಮಾಡಲಾಗುವುದೆಂದು ಕುಟುಂಬದವರು ತಿಳಿಸಿದ್ದಾರೆ.
More news from Mysuru and nearby areas
- ಆಶೀರ್ವಾದ್ ಟ್ರೇಡರ್ಸ್ ಗೋಡನ್ ಮೇಲೆ ಕೃಷಿ ಇಲಾಖೆಯ ಅಧಿಕಾರಿ ಅನಿಲ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ಸುಮಾರು 18 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಯೂರಿಯಾ ವಶ ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ...18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ... ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296 ಮೂಟೆ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಹುಣಸೂರಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಮುಂಭಾಗವಿರುವ ಶೆಡ್ ಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತು ದಾಳಿ ನಡೆಸಿದ್ದಾರೆ.ಸರ್ಕಾರದಿಂದ ಬಿಡುಗಡೆಯಾಗಿ ರೈತರಿಗೆ ಸೇರಬೇಕಿದ್ದ ಗೊಬ್ಬರ ಖದೀಮ ದಂಧೆಕೋರರಿಂದ ವಶಪಡಿಸಿಕೊಂಡಿದ್ದಾರೆ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಮೂರು ಲಾರಿಗಳನ್ನ ವಶಪಡಿಸಿಕೊಳ್ಳಲಾಗಿದೆ.ಖಾಸಗಿ ಕಂಪನಿ ಹೆಸರಿನ ಚೀಲಗಳಿಗೆ ಬದಲಾಯಿಸಿ ಮಾರಾಟ ಮಾಡುವ ದಂಧೆ ಎಂದು ಶಂಕಿಸಲಾಗಿದೆ.ಚೀಲ ಬದಲಿಸಿವಕೇರಳಾ ರಾಜ್ಯಕ್ಕೆ ಸಾಗಿಸುವ ಶಂಕೆ ವ್ಯಕ್ತವಾಗಿದೆ.ಸಹಾಯಕ ಕೃಷಿ ಅಧಿಕಾರಿ ಅನಿಲ್ ಹಾಗೂ ಕೃಷಿ ಅಧಿಕಾರಿ ಜಯಕುಮಾರ್ ರವರು ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಖಾಸಗಿ ಸಂಸ್ಥೆಯ ಬ್ರಾಂಡ್ ಇರುವ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ.ಗೊಬ್ಬರ ಕಾಳಸಂತೆ ರಾಕೆಟ್ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.ರಾಕೆಟ್ ಹಿಂದೆ ಪ್ರಭಾವಿ ಕೈಗಳ ಬೆಂಬಲ ಇರುವ ಶಂಕೆ ಇದೆ.ಇದರ ಹಿಂದಿನ ಜಾಲ ಪತ್ತೆ ಹಚ್ಚಲು ಕೃಷಿ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕಿದೆ.ಬಡ ರೈತರಿಗೆ ಸೇರಬೇಕಾದ ಗೊಬ್ಬರ ಕಾಳಸಂತೆಕೋರರ ಪಾಲಾಗಿರುವ ಬಗ್ಗೆ ತೆನಿಖೆ ನಡೆಸಬೇಕಿದೆ.ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ...2
- ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ? ಎಂತಾ ಕಾಲವಯ್ಯ ?1
- *ಭಾರತ ನಲ್ಲಿ ವೈರಲ್*1
- ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ ದಾಸೋಹಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು. ಪರಿಶೀಲನೆ ವೇಳೆ ದಾಸೋಹ ಭವನದ ಮೇಲೂಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.4
- ಪರಿಣಮಿಪುರದಲ್ಲಿ ಆನೆ ತುಳಿತ ರೈತ ಗುರುಮಲ್ಲಪ್ಪ ಸಾವು ಗ್ರಾಮಸ್ಥರಲ್ಲಿ ಆತಂಕ ಮಳವಳ್ಳಿ ತಾಲೂಕಿನ ಗಡಿ ಭಾಗದ ಪರಿಣಾಮಿ ಪುರದಲ್ಲಿ ಆನೆ ತುಳಿತಕ್ಕೆ ಓರ್ವ ರೈತ ಬಲಿಯಾಗಿರುವ ಘಟನೆ ಮಂಗಳವಾರ ಜರುಗಿದೆ. ಪರಿಣಾಮಿಪುರದ ಅಡುಗೆ ಗುರುಮಲ್ಲಪ್ಪ [65] ಎಂಬ ರೈತನೇ ಆನೆ ತುಳಿತಕ್ಕೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಮಂಗಳವಾರ ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆನೆ ಏಕಾಏಕಿ ದಾಳಿ ಮಾಡಿ ದಾಳಿ ಮಾಡಿದೆ ಇದರಿಂದ ರೈತ ಗುರುಮಲ್ಲಪ್ಪ ಸಾವನಪ್ಪಿದ್ದಾನೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಸ್ಥಳೀಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಆನೆಯ ದಾಳಿಗೆ ಬಲಿಯಾದ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಪರಿಣಾಮಿ ಪುರದ ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಅರಣ್ಯ ಇಲಾಖೆಗೆ ಶಾಸಕರಿಗೆ ಮನವಿ ಮಾಡಿದ್ದಾರೆ1
- ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.1
- ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ . ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿನಿತ್ಯ ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಈ ರಘು ರವರ ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ನಂತರ ಮಾಧ್ಯಮದವರೊಂದಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸಲು ಮನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಗುರಿಯನ್ನು ಹೊಂದಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್ ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್ ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.1
- *ಈ ಅರಿವು ಯುವಕರಲ್ಲಿ ಬಂದರೇ ನಮ್ಮ ಪರಿಸರ ಉಳಿದೀತು* ಈ ದಿನ ದಿನಾಂಕ 17.2. .2026 ರಂದು ಟಿ. ನರಸೀಪುರದ ಫಿನೇಚರ್ ಕಾರ್ಖಾನೆಯ ಒಳಗೆ ಆವರಣದಲ್ಲಿ )ಇರುವ ಮರಗಳು.... ಗಿಡಗಳು... ಪಕ್ಷಿಗಳು... ಮತ್ತು ಜೀವ ಪರಿಸರ ವ್ಯವಸ್ಥೆ ಇದೆ....ಆದರೆ ಈ ಜಾಗದಲ್ಲಿ ಕ್ರೀಡಾಂಗಣ ಮಾಡಿದರೆ ಆಗುವ ದುಷ್ಪರಿಣಾಮಗಳು ಇತ್ಯಾದಿ ತಿಳಿಸಿ ಕೆಎಸ್ಐಸಿ ಆಡಳಿತ ಮಂಡಳಿ ಜಾಗವನ್ನು ಉಳಿಸಿಕೊಳ್ಳಲು ಹಾಗೂ ಕ್ರೀಡಾಂಗಣವನ್ನು ಬೇರೆ ಕಡೆ ಮಾಡಲು ಹೇಳಿ ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಟೀಮ್ ನಿಂದ ಮನವಿ ಪತ್ರ ಕೊಡಲಾಯಿತು... ✊🌳🌳🌳🌳 #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClinic #inTumkur #nearestHomeopathicDoctors #Dr.SadhanaMHomeopathyDoctor #Muniswamygowda #Riya #YOGI #ಚೇತನ #chetha #ChethanaMuniswamygowda3