Shuru
Apke Nagar Ki App…
ಜೂಜಾಟದ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿ 9 ಲಕ್ಷ 22 ಸಾವಿರ ರೂಪಾಯಿಗಳು ವಶ ಪಾತಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ವಸಂತಪುರದಲ್ಲಿ ಜೂಜಾಟದ ಮೇಲೆ ದಾಳಿ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯ. ಪೊಲೀಸರು 9 ಲಕ್ಷ 22 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ. 19 ಜೂಜುಕೋರರ ಬಂಧನ. 15 ಮೊಬೈಲ್ ಫೋನ್ಗಳು ಮತ್ತು 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ.
KRUTHI NEWS KANNADA
ಜೂಜಾಟದ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿ 9 ಲಕ್ಷ 22 ಸಾವಿರ ರೂಪಾಯಿಗಳು ವಶ ಪಾತಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ವಸಂತಪುರದಲ್ಲಿ ಜೂಜಾಟದ ಮೇಲೆ ದಾಳಿ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯ. ಪೊಲೀಸರು 9 ಲಕ್ಷ 22 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ. 19 ಜೂಜುಕೋರರ ಬಂಧನ. 15 ಮೊಬೈಲ್ ಫೋನ್ಗಳು ಮತ್ತು 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ.
More news from ಕರ್ನಾಟಕ and nearby areas
- ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ1
- ಹುಬ್ಬಳ್ಳಿಯಲ್ಲಿ ಈ ಪ್ರಕರಣ ದೊಡ್ಡ ಚರ್ಚೆಗೆ ಕಾರಣ ಆಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಯುವತಿಯೊಬ್ಬಳು ಗಂಭೀರ ದೂರು ದಾಖಲಿಸಿದ್ದಾಳೆ. ಕಾಲೇಜಿನಲ್ಲಿ ಸ್ನೇಹ ಬೆಳೆಸಿ, ಪ್ರೀತಿಯ ನಾಟಕವಾಡಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಮುಫೀಜ್ ಮಿಯಾನವರ ವಿರುದ್ಧ ಬ್ಲ್ಯಾಕ್ಮೇಲ್ ಹಾಗೂ ಅತ್ಯಾಚಾರದ ಆರೋಪ ಕೇಳಿಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.1
- ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. 1
- ವಿವರಗಳು: ಹುಂಜನಾಳು ಗ್ರಾಮ, ಸರ್ವೇ ನಂ. 69/1ರಲ್ಲಿ 3 ಎಕರೆ 25 ಗುಂಟೆ ಜಮೀನು ನಮ್ಮ ಕುಟುಂಬದ ಅಸ್ತಿ, ಪಹಣಿಯಲ್ಲಿ ರಂಗತಾಯಿ ಶಿಬಿ ಮತ್ತು ಶಿಬಿತಾಯಿ ಶಿಬಿ ಜಂಟಿ ಮಾಲಿಕರಾಗಿದ್ದಾರೆ.ನಕಲಿ ಭೂ ಪರಿಹಾರ ಪಡೆದ ಫಲಾನುಭವಿ ಯು ನೀಡಿದ ನಕಲಿ ವಂಶ ವೃಕ್ಷಕ್ಕೆ ಅಧಿಕಾರಿಗಳು ಬೆಂಬಸಿ ಪರಿಹಾರ ನೀಡಿದ್ದಾರೆ. ಆದರೆ (ಕಂದಾಯ ಇಲಾಖೆ ನೀಡಿದ ವಂಶವೃಕ್ಷದಲ್ಲಿ ನಮ್ಮ ಹೆಸರುಗಳು ಇವೆ.ಡಿಜಿಟಲ್ ರೂಪದ ವಂಶ ವೃಕ್ಷ ನೀಡಿದ್ದೇವೆ.) ಇಲಾಖೆ ಅಧಿಕಾರಿಗಳು ನೈಜಿ ಪಲಾನುಭವಿಗಳಾದ ನಮನೆಗೆ ಪರಿಹಾರ ನೀಡಲು ಮುಂದಾದರೆ ಕಾನೂನು ಶಿಕ್ಷೆಗೆ ಒಳಗಾಗುತ್ತೇವೆ ಎನ್ನುವ ಆತಂಕದಿಂದ ನಮ್ಮನ್ನು ದಾರಿ ತಪ್ಪಿಸಲು ಇದೀಗ ಇಲಾಖೆ ಅಧಿಕಾರಿಗಳು ಖುದ್ದು ಬೆಂಬಲಿಸಿದ ನಕಲಿ ಫಲಾನುಭವಿಗೆ ರಾಜಿ ಮಾಡಿಕೊಳ್ಳುವಂತೆ ರೆಜಿಲೆಶನ್ (ನಡಾವಳಿ ಪುಸ್ತಕ) ದಲ್ಲಿ ಸಹಿ ಮಾಡಿಸಿ ರಾಜಿ ಸಂಧಾನಕ್ಕೆ ಒಪ್ಪಿಸಿ ಇದೀಗ ನಕಲಿ ವ್ಯಕ್ತಿ ಯನ್ನು ಬೆಂಬಲಿಸಿ ತಪ್ಪಿಸಿಕೊಂಡು ಓಡಿ ಹೋಗುವಂತೆ ಮಾಡಿದ್ದಾರೆ. ಹಾಗೂ ಅಧಿಕಾರಿಗಳ ತಪ್ಪನ್ನು ಮರೆಮಾಚಿಕೊಳ್ಳಲು ನಕಲಿ ವ್ಯಕ್ತಿಯ ಮೇಲೆ ಮಾತ್ರವೇ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ನಕಲಿ ವ್ಯಕ್ತಿಯು ಪರಿಹಾರದ ಹಣ ದುರುಪಯೋಗಿಸಿಕೊಂಡು ನೈಜ ಫಲನು ಭವಿಗಳಾದ ನಮಗೆ ಹಣ ನೀಡದೆ ತಪ್ಪಿಸಿಕೊಂಡಲ್ಲಿ ಇಲಾಖೆ ಯವರೇ ನೇರ ಹೊಣೆ ಗೆ ಕಾರಣಿಭೂತರಾಗಿರುತ್ತಾರೆ ಈ ಬಗ್ಗೆ ದಿನಾಂಕ 03-04-2026 ರಂದು ವ್ಯಾಪ್ತಿ ಪೊಲೀಸ್ ಠಾಣೆ ಯಲ್ಲಿ ನಕಲಿ ದಾಖಲೆ ಸೃಷ್ಟಿಸಿದ & ಈ ದಾಖಲೆಗೆ ಬೆಂಬಲಿಸಿದ ಸಂಗಟಿತರ ವಿರುದ್ಧ ಶಿಸ್ತು ಕ್ರಮಕ್ಕೆ ದೂರು ಧಾಖಲಿಸಿರುತ್ತೇನೆ. KIADB ಭೂಸ್ವಾಧೀನ ನೋಟಿನ್ನಲ್ಲಿ ಎಕರೆಗೆ ₹40 ಲಕ್ಷ ಪರಿಹಾರ ದ ನೋಟಿಸ್ ನೀಡಿದ್ದು ನೈಜ ಜಂಟಿ ಮಾಲೀಕತ್ವದಾರರದ ನಮಗೆ ನೀಡಿದ ಅಧಿಕಾರಿಗಳು ನಮಗೆ ಮೋಸ ಎಸಾಗಿರುತ್ತಾರೆ. ಆದರೆ ಗೋಪಾಲಯ್ಯ (ಸಂಬಂಧಿ. ಸಂ ಲೇಟ್ ರಂಗಯ್ಯ) ನಕಲಿ ದಾಖಲೆಗಳೊಂದಿಗೆ (ದಿನಾಂಕ 27.11.209) ₹1.45 ಕೋಟಿ ಪರಿಹಾರವನ್ನು 27.11.2025ರಂದು ಐಕೋ ಬ್ಯಾಂಕ್ RTGS ಮೂಲಕ ಪಡೆದಿದ್ದಾರೆ. ನಾವು 18.03.2026ರಂದು KIADB ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ ಇಲಾಖೆಯವರು ಇದನ್ನು ದೃಢಪಡಿಸಿದರು. ಭೂಸ್ವಾಧೀನಾಧಿಕಾರಿಗಳು ಜಂಟಿ ಮಾಲಕರನ್ನು ಪರಿಗಣಿಸದೆ ಒಬ್ಬರಿಗೆ ಮಾತ್ರ ಪಾವತಿ ಮಾಡಿದ್ದಾರೆ ಎಂಬುದನ್ನು ಭೂ ಸ್ವಧೀನಾಧಿಕಾರಿಗಳ ಅರಿವಿಗೆ ತಂದಾಗ, ದಾಖಲೆಗಳನ್ನು ಪರಿಶೀಲಿಸಿ ನೈಜ ಫಲಾನುಭವಿಗಳಾದ ನಾವು ಮೋಸ ಹೋಗಿರುವುದು ಸ್ಪಷ್ಟವಾಗಿ ಕಂಡುಬದಿರುತ್ತದೆ. (25.03.2026), ಅಧಿಕಾರಿಗಳು ಗೋಪಾಲಯ್ಯ ಮತ್ತು ನಮ್ಮನ್ನು ಕರೆಸಿ ಒಳ-ಒಪ್ಪಂದಕ್ಕೆ ಒತ್ತಾಯ ಮಾಡಿದರು. ಯಾವುದೇ ಕ್ರಮ ಜರುಗಿಸಲಿಲ್ಲ. ಇದೀಗ ಅಧಿಕಾರಿಗಳು ಗೋಪಾಲಯ್ಯ ವಿರುದ್ಧ ದೂರು ನೀಡುವುದಾಗಿ ಹೇಳುತ್ತ, ತಮ್ಮ ತಪ್ಪನ್ನು ಮರೆಮಾಚಲು ಮುಂದಾಗಿದ್ದಾರೆ. ಅಧಿಕಾರಿಗಳ ತಪ್ಪುಗಳು (Points): (Karnataka Land Revenue Act ಸೆಕ್ಷನ್ 95 ರ ನಿಯಮದಂತೆ ಜಂಟಿ ಪಹಣಿ/ವಂಶವೃಕ್ಷ ಪರಿಶೀಲಿಸದೆ ನಕಲಿ ದಾಖಲೆಗಳನ್ನು (KIADB Rules, 1969 ರೂಲ್ 6 ಮತ್ತು LARR Act ಸೆಕ್ಷನ್ 11 ನಿಯಮದಂತೆ ದಾಖಲೆ ಸತ್ಯಾಪನ ಕಡ್ಡಾಯ); ಒಪ್ಪಿಕೊಂಡರು.ಪರಿಹಾರ ನೀಡಿ ಇತರ ಜಂಟಿ ಮಾಲೀಕತ್ವದಾರರಿಗೆ ಮೋಸ ಎಸಾಗಿರುವುದು ಏಕ ಮಾತ್ರ ವ್ಯಕ್ತಿಗೆ RTGS ಮಾಡಿರುವುದು ಸ್ಪಷ್ಟ ಉಲ್ಲೇವಾಗಿದೆ.ಭೂಪರಿಹಾರ ಕಾನೂನು ಪ್ರಕಾರ ( (LARR Act ಸೆಕ್ಷನ್ 23)) ಜಂಟಿ ಖಾತೆಗೆ ಪಾವತಿ ಮಾಡದ ಒಬ್ಬರಿಗೆ ಮಾತ್ರ RTGS ಮಾಡಲಾಗಿದೆ. ನಕಲಿ ದಾಖಲೆಗಳನ್ನು ಸಹ್ಯಾಪಿಸದೆ ₹1.45 ಕೋಟಿ ನೀಡಲಾಗಿದೆ (KIADB Act ಸೆಕ್ಷನ್ 29(1) ಪ್ರಕಾರ ಪರಿಹಾರ ನ್ಯಾಯಪರವಾಗಿ ವಿಂಗಡಿಸಬೇಕು). Indian Evidence Act, 1872 - ಸೆಕ್ಷನ್: 61-66 ನಿಯಮದ ವಿರುದ್ಧವಾಗಿ( 3 ತಿಂಗಳ ಕಾಲವಧಿಯವರೆಗೆ ನಕಲಿ ಫಲನುಭವಿಯ ಒಬ್ಬನ ಬಳಿಯೇ ಹಣ ಇರಿಸಲಾಗಿದೆ.) ಮನವಿದಾರ( ಜಂಟಿ ಮಾಲೀಕತ್ವ ದಾರ)/ಫಲನಭವಿ ದೂರು ತಿಳಿಸಿದ ನಂತರ ತನಿಖೆಯ ಬದಲು ಒಳ-ಒಪ್ಪಂದಕ್ಕೆ ಒತ್ತಡ ಹೇರದೇ(KIADB Regulations) ರಲ್ಲಿ ಕಡ್ಡಾಯ ತನಿಖೆಗೆ ನಿರ್ದೇಶಿಸಬೇಕು. ಇಲಾಖೆಯ ಕಾನೂನು ಸಲಹೆಗಾರ/ವಕೀಲರು ಮತ್ತು ವ್ಯವಸ್ಥಾಪಕ ರವರು ದಾಖಲೆಗಳನ್ನು ಪರಿಶೀಲಿಸದೇ ತಪ್ಪುಗಳನ್ನು ಮರೆಮಾಚಲು ಯತ್ನಿಸಲಾಗಿದೆ. ಸದರಿ ಇಲಾಖೆಯ ಕಾನೂನು ಸಲಹೆಗಾರ & ವ್ಯವಸ್ಥಾಪಕರು ಅಂತಿಮ ಅನುಮೋದನೆ ನೀಡಿದ ಸದರಿ ಇಲಾಖೆಯಲ್ಲಿ ಇಂತಹ ಎಲ್ಲ ಜಂಟಿ ಮಾಲೀಕತ್ವದ ಸರ್ವೇ ನಂಬರ್ಗಳಲ್ಲಿ ನಕಲಿ ಪರಿಹಾರಗಳ ತನಿಖೆ ನಡೆಸದಿರುವುದು ಮನವಿ: 1. ಗೋಪಾಲಯ್ಯ, KIADB ಅಧಿಕಾರಿಗಳು, ಮತ್ತು ಭೂಸ್ವಾಧೀನಾಧಿಕಾರಿಗಳ ವಿರುದ್ಧ IPC 420 (ಮೋಸ), 467 (ನಕಲಿ ದಾಖಲೆ), 120B ಅಡಿಯಲ್ಲಿ ಸಂಬಂಧ ರಾಜ್ಯ ಪ್ರಾಧಿಕಾರ ದೂರು ಧಾಖಲಿಸಿ ತನಿಖೆ ನಡೆಸಿ ಎಂದು ಮನವಿ. 2. ನಮಗೆ ಸೇರಿದ ಪಾಲು ಪರಿಹಾರ (ಜಂಟಿ ಜಮೀನಿನ ಪ್ರಮಾಣದಂತೆ) (LARR Act ಸೆಕ್ಷನ್ 26 ನಿಯಮದಂತೆ) ತಕ್ಷಣ ಪಾವತಿ ಮಾಡಿ. 3. ಸದರಿ ತುಮಕೂರು KIADB ಇಲಾಖೆಯಲ್ಲಿ ಇಂತಹ ಎಲ್ಲಾ ಸರ್ವೇ ನಂಬರ್ಗಳ ತನಿಖೆ ನಡೆಸಿ. (KIADB Act ಸೆಕ್ಷನ್ 31). ರಡಿಯಲ್ಲಿ ಕ್ರಮ ಕ್ಕೆ ಮುಂದಾಗಬೇಕಾಗಿ ಮನವಿ. 4. ತಪ್ಪು ಮಾಡಿದ ಅಧಿಕಾರಿಗಳನ್ನು ಶಿಕ್ಷಿಸಿ (/ದಂಡ).ವಿಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಿವುದು.(KIADB Rules ರೂಲ್ 12). ನಿಯಮವನ್ನು ಅನುಸರಿಸುವಂತೆ ಮನವಿ. 5. ನಕಲಿ ದಾಖಲೆ ನೀಡಿದ ಗೋಪಾಲಯ್ಯ, ಹಾಗೂ ನಕಲಿ ದಾಖಲೆ ಗಳನ್ನು ಪರಿಶೀಲಿಸದೇ ಬೆಂಬಲಿಸಿದ KIADB ... 2 IPC 420, 467, 120B + CrPC 154 Indian Evidence Act 73 + Prevention of Corruption Act 13 ಅಡಿಯಲ್ಲಿ ದೂರು ಧಾಖಲಿಸಿ ತನಿಖೆ ನಡೆಸಿ. ನಮಗೆ ಸೇರಿದ ಹಣದಪಾಲುಹಣ ಮುಂಗಡ/ನೇರವಾಗಿ ಪಡೆದ ನಕಲಿ ಫಲನುಭವಿಯ ಬಳಿ 3 ತಿಂಗಳಿಗೂ ಅಧಿಕ ಇರಿಸಿದ್ದು. ನ್ಯಾಯುತ ಬಡ್ಡಿ ಕ ಆತನು ಪಡೆದ ಲಾಭವನ್ನು ನಮ್ಮ ಪಾಲು ಹಣದೊಂದಿಗೆ RTGS ಮೂಲಕ ತಕ್ಷಣ ಪಾವತಿ ಮಾಡಿ." ಎಂದು ಈ ಮೂಲಕ ಮನವಿ ಮಾಡುತ್ತೇನೆ.4
- ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಪ್ರಾರ್ಥನಾ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣಗಣನೆ ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಮಲ್ಲೇಶ್ವರ ಪ್ರಾರ್ಥನ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣೆ ಗಣನೆ ಆರಂಭವಾಗಿದ್ದು ಸಂಪ್ರದಾಯ ಬದ್ಧ ಪೂಜಾ ಕಾರ್ಯಕ್ರಮಗಳು ಬರದಿಂದ ಸಾಗಿವೆ. ಏಪ್ರಿಲ್ 5 ರಂದು ಭಾನುವಾರ ಬೆಳಿಗ್ಗೆ 10:30 ಗಂಟೆಗೆ ಸುತ್ತೂರು ಸಿದ್ದಗಂಗಾ ಆದಿಚುಂಚನಗಿರಿ ಮಠಾಧೀಶರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ರಾಜ್ಯ ಭಾಜಪ ಅಧ್ಯಕ್ಷ ಬಿವೈ ವಿಜಯೇಂದ್ರ ಪ್ರಾರ್ಥನಾ ಮಂದಿರವನ್ನು ದಾಸೋಹ ಭವನವನ್ನು ಲೋಕಾರ್ಪಣೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ವಿ ಸೋಮಣ್ಣ ಶಾಸಕರಾದ ಸಿಎಂ ನರೇಂದ್ರಸ್ವಾಮಿ ಮಾಜಿ ಸಚಿವರು ಮಾಜಿ ಶಾಸಕರು ಮಾಜಿ ವಿಧಾನ ಪರಿಷತ್ ಸದಸ್ಯರು ಉದ್ಯಮಿಗಳು ರಾಜ್ಯದ ಹಲವು ಮಠಗಳ ಹರಗುರು ಚರ ಮೂರ್ತಿಗಳು ಭಾಗವಹಿಸಲಿದ್ದಾರೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸುವ ಸಕಲ ಭಕ್ತರಿಗೂ ಪ್ರಸಾದ ವ್ಯವಸ್ಥೆಗೆ ಶನಿವಾರ ರಾತ್ರಿಯಿಂದಲೇ ಸಿದ್ಧತೆಗಳು ಜರುಗಿವೆ ಸಾವಿರಾರು ಜನರು ಭಾನುವಾರದ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ ಬನ್ನಿ ನಾವು ಹೋಗೋಣ ಹೊಸಹಳ್ಳಿ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಧಾರ್ಮಿಕ ಮಹೋತ್ಸವಕ್ಕೆ ಗುರು ಕೃಪೆಗೆ ಪಾತ್ರರಾಗೋಣ ಶರಣು ಬನ್ನಿ1
- ಹನೂರು: ರಾಮನಗುಡ್ಡೆ ಜಲಾಶಯ ಪೂರ್ಣವಾಗಿ ತುಂಬಿದ ಪರಿಣಾಮ, ಮಣಗಳ್ಳಿ ಸಮೀಪದ ದೊಡ್ಡಹಳ್ಳ ಹಳ್ಳಿ ಹರಿಯುತ್ತಿರುವ ದೃಶ್ಯವು ಸ್ಥಳೀಯ ರೈತರು ಮತ್ತು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಗ್ರಾಮಸ್ಥರು ಶಾಸಕ ಮಂಜುನಾಥ್ ಅವರ ಸಮ್ಮುಖದಲ್ಲಿ ಗಂಗಾಪೂಜೆಯನ್ನು ನೆರವೇರಿಸಿ ಕೃತಜ್ಞತೆ ಸಲ್ಲಿಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಮಂಜುನಾಥ್ ಅವರು, “ಕ್ಷೇತ್ರದ ನೀರಾವರಿ ಯೋಜನೆಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ. ರಾಮನಗುಡ್ಡೆ ಜಲಾಶಯ ತುಂಬಿರುವುದರಿಂದ ರೈತರಿಗೆ ಬಹುಮುಖ್ಯ ನೆರವು ದೊರೆಯಲಿದೆ. ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವುದು ನಮ್ಮ ಮುಖ್ಯ ಗುರಿ” ಎಂದು ಹೇಳಿದರು.2
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- ಹುಬ್ಬಳ್ಳಿಯಲ್ಲಿ ಜಿಮ್ ಟ್ರೇನರ್ ಸಮೀರ್ ಮುಲ್ಲಾ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣವು ಚರ್ಚೆಗೆ ಗ್ರಾಸವಾಗಿದೆ. ಹಲವು ಯುವತಿಯರೊಂದಿಗೆ ವಾಟ್ಸಾಪ್ ಚಾಟ್ಗಳು ಆತನ ಮೊಬೈಲ್ನಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಸಂತ್ರಸ್ತೆಯೊಬ್ಬಳು ಲೈಂಗಿಕ ದೌರ್ಜನ್ಯ ಹಾಗೂ ನಂತರ ಗರ್ಭಪಾತಕ್ಕೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಿರುವ ಹಿನ್ನೆಲೆ ಪ್ರಕರಣ ಮತ್ತಷ್ಟು ಗಂಭೀರಗೊಂಡಿದೆ. ಈ ಆರೋಪಗಳ ಆಧಾರದ ಮೇಲೆ ಪೊಲೀಸರು ಮೊಬೈಲ್ ಡೇಟಾ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸುತ್ತಿದ್ದಾರೆ. ಪ್ರಕರಣದ ನಿಜಾಸತ್ಯ ತನಿಖೆಯ ನಂತರವೇ ಸ್ಪಷ್ಟವಾಗಬೇಕಿದೆ.1
- ಮಾಗಡಿ ; ವಿಶ್ವ ವಿಖ್ಯಾತ ಬೆಂಗಳೂರು ನಿರ್ಮಾತೃ ಧರ್ಮಪ್ರಭು ಕೆಂಪೇಗೌಡರಿಗೆ ನಿಲ್ಲಲು ಮಾಗಡಿಯಲ್ಲಿ ನೆಲೆ ಇಲ್ಲದಂತಾಗಿದೆ. ಧರ್ಮದ ಹಾದಿಯಲ್ಲಿ ನಡೆದ ಕೆಂಪೇಗೌಡರಿಗೆ ಮಾಗಡಿಯಲ್ಲಿ ನೆಲೆ ಇಲ್ಲ ಎಂದರೆ ನಾಡಿಗೆ ಅವಮಾನ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಟಿ.ಎನ್.ಶ್ರೀನಿವಾಸ್ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಎಚ್.ಎಂ.ಕೃಷ್ಣಮೂರ್ತಿಯೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಯಿತು. ಕೆಂಪೇಗೌಡರ ಪ್ರತಿಮೆಯನ್ನು ಗೌರವಯುತವಾಗಿ ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದ್ದರಿಂದ ನಾವೂ ಕೂಡ ಕೋರ್ಟ್ ಆದೇಶಕ್ಕೆ ತಲೆಭಾಗಿ ಗೌರವ ಕೊಡುತ್ತೇವೆ. ಆದರೆ ಪುರಸಭೆ ಅಧಿಕಾರಿಗಳು ರಾತ್ರೊರಾತ್ರಿ ಪ್ರತಿಮೆಯ ಬಳಿಯ ಮೆಟ್ಟಿಲ್ಲನ್ನು ತೆರವುಗೊಳಿಸುವ ಅನಿವಾರ್ಯತೆ ಏನಿತ್ತು. ಅದರಲ್ಲೂ ಅಮಾವಾಸ್ಯೆ ದಿನವೇ ಮೆಟ್ಟಿಲು ಕಿತ್ತು ಹಾಕಿದ್ದು ಒಂದೆಡೆಯಾದರೆ ಅಂದಿನಿಂದ ಕೆಂಪೇಗೌಡ ಪ್ರತಿಮೆ ಗೌರವಕ್ಕಾದರೂ ಹೂವಿನ ಹಾರ ಹಾಕದೆ ಅವಮಾನಿಸಲಾಗಿದೆ. ಜತೆಗೆ ದಿಕ್ಕುದೆಸೆ ಇಲ್ಲದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಪ್ರತಿಮೆ ಸ್ಥಳಾಂತರಕ್ಕೆ ಯೋಜನೆ ರೂಪಿಸಿ ಕಾಮಗಾರಿಯೂ ನಡೆದಿದೆ. ಈಗ ಇದೊಂದು ವಿವಾಧಾತ್ಮಕ ಸ್ಥಳಾವಾಗಿದೆ. ಕೆಂಪೇಗೌಡರು ಸತ್ಯದ ಹಾದಿಯಲ್ಲಿ ನಡೆದಿದ್ದರು. ಅವರನ್ನು ಅವಮಾನಿಸುವವರು ಎಂದಿಗೂ ಉದ್ಧಾರವಾಗುವುದಿಲ್ಲ. ಅದರ ಫಲ ಅವರೇ ಉಣ್ಣಬೇಕಿದೆ. ಕಾದು ನೋಡುತ್ತೇನೆ ಎಂದು ಹೆಸರೇಳದೆ ಶಾಸಕರ ವಿರುದ್ಧ ಹರಿಹಾಯ್ದರು. ಈಗಾಗಲೇ ಅಡಿಗೆ 45 ರೂ ನಂತೆ ನಂತೆ 60/70 ವಿಸ್ತೀರ್ಣದ ಸ್ಥಳವನ್ನು ಕಾಂಗ್ರೆಸ್ ಪಕ್ಷದ ಕಚೇರಿಗೆ ಪುರಸಭೆ ನೀಡಿದೆ. ನಮಗೂ ಕೆಂಪೇಗೌಡರ ಹೆಸರಿನಲ್ಲಿ 1 ಎಕರೆ ಜಮೀನು ಸರ್ಕಾರ ಮಂಜೂರು ಮಾಡಿಕೊಡಲಿ ಸರ್ಕಾರಕ್ಕೆ ಕಟ್ಟಬೇಕಾದ ಹಣವನ್ನು ಜಮಾ ಮಾಡುತ್ತೇನೆ. ಇಲ್ಲೊಂದು ಸುಂದರವಾದ ಪಾರ್ಕ್ ನಿರ್ಮಿಸಿ ಜನರ ಆರೋಗ್ಯಕ್ಕೆ ಮುಂದಾಗುವುದಾಗಿ ಮನವಿ ಮಾಡಿದ ಅವರು. ಈಗಿನ ಕೆಂಪೇಗೌಡರ ಪ್ರತಿಮೆಯ ಮೆಟ್ಟಿಲು ತೆರವುಗೊಳಿಸಿರುವುದರಿಂದ ಪ್ರತಿಮೆಗೆ ಹಾರ ಹಾಕಲಾಗದ ಪರಿಸ್ಥಿತಿ ತಂದೊಡ್ಡಿರುವ ಪುರಸಭೆ ಅಧಿಕಾರಿಗಳು ನಾಡಪ್ರಭು ಕೆಂಪೇಗೌಡ ಅವರಿಗೆ ಅಗೌರವ ತೋರಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು ನನ್ನ ಸ್ವಂತ ದುಡಿಮೆಯ ಹಣದಲ್ಲಿ ಸುಂದರವಾದ ಕಂಚಿನ ಕೆಂಪೇಗೌಡರ ಪ್ರತಿಮೆಯನ್ನು ಪುರಸಭಾ ಆವರಣದಲ್ಲಿ ಕಳೆದ 22 ವರ್ಷಗಳ ಹಿಂದೆ ಅನೇಕ ಮಠಮಾನ್ಯಗಳ ಶ್ರೀಗಳರು, ಸಚಿವರು, ಶಾಸಕರು, ಗಣ್ಯರು, ರೈತರು, ಅಭಿಮಾನಿಗಳ ನೇತೃತ್ವದಲ್ಲಿ ಪ್ರತಿಮೆಯನ್ನು ಪ್ರತಿμÁ್ಠಪಿಸಿ, ಆದ್ದೂರಿಯಾಗಿ ಕಾರ್ಯಕ್ರಮ ರೂಪಿಸುವ ಮೂಲಕ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗಿತ್ತು. ಅನ್ನಸಂತರ್ಪಣೆ ಸಹ ಅವಿರತವಾಗಿ ನಡೆದಿತ್ತು. ಈ ಮೂಲಕ ಕೆಂಪೇಗೌಡರ ಇತಿಹಾಸವನ್ನು ಮರುಕಳಿಸುವಂತ ಕೆಲಸವನ್ನು ಮಾಡಿ ತೋರಿಸಿದ್ದೆ. ಹೀಗಾಗಿ ಆವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ. ಆದರೆ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಸರ್ಕಾರ ಇದೆ ಎಂದು ದೆಹಲಿಯಿಂದ ಕಲ್ಕತ್ತಗೆ ಎಂಬಂತೆ ತೊಗಲಕ್ ದರ್ಬಾರ್ ನಡೆಸುತ್ತಿದ್ದಾರೆ. ಅವರ ತಾಳಕ್ಕೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ಹಿಂದೆ ಶಾಸಕರ ತಾಳಕ್ಕೆ ಕುಣಿದ ಕೆಲವು ಅಧಿಕಾರಿಗಳು ನೇಣಿನ ಕುಣಿಕೆಗೆ ತಲೆಯೊಡ್ಡಬೇಕಾಯಿತು. ಈಗ ಅವರ ಕುಟುಂಬಗಳು ಶೋಚನೀಯಸ್ಥಿತಿ ತಲುಪಿವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು. ಭಾರಿ ವಿವಾಧಕ್ಕೆ ಒಳಗಾದ ಧರ್ಮಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ; 2008 ರಲ್ಲಿ ಪುರಸಭೆ ಆಡಳಿತ ಮಂಡಲಿ ರೆಜ್ಯುಲೇಷನ್ ಮಾಡಿ ಪ್ರತಿಮೆ ಸ್ಥಾಪನೆಗೆ 50/50 ಸ್ಥಳ ಮಂಜೂರು ಮಾಡಿತ್ತು. ಈಗ ಕೆಂಪೇಗೌಡರ ಪ್ರತಿಮೆ ಸ್ಥಳವನ್ನು ಸೇರಿಸಿಕೊಂಡಂತೆ ಸುಮಾರು 2 ಎಕರೆ ಪ್ರದೇಶದಲ್ಲಿ100 ಬೆಡ್ಡಿನ ಹೈಟೆಕ್ ಆಸ್ಪತ್ರೆ ನಿರ್ಮಿಸಲು ಶಾಸಕರು ಮುಂದಾಗಿದ್ದಾರೆ. ಕೆಂಪೇಗೌಡರ ಪ್ರತಿಮೆಯನ್ನು ಉಳಿಸಿಕೊಂಡು ಆಸ್ಪತ್ರೆ ನಿರ್ಮಿಸಬಹುದಿತ್ತು. ಕೆಂಪೇಗೌಡರ ಕೋಟೆ ಕಂದಕ ಮುಚ್ಚದಂತೆ ನಾನು ಕೋರ್ಟ್ ಮೊರೆ ಹೋಗಿದ್ದರಿಂದ ನನ್ನ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿರುವ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಕ್ಷೇತ್ರದಲ್ಲಿ ಲೂಟಿಗೆ ಇಳಿದಿದ್ದಾರೆ. ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ಅಧಿಕಾರಿಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಎಚ್.ಎಂ.ಕೃಷ್ಣಮೂರ್ತಿ ಆರೋಪಿಸಿದರು. ತಾಪಂ ಮಾಜಿ ಸದಸ್ಯ ಸಿ.ಜಯರಾಮ್ ಮಾತನಾಡಿ, ಧರ್ಮಪ್ರಭು ಕೆಂಪೆಗೌಡರು ಸರ್ವಧರ್ಮಪ್ರಿಯರು, ಎಲ್ಲ ವರ್ಗದ ಜನರಿಗೂ ಒಂದೊಂದು ಪೇಟೆಯನ್ನು ಕಟ್ಟಿಕೊಟ್ಟ ಮಹಾನೀಯರ ಪ್ರತಿಮೆಗೆ ದಕ್ಕೆಯಾಗುತ್ತಿದೆ. ಶಾಸಕರ ಸರ್ವಾಧಿಕಾರ ಇಲ್ಲಿ ನಡೆಯುತ್ತಿದೆ. ನಾವೂ ಅವರ ಪ್ರತಿಮೆಗೆ ಅವಮಾನಿಸಿದರೆ ಅವರ ಹೃದಯಕ್ಕೆ ಅವಮಾನಿಸಿದಂತೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಅವರೇ ಉಣ್ಣಬೇಕಿದೆ ಎಂದು ಕಿಡಿಕಾರಿದರು. ನಿಸರ್ಗ ಪರಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್,ಶಿವಲಿಂಗಯ್ಯ ಮಾತನಾಡಿ, ಗೌರವಯುತವಾಗಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರಿಸಲು ಕೋರ್ಟ್ ಆದೇಶ ನೀಡಿದೆ. ಇಲ್ಲಿರುವ ಮರಗಿಡಗಳನ್ನು ತೆರವುಗೊಳಿಸಬಾರದು. ತೆರವುಗೊಳಿಸಬೇಕಾದರೆ ಕಾನೂನಾತ್ಮಕವಾಗಿ ತೆರವುಗೊಳಿಸಬೇಕೆಂದು ತಾಕೀತು ಮಾಡಿದೆ. ಆದರೆ ಈಗಾಗಲೆ ಪುರಸಭೆ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳವನ್ನು ಆರೋಗ್ಯ ಇಲಾಖೆಗೆ ವರ್ಗಾಯಿಸಿದೆ. ಆರೋಗ್ಯ ಇಲಾಖೆಗೆ ವರ್ಗಾಯಿಸಿದ ಮೇಲೆ ಪ್ರತಿಮೆಯ ಮೆಟ್ಟಿಲು ಕಿತ್ತು ಹಾಕಲು ಇವರಿಗೇನು ಹಕ್ಕಿದೆ. ಇದೊಂದು ರಾಹಕೀಯ ಶಡ್ಯಂತರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಕ್ಸ್ ; ಸರ್ಕಾರದ ಮತ್ತು ಕೋರ್ಟ್ ಆದೇಶವನ್ನು ಪಾಲಿಸುವುದು ನಮ್ಮ ಕೆಲಸ. ನಾವು ಯಾರ ಒತ್ತಡಕ್ಕೂ ಮಣಿದಿಲ್ಲ, ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಗೆ ಜಮೀನು ವರ್ಗಾಯಿಸಲು ಅದೇಶ ನೀಡಿದ್ದರಿಂದ ವರ್ಗಾಯಿಸಿದ್ದೇವೆ. ಪ್ರತಿಮೆ ತೆರವುಗೊಳಿಸಲು ಕೋರ್ಟ್ ಆದೇಶವಿರುವುದರಿಂದ ಸಂಬಂಧಪಟ್ಟರು ಸ್ಥಳಾಂತರಿಸಲಿದ್ದಾರೆ. ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನೀವೇನಿದ್ದರೂ ಕೇಳುವುದಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು. ನಮ್ಮದೇನು ಅಭ್ಯಂತರವಿಲ್ಲ. ನಾವು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೆವೆ. ಟಿ.ಎನ್.ಶ್ರೀನಿವಾಸ್ ಮುಖ್ಯಾಧಿಕಾರಿ ಪುರಸಭೆ ಮಾಗಡಿ. ಜೆಡಿಎಸ್ ಮುಖಂಡ ತಮ್ಮಣ್ಣಗೌಡ, ಮಾಡಬಾಳ್ ಕೆಂಪೇಗೌಡ, ಸಾಗರ್, ಎನ್ಇಎಸ್ ಆನಂದ್, ದೊಡ್ಡಿ ಗೋಪಿ, ನಾಗರಾಜು, ಶಿವಶಂಕರ್, ಮೂರ್ತಿ, ಮೋಹನ್, ರಾಜೇಶ್, ಶಿವಣ್ಣ, ಕುಮಾರ್, ಆರ್ಐ ರವಿ, ಎಂಜಿನಿಯರ್ ಪ್ರಶಾಂತ್ ಶೆಟ್ಟಿ ಇತರರು ಇದ್ದರು.1