*ಸಾಮಾಜಿಕ ಹೋರಾಟದ ದಾರಿಯಲ್ಲಿ ನಿಂತ ನಾಯಕ – ಎಸ್. ದುರುಗೆಶ್ ಅವರಿಗೆ ಜನ್ಮದಿನದ ಶುಭಾಶಯಗಳು 🎂* *ಸಾಮಾಜಿಕ ಹೋರಾಟದ ದಾರಿಯಲ್ಲಿ ನಿಂತ ನಾಯಕ – ಎಸ್. ದುರುಗೆಶ್ ಅವರಿಗೆ ಜನ್ಮದಿನದ ಶುಭಾಶಯಗಳು 🎂* ವಿಜಯನಗರ ಜಿಲ್ಲೆಯ ಕೂಡ್ಲಿಗಿ ನಗರದ ಹೆಮ್ಮೆಯ ವ್ಯಕ್ತಿತ್ವವಾಗಿರುವ *ಎಸ್. ದುರುಗೆಶ್* ಅವರು ಸಮಾಜದ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಹೋರಾಟಗಾರರಾಗಿದ್ದಾರೆ. ದಲಿತ ಸಮುದಾಯದ ಹಕ್ಕುಗಳಿಗಾಗಿ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಅವರು ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಅವರು (DSS) ದಲಿತ ಸಂಘರ್ಷ ಸಮಿತಿಯ ವಿಜಯನಗರ ಜಿಲ್ಲೆಯ ಜಿಲ್ಲಾ ಸಂಚಾಲಕರಾಗಿ ನಾಲ್ಕನೇ ವರ್ಷವೂ ಯಶಸ್ವಿಯಾಗಿ ಸೇವೆ ಮುಂದುವರಿಸುತ್ತಿದ್ದಾರೆ. ತಮ್ಮ ಹೋರಾಟಮಯ ಜೀವನದಲ್ಲಿ ಅನೇಕ ಸವಾಲುಗಳು, ಏರು-ಇಳಿತಗಳು ಎದುರಾದರೂ, ಅವುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದ ನಂಬಿಕೆಯನ್ನು ಗಳಿಸಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಸಂಘಟನೆಯ ಬಲವರ್ಧನೆ, ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಅನ್ಯಾಯ-ಅತ್ಯಾಚಾರಗಳ ವಿರುದ್ಧ ಧ್ವನಿ ಎತ್ತುವಲ್ಲಿ *ಎಸ್. ದುರುಗೆಶ್* ಅವರ ಪಾತ್ರ ಮಹತ್ತರವಾಗಿದೆ. ಗ್ರಾಮದಿಂದ ನಗರವರೆಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯಕ್ಕಾಗಿ ಹೋರಾಡುವ ನಾಯಕತ್ವವು ಅವರನ್ನು ಸಮಾಜದಲ್ಲಿ ವಿಶೇಷ ವ್ಯಕ್ತಿಯನ್ನಾಗಿ ಮಾಡಿದೆ. ಅವರ ಸರಳತೆ, ಸೇವಾಭಾವ ಮತ್ತು ಸಂಘಟನೆಗೆ ನೀಡುತ್ತಿರುವ ಶ್ರಮ ಅನೇಕ ಯುವಕರಿಗೆ ಪ್ರೇರಣೆಯಾಗಿದೆ. ಇಂದು (14-03-1976) ಅವರ ಜನ್ಮದಿನದ ಸಂಭ್ರಮದ ದಿನವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಅವರ ಸಮಾಜಮುಖಿ ಸೇವೆ ಇನ್ನಷ್ಟು ವಿಸ್ತಾರವಾಗಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನಷ್ಟು ಶಕ್ತಿ ದೊರಕಲಿ ಎಂದು ಹಾರೈಸುತ್ತೇವೆ. ಶುಭಾಶಯ ಕೋರುವವರು: ದಲಿತ ಸಂಘರ್ಷ ಸಮಿತಿ (DSS) ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಗರಿಬೊಮ್ಮನಹಳ್ಳಿ ತಾಲ್ಲೂಕು ಘಟಕ 🌹 *ಎಸ್. ದುರುಗೆಶ್ ಅವರಿಗೆ ಹಾರ್ದಿಕ ಜನ್ಮದಿನದ ಶುಭಾಶಯಗಳು* . ಸಮಾಜ ಸೇವೆಯ ನಿಮ್ಮ ಪಯಣ ಇನ್ನಷ್ಟು ಉಜ್ವಲವಾಗಲಿ. ✨ *ನಾಗರಾಜ್ ಕಲ್ಲಹಳ್ಳಿ ✒️
*ಸಾಮಾಜಿಕ ಹೋರಾಟದ ದಾರಿಯಲ್ಲಿ ನಿಂತ ನಾಯಕ – ಎಸ್. ದುರುಗೆಶ್ ಅವರಿಗೆ ಜನ್ಮದಿನದ ಶುಭಾಶಯಗಳು 🎂* *ಸಾಮಾಜಿಕ ಹೋರಾಟದ ದಾರಿಯಲ್ಲಿ ನಿಂತ ನಾಯಕ – ಎಸ್. ದುರುಗೆಶ್ ಅವರಿಗೆ ಜನ್ಮದಿನದ ಶುಭಾಶಯಗಳು 🎂* ವಿಜಯನಗರ ಜಿಲ್ಲೆಯ ಕೂಡ್ಲಿಗಿ ನಗರದ ಹೆಮ್ಮೆಯ ವ್ಯಕ್ತಿತ್ವವಾಗಿರುವ *ಎಸ್. ದುರುಗೆಶ್* ಅವರು ಸಮಾಜದ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಹೋರಾಟಗಾರರಾಗಿದ್ದಾರೆ. ದಲಿತ ಸಮುದಾಯದ ಹಕ್ಕುಗಳಿಗಾಗಿ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಅವರು ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಅವರು (DSS) ದಲಿತ ಸಂಘರ್ಷ ಸಮಿತಿಯ ವಿಜಯನಗರ
ಜಿಲ್ಲೆಯ ಜಿಲ್ಲಾ ಸಂಚಾಲಕರಾಗಿ ನಾಲ್ಕನೇ ವರ್ಷವೂ ಯಶಸ್ವಿಯಾಗಿ ಸೇವೆ ಮುಂದುವರಿಸುತ್ತಿದ್ದಾರೆ. ತಮ್ಮ ಹೋರಾಟಮಯ ಜೀವನದಲ್ಲಿ ಅನೇಕ ಸವಾಲುಗಳು, ಏರು-ಇಳಿತಗಳು ಎದುರಾದರೂ, ಅವುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದ ನಂಬಿಕೆಯನ್ನು ಗಳಿಸಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಸಂಘಟನೆಯ ಬಲವರ್ಧನೆ, ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಅನ್ಯಾಯ-ಅತ್ಯಾಚಾರಗಳ ವಿರುದ್ಧ ಧ್ವನಿ ಎತ್ತುವಲ್ಲಿ *ಎಸ್. ದುರುಗೆಶ್* ಅವರ ಪಾತ್ರ ಮಹತ್ತರವಾಗಿದೆ. ಗ್ರಾಮದಿಂದ ನಗರವರೆಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯಕ್ಕಾಗಿ ಹೋರಾಡುವ ನಾಯಕತ್ವವು ಅವರನ್ನು ಸಮಾಜದಲ್ಲಿ ವಿಶೇಷ ವ್ಯಕ್ತಿಯನ್ನಾಗಿ ಮಾಡಿದೆ. ಅವರ ಸರಳತೆ, ಸೇವಾಭಾವ ಮತ್ತು ಸಂಘಟನೆಗೆ ನೀಡುತ್ತಿರುವ
ಶ್ರಮ ಅನೇಕ ಯುವಕರಿಗೆ ಪ್ರೇರಣೆಯಾಗಿದೆ. ಇಂದು (14-03-1976) ಅವರ ಜನ್ಮದಿನದ ಸಂಭ್ರಮದ ದಿನವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಅವರ ಸಮಾಜಮುಖಿ ಸೇವೆ ಇನ್ನಷ್ಟು ವಿಸ್ತಾರವಾಗಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನಷ್ಟು ಶಕ್ತಿ ದೊರಕಲಿ ಎಂದು ಹಾರೈಸುತ್ತೇವೆ. ಶುಭಾಶಯ ಕೋರುವವರು: ದಲಿತ ಸಂಘರ್ಷ ಸಮಿತಿ (DSS) ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಗರಿಬೊಮ್ಮನಹಳ್ಳಿ ತಾಲ್ಲೂಕು ಘಟಕ 🌹 *ಎಸ್. ದುರುಗೆಶ್ ಅವರಿಗೆ ಹಾರ್ದಿಕ ಜನ್ಮದಿನದ ಶುಭಾಶಯಗಳು* . ಸಮಾಜ ಸೇವೆಯ ನಿಮ್ಮ ಪಯಣ ಇನ್ನಷ್ಟು ಉಜ್ವಲವಾಗಲಿ. ✨ *ನಾಗರಾಜ್ ಕಲ್ಲಹಳ್ಳಿ ✒️
- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇನ್ನಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ದುರ್ಘಟನೆ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರಿಗೆ ಆತ್ಮಸಾಂತ್ವನ ಹೇಳಿದರು. ಮೃತರ ಗುರುತು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರವೇಶ್ವರ್ ಹೇನೇಳಿದ್ದಾರೆ ನೀವೆ ಕೇಳಿ1
- ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ 3 ಸಾವು ಇಬ್ಬರು ಗಂಭೀರ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಭಾನುವಾರ ಬೆಳ್ಳಿಗ್ಗೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ಕಾರು ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಗಳಾದ ಆರ್ ಎಸ್ಐ ಮಂಜುನಾಥ್ (32), ಆರ್ ಎಸ್ಐ ಅಮರೇಶ್ ಹಾಗೂ ಆರ್ ಎಸ್ಐ ಸಚಿನ್ ಎಂದು ಗುರುತಿಸಲಾಗಿದೆ. ಮೂವರೂ ರಿಸರ್ವ್ ಪೊಲೀಸ್ ಅಧಿಕಾರಿಗಳಾಗಿದ್ದರು. ಇದೇ ವೇಳೆ ಅಪಘಾತದಲ್ಲಿ ಆರ್ ಎಸ್ಐ ಮಹಂತೇಶ್ ಮತ್ತು ಪಿಎಸ್ಐ ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಜಿಲ್ಲಾ ಎಸ್ಪಿ ರಂಜೀತ್ ಕುಮಾರ ಬಂಡಾರು. ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.1
- ಶ್ರೀ ಮರಿಯಮ್ಮ ಜಾತ್ರೆ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು ಗ್ರಾಮ ದೇವತೆಯ ವಿಗ್ರಹ ಮೇರವಣಿಗೆ ಮಾಡುತ್ತಾ ಮತ್ತು ಡೋಳು ತಮಟೆ ವಾದ್ಯ ಮೂಲಕ ಗ್ರಾಮದ ಗುರು ಹಿರಿಯರ ಗ್ರಾಮ ಯುವಕರು ತುಂಬಾ ಅದ್ದೂರಿಯಾಗಿ ಆಚರಿಸಿದರು ಸುದ್ದಿಗಾರರು ಮೌನೇಶ ವೈ ಉಮಲೂಟಿ 89715494022
- All content on this blog is copyrighted and copying is not allowed without permission from the author. #Chetha #Muniswamy #gowda #Riya #YOGI #Chethana #chethanagowda #ChethanaMuniswamygowda1
- ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರ ಹಿಂದೂ ಸೇವಾ ಟ್ರಸ್ ವತಿಯಿಂದ ಏರ್ಪಡಿಸಿರುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಾಗೂ ಭವ್ಯ ಶೋಭಾಯಾತ್ರೆ ಹಿನ್ನಲೆ ನಗರದ ತುಂಬೆಲ್ಲಾ ಕೇಸರಿ ಧ್ವಜಗಳು, ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಗಳು, ಶುಭಾಶಯ ಬ್ಯಾನರ್ಗಳ ಜೋರಾಗಿವೆ. ಶಿವಾಜಿ ಜಯಂತಿ ಹಿನ್ನಲೆ ಇಳಕಲ್ಲ ನಗರ ಸಂಪೂರ್ಣ ಕೇಸರಿಯಮಯಾಗಿದೆ.1
- ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7:00 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಯಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪೊಲೀಸ್ ಸಿಬ್ಬದಿ ಕಾರು ಲಾರಿಯ ಹಿಂದಿನ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ.1
- Post by Suresh Belagere1
- ಹುಣಸೆಕಟ್ಟೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ನಾಗರಹಾವು ಕಚ್ಚಿದ್ದು ಮುಖ್ಯಶಿಕ್ಷಕ ಪ್ರಾಣವನ್ನೆ ಪಣಕ್ಕಿಟ್ಟು ವಿಧ್ಯಾರ್ಥಿನಿಯನ್ನ ಕಾಪಾಡಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ತಡಮಾಡದೆ ವಿಧ್ಯಾರ್ಥಿನಿಯ ಕಾಲಿಗೆ ತಮ್ಮ ಬಾಯಿಯಿಂದ ವಿಷವನ್ನ ತೆಗೆದು ವಿಧ್ಯಾರ್ಥಿನಿಯನ್ನ ಆಸ್ಪತ್ರೆಗೆ ಧಾಖಲಿಸಿದ್ದು ಶಾಲಾ ಮುಖ್ಯಶಿಕ್ಷಕ ರವಿಶಂಕರ್ ರ ಕಾರ್ಯಕ್ಕೆ ಎಲ್ಲೆಡ ಮೆಚ್ವುಗೆ ವ್ಯಕ್ತವಾಗಿದೆ.1