ಪ್ರಜಾಪ್ರಭುತ್ವದ ಆಶಯ, ಮೌಲ್ಯಗಳನ್ನು ಪಾಲಿಸಿ : ಯು.ವಸಂತ ಕುಮಾರಿ aksharakranti news ಪ್ರಜಾಪ್ರಭುತ್ವದ ಆಶಯ, ಮೌಲ್ಯಗಳನ್ನು ಪಾಲಿಸಿ : ಯು.ವಸಂತ ಕುಮಾರಿ ಕೊಪ್ಪಳ,: ಎಲ್ಲರೂ ಪ್ರಜಾಪ್ರಭುತ್ವ ಆಶಯ ಮತ್ತು ಮೌಲ್ಯಗಳನ್ನು ಪಾಲಿಸಬೇಕು ಎಂದು ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಿತಿ ಸಂಚಾಲಕರಾದ ಯು. ವಸಂತಕುಮಾರಿ ತಿಳಿಸಿದರು. ಮಂಗಳವಾರ ಜಿಲ್ಲೆಯ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ಮತ್ತು ಮಾನವ ಹಕ್ಕುಗಳ ಇಲಾಖೆ ಮತ್ತು ತಾಲೂಕ ಕಾನೂನು ಸೇವೆಗಳ ಪ್ರಾಧಿಕಾರ ಗಂಗಾವತಿ ಮತ್ತು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಇವರ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ತಾಲೂಕ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಚಾಲನೆ ನೀಡುವ ಪ್ರಯುಕ್ತದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ನಮ್ಮ ದೇಶದಲ್ಲಿ ಚುನಾವಣೆಗಳ ಮೂಲಕ ನಮ್ಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಎಲ್ಲಾರಿಗೂ ಇದೆ. ಎಲ್ಲರೂ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಬಾರೀಕೆರ ಫಣಿರಾಜು ಅವರು ತಮ್ಮ ವಿಶೇಷ ಉಪನ್ಯಾಸದಲ್ಲಿ ಪ್ರಜಾಪ್ರಭುತ್ವದಲ್ಲಿ ನಾಗರಿಕರು ಮತ್ತು ಪ್ರಜೆಗಳು ಭಾಗವಹಿಸಿದರೆ ದೇಶ ಬಹು ಭೇಗ ಅಭಿವೃದ್ಧಿ ಹೊಂದುತ್ತವೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡದು ಬಲಪಡಿಸಬೇಕು. ಮಾನವ ಹಕ್ಕುಗಳು ಪ್ರತಿಯೊಬ್ಬರಿಗೆ ಸಿಗಬೇಕು. ಕಾನೂನು ಪ್ರಕಾರ ಎಲ್ಲರೂ ಸಮಾನರು ಆದರೆ ವಾಸ್ತವದಲ್ಲಿ ಲಿಂಗ ತಾತಮ್ಯ ಸೇರಿದಂತೆ ಇನ್ನಿತರ ತಾರತಮ್ಯಗಳು ಇವೆ. ಯುವ ಜನಾಂಗ ರಾಜಕಾರಣದಲ್ಲಿ ಪಾಲ್ಗೊಳ್ಳಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಹುಲುಗಪ್ಪ ಮಾತನಾಡಿ, ಎಲ್ಲರೂ ಪ್ರಜಾಪ್ರಭುತ್ವ ಆಶಯಗಳಿಗೆ ಚಾಲನೆ ನೀಡಬೇಕು. ಭಾರತೀಯ ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳಬೇಕು. ಯುವಕರಿಗೆ ರಾಜಕೀಯ ಮತ್ತು ಪ್ರಜಾಪ್ರಭುತ್ವದ ಪ್ರಜ್ಞೆ ಇರಬೇಕು ಎಂದರು. ಯುವ ಜನಸೇವಾ ಇಲಾಖೆಯ ಆನಂದ ಪಾಟೀಲ ಮಾತನಾಡಿ, ಹಿಂದಿನ ಮಹನೀಯರು ತ್ಯಾಗ ಬಲಿದಾನದಿಂದ ಇಂದು ನಾವೆಲ್ಲರೂ ನೆಮ್ಮದಿಯಿಂದ ಇರೋಕೆ ಸಾಧ್ಯ. ಎಲ್ಲರೂ ದೇಶದ ಉದ್ದಾರದ ಬಗ್ಗೆ ವಿಚಾರ ಮಾಡಬೇಕು.ವಿದ್ಯಾರ್ಥಿಗಳು ಒಳ್ಳೆಯ ನಾಯಕತ್ವ ಬೆಳಿಸಿಕೊಳ್ಳಿ ಎಂದರು. ತಾಲೂಕ ದೈಹಿಕ ಶಿಕ್ಷಣ ಅಧಿಕಾರಿ ಸರಸ್ವತಿ ಮಾತನಾಡಿ, ಯುವ ಸಂಸತ್ತು ಸ್ಪರ್ಧೆ ಕಾರ್ಯಕ್ರಮಗಳ ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳಬೇಕು. ಸಂಸತ್ತಿನ ನಿಯಮಗಳನ್ನು, ಕಾನೂನುಗಳನ್ನು ಪಾಲಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಶಿವರಾಜ ಗುರಿಕಾರ ಮಾತನಾಡಿ, ಪ್ರಜಾಪ್ರಭುತ್ವ ಯಶಸ್ವಿಯಲ್ಲಿ ಯುವಕರ ಪಾತ್ರ ಬಹಳ ಮುಖ್ಯ. ಯುವಕರು ಅಂಬೇಡ್ಕರ್ ಮತ್ತು ಗಾಂಧೀಜಿಯವರ ಹೋರಾಟದ ವಿಚಾರಗಳನ್ನು ತಿಳಿದುಕೊಳ್ಳಬೇಕು. ಯುವಕರಲ್ಲಿ ಪ್ರಶ್ನೆ ಮಾಡುವ ಮನೋಭಾವನೆ ಇರಬೇಕು ಎಂದರು. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಒದಲಾಯಿತು. ಕಾರ್ಯಕ್ರಮದಲ್ಲಿ ಸಿಡಿಪಿಒ ಶಿವಶರಣಪ್ಪ, ಕಾಲೇಜಿನ ಪ್ರಾಧ್ಯಾಪಕರ ಡಾ. ಜೆ. ಕೃಷ್ಣ, ಮಂಜುನಾಥ್ ಕೆ. ಎಚ್, ಡಾ. ನರಸಿಂಹ, ಡಾ. ಸೃಷ್ಟಿ, ಡಾ. ಜಯರಾಮ್ ಮರಡಿತೋಟ, ಮಹಾಂತೇಶ್, ಖುಷಿ ರಾಥೋಡ್, ಬಸವರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಬಸವರಾಜ ಗಡದ್ ನಿರೂಪಿಸಿ, ಸ್ವಾಗತಿಸಿ, ಬೆತಲ್ ಶಾಲೆಯ ಸ್ನೇಹ ಮತ್ತು ತಂಡದವರು ಪ್ರಾರ್ಥಿಸಿ, ಉಪನ್ಯಾಸಕರ ಬಸವರಾಜ ವಂದಿಸಿದರು.
ಪ್ರಜಾಪ್ರಭುತ್ವದ ಆಶಯ, ಮೌಲ್ಯಗಳನ್ನು ಪಾಲಿಸಿ : ಯು.ವಸಂತ ಕುಮಾರಿ aksharakranti news ಪ್ರಜಾಪ್ರಭುತ್ವದ ಆಶಯ, ಮೌಲ್ಯಗಳನ್ನು ಪಾಲಿಸಿ : ಯು.ವಸಂತ ಕುಮಾರಿ ಕೊಪ್ಪಳ,: ಎಲ್ಲರೂ ಪ್ರಜಾಪ್ರಭುತ್ವ ಆಶಯ ಮತ್ತು ಮೌಲ್ಯಗಳನ್ನು ಪಾಲಿಸಬೇಕು ಎಂದು ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಿತಿ ಸಂಚಾಲಕರಾದ ಯು. ವಸಂತಕುಮಾರಿ ತಿಳಿಸಿದರು. ಮಂಗಳವಾರ ಜಿಲ್ಲೆಯ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ ರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ಮತ್ತು ಮಾನವ ಹಕ್ಕುಗಳ ಇಲಾಖೆ ಮತ್ತು ತಾಲೂಕ ಕಾನೂನು ಸೇವೆಗಳ ಪ್ರಾಧಿಕಾರ ಗಂಗಾವತಿ ಮತ್ತು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಇವರ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ತಾಲೂಕ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಚಾಲನೆ ನೀಡುವ ಪ್ರಯುಕ್ತದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ನಮ್ಮ ದೇಶದಲ್ಲಿ ಚುನಾವಣೆಗಳ ಮೂಲಕ ನಮ್ಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಎಲ್ಲಾರಿಗೂ ಇದೆ. ಎಲ್ಲರೂ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಬಾರೀಕೆರ ಫಣಿರಾಜು ಅವರು ತಮ್ಮ ವಿಶೇಷ ಉಪನ್ಯಾಸದಲ್ಲಿ ಪ್ರಜಾಪ್ರಭುತ್ವದಲ್ಲಿ ನಾಗರಿಕರು ಮತ್ತು ಪ್ರಜೆಗಳು ಭಾಗವಹಿಸಿದರೆ ದೇಶ ಬಹು ಭೇಗ ಅಭಿವೃದ್ಧಿ ಹೊಂದುತ್ತವೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡದು ಬಲಪಡಿಸಬೇಕು. ಮಾನವ ಹಕ್ಕುಗಳು ಪ್ರತಿಯೊಬ್ಬರಿಗೆ ಸಿಗಬೇಕು. ಕಾನೂನು ಪ್ರಕಾರ
ಎಲ್ಲರೂ ಸಮಾನರು ಆದರೆ ವಾಸ್ತವದಲ್ಲಿ ಲಿಂಗ ತಾತಮ್ಯ ಸೇರಿದಂತೆ ಇನ್ನಿತರ ತಾರತಮ್ಯಗಳು ಇವೆ. ಯುವ ಜನಾಂಗ ರಾಜಕಾರಣದಲ್ಲಿ ಪಾಲ್ಗೊಳ್ಳಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಹುಲುಗಪ್ಪ ಮಾತನಾಡಿ, ಎಲ್ಲರೂ ಪ್ರಜಾಪ್ರಭುತ್ವ ಆಶಯಗಳಿಗೆ ಚಾಲನೆ ನೀಡಬೇಕು. ಭಾರತೀಯ ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳಬೇಕು. ಯುವಕರಿಗೆ ರಾಜಕೀಯ ಮತ್ತು ಪ್ರಜಾಪ್ರಭುತ್ವದ ಪ್ರಜ್ಞೆ ಇರಬೇಕು ಎಂದರು. ಯುವ ಜನಸೇವಾ ಇಲಾಖೆಯ ಆನಂದ ಪಾಟೀಲ ಮಾತನಾಡಿ, ಹಿಂದಿನ ಮಹನೀಯರು ತ್ಯಾಗ ಬಲಿದಾನದಿಂದ ಇಂದು ನಾವೆಲ್ಲರೂ ನೆಮ್ಮದಿಯಿಂದ ಇರೋಕೆ ಸಾಧ್ಯ. ಎಲ್ಲರೂ ದೇಶದ ಉದ್ದಾರದ ಬಗ್ಗೆ ವಿಚಾರ ಮಾಡಬೇಕು.ವಿದ್ಯಾರ್ಥಿಗಳು ಒಳ್ಳೆಯ ನಾಯಕತ್ವ ಬೆಳಿಸಿಕೊಳ್ಳಿ ಎಂದರು. ತಾಲೂಕ ದೈಹಿಕ ಶಿಕ್ಷಣ ಅಧಿಕಾರಿ ಸರಸ್ವತಿ ಮಾತನಾಡಿ, ಯುವ ಸಂಸತ್ತು ಸ್ಪರ್ಧೆ ಕಾರ್ಯಕ್ರಮಗಳ ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳಬೇಕು. ಸಂಸತ್ತಿನ ನಿಯಮಗಳನ್ನು, ಕಾನೂನುಗಳನ್ನು ಪಾಲಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಶಿವರಾಜ ಗುರಿಕಾರ ಮಾತನಾಡಿ, ಪ್ರಜಾಪ್ರಭುತ್ವ ಯಶಸ್ವಿಯಲ್ಲಿ ಯುವಕರ ಪಾತ್ರ ಬಹಳ ಮುಖ್ಯ. ಯುವಕರು ಅಂಬೇಡ್ಕರ್ ಮತ್ತು ಗಾಂಧೀಜಿಯವರ ಹೋರಾಟದ ವಿಚಾರಗಳನ್ನು ತಿಳಿದುಕೊಳ್ಳಬೇಕು. ಯುವಕರಲ್ಲಿ ಪ್ರಶ್ನೆ ಮಾಡುವ ಮನೋಭಾವನೆ ಇರಬೇಕು ಎಂದರು. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಒದಲಾಯಿತು. ಕಾರ್ಯಕ್ರಮದಲ್ಲಿ ಸಿಡಿಪಿಒ ಶಿವಶರಣಪ್ಪ, ಕಾಲೇಜಿನ ಪ್ರಾಧ್ಯಾಪಕರ ಡಾ. ಜೆ. ಕೃಷ್ಣ, ಮಂಜುನಾಥ್ ಕೆ. ಎಚ್, ಡಾ. ನರಸಿಂಹ, ಡಾ. ಸೃಷ್ಟಿ, ಡಾ. ಜಯರಾಮ್ ಮರಡಿತೋಟ, ಮಹಾಂತೇಶ್, ಖುಷಿ ರಾಥೋಡ್, ಬಸವರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಬಸವರಾಜ ಗಡದ್ ನಿರೂಪಿಸಿ, ಸ್ವಾಗತಿಸಿ, ಬೆತಲ್ ಶಾಲೆಯ ಸ್ನೇಹ ಮತ್ತು ತಂಡದವರು ಪ್ರಾರ್ಥಿಸಿ, ಉಪನ್ಯಾಸಕರ ಬಸವರಾಜ ವಂದಿಸಿದರು.
- ಯುವಕರೇ, ನಿಮ್ಮ ಕನಸೇ ನನ್ನ ಭರವಸೆ: ಯುವಶಕ್ತಿಗೆ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಕರೆ ಕೂಡ್ಲಿಗಿ: ಯುವಕರು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ಶಿಕ್ಷಣ, ಶ್ರಮ, ಶಿಸ್ತು ಹಾಗೂ ಉತ್ತಮ ಚಿಂತನೆಗಳನ್ನು ಬದುಕಿನ ಬಂಡವಾಳವನ್ನಾಗಿಸಿಕೊಂಡು ಮುನ್ನಡೆಯಬೇಕು ಎಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಯುವಜನತೆಗೆ ಕರೆ ನೀಡಿದರು. ಯುವಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಿಮ್ಮ ಕಣ್ಣಲ್ಲಿ ನಾನು ಕೇವಲ ಯುವಕರನ್ನು ನೋಡುವುದಿಲ್ಲ; ಒಂದು ಹೊಸ ಕನಸನ್ನು ನೋಡುತ್ತೇನೆ. ನಿಮ್ಮ ಆಲೋಚನೆಗಳು ಒಂದು ಊರನ್ನೇ ಬೆಳಗಿಸುವ ಶಕ್ತಿ ಹೊಂದಿವೆ. ಆ ಶಕ್ತಿಯನ್ನು ರಾಜಕೀಯದ ಬಲೆಗೆ ಸಿಲುಕಿಸಿ, ನಿಮ್ಮನ್ನು ದಾರಿ ತಪ್ಪಿಸುವ ಕೆಲಸವನ್ನು ನಾನು ಎಂದಿಗೂ ಮಾಡುವುದಿಲ್ಲ. ಇದು ನನ್ನ ಮಾತಲ್ಲ, ನನ್ನ ಹೃದಯದ ಪ್ರತಿಜ್ಞೆ” ಎಂದು ಹೇಳಿದರು. ಯುವಕರು ತಮ್ಮ ಬದುಕಿನ ಶಿಲ್ಪಿಗಳಾಗಬೇಕು. ಯಾರೋ ಬಂದು ತಮ್ಮ ಬದುಕನ್ನು ಬದಲಿಸುತ್ತಾರೆ ಎಂದು ಕಾಯದೆ, ಸ್ವಂತ ಶ್ರಮ ಮತ್ತು ಪ್ರತಿಭೆಯ ಮೂಲಕ ಭವಿಷ್ಯ ಕಟ್ಟಿಕೊಳ್ಳಬೇಕು. ಕಾಲೇಜು ಶಿಕ್ಷಣ, ಪುಸ್ತಕ ಓದು, ಕಠಿಣ ಪರಿಶ್ರಮ ಹಾಗೂ ಉತ್ತಮ ನಡೆ-ನುಡಿಗಳೇ ಯುವಕರ ನಿಜವಾದ ಬಂಡವಾಳ ಎಂದು ಅವರು ತಿಳಿಸಿದರು. ದುಶ್ಚಟಗಳಿಂದ ದೂರವಿರಿ ದುಶ್ಚಟಗಳು ಯುವಕರ ಅಮೂಲ್ಯವಾದ ಯೌವನವನ್ನು ಹಾಳು ಮಾಡುವುದಲ್ಲದೆ, ಕುಟುಂಬದ ನೆಮ್ಮದಿಯನ್ನೂ ಕಸಿದುಕೊಳ್ಳುತ್ತವೆ. ಅವು ಕನಸುಗಳನ್ನು ಕಳ್ಳತನ ಮಾಡುತ್ತವೆ. ಆದ್ದರಿಂದ ಯುವಕರು ಯಾವುದೇ ದುಶ್ಚಟಗಳಿಗೆ ಒಳಗಾಗದೆ, ಆರೋಗ್ಯಕರ ಮತ್ತು ಸಕಾರಾತ್ಮಕ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಸಲಹೆ ನೀಡಿದರು.1
- ಮಸ್ಕಿ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ ಮಸ್ಕಿ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಮಲ್ಲಿಕಾರ್ಜುನ ಬಂಡೆ ಟಾಟಾ ಎಸಿ ಚಾಲಕರ ಹಾಗೂ ಮಾಲಕರ ಸಂಘದ ವತಿಯಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಸೋಮವಾರ ಸಂಜೆ ಸುಮಾರು 7 ಗಂಟೆಗೆ ಸಂಭ್ರಮದಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರು, ಚಾಲಕರು ಹಾಗೂ ಮಾಲಕರು ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿ, ನೃತ್ಯ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಭಕ್ತಿಭಾವ ಹಾಗೂ ಸಡಗರದಿಂದ ವಿಸರ್ಜನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- ಗುಳೇದಗುಡ್ಡ: ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 26ಲಕ್ಷ ರು ಲಾಭ ಗುಳೇದಗುಡ್ಡ : ಸಹಕಾರಿ ಕ್ಷೇತ್ರ ಬೆಳವಣಿಗೆ ಹೊಂದಬೇಕಾದರೆ ಅದಕ್ಕೆ ಪರಸ್ಪರ ಸಹಕಾರ ಅವಶ್ಯವಾಗಿಬೇಕು. ಸಕಾಲದಲ್ಲಿ ಸಾಲ ಮರುಪಾವತಿ, ಸದಸ್ಯರ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರಸಕ್ತ ವರ್ಷ 26 ಲಕ್ಷ 66ಸಾವಿರ ಲಾಭಗಳಿಸಿದೆ ಎಂದು ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ ಹೇಳಿದರು. ಅವರು ಪಟ್ಟಣದ ಶ್ರೀ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ 17ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ 1737 ಸದಸ್ಯರಿದ್ದು, 866 ಸಹ ಸದಸ್ಯರಿದ್ದಾರೆ. 92 ಲಕ್ 76 ಸಾವಿರ ಶೇರು ಬಂಡವಾಳ, 11 ಕೋಟಿ 23 ಲಕ್ಷ ಠೇವು, 13 ಕೋಟಿ 90 ಲಕ್ಷ ದುಡಿಯುವ ಬಂಡವಾಳ, 9 ಕೋಟಿ 69 ಲಕ್ಷ ಸಾಲ ನೀಡಲಾಗಿದೆ ಎಂದರು. ಸಹಕಾರಿ ಕ್ಷೇತ್ರವು ಸಹಕಾರಿ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಉತ್ತಮ ಸ್ಪಂದನೆ ನೀಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯತ್ತ ಸಾಗುತ್ತಿದೆ. ಸದಸ್ಯರು ಇನ್ನಷ್ಟು ಸಹಕಾರ ನೀಡಬೇಕೆಂದು ಸಿದ್ದು ಅರಕಾಲಚಿಟ್ಟಿ ಹೇಳಿದರು. ನಿವೃತ್ತ ಉಪನ್ಯಾಸಕ ಮಹದೇವಯ್ಯ ನೀಲಕಂಠಮಠ ಅವರು ಸಾನಿಧ್ಯ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ನೂರಂದಪ್ಪ ಮಳ್ಳಿ, ನಿರ್ದೇಶಕರಾದ ಸಿದ್ರಾಮಪ್ಪ ಹನಮಸಾಗರ, ರವೀಂದ್ರ ಕಲಕೇರಿ, ವಿಜಯಕುಮಾರ ಬೇಟಗೇರಿಗೌಡ್ರ, ಮಾಗುಂಡಪ್ಪ ದೇವರಮನಿ, ಓಂಕಾರಪ್ಪ ದಿಂಡಿ, ರವಿ ಬೆಕಿನಾಳ, ಗುರು ಹಂಡಿ, ರಾಮಕೃಷ್ಣ ಹಲಗಲಿ, ಬಸವಣ್ಣೆವ್ವ ಯಂಡಿಗೇರಿ, ಲತಾ ರಾಂಪೂರ, ಸುವರ್ಣಾ ಉಣಚಗಿ ಸೇರಿದಂತೆ ಕೊಂಕಣಕೊಪ್ಪ ಶಾಖೆ ಸಲಹಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.1
- ಲಿಂಗಸೂರು ಪಟ್ಟಣದ 7ನೇ ವಾರ್ಡಿನಲ್ಲಿ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ಲಿಂಗಸುಗೂರು ಪಟ್ಟಣದ ಪಟ್ಟಣದ 7ನೇ ಎಕ್ಸ್ಪರ್ಟ್ ಸ್ಕೂಲ್ ಹತ್ತಿರ ಪ್ರತಿ ವರ್ಷದಂತೆ ಈ ವರ್ಷವೂ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ಬೆಳಗಿನ ಜಾವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗಣೇಶ ಯುವಕ ಮಂಡಳಿಯ ಸದಸ್ಯರು, ವಾರ್ಡಿನ ಗುರು ಹಿರಿಯರು ಮಹಿಳೆಯರು ಮಕ್ಕಳು ಗಣೇಶನ ಭಕ್ತರು ಭಾಗವಹಿಸಿದ್ದರು.4
- ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು1
- ಅಸಹಾಯಕ ದಿವ್ಯಾಂಗ ಯುವಕನ ನೋವಿಗೆ ತಕ್ಷಣ ಸ್ಪಂದನೆ; ಶೌಚಾಲಯ ಹಾಗೂ ವಾಹನದ ನೆರವಿಗೆ ಶಾಸಕ ಭರವಸೆ ಕೂಡ್ಲಿಗಿ: ಅಧಿಕಾರವೆಂಬುದು ಕೇವಲ ಆಡಳಿತ ನಡೆಸುವ ಹೊಣೆಗಾರಿಕೆಯಲ್ಲ; ಸಂಕಷ್ಟದಲ್ಲಿರುವವರ ಕಣ್ಣೀರೊರೆಸುವ ಮಾನವೀಯ ಹೊಣೆಗಾರಿಕೆಯೂ ಹೌದು ಎಂಬುದನ್ನು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಮತ್ತೊಮ್ಮೆ ತೋರಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದ ದಿವ್ಯಾಂಗ ಯುವಕನೊಬ್ಬ ಹಲವು ದಿನಗಳಿಂದ ಮೂಲಭೂತ ಸೌಲಭ್ಯಗಳ ಕೊರತೆಯ ನಡುವೆ ಅಸಹಾಯಕ ಬದುಕು ಸಾಗಿಸುತ್ತಿದ್ದ. ಮನೆಯಲ್ಲಿ ಶೌಚಾಲಯದ ವ್ಯವಸ್ಥೆಯಿಲ್ಲದೆ ಮುಜುಗರ ಹಾಗೂ ಸಂಕಷ್ಟ ಅನುಭವಿಸುತ್ತಿದ್ದ ಈತನಿಗೆ, ಓಡಾಡಲು ಸೂಕ್ತ ವಾಹನವೂ ಇರಲಿಲ್ಲ. ಇದರಿಂದ ದಿನನಿತ್ಯದ ಬದುಕೇ ಸವಾಲಾಗಿ ಪರಿಣಮಿಸಿತ್ತು. ಇದಕ್ಕಿಂತಲೂ ನೋವಿನ ಸಂಗತಿಯೆಂದರೆ, ದ್ವಿಚಕ್ರ ವಾಹನ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಪರಿಣಾಮ ಯುವಕನ ಕುಟುಂಬದ ಸಂಕಷ್ಟ ಮತ್ತಷ್ಟು ಹೆಚ್ಚಾಗಿತ್ತು. ಒಂದು ಕಡೆ ದೈಹಿಕ ಅಸಹಾಯಕತೆ, ಮತ್ತೊಂದೆಡೆ ಆರ್ಥಿಕ ಸಂಕಷ್ಟ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ—ಇವೆಲ್ಲವೂ ಆತನ ಬದುಕನ್ನು ಕತ್ತಲೆಯತ್ತ ತಳ್ಳಿದ್ದವು. ಸ್ನೇಹಿತರ ಮನವಿಗೆ ಸ್ಪಂದಿಸಿದ ಶಾಸಕ ಯುವಕನ ಪರಿಸ್ಥಿತಿಯನ್ನು ಆತನ ಸ್ನೇಹಿತರು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರ ಗಮನಕ್ಕೆ ತಂದರು. ವಿಷಯ ತಿಳಿದ ತಕ್ಷಣವೇ ಶಾಸಕ ಸ್ಪಂದಿಸಿದ್ದು, ಯಾವುದೇ ವಿಳಂಬ ಮಾಡದೆ ಯುವಕನ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.1
- ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.2
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1
- ಗಣೇಶ ಮೂರ್ತಿಗೆ ವಿದ್ಯುತ್ ತಂತಿ ತಗುಲಿ ಅವಘಡ! ಇಬ್ಬರಿಗೆ ಗಾಯ; ತಪ್ಪಿದ ಭಾರೀ ದುರಂತ ಹೊಸಪೇಟೆ ನಗರದ ಹೊರವಲಯದಲ್ಲಿ ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸಾಗಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ಮೂರ್ತಿಗೆ ಬೆಂಕಿ ಹೊತ್ತಿಕೊಂಡಿದ್ದು, ಟ್ರಾಲಿಯಲ್ಲಿದ್ದ ಇಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಗಾಯಾಳುಗಳಿಗೆ ನೆರವು ನೀಡಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಸ್ತೆಗೆ ಇಳಿಬಿದ್ದಿದ್ದ ವಿದ್ಯುತ್ ತಂತಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂತಹ ತಾಜಾ ಕರ್ನಾಟಕ ಸುದ್ದಿಗಳಿಗಾಗಿ ASN News24 Kannada ಅನ್ನು Follow & Subscribe ಮಾಡಿ. #ಹೊಸಪೇಟೆ #ವಿಜಯನಗರ #ಗಣೇಶೋತ್ಸವ #ಗಣೇಶಮೂರ್ತಿ #ವಿದ್ಯುತ್ ಅವಘಡ #ಕರ್ನಾಟಕಸುದ್ದಿ #KannadaNews #KarnatakaNews #Hospet #Vijayanagara #GaneshChaturthi #GaneshFestival #BreakingNews #LatestNews #NewsUpdate #ASNNews24Kannada1