ಶಿವಮೊಗ್ಗ-KSRTC ನಿಲ್ದಾಣದಲ್ಲಿ ಡ್ರೈವರ್ಗೆ ಚಪ್ಪಲಿಯಿಂದ ಹೊಡೆದ ಮಹಿಳೆ ಶಿವಮೊಗ್ಗ: ನಗರದ KSRTC ಬಸ್ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಚಾಲಕ ರೊಬ್ಬರ ಮೇಲೆ ಮಹಿಳಾ ಪ್ರಯಾಣಿಕ ರೊಬ್ಬರು ಚಪ್ಪಲಿ ಯಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಬಸ್ ಚಾಲಕ ಲಕ್ಷ್ಮೀ ಪ್ರಸಾದ್ (52) ಎಂಬುವ ವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಮೀನಾಬಾನು ಎಂಬಾಕೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಗೆ ಕಾರಣವೇನು? ಮಧ್ಯಾಹ್ನ 1:30ರ ಸುಮಾರಿಗೆ ಚಾಲಕ ಲಕ್ಷ್ಮೀ ಪ್ರಸಾದ್ ಅವರು ಊಟ ಮಾಡುತ್ತಿದ್ದಾಗ, ಚಿತ್ರದುರ್ಗಕ್ಕೆ ಹೋಗುವ ಪ್ರಯಾಣಿಕರು ಬಸ್ ಬಾಗಿಲು ತೆಗೆಯುವಂತೆ ಒತ್ತಾಯಿಸಿದ್ದಾರೆ. ಬಸ್ ಹೊರಡಲು ಸಮಯ ವಿರುವುದಾಗಿ ಚಾಲಕ ತಿಳಿಸಿದಾಗ ಸಿಟ್ಟಾದ ಮಹಿಳೆಯೊಬ್ಬರು ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಬಗ್ಗೆ ದೂರು ನೀಡಲು ಚಾಲಕ ಕಂಟ್ರೋಲ್ ರೂಮ್ ಬಳಿ ಹೋದಾಗ, ಅಲ್ಲಿಗೆ ಬಂದ ಮಹಿಳೆಯು ಚಪ್ಪಲಿಯಿಂದ ಹೊಡೆದು ಎದೆಗೆ ಗುದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಎದೆನೋವಿನಿಂದ ಕುಸಿದ ಡ್ರೈವರ್: ಎದೆನೋವು ಕಾಣಿಸಿಕೊಂಡು ಚಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಅಲ್ಲಿದ್ದ ಸಿಬ್ಬಂದಿಗಳು ಗಲಾಟೆ ಬಿಡಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ-KSRTC ನಿಲ್ದಾಣದಲ್ಲಿ ಡ್ರೈವರ್ಗೆ ಚಪ್ಪಲಿಯಿಂದ ಹೊಡೆದ ಮಹಿಳೆ ಶಿವಮೊಗ್ಗ: ನಗರದ KSRTC ಬಸ್ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಚಾಲಕ ರೊಬ್ಬರ ಮೇಲೆ ಮಹಿಳಾ ಪ್ರಯಾಣಿಕ ರೊಬ್ಬರು ಚಪ್ಪಲಿ ಯಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಬಸ್ ಚಾಲಕ ಲಕ್ಷ್ಮೀ ಪ್ರಸಾದ್ (52) ಎಂಬುವ ವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಮೀನಾಬಾನು ಎಂಬಾಕೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಗೆ ಕಾರಣವೇನು? ಮಧ್ಯಾಹ್ನ 1:30ರ ಸುಮಾರಿಗೆ ಚಾಲಕ ಲಕ್ಷ್ಮೀ ಪ್ರಸಾದ್ ಅವರು ಊಟ ಮಾಡುತ್ತಿದ್ದಾಗ, ಚಿತ್ರದುರ್ಗಕ್ಕೆ ಹೋಗುವ ಪ್ರಯಾಣಿಕರು ಬಸ್ ಬಾಗಿಲು ತೆಗೆಯುವಂತೆ ಒತ್ತಾಯಿಸಿದ್ದಾರೆ. ಬಸ್ ಹೊರಡಲು ಸಮಯ ವಿರುವುದಾಗಿ ಚಾಲಕ ತಿಳಿಸಿದಾಗ ಸಿಟ್ಟಾದ ಮಹಿಳೆಯೊಬ್ಬರು ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಬಗ್ಗೆ ದೂರು ನೀಡಲು ಚಾಲಕ ಕಂಟ್ರೋಲ್ ರೂಮ್ ಬಳಿ ಹೋದಾಗ, ಅಲ್ಲಿಗೆ ಬಂದ ಮಹಿಳೆಯು ಚಪ್ಪಲಿಯಿಂದ ಹೊಡೆದು ಎದೆಗೆ ಗುದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಎದೆನೋವಿನಿಂದ ಕುಸಿದ ಡ್ರೈವರ್: ಎದೆನೋವು ಕಾಣಿಸಿಕೊಂಡು ಚಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಅಲ್ಲಿದ್ದ ಸಿಬ್ಬಂದಿಗಳು ಗಲಾಟೆ ಬಿಡಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
- ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್ ಆಗ್ರಹ ರೆಕ್ಮಂಡ್ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ1
- ಬಳ್ಳಾರಿ ನಗರದಲ್ಲಿ ಎರಡು ದಿನಗಳಿಂದ ಜೆಸಿಬಿ ಯಂತ್ರಗಳ ಘರ್ಜನೆ.. ಬಳ್ಳಾರಿ ಹೃದಯಭಾಗ ಗಡಿಗಿ ಚನ್ನಪ್ಪ(ರಾಯಲ್) ವೃತ್ತದಿಂದ...... ಹಳೆಯ ಬೆಂಗಳೂರು ರಸ್ತೆಯ ಅಂತ್ಯದ ಬಂಡಿಮೋಟ್ ವರಗೆ ರಸ್ತೆ ಆಗಲಿಕರಣ ಫುಟ್ಪಾತ್ ಅತೀಕ್ರಮಣದಿಂದ ದಿನಂ ಪ್ರತಿ ಸಂಚರಿಸಲು ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆ ನಗರದ ರಾಯಲ್ ಸರ್ಕಲ್ ನಿಂದ ಎಪಿಎಂಸಿವರೆಗಿನ ಹಳೆ ಬೆಂಗಳೂರು ರಸ್ತೆಯಲ್ಲಿ ಒತ್ತುವರಿ ತೆರವಿಗೆ ಗ್ರೀನ್ ಸಿಗ್ನಲ್ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಜಂಟಿಯಾಗಿ ತೆರವು ಕಾರ್ಯಚರಣೆ ಭಾಗಿ1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- Post by Onlinetv24x71
- ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್ಎಸ್ ಪಕ್ಷದ ಸೈನಿಕರು1
- ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.1