Shuru
Apke Nagar Ki App…
ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಸಕ ಯಾಸೀರಖಾನ ಪಠಾಣ ಅಭಿಮಾನಿ ಬಳಗದ ವತಿಯಿಂದ 2026ರ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಲು ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಶಿಗ್ಗಾವಿ ತಾಲೂಕಿನ ಆರ್.ಸಿ.ಬಿ ಅಭಿಮಾನಿಗಳು ತಮ್ಮ ನೆಚ್ಚಿನ ಬೆಂಗಳೂರು ತಂಡವನ್ನು ಹುರಿದುಂಬಿಸಿ ಘೋಷಣೆಗಳನ್ನು ಕೂಗಿದರು. ಬೆಂಗಳೂರು ತಂಡವು ಎರಡನೇ ಬಾರಿಯೂ ಐಪಿಎಲ್ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದರು. ಅವರ ವಿಶ್ವಾಸದಂತೆಯೇ ಆರ್.ಸಿ.ಬಿ ತಂಡವು ಪ್ರಸ್ತುತ ಆವೃತ್ತಿಯ ಕಪ್ ಅನ್ನು ತನ್ನದಾಗಿಸಿಕೊಂಡಿದೆ. ತಂಡದ ಗೆಲುವಿನ ಸಂಭ್ರಮದಲ್ಲಿ ಅಭಿಮಾನಿಗಳು ಹುಚ್ಚೆದ್ದು ಕುಣಿದು ಜಯಘೋಷ ಹಾಕಿದರು. ಈ ಸಂದರ್ಭದಲ್ಲಿ ಎಸ್.ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ, ಗೌಸಖಾನ ಮುನಸಿ, ಮಂಜುನಾಥ ತಿಮ್ಮಾಪುರ, ಶಂಬು ನೆರ್ತಿ, ಮುನ್ನಾ ಲಕ್ಷಮೇಶ್ವರ, ಚಂದ್ರು ಕೊಡ್ಲಿವಾಡ, ಮುಕ್ತಾರ, ಹನುಮರೆಡ್ಡಿ ನಡುವಿನಮನಿ, ಮಾಂತೇಶ ಸಾಲಿ, ಕುಬೇರ ಬೆಳವಲಕೊಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಸವರಾಜ ವೀ ಎಚ್
ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಸಕ ಯಾಸೀರಖಾನ ಪಠಾಣ ಅಭಿಮಾನಿ ಬಳಗದ ವತಿಯಿಂದ 2026ರ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಲು ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಶಿಗ್ಗಾವಿ ತಾಲೂಕಿನ ಆರ್.ಸಿ.ಬಿ ಅಭಿಮಾನಿಗಳು ತಮ್ಮ ನೆಚ್ಚಿನ ಬೆಂಗಳೂರು ತಂಡವನ್ನು ಹುರಿದುಂಬಿಸಿ ಘೋಷಣೆಗಳನ್ನು ಕೂಗಿದರು. ಬೆಂಗಳೂರು ತಂಡವು ಎರಡನೇ ಬಾರಿಯೂ ಐಪಿಎಲ್ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದರು. ಅವರ ವಿಶ್ವಾಸದಂತೆಯೇ ಆರ್.ಸಿ.ಬಿ ತಂಡವು ಪ್ರಸ್ತುತ ಆವೃತ್ತಿಯ ಕಪ್ ಅನ್ನು ತನ್ನದಾಗಿಸಿಕೊಂಡಿದೆ. ತಂಡದ ಗೆಲುವಿನ ಸಂಭ್ರಮದಲ್ಲಿ ಅಭಿಮಾನಿಗಳು ಹುಚ್ಚೆದ್ದು ಕುಣಿದು ಜಯಘೋಷ ಹಾಕಿದರು. ಈ ಸಂದರ್ಭದಲ್ಲಿ ಎಸ್.ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ, ಗೌಸಖಾನ ಮುನಸಿ, ಮಂಜುನಾಥ ತಿಮ್ಮಾಪುರ, ಶಂಬು ನೆರ್ತಿ, ಮುನ್ನಾ ಲಕ್ಷಮೇಶ್ವರ, ಚಂದ್ರು ಕೊಡ್ಲಿವಾಡ, ಮುಕ್ತಾರ, ಹನುಮರೆಡ್ಡಿ ನಡುವಿನಮನಿ, ಮಾಂತೇಶ ಸಾಲಿ, ಕುಬೇರ ಬೆಳವಲಕೊಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಸಕ ಯಾಸೀರಖಾನ ಪಠಾಣ ಅಭಿಮಾನಿ ಬಳಗದ ವತಿಯಿಂದ 2026ರ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಲು ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಶಿಗ್ಗಾವಿ ತಾಲೂಕಿನ ಆರ್.ಸಿ.ಬಿ ಅಭಿಮಾನಿಗಳು ತಮ್ಮ ನೆಚ್ಚಿನ ಬೆಂಗಳೂರು ತಂಡವನ್ನು ಹುರಿದುಂಬಿಸಿ ಘೋಷಣೆಗಳನ್ನು ಕೂಗಿದರು. ಬೆಂಗಳೂರು ತಂಡವು ಎರಡನೇ ಬಾರಿಯೂ ಐಪಿಎಲ್ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದರು. ಅವರ ವಿಶ್ವಾಸದಂತೆಯೇ ಆರ್.ಸಿ.ಬಿ ತಂಡವು ಪ್ರಸ್ತುತ ಆವೃತ್ತಿಯ ಕಪ್ ಅನ್ನು ತನ್ನದಾಗಿಸಿಕೊಂಡಿದೆ. ತಂಡದ ಗೆಲುವಿನ ಸಂಭ್ರಮದಲ್ಲಿ ಅಭಿಮಾನಿಗಳು ಹುಚ್ಚೆದ್ದು ಕುಣಿದು ಜಯಘೋಷ ಹಾಕಿದರು. ಈ ಸಂದರ್ಭದಲ್ಲಿ ಎಸ್.ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ, ಗೌಸಖಾನ ಮುನಸಿ, ಮಂಜುನಾಥ ತಿಮ್ಮಾಪುರ, ಶಂಬು ನೆರ್ತಿ, ಮುನ್ನಾ ಲಕ್ಷಮೇಶ್ವರ, ಚಂದ್ರು ಕೊಡ್ಲಿವಾಡ, ಮುಕ್ತಾರ, ಹನುಮರೆಡ್ಡಿ ನಡುವಿನಮನಿ, ಮಾಂತೇಶ ಸಾಲಿ, ಕುಬೇರ ಬೆಳವಲಕೊಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.3
- ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಐಪಿಎಲ್ 2026ರ ಮಹಾ ಸಂಗ್ರಾಮದಲ್ಲಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ "ಈ ಸಲನೂ ಕಪ್ ನಮ್ದೇ" ಎಂಬ ಘೋಷಣೆಯನ್ನು ಮತ್ತೊಮ್ಮೆ ನಿಜವಾಗಿಸಿದೆ. ಈ ಐತಿಹಾಸಿಕ ವಿಜಯಕ್ಕಾಗಿ ಕರುನಾಡಿನ ಸಮಸ್ತ ಜನತೆಯ ಪರವಾಗಿ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ. ಈ ಅಪ್ರತಿಮ ಯಶಸ್ಸಿಗೆ ಕಿಂಗ್ ವಿರಾಟ್ ಕೊಹ್ಲಿ ಮತ್ತು ಭುವನೇಶ್ವರ ಕುಮಾರ್ ಅವರ ಅದ್ಭುತ ಪ್ರದರ್ಶನ ಹಾಗೂ ನಾಯಕನಾಗಿ ಇಡೀ ತಂಡವನ್ನು ಅತ್ಯದ್ಭುತವಾಗಿ ಮುನ್ನಡೆಸಿದ ರಜತ್ ಪಾಟಿದಾರ್ ಅವರ ಕಲ್ಪನಾತೀತ ಚಾಣಾಕ್ಷತನ ಪ್ರಮುಖ ಕಾರಣವಾಗಿದೆ. ಈ ಗೆಲುವಿನಿಂದಾಗಿ ಆರ್ಸಿಬಿ ಸಿಡಿಲಮರಿಗಳು ಪ್ರತಿಯೊಬ್ಬ ಕ್ರೀಡಾಭಿಮಾನಿಯೂ ಹೆಮ್ಮೆಯಿಂದ ತಲೆ ಎತ್ತುವಂತೆ ಮಾಡಿದ್ದಾರೆ. ವಿಜಯೋತ್ಸವದ ಸಂಭ್ರಮದಲ್ಲಿರುವ ಆರ್ಸಿಬಿ ಆಟಗಾರರಿಗೂ ಹಾಗೂ ಸದಾ ಬೆನ್ನೆಲುಬಾಗಿ ನಿಂತಿರುವ ಕೋಟ್ಯಂತರ ಅಪ್ಪಟ ಅಭಿಮಾನಿಗಳಿಗೆ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ. ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಕೂಡ "ಈ ಸಲನೂ ಕಪ್ ನಮ್ದೇ" ಘೋಷಣೆಯನ್ನು ಮತ್ತೊಮ್ಮೆ ನಿಜವಾಗಿಸಿದ ಆರ್ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರು ತಂಡದ ಈ ಅಪ್ರತಿಮ ಸಾಧನೆಯು ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಎಂದೆಂದಿಗೂ ಸುವರ್ಣಾಕ್ಷರಗಳಲ್ಲಿ ಉಳಿಯಲಿದೆ.2
- ಕಲಘಟಗಿಯಲ್ಲಿ ಬೆಳೆ ವಿಮೆಯಲ್ಲಿನ ತಾರತಮ್ಯದ ತನಿಖೆಗೆ ಆಗ್ರಹಿಸಿ ಭಾರತೀಯ ಕಿಸಾನ ಸಂಘ ನಡೆಸುತ್ತಿರುವ 11ನೇ ದಿನದ ಧರಣಿ ಸತ್ಯಾಗ್ರಹಕ್ಕೆ ದೇವರಕೊಂಡ ಗ್ರಾಮದ ಬಾಲಯೋಗಿ ಮಾಣಿಕ್ ವೃಷಭೇಂದ್ರ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ನಡೆಯುತ್ತಿರುವ ಈ ಪ್ರತಿಭಟನೆಗೆ ಆಶೀರ್ವಚನ ನೀಡಿದ ಸ್ವಾಮೀಜಿ, ರೈತರ ಮನಸ್ಸಿಗೆ ನೋವುಂಟು ಮಾಡಿದರೆ ಪಾಪ ಕರ್ಮಗಳು ಹೆಚ್ಚಾಗುತ್ತವೆ ಎಂದು ಎಚ್ಚರಿಕೆ ನೀಡಿದರು. ಸ್ವಾಮೀಜಿ ತಮ್ಮ ಭಾಷಣದಲ್ಲಿ, ಧರ್ಮದ ಹಾದಿಯಲ್ಲಿ ಸಾಗಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿದರು. ಕೆಲವು ಅಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅವರಿಗೆ ವಿಮೆ ಹಣ ಬಂದಿದ್ದರೂ ಕೇಳುವವರಿಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಏಜೆಂಟರ ಮೂಲಕ ಹಣ ಜಮೆ ಮಾಡಿಸಿಕೊಂಡು ಶೇಕಡ 50ರಷ್ಟು ಕಮಿಷನ್ ಪಡೆಯುತ್ತಿರುವುದು ದೇಶದ ಅನ್ನದಾತನಿಗೆ ಬಗೆಯುತ್ತಿರುವ ದ್ರೋಹ ಎಂದು ಬಣ್ಣಿಸಿದ ಅವರು, ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿದರು. ಈ ಧರಣಿ ಸತ್ಯಾಗ್ರಹಕ್ಕೆ ಪಟ್ಟಣದ ಹನ್ನೆರಡು ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ, ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಬಸನಗೌಡ್ರ, ತಾಲ್ಲೂಕು ಅಧ್ಯಕ್ಷ ಸಿದ್ದಪ್ಪ ಬೆಟಗೇರಿ, ಸಂಗ್ರಾಮ ಸೇನೆ ತಾಲ್ಲೂಕು ಅಧ್ಯಕ್ಷ ಸಾತಪ್ಪ ಕುಂಕೂರ, ಚಂದ್ರಗೌಡ ಪಾಟೀಲ, ಶಂಕರಗೌಡ ಪಾಟೀಲ, ಶಶಿಧರ ಹುಲಿಕಟ್ಟಿ, ಪರಶುರಾಮ ಹುಲಿಹೊಂಡ ಹಾಗೂ ಬಸವರಾಜ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- ಧಾರ್ವಾಡ್ ನಗರದ ರವೀಂದ್ರ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೀವ್ರ ವಿಳಂಬವಾಗಿದೆ. ಈ ಕುರಿತು 2015ರಿಂದ ವರದಿಗಳನ್ನು ಸಲ್ಲಿಸಲಾಗಿದ್ದರೂ, ಇಲ್ಲಿಯವರೆಗೂ ಯಾವುದೇ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಈ ವಿಡಿಯೋದಲ್ಲಿ ಮಾಹಿತಿ ನೀಡಲಾಗಿದೆ. ರವೀಂದ್ರ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸುವ ವಿಚಾರದಲ್ಲಿನ ಈ ಸಮಸ್ಯೆಯನ್ನು ಎತ್ತಿ ಹಿಡಿಯಲು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ.1
- ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಶಿವಮೊಗ್ಗದ ಭದ್ರಾವತಿಯಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಭದ್ರಾವತಿಯ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಸಹೋದರ ಹಾಗೂ ಭದ್ರಾವತಿ ಪಿಎಲ್ಡಿ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ಗೆ ಬಲವಾಗಿ ಆಗ್ರಹಿಸಿದ್ದಾರೆ. ನಗರದ ಹುತ್ತಾ ಕಾಲೋನಿಯಲ್ಲಿರುವ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ.ಕೆ. ಶಿವಕುಮಾರ್, ಶಾಸಕ ಸಂಗಮೇಶ್ ಅವರು ಭದ್ರಾವತಿಯಿಂದ ನಾಲ್ಕು ಬಾರಿ ಗೆದ್ದಿದ್ದಾರೆ ಎಂದು ತಿಳಿಸಿದರು. ಭದ್ರಾವತಿಯ ಸಮಗ್ರ ಅಭಿವೃದ್ಧಿಗೆ ಸಚಿವ ಸ್ಥಾನವು ಅತ್ಯಂತ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಸಂಗಮೇಶ್ ಹಿರಿಯ ಶಾಸಕರಾಗಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ನಮ್ಮಂತೆ ಬೇರೆಯವರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ನಮ್ಮ ಶಾಸಕರು ಹಿರಿಯರಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಪ್ರಸ್ತುತ ಭದ್ರಾವತಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಸಚಿವ ಸ್ಥಾನ ಸಿಕ್ಕರೆ ನಗರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂದು ಬಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ರಾಜ್ಯದ ಏಳು ತಾಲೂಕುಗಳಲ್ಲಿ ಎಲ್ಲ ತಾಲೂಕುಗಳಿಗೆ ಸಚಿವ ಸ್ಥಾನ ದೊರೆತಿದ್ದರೂ, ನಾಲ್ಕು ಬಾರಿ ಶಾಸಕರಾದ ಸಂಗಮೇಶ್ ಅವರಿಗೆ ಭದ್ರಾವತಿಯಿಂದ ಇದುವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಅವರು ಗಮನ ಸೆಳೆದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕೆಂದು ಬಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.1
- ಅರಸೀಕೆರೆ ತಾಲ್ಲೂಕು ಮಟ್ಟದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಬೃಹತ್ ಸಮಾವೇಶ ಮತ್ತು ರ್ಯಾಲಿಯನ್ನು ಆಯೋಜಿಸಲಾಗಿತ್ತು. ಬಸವೇಶ್ವರ ಸರ್ಕಲ್ನಿಂದ ಬಿಇಒ ಕಚೇರಿಯವರೆಗೆ ನಡೆದ ಈ ಪ್ರತಿಭಟನೆಯಲ್ಲಿ 300ಕ್ಕೂ ಹೆಚ್ಚು ಜನರು ಭಾಗವಹಿಸಿ, ಒಕ್ಕೊರಲಿನಿಂದ ಮ್ಯಾಗ್ನೆಟ್ ಯೋಜನೆಯನ್ನು ಧಿಕ್ಕರಿಸಿದರು. ಪ್ರತಿಭಟನಾಕಾರರು 'ರಕ್ತ ಕೊಡುವೆವು ನಮ್ಮೂರ ಶಾಲೆ ಬಿಡುವುದಿಲ್ಲ' ಎಂದು ಘೋಷಣೆಗಳನ್ನು ಕೂಗಿದರು.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಬಂಜಾರ ಸಮುದಾಯವು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಬಂಜಾರ ಸಮುದಾಯ ಪ್ರಮುಖ ಪಾತ್ರ ವಹಿಸಿದ್ದು, ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡದಿದ್ದರೆ ಭವಿಷ್ಯದ ಚುನಾವಣೆಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಸ್ಪಷ್ಟ ಸಂದೇಶ ರವಾನಿಸಿದೆ. ಸಮುದಾಯದ ಮುಖಂಡರು ಮಾತನಾಡಿ, ಕಳೆದ ಮೂರು ವರ್ಷಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಮಾಜವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಅವಧಿಯಲ್ಲಿ ಇದು ಪುನರಾವರ್ತನೆಯಾಗಬಾರದು ಎಂದು ಮನವರಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಬಂಜಾರ ಸಮುದಾಯವು ಮೂವತ್ತು ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದು, ಚುನಾವಣಾ ಸಂದರ್ಭದಲ್ಲಿ ಗೆಲುವಿಗೆ ನಿರ್ಣಾಯಕ ಮತಗಳನ್ನು ಹೊಂದಿರುವ ಪ್ರಮುಖ ಸಮುದಾಯಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಉಳಿದ ಎರಡು ವರ್ಷಗಳ ಅವಧಿಯಲ್ಲಾದರೂ ಸಮುದಾಯಕ್ಕೆ ತಕ್ಕ ಸ್ಥಾನಮಾನ ನೀಡಬೇಕೆಂದು ಮುಖಂಡರು ಹಕ್ಕೊತ್ತಾಯ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಗಳಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ, ಬಂಜಾರ ಸಮುದಾಯದ ಶಾಸಕರಾದ ರುದ್ರಪ್ಪ ಲಂಬಾಣಿಯವರಿಗೆ ಮಂತ್ರಿ ಮಂಡಲದಲ್ಲಿ ಮಂತ್ರಿಸ್ಥಾನ ನೀಡಬೇಕು, ಅಥವಾ ಪಕ್ಷದ ಪಿ.ಟಿ. ಪರಮೇಶ್ವರನಾಯ್ಕ ರವರಿಗೆ, ಇಲ್ಲವೇ ಭೀಮಾನಾಯ್ಕ ರವರಿಗೆ ಎಂಎಲ್ಸಿ ಮಾಡಿ ಕ್ಯಾಬಿನೆಟ್ ಮಂತ್ರಿಸ್ಥಾನ ನೀಡಬೇಕೆಂದು ಅವರು ಪಕ್ಷದ ವರಿಷ್ಠರಲ್ಲಿ ಮತ್ತು ಡಿ.ಕೆ. ಶಿವಕುಮಾರ್ ಅವರಲ್ಲಿ ಆಗ್ರಹಿಸಿದ್ದಾರೆ. ಸಮುದಾಯವನ್ನು ಈಗಲೂ ನಿರ್ಲಕ್ಷಿಸಿ ಅವಮಾನಿಸಿದರೆ, ಮುಂಬರುವ ಎಲ್ಲಾ ಹಂತಗಳ ಚುನಾವಣೆಗಳಲ್ಲಿ, ವಿಶೇಷವಾಗಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿರುವ ಬಂಜಾರ ಸಮುದಾಯವು ತಕ್ಕ ಪಾಠ ಕಲಿಸಲಿದೆ ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳಾಗಲಿರುವ ಡಿ.ಕೆ. ಶಿವಕುಮಾರ್ರಿಗೆ ಸಮಾಜದ ವತಿಯಿಂದ ಅಭಿನಂದನೆ ಸಲ್ಲಿಸಿದ ಮುಖಂಡರು, ಮಂತ್ರಿಮಂಡಲ ವಿಸ್ತರಣೆ ಸಂದರ್ಭದಲ್ಲಿ ಬಂಜಾರ ಸಮುದಾಯದವರಿಗೆ ಮಂತ್ರಿಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಮೇ 31ರಂದು ಪಟ್ಟಣದ ಪ್ರವಾಸಿಮಂದಿರದಲ್ಲಿ ದೂಪದಹಳ್ಳಿ ತಾಂಡಮಠದ ಪ್ರಕಾಶ ಮಹಾರಾಜ ಸ್ವಾಮೀಜಿ ನೇತೃತ್ವದಲ್ಲಿ, ಬಂಜಾರ ಸಮುದಾಯದ ತಾಲೂಕಾಧ್ಯಕ್ಷ ವಾಸುದೇವನಾಯ್ಕರವರ ಮುಂದಾಳತ್ವದಲ್ಲಿ ಸಮುದಾಯದ ಪ್ರಮುಖ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಬಂಜಾರ ಸಮಾಜದ ಸಂಘಟನೆಯ ಉಪಾಧ್ಯಕ್ಷ ಎಂ.ಎಸ್.ಎಂ. ಕೃಷ್ಣ, ಸಹಕಾರ್ಯದರ್ಶಿ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಗೋವಿಂದ ನಾಯ್ಕ್, ಖಜಾಂಚಿ ದುರ್ಗಾ ನಾಯ್ಕ್, ಸದಸ್ಯರುಗಳಾದ ಕೆ. ವೆಂಕಟೇಶ್ ನಾಯ್ಕ್, ಆರ್.ಸಿ. ವಿಜಯಕುಮಾರ್, ವೆಂಕಟೇಶ್, ಶಿವಕುಮಾರ್, ರಾಮ ನಾಯ್ಕ್, ಪವಿತ್ರಬಾಯಿ, ಶ್ರೀ ಸಂತ ಸೇವಾಲಾಲ್ ಬಂಜಾರ (ಲಂಬಾಣಿ) ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಬಂಜಾರ ಸಮುದಾಯದ ಹಿರಿಯರು ಮತ್ತು ಯುವಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ತಮ್ಮ ನೆಚ್ಚಿನ ಆರ್ಸಿಬಿ (ಬೆಂಗಳೂರು) ತಂಡ ಫೈನಲ್ ತಲುಪಿರುವ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅಭಿಮಾನಿಗಳು ಫೈನಲ್ ಪಂದ್ಯವನ್ನು ವೀಕ್ಷಿಸಲು ಹೈದರಾಬಾದ್ಗೆ ತೆರಳಿದ್ದಾರೆ. ಇಂದು ಹೈದರಾಬಾದ್ನಲ್ಲಿ ನಡೆಯಲಿರುವ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯವನ್ನು ವೀಕ್ಷಿಸಲು ಈ ಅಭಿಮಾನಿಗಳು ಉತ್ಸುಕತೆಯಿಂದ ಪ್ರಯಾಣಿಸಿದ್ದಾರೆ. ಈ ಅಭಿಮಾನಿಗಳು ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಅದು ಬಹಳಷ್ಟು ಕುತೂಹಲವನ್ನು ಕೆರಳಿಸಿದೆ.1