logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

೭೦೦ ವರ್ಷಗಳ ಇತಿಹಾಸವಿರುವ ಕನಕಪುರ ದೇಗುಲ ಮಠಾಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಭಕ್ತರು ಪೂಜ್ಯರ ಅಂತಿಮ ದರ್ಶನಕ್ಕಾಗಿ ದೇಗುಲ ಮಠದತ್ತ ಧಾವಿಸುತ್ತಿದ್ದು, ಮಠದಲ್ಲಿ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಭಕ್ತ ಸಮೂಹವು ಕಂಬನಿ ಮಿಡಿಯುತ್ತಾ ಶೋಕಸಾಗರದಲ್ಲಿ ಮುಳುಗಿದೆ. ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣಸ್ವಾಮಿಗಳು ಲಕ್ಷಾಂತರ ಭಕ್ತರ ಹೃದಯದಲ್ಲಿ ನೆಲೆಸಿದ್ದು, ಸರ್ವ ಭಕ್ತರ ಓಡೆಯರಾಗಿ ಸರಳ ಹಾಗೂ ಮೃದು ಸ್ವಭಾವದವರಾಗಿದ್ದರು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರೂ, ತಮ್ಮ ಭಕ್ತರ ಕೋರಿಕೆಯ ಮೇರೆಗೆ ಮನೆಗಳಿಗೆ, ಸಭೆ-ಸಮಾರಂಭಗಳಿಗೆ ಆಗಮಿಸಿ ಆಶೀರ್ವದಿಸುತ್ತಿದ್ದರು. ಮಳವಳ್ಳಿಯಲ್ಲಿ ನಡೆದ ಐತಿಹಾಸಿಕ ಸುತ್ತೂರಿನ ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ೧೦೬೬ನೇ ಜಯಂತಿ ಮಹೋತ್ಸವದ ರೂವಾರಿಗಳಾಗಿದ್ದ ಅವರು, ಸುತ್ತೂರು ಜಯಂತಿ ಮಹೋತ್ಸವದ ಯಶಸ್ವಿ ಆಚರಣೆ ಅವರ ಕನಸಾಗಿತ್ತು. ಇದಲ್ಲದೆ, ಅವರು ಡಿಹಲಸಹಳ್ಳಿ ಷಡಕ್ಷರಿ ಗವಿಮಠದ ಕಾರ್ಯಕ್ರಮಕ್ಕೂ ಆಗಮಿಸಿ, ಗವಿಮಠದ ಅಭಿವೃದ್ಧಿ ಹಾಗೂ ಷಡಕ್ಷರ ಸ್ವಾಮಿಗಳ ಸೇವೆಯ ಕಾಯಕದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು. ಪರಮಪೂಜ್ಯರ ಲಿಂಗೈಕ್ಯಕ್ಕೆ ಸುತ್ತೂರು ಶ್ರೀಗಳು ಸೇರಿದಂತೆ ನಾಡಿನ ಹರಗುರು ಚರಮೂರ್ತಿಗಳು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಮಠಕ್ಕೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.

1 hr ago
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
1 hr ago

೭೦೦ ವರ್ಷಗಳ ಇತಿಹಾಸವಿರುವ ಕನಕಪುರ ದೇಗುಲ ಮಠಾಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಭಕ್ತರು ಪೂಜ್ಯರ ಅಂತಿಮ ದರ್ಶನಕ್ಕಾಗಿ ದೇಗುಲ ಮಠದತ್ತ ಧಾವಿಸುತ್ತಿದ್ದು, ಮಠದಲ್ಲಿ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಭಕ್ತ ಸಮೂಹವು ಕಂಬನಿ ಮಿಡಿಯುತ್ತಾ ಶೋಕಸಾಗರದಲ್ಲಿ ಮುಳುಗಿದೆ. ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣಸ್ವಾಮಿಗಳು ಲಕ್ಷಾಂತರ ಭಕ್ತರ ಹೃದಯದಲ್ಲಿ ನೆಲೆಸಿದ್ದು, ಸರ್ವ ಭಕ್ತರ ಓಡೆಯರಾಗಿ ಸರಳ ಹಾಗೂ ಮೃದು ಸ್ವಭಾವದವರಾಗಿದ್ದರು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರೂ, ತಮ್ಮ ಭಕ್ತರ ಕೋರಿಕೆಯ ಮೇರೆಗೆ ಮನೆಗಳಿಗೆ, ಸಭೆ-ಸಮಾರಂಭಗಳಿಗೆ ಆಗಮಿಸಿ ಆಶೀರ್ವದಿಸುತ್ತಿದ್ದರು. ಮಳವಳ್ಳಿಯಲ್ಲಿ ನಡೆದ ಐತಿಹಾಸಿಕ ಸುತ್ತೂರಿನ ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ೧೦೬೬ನೇ ಜಯಂತಿ ಮಹೋತ್ಸವದ ರೂವಾರಿಗಳಾಗಿದ್ದ ಅವರು, ಸುತ್ತೂರು ಜಯಂತಿ ಮಹೋತ್ಸವದ ಯಶಸ್ವಿ ಆಚರಣೆ ಅವರ ಕನಸಾಗಿತ್ತು. ಇದಲ್ಲದೆ, ಅವರು ಡಿಹಲಸಹಳ್ಳಿ ಷಡಕ್ಷರಿ ಗವಿಮಠದ ಕಾರ್ಯಕ್ರಮಕ್ಕೂ ಆಗಮಿಸಿ, ಗವಿಮಠದ ಅಭಿವೃದ್ಧಿ ಹಾಗೂ ಷಡಕ್ಷರ ಸ್ವಾಮಿಗಳ ಸೇವೆಯ ಕಾಯಕದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು. ಪರಮಪೂಜ್ಯರ ಲಿಂಗೈಕ್ಯಕ್ಕೆ ಸುತ್ತೂರು ಶ್ರೀಗಳು ಸೇರಿದಂತೆ ನಾಡಿನ ಹರಗುರು ಚರಮೂರ್ತಿಗಳು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಮಠಕ್ಕೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.

More news from ಕರ್ನಾಟಕ and nearby areas
  • ಕನಕಪುರ ದೇಗುಲ ಮಠದ ಮಠಾಧೀಶರಾದ ಡಾ.ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಜೂನ್ 23ರ ಮಂಗಳವಾರದಂದು ಮಧ್ಯಾಹ್ನ 3 ಗಂಟೆಯವರೆಗೆ ದೇಗುಲ ಮಠದ ಆವರಣದಲ್ಲಿ ಸಾರ್ವಜನಿಕರು ಪರಮಪೂಜ್ಯರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3:00 ರಿಂದ 4:30 ಗಂಟೆಯವರೆಗೆ ಕನಕಪುರದ ಪ್ರಮುಖ ರಸ್ತೆಗಳಲ್ಲಿ ಪರಮಪೂಜ್ಯರ ಅಂತಿಮ ದರ್ಶನದ ಮೆರವಣಿಗೆ ನಡೆಯಲಿದೆ. ಬಳಿಕ, ಸಂಜೆ 4:30 ಗಂಟೆಯಿಂದ ಮಠದ ಆವರಣದಲ್ಲಿ ನಾಡಿನ ಮಠಾಧೀಶರು ಮತ್ತು ಹರಗುರು ಚರ ಮೂರ್ತಿಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಕಿರಿಯ ಶ್ರೀಗಳಾದ ಡಾ. ಶ್ರೀ ಚನ್ನಬಸವ ಸ್ವಾಮಿಗಳು ಈ ಕುರಿತು ಸಂದೇಶ ನೀಡಿದ್ದಾರೆ.
    1
    ಕನಕಪುರ ದೇಗುಲ ಮಠದ ಮಠಾಧೀಶರಾದ ಡಾ.ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಜೂನ್ 23ರ ಮಂಗಳವಾರದಂದು ಮಧ್ಯಾಹ್ನ 3 ಗಂಟೆಯವರೆಗೆ ದೇಗುಲ ಮಠದ ಆವರಣದಲ್ಲಿ ಸಾರ್ವಜನಿಕರು ಪರಮಪೂಜ್ಯರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ 3:00 ರಿಂದ 4:30 ಗಂಟೆಯವರೆಗೆ ಕನಕಪುರದ ಪ್ರಮುಖ ರಸ್ತೆಗಳಲ್ಲಿ ಪರಮಪೂಜ್ಯರ ಅಂತಿಮ ದರ್ಶನದ ಮೆರವಣಿಗೆ ನಡೆಯಲಿದೆ. ಬಳಿಕ, ಸಂಜೆ 4:30 ಗಂಟೆಯಿಂದ ಮಠದ ಆವರಣದಲ್ಲಿ ನಾಡಿನ ಮಠಾಧೀಶರು ಮತ್ತು ಹರಗುರು ಚರ ಮೂರ್ತಿಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

ಕಿರಿಯ ಶ್ರೀಗಳಾದ ಡಾ. ಶ್ರೀ ಚನ್ನಬಸವ ಸ್ವಾಮಿಗಳು ಈ ಕುರಿತು ಸಂದೇಶ ನೀಡಿದ್ದಾರೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    24 min ago
  • ಮಳವಳ್ಳಿ ಪಟ್ಟಣದಲ್ಲಿ ಟೀಮ್ ಮಳವಳ್ಳಿ ವತಿಯಿಂದ ಆಯೋಜಿಸಲಾದ ಆಗಸ್ಟ್ 15ರ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಟೀಸರ್ ಬಿಡುಗಡೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸೋಮವಾರ ಬೆಳಿಗ್ಗೆ 11:30ಕ್ಕೆ ಇಲ್ಲಿನ ಫ್ರೆಂಡ್ಸ್ ಅಡ್ಡ ಸೆಂಟರ್‌ನಲ್ಲಿ ಟೀಮ್ ಮಳವಳ್ಳಿ ಮುಖಂಡರ ಸಮ್ಮುಖದಲ್ಲಿ ಈ ಟೀಸರ್ ಅನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಟೀಮ್ ಮಳವಳ್ಳಿ ಮುಖಂಡರಾದ ಟಿ. ನದಕುಮಾರ್ ಭರತ್ ರಾಜ್ ಮತ್ತು ನಿವೃತ್ತ ಸೈನಿಕರಾದ ಸುರೇಶ್ ಅವರು, ಮಳವಳ್ಳಿಯು ಈಗಾಗಲೇ ರಕ್ತದಾನ ಕ್ಷೇತ್ರದಲ್ಲಿ ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದೆ ಎಂದು ಹೇಳಿದರು. 2018ರಲ್ಲಿ 1072 ಹಾಗೂ 2023ರಲ್ಲಿ 1080 ಮಂದಿ ರಕ್ತದಾನಿಗಳಿಂದ ರಕ್ತ ಸಂಗ್ರಹಿಸಿ, ಮಳವಳ್ಳಿಯು 'ರಕ್ತದಾನಿಗಳ ತವರು' ಎಂದು ಪ್ರಖ್ಯಾತಿ ಗಳಿಸಿದೆ. ಇದೀಗ ಬರುವ ಆಗಸ್ಟ್ 15ರಂದು ರೋಟರಿ ಶಾಲೆ ಆವರಣದಲ್ಲಿ 2026ನೇ ವರ್ಷದ ಅಂಗವಾಗಿ, 26 ಗಂಟೆಗಳ ಕಾಲ ಅಹೋರಾತ್ರಿ ರಕ್ತದಾನ ಶಿಬಿರವನ್ನು ಏರ್ಪಡಿಸಿ 2026 ಮಂದಿ ದಾನಿಗಳಿಂದ ರಕ್ತ ಸಂಗ್ರಹಿಸುವ ಮೂಲಕ ಮಳವಳ್ಳಿಯಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ ಎಂದು ಘೋಷಿಸಿದರು. ಸಾವಿರಾರು ಜನರ ಪ್ರಾಣ ಉಳಿಸುವ ಈ ಮಹತ್ಕಾರ್ಯದಲ್ಲಿ ಮಳವಳ್ಳಿಯ ಯುವಕ ಮಿತ್ರರು, ವಿದ್ಯಾರ್ಥಿಗಳು, ಸಂಘಸಂಸ್ಥೆಗಳವರು, ಮಹಿಳೆಯರು ಹಾಗೂ ಪುರುಷರು ರಕ್ತದಾನ ಮಾಡುವ ಮೂಲಕ ಭಾಗವಹಿಸಿ, ಮಳವಳ್ಳಿಯ ಕೀರ್ತಿಪತಾಕೆ ರಾಜ್ಯದಲ್ಲಿ ಮಾತ್ರವಲ್ಲದೆ ದೇಶದೆಲ್ಲೆಡೆ ಹಾರುವಂತೆ ಮಾಡಲು ಕೈಜೋಡಿಸಬೇಕೆಂದು ಮನವಿ ಮಾಡಲಾಯಿತು. ಅಲ್ಲದೆ, ಅಕ್ಕಪಕ್ಕದ ಜಿಲ್ಲೆ ಹಾಗೂ ತಾಲ್ಲೂಕುಗಳ ರಕ್ತದಾನಿಗಳು ಸಹ ಈ ಮಹತ್ಕಾರ್ಯದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಆಹ್ವಾನ ನೀಡಲಾಯಿತು. ಈ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಟೀಮ್ ಮಳವಳ್ಳಿಯ ಹಲವು ಮುಖಂಡರು ಹಾಜರಿದ್ದರು.
    1
    ಮಳವಳ್ಳಿ ಪಟ್ಟಣದಲ್ಲಿ ಟೀಮ್ ಮಳವಳ್ಳಿ ವತಿಯಿಂದ ಆಯೋಜಿಸಲಾದ ಆಗಸ್ಟ್ 15ರ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಟೀಸರ್ ಬಿಡುಗಡೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸೋಮವಾರ ಬೆಳಿಗ್ಗೆ 11:30ಕ್ಕೆ ಇಲ್ಲಿನ ಫ್ರೆಂಡ್ಸ್ ಅಡ್ಡ ಸೆಂಟರ್‌ನಲ್ಲಿ ಟೀಮ್ ಮಳವಳ್ಳಿ ಮುಖಂಡರ ಸಮ್ಮುಖದಲ್ಲಿ ಈ ಟೀಸರ್ ಅನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಟೀಮ್ ಮಳವಳ್ಳಿ ಮುಖಂಡರಾದ ಟಿ. ನದಕುಮಾರ್ ಭರತ್ ರಾಜ್ ಮತ್ತು ನಿವೃತ್ತ ಸೈನಿಕರಾದ ಸುರೇಶ್ ಅವರು, ಮಳವಳ್ಳಿಯು ಈಗಾಗಲೇ ರಕ್ತದಾನ ಕ್ಷೇತ್ರದಲ್ಲಿ ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದೆ ಎಂದು ಹೇಳಿದರು. 2018ರಲ್ಲಿ 1072 ಹಾಗೂ 2023ರಲ್ಲಿ 1080 ಮಂದಿ ರಕ್ತದಾನಿಗಳಿಂದ ರಕ್ತ ಸಂಗ್ರಹಿಸಿ, ಮಳವಳ್ಳಿಯು 'ರಕ್ತದಾನಿಗಳ ತವರು' ಎಂದು ಪ್ರಖ್ಯಾತಿ ಗಳಿಸಿದೆ. ಇದೀಗ ಬರುವ ಆಗಸ್ಟ್ 15ರಂದು ರೋಟರಿ ಶಾಲೆ ಆವರಣದಲ್ಲಿ 2026ನೇ ವರ್ಷದ ಅಂಗವಾಗಿ, 26 ಗಂಟೆಗಳ ಕಾಲ ಅಹೋರಾತ್ರಿ ರಕ್ತದಾನ ಶಿಬಿರವನ್ನು ಏರ್ಪಡಿಸಿ 2026 ಮಂದಿ ದಾನಿಗಳಿಂದ ರಕ್ತ ಸಂಗ್ರಹಿಸುವ ಮೂಲಕ ಮಳವಳ್ಳಿಯಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ ಎಂದು ಘೋಷಿಸಿದರು.

ಸಾವಿರಾರು ಜನರ ಪ್ರಾಣ ಉಳಿಸುವ ಈ ಮಹತ್ಕಾರ್ಯದಲ್ಲಿ ಮಳವಳ್ಳಿಯ ಯುವಕ ಮಿತ್ರರು, ವಿದ್ಯಾರ್ಥಿಗಳು, ಸಂಘಸಂಸ್ಥೆಗಳವರು, ಮಹಿಳೆಯರು ಹಾಗೂ ಪುರುಷರು ರಕ್ತದಾನ ಮಾಡುವ ಮೂಲಕ ಭಾಗವಹಿಸಿ, ಮಳವಳ್ಳಿಯ ಕೀರ್ತಿಪತಾಕೆ ರಾಜ್ಯದಲ್ಲಿ ಮಾತ್ರವಲ್ಲದೆ ದೇಶದೆಲ್ಲೆಡೆ ಹಾರುವಂತೆ ಮಾಡಲು ಕೈಜೋಡಿಸಬೇಕೆಂದು ಮನವಿ ಮಾಡಲಾಯಿತು. ಅಲ್ಲದೆ, ಅಕ್ಕಪಕ್ಕದ ಜಿಲ್ಲೆ ಹಾಗೂ ತಾಲ್ಲೂಕುಗಳ ರಕ್ತದಾನಿಗಳು ಸಹ ಈ ಮಹತ್ಕಾರ್ಯದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಆಹ್ವಾನ ನೀಡಲಾಯಿತು.

ಈ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಟೀಮ್ ಮಳವಳ್ಳಿಯ ಹಲವು ಮುಖಂಡರು ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • ಮಂಡ್ಯ ನಗರದಲ್ಲಿ ರಾಪಿಡೋ ಬೈಕ್‌ಗಳು ಮತ್ತು ಹಳ್ಳಿಗಳಿಂದ ಬರುವ ಅಪೆ ಆಟೋಗಳಲ್ಲಿ ಜನರು ಪ್ರಯಾಣಿಸುತ್ತಿರುವುದರಿಂದ ಆಟೋ ಚಾಲಕರಿಗೆ ಬಾಡಿಗೆ ಸಿಗದೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ, ಮಂಡ್ಯದಲ್ಲಿ ಆಟೋ ಚಾಲಕರು ಮತ್ತು ಮಾಲೀಕರು ಬೃಹತ್ ಪ್ರತಿಭಟನೆ ನಡೆಸಿದರು. ಈ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿ ಅವರು ಮಂಡ್ಯದ ಆರ್‌ಟಿಓ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಸೇವಕರು ಸಂಘಟನೆಯ ಮುಖಂಡ ನಾಗಣ್ಣ ಗೌಡ, ಸರ್ಕಾರವು ಆಟೋ ಚಾಲಕರ ಕಷ್ಟಗಳಿಗೆ ಸ್ಪಂದಿಸಬೇಕು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಒತ್ತಾಯಿಸಿದರು. ರಾಪಿಡೋ ಸೇವೆಯನ್ನು ಸಂಪೂರ್ಣವಾಗಿ ರದ್ದುಪಡಿಸಲು ಮತ್ತು ಅಪೆ ಆಟೋಗಳ ಅನಿಯಂತ್ರಿತ ಸಂಚಾರಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಆಗ್ರಹಿಸಿದರು.
    1
    ಮಂಡ್ಯ ನಗರದಲ್ಲಿ ರಾಪಿಡೋ ಬೈಕ್‌ಗಳು ಮತ್ತು ಹಳ್ಳಿಗಳಿಂದ ಬರುವ ಅಪೆ ಆಟೋಗಳಲ್ಲಿ ಜನರು ಪ್ರಯಾಣಿಸುತ್ತಿರುವುದರಿಂದ ಆಟೋ ಚಾಲಕರಿಗೆ ಬಾಡಿಗೆ ಸಿಗದೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ, ಮಂಡ್ಯದಲ್ಲಿ ಆಟೋ ಚಾಲಕರು ಮತ್ತು ಮಾಲೀಕರು ಬೃಹತ್ ಪ್ರತಿಭಟನೆ ನಡೆಸಿದರು. ಈ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿ ಅವರು ಮಂಡ್ಯದ ಆರ್‌ಟಿಓ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಸೇವಕರು ಸಂಘಟನೆಯ ಮುಖಂಡ ನಾಗಣ್ಣ ಗೌಡ, ಸರ್ಕಾರವು ಆಟೋ ಚಾಲಕರ ಕಷ್ಟಗಳಿಗೆ ಸ್ಪಂದಿಸಬೇಕು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಒತ್ತಾಯಿಸಿದರು. ರಾಪಿಡೋ ಸೇವೆಯನ್ನು ಸಂಪೂರ್ಣವಾಗಿ ರದ್ದುಪಡಿಸಲು ಮತ್ತು ಅಪೆ ಆಟೋಗಳ ಅನಿಯಂತ್ರಿತ ಸಂಚಾರಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಆಗ್ರಹಿಸಿದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    3 hrs ago
  • ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ನಿರ್ವಹಣೆಗೆ ಟಾಟಾ ಪವರ್ ಕಂಪನಿಯು ಕೆ.ಇ.ಆರ್.ಸಿ.ಗೆ ಸಲ್ಲಿಸಿರುವ ಪ್ರಸ್ತಾವವನ್ನು ವಿರೋಧಿಸಿ ಕೊಳ್ಳೇಗಾಲ ಉಪವಿಭಾಗದ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಉಪವಿಭಾಗ ಸೆಸ್ಕ್ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರವು ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಎ.ಇ.ಇ. ಸುರೇಶ್ ಕುಮಾರ್ ಮಾತನಾಡಿ, ಸಾರ್ವಜನಿಕ ವಲಯದ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಬಲಪಡಿಸುವ ಬದಲು ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವುದು ಸರಿಯಲ್ಲ ಎಂದು ಹೇಳಿದರು. ಈಗಾಗಲೇ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಿರುವ ಸರ್ಕಾರಿ ಸಂಸ್ಥೆಗಳ ಅಸ್ತಿತ್ವಕ್ಕೆ ಇದು ಧಕ್ಕೆ ಉಂಟುಮಾಡಬಹುದು ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಉಪವಿಭಾಗ ಸೆಸ್ಕ್ ಕಾರ್ಯಪಾಲಕ ಅಭಿಯಂತರರು ತಬಸ್ಸುಮ್ ಅಪ್ಜಾ, ಯಳಂದೂರು ಎಇಇ ಲಿಂಗರಾಜು, ಹನೂರು ರಂಗಸ್ವಾಮಿ, ವಿಭಾಗೀಯ ಕಚೇರಿ ಎಇಇ ಶ್ರೀನಿಧಿ, ಕೇಂದ್ರ ಕಾರ್ಯಕಾರಿಣಿ ಸದಸ್ಯರು ಕೆ.ಮಹದೇವ, ಲೆಕ್ಕಾಧಿಕಾರಿ ಮತ್ತು ಕಂಪನಿ ಉಪಾಧ್ಯಕ್ಷರು ಎನ್.ಮಹೇಶ್ ಸೇರಿದಂತೆ ಎಲ್ಲಾ ನೌಕರರು ಉಪಸ್ಥಿತರಿದ್ದರು.
    1
    ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ನಿರ್ವಹಣೆಗೆ ಟಾಟಾ ಪವರ್ ಕಂಪನಿಯು ಕೆ.ಇ.ಆರ್.ಸಿ.ಗೆ ಸಲ್ಲಿಸಿರುವ ಪ್ರಸ್ತಾವವನ್ನು ವಿರೋಧಿಸಿ ಕೊಳ್ಳೇಗಾಲ ಉಪವಿಭಾಗದ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಉಪವಿಭಾಗ ಸೆಸ್ಕ್ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರವು ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಎ.ಇ.ಇ. ಸುರೇಶ್ ಕುಮಾರ್ ಮಾತನಾಡಿ, ಸಾರ್ವಜನಿಕ ವಲಯದ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಬಲಪಡಿಸುವ ಬದಲು ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವುದು ಸರಿಯಲ್ಲ ಎಂದು ಹೇಳಿದರು. ಈಗಾಗಲೇ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಿರುವ ಸರ್ಕಾರಿ ಸಂಸ್ಥೆಗಳ ಅಸ್ತಿತ್ವಕ್ಕೆ ಇದು ಧಕ್ಕೆ ಉಂಟುಮಾಡಬಹುದು ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಉಪವಿಭಾಗ ಸೆಸ್ಕ್ ಕಾರ್ಯಪಾಲಕ ಅಭಿಯಂತರರು ತಬಸ್ಸುಮ್ ಅಪ್ಜಾ, ಯಳಂದೂರು ಎಇಇ ಲಿಂಗರಾಜು, ಹನೂರು ರಂಗಸ್ವಾಮಿ, ವಿಭಾಗೀಯ ಕಚೇರಿ ಎಇಇ ಶ್ರೀನಿಧಿ, ಕೇಂದ್ರ ಕಾರ್ಯಕಾರಿಣಿ ಸದಸ್ಯರು ಕೆ.ಮಹದೇವ, ಲೆಕ್ಕಾಧಿಕಾರಿ ಮತ್ತು ಕಂಪನಿ ಉಪಾಧ್ಯಕ್ಷರು ಎನ್.ಮಹೇಶ್ ಸೇರಿದಂತೆ ಎಲ್ಲಾ ನೌಕರರು ಉಪಸ್ಥಿತರಿದ್ದರು.
    user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara•
    5 hrs ago
  • ಯಳಂದೂರು ತಾಲೂಕಿನ ಇರಸವಾಡಿ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಚರಂಡಿ ಕಾಮಗಾರಿಗಳು ಕಳಪೆಯಾಗಿವೆ ಎಂದು ಆರೋಪಿಸಿ ಗ್ರಾಮಸ್ಥರು ಗುತ್ತಿಗೆದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ರೂಪಿಸಿರುವ ಯೋಜನೆಯಂತೆ ಕಾಮಗಾರಿ ನಡೆಯುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಜಿ.ಎಲ್. ನಾಗರಾಜ ಅವರು ಈ ಕುರಿತು ಮಾತನಾಡಿ, ಚರಂಡಿಯು ಒಂದು ಮೀಟರ್ ಅಗಲವಿರಬೇಕಾಗಿದ್ದು, ಕೇವಲ 85 ಸೆಂಟಿಮೀಟರ್ ಮಾತ್ರ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ. ಅಲ್ಲದೆ, ಚರಂಡಿಯ ಎರಡೂ ಗೋಡೆಗಳು ನಾಲ್ಕು ಇಂಚು ದಪ್ಪವಿರಬೇಕಿದ್ದರೂ, ಈಗಾಗಲೇ ಕಬ್ಬಿಣದ ಸಲಾಕೆಯನ್ನು ಅಳವಡಿಸಿ ಕಾಂಕ್ರೀಟ್ ಹಾಕಲು ಜಾಗವೇ ಇಲ್ಲದಂತಾಗಿದೆ. ಇದು ಕಾಮಗಾರಿಯು ಸ್ಪಷ್ಟವಾಗಿ ಕಳಪೆಯಾಗಿರುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು. ಗ್ರಾಮಸ್ಥರು ತಕ್ಷಣವೇ ಚರಂಡಿ ಕಾಮಗಾರಿಯನ್ನು ನಿಲ್ಲಿಸಿ, ಈಗಾಗಲೇ ನಡೆದಿರುವ ಕಳಪೆ ಕಾಮಗಾರಿಯನ್ನು ತೆರವುಗೊಳಿಸಿ ಹೊಸದಾಗಿ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲಿಸಿ ಉತ್ತಮ ರೀತಿಯಲ್ಲಿ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಮಾದೇಶ್ ಸ್ವಾಮಿ, ಹರೀಶ್ ಪ್ರಸಾದ್, ಮಹೇಶ್, ಆನಂದ್, ರಂಜಿನಿ ಸೇರಿದಂತೆ ಸ್ಥಳೀಯ ಯುವಕರು ಒಂದಾಗಿ ಕಾಮಗಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.
    2
    ಯಳಂದೂರು ತಾಲೂಕಿನ ಇರಸವಾಡಿ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಚರಂಡಿ ಕಾಮಗಾರಿಗಳು ಕಳಪೆಯಾಗಿವೆ ಎಂದು ಆರೋಪಿಸಿ ಗ್ರಾಮಸ್ಥರು ಗುತ್ತಿಗೆದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ರೂಪಿಸಿರುವ ಯೋಜನೆಯಂತೆ ಕಾಮಗಾರಿ ನಡೆಯುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಹಿರಿಯ ಮುಖಂಡ ಜಿ.ಎಲ್. ನಾಗರಾಜ ಅವರು ಈ ಕುರಿತು ಮಾತನಾಡಿ, ಚರಂಡಿಯು ಒಂದು ಮೀಟರ್ ಅಗಲವಿರಬೇಕಾಗಿದ್ದು, ಕೇವಲ 85 ಸೆಂಟಿಮೀಟರ್ ಮಾತ್ರ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ. ಅಲ್ಲದೆ, ಚರಂಡಿಯ ಎರಡೂ ಗೋಡೆಗಳು ನಾಲ್ಕು ಇಂಚು ದಪ್ಪವಿರಬೇಕಿದ್ದರೂ, ಈಗಾಗಲೇ ಕಬ್ಬಿಣದ ಸಲಾಕೆಯನ್ನು ಅಳವಡಿಸಿ ಕಾಂಕ್ರೀಟ್ ಹಾಕಲು ಜಾಗವೇ ಇಲ್ಲದಂತಾಗಿದೆ. ಇದು ಕಾಮಗಾರಿಯು ಸ್ಪಷ್ಟವಾಗಿ ಕಳಪೆಯಾಗಿರುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು. ಗ್ರಾಮಸ್ಥರು ತಕ್ಷಣವೇ ಚರಂಡಿ ಕಾಮಗಾರಿಯನ್ನು ನಿಲ್ಲಿಸಿ, ಈಗಾಗಲೇ ನಡೆದಿರುವ ಕಳಪೆ ಕಾಮಗಾರಿಯನ್ನು ತೆರವುಗೊಳಿಸಿ ಹೊಸದಾಗಿ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲಿಸಿ ಉತ್ತಮ ರೀತಿಯಲ್ಲಿ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಮಾದೇಶ್ ಸ್ವಾಮಿ, ಹರೀಶ್ ಪ್ರಸಾದ್, ಮಹೇಶ್, ಆನಂದ್, ರಂಜಿನಿ ಸೇರಿದಂತೆ ಸ್ಥಳೀಯ ಯುವಕರು ಒಂದಾಗಿ ಕಾಮಗಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    5 hrs ago
  • ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ವಕ್ಫ್ ಸಮಿತಿಗಳಿಗೆ ಸಂಬಂಧಿಸಿದಂತೆ ಅಕ್ರಮಗಳು ನಡೆದಿರುವ ಬಗ್ಗೆ ವಿಷಯವು ಭಾರತದಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ವಿಚಾರವು ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.
    1
    ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ವಕ್ಫ್ ಸಮಿತಿಗಳಿಗೆ ಸಂಬಂಧಿಸಿದಂತೆ ಅಕ್ರಮಗಳು ನಡೆದಿರುವ ಬಗ್ಗೆ ವಿಷಯವು ಭಾರತದಾದ್ಯಂತ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ವಿಚಾರವು ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಗೊರಸಾಣೆ ಸರ್ಕಾರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಕೃತಿಯ ಸೊಬಗಿನ ಮಧ್ಯೆ ಇರುವ ಹೆಲಿಪ್ಯಾಡ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತೀವ ಉತ್ಸಾಹದಿಂದ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಹಸಿರಿನಿಂದ ಆವೃತವಾದ ಸುಂದರ ಪರಿಸರದಲ್ಲಿ ಯೋಗಾಭ್ಯಾಸ ನಡೆಸುವುದರಿಂದ ಅವರಿಗೆ ಶಾಂತ, ಆಹ್ಲಾದಕರ ಹಾಗೂ ಆರೋಗ್ಯಕರ ವಾತಾವರಣ ದೊರೆಯಿತು. ಈ ಸಂದರ್ಭದಲ್ಲಿ ಯೋಗದ ಮಹತ್ವ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಯೋಗವು ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಆರೋಗ್ಯ ವೃದ್ಧಿಗೆ ಸಹಕಾರಿಯಾಗುವುದರಿಂದ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕೆಂದು ಶಿಕ್ಷಕರು ತಿಳಿಸಿದರು. ಭಾನುವಾರ ರಜೆಯ ದಿನವಾಗಿದ್ದರೂ, ಅಂತರರಾಷ್ಟ್ರೀಯ ಯೋಗ ದಿನದ ವಿಶೇಷತೆಯನ್ನು ಸಮಾಜಕ್ಕೆ ಉತ್ತಮ ಸಂದೇಶದ ರೂಪದಲ್ಲಿ ತಲುಪಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಮ್ಮ ನಿರಂತರ ಅಭ್ಯಾಸ, ಶಿಸ್ತು, ಸಮರ್ಪಣೆ ಹಾಗೂ ಶಿಕ್ಷಕರೊಂದಿಗೆ ಹೊಂದಿರುವ ಉತ್ತಮ ಸಹಕಾರ ಮನೋಭಾವವನ್ನು ಈ ಕಾರ್ಯಕ್ರಮದ ಮೂಲಕ ಪ್ರದರ್ಶಿಸಿದರು. ಯೋಗದ ಮೂಲಕ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಅರಿತು, ಅದನ್ನು ತಮ್ಮ ಬದುಕಿನ ಭಾಗವನ್ನಾಗಿ ಮಾಡಿಕೊಳ್ಳುವ ಸಂಕಲ್ಪವನ್ನು ವ್ಯಕ್ತಪಡಿಸಿದರು, ತಮ್ಮ ಉಜ್ವಲ ಭವಿಷ್ಯಕ್ಕೆ ತಾವೇ ಸಾಕ್ಷಿಯಾದರು. ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಪ್ರಕಾಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಲಿಯಾಕತ್, ಪಿ. ಮಹೇಶ್, ರಂಗಸ್ವಾಮಿ, ಚಾಂದ್ ಪಾಷಾ, ಸಿದ್ದೇಶ್ ಹಾಗೂ ಶಿವಕುಮಾರ್ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
    4
    ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಗೊರಸಾಣೆ ಸರ್ಕಾರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಕೃತಿಯ ಸೊಬಗಿನ ಮಧ್ಯೆ ಇರುವ ಹೆಲಿಪ್ಯಾಡ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತೀವ ಉತ್ಸಾಹದಿಂದ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು. ಹಸಿರಿನಿಂದ ಆವೃತವಾದ ಸುಂದರ ಪರಿಸರದಲ್ಲಿ ಯೋಗಾಭ್ಯಾಸ ನಡೆಸುವುದರಿಂದ ಅವರಿಗೆ ಶಾಂತ, ಆಹ್ಲಾದಕರ ಹಾಗೂ ಆರೋಗ್ಯಕರ ವಾತಾವರಣ ದೊರೆಯಿತು.

ಈ ಸಂದರ್ಭದಲ್ಲಿ ಯೋಗದ ಮಹತ್ವ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಯೋಗವು ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಆರೋಗ್ಯ ವೃದ್ಧಿಗೆ ಸಹಕಾರಿಯಾಗುವುದರಿಂದ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕೆಂದು ಶಿಕ್ಷಕರು ತಿಳಿಸಿದರು. ಭಾನುವಾರ ರಜೆಯ ದಿನವಾಗಿದ್ದರೂ, ಅಂತರರಾಷ್ಟ್ರೀಯ ಯೋಗ ದಿನದ ವಿಶೇಷತೆಯನ್ನು ಸಮಾಜಕ್ಕೆ ಉತ್ತಮ ಸಂದೇಶದ ರೂಪದಲ್ಲಿ ತಲುಪಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳು ತಮ್ಮ ನಿರಂತರ ಅಭ್ಯಾಸ, ಶಿಸ್ತು, ಸಮರ್ಪಣೆ ಹಾಗೂ ಶಿಕ್ಷಕರೊಂದಿಗೆ ಹೊಂದಿರುವ ಉತ್ತಮ ಸಹಕಾರ ಮನೋಭಾವವನ್ನು ಈ ಕಾರ್ಯಕ್ರಮದ ಮೂಲಕ ಪ್ರದರ್ಶಿಸಿದರು. ಯೋಗದ ಮೂಲಕ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಅರಿತು, ಅದನ್ನು ತಮ್ಮ ಬದುಕಿನ ಭಾಗವನ್ನಾಗಿ ಮಾಡಿಕೊಳ್ಳುವ ಸಂಕಲ್ಪವನ್ನು ವ್ಯಕ್ತಪಡಿಸಿದರು, ತಮ್ಮ ಉಜ್ವಲ ಭವಿಷ್ಯಕ್ಕೆ ತಾವೇ ಸಾಕ್ಷಿಯಾದರು. ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಪ್ರಕಾಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಲಿಯಾಕತ್, ಪಿ. ಮಹೇಶ್, ರಂಗಸ್ವಾಮಿ, ಚಾಂದ್ ಪಾಷಾ, ಸಿದ್ದೇಶ್ ಹಾಗೂ ಶಿವಕುಮಾರ್ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    10 hrs ago
  • ೭೦೦ ವರ್ಷಗಳ ಇತಿಹಾಸವಿರುವ ಕನಕಪುರ ದೇಗುಲ ಮಠಾಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಭಕ್ತರು ಪೂಜ್ಯರ ಅಂತಿಮ ದರ್ಶನಕ್ಕಾಗಿ ದೇಗುಲ ಮಠದತ್ತ ಧಾವಿಸುತ್ತಿದ್ದು, ಮಠದಲ್ಲಿ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಭಕ್ತ ಸಮೂಹವು ಕಂಬನಿ ಮಿಡಿಯುತ್ತಾ ಶೋಕಸಾಗರದಲ್ಲಿ ಮುಳುಗಿದೆ. ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣಸ್ವಾಮಿಗಳು ಲಕ್ಷಾಂತರ ಭಕ್ತರ ಹೃದಯದಲ್ಲಿ ನೆಲೆಸಿದ್ದು, ಸರ್ವ ಭಕ್ತರ ಓಡೆಯರಾಗಿ ಸರಳ ಹಾಗೂ ಮೃದು ಸ್ವಭಾವದವರಾಗಿದ್ದರು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರೂ, ತಮ್ಮ ಭಕ್ತರ ಕೋರಿಕೆಯ ಮೇರೆಗೆ ಮನೆಗಳಿಗೆ, ಸಭೆ-ಸಮಾರಂಭಗಳಿಗೆ ಆಗಮಿಸಿ ಆಶೀರ್ವದಿಸುತ್ತಿದ್ದರು. ಮಳವಳ್ಳಿಯಲ್ಲಿ ನಡೆದ ಐತಿಹಾಸಿಕ ಸುತ್ತೂರಿನ ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ೧೦೬೬ನೇ ಜಯಂತಿ ಮಹೋತ್ಸವದ ರೂವಾರಿಗಳಾಗಿದ್ದ ಅವರು, ಸುತ್ತೂರು ಜಯಂತಿ ಮಹೋತ್ಸವದ ಯಶಸ್ವಿ ಆಚರಣೆ ಅವರ ಕನಸಾಗಿತ್ತು. ಇದಲ್ಲದೆ, ಅವರು ಡಿಹಲಸಹಳ್ಳಿ ಷಡಕ್ಷರಿ ಗವಿಮಠದ ಕಾರ್ಯಕ್ರಮಕ್ಕೂ ಆಗಮಿಸಿ, ಗವಿಮಠದ ಅಭಿವೃದ್ಧಿ ಹಾಗೂ ಷಡಕ್ಷರ ಸ್ವಾಮಿಗಳ ಸೇವೆಯ ಕಾಯಕದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು. ಪರಮಪೂಜ್ಯರ ಲಿಂಗೈಕ್ಯಕ್ಕೆ ಸುತ್ತೂರು ಶ್ರೀಗಳು ಸೇರಿದಂತೆ ನಾಡಿನ ಹರಗುರು ಚರಮೂರ್ತಿಗಳು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಮಠಕ್ಕೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.
    1
    ೭೦೦ ವರ್ಷಗಳ ಇತಿಹಾಸವಿರುವ ಕನಕಪುರ ದೇಗುಲ ಮಠಾಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಭಕ್ತರು ಪೂಜ್ಯರ ಅಂತಿಮ ದರ್ಶನಕ್ಕಾಗಿ ದೇಗುಲ ಮಠದತ್ತ ಧಾವಿಸುತ್ತಿದ್ದು, ಮಠದಲ್ಲಿ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಭಕ್ತ ಸಮೂಹವು ಕಂಬನಿ ಮಿಡಿಯುತ್ತಾ ಶೋಕಸಾಗರದಲ್ಲಿ ಮುಳುಗಿದೆ.

ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣಸ್ವಾಮಿಗಳು ಲಕ್ಷಾಂತರ ಭಕ್ತರ ಹೃದಯದಲ್ಲಿ ನೆಲೆಸಿದ್ದು, ಸರ್ವ ಭಕ್ತರ ಓಡೆಯರಾಗಿ ಸರಳ ಹಾಗೂ ಮೃದು ಸ್ವಭಾವದವರಾಗಿದ್ದರು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರೂ, ತಮ್ಮ ಭಕ್ತರ ಕೋರಿಕೆಯ ಮೇರೆಗೆ ಮನೆಗಳಿಗೆ, ಸಭೆ-ಸಮಾರಂಭಗಳಿಗೆ ಆಗಮಿಸಿ ಆಶೀರ್ವದಿಸುತ್ತಿದ್ದರು. ಮಳವಳ್ಳಿಯಲ್ಲಿ ನಡೆದ ಐತಿಹಾಸಿಕ ಸುತ್ತೂರಿನ ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ೧೦೬೬ನೇ ಜಯಂತಿ ಮಹೋತ್ಸವದ ರೂವಾರಿಗಳಾಗಿದ್ದ ಅವರು, ಸುತ್ತೂರು ಜಯಂತಿ ಮಹೋತ್ಸವದ ಯಶಸ್ವಿ ಆಚರಣೆ ಅವರ ಕನಸಾಗಿತ್ತು. ಇದಲ್ಲದೆ, ಅವರು ಡಿಹಲಸಹಳ್ಳಿ ಷಡಕ್ಷರಿ ಗವಿಮಠದ ಕಾರ್ಯಕ್ರಮಕ್ಕೂ ಆಗಮಿಸಿ, ಗವಿಮಠದ ಅಭಿವೃದ್ಧಿ ಹಾಗೂ ಷಡಕ್ಷರ ಸ್ವಾಮಿಗಳ ಸೇವೆಯ ಕಾಯಕದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು.

ಪರಮಪೂಜ್ಯರ ಲಿಂಗೈಕ್ಯಕ್ಕೆ ಸುತ್ತೂರು ಶ್ರೀಗಳು ಸೇರಿದಂತೆ ನಾಡಿನ ಹರಗುರು ಚರಮೂರ್ತಿಗಳು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಮಠಕ್ಕೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.