ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಸಂಪೂರ್ಣ ನಿರ್ಮೂಲನೆಗೆ ಆಗ್ರಹ: 2013ರ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಒತ್ತಾಯ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಸಂಪೂರ್ಣ ನಿರ್ಮೂಲನೆಗೆ ಆಗ್ರಹ: 2013ರ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಒತ್ತಾಯ ಬಳ್ಳಾರಿ, ಆ.27: ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಹಾಗೂ ಮಲಹೊರುವ ವೃತ್ತಿಯಲ್ಲಿ ನೇಮಕ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ–2013ನ್ನು ರಾಜ್ಯಾದ್ಯಂತ ಸಮಗ್ರವಾಗಿ ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನ–2026ರ ಅಂಗವಾಗಿ ನಗರದ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಮಟ್ಟದ ಜನಜಾಗೃತಿ ಜಾಥಾ ನಡೆಸಲಾಯಿತು. ಜಾಥಾದ ಬಳಿಕ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು. ಮನುಷ್ಯರನ್ನು ಮಲ, ಮಲಮಿಶ್ರಿತ ತ್ಯಾಜ್ಯ, ಒಳಚರಂಡಿ, ಸೆಪ್ಟಿಕ್ ಟ್ಯಾಂಕ್ ಹಾಗೂ ಮ್ಯಾನ್ಹೋಲ್ಗಳನ್ನು ಸ್ವಚ್ಛಗೊಳಿಸಲು ಸೂಕ್ತ ಸುರಕ್ಷತಾ ವ್ಯವಸ್ಥೆಗಳಿಲ್ಲದೆ ನಿಯೋಜಿಸುವುದು ಅಮಾನವೀಯ ಮಾತ್ರವಲ್ಲದೆ ಕಾನೂನುಬಾಹಿರ ಕೃತ್ಯವಾಗಿದೆ. ಇಂತಹ ಅಪಾಯಕಾರಿ ಕೆಲಸಗಳಿಂದ ವಿಷಕಾರಿ ಅನಿಲ ಸೇವಿಸಿ ಹಾಗೂ ಉಸಿರುಗಟ್ಟಿ ಕಾರ್ಮಿಕರು ಸಾವನ್ನಪ್ಪುತ್ತಿರುವ ಘಟನೆಗಳು ಇಂದಿಗೂ ನಡೆಯುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಅಭಿಯಾನಕಾರರು ಹೇಳಿದರು. ಭಾರತೀಯ ಸಂವಿಧಾನದ ವಿಧಿ–17 ಅಸ್ಪೃಶ್ಯತೆಯನ್ನು ನಿಷೇಧಿಸಿದ್ದು, ವಿಧಿ–21 ಪ್ರತಿಯೊಬ್ಬರಿಗೂ ಗೌರವಯುತವಾಗಿ ಬದುಕುವ ಹಕ್ಕನ್ನು ಖಾತ್ರಿಪಡಿಸಿದೆ. ಈ ಹಿನ್ನೆಲೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಈ ವೃತ್ತಿಯಲ್ಲಿ ತೊಡಗಿರುವ ಕುಟುಂಬಗಳಿಗೆ ಗೌರವಯುತ ಜೀವನ, ಮನೆ, ಉದ್ಯೋಗ, ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು. 2013ರ ಕಾಯ್ದೆಯನ್ವಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮಗ್ರ, ಪಾರದರ್ಶಕ ಹಾಗೂ ನಿಯಮಾನುಸಾರ ಸಮೀಕ್ಷೆ ನಡೆಸಿ, ಸ್ವಯಂ ಘೋಷಣೆಯ ಮೂಲಕವೂ ಅರ್ಹರನ್ನು ಗುರುತಿಸಬೇಕು. ಗುರುತಿಸಲ್ಪಟ್ಟ ಪ್ರತಿಯೊಬ್ಬರಿಗೂ ಕಾನೂನಿನ ಪ್ರಕಾರ ತ್ವರಿತವಾಗಿ ಸಂಪೂರ್ಣ ಪುನರ್ವಸತಿ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನೆ ಅಥವಾ ನಿವೇಶನವಿಲ್ಲದ ಕುಟುಂಬಗಳಿಗೆ ಉಚಿತ ನಿವೇಶನ ಅಥವಾ ಪಕ್ಕಾ ಮನೆ, ಅರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ಶಾಶ್ವತ ಪರ್ಯಾಯ ಉದ್ಯೋಗ, ಸ್ವಯಂ ಉದ್ಯೋಗಕ್ಕಾಗಿ ಕೌಶಲ್ಯ ತರಬೇತಿ, ಉಪಕರಣಗಳು, ಬಂಡವಾಳ, ಸಾಲ ಹಾಗೂ ಅಗತ್ಯ ಆರ್ಥಿಕ ನೆರವು ನೀಡಬೇಕು. ಆರೋಗ್ಯ ವಿಮೆ ಮತ್ತು ಆರೋಗ್ಯ ಕಾರ್ಡ್ ಒದಗಿಸಿ, ಅಗತ್ಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕೆಲಸ ಮಾಡಲು ಅಸಮರ್ಥರಾಗಿರುವವರಿಗೆ ಸಮರ್ಪಕ ಮಾಸಿಕ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನೂ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳು ಹಾಗೂ ಸಫಾಯಿಕರ್ಮಚಾರಿಗಳ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ವಸತಿ ಶಾಲೆ, ಶಾಲೆ, ಕಾಲೇಜು, ಉನ್ನತ ಹಾಗೂ ತಾಂತ್ರಿಕ ಶಿಕ್ಷಣದಲ್ಲಿ ವಿಶೇಷ ಅವಕಾಶ ಮತ್ತು ವಿದ್ಯಾರ್ಥಿವೇತನ ನೀಡುವುದರ ಜತೆಗೆ, ಮಕ್ಕಳು ಶಾಲೆಯನ್ನು ಮಧ್ಯದಲ್ಲೇ ತೊರೆದು ಪೋಷಕರ ವೃತ್ತಿಗೆ ಸೇರುವುದನ್ನು ತಡೆಯಲು ಅವರ ವಸತಿ ಪ್ರದೇಶಗಳಲ್ಲಿ ಮಕ್ಕಳ ಕಲಿಕಾ ಕೇಂದ್ರಗಳಾದ ‘ಭೀಮ ಶಾಲೆ’ಗಳನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಲಾಗಿದೆ. ಸೆಪ್ಟಿಕ್ ಟ್ಯಾಂಕ್, ಮ್ಯಾನ್ಹೋಲ್ ಹಾಗೂ ಮಲದ ಗುಂಡಿಗಳಿಗೆ ಕಾರ್ಮಿಕರನ್ನು ಸೂಕ್ತ ಸುರಕ್ಷತಾ ಸಾಧನ, ತರಬೇತಿ ಮತ್ತು ವೈಜ್ಞಾನಿಕ ಸುರಕ್ಷತಾ ಮಾನದಂಡಗಳಿಲ್ಲದೆ ಇಳಿಸುವುದನ್ನು ಸಂಪೂರ್ಣವಾಗಿ ತಡೆಯಬೇಕು. ಮಲಸ್ವಚ್ಛತಾ ಕಾರ್ಯವನ್ನು ಆಧುನಿಕ ಯಂತ್ರೋಪಕರಣಗಳ ಮೂಲಕವೇ ನಿರ್ವಹಿಸುವುದನ್ನು ಕಡ್ಡಾಯಗೊಳಿಸಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯವಿರುವ ಕಡೆ ತಕ್ಷಣ ಯಂತ್ರೋಪಕರಣಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಲಾಗಿದೆ. ಅದೇ ರೀತಿ, ಈ ವೃತ್ತಿಯಲ್ಲಿಯೇ ಮುಂದುವರಿಯಲು ಇಚ್ಛಿಸುವವರಿಗೆ ಆಧುನಿಕ ಸ್ವಚ್ಛತಾ ಯಂತ್ರೋಪಕರಣಗಳನ್ನು ಉಚಿತವಾಗಿ ಒದಗಿಸಿ, ಅವುಗಳ ಬಳಕೆಯ ಕುರಿತು ತರಬೇತಿ ನೀಡಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಗಳು, ಸಮುದಾಯ ಭವನಗಳು, ಉದ್ಯಾನಗಳು ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳ ನಿರ್ವಹಣಾ ಕಾರ್ಯಗಳನ್ನು ಗುರುತಿಸಲ್ಪಟ್ಟ ಸ್ಕ್ಯಾವೆಂಜರ್ ಕುಟುಂಬಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ಮಲದಗುಂಡಿ ಅಥವಾ ಒಳಚರಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಕಾರ್ಮಿಕರ ಅವಲಂಬಿತರಿಗೆ ಸರ್ಕಾರಿ ಉದ್ಯೋಗದ ಜತೆಗೆ ಸೂಕ್ತ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಬೇಕು. ಕಾಯ್ದೆಯ ಉಲ್ಲಂಘನೆ ಮಾಡುವ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿಯಮಿತ ತರಬೇತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮಕ್ಕೆ ಅಗತ್ಯವಿರುವಷ್ಟು ಹಣಕಾಸು ಒದಗಿಸಿ, ನಿಗಮದ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಹೆಚ್ಚಿಸಬೇಕು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಪುನರ್ವಸತಿಗಾಗಿ ಪ್ರತ್ಯೇಕ ಕೋಶ ರಚಿಸಿ, ಅದರ ನಿರ್ವಹಣೆ ಮತ್ತು ಮೇಲ್ವಿಚಾರಣೆಯಲ್ಲಿ ಉನ್ನತಾಧಿಕಾರಿಗಳ ಜತೆಗೆ ಈ ಸಮುದಾಯದ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ಎಲ್ಲ ಬೇಡಿಕೆಗಳನ್ನು ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ರಾಜ್ಯ ಮೇಲ್ವಿಚಾರಣಾ ಸಮಿತಿಯ ಸಭೆಯನ್ನು ಕೂಡಲೇ ಕರೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 2013ರ ಕಾಯ್ದೆಯ ಸಮಗ್ರ ಅನುಷ್ಠಾನಕ್ಕೆ ಒತ್ತಾಯಿಸಿ ರಾಜ್ಯ ಮಟ್ಟದ ಜನಜಾಗೃತಿ ಜಾಥಾ ಆ.24ರಿಂದ ಸೆ.2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಡಾ. ಕೆ.ಬಿ. ಓಬಳೇಶ, ರಾಜ್ಯ ಸಮಿತಿ ಸದಸ್ಯ ಡಾ. ಆರ್.ವಿ. ಚಂದ್ರಶೇಖರ್, ರಾಜ್ಯ ಸಂಚಾಲಕಿ ಶ್ರೀಮತಿ ಪದ್ಮ ಎಂ., ಜಿಲ್ಲಾ ಸಂಯೋಜಕ ಕಂಜಕೂರು ರಾಮುಡು ಸೇರಿದಂತೆ ಬಳ್ಳಾರಿ ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಸಂಪೂರ್ಣ ನಿರ್ಮೂಲನೆಗೆ ಆಗ್ರಹ: 2013ರ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಒತ್ತಾಯ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಸಂಪೂರ್ಣ ನಿರ್ಮೂಲನೆಗೆ ಆಗ್ರಹ: 2013ರ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಒತ್ತಾಯ ಬಳ್ಳಾರಿ, ಆ.27: ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಹಾಗೂ ಮಲಹೊರುವ ವೃತ್ತಿಯಲ್ಲಿ ನೇಮಕ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ–2013ನ್ನು ರಾಜ್ಯಾದ್ಯಂತ ಸಮಗ್ರವಾಗಿ ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನ–2026ರ ಅಂಗವಾಗಿ ನಗರದ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಮಟ್ಟದ ಜನಜಾಗೃತಿ ಜಾಥಾ ನಡೆಸಲಾಯಿತು. ಜಾಥಾದ ಬಳಿಕ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು. ಮನುಷ್ಯರನ್ನು ಮಲ, ಮಲಮಿಶ್ರಿತ ತ್ಯಾಜ್ಯ, ಒಳಚರಂಡಿ, ಸೆಪ್ಟಿಕ್ ಟ್ಯಾಂಕ್ ಹಾಗೂ ಮ್ಯಾನ್ಹೋಲ್ಗಳನ್ನು ಸ್ವಚ್ಛಗೊಳಿಸಲು ಸೂಕ್ತ ಸುರಕ್ಷತಾ ವ್ಯವಸ್ಥೆಗಳಿಲ್ಲದೆ ನಿಯೋಜಿಸುವುದು ಅಮಾನವೀಯ ಮಾತ್ರವಲ್ಲದೆ ಕಾನೂನುಬಾಹಿರ ಕೃತ್ಯವಾಗಿದೆ. ಇಂತಹ ಅಪಾಯಕಾರಿ ಕೆಲಸಗಳಿಂದ ವಿಷಕಾರಿ ಅನಿಲ ಸೇವಿಸಿ ಹಾಗೂ ಉಸಿರುಗಟ್ಟಿ ಕಾರ್ಮಿಕರು ಸಾವನ್ನಪ್ಪುತ್ತಿರುವ ಘಟನೆಗಳು ಇಂದಿಗೂ ನಡೆಯುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಅಭಿಯಾನಕಾರರು ಹೇಳಿದರು. ಭಾರತೀಯ ಸಂವಿಧಾನದ ವಿಧಿ–17 ಅಸ್ಪೃಶ್ಯತೆಯನ್ನು ನಿಷೇಧಿಸಿದ್ದು, ವಿಧಿ–21 ಪ್ರತಿಯೊಬ್ಬರಿಗೂ ಗೌರವಯುತವಾಗಿ ಬದುಕುವ ಹಕ್ಕನ್ನು ಖಾತ್ರಿಪಡಿಸಿದೆ. ಈ ಹಿನ್ನೆಲೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಈ ವೃತ್ತಿಯಲ್ಲಿ ತೊಡಗಿರುವ ಕುಟುಂಬಗಳಿಗೆ ಗೌರವಯುತ ಜೀವನ, ಮನೆ, ಉದ್ಯೋಗ, ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು. 2013ರ ಕಾಯ್ದೆಯನ್ವಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮಗ್ರ, ಪಾರದರ್ಶಕ ಹಾಗೂ ನಿಯಮಾನುಸಾರ ಸಮೀಕ್ಷೆ ನಡೆಸಿ, ಸ್ವಯಂ ಘೋಷಣೆಯ ಮೂಲಕವೂ ಅರ್ಹರನ್ನು ಗುರುತಿಸಬೇಕು. ಗುರುತಿಸಲ್ಪಟ್ಟ ಪ್ರತಿಯೊಬ್ಬರಿಗೂ ಕಾನೂನಿನ ಪ್ರಕಾರ ತ್ವರಿತವಾಗಿ ಸಂಪೂರ್ಣ ಪುನರ್ವಸತಿ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನೆ ಅಥವಾ ನಿವೇಶನವಿಲ್ಲದ ಕುಟುಂಬಗಳಿಗೆ ಉಚಿತ ನಿವೇಶನ ಅಥವಾ ಪಕ್ಕಾ ಮನೆ, ಅರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ಶಾಶ್ವತ ಪರ್ಯಾಯ ಉದ್ಯೋಗ, ಸ್ವಯಂ ಉದ್ಯೋಗಕ್ಕಾಗಿ ಕೌಶಲ್ಯ ತರಬೇತಿ, ಉಪಕರಣಗಳು, ಬಂಡವಾಳ, ಸಾಲ ಹಾಗೂ ಅಗತ್ಯ ಆರ್ಥಿಕ ನೆರವು ನೀಡಬೇಕು. ಆರೋಗ್ಯ ವಿಮೆ ಮತ್ತು ಆರೋಗ್ಯ ಕಾರ್ಡ್ ಒದಗಿಸಿ, ಅಗತ್ಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕೆಲಸ ಮಾಡಲು ಅಸಮರ್ಥರಾಗಿರುವವರಿಗೆ ಸಮರ್ಪಕ ಮಾಸಿಕ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನೂ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳು ಹಾಗೂ ಸಫಾಯಿಕರ್ಮಚಾರಿಗಳ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ವಸತಿ ಶಾಲೆ, ಶಾಲೆ, ಕಾಲೇಜು, ಉನ್ನತ ಹಾಗೂ ತಾಂತ್ರಿಕ ಶಿಕ್ಷಣದಲ್ಲಿ ವಿಶೇಷ ಅವಕಾಶ ಮತ್ತು ವಿದ್ಯಾರ್ಥಿವೇತನ ನೀಡುವುದರ ಜತೆಗೆ, ಮಕ್ಕಳು ಶಾಲೆಯನ್ನು ಮಧ್ಯದಲ್ಲೇ ತೊರೆದು ಪೋಷಕರ ವೃತ್ತಿಗೆ ಸೇರುವುದನ್ನು ತಡೆಯಲು ಅವರ ವಸತಿ ಪ್ರದೇಶಗಳಲ್ಲಿ ಮಕ್ಕಳ ಕಲಿಕಾ ಕೇಂದ್ರಗಳಾದ ‘ಭೀಮ ಶಾಲೆ’ಗಳನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಲಾಗಿದೆ. ಸೆಪ್ಟಿಕ್ ಟ್ಯಾಂಕ್, ಮ್ಯಾನ್ಹೋಲ್ ಹಾಗೂ ಮಲದ ಗುಂಡಿಗಳಿಗೆ ಕಾರ್ಮಿಕರನ್ನು ಸೂಕ್ತ ಸುರಕ್ಷತಾ ಸಾಧನ, ತರಬೇತಿ ಮತ್ತು ವೈಜ್ಞಾನಿಕ ಸುರಕ್ಷತಾ ಮಾನದಂಡಗಳಿಲ್ಲದೆ ಇಳಿಸುವುದನ್ನು ಸಂಪೂರ್ಣವಾಗಿ ತಡೆಯಬೇಕು. ಮಲಸ್ವಚ್ಛತಾ ಕಾರ್ಯವನ್ನು ಆಧುನಿಕ ಯಂತ್ರೋಪಕರಣಗಳ ಮೂಲಕವೇ ನಿರ್ವಹಿಸುವುದನ್ನು ಕಡ್ಡಾಯಗೊಳಿಸಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯವಿರುವ ಕಡೆ ತಕ್ಷಣ ಯಂತ್ರೋಪಕರಣಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಲಾಗಿದೆ. ಅದೇ ರೀತಿ, ಈ ವೃತ್ತಿಯಲ್ಲಿಯೇ ಮುಂದುವರಿಯಲು ಇಚ್ಛಿಸುವವರಿಗೆ ಆಧುನಿಕ ಸ್ವಚ್ಛತಾ ಯಂತ್ರೋಪಕರಣಗಳನ್ನು ಉಚಿತವಾಗಿ ಒದಗಿಸಿ, ಅವುಗಳ ಬಳಕೆಯ ಕುರಿತು ತರಬೇತಿ ನೀಡಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಗಳು, ಸಮುದಾಯ ಭವನಗಳು, ಉದ್ಯಾನಗಳು ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳ ನಿರ್ವಹಣಾ ಕಾರ್ಯಗಳನ್ನು ಗುರುತಿಸಲ್ಪಟ್ಟ ಸ್ಕ್ಯಾವೆಂಜರ್ ಕುಟುಂಬಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ಮಲದಗುಂಡಿ ಅಥವಾ ಒಳಚರಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಕಾರ್ಮಿಕರ ಅವಲಂಬಿತರಿಗೆ ಸರ್ಕಾರಿ ಉದ್ಯೋಗದ ಜತೆಗೆ ಸೂಕ್ತ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಬೇಕು. ಕಾಯ್ದೆಯ ಉಲ್ಲಂಘನೆ ಮಾಡುವ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿಯಮಿತ ತರಬೇತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮಕ್ಕೆ ಅಗತ್ಯವಿರುವಷ್ಟು ಹಣಕಾಸು ಒದಗಿಸಿ, ನಿಗಮದ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಹೆಚ್ಚಿಸಬೇಕು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಪುನರ್ವಸತಿಗಾಗಿ ಪ್ರತ್ಯೇಕ ಕೋಶ ರಚಿಸಿ, ಅದರ ನಿರ್ವಹಣೆ ಮತ್ತು ಮೇಲ್ವಿಚಾರಣೆಯಲ್ಲಿ ಉನ್ನತಾಧಿಕಾರಿಗಳ ಜತೆಗೆ ಈ ಸಮುದಾಯದ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ಎಲ್ಲ ಬೇಡಿಕೆಗಳನ್ನು ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ರಾಜ್ಯ ಮೇಲ್ವಿಚಾರಣಾ ಸಮಿತಿಯ ಸಭೆಯನ್ನು ಕೂಡಲೇ ಕರೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 2013ರ ಕಾಯ್ದೆಯ ಸಮಗ್ರ ಅನುಷ್ಠಾನಕ್ಕೆ ಒತ್ತಾಯಿಸಿ ರಾಜ್ಯ ಮಟ್ಟದ ಜನಜಾಗೃತಿ ಜಾಥಾ ಆ.24ರಿಂದ ಸೆ.2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಡಾ. ಕೆ.ಬಿ. ಓಬಳೇಶ, ರಾಜ್ಯ ಸಮಿತಿ ಸದಸ್ಯ ಡಾ. ಆರ್.ವಿ. ಚಂದ್ರಶೇಖರ್, ರಾಜ್ಯ ಸಂಚಾಲಕಿ ಶ್ರೀಮತಿ ಪದ್ಮ ಎಂ., ಜಿಲ್ಲಾ ಸಂಯೋಜಕ ಕಂಜಕೂರು ರಾಮುಡು ಸೇರಿದಂತೆ ಬಳ್ಳಾರಿ ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
- ವಿಶೇಷ ಮಕ್ಕಳೊಂದಿಗೆ ಸಂಭ್ರಮಿಸಿದ ‘ನಮ್ಮ ನಡೆ ಶಾಲೆ ಕಡೆ’ ತಂಡದಿಂದ ಮಕ್ಕಳನ್ನು ರಂಜಿಸಿದರು ಕೂಡ್ಲಿಗಿ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಪಟ್ಟಣದ ಪ್ರತಿಷ್ಠಾ ಮಾನಸಿಕ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ‘ನಮ್ಮ ನಡೆ ಶಾಲೆ ಕಡೆ’ ತಂಡದ ವತಿಯಿಂದ ವಿಶೇಷ ಮಕ್ಕಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯುವುದರ ಜೊತೆಗೆ ಹಲವಾರು ಭಾವಗೀತೆಗಳು ಹಾಗೂ ಮಕ್ಕಳಿಗೆ ಪ್ರೇರಣೆ ನೀಡುವ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು. ಈ ಸಂದರ್ಭದಲ್ಲಿ ತಂಡದ ಸದಸ್ಯರು ವಿಶೇಷ ಮಕ್ಕಳೊಂದಿಗೆ ಕೆಲಕಾಲ ಆತ್ಮೀಯವಾಗಿ ಬೆರೆತು, ಅವರೊಂದಿಗೆ ಸಂತಸ ಹಂಚಿಕೊಂಡರು. ಮಕ್ಕಳಲ್ಲಿ ಉತ್ಸಾಹ ಹಾಗೂ ಸಂತಸ ಮೂಡಿಸುವ ಉದ್ದೇಶದಿಂದ ಹಲವಾರು ಭಾವಗೀತೆಗಳು ಹಾಗೂ ಪ್ರೇರಣಾದಾಯಕ ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು. ತಂಡದ ಸದಸ್ಯರೊಂದಿಗೆ ಮಕ್ಕಳು ಸಂತಸದಿಂದ ಕಾಲ ಕಳೆಯುವ ಮೂಲಕ ಕಾರ್ಯಕ್ರಮದಲ್ಲಿ ಉಲ್ಲಾಸದ ವಾತಾವರಣ ನಿರ್ಮಾಣವಾಯಿತು. ವಿಶೇಷ ಮಕ್ಕಳೊಂದಿಗೆ ಸಮಯ ಕಳೆಯುವ ಮೂಲಕ ಮಾನವೀಯತೆ, ಪ್ರೀತಿ ಮತ್ತು ಸಾಮಾಜಿಕ ಕಾಳಜಿಯ ಸಂದೇಶವನ್ನು ಸಾರಿದ ‘ನಮ್ಮ ನಡೆ ಶಾಲೆ ಕಡೆ’ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಶಾಸಕರ ಜನ್ಮದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿಶೇಷ ಮಕ್ಕಳ ಮುಖದಲ್ಲಿ ನಗು ಮೂಡಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೇಳೆ ಶಾಸಕರ ವಾಹನ ಚಾಲಕ ಖಾಜಾ ಹುಸೇನ್ ಅವರು ಶಾಸಕರ ಆಪ್ತ ಬಳಗದ ಪರವಾಗಿ ಶಾಲೆಯ ಮಕ್ಕಳು, ಸಿಬ್ಬಂದಿ ಹಾಗೂ ತಂಡದವರಿಗೆ ಸಿಹಿಯೊಂದಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದ್ದರು. ಹಾಗೂ ಹೊಸ ಹೊಸಹಳ್ಳಿಯ ಯುವ ಮುಖಂಡ ಸೂರ್ಯ ಪ್ರಕಾಶ್ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳ ಪರವಾಗಿ, ಕೂಡ್ಲಿಗಿ ಶಾಸಕರಾದ ಎನ್.ಟಿ. ಶ್ರೀನಿವಾಸ್ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಮಕ್ಕಳು ಹಾಗೂ ಸಿಬ್ಬಂದಿಗಳಿಗೆ ಸಿಹಿ ಭೋಜನದ ವ್ಯವಸ್ಥೆ ಮಾಡಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಬಸವರಾಜ್, ಕಾರ್ಯದರ್ಶಿ ಪುಷ್ಪಲತಾ ಹಾಗೂ ತಾಲ್ಲೂಕು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿ ನುಂಕನಗೌಡ, ಹ್ಯಾಟಿ ರಾಘವೇಂದ್ರ, ಸಿಬ್ಬಂದಿಗಳಾದ ಒಬ್ಬಮ್ಮ, ಚಂದ್ರಿಕಾ ಮತ್ತು ಅಭಿಷೇಕ್ ಹಾಗೂ ರಂಗ ನಿರ್ದೇಶಕ ಹರೀಶ್ ಜಿಂಕೆ ನಿರ್ದೇಶನದಲ್ಲಿ ಕಲಾವಿದರಾದ ಶಂಕ್ರಪ್ಪ, ಧಾರವಾಡ ಮಲ್ಲಿಕಾ, ವೆಂಕಟಾಪುರ ಹನುಮಯ್ಯ, ಮಾರುತಿ, ನಾಗರಾಜ್, ಹೇಮಂತ್ ಸಂಡೂರು ಸೇರಿ ಇತರರು ಉಪಸ್ಥಿತರಿದ್ದರು.1
- *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ- *ಕೂಡ್ಲಿಗಿ : SFI ಸಮಾವೇಶ - ಸಮಘ್ರ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಪ್ರಯತ್ನಿಸೋಣ - ಗುನ್ನಳ್ಳಿ ರಾಘವೇಂದ್ರ ಕರೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಕ್ಷೇತ್ರದ ಸಮಘ್ರ ಶೈಕ್ಷಣಿಕ ಅಭಿವೃದ್ಧಿಗಾಗಿ , ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ ಎಂದು ಮುಖಂಡ ಗುನ್ನಳ್ಳಿ ರಾಘವೇಂದ್ರ ಕರೆನೀಡಿದರು. ಅವರು ಆ 27ರಂದು ಪಟ್ಟಣದ ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಭಾರತ ವಿದ್ಯಾರ್ಥಿ ಪೆಡರೇಷನ್ ವತಿಯಿಂದ ಜರುಗಿದ ತಾಲೂಕು ಸಮಾವೇಶದಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಎಸ್ಎಫ್ಐ ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಮುಖಂಡರಾದ ಆನಂದರಾಜ್ , ಜಿಲ್ಲಾ ಮುಖಂಡರಾದ ಸುಷ್ಮಿತ ಪವನಕುಮಾರ್ , ಪತ್ರಕರ್ತರಾರ ಭೀಮಣ್ಣ ಗಜಾಪುರ , ರಾಜ್ಯ ಉಪದಾಧ್ಯಕ್ಷರಾದ ಬಸವರಾಜ ಗುಳೆದಾಳ್ ಆನಂದರಾಜ್ , ಸುಸ್ಮಿತ ಸಮಾಜ ಸೇವಕ ಅಬ್ದುಲ್ ರಹೆಮಾನ್ , ತಾಲೂಕಾಧ್ಯಕ್ಷರಾದ ಟಿ. ಭಾಗ್ಯಮ್ಮ , ಭೀಮಣ್ಣ ಗಜಾಪುರ , ಬಿಟಿಗುದ್ದಿ ಚಂದ್ರು ವೇದಿಕೆಯಲ್ಲಿದ್ದರು. ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane. #leopardcubs #leopard #channapattana #ramangaradistrict #bangaloresouthdistrict1
- ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು1
- ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್ ಜಗಳೂರು.25 ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲೀಸಿಸ್ ಕೇಂದ್ರ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು. ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು. ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು. ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು. ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ. ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.2
- ಭದ್ರಾ ನೀರು ಹರಿಸದ ರಾಜ್ಯ ಸರ್ಕಾರದ ವಿರುದ್ಧ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಲು ಆಗ್ರಹಿಸಿ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನೂ ಬಿಜೆಪಿ ಪಕ್ಷ ಹಾಗೂ ಜೆ ಡಿ ಎಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದ್ದು ಹೊಸದುರ್ಗ ಬಿಜೆಪಿ ಮುಖಂಡರು ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಎಂ ಎಲ್ ಸಿ ಕೆ ಎಸ್ ನವೀನ್ ಅವರು ಸಹ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇನ್ನೂ ಎಸ್ ಲಿಂಗಮೂರ್ತಿ ಅವರು ಅಹ ಆಗಮಿಸಿ ಬಿಸಿಲನ್ನೂ ಸಹ ಲೆಕ್ಕಿಸದೆ ಪ್ರತಿಭಟನೆ ನೇತೃತ್ವ ವಹಿಸಿದ್ದು ಹುಳಿಯಾರು ರಸ್ತೆಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ತಾಲ್ಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಷ ಹೊರ ಹಾಕಿದ್ದು ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಜಾರಿ ಮಾಡಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಆಗ್ರಹ ಮಾಡಿದರು. ತಕ್ಷಣವೇ ಹೊಸದುರ್ಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡಿ ಕುಡಿಯುವ ನೀರಿನ ಯೋಜನೆಯನ್ನ ಶೀಘ್ರ ಜಾರಿಗೊಳಿಸಲು ಪ್ರತಿಭಟನೆ ಮೂಲಕ ಒತ್ತಾಯ ಮಾಡಿದರು. ಇದೇ ವೇಳೆ ಎಸ್ ಲಿಂಮೂರ್ತಿ ಅವರು ಮಾತನಾಡಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಸರ್ಕಾರ ಈ ಬರದ ನಾಡು ಹೊಸದುರ್ಗಕ್ಕೆ ನೀರು ಕೊಡುವ ಬರವಸೆ ಇಟ್ಟಿದ್ದು ಬರವಸೆ ಹುಸಿಯಾಗಿದೆ. ಮೂರು ವರ್ಷಗಳು ಕಳೆದರು ಸಹ ಸರ್ಕಾರ ನೀರು ಹರಿಸುವ ಬಗ್ಗೆ ಸುಳ್ಳು ಬರವಸೆಯನ್ನ ಕೊಡುತ್ತಾ ಬಂದಿದೆ. ಈ ತಾಲ್ಲೂಕಿನ ಶಾಸಕರು ಕೂಡ ಬೆಂಬಲ ಕೋರಿದ್ದು ಕೈ ಜೋಡಿಸಿದ್ದೆವು. ಆದರೆ ಆಡಳಿತ ಪಕ್ಷದ ಶಾಸಕರಿಗೆ ಮಾನವೀಯತೆಯಿಂದ ಬೆಂಬಲ ಕೊಟ್ಟಿದ್ದೇವೆ. ಕಳೆದ ಆರೆಂಟು ತಿಂಗಳಾದರು ಸಹ ಸ್ಥಳೀಯ ಶಾಸಕರು ನೀರು ಕೊಡುವಲ್ಲಿ ವಿಫಲವಾಗಿದ್ದಾರೆ. ಆದ್ದರಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನೀರಿಗಾಗಿ ಹೋರಾಟ ಮಾಡುವ ಸಮಯ ಬಂದಿದ್ದು ಈ ಮೂಲಕ ಸರ್ಕಾರದ ಕಣ್ಣನ್ನ ತೆರಯಬೇಕಿದೆ. ನಮ್ಮ ಸರ್ಕಾರದ ಅವದಿಯಲ್ಲಿ ಅರವತ್ತರಷ್ಟು ಹಣ ಮೀಸಲಿಟ್ಟು ಕೆಲಸ ಆಗಿದ್ದು ಈ ಸರ್ಕಾರ ಬಂದ ನಂತರ ಇಪ್ಪತ್ತರಷ್ಟು ಸಹ ಹಣ ಬಿಡುಗಡೆ ಮಾಡಿಲ್ಲ ಎಂದು ಲಿಂಗಮೂರ್ತಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರಗಾಲ ಬಂದಿದ್ದರು ಸಹ ಸರ್ಕಾರ ಜವಾಬ್ದಾರಿ ತೋರದೆ ಅನ್ಯಾಯ ಮಾಡಿದೆ. ಕೇವಲ ಮಂತ್ರಿ ಸ್ಥಾನಕ್ಕಾಗಿ ಹೊಡೆದಾಟ ನಡೆಸುತ್ತಿದ್ದು ಬರಗಾಲದಿಂದ ಕಂಗೆಟ್ಟ ಜನರಿಗೆ ನೀರು ಕೊಡುವ ಕೆಲಸ ಮಾಡದೆ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡದೆ ಇದ್ದು ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಎಸ್ ಲಿಂಗಮೂರ್ತಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.1
- ಕೋಟೆ ನಾಡು ಚಿತ್ರದುರ್ಗದಲ್ಲಿ ರಾಕಿಂಗ್ ಸ್ಟಾರ್ ಯಶು ಅಭಿಮಾನಿಗಳ ಸಂಭ್ರಮ1
- ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.1