ತಾಲೂಕು ಮಟ್ಟದ ಕ್ರೀಡಾಕೂಟ ವಿದ್ಯಾರ್ಥಿಗಳ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ:ಡಾ.ವೀರಭದ್ರಗೌಡ ಹುಣಸಗಿ: ಕ್ರೀಡೆಗಳಿಂದ ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗುವುದಲ್ಲದೆ, ಆತ್ಮವಿಶ್ವಾಸ ಹೆಚ್ಚಿಸಲಿದೆ ಎಂದು ಆಶೀರ್ವಾದ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ವೀರಭದ್ರಗೌಡ ಹೊಸಮನಿ ಹೇಳಿದರು. ಪಟ್ಟಣದ ಹೊರವಲಯದ ಕೆಂಭಾವಿ ರಸ್ತೆಯ ಇಸಾಂಪುರ ಕ್ರಾಸ್ನ ಆಶೀರ್ವಾದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಆಯೋಜಿಸಿದ್ದ 2026-27ನೇ ಸಾಲಿನ ಹುಣಸಗಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಕ್ರೀಡಾ ಆಸಕ್ತಿ ಬೆಳೆಸಿಕೊಳ್ಳಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಕ್ರೀಡೆ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಸರಕಾರಿ ಪಿಯು ಕಾಲೇಜು ಸಿಡಿಸಿ ಅಧ್ಯಕ್ಷ ಬಸವರಾಜ್ ಸಜ್ಜನ್ ಮಾತನಾಡಿ, ಕ್ರೀಡೆ ಕೇವಲ ಮನರಂಜನೆಯಲ್ಲ, ಅದು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಪ್ರಮುಖ ಸಾಧನವಾಗಿದೆ. ಕ್ರೀಡೆಯಿಂದ ಮಾನಸಿಕ ಸ್ಥೈರ್ಯ, ಸಮಯಪ್ರಜ್ಞೆ ಮತ್ತು ತಂಡದೊಂದಿಗೆ ಕೆಲಸ ಮಾಡುವ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯ ಎಂದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರತಿಭೆ ಪ್ರದರ್ಶಿಸಲು ಪ್ರತಿ ವರ್ಷ ತಾಲೂಕು ಮಟ್ಟದ ಕ್ರೀಡಾಕೂಟ ಆಯೋಜಿಸುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಹೆಚ್ಚು ಸಮಯ ನೀಡದೆ ಕ್ರೀಡೆ ಹಾಗೂ ಶಿಕ್ಷಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಾಪುಗೌಡ ಪಾಟೀಲ್ ಮಾತನಾಡಿದರು. ಈ ಸಂದರ್ಭ ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್, ಶರಣು ಸಾಹುಕಾರ ದಂಡಿನ, ಪ.ಪಂ.ಅಧ್ಯಕ್ಷ ಮರಲಿಂಗಪ್ಪ ನಾಟೇಕರ್ ಹಾಗೂ ಬಸನಗೌಡ ಬಿರಾದಾರ, ವಿಠಲ್ ಚವ್ಹಾಣ, ಕಾಂತೇಶ ಹಲಗಿಮನಿ, ರಾಮಣ್ಣ ಹೂಗಾರ, ವಿ.ಎಸ್.ಬಿರಾದಾರ, ಬಸವರಾಜ್ ವಂದಲಿ, ದ್ಯಾಮಣ್ಣ ಕೊಡೇಕಲ್, ಶರಣಗೌಡ ಚಿಕ್ಕನಹಳ್ಳಿ, ವಿ.ಎಸ್.ಅಂಗಡಿ, ಪ್ರಶಾಂತ ಹಿರೇಮಠ, ಲಕ್ಷ್ಮಣ ರಾಠೋಡ ಸೇರಿದಂತೆ ಇತರರಿದ್ದರು. ಶಿಕ್ಷಕ ನಾಗನಗೌಡ ಪಾಟೀಲ ಸ್ವಾಗತಿಸಿ, ನಿರೂಪಿಸಿದರು. ಪಿಯು ಕಾಲೇಜು ಪ್ರಾಚಾರ್ಯ ಸಾಯಬಣ್ಣ ಭಜಂತ್ರಿ ವಂದಿಸಿದರು.
ತಾಲೂಕು ಮಟ್ಟದ ಕ್ರೀಡಾಕೂಟ ವಿದ್ಯಾರ್ಥಿಗಳ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ:ಡಾ.ವೀರಭದ್ರಗೌಡ ಹುಣಸಗಿ: ಕ್ರೀಡೆಗಳಿಂದ ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗುವುದಲ್ಲದೆ, ಆತ್ಮವಿಶ್ವಾಸ ಹೆಚ್ಚಿಸಲಿದೆ ಎಂದು ಆಶೀರ್ವಾದ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ವೀರಭದ್ರಗೌಡ ಹೊಸಮನಿ ಹೇಳಿದರು. ಪಟ್ಟಣದ ಹೊರವಲಯದ ಕೆಂಭಾವಿ ರಸ್ತೆಯ ಇಸಾಂಪುರ ಕ್ರಾಸ್ನ ಆಶೀರ್ವಾದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಆಯೋಜಿಸಿದ್ದ 2026-27ನೇ ಸಾಲಿನ ಹುಣಸಗಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಕ್ರೀಡಾ ಆಸಕ್ತಿ ಬೆಳೆಸಿಕೊಳ್ಳಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಕ್ರೀಡೆ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಸರಕಾರಿ ಪಿಯು ಕಾಲೇಜು ಸಿಡಿಸಿ ಅಧ್ಯಕ್ಷ ಬಸವರಾಜ್ ಸಜ್ಜನ್ ಮಾತನಾಡಿ, ಕ್ರೀಡೆ ಕೇವಲ ಮನರಂಜನೆಯಲ್ಲ, ಅದು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಪ್ರಮುಖ ಸಾಧನವಾಗಿದೆ. ಕ್ರೀಡೆಯಿಂದ ಮಾನಸಿಕ ಸ್ಥೈರ್ಯ, ಸಮಯಪ್ರಜ್ಞೆ ಮತ್ತು ತಂಡದೊಂದಿಗೆ ಕೆಲಸ ಮಾಡುವ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯ ಎಂದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರತಿಭೆ ಪ್ರದರ್ಶಿಸಲು ಪ್ರತಿ ವರ್ಷ ತಾಲೂಕು ಮಟ್ಟದ ಕ್ರೀಡಾಕೂಟ ಆಯೋಜಿಸುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಹೆಚ್ಚು ಸಮಯ ನೀಡದೆ ಕ್ರೀಡೆ ಹಾಗೂ ಶಿಕ್ಷಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಾಪುಗೌಡ ಪಾಟೀಲ್ ಮಾತನಾಡಿದರು. ಈ ಸಂದರ್ಭ ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್, ಶರಣು ಸಾಹುಕಾರ ದಂಡಿನ, ಪ.ಪಂ.ಅಧ್ಯಕ್ಷ ಮರಲಿಂಗಪ್ಪ ನಾಟೇಕರ್ ಹಾಗೂ ಬಸನಗೌಡ ಬಿರಾದಾರ, ವಿಠಲ್ ಚವ್ಹಾಣ, ಕಾಂತೇಶ ಹಲಗಿಮನಿ, ರಾಮಣ್ಣ ಹೂಗಾರ, ವಿ.ಎಸ್.ಬಿರಾದಾರ, ಬಸವರಾಜ್ ವಂದಲಿ, ದ್ಯಾಮಣ್ಣ ಕೊಡೇಕಲ್, ಶರಣಗೌಡ ಚಿಕ್ಕನಹಳ್ಳಿ, ವಿ.ಎಸ್.ಅಂಗಡಿ, ಪ್ರಶಾಂತ ಹಿರೇಮಠ, ಲಕ್ಷ್ಮಣ ರಾಠೋಡ ಸೇರಿದಂತೆ ಇತರರಿದ್ದರು. ಶಿಕ್ಷಕ ನಾಗನಗೌಡ ಪಾಟೀಲ ಸ್ವಾಗತಿಸಿ, ನಿರೂಪಿಸಿದರು. ಪಿಯು ಕಾಲೇಜು ಪ್ರಾಚಾರ್ಯ ಸಾಯಬಣ್ಣ ಭಜಂತ್ರಿ ವಂದಿಸಿದರು.
- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.1
- ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.1
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.1
- ಸೈದಾಪುರ ಎಪಿಎಂಸಿಯಲ್ಲಿ ಮೂಲಸೌಕರ್ಯಗಳು ಒದಗಿಸಿ-ಉಮೇಶ್ ಮುದ್ನಾಳ ಆಗ್ರಹ ಸೈದಾಪೂರ ದನಗಳ, ಕುರಿ, ಆಡಳು, ಕೋಳಿ ಸಂತೆ ಪ್ರಾರಂಭ ಮಾಡಿ, ಆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಮೂಲಭೂತ ಸೌಕರ್ಯಗಳು ಒದಗಿಸಲು ಉಮೇಶ ಮುದ್ನಾಳ ಆಗ್ರಹ, ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು. ಸೈದಾಪೂರ : ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುತ್ತಿರುವ ಸಂತೆಯಲ್ಲಿ ದನ, ಆಡು, ಕುರಿ, ಕೋಳಿ ಮಾರಾಟಕ್ಕೆ ಪ್ರಾರಂಭ ಮಾಡಿ, ಸಂತೆ ಸ್ಥಳದಲ್ಲಿ ಕುಡಿಯುವ ನೀರು & ಮೂಲಭೂತ ಸೌಕರ್ಯ ಒದಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ.ಮುದ್ನಾಳ 1 ವಾರದ ಗಡುವು ನೀಡಿ ಜಿಲ್ಲಾಡಳಿತಕ್ಕೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಸಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ಉಪ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಸ್ಥಳದಲ್ಲಿ ರೈತರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲೇ ಅತಿದೊಡ್ಡ ಜಾನುವಾರು ಸಂತೆಗಳಾದ ಶುಕ್ರವಾರ-ಶಹಾಪೂರ, ಮಂಗಳವಾರ-ಯಾದಗಿರಿ, ಸೋಮವಾರ-ಗುರುಮಠಕಲ್, ಗುರುವಾರ-ಸೈದಾಪೂರದಲ್ಲಿ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿದರು. ಸಂತೆ ಆವರಣದಲ್ಲಿ ದನ-ಕರುಗಳ, ಕುರಿ, ಆಡು, ಕೋಳಿ ಮಾರಾಟಕ್ಕೆ ಬಂದ ರೈತರಿಗೆ ಸೂಕ್ತ ಸ್ಥಳಾವಕಾಶವಿಲ್ಲದೇ ಜಾಲಿ ಕಂಟಿಗಳು ಬೆಳೆದು, ವಿಷ-ಜಂತುಗಳು ಸೇರಿಕೊಂಡಿವೆ. ಚರಂಡಿಯಲ್ಲಿ ತುಂಬಿ ನಿಂತು ಗಬ್ಬೆದ್ದು ನಾರುತ್ತಿದೆ. ಕುಡುಕರ ಹಾವಳಿ, ಅಕ್ರಮ ಚಟುವಟಿಕೆ ನಡೆಯುತ್ತಿದ್ದು, ಎಲ್ಲೆಡೆ ಅಸ್ವಚ್ಛತೆ ಆವರಿಸಿದ್ದು, ದುರ್ವಾಸನೆ ಬೀರುತ್ತಿದೆ. ಕೆಲವೆಡೆ ಭಿಕ್ಷುಕರು ಹಾಗೂ ಪುಂಡ-ಪೊಕರಿಗಳ ತಂಗುದಾಣವಾಗಿ ಮಾರ್ಪಟ್ಟಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸಂತೆಗೆ ಆಗಮಿಸುವ ರೈತರು ಹಾಗೂ ವ್ಯಾಪಾರಿಗಳು ಹಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಬಿರುಬಿಸಿಲಿನ ನಡುವೆಯೂ ಜನ-ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಂಡು ಜನ-ಜಾನುವಾರುಗಳಿಗೆ ರೋಗ-ರುಜಿನ ಹರಡದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು. ಸಂತೆ ಪ್ರಾರಂಭವಾದ ನಂತರ ಸಂತೆ ಒಳಗಡೆ ನಡೆಯುತ್ತಿರುವ ಪ್ರತಿ ವಾರ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ, ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೆರಳಿಗಾಗಿ ಮರಗಳನ್ನು ನೆಡುವುದು ಅಥವಾ ಶೆಡ್ ನಿರ್ಮಿಸುವುದು ಅಗತ್ಯವಾಗಿದೆ. ಅಲ್ಲದೆ ಮಾರುಕಟ್ಟೆ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸುಂದರ ಹಾಗೂ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ರೈತರು ಮತ್ತು ಜಾನುವಾರುಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು ಎಂದು ಉಮೇಶ್ ಕೆ. ಮುದ್ನಾಳ ಆಗ್ರಹಿಸಿದರು. ಪ್ರತಿ ಗುರುವಾರ ಸಾವಿರಾರು ರೈತರು ಆಗಮಿಸುವ ಈ ಸಂತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಶೀಘ್ರವೇ ಅಗತ್ಯ ಕ್ರಮ ಕೈಗೊಂಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಆವರಣದಲ್ಲಿ ಖಾಸಗಿ ಅಂಗಡಿ ಮಾಲೀಕರು ಎ.ಪಿ.ಎಂ.ಸಿ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿಗಾಗಿ ಬಳಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಒಂದು ನಿರ್ಲಕ್ಷ್ಯ ವಹಿಸಿದರೆ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗದಲ್ಲಿರುವ ಯಾದಗಿರಿ – ರಾಯಚೂರು ಕರಿಬೆಟ್ಟ ಸರ್ಕಲನ ಮುಖ್ಯ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.3
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ4