logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಿದ್ದತೆ : ಡಿಸಿ ಶಿವಮೊಗ್ಗ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ: 26 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆ ಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು. ಜ: 26 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿ, ಜಿಲ್ಲೆಯ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಿ, ಧ್ವಜವಂದನೆ ಸ್ವೀಕರಿಸುವರು. ನಂತರ ಪೊಲೀಸ್, ಹೋಂಗಾರ್ಡ್, ಬಾಲ ಮಂದಿರದ ಮಕ್ಕಳು, ಪಾಲಿಕೆ ಸಿಬ್ಬಂದಿ, ಸ್ಕೌಟ್ಸ್ & ಗೈಡ್ಸ್, ಸೇವಾದಳ, ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. ನಂತರ ಶಾಲಾ ಮಕ್ಕಳ ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆಯಲಿದ್ದು, ಅಂದು ಸಂಜೆ 6 ರಿಂದ 9ರವರೆಗೆ ನಗರದ ಕುವೆಂಪು ರಂಗಮoದಿ ರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಗಣರಾಜ್ಯೋತ್ಸವದ ಅಂಗವಾಗಿ ನಗರದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ನಗರದ ಪ್ರಮುಖ ರಸ್ತೆ, ವರ್ತುಲಗಳಲ್ಲಿ ತಳಿರು- ತೋರಣ ಮತ್ತು ವಿದ್ಯುದ್ದೀಪಗಳಿಂದ ಅಲಂಕರಿಸುವoತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ನೋಡಿಕೊಳ್ಳಲು ಕ್ರೀಡಾಂಗಣದ ವೇದಿಕೆ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸೂಕ್ತ ಪೊಲೀಸ್ ಭದ್ರತೆ ಮತ್ತು ಟ್ರಾಫಿಕ್ ವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ವರಿಷ್ಠಾಧಿ ಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿ ಗಳು ಹಾಗೂ ತಹಶೀಲ್ದಾರರಿಗೆ ತಿಳಿಸಿದರು. ಪೆರೇಡ್ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ದಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ದತೆ, ಸೌಂಡ್ ಸಿಸ್ಟಂ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತ್ರ ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆ ಗಳ ಅಧಿಕಾರಿಗಳಿಗೆ ತಿಳಿಸಿದರು. ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜು ಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷ ದಂತೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು. ಸ್ವಾಗತ ಕಮಾನು ಸಿದ್ದತೆ, ಸೂಕ್ತ ಪೊಲೀಸ್ ಭದ್ರತೆ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಪ ಅಲಂಕಾರ ವ್ಯವಸ್ಥೆ, ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ, ಮಕ್ಕಳಿಗೆ ಸಿಹಿ ಹಂಚಿಕೆ ಹಾಗೂ ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಲ್ಲಿ ಹಣ್ಣು, ಸಿಹಿ ಹಂಚಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು. ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾದ ಪೆರೇಡ್ ಪ್ರದರ್ಶನದ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು. ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮ ಕೈಗೊಳ್ಳಲು ಡಿಡಿಪಿಐ ಮತ್ತು ಬಿಇಓ ಅವರಿಗೆ ಸೂಚನೆ ನೀಡಿದರು. ಸಂಭ್ರಮಾಚರಣೆಯ ಅಂಗವಾಗಿ ಪಾಲಿಕೆ ಮತ್ತು ಶಿಮುಲ್ ವತಿಯಿಂದ ಗಣ್ಯರು ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಿಕೆ, ಶಾಲಾ ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಸಂಬoಧಿಸಿದ ಎಲ್ಲ ಅಧಿಕಾರಿಗಳು ಸೂಕ್ತ ಸಿದ್ದತೆಗಳನ್ನು ಮಾಡಿಕೊಂಡು ಆಚರಣೆ ಯನ್ನು ಯಶಸ್ವಿಗೊಳಿಸಬೇಕು ಹಾಗೂ ಅಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಕೆಎಸ್‌ಆರ್‌ಪಿ ಕಮಾಂಡೆoಟ್ ಯುವಕುಮಾರ್, ಎಸಿ ಸತ್ಯನಾರಾಯಣ, ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

16 hrs ago
user_ವಿಜಯ ಸಂಘರ್ಷ ನ್ಯೂಸ್
ವಿಜಯ ಸಂಘರ್ಷ ನ್ಯೂಸ್
Journalist Shivamogga, Karnataka•
16 hrs ago
9cb57bda-1895-4f77-9cfc-47d0bb500d16

ಶಿವಮೊಗ್ಗ-ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಿದ್ದತೆ : ಡಿಸಿ ಶಿವಮೊಗ್ಗ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ: 26 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆ ಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು. ಜ: 26 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿ, ಜಿಲ್ಲೆಯ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಿ, ಧ್ವಜವಂದನೆ ಸ್ವೀಕರಿಸುವರು. ನಂತರ ಪೊಲೀಸ್, ಹೋಂಗಾರ್ಡ್, ಬಾಲ ಮಂದಿರದ ಮಕ್ಕಳು, ಪಾಲಿಕೆ ಸಿಬ್ಬಂದಿ, ಸ್ಕೌಟ್ಸ್ & ಗೈಡ್ಸ್, ಸೇವಾದಳ, ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಲಿದೆ. ನಂತರ ಶಾಲಾ ಮಕ್ಕಳ ಸಾಮೂಹಿಕ ನೃತ್ಯ ಕಾರ್ಯಕ್ರಮಗಳು ನಡೆಯಲಿದ್ದು, ಅಂದು ಸಂಜೆ 6 ರಿಂದ 9ರವರೆಗೆ ನಗರದ ಕುವೆಂಪು ರಂಗಮoದಿ ರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಗಣರಾಜ್ಯೋತ್ಸವದ ಅಂಗವಾಗಿ ನಗರದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ನಗರದ ಪ್ರಮುಖ ರಸ್ತೆ, ವರ್ತುಲಗಳಲ್ಲಿ ತಳಿರು- ತೋರಣ ಮತ್ತು ವಿದ್ಯುದ್ದೀಪಗಳಿಂದ ಅಲಂಕರಿಸುವoತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ನೋಡಿಕೊಳ್ಳಲು ಕ್ರೀಡಾಂಗಣದ ವೇದಿಕೆ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸೂಕ್ತ ಪೊಲೀಸ್ ಭದ್ರತೆ ಮತ್ತು ಟ್ರಾಫಿಕ್ ವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ವರಿಷ್ಠಾಧಿ ಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿ ಗಳು ಹಾಗೂ ತಹಶೀಲ್ದಾರರಿಗೆ ತಿಳಿಸಿದರು. ಪೆರೇಡ್ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ದಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ದತೆ, ಸೌಂಡ್ ಸಿಸ್ಟಂ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತ್ರ ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆ ಗಳ ಅಧಿಕಾರಿಗಳಿಗೆ ತಿಳಿಸಿದರು. ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜು ಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷ ದಂತೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು. ಸ್ವಾಗತ ಕಮಾನು ಸಿದ್ದತೆ, ಸೂಕ್ತ ಪೊಲೀಸ್ ಭದ್ರತೆ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಪ ಅಲಂಕಾರ ವ್ಯವಸ್ಥೆ, ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ, ಮಕ್ಕಳಿಗೆ ಸಿಹಿ ಹಂಚಿಕೆ ಹಾಗೂ ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಲ್ಲಿ ಹಣ್ಣು, ಸಿಹಿ ಹಂಚಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು. ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆಯಾದ ಪೆರೇಡ್ ಪ್ರದರ್ಶನದ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು. ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮ ಕೈಗೊಳ್ಳಲು ಡಿಡಿಪಿಐ ಮತ್ತು ಬಿಇಓ ಅವರಿಗೆ ಸೂಚನೆ ನೀಡಿದರು. ಸಂಭ್ರಮಾಚರಣೆಯ ಅಂಗವಾಗಿ ಪಾಲಿಕೆ ಮತ್ತು ಶಿಮುಲ್ ವತಿಯಿಂದ ಗಣ್ಯರು ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಿಕೆ, ಶಾಲಾ ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಸಂಬoಧಿಸಿದ ಎಲ್ಲ ಅಧಿಕಾರಿಗಳು ಸೂಕ್ತ ಸಿದ್ದತೆಗಳನ್ನು ಮಾಡಿಕೊಂಡು ಆಚರಣೆ ಯನ್ನು ಯಶಸ್ವಿಗೊಳಿಸಬೇಕು ಹಾಗೂ ಅಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಕೆಎಸ್‌ಆರ್‌ಪಿ ಕಮಾಂಡೆoಟ್ ಯುವಕುಮಾರ್, ಎಸಿ ಸತ್ಯನಾರಾಯಣ, ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

More news from ಕರ್ನಾಟಕ and nearby areas
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
  • ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ‌ ಇಲಾಖೆಯ ಪ್ರಕಟಣೆ ದಿನಾಂಕ 13.01.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್‌ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್‌, ನಾಯ್ಗರಲೇನ್‌, ದತ್ತನಗರ, ಮಲ್ಲಕುಮೇರ್‌, ಪದವು, ಶರ್ಬತ್‌ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ. ವರದಿ: ಶಂಶೀರ್ ಬುಡೋಳಿ
    1
    ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ‌ ಇಲಾಖೆಯ ಪ್ರಕಟಣೆ
ದಿನಾಂಕ 13.01.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00  ಗಂಟೆಯವರೆಗೆ  110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್‌ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್‌, ನಾಯ್ಗರಲೇನ್‌, ದತ್ತನಗರ, ಮಲ್ಲಕುಮೇರ್‌, ಪದವು, ಶರ್ಬತ್‌ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ  ಮಾಡಲಾಗುತ್ತದೆ.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    9 hrs ago
  • ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    1
    ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • Post by AAJ KI DASTAK NEWS KARNATAKA
    1
    Post by AAJ KI DASTAK NEWS KARNATAKA
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    Journalist Mysuru, Karnataka•
    12 hrs ago
  • ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.
    1
    ಮಳವಳ್ಳಿ ತಾಲೂಕಿನ ಪೂರಿಗಾಲಿ ಶಾಸಕರ ನಿವಾಸಕ್ಕೆ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಭೇಟಿ ಶಾಸಕರಿಗೆ ಅಭಿನಂದನೆ
ಮಂಡ್ಯ ಜಿಲ್ಲೆಗೆ ನೂತನವಾಗಿ ನೇಮಕವಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀಮತಿ ವಿ.ಜೆ. ಶೋಭಾರಾಣಿ ಅವರು ಇಂದು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿ, ಆರೋಗ್ಯವಿಚಾರಿಸಿದರು. ಈ ವೇಳೆ ಡಿವೈಎಸ್ಪಿ ಯಶ್ವಂತ್ ಕುಮಾರ್ ಅವರು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಧರ್ ಅವರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    8 hrs ago
  • 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ‌‌ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    1
    20 ಅಡಿ ಎತ್ತರದ ಬಾರೆ 
ನಿರ್ಮಾಣದ ಗುಡಿ‌‌ ಹತ್ತಿ  ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ  ಬಾರೆಕಳ್ಳೆ ಹತ್ತುವ ಸಹಸದ  ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.