Shuru
Apke Nagar Ki App…
ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಪ್ರಥಮ ಆಲಿ ಕಲ್ಲಿನ ಮಳೆ, ಬಿಸಿಲಿಗೆ ಬೇಗೆಯಿಂದ ಬೆಂದಿದ್ದ ಭೂಮಿಗೆ ತಂಪೆರದ ಮಳೆರಾಯ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮಂಗಳವಾರ 2026 ರ ಪ್ರಥಮ ಆಲಿ ಕಲ್ಲಿನ ಮಳೆ ಸುರಿಯಿತು, ಮಿಂಚು ಗುಡುಗು ಗಾಳಿ ಸಹಿತ ಆಗಮಿಸಿದ ಮಳೆ ಚಟಪಟ ಆಲಿಕಲ್ಲಿನೊಂದಿಗೆ ಸುರಿಯಿತು, ಆಲಿಕಲ್ಲನ್ನು ಕಂಡ ಚಿನ್ನರು ಆಲಿಕಲ್ಲನ್ನು ಆರಿಸಿಕೊಂಡು ತಿಂದಿದ್ದು ಕಂಡುಬಂದಿತು.
ಚಂದ್ರು ನೆಲ್ಲೂರ
ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಪ್ರಥಮ ಆಲಿ ಕಲ್ಲಿನ ಮಳೆ, ಬಿಸಿಲಿಗೆ ಬೇಗೆಯಿಂದ ಬೆಂದಿದ್ದ ಭೂಮಿಗೆ ತಂಪೆರದ ಮಳೆರಾಯ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮಂಗಳವಾರ 2026 ರ ಪ್ರಥಮ ಆಲಿ ಕಲ್ಲಿನ ಮಳೆ ಸುರಿಯಿತು, ಮಿಂಚು ಗುಡುಗು ಗಾಳಿ ಸಹಿತ ಆಗಮಿಸಿದ ಮಳೆ ಚಟಪಟ ಆಲಿಕಲ್ಲಿನೊಂದಿಗೆ ಸುರಿಯಿತು, ಆಲಿಕಲ್ಲನ್ನು ಕಂಡ ಚಿನ್ನರು ಆಲಿಕಲ್ಲನ್ನು ಆರಿಸಿಕೊಂಡು ತಿಂದಿದ್ದು ಕಂಡುಬಂದಿತು.
More news from ಕರ್ನಾಟಕ and nearby areas
- ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮಂಗಳವಾರ 2026 ರ ಪ್ರಥಮ ಆಲಿ ಕಲ್ಲಿನ ಮಳೆ ಸುರಿಯಿತು, ಮಿಂಚು ಗುಡುಗು ಗಾಳಿ ಸಹಿತ ಆಗಮಿಸಿದ ಮಳೆ ಚಟಪಟ ಆಲಿಕಲ್ಲಿನೊಂದಿಗೆ ಸುರಿಯಿತು, ಆಲಿಕಲ್ಲನ್ನು ಕಂಡ ಚಿನ್ನರು ಆಲಿಕಲ್ಲನ್ನು ಆರಿಸಿಕೊಂಡು ತಿಂದಿದ್ದು ಕಂಡುಬಂದಿತು.4
- gadag jilla Snake Raheman 99164034485
- ಗುಳೇದಗುಡ್ಡ: ಹನ್ನೆರಡನೇ ಶತಮಾನದ ಶಿವಶರಣರಾದ ಜೇಡರ ದಾಸಿಮಯ್ಯ, ಮಾದರ ಚೆನ್ನಯ್ಯನವರ,ಬಸವಣ್ಣನವರ ಸಮಕಾಲಿನ ಶರಣರ ಶರಣೆಯರು ತಮ್ಮ ವಚನ ಸಾಹಿತ್ಯದಲ್ಲಿ ಕಾಯಕದ ಮಹತ್ವ ತಿಳಿಸಿದವರು. ಎಂದು ಮುದ್ದೇಬಿಹಾಳದ ಎಂ ಜಿ ವ್ಹಿ ಸಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಸಾಹಿತಿಗಳಾದ ಡಾ. ಪ್ರಕಾಶ ನರಗುಂದ ಹೇಳಿದರು. ಅವರಿ ಸೋಮವಾರ ಪಟ್ಟಣದ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಭರವಸೆ ಕೋಶ, ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆ ಇವರ ಸಂಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣದ ಪ್ರಥಮ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರ್ಲಕ್ಷಿತ ಶರಣರ ವಚನಗಳಲ್ಲಿ ಆತ್ಮ ವಿಮರ್ಶ, ಕಾಯಕವೇ ಕೈಲಾಸ,ದಾಸೋಹ ತತ್ವ ಜಾತಿ,ಲಿಂಗ ಭೇದ,ನಿರಾಕರಣೆ, ಮುಂತಾದ ವಿಷಯಗಳ ಕುರಿತು ಅನೇಕ ಶರಣರು ತಮ್ಮ ವಚನಗಳಲ್ಲಿ ದಾಖಲಿಸಿದ್ದಾರೆ. ಗದ್ಯ ಪದ್ಯ ಮಿಶ್ರಿತ ವಚನ ಸಾಹಿತ್ಯ ಸರಳ ನೇರ ಮತ್ತು ಭಾವಪೂರ್ಣ ಭಾಷೆಯಲ್ಲಿ ಸತ್ಯಶೋಧನೆ ಸಾಮಾಜಿಕ ಸಮಾನತೆ ದೈವಿಕ ಅನುಭವಗಳನ್ನು ಕಾಣಬಹುದಾಗಿದೆ. ಬಸವಣ್ಣನವರ ಅಗಾಧ ವ್ಯಕ್ತಿತ್ವಕ್ಕೆ ಮಾರುಹೋಗಿದ್ದ ನಿರ್ಲಕ್ಷಿತ ವಚನಕಾರರು ಬೇರೆ ಬೇರೆ ರಾಜ್ಯಗಳಿಂದ ಬಂದು ಬೇರೆ ಬೇರೆ ಕಾಯಕಗಳಲ್ಲಿ ಕೈಲಾಸ ಕಂಡವರು. ಇಂಥವರ ಕುರಿತು ಇನ್ನು ಶ್ರೇಷ್ಠ ಮಟ್ಟದ ಸಂಶೋಧನೆಗಳು ಆಗಬೇಕಾಗಿದೆ. ಎಂದರು ಹೇಳಿದರು. ವೇದಿಕೆ ಮೇಲೆ ಕಾಲೇಜಿನ ಪ್ರಚಾರ್ಯ ಪ್ರೊ. ರೇವಣಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ, ಅರುಣಕುಮಾರ ಗಾಳಿ,ರಾಷ್ಟ್ರೀಯ ಸಂಶೋಧನಾ ವೇದಿಕೆಯ ಗೌರವಾಧ್ಯಕ್ಷ ಸಂಗಮೇಶ ಕಲ್ಯಾಣಿ,ಕಾಲೇಜಿನ ಪ್ರಾಚಾರ್ಯರ ಪ್ರೊ. ರೇವಣಸಿದ್ದಪ್ಪ, ಮೋಡಿ ಲಿಪಿ ತಜ್ಞ ಡಾ. ಸಂಗಮೇಶ ಕಲ್ಯಾಣಿ, ಪ್ರೊ. ಫಕೀರಪ್ಪ ಚನ್ನಪ್ಪಗೌಡ್ರು ಉಪಸ್ಥಿತರಿದ್ದರು.1
- #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.2
- ಕುಕನೂರು ಪಿಎಸ್ಐ ಗುರುರಾಜ್ ವಿರುದ್ಧ ಮಹಿಳೆ ಗಂಭೀರ ಆರೋಪ #ಕೊಪ್ಪಳ #Koppal #ಕುಕನೂರು #ಪಿಎಸ್ಐ #spkoppal #cpiyalaburga #psikuknoor #ಯುವಜಾಗೃತಿನ್ಯೂಸ್ #ಕೊಪ್ಪಳ_ಪೊಲೀಸ್ #112ಕೊಪ್ಪಳ #112koppal #koppal_district_police #Karnataka_State1
- ಬಾಗಲಕೋಟೆ: ತಂದೆಯವರು ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ ನ್ಯಾಯವಾಗಬೇಕು ಎಂಬ ಕಾರಣದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರಿ ಮಹಾದೇವಿ ಮೇಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಅನ್ಯಾಯವಾಗಿದ್ದು, ಜನರ ಬೆಂಬಲ ನನಗಿದೆ. ಕಾಂಗ್ರೆಸ್ ಗೆಲುವಿಗೆ ನನಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.1
- ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ರೋಣ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿ ತಹಸಿಲ್ದಾರ್ ರಿಗೆ ಮನವಿ ಸಲ್ಲಿಸಲಾಯಿತು, ಕರ್ನಾಟಕ ರಾಜ್ಯದಲ್ಲಿ ಕಳೆದ 3-4 ವರ್ಷಗಳಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ವಿದ್ಯಾರ್ಥಿಗಳ ಜೊತೆಗೆ ನಿಲ್ಲಬೇಕಾದ ಸರ್ಕಾರ ಕುಂಭನಿದ್ರೆಗೆ ಜಾರಿದೆ,ಸರಕಾರದ ಹತ್ತಿರ ಯಾವುದೇ ದೂರದೃಷ್ಟಿಯ ಯೋಜನೆಗಳು ಇಲ್ಲದೆ ಸಮಸ್ಯೆಗಳು ಬಂದಾಗ ಅವುಗಳಿಗೆ ತೇಪೆ ಹಚ್ಚುವ ಕಾರ್ಯ ನಡೆಯುತ್ತಿದೆ,ಸರಕಾರಿ ಹುದ್ದೆಗಳ ನೇಮಕಾತಿ, ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನ ಮಾಡಿಕೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಕಳೆದ ಮೂರು ವರ್ಷಗಳಿಂದ ಯಾವುದೇ ನೇಮಕಾತಿಗಳನ್ನು ಮಾಡದೆ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ, ರಾಜ್ಯದಲ್ಲಿ ಒಟ್ಟು 43 ಇಲಾಖೆಗಳಲ್ಲಿ 284,881 ಹುದ್ದೆಗಳು ಖಾಲಿ ಇದೆ,ಲಕ್ಷಾಂತರ ಅಭ್ಯರ್ಥಿಗಳು ಕಳೆದ ಐದಾರು ವರ್ಷಗಳಿಂದ ಸರ್ಕಾರ ನೇಮಕಾತಿಗಳನ್ನ ಮಾಡುತ್ತೆ ಎಂಬ ನಂಬಿಕೆಯೊಂದಿಗೆ ಪ್ರತಿ ತಿಂಗಳು ಹಣವನ್ನು ಖರ್ಚು ಮಾಡಿಕೊಂಡು ತರಬೇತಿಯನ್ನು ಪಡೆಯುತ್ತಾ ಸರಕಾರಿ ಸೇವೆಯನ್ನು ಮಾಡಬೇಕು ಎಂಬ ಆಸೆಯನ್ನು ಇಟ್ಟುಕೊಂಡು ಅಧ್ಯಯನ ಮಾಡುತ್ತಿದ್ದಾರೆ, ಆದರೆ ಅಂತಹ ಸಾವಿರಾರು ಅಭ್ಯರ್ಥಿಗಳ ವಯಸ್ಸು ಕೂಡಾ ಮೀರುತ್ತಿದೆ, ಆದರೆ ಸರಕಾರಕ್ಕೆ ಈ ಯಾವುದೇ ತೊಂದರೆಗಳನ್ನು ಗಮನಿಸದೆ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ,ಅದರಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತಹ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ 79,694 ಹುದ್ದೆಗಳು, ಉನ್ನತ ಶಿಕ್ಷಣ ಇಲಾಖೆಯಲ್ಲೂ 13,599 ಹುದ್ದೆಗಳು ಖಾಲಿ ಇದ್ದು ಇದರಿಂದ ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ, ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ,ಸರ್ವರಿಗೂ ಶಿಕ್ಷಣವನ್ನು ನೀಡಬೇಕಾದದ್ದು ಸರಕಾರಗಳ ಕರ್ತವ್ಯ ಆದರೆ ಸರಕಾರಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಸರಕಾರ ಅನ್ಯಾಯ ಮಾಡುತ್ತಿದೆ,ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಶೋಚನೀಯವಾಗಿದೆ. ಕರ್ನಾಟಕ ರಾಜ್ಯದ ವಿಶ್ವವಿದ್ಯಾಗಳ ಸ್ಥಿತಿಗತಿ ಶೋಚನೀಯವಾಗಿದೆ, ಕರ್ನಾಟಕ ರಾಜ್ಯ ಮೊದಲು ಉನ್ನತ ಶಿಕ್ಷಣಕ್ಕೆ ಹೆಸರುವಾಸಿ ಆದ ರಾಜ್ಯ ಪ್ರತಿಷ್ಠಿತ ವಿವಿಗಳು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿತ್ತು , ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಗಳನ್ನು ಸರಕಾರ ಕಡೆಗಣಿಸಿದೆ, ವಿವಿಗಳಿಗೆ ಯಾವುದೇ ಅನುದಾನ ನೀಡದೇ ಅವುಗಳನ್ನು ಕೇವಲ ವಿದ್ಯಾರ್ಥಿಗಳ ಶುಲ್ಕದ ಮೇಲೆ ನಡೆಸುವಂತೆ ಮಾಡುತ್ತಿದೆ, ಇದರಿಂದ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಮೇಲೆ ಹಲವಾರು ಶುಲ್ಕಗಳನ್ನು ಹೇರುತ್ತಿದೆ,ಹಿಂದಿನ ಸರ್ಕಾರ ಸ್ನಾಪಿಸಿದ 09 ವಿಶ್ವ ವಿದ್ಯಾಲಯಗಳು ಮುಚ್ಚುವ ಸ್ತಿತಿಯನ್ನು ಸರಕಾರ ನಿರ್ಮಾಣ ಮಾಡುತ್ತಿದೆ, ಖಾಯಂ ಹುದ್ದೆಗಳ ನೇಮಕಾತಿ ಇಲ್ಲದ ಕಾರಣ ಸಕಾಲಕ್ಕೆಅಂಕಪಟ್ಟಿ, ಫಲಿತಾಂಶ, ಹಾಗೂ ಇನ್ನಿತರ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಅನುಭವಿಸುವಂತಾಗಿದೆ,ವಿದ್ಯಾರ್ಥಿ ವೇತನ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ವಿದ್ಯಾರ್ಥಿವೇತನವನ್ನು ನೀಡುವ ಯೋಜನೆಯನ್ನು ಸರಕಾರ ಪ್ರಾರಂಭ ಮಾಡಿವೆ ಆದರೆ ಇತ್ತೀಚಿನ ದಿನಗಳಲ್ಲಿ ಸರಕಾರ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿದ್ಯಾರ್ಥಿ ವೇತನವನ್ನು ತಲುಪಿಸುತ್ತಿಲ್ಲ,ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಹೊಡೆತ ಬೀಳುತ್ತಿದೆ,ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಾರಂಭ ಮಾಡಬೇಕು,ವಿಶ್ವ ವಿದ್ಯಾಲಯಗಳಿಗೆ ಅನುದಾನ ನೀಡಬೇಕು,ಸಮರ್ಪಕವಾಗಿ ವಿದ್ಯಾರ್ಥಿ ವೇತನವನ್ನು ತಲುಪಿಸಬೇಕು,ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಫಲಿತಾಂಶ, ಅಂಕಪಟ್ಟಿ ನೀಡಬೇಕು,ವಿವಿಧ ಇಲಾಖೆಗಳಿಗೆ ನೇಮಕಾತಿ ಮಾಡುವಾಗ ವಯೋಮಿತಿಯನ್ನು ಸಡಿಲಿಕೆ ಮಾಡಬೇಕು ಎಂದು ಮನವಿ ಸಲ್ಲಿಸಿದರು, ರೋಣ ಪಟ್ಟಣದ ಮುಲ್ಲಾನಬಾವಿ ವೃತ್ತದಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು ಇದರಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.1