Shuru
Apke Nagar Ki App…
ಮೊದಲು ಹೀಗಿತ್ತು
ರಾಮಲಿಂಗೇಗೌಡ ಎನ್
ಮೊದಲು ಹೀಗಿತ್ತು
More news from ಕರ್ನಾಟಕ and nearby areas
- Post by ರಾಮಲಿಂಗೇಗೌಡ ಎನ್1
- ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು1
- ನೆನ್ನೆ ನಡೆದ ತಾಲೂಕ್ ಪಂಚಾಯತ್ ಸಭಾಂಗಣ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ1
- All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards *ಭಾರತ ನಲ್ಲಿ ವೈರಲ್*1
- ಮೈಸೂರು: ಸಂಗೀತವೇ ಉಸಿರಾಗಿದ್ದ ಗಾನಗಾನಕೋಗಿಲೆ, ಪದ್ಮಭೂಷಣ ಡಾ. ಎಸ್. ಜಾನಕಿ ಅಮ್ಮನವರಿಗೆ ಮೈಸೂರಿನ ಕಲಾಭಿಮಾನಿಗಳು ಕಣ್ಣೀರಿನ ನುಡಿನಮನ ಸಲ್ಲಿಸಿದರು. ಮೈಸೂರಿನ ರಾಮಕೃಷ್ಣ ನಗರದ ಗಂಧರ್ವ ಸಂಗೀತ ಅಕಾಡೆಮಿಯಲ್ಲಿ "ಶ್ರದ್ಧಾಂಜಲಿ ಮತ್ತು ಗೀತಾ ಗಾಯನ" ಕಾರ್ಯಕ್ರಮವನ್ನು ಭಾವನಾತ್ಮಕವಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಎಸ್. ಜಾನಕಿ ಅಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ನಂತರ ಸಭಿಕರೆಲ್ಲರೂ ಕೆಲ ಕ್ಷಣ ಮೌನಾಚರಣೆ ಮಾಡಿ ತಮ್ಮ ಪ್ರೀತಿಯ ಅಮ್ಮನ ಆತ್ಮಕ್ಕೆ ಶಾಂತಿ ಕೋರಿದರು. ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಆರ್.ಮಹೇಂದ್ರ ಮಾತನಾಡಿ, ಸಂಗೀತಕ್ಕೆ ಯಾವುದೇ ಧರ್ಮ ಜಾತಿ ಬೇಕಾಗಿಲ್ಲ. ಜಾನಕಿ ಅಮ್ಮನವರನ್ನು ನಾವು ದೈಹಿಕವಾಗಿ ಕಳೆದುಕೊಂಡಿದ್ದೇವೆ. ಆದರೆ, ಮಾನಸಿಕವಾಗಿ ಅವರು ಇಂದಿಗೂ ನಮ್ಮೊಟ್ಟಿಗೆ ಇದ್ದಾರೆ. ಸಂಗೀತಗಾರರಿಗೆ ಸರಸ್ವತಿಯೇ ಆದ ಅವರು, ಕೊನೆಯ ಕ್ಷಣಗಳಲ್ಲಿ ಮೈಸೂರನ್ನೇ ಆಯ್ಕೆ ಮಾಡಿಕೊಂಡು ಇಲ್ಲೇ ನೆಲೆಸಿದ್ದರು. ಇದು ನಮ್ಮ ಪುಣ್ಯ ಎಂದು ಹೇಳಿದರು. ಜಾನಕಿ ಅಮ್ಮನವರ ವ್ಯಕ್ತಿತ್ವವನ್ನು ನೆನೆದ ಆರ್.ಮಹೇಂದ್ರ ಅವರು, ಅವರು ಹಾಡುವ ಶೈಲಿ, ವಾಯ್ಸ್ ಮಾಡ್ಯುಲೇಷನ್ ಇಂದಿಗೂ ಗಾಯಕರಿಗೆ ಮಾದರಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯಸ್ಸಿನ ಪಾತ್ರಗಳಿಗೂ ಅವರು ತಮ್ಮ ಕಂಠ ನೀಡಿದ್ದಾರೆ. 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ದಾಖಲೆ ಅವರದ್ದು ಎಂದು ಸ್ಮರಿಸಿದರು. ನಾನು ಕೂಡ ಅವರೊಂದಿಗೆ ಎರಡು ವೇದಿಕೆಯಲ್ಲಿ ಹಾಡುವ ಅವಕಾಶ ಪಡೆದಿದ್ದೆ. ಅದು ಮರೆಯಲಾಗದ ಕ್ಷಣ. ಮೊದಲ ಬಾರಿ ಅವರನ್ನು ಭೇಟಿಯಾದಾಗ ತಮ್ಮ ಮಕ್ಕಳಂತೆ ನೋಡಿಕೊಂಡು, ಕೈ ತುತ್ತು ತಿನಿಸಿದರು. ಅಷ್ಟೊಂದು ಆತ್ಮೀಯತೆ. ನಾನು ಸಂಗೀತ ಕಲಿಯುತ್ತಿದ್ದಾಗ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನನಗೆ ಚಿನ್ನದ ಪದಕವನ್ನು ಅವರ ಕೈಯಿಂದಲೇ ಪಡೆದಿದ್ದೆ. ಅಂತಹ ಸರಳ, ಸಾರ್ಥಕ ಜೀವನ ನಡೆಸಿದ ಮಹಾನ್ ಕಲಾವಿದೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕಣ್ಣೀರಿಟ್ಟರು. ನುಡಿನಮನದ ನಂತರ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಹಿರಿಯ ಗಾಯಕರು ಜಾನಕಿ ಅಮ್ಮನವರು ಹಾಡಿರುವ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಗೀತಾ ಗಾಯನದ ಮೂಲಕ ನಮನ ಸಲ್ಲಿಸಿದರು. ಅವರ ಕಂಠದ ಪ್ರತಿಧ್ವನಿ ಸಭಾಂಗಣದಲ್ಲಿ ಮೊಳಗಿದಾಗ ಹಲವರ ಕಣ್ಣುಗಳು ತೇವಗೊಂಡವು. ಸ್ವರ ಮೌನವಾದರೂ, ಆ ಸ್ವರದ ಶಕ್ತಿ ಇಂದಿಗೂ ಕೋಟಿ ಹೃದಯಗಳಲ್ಲಿ ಜೀವಂತವಾಗಿದೆ ಎಂಬುದನ್ನು ಈ ಶ್ರದ್ಧಾಂಜಲಿ ಮತ್ತೊಮ್ಮೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ನಿವೃತ್ತ ಎಇಇ ಸುರೇಶ್, ಗಾಯಕರಾದ ಲಕ್ಷ್ಮಣ್, ಮೀನಾಕುಮಾರಿ, ಬಸವರಾಜು, ಚೇತನ್, ಡಾ.ಜಗದೀಶ್, ಸಂಜಯ್, ದಿನೇಶ್, ಡಾ. ರತ್ನ ಹಾಲಪ್ಪಗೌಡ, ರಾಜೇಶ್ವರಿ, ಮಹೇಶ್, ಮಂಜುನಾಥ್ ಎಂ, ಪವಿತ್ರ, ಎಂ. ನಟರಾಜ್, ಸೇರಿದಂತೆ ಅನೇಕ ಸಂಗೀತ ಪ್ರಿಯರು ಮತ್ತು ಮಕ್ಕಳು ಭಾಗವಹಿಸಿದ್ದರು.3
- ನಮ್ಮ ಸಿಎಂ ತಮಿಳುನಾಡಿನ ವಾಟರ್ ಮೆನ್ ಕೆಲಸ ಮಾಡಬಾರದು...ಸಿಟಿ ರವಿ ವಾಗ್ಧಾಳಿ... ನಮ್ಮ ರಾಜ್ಯದ ಮುಖ್ಯಮಂತ್ರಿಗಳು ತಮಿಳುನಾಡಿನ ವಾಟರ್ ಮ್ಯಾನ್ ಕೆಲಸ ಮಾಡಬಾರದು ಎಂದು ಸಿಟಿ ರವಿ ವಾಗ್ಧಾಳಿ ನಡೆಸಿದರು. ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡದೇವಿಯ ದರುಶನ ಪಡೆದ ನಂತರ ಮಾತನಾಡಿದ ಸಿಟಿ ರವಿ ರವರು ಡಿಕೆ ಶಿವಕುಮಾರ್ ವಿಪಕ್ಷದಲ್ಲಿ ಇದ್ದಾಗ ನಮ್ಮ ನೀರು ನಮ್ಮ ಹಕ್ಕು ಎಂದು ಹೋರಾಟ ಮಾಡಿದ್ರು. ಈಗ ಜಲಾಶಯದ ನೀರನ್ನು ಬೆಳೆಗೆ ಬಳೆಸಬೇಡಿ ಎಂದು ಹೇಳಿಕೆ ಕೊಡುತ್ತಾರೆ. ಮಂಡ್ಯ, ಮೈಸೂರು, ಬೆಂಗಳೂರು ಜನರಿಗೆ ಕೆಅರ್ ಎಸ್ ನಲ್ಲಿ ಕುಡಿಯುವುದಕ್ಕೆ ನೀರು ಎಷ್ಟಿದೆ ಎನ್ನುವದನ್ನು ಡಿಕೆಶಿ ಅವರು ಮೊದಲು ಬಾಯಿ ಬಿಡಬೇಕು. ರಾಜ್ಯದ ಜನರ ರಕ್ಷಣೆಗೆ ನೀವು ನಿಂತುಕೊಳ್ಳಿ.ನಿಮ್ಮ ಬೆಂಬಲಕ್ಕೆ ನಾವು ನಿಲ್ಲತ್ತೇವೆ. ಬಂಗಾರಪ್ಪರ ರೀತಿ ನಿರ್ಧಾರ ತೆಗೆದುಕೊಳ್ಳಿ ಎಂದು ಸಲಹೆ ನೀಡಿದರು. ತಮಿಳುನಾಡಿನ ಸಿಎಂ ವಿಜಯ್ ಕರ್ನಾಟಕಕ್ಕೆ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ಮಾತುಕತೆ ಮಾಡಿದರೆ ಒಳ್ಳೆಯದು.ನಮ್ಮ ಜಲಾಶಯದ ವಸ್ತುಸ್ಥಿತಿಯ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಿ. ಕಾಂಗ್ರೆಸ್ ಹಾಗೂ ಟಿವಿಕೆ ಎರಡು ಮಿತ್ರ ಪಕ್ಷಗಳೇ ಅಲ್ಲವೇ . ನಿಮ್ಮ ಮಿತ್ರರಿಗೆ ಮನವರಿಕೆ ಮಾಡಿಕೊಡುವುದಕ್ಕೆ ಅಗುವುದಿಲ್ಲ ಎಂದರೇ ಹೇಗೆ ಎಂದು ಟೀಕಿಸಿದರು...1
- ಮೂರನೇ ಆಷಾಢ ಶುಕ್ರವಾರ ಅಂಗವಾಗಿ 2000 ಜನರಿಗೆ ಅನ್ನಸಂತರ್ಪಣೆ ಮಾಡಿದ್ದಾರೆ ಮೈಸೂರು, ಜು.31: ಮೈಸೂರಿನಲ್ಲಿ ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಗ್ಯಾರೇಜ್ ಹಾಗೂ ಟ್ಯಾಂಕರ್ ಮಾಲೀಕರ ಸಂಘದ ವತಿಯಿಂದ ಸುಮಾರು 2000 ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ನಗರದ ಪ್ರಮುಖ ವೃತ್ತದ ಸಮೀಪ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಗ್ಯಾರೇಜ್ಗಳ ಮಾಲೀಕರು, ಟ್ಯಾಂಕರ್ ಮಾಲೀಕರು, ಚಾಲಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಆಷಾಢ ಶುಕ್ರವಾರವನ್ನು ವಿಶೇಷವಾಗಿ ದೇವಿ ಆರಾಧನೆಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಪೂಜೆ, ಅಲಂಕಾರ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಬಳಿಕ ಅನ್ನಸಂತರ್ಪಣೆ ಆರಂಭಿಸಲಾಯಿತು. ಬಡವರು, ಕೂಲಿ ಕಾರ್ಮಿಕರು, ಪ್ರಯಾಣಿಕರು ಹಾಗೂ ಅಗತ್ಯವಿರುವ ಜನರಿಗೆ ಊಟ ವಿತರಿಸಲಾಯಿತು. ಕಾರ್ಯಕ್ರಮದ ಆಯೋಜಕರು ಮಾತನಾಡಿ, ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ಪ್ರತಿವರ್ಷವೂ ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಗ್ಯಾರೇಜ್ ಮತ್ತು ಟ್ಯಾಂಕರ್ ವೃತ್ತಿಯಲ್ಲಿ ತೊಡಗಿರುವ ಎಲ್ಲರೂ ಒಗ್ಗಟ್ಟಿನಿಂದ ಈ ಸೇವಾ ಕಾರ್ಯದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ಅನ್ನಸಂತರ್ಪಣೆಯಲ್ಲಿ ಅನ್ನ, ಸಾಂಬಾರ್, ಪಲ್ಯ, ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಲಾಗಿತ್ತು. ಸೇವೆ ಸಲ್ಲಿಸಿದ ಸ್ವಯಂಸೇವಕರು ಶಿಸ್ತಿನಿಂದ ಊಟ ವಿತರಣೆ ಮಾಡಿ ಭಕ್ತರ ಮೆಚ್ಚುಗೆ ಪಡೆದರು. ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮವನ್ನು ಪ್ರಶಂಸಿಸಿ, ಧಾರ್ಮಿಕ ಆಚರಣೆಯ ಜೊತೆಗೆ ಮಾನವೀಯ ಸೇವೆಯೂ ಸಮಾಜದಲ್ಲಿ ಬೆಳೆಬೇಕು ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಇಂತಹ ಸೇವಾ ಚಟುವಟಿಕೆಗಳು ಸಾಮರಸ್ಯ ಮತ್ತು ಸಹಕಾರದ ಸಂಕೇತವಾಗಿವೆ ಎಂದು ಅವರು ಹೇಳಿದರು.2
- Post by ರಾಮಲಿಂಗೇಗೌಡ ಎನ್1